ಒಡಿಶಾದ ನವವಧು ಕಿಡ್ನಾಪ್ ಪ್ರಕರಣಕ್ಕೆ ಹೊಸ ತಿರುವು; ಪ್ರಿಯಕರನ ಜೊತೆ ಸೇರಿ ಮಾಡಿದ ಪ್ಲಾನ್ ಅಂತಿಂಥದ್ದಲ್ಲ! – Kannada News | Odisha Bride Stages her Own Kidnapping plan With Lover help Hours After Wedding
ಭುವನೇಶ್ವರ, ಫೆಬ್ರವರಿ 23: ಒಡಿಶಾದ ಸುವರ್ಣಪುರ ಜಿಲ್ಲೆಯಲ್ಲಿ ಇಂದು ಮದುಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರಿಗೆ ಅಡ್ಡಹಾಕಿದ ಅಪರಿಚಿತರು ನವವಧುವನ್ನು ಕಿಡ್ನಾಪ್ (Kidnap) ಮಾಡಿದ್ದು ಪೊಲೀಸರಿಗೆ ತಲೆನೋವಿನ ಕೇಸಾಗಿತ್ತು. ಇದೀಗ ತನಿಖೆಯ ಬಳಿಕ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ನವವಿವಾಹಿತ ವಧು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನನ್ನು ತಾನೇ ‘ಅಪಹರಣ’ ಮಾಡುವ ನಾಟಕವನ್ನು ಆಡಿದ್ದಾಳೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬೋಲಂಗೀರ್ ಜಿಲ್ಲೆಯ ಹರಿಬಂಧು ಪಟೇಲ್ ಅಲಿಯಾಸ್ ರಿಂಕು ಎಂಬ ಯುವಕನು ಬೌಧ್ ಜಿಲ್ಲೆಯ ರಶ್ಮಿ ಎಂಬ ಯುವತಿಯನ್ನು ಮದುವೆಯಾಗಿದ್ದನು….