ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ – Kannada News | 140 members of a family watched Chiranjeevi’s Mana Shankara Vara Prasad garu movie

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ಆದರೆ ಕಳೆದ ಐದಾರು ವರ್ಷಗಳಿಂದ ಅವರಿಗೆ ಸೂಕ್ತ ಗೆಲುವು ಸಿಕ್ಕಿರಲೇ ಇಲ್ಲ. ನಟಿಸಿದ ಸಿನಿಮಾಗಳು ಒಂದರ ಹಿಂದೊಂದರಂತೆ ಫ್ಲಾಪ್ ಆಗಿದ್ದವು. ಚಿರಂಜೀವಿ ಎಂದರೆ ಕಲೆಕ್ಷನ್ ಇಲ್ಲದ ನಟ ಎಂಬ ಅಭಿಪ್ರಾಯ ಹೊಸ ತೆಲುಗು ಸಿನಿಮಾ ವೀಕ್ಷಕರಲ್ಲಿ ಮೂಡಿಬಿಟ್ಟಿತ್ತು. ಆದರೆ ನಿಜಕ್ಕೂ ಚಿರಂಜೀವಿಯ ಕ್ರೇಜ್ ಎಂಬುದನ್ನು ಮತ್ತೆ ತೋರಿಸಿದೆ ಅವರ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ಕುಟುಂಬದ 140 ಮಂದಿ ಒಟ್ಟಿಗೆ ಚಿತ್ರಮಂದಿರಕ್ಕೆ ಬಂದು ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ವೀಕ್ಷಿಸಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಒಂದೇ ಕುಟುಂಬಕ್ಕೆ ಸೇರಿದ 140 ಮಂದಿ ಒಟ್ಟಿಗೆ ಚಿತ್ರಮಂದಿರಕ್ಕೆ ತೆರಳಿ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ವೀಕ್ಷಿಸಿದ್ದಾರೆ. ಟ್ರ್ಯಾಕ್ಟರ್​, ಕಾರು, ಬಸ್ಸುಗಳಲ್ಲಿ ಒಂದೇ ಕುಟುಂಬದ ಮಂದಿ ಚಿತ್ರಮಂದಿರಕ್ಕೆ ಹೋಗುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಇದಲ್ಲವೇ ‘ಬಾಸ್ ಕ್ರೇಜು’ ಎಂದು ಅಭಿಮಾನಿಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಅದು ಮಾತ್ರವೇ ಅಲ್ಲದೆ, ತೆಲುಗು ರಾಜ್ಯಗಳಲ್ಲಿಯೇ ಮತ್ತೊಂದೆಡೆ ಒಂದೇ ಕುಟುಂಬದ 70 ಮಂದಿ ಒಟ್ಟಿಗೆ ತೆರಳಿ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ವೀಕ್ಷಿಸಿದ್ದಾರೆ. ಬಸ್ಸಿನಲ್ಲಿ ತೆರಳಿದ್ದ ಈ ಕುಟುಂಬ ದಾರಿಯುದ್ದಕ್ಕೂ ಬಾಸ್​​ಗೆ ಜಯಕಾರ ಹಾಕಿಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಹಲವು ತೆಲುಗು ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಮುಂಚೆಯೆಲ್ಲ ಹಳ್ಳಿಗಳಿಂದ ಟ್ರ್ಯಾಕ್ಟರ್​​ನಲ್ಲಿ ಪಟ್ಟಣಕ್ಕೆ ಬಂದು ಸಿನಿಮಾ ನೋಡುವ ಪದ್ಧತಿ ಇತ್ತು, ಇದೀಗ ಚಿರಂಜೀವಿಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾಕ್ಕೆ ಮತ್ತೆ ಹಳ್ಳಿಯ ಜನ ಟ್ರ್ಯಾಕ್ಟರುಗಳಲ್ಲಿ ಬಂದು ಸಿನಿಮಾ ನೋಡಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ:ಆ ಒಂದು ಕಾರಣಕ್ಕೆ ರಾಜಮೌಳಿ ಸಿನಿಮಾದಲ್ಲಿ ನಟಿಸುವುದಿಲ್ಲವಂತೆ ಮೆಗಾಸ್ಟಾರ್ ಚಿರಂಜೀವಿ

ಚಿರಂಜೀವಿ, ತೆಲುಗು ರಾಜ್ಯಗಳ ಸ್ಟಾರ್ ನಟ. ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಚಿತ್ರಮಂದಿರಕ್ಕೆ ಸೆಳೆದಿರುವ ನಟ. ಆದರೆ ಕಳೆದ ಕೆಲ ವರ್ಷಗಳಿಂದ ಅವರ ಸಿನಿಮಾಗಳು ಯಶಸ್ವಿ ಆಗದೆ ಅಭಿಮಾನಿಗಳಿಗೆ ಬೇಸರ ಮೂಡಿತ್ತು, ಆದರೆ ಇದೀಗ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಮತ್ತೆ ಚಿರಂಜೀವಿಯ ಹಳೆ ಖದರು ಮತ್ತೆ ಮೂಡಿದೆ. ಸಿನಿಮಾ ಬಗ್ಗೆ ಕೆಲ ವಿಮರ್ಶಕರು ಇದೊಂದು ಸಾಮಾನ್ಯ ಸಿನಿಮಾ ಎಂದಿದ್ದಾರೆ ಆದರೆ ಚಿರಂಜೀವಿ ಕೇವಲ ತಮ್ಮ ನಟನೆ ಮತ್ತು ಹಾಸ್ಯದಿಂದಲೇ ಮೋಡಿ ಮಾಡಿದ್ದು, ಪ್ರೇಕ್ಷಕರನ್ನು ಮತ್ತೆ ಮತ್ತೆ ಚಿತ್ರಮಂದಿರದತ್ತ ಸೆಳೆಯುತ್ತಿದ್ದಾರೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ನಯನತಾರಾ ನಾಯಕಿ. ಇದೇ ಸಿನಿಮಾನಲ್ಲಿ ವಿಕ್ಟರಿ ವೆಂಕಟೇಶ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 300 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದ್ದು, ಈ ವರ್ಷದ ಸಂಕ್ರಾಂತಿಯ ಹಿಟ್ ಸಿನಿಮಾ ಎನಿಸಿಕೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್​​: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್​! – Kannada News | Notorious house burglar arrested in Bengaluru; gold worth 42 lakh recovered

ಬೆಂಗಳೂರು/ಬೆಳಗಾವಿ, ಜನವರಿ 20: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಲಗೂರು ಗ್ರಾಮದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕದ್ದಿದ್ದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆಪಾಳ್ಯದಲ್ಲಿ ಆರೋಪಿಯನ್ನು ಅರೆಸ್ಟ್​​ ಮಾಡಲಾಗಿದ್ದು, ಶ್ರೀಕಾಂತ್​ ಬಂಧಿತ ವ್ಯಕ್ತಿಯಾಗಿದ್ದಾನೆ. 2 ಪ್ರತ್ಯೇಕ ಪ್ರಕರಣಗಳ ಸಂಬಂಧ ಆರೋಪಿಯಿಂದ 42 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಪಡಿಸಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದುಗಾಗಿ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ.

ಆರೋಪಿಗಳಾದ ಸಿದ್ದು ಮತ್ತು ಶ್ರೀಕಾಂತ್​​ ಸೇರಿ ಸುಮಾರು 248 ಗ್ರಾಂ. ತೂಕದ ಚಿನ್ನಾಭರಣವನ್ನು ಅಲಗೂರು ಗ್ರಾಮದ ಮನೆಯಿಂದ ಕದ್ದಿದ್ದರು. ಈ ಪೈಕಿ ಸಿದ್ದು ಮೇಲೆ ಈವರೆಗೆ 40ಕ್ಕೂ ಅಧಿಕ ಪ್ರಕರಣಗಳಿವೆ ಎನ್ನಲಾಗಿದ್ದು, ಶ್ರೀಕಾಂತ್ ಮಳವಳ್ಳಿ ಮಾರುಕಟ್ಟೆಯಲ್ಲಿ ಸಣ್ಣಪುಟ್ಟ ಕಳ್ಳತನ ಮಾಡ್ತಿದ್ದ. ಬಳಿಕ ಸಂಬಂಧಿ ಸಿದ್ದು ಜತೆ ಸೇರಿ ಈತನೂ ಮನೆಗಳ್ಳತನಕ್ಕೆ ಇಳಿದಿದ್ದ. ಬೈಕ್​ನಲ್ಲಿ ಬಂದು ಕಳ್ಳತನ ಮಾಡಿ ಖದೀಮರು ಪರಾರಿಯಾಗುತ್ತಿದ್ದರು ಎಂಬುದು ಪೊಲೀಸ್​​ ತನಿಖೆಯಿಂದ ಬಯಲಾಗಿದೆ. ಕಳೆದ ಆಗಸ್ಟ್​​ನಲ್ಲಿ ಮನೆಯವರೆಲ್ಲ ತಮಿಳುನಾಡಿಗೆ ಹೋದಾಗ ಆರೋಪಿಗಳು ಮನೆಗೆ ಕನ್ನ ಹಾಕಿದ್ದರು. ಬಂಧಿತ ಶ್ರೀಕಾಂತ್​​ ವಿಚಾರಣೆ ವೇಳೆ ಕದ್ದ ಚಿನ್ನಾಭರಣವನ್ನು ಇವರು ಗಿರಿವಿಗೆ ಇಟ್ಟಿದ್ದರು ಎಂಬುದು ಕೂಡ ಗೊತ್ತಾಗಿದೆ.

ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ!

ದೇಗುಲದ ಬಾಗಿಲು ಮುರಿದು ಕನ್ನ ಹಾಕಿದ ಖದೀಮರು

ದೇಗುಲದ ಬಾಗಿಲು ಮುರಿದು ಕಳವು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ದೂಪದಾಳ ಗ್ರಾಮದ ಭೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಬೆಳ್ಳಿ, ಚಿನ್ನಾಭರಣವನ್ನು ಖದೀಮರು ಹೊತ್ತೊಯ್ದಿದ್ದಾರೆ. ದೇಗುಲದ ಬಾಗಿಲು ಮುರಿದು ಒಳಪ್ರವೇಶಿಸಿರುವ ಆರೋಪಿಗಳು 2 ಕೆಜಿ ತೂಕದ ಬೆಳ್ಳಿಯ ಕುದುರೆ ಮತ್ತು ಎರಡು ಚಿನ್ನದ ಸರ ಕಳ್ಳತನ ಮಾಡಿದ್ದಾರೆ. ಬೀರೇಶ್ವರ ದೇವರ ಖಂಚಿನ ಮೂರ್ತಿಯನ್ನೂ ಹೊತ್ತೊಯ್ದಿದ್ದ ಆರೋಪಿಗಳು ಬಳಿಕ ಅದನ್ನು ಗ್ರಾಮದ ಹೊರವಲಯದಲ್ಲಿ ಎಸೆದು ಪರಾರಿಯಾಗಿದ್ದಾರೆ. ಗ್ರಾಮದ ಹೊರ ವಲಯದಲ್ಲಿ ಬಿದ್ದ ದೇವರ ಮೂರ್ತಿ ಕಂಡು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Viral: ಬೆಂಗಳೂರಿನಲ್ಲಿ 90 ಲಕ್ಷ ರೂ ಉತ್ತಮ ಸಂಬಳವೇ: ಅನಿವಾಸಿ ಭಾರತೀಯ ಹೀಗೆ ಕೇಳಿದ್ದೇಕೆ? – Kannada News | Bengaluru: NRI asks if it’s possible to live in Bengaluru on a salary of Rs 90 lakh

ಬೆಂಗಳೂರು, ಜನವರಿ 20: ವಿದೇಶದಲ್ಲಿ ಉದ್ಯೋಗಕ್ಕೆಂದು ತೆರಳಿ ಅಲ್ಲಿ ಕೈ ತುಂಬಾ ಸಂಬಳ ಪಡೆದುಕೊಳ್ತಾರೆ. ಆದರೆ ಮತ್ತೆ ಭಾರತಕ್ಕೆ ಮರಳುವ ಸಂದರ್ಭ ಬಂದಾಗ ಮೊದಲು ಯೋಚಿಸುವುದೇ ಸಂಬಳದ ಬಗ್ಗೆ. ಭಾರತದಲ್ಲಿ ಕಡಿಮೆ ಸಂಬಳಕ್ಕೆ ಹೇಗೆ ಹೊಂದಿಕೊಳ್ಳೋದು ಎನ್ನುವ ಆಲೋಚನೆ ಬರುವುದು ಸಹಜ. ಆದರೆ ಇಲ್ಲೊಬ್ಬ ಅನಿವಾಸಿ ಭಾರತೀಯನದ್ದು(NRI) ಅದೇ ಪರಿಸ್ಥಿತಿ. ಅಮೆರಿಕದಲ್ಲಿ ನೆಲೆಸಿರುವ ಎನ್‌ಆರ್‌ಐರೊಬ್ಬರು ಬೆಂಗಳೂರಿನಲ್ಲಿ (Bengaluru) 90 ಲಕ್ಷ ರೂ ಉತ್ತಮ ಸಂಬಳವೇ ಎಂದು ಪ್ರಶ್ನೆ ಕೇಳಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ.

ರಿಟರ್ನ್ ಟು ಇಂಡಿಯಾ (returntoindia) ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ನಶೀರ್ಷಿಕೆಯಲ್ಲಿ ಭಾರತಕ್ಕೆ ಹಿಂದಿರುಗಿದವರಲ್ಲಿ ಬೆಂಗಳೂರಿನಲ್ಲಿ 90 ಲಕ್ಷ ಉತ್ತಮ ಸಂಬಳವೇ? (ಪಿಹೆಚ್ ಡಿ + 12 ವರ್ಷಗಳು) ಎಂದು ಪ್ರಶ್ನೆ ಕೇಳಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಈ ಪೋಸ್ಟ್‌ನಲ್ಲಿ ಅನಿವಾಸಿ ಭಾರತೀಯರೊಬ್ಬರು ಕೆಮಿಕಲ್ ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಮಾಡಿದ್ದು, ಒಂದು ವಿಶೇಷ ಕ್ಷೇತ್ರದಲ್ಲಿ 12 ವರ್ಷಗಳ ಕಾಲ ಅನುಭವ ಹೊಂದಿರುವುದನ್ನು ಉಲ್ಲೇಖಿಸಿದ್ದಾರೆ. ಸದ್ಯ ಅಮೆರಿಕದಲ್ಲಿ ವರ್ಷಕ್ಕೆ ಅಂದಾಜು 1.60 ಕೋಟಿ ರೂಪಾಯಿ ($190,000) ಸಂಬಳವಿರುವ ಉದ್ಯೋಗದಲ್ಲಿದ್ದು, ಇದೀಗ ಬೆಂಗಳೂರಿಗೆ ಮರಳಲು ಯೋಚಿಸಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಲು ಬೆಂಗಳೂರಿಗೆ ಬರುವವರಿದ್ದಾರೆ. ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ವರ್ಷಕ್ಕೆ 90 ಲಕ್ಷ ರೂಪಾಯಿ ಪ್ಯಾಕೇಜ್ ಇರುವ ಉದ್ಯೋಗವಿದೆ. ಇದರಲ್ಲಿ 74 ಲಕ್ಷ ರೂಪಾಯಿ ಮೂಲ ಸಂಬಳವಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಲು, ಮಗುವಿನ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಭರಿಸಿ, ಉತ್ತಮ ಜೀವನ ನಡೆಸಲು ಈ 90 ಲಕ್ಷ ರೂಪಾಯಿ ಸಂಬಳ ಸಾಕಾ?. ದಯವಿಟ್ಟು ಇದು ಯೋಗ್ಯವಾದ ಕೊಡುಗೆಯೇ ಎಂಬುದರ ಕುರಿತು ಸ್ವಲ್ಪ ಹೇಳಬಹುದೇ?. ಕಂಪನಿ ಹಾಗೂ ನಾನು ನಿರ್ವಹಿಸಬೇಕಾದ ಪಾತ್ರ ತುಂಬಾ ದೊಡ್ಡದಾಗಿದೆ, ಆದ್ದರಿಂದ ನನ್ನ ವೃತ್ತಿಜೀವನದ ಮೇಲೆ ಇದರ ಪರಿಣಾಮವು ಅಗಾಧವಾಗಿರುತ್ತದೆ. ಆದರೆ ನಾವು ಆರ್ಥಿಕ ಆಯ್ಕೆ ಕೆಟ್ಟದಾಗಿದ್ದರೆ. ನಾನು ಈ ಪ್ರಸ್ತಾಪವನ್ನು ಸ್ವೀಕರಿಸಲು ಸಾಧ್ಯವಿಲ್ಲ. ಯಾವುದೇ ಸಲಹೆಗಳನ್ನು ಸ್ವೀಕರಿಸಲಾಗುತ್ತದೆ ಎಂದು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದನ್ನು ಅತಿಯಾಗಿ ಯೋಚಿಸಬೇಡಿ, ಇದು ಒಳ್ಳೆಯ ನಡೆ. ನೀವು ಯಾವಾಗ ಬೇಕಾದರೂ ಹಿಂತಿರುಗಬಹುದು ಏಕೆಂದರೆ ನಿಮ್ಮ ಬಳಿ ಯುಎಸ್ ಪಾಸ್‌ಪೋರ್ಟ್ ಇದೆ, ಇದು ಎಲ್ಲರಿಗೂ ಇರುವ ಐಷಾರಾಮಿ ವಸ್ತುವಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಪಿಎಚ್‌ಡಿ ಮತ್ತು 12 ವರ್ಷದ ಅನುಭವಕ್ಕೆ 90 ಲಕ್ಷ ತುಂಬಾನೇ ಕಡಿಮೆ. ಬೆಂಗಳೂರಿನಲ್ಲಿ ಐಟಿ ಕ್ಷೇತ್ರದಲ್ಲಿ ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ 1.5 ಕೋಟಿಗಿಂತ ಹೆಚ್ಚು ಸಂಬಳ ಇದೆ. ನೀವು ಕನಿಷ್ಠ 1.8 ಕೋಟಿ ರೂಪಾಯಿಗೆ ಬೇಡಿಕೆ ಇಡಬೇಕು. ಈ ಸಂಬಳಕ್ಕೆ ಕೆಲಸ ಒಪ್ಪಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬರು, ಬೆಂಗಳೂರಿನಲ್ಲಿ 90 ಲಕ್ಷ ಸಂಬಳ ಎಂದರೆ ತುಂಬಾನೇ ಕಡಿಮೆ. ಹೀಗಾಗಿ ನೀವು ನಿಮ್ಮ ಬಾಸ್ ತೋಟಕ್ಕೆ ನೀರು ಹಾಕಿ ಇನ್ನೂ ಸ್ವಲ್ಪ ಹೆಚ್ಚು ಸಂಬಳ ಕೇಳಿ ವ್ಯಂಗ್ಯವಾಗಿ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ – Kannada News | Bidar Hakki Pikki: 50 Years Homeless, Denied Basic Rights and Dignity

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು!

ಬೀದರ್, ಜನವರಿ 20: ದಶಕಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲೇ ಬದುಕು ಸಾಗಿಸುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಜನಾಂಗದ ಸ್ಥಿತಿ ಮಾನವೀಯತೆ ಪ್ರಶ್ನಿಸುವಂತಾಗಿದೆ. ಬೀದರ್ (Bidar) ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಕುಟುಂಬಗಳು ಕಳೆದ 50 ವರ್ಷಗಳಿಂದ ಚಿಕ್ಕ ಚಿಕ್ಕ ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಚಳಿ, ಮಳೆ, ಬೇಸಿಗೆ ಎನ್ನದೆ ಅದೇ ಗುಡಿಸಲುಗಳು ಇವರಿಗೆ ಏಕೈಕ ಆಸರೆಯಾಗಿವೆ.

ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು

ಮತದಾರರ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಇದ್ದರೂ ಈ ಕುಟುಂಬಗಳಿಗೆ ಇದುವರೆಗೂ ಸ್ವಂತ ಮನೆ ಅಥವಾ ನಿವೇಶನ ದೊರಕಿಲ್ಲ. ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಚರಂಡಿ ದುರ್ವಾಸನೆ, ಅಸ್ವಚ್ಛ ಪರಿಸರದಿಂದಾಗಿ ಮಕ್ಕಳು ಮತ್ತು ಮಹಿಳೆಯರು ನಿತ್ಯವೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಪೌಷ್ಠಿಕ ಆಹಾರದ ಕೊರತೆಯಿಂದ ಅನೇಕ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ.

ಮರಗೆಮ್ಮ ದೇವಿಯ ಮೂರ್ತಿಯನ್ನು ತಲೆಯ ಮೇಲೆ ಹೊತ್ತು ಭಿಕ್ಷೆ ಬೇಡುವುದೇ ಈ ಸಮುದಾಯದ ಪ್ರಧಾನ ಜೀವನೋಪಾಯವಾಗಿದೆ. ಬಡತನದ ಕಾರಣ ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಸಮುದಾಯದಲ್ಲಿ ಶಿಕ್ಷಣ ಪಡೆದವರೇ ಇಲ್ಲ ಎನ್ನುವುದು ಮತ್ತೊಂದು ಕಟುವಾಸ್ತವ. ಸೂರಿಗಾಗಿ ಹಲವು ಬಾರಿ ಪುರಸಭೆ, ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎನ್ನುವುದು ಸ್ಥಳೀಯರ ಆರೋಪ. ವಸತಿ ಹಕ್ಕು ಆಗ್ರಹಿಸಿ ಇಂದು ಔರಾದ್ ತಹಶಿಲ್ದಾರ್ ಕಚೇರಿ ಮುಂದೆ ಹಕ್ಕಿಪಿಕ್ಕಿ ಜನಾಂಗ ಪ್ರತಿಭಟನೆ ನಡೆಸಿದ್ದು, ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Shani Transit 2026: ಇಂದು ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟ – Kannada News | Shani Nakshatra Transit 2026: 3 Zodiacs Get Lucky with Uttara Bhadrapada Shani

ಹಿಂದೂ ಧರ್ಮದಲ್ಲಿ, ಶನಿ ದೇವರನ್ನು ಕರ್ಮದ ನ್ಯಾಯಾಧೀಶ ಮತ್ತು ಫಲ ನೀಡುವವನೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ, ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ, ಶನಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತದೆ, ಅದರಂತೆ ಕಾಲಕಾಲಕ್ಕೆ, ಶನಿ ತನ್ನ ನಕ್ಷತ್ರಪುಂಜವನ್ನು ಬದಲಾಯಿಸುತ್ತದೆ.

ಈ ವರ್ಷ, ಶನಿ ಮೀನ ರಾಶಿಯಲ್ಲಿದ್ದು, ಈ ಸಮಯದಲ್ಲಿ, ತಮ್ಮ ನಕ್ಷತ್ರಪುಂಜವನ್ನು ಮೂರು ಬಾರಿ ಬದಲಾಯಿಸಲಿದೆ. ಈ ವರ್ಷ ಶನಿ ಮೊದಲ ಬಾರಿಗೆ ಅಂದರೆ ಇಂದು(ಜ.20) ರಂದು ತಮ್ಮ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಜನವರಿ 20 ರಂದು ಮಧ್ಯಾಹ್ನ 12:13 ಕ್ಕೆ, ಶನಿ ಉತ್ತರ ಭಾದ್ರಪದ ನಕ್ಷತ್ರಪುಂಜವನ್ನು ಪ್ರವೇಶಿಸುತ್ತಾರೆ. ಶನಿ ದೇವರು ಈ ನಕ್ಷತ್ರಪುಂಜದ ಅಧಿಪತಿ.ಈ ನಕ್ಷತ್ರಪುಂಜ ಬದಲಾವಣೆಯು ಮೂರು ರಾಶಿಗಳ ಜನರಿಗೆ ಬಹಳ ವಿಶೇಷವಾಗಿರುತ್ತದೆ. ಈ ಮೂರು ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಮಕರ ರಾಶಿ:

ಮಕರ ರಾಶಿಯು ಶನಿಯ ರಾಶಿಯಾಗಿದ್ದು. ಶನಿಯ ನಕ್ಷತ್ರಪುಂಜದಲ್ಲಿನ ಬದಲಾವಣೆಯು ಮಕರ ರಾಶಿಯವರ ಆದಾಯವನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ಅವರು ಕೆಲವು ಪ್ರಮುಖ ಕೆಲಸಗಳಲ್ಲಿ ಯಶಸ್ವಿಯಾಗಲಿದ್ದಾರೆ. ಅವರ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೂಡಿಕೆಗಳು ಉತ್ತಮ ಲಾಭವನ್ನು ನೀಡಲಿದೆ.

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯಲ್ಲಿ ಜನಿಸಿದವರಿಗೆ ಶನಿಯ ಈ ನಕ್ಷತ್ರ ಬದಲಾವಣೆಯು ಶುಭಕರವಾಗಿರುತ್ತದೆ. ಈ ಸಮಯದಲ್ಲಿ ಉದ್ಯಮಿಗಳು ಉತ್ತಮ ಲಾಭವನ್ನು ಪಡೆಯಲಿದ್ದಾರೆ. ಉದ್ಯೋಗದಲ್ಲಿರುವವರು ಆದಾಯದಲ್ಲಿ ಹೆಚ್ಚಳವಾಗಲಿದೆ. ಹೊಸ ಅವಕಾಶಗಳು ಹುಟ್ಟಿಕೊಳ್ಳಲಿದೆ. ಹಠಾತ್ ಆರ್ಥಿಕ ಲಾಭಗಳು ಸಾಧ್ಯ. ಭೂಮಿ ಅಥವಾ ಆಸ್ತಿಯಲ್ಲಿ ಹೂಡಿಕೆ ಮಾಡುವುದರಿಂದ ಲಾಭ ಸಿಗಲಿದೆ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಮಿಥುನ ರಾಶಿ:

ಮಿಥುನ ರಾಶಿಯವರಿಗೆ ಶನಿಯ ನಕ್ಷತ್ರಪುಂಜದಲ್ಲಿನ ಬದಲಾವಣೆಯಿಂದ ಹೆಚ್ಚಿನ ಲಾಭವಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ಅದೃಷ್ಟ ಅವರ ಕಡೆಗಿರಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬಹುದು. ಅವರ ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಸಿಗಲಿದೆ. ಪೂರ್ವಜರ ಆಸ್ತಿಯಿಂದ ಲಾಭವಾಗುವ ಸಾಧ್ಯತೆಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:40 pm, Tue, 20 January 26

Source link

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ.

ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್ ಲಿಂಕ್ ಮಾಡಿದರೆ ಇದು ಸಾಧ್ಯ. ಈಗ ಹೆಚ್ಚಿನ ಆಧಾರ್ ದೃಢೀಕರಣಗಳು ಮೊಬೈಲ್ ನಂಬರ್​ಗೆ ಬರುವ ಒಟಿಪಿ ಮೂಲಕವೇ ಆಗಿ ಹೋಗುತ್ತವೆ.

ಇದನ್ನೂ ಓದಿ: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು?

ಒಂದು ಕುಟುಂಬದಲ್ಲಿ ಎಲ್ಲಾ ಸದಸ್ಯರಿಗೂ ಆಧಾರ್ ಕಾರ್ಡ್ ಮಾಡಿಸಲಾಗಿರುತ್ತದೆ. ಎಲ್ಲದಕ್ಕೂ ಪ್ರತ್ಯೇಕ ಮೊಬೈಲ್ ನಂಬರ್ ಅನ್ನು ಜೋಡಿಸಿರುವ ಸಾಧ್ಯತೆ ಕಡಿಮೆ. ಒಂದೆರಡು ನಂಬರ್​ಗಳನ್ನು ಬೇರೆ ಬೇರೆ ಆಧಾರ್​ಗೆ ಕೊಟ್ಟಿರಬಹುದು. ಕೆಲವೊಮ್ಮೆ ಯಾವ ಆಧಾರ್ ಕಾರ್ಡ್​ಗೆ ಯಾವ ನಂಬರ್ ಕೊಟ್ಟಿದ್ದೇವೆ ಎಂದು ಮರೆತುಹೋಗಬಹುದು. ಯಾರ ಆಧಾರ್​ಗೆ ಯಾವ ಮೊಬೈಲ್ ನಂಬರ್ ಲಿಂಕ್ ಮಾಡಲಾಗಿದೆ ಎಂದು ಗೊಂದಲವಿದ್ದಲ್ಲಿ, ಅಥವಾ ಆಧಾರ್​ಗೆ ಲಿಂಕ್ ಆದ ಮೊಬೈಲ್ ನಂಬರ್ ಅನ್ನು ವೆರಿಫೈ ಮಾಡಬೇಕಿದ್ದಲ್ಲಿ ಈ ಕೆಳಗಿನ ವಿಧಾನ ಅನುಸರಿಸಬಹುದು.

ಆಧಾರ್​ಗೆ ಲಿಂಕ್ ಆದ ಮೊಬೈಲ್ ನಂಬರ್ ಪರಿಶೀಲಿಸುವ ಕ್ರಮ

  • ಯುಐಡಿಎಐ ವೆಬ್​ಸೈಟ್​ಗೆ ಹೋಗಿ. ಅದರ ವಿಳಾಸ ಇಂತಿದೆ: uidai.gov.in/en/
  • ಇಲ್ಲಿ ‘ಮೈ ಆಧಾರ್’ ಸೆಕ್ಷನ್ ಅಡಿಯಲ್ಲಿ ಆಧಾರ್ ಸರ್ವಿಸಸ್ ಮೆನು ಅಡಿಯಲ್ಲಿ ‘ವೆರಿಫೈ ಇಮೇಲ್/ ಮೊಬೈಲ್ ನಂಬರ್’ ಮೇಲೆ ಕ್ಲಿಕ್ ಮಾಡಿ.
  • 12 ಅಂಕಿ ಆಧಾರ್ ನಂಬರ್ ನಮೂದಿಸಿ
  • ಮೊಬೈಲ್ ನಂಬರ್ ಅನ್ನು ನಮೂದಿಸಿ.
  • ಮೊಬೈಲ್ ನಂಬರ್ ಲಿಂಕ್ ಆಗಿದ್ದರೆ ಆ ನಂಬರ್​ಗೆ ಒಟಿಪಿ ಬರುತ್ತದೆ. ಆ ಒಟಿಪಿ ಹಾಕಿ ವೆರಿಫೈ ಮಾಡಬಹುದು.
  • ಆಧಾರ್​ಗೆ ಮೊಬೈಲ್ ನಂಬರ್ ಲಿಂಕ್ ಆಗಿಲ್ಲದೇ ಇದ್ದರೆ ಅದರ ಮಾಹಿತಿಯನ್ನು ತೋರಿಸುತ್ತದೆ.

ಇದನ್ನೂ ಓದಿ: ಗೆಜೆಟ್ ಮೂಲಕ ಹೆಸರು ಬದಲಾಯಿಸುವುದು ಹೇಗೆ?; ಇಲ್ಲಿದೆ 3 ಹಂತಗಳ ನಾಮ ಬದಲಾವಣೆ ಪ್ರಕ್ರಿಯೆ

ಇದೇ ರೀತಿ ಇಮೇಲ್ ಅನ್ನೂ ಕೂಡ ವೆರಿಪೈ ಮಾಡಬಹುದು. ಮೊಬೈಲ್ ನಂಬರ್ ಮತ್ತು ಇಮೇಲ್ ಅನ್ನು ಅಪ್​ಟುಡೇಟ್ ಇಟ್ಟಿರುವುದು ಆಧಾರ್ ಸುರಕ್ಷತೆ ದೃಷ್ಟಿಯಿಂದ ಉತ್ತಮ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು – Kannada News | Chikkaballapur Bus Accident: Mantralaya Bound Sleeper Bus Crashes Into Container, Pilgrims Escape Miraculously

ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ

ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತಕ್ಕೀಡಾಯಿತು.

ಅಪಘಾತದ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕ ಶಿವಪ್ಪ ಎಂಬವರ ಕಾಲು ಬಸ್ ಹಾಗೂ ಕಂಟೈನರ್ ನಡುವೆ ಸಿಲುಕಿಕೊಂಡಿತ್ತು. ಮಾಹಿತಿ ಪಡೆದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹರಸಾಹಸ ಪಟ್ಟು ಅವರನ್ನು ರಕ್ಷಿಸಿದರು. ಅಪಘಾತದಲ್ಲಿ ಬಸ್‌ನಲ್ಲಿದ್ದ 9 ಮಂದಿ ಪ್ರಯಾಣಿಕರು ಹಾಗೂ ಕಂಟೈನರ್ ಲಾರಿಯಲ್ಲಿದ್ದ ಮೂವರು ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದರ ನಡುವೆ ಕಂಟೈನರ್ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಿಹಾರ ಮೂಲದ 20 ವರ್ಷದ ಯುವಕ ಸುಹಾಸ್ ಎಂಬಾತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಂಟೈನರ್ ಚಾಲಕ ಲಾರಿಯ ಚಕ್ರದ ಕೆಳಗೆ ಕಲ್ಲು ಸಿಲುಕಿದೆಯೇ ಎಂಬುದನ್ನು ಪರಿಶೀಲಿಸುವಂತೆ ಸುಹಾಸ್‌ಗೆ ಸೂಚಿಸಿದ್ದ. ಆ ವೇಳೆ ಸುಹಾಸ್ ಲಾರಿಯ ಕೆಳಗೆ ಇಳಿದಿದ್ದಾಗ, ಅತಿವೇಗವಾಗಿ ಬಂದ ಬಸ್‌ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಯನ್ನು ಗಮನಿಸದೇ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸುಹಾಸ್ ಗಂಭೀರವಾಗಿ ಗಾಯಗೊಂಡು ಕೊನೆಗೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಅಪಘಾತದ ನಂತರ ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡಸದೃಶರಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ‘ಗುರು ರಾಯರ ಕೃಪೆಯಿಂದ ಜೀವ ಉಳಿಯಿತು’ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:32 pm, Tue, 20 January 26

Source link

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್! – Kannada News | DK Suresh’s Subtle Dig at CM Siddaramaiah Over Power Sharing Sparks Political Buzz in Karnataka

ಬೆಂಗಳೂರು, ಜನವರಿ 20: ಡಿಸಿಎಂ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಯಾವಾಗಲೂ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಹೊರತು ವ್ಯಕ್ತಿಗಳಿಗಲ್ಲ. ಪಕ್ಷ ಅಧಿಕಾರದಲ್ಲಿದ್ದಾಗ ಅಥವಾ ಇಲ್ಲದಿದ್ದಾಗಲೂ ಅವರು ಪಕ್ಷದ ಜೊತೆ ನಿಂತಿದ್ದಾರೆ ಮತ್ತು ಎಲ್ಲವನ್ನೂ ತಾಳ್ಮೆಯಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಪಂಚಾಯಿತಿ ಚೇರ್ಮನ್‌ಗಳ ಉದಾಹರಣೆಯನ್ನು ನೀಡಿ ಮಾತನಾಡಿದ ಸುರೇಶ್, ಆರಂಭದಲ್ಲಿ ಚೇರ್ಮನ್ ಸ್ಥಾನ ಬೇಡ ಎನ್ನುತ್ತಾರೆ. ಆ ಸ್ಥಾನಕ್ಕೆ ಅರ್ಹತೆ ಪಡೆದ ನಂತರ ಅಥವಾ ಲಭ್ಯವಾದಾಗ ‘ಬೇಕೇ ಬೇಕು’ ಎಂದು ಪಟ್ಟು ಹಿಡಿಯುತ್ತಾರೆ. ಮಾತನ್ನು ಕೊಟ್ಟು ಒಮ್ಮೆ ಹುದ್ದೆ ಪಡೆದ ನಂತರ ಅದನ್ನು ಬಿಟ್ಟುಕೊಡುವುದು ಅಥವಾ ಇತರರನ್ನು ಮನವೊಲಿಸುವುದು ಬಹಳ ಕಷ್ಟಕರ. ಇದು ರಾಜಕಾರಣದಲ್ಲಿ ನಂಬಿಕೆಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ ಎಂದರು. ತಾವು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಬೆಳವಣಿಗೆಗಳನ್ನು ಮಾತ್ರ ಉಲ್ಲೇಖಿಸಿದ್ದೇನೆ ಎಂದು ಸುರೇಶ್ ಸ್ಪಷ್ಟಪಡಿಸಿದರು. ಸುರೇಶ್ ಅವರು ಪಂಚಾಯಿತಿ ಚೇರ್ಮನ್ ಹುದ್ದೆಗಳ ವಿಚಾರ ಪ್ರಸ್ತಾಪಿಸಿ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯಗೇ ಟಾಂಗ್ ಕೊಟ್ಟರಾ ಎಂಬ ಪ್ರಶ್ನೆ ಈಗ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ತಂದೆ ಆಗುತ್ತಿದ್ದಾರೆ ಖ್ಯಾತ ನಿರ್ದೇಶಕ ಅಟ್ಲಿ; ಇಲ್ಲಿವೆ ಫೋಟೋಸ್

Source link

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ.

ಜಂಟಿ ಟ್ಯಾಕ್ಸೇಶನ್ ಸಿಸ್ಟಂ ಹೇಗಿರುತ್ತೆ?

ಗಂಡ ಮತ್ತು ಹೆಂಡತಿ ಇಬ್ಬರೂ ಪ್ರತ್ಯೇಕವಾಗಿ ಟ್ಯಾಕ್ಸ್ ಫೈಲ್ ಮಾಡುವ ಬದಲು ಜಂಟಿಯಾಗಿ ಐಟಿ ರಿಟರ್ನ್ಸ್ ಸಲ್ಲಿಸಲು ಅವಕಾಶ ಇರುತ್ತದೆ. ಜಂಟಿಯಾಗಿ ಸಲ್ಲಿಸಿದಾಗ ಹೆಚ್ಚಿನ ವಿನಾಯಿತಿಗಳು ಸಿಗುತ್ತವೆ. ಮೂಲ ಡಿಡಕ್ಷನ್ ಪ್ರಮಾಣ ಹೆಚ್ಚುತ್ತದೆ. ಸರ್ಚಾರ್ಜ್ ಮಿತಿ ಹೆಚ್ಚುತ್ತದೆ.

ಇದನ್ನೂ ಓದಿ: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

ಸದ್ಯ ಇರುವ ಪ್ರಸ್ತಾಪದ ಪ್ರಕಾರ, ಜಂಟಿ ಟ್ಯಾಕ್ಸೇಶನ್​ನಲ್ಲಿ ಗಂಡ ಮತ್ತು ಹೆಂಡತಿ ಇಬ್ಬರ ಒಟ್ಟು ಆದಾಯದಲ್ಲಿ 8 ಲಕ್ಷ ರೂ ಟ್ಯಾಕ್ಸ್ ಎಕ್ಸೆಂಪ್ಷನ್ ಅಥವಾ ತೆರಿಗೆ ವಿನಾಯಿತಿ ಕೊಡಲಾಗುತ್ತದೆ. ಶೇ. 30 ತೆರಿಗೆ ಅನ್ವಯ ಆಗುವ ಆದಾಯ ಮಿತಿಯನ್ನು 48 ಲಕ್ಷ ರೂಗೆ ಏರಿಸಲಾಗಬಹುದು.

ಅಂದರೆ, ಕಳೆದ ವರ್ಷದ ಸ್ಲ್ಯಾಬ್ ದರದ ಪ್ರಕಾರ 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ಟ್ಯಾಕ್ಸ್ ಅನ್ವಯ ಆಗುತ್ತದೆ. ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಲ್ಲಿ 48 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ಟ್ಯಾಕ್ಸ್ ಅನ್ವಯ ಆಗಬಹುದು.

ಹಾಗೆಯೇ, ಈಗಿರುವ ವ್ಯವಸ್ಥೆಯಲ್ಲಿ 50 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಸರ್ಚಾರ್ಜ್ ಅನ್ವಯ ಆಗುತ್ತದೆ. ಶೇ. 10ರಿಂದ 25ರವರೆಗೂ ಸರ್ಚಾರ್ಜ್ ಇದೆ. ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಲ್ಲಿ ಸರ್ಚಾರ್ಜ್ 75 ಲಕ್ಷ ರೂ ಆದಾಯದಿಂದ ಶುರುವಾಗುತ್ತದೆ.

ಇದನ್ನೂ ಓದಿ: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ?

ಸಿಂಗಲ್ ಇನ್ಕಮ್ ಇರುವ ಕುಟುಂಬಗಳಿಗೆ ಅನುಕೂಲ

ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಿಂದ ಅನುಕೂಲಗಳು ಬಹಳಷ್ಟಾಗಬಹುದು. ಗಂಡ ಮತ್ತು ಹೆಂಡತಿ ಇಬ್ಬರಿದ್ದು ಗಂಡ ಮಾತ್ರವೇ ಕೆಲಸಕ್ಕೆ ಹೋಗುತ್ತಿದ್ದು, ಹೆಂಡತಿ ಗೃಹಿಣಿಯಾಗಿದ್ದರೆ, ಹಾಗೂ ಗಂಡನ ಆದಾಯ ಬಹಳ ಹೆಚ್ಚಿದ್ದರೆ ಆಗ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅತಿಹೆಚ್ಚು ಅನುಕೂಲ ತರುತ್ತದೆ.

ಗಂಡ ಮತ್ತು ಹೆಂಡತಿ ಇಬ್ಬರೂ ದುಡಿಯುತ್ತಿದ್ದರೆ ಜಂಟಿಯಾಗಿಯೇ ಐಟಿಆರ್ ಸಲ್ಲಿಸಬೇಕೆಂದು ಕಡ್ಡಾಯ ಪಡಿಸಲಾಗುವುದಿಲ್ಲ. ಪ್ರತ್ಯೇಕವಾಗಿ ಸಲ್ಲಿಸಬಹುದು, ಅಥವಾ ಜಂಟಿಯಾಗಿಯೂ ಸಲ್ಲಿಸಬಹುದು. ಟ್ಯಾಕ್ಸ್ ಬಾಧ್ಯತೆ ಮತ್ತು ಅನುಕೂಲತೆಗಳನ್ನು ಎಣಿಸಿ ನಿರ್ಧಾರ ತೆಗೆದುಕೊಳ್ಳಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version