Headlines

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ – Kannada News | SSLC Preparatory Exam Changes: New Guidelines After Paper Leak in Karnataka

ಬೆಂಗಳೂರು, ಜನವರಿ 20: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಎಚ್ಚೆತ್ತ ಶಿಕ್ಷಣ ಇಲಾಖೆ ಮುಂದಿನ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಇನ್ನು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್‌ನಿಂದ ಬೆಳಿಗ್ಗೆ 9.30ಕ್ಕೆ ಡೌನ್‌ಲೋಡ್…

Read More

‘ನಾನು ಇಲ್ಲಿಗೆ ಬಂದು ದೊಡ್ಡ ತಪ್ಪು ಮಾಡಿದೆ’: ಮತಾಂತರಗೊಂಡು ಪಾಕ್​​​ ವ್ಯಕ್ತಿಯನ್ನು ಮದುವೆಯಾಗಿ ಕಣ್ಣೀರು ಹಾಕಿದ ಭಾರತದ ಮಹಿಳೆ – Kannada News | Pakistan Ordeal: Sarabjit Kaur Seeks India Return After Conversion & Harassment Claims

ಮಹಿಳೆಯೊಬ್ಬರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ನೋವು ಪಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.  ಕಳೆದ ವರ್ಷ ನವೆಂಬರ್‌ನಲ್ಲಿ ಸಿಖ್ ತೀರ್ಥಯಾತ್ರೆಗಾಗಿ ಪಾಕಿಸ್ತಾನಕ್ಕೆ ಹೋಗಿ ಇಸ್ಲಾಂಗೆ ಮತಾಂತರಗೊಂಡು ಪಾಕಿಸ್ತಾನಿ ಪುರುಷನನ್ನು ಮದುವೆಯಾದ ಭಾರತೀಯ ಮಹಿಳೆ ಸರಬ್ಜೀತ್ ಕೌರ್ (Sarabjit Kaur) ಇದೀಗ ಮತ್ತೆ ತನ್ನ ಧರ್ಮಕ್ಕ ಸೇರಬೇಕು. ಭಾರತಕ್ಕೆ ಮತ್ತೆ ಬರಬೇಕು ಎಂಬ ಆಸೆ ಇದೆ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೌರ್ ಭಾರತದಲ್ಲಿರುವ ತನ್ನ ಮಾಜಿ ಪತಿಯೊಂದಿಗೆ…

Read More

Video:ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ – Kannada News | PM Modi Strikes Humble Note, Calls Himself Party Worker Under Nitin Nabin

ನವದೆಹಲಿ, ಜನವರಿ 20: ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದು ಸಂಸ್ಕೃತಿ. ಬಿಜೆಪಿ ಒಂದು ಕುಟುಂಬ. ಇಲ್ಲಿ, ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿವೆ. ನಮ್ಮ ಅಧ್ಯಕ್ಷರು ಬದಲಾಗುತ್ತಾರೆ, ಆದರೆ ನಮ್ಮ ಆದರ್ಶಗಳು ಬದಲಾಗುವುದಿಲ್ಲ. ನಾಯಕತ್ವ ಬದಲಾಗುತ್ತದೆ, ಆದರೆ ನಿರ್ದೇಶನ ಒಂದೇ ಆಗಿರುತ್ತದೆ. ಇಂದು ದೇಶದ ಪ್ರತಿಯೊಂದು ಮೂಲೆಯ…

Read More

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ. ಜಂಟಿ ಟ್ಯಾಕ್ಸೇಶನ್ ಸಿಸ್ಟಂ…

Read More

ಖಾಸಗಿ ಯಾಚ್​​​ನಲ್ಲಿ ನಯನತಾರಾ-ತ್ರಿಶಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

ನಯನತಾರಾ ಹಾಗೂ ತ್ರಿಶಾ ಮಧ್ಯೆ ವೈಮನಸ್ಸಿದೆ ಎಂಬ ಮಾತಿತ್ತು. ಅದನ್ನು ಇವರು ದೂರ ಮಾಡಿದ್ದಾರೆ. ಒಟ್ಟಿಗೆ ಸಮಯ ಕಳೆದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಸಾಮಾನ್ಯವಾಗಿ ಎರಡು ಸ್ಟಾರ್ ಹೀರೋಯಿನ್​ಗಳು ಒಟ್ಟಿಗೆ ಸೇರೋದು ಕಡಿಮೆ. ಈ ರೀತಿ ಸೇರಿದರೂ ಅದು ಸಿನಿಮಾ ವೇದಿಕೆ ಮೇಲೆ ಆಗಿರುತ್ತದೆ. ಆದರೆ, ನಯನತಾರಾ ಹಾಗೂ ತ್ರಿಶಾ ಅವರು ಈ ವಿಷಯದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಖಾಸಗಿ ಯಾಚ್​​​ನಲ್ಲಿ ಇವರು ಸುತ್ತಾಟ ನಡೆಸಿದ್ದಾರೆ. ಸಮುದ್ರಕ್ಕೆ ತೆರಳಿ…

Read More

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ! – Kannada News | Hidden Ancient Temple Discovered Inside House During Excavation in Lakkundi, Gadag

ಗದಗ, ಜನವರಿ 20: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಐದನೇ ದಿನವೂ ಮುಂದುವರಿದೆ. ಈ ಮಧ್ಯೆ, ಉತ್ಖನನದ ವೇಳೆ ಮನೆಯೊಂದರ ಆವರಣದೊಳಗೆ ಪುರಾತನ ದೇವಾಲಯ ಪತ್ತೆಯಾಗಿದೆ. ಈ ದೇವಾಲಯ ಕಲ್ಯಾಣ ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲಕ್ಕೆ ಸಂಬಂಧಿಸಿದ್ದು ಇರಬಹುದು ಎಂದು ಇತಿಹಾಸ ತಜ್ಞರು ಅಂದಾಜಿಸಿದ್ದಾರೆ. ಈ ದೇಗುಲ ಹೊರಗಿನಿಂದ ಸಾಮಾನ್ಯ ಮನೆಯಂತೆ ಕಂಡರೂ, ಒಳಗೆ ವಿಶಿಷ್ಟ ಶಿಲ್ಪಕಲೆಗಳನ್ನು ಒಳಗೊಂಡಿದೆ. ದೇಗುಲದಲ್ಲಿ ಈಶ್ವರ ಮತ್ತು ಅರ್ಧನಾರೀಶ್ವರ ವಿಗ್ರಹಗಳಿವೆ. ಸುಮಾರು ನಾಲ್ಕು ತಲೆಮಾರುಗಳಿಂದ ಈ ಮನೆಯಲ್ಲಿ…

Read More

ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​ – Kannada News | Mangaluru Drug Bust: Film Style Operation Seizes 106 kg of Ganja; Two Peddlers Arrested

ಮಂಗಳೂರು, ಜನವರಿ 20: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಡ್ರಗ್ಸ್​​ ದಂಧೆಕೋರರ ಹುಟ್ಟಡಗಿಸುತ್ತಿದ್ದು, ಒಂದೊಂದೇ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಮಂಗಳೂರು ಸಿಸಿಬಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು. ಆ ಬೆನ್ನಲ್ಲೇ ಇದೀಗ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸೀಜ್​​ ಮಾಡಿದೆ. ಸುಮಾರು…

Read More

ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಾಮಿಸಿ ಕಾಟಕೊಡುತ್ತಿದ್ದ ಪೂಜಾರಿ, ಸಂತ್ರಸ್ತೆಯ ತಮ್ಮನಿಂದಲೇ ಭೀಕರ ಕೊಲೆ – Kannada News | Belagavi Horror: Priest Harassing Minor Girl Brutally Killed by Victim’s Brother

ಬೆಳಗಾವಿ, ಜನವರಿ 20: ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಪೂಜಾರಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆತ ಬಾಲಕಿಯೊಬ್ಬಳನ್ನು ಕಾಮಿಸಿ ನಿರಂತರವಾಗಿ ಕಾಡುತ್ತಿದ್ದ. ಇದರಿಂದ ಬಾಲಕಿಯ ಅಪ್ರಾಪ್ತ ವಯಸ್ಸಿನ ತಮ್ಮ ರೊಚ್ಚಿಗೆದ್ದು, ಆತನನ್ನು ಹಾರೆಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರಾಜಾಪುರ ಗ್ರಾಮದ ನಿವಾಸಿ ಮಂಜುನಾಥ ಸುಭಾಷ್ ಎಣ್ಣಿ (23) ಎಂದು ಗುರುತಿಸಲಾಗಿದೆ. ಮಂಜುನಾಥ ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಯುವತಿಯನ್ನು ಹಿಂಬಾಲಿಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಯುವತಿಯ 17 ವರ್ಷದ ತಮ್ಮ…

Read More

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು – Kannada News | Rising Harassment in Bengaluru: Aavalahalli Incident and Women’s Safety Concerns

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ…

Read More

ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – Kannada News | Mysore Udayagiri Shock: Youth Stabbed to Death Amid Rising Violence

ಮೈಸೂರು, ಜನವರಿ 20: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ (Udayagiri) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ. ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರು…

Read More