Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 27ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ ಯೋಗ ಇದೆ. ಅದೇ ರೀತಿ ಈಗಾಗಲೇ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದೀರಿ ಅಂತಾದಲ್ಲಿ ಅಲ್ಲಿ ವೇತನ ಹೆಚ್ಚಳ ಅಥವಾ ಈಗ ಮಾಡುತ್ತಿರುವಂಥ ಉತ್ತಮ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಹುಡುಕಿಕೊಂಡು ಬರಬಹುದು. ಮನೆ ಖರೀದಿಗೆ ಪ್ರಯತ್ನ ಮಾಡುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಗೃಹಾಲಂಕಾರ ವಸ್ತುಗಳು, ಟೀವಿ, ಕರ್ಟನ್ ಇಂಥವುಗಳಿಗೆ ಹೆಚ್ಚು ಖರ್ಚು ಮಾಡಲಿದ್ದೀರಿ. ಬಜೆಟ್ ಹಾಕಿಕೊಂಡಂತೆ ಯಾವುದೂ ಸಾಗುವುದಿಲ್ಲ. ಆರಂಭದಲ್ಲಿಯೇ ಹೇಳಿದಂತೆ ನಿಮಗೆ ಬೇಕಾದವರು ಸಹ ನಡೆದುಕೊಳ್ಳುವುದಿಲ್ಲ. ಆ ಕಾರಣಕ್ಕೆ ಹೆಚ್ಚುತ್ತಿರುವ ಖರ್ಚು ಹಾಗೂ ವೆಚ್ಚ ನಿಮ್ಮನ್ನು ಆತಂಕಕ್ಕೆ ಗುರಿ ಮಾಡಲಿದೆ. ನಿಮಗೆ ಅರಿವಿಲ್ಲದಂತೆಯೂ ಅಥವಾ ಯಾವುದೋ ಉತ್ಸಾಹದಲ್ಲಿ ಒಪ್ಪಿಕೊಂಡ ಕೆಲಸವು ಬಹಳ ಕಷ್ಟ ಎಂಬುದು ಆ ನಂತರ ಅರಿವಿಗೆ ಬರಲಿದೆ. ಸ್ವಂತ ಉದ್ಯಮ ಅಥವಾ ವ್ಯವಹಾರವನ್ನು ಮಾಡುತ್ತಿರುವಂತಹವರಿಗೆ ಆದಾಯದಲ್ಲಿನ ಇಳಿಕೆ ಆತಂಕಕ್ಕೆ ಕಾರಣ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಸಂಭ್ರಮದ ವಾತಾವರಣ ಇರುತ್ತದೆ. ಮಕ್ಕಳು ಅಥವಾ ನಿಮಗಿಂತ ಚಿಕ್ಕ ವಯಸ್ಸಿನವರ ಜತೆಗೆ ಉತ್ತಮವಾದ ಸಮಯ ಕಳೆಯುವಂಥ ಅವಕಾಶ ನಿಮಗಿದೆ. ಈ ದಿನ ನೀವು ರುಚಿಕಟ್ಟಾದ ಊಟ ತಿಂಡಿಗಳನ್ನು ಸವಿಯುವಂಥ ಯೋಗ ಇದೆ. ಮನೆ ಜಮೀನು ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡಬೇಕು ಎಂದು ಹುಡುಕುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ. ಕೆಲವು ಕೆಲಸಗಳು ನೀವು ಅಂದುಕೊಂಡಿದ್ದಕ್ಕಿಂತ ಬಹಳ ವೇಗವಾಗಿ ನಡೆದು ಹೋಗಲಿವೆ. ನಿಮಗೆ ಬಹಳ ಮುಖ್ಯ ಎನಿಸಿದ ಕೆಲಸಗಳನ್ನು ಸಾಧ್ಯವಾದಷ್ಟೂ ನೀವೇ ಮಾಡುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಏಕಕಾಲಕ್ಕೆ ಹಲವು ಕೆಲಸ- ಜವಾಬ್ದಾರಿ ನಿರ್ವಹಿಸಬೇಕಾಗಲಿದೆ. ಆತ್ಮವಿಶ್ವಾಸ ಇರುವುದು ಒಳ್ಳೆಯದೇ. ಆದರೆ ನಿಮಗೆ ಗೊತ್ತಿರಬೇಕಾದದ್ದು ಏನೆಂದರೆ, ಈ ದಿನ ಯಾವುದೇ ಕೆಲಸವನ್ನು ಸರಳವಾಗಿ ತೆಗೆದುಕೊಳ್ಳಬಾರದು. ನಿಮ್ಮಲ್ಲಿ ಯಾರು ಪಿತ್ರಾರ್ಜಿತ ಆಸ್ತಿಯ ನಿರೀಕ್ಷೆಯಲ್ಲಿ ಇರುವಿರೋ ಅಂತಹವರಿಗೆ ಅಂದುಕೊಂಡಂತೆ ಕೆಲವು ಬೆಳವಣಿಗೆಗಳು ಆಗಲಿವೆ. ಬಹಳ ಮುಖ್ಯವಾದ ಕಾಗದಪತ್ರಗಳು ಅಥವಾ ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದಾದಲ್ಲಿ ಸಾಮಾನ್ಯ ದಿನಗಳಿಗಿಂತ ಇರಬೇಕಾದ ಎಚ್ಚರಿಕೆಗಿಂತ ಹೆಚ್ಚು ಜಾಗ್ರತೆಯನ್ನು ವಹಿಸಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮಗಾಗುವ ಖರ್ಚಿನಿಂದ ಸಂತೋಷ, ತೃಪ್ತಿ ನಿಮಗೆ ದೊರೆಯಲಿದೆ. ಕುಟುಂಬದ ಜತೆಗೆ ಕೂಡಿ ಪ್ರವಾಸಕ್ಕೆ ತೆರಳುವುದಕ್ಕೆ ಯೋಜನೆ ರೂಪಿಸಲಿದ್ದೀರಿ. ಯಾರು ನಿಮ್ಮನ್ನು ಬೇಕೆಂತಲೇ ನಂಬಿಸಿ, ಅವಮಾನಕ್ಕೆ ಗುರಿ ಮಾಡಿದರೋ ಅವರಿಗೆ ಸರಿಯಾದ ರೀತಿಯಲ್ಲಿ ಪ್ರತೀಕಾರ ಹೇಳುವುದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಮನೆಗೆ ಸೋಲಾರ್ ಉಪಕರಣಗಳನ್ನು ಖರೀದಿ ಮಾಡುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಅಥವಾ ಎಲೆಕ್ಟ್ರಿಕಲ್ ವಾಹನವನ್ನು ಖರೀದಿ ಮಾಡುವುದಕ್ಕಾದರೂ ಅಡ್ವಾನ್ಸ್ ಪಾವತಿಸಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಾನಾ ಕಾರಣಗಳಿಗೆ ಸಾಮಾನ್ಯ ದಿನಗಳಂತೆ ಈ ದಿನ ಇರುವುದಿಲ್ಲ. ತಾಳ್ಮೆ, ಸಮಾಧಾನ, ನಿಧಾನ, ಆಲೋಚಿಸಿ ನಿರ್ಧಾರ ಮಾಡುವುದು ಇಂಥ ಯಾವುದನ್ನೂ ಈ ದಿನ ನಿಮ್ಮಿಂದ ಮಾಡುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯ ಸಂಗತಿಗಳು ಎಂದಾಗ ತಕ್ಷಣವೇ ಅಥವಾ ಆವೇಶದಲ್ಲಿ ಏನನ್ನೂ ಹೇಳದಿರುವುದು ಉತ್ತಮ. ನಿಮಗೆ ತಾತ್ಕಾಲಿಕವಾಗಿ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ದೀರ್ಘಾವಧಿ ವಿಚಾರಗಳನ್ನು ನಿರ್ಲಕ್ಷ್ಯ ಮಾಡುವುದಕ್ಕೆ ಹೋಗಬೇಡಿ. ಕುಟುಂಬದ ವ್ಯವಹಾರವನ್ನು ಮಾಡುತ್ತಾ ಬರುತ್ತಿರುವವರಿಗೆ ಈಗ ಮಾಡುತ್ತಿರುವುದರ ಜತೆಗೆ ಇನ್ನಷ್ಟು ವ್ಯವಹಾರವನ್ನು ಸೇರಿಸಿಕೊಳ್ಳಬೇಕು ಎಂಬ ಆಲೋಚನೆ ಮೂಡಬಹುದು.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ವಿರಾಮವಾದ ಮನಸ್ಥಿತಿಯಲ್ಲಿ ಇರಲಿದ್ದೀರಿ. ಪಾರ್ಟಿ, ಗೆಟ್ ಟು ಗೆದರ್ ಗಳಲ್ಲಿ ಭಾಗವಹಿಸುವ ಸಾಧ್ಯತೆ ಈ ದಿನ ಇದೆ. ಸಂಬಂಧಿಗಳು, ಸ್ನೇಹಿತರು ಹಾಗೂ ಪರಿಚಯಸ್ಥರು ಹಲವರನ್ನು ಭೇಟಿ ಆಗಲಿದ್ದೀರಿ. ನಿಮ್ಮ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತರು ಅಥವಾ ಆಪ್ತರ ಜತೆಗೆ ಚರ್ಚೆಯನ್ನು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಈಗಿರುವ ಮನೆಯನ್ನು ಬದಲಾಯಿಸಿ, ಬೇರೆ ಸ್ಥಳಕ್ಕೆ ತೆರಳಬೇಕು ಎಂದೇನಾದರೂ ಆಲೋಚನೆ ಮಾಡುತ್ತಿದ್ದಲ್ಲಿ ಅಗತ್ಯ ಇರುವಂಥ ಮಾಹಿತಿ ದೊರೆಯಲಿದೆ. ಇನ್ನು ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಉದ್ಯೋಗ ಬದಲಾವಣೆ ಅವಕಾಶಗಳು ತೆರೆದುಕೊಳ್ಳುವಂತೆ ಕಾಣುತ್ತವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ತೀರಾ ಅಗತ್ಯ ಎಂದು ನೀವಾಗಿಯೇ ಕೇಳಿದ್ದಲ್ಲಿ ನಿಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪೋಷಕರು ಹಣಕಾಸಿನ ನೆರವು ನೀಡುವ ಬಗ್ಗೆ ಖಚಿತವಾಗಿ ಹೇಳುವ ಸಾಧ್ಯತೆ ಇದೆ. ಈ ಹಿಂದೆ ನೀವು ಹೇಳಿದ್ದ ಪ್ರಾಜೆಕ್ಟ್ ಗಾಗಿಯೋ ಅಥವಾ ವ್ಯವಹಾರದ ಮೇಲಿನ ನಂಬಿಕೆಯಿಂದಲೋ ಹಣ ಹಾಕುವುದಕ್ಕೆ ಒಪ್ಪಿಗೆ ಸೂಚಿಸುವ ಅವಕಾಶಗಳು ಹೆಚ್ಚಿಗೆ ಇವೆ. ಇನ್ನು ಈ ದಿನ ರೆಸ್ಟೋರೆಂಟ್, ಸಿನಿಮಾ ಅಥವಾ ಮನರಂಜನೆಗಾಗಿ ಅಂತಲೇ ಕೆಲವು ಸ್ಥಳಗಳಿಗೆ ಕುಟುಂಬ ಸಮೇತ ತೆರಳುವಂಥ ಯೋಗ ಕಂಡುಬರುತ್ತಿದೆ. ವಾಹನವನ್ನು ಪಾರ್ಕಿಂಗ್ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಎಚ್ಚರಿಕೆಯಿಂದ ಇರುವುದು ಮುಖ್ಯ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಈ ದಿನ ಸಾಧ್ಯವಾದಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡುವುದು ಒಳ್ಳೆಯದು. ಕೆಲವು ಸಂಗತಿಗಳನ್ನು ಯಾಕಾದರೂ ಹೇಳಿದೆನೋ ಎಂಬ ಪರಿಸ್ಥಿತಿ ನಿಮ್ಮದಾಗುತ್ತದೆ. ಒಂದೇ ವಿಚಾರಕ್ಕೆ ಒಬ್ಬ ವ್ಯಕ್ತಿ ಅಥವಾ ಹಲವರು ನಿಮ್ಮ ಬಳಿ ವಿಚಾರಿಸುವುದಕ್ಕೆ ಆರಂಭಿಸಬಹುದು ಅಥವಾ ತಮ್ಮ ಪರವಾಗಿ ಶಿಫಾರಸು ಮಾಡುವಂತೆ ಕೇಳಿಕೊಳ್ಳಬಹುದು. ಮಾನಸಿಕ ಹಿಂಸೆ ಆಯಿತೋ ಅಂತಲೋ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ಕಾರಣಕ್ಕೋ ಕೋಪವನ್ನು ಹೊರ ಹಾಕುವುದಕ್ಕೆ ಹೋಗಬೇಡಿ. ಸಂಗಾತಿ ಕಡೆಯ ಸಂಬಂಧಿಕರು ಮನೆಗೆ ಬರುವಂಥ ಯೋಗ ಇದೆ.

ಲೇಖನ- ಎನ್‌.ಕೆ.ಸ್ವಾತಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಮಕ್ಕಳಿಂದ ದೂರ ಹೋಗಬೇಕಾದೀತು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ನವಮೀ ತಿಥಿಯ ಶುಕ್ರವಾರದಂದು ಹಿರಿಯರ ಸೇವೆ, ಮಾತಿಗೆ ಮಾತು, ಸಂಗಾತಿಗೆ ಸಂತೋಷ, ವ್ಯಾಪಾರದಲ್ಲಿ ಸಹನೆ, ಮಕ್ಕಳಿಗೆ ಪ್ರೀತಿ, ಹೊಸ ವ್ಯವಹಾರಕ್ಕೆ ಪ್ರಯತ್ನ ಇದೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಬವ, ಸೂರ್ಯೋದಯ – 06 – 24 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:59 – 12:30 ಯಮಗಂಡ ಕಾಲ 15:32 – 17:04, ಗುಳಿಕ ಕಾಲ 07:57 – 09:27

ಮೇಷ ರಾಶಿ :

ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ.

ವೃಷಭ ರಾಶಿ :

ಇಂದು ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಿ ಅಪಹಾಸ್ಯಕ್ಕೆ ಯಾವುದೇ ಕಾರಣಕ್ಕೂ ಸಿಕ್ಕಿಬೀಳಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ನೂತನ ವಸ್ತುಗಳನ್ನು ಖರೀದಿಸುವಿರಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಈ ದಿನ ಹಸಿವು ಬಾಯಾರಿಕೆ ಅಧಿಕವಾಗಿರುವುದು.

ಮಿಥುನ ರಾಶಿ :

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ಸರಿಯಾದ ಸಮಯಕ್ಕೆ ಸ್ನೇಹಿತರೊಬ್ಬರು ಬಂದು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು.

ಕರ್ಕಾಟಕ ರಾಶಿ :

ಇಂದು ಮಾತು ಮತ್ತು ನಡವಳಿಕೆಯನ್ನು ಮಿತದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಪ್ರಯೋಜನ ಸಿಗಲಿದೆ. ಅತಿ ಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಅನ್ಯ ಆಲೋಚನೆಯಿಂದ ನೀವು ಹಣವನ್ನು ಹೆಚ್ಚು ಖರ್ಚುಮಾಡಬೇಕಾಗುವುದು. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ.

ಸಿಂಹ ರಾಶಿ :

ಯಾರದ್ದೋ ಮಾತು ಕೇಳಿ ನಿಮ್ಮ ಒಳ್ಳೆಯ ನಿರ್ಧಾರವನ್ನು ಬದಲಿಸದಿರಿ. ಸಂತಾನದ ವಿಚಾರದಲ್ಲಿ ಮನೆಯವರ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು.

ಕನ್ಯಾ ರಾಶಿ :

ನಿಮ್ಮ ಬಗ್ಗೆ ಪ್ರಚಾರದ ಗೀಳನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ‌ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ.

ತುಲಾ ರಾಶಿ :

ಇಂದು ನೀವು ಅತ್ಯಂತ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಇನ್ನೊಬ್ಬರ ಬಳಿ ಇರುವ ನಿಮ್ಮ ದಾಖಲೆಯನ್ನು ಜಾಣ್ಮೆಯಿಂದ ಪಡೆದುಕೊಳ್ಳುವಿರಿ. ಸಮಯವನ್ನು ಹಾಳುಮಾಡದೇ ಕೆಲಸದಲ್ಲೇ ಗಮನವಿರಲಿ. ಮನೆಯವರ ಜೊತೆ ಸಮಯವನ್ನು ನೀವು ಕಳೆಯಬೇಕು ಎನ್ನಿಸಬಹುದು.

ವೃಶ್ಚಿಕ ರಾಶಿ :

ದೂರದ ಬಂಧುಗಳ ಆಗಮನದಿಂದ ಜಟಿಲ ಸಮಸ್ಯೆಯ ನಿವಾರಣೆ ಮಾಡುವರು. ಕಾನೂನಿನ ವಿಷಯದಲ್ಲಿ ಸಲಹೆ ಪಡೆಯಿರಿ ಮತ್ತು ಸ್ವಂತವಾಗಿ ಯೋಚಿಸದೇ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಯಾವುದೇ ಒತ್ತಡವಿಲ್ಲದ ಕೆಲಸವು ನಿಧಾನವಾಗುವುದು. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು.

ಧನು ರಾಶಿ :

ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಆದರೆ ಆರೋಗ್ಯದ ಬಗ್ಗೆಯೂ ಕಾಳಜಿ ಅವಶ್ಯಕ. ಯಾರಾದರೂ ನಿಮ್ಮನ್ನು ಉದ್ವೇಗಗೊಳಿಸಬಹುದು. ಅದಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿ ಕಾರ್ಮಿಕರಿಗೆ ಕೆಲಸವು ಸಿಗದೇ ಕಷ್ಟವಾದೀತು.

ಮಕರ ರಾಶಿ :

ಹಣಕಾಸಿನ ಯೋಜನೆಯಲ್ಲಿ ಆರಂಭದಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ಆಗಬೇಕಾದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ತುತ್ತಾಗಬೇಕಾದೀತು.

ಕುಂಭ ರಾಶಿ :

ನಿಮ್ಮ ಮನಸ್ಸು ಸೂಕ್ಷ್ಮವಾದ ಸಂಗತಿಗಳನ್ನೂ ಇಂದು ಸ್ವೀಕರಿಸಬಹುದು. ನೀವು ಕಾಲ್ಪನಿಕ ಪ್ರಪಂಚದಿಂದ ವಾಸ್ತವಕ್ಕೆ ಬರಬೇಕಾಗುವುದು. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ಪ್ರೀತಿಯನ್ನು ಕೊಡುವವರ ಮೇಲೆ ಸುಮ್ಮನೆ ಅನುಮಾನ ಬೇಡ. ಸ್ಥಿರಾಸ್ತಿಯ ವಿಚಾರಕ್ಕೆ ಬಿಸಿ ಮಾತುಗಳು ಕುಟುಂಬದಲ್ಲಿ ಬರಬಹುದು. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ.

ಮೀನ ರಾಶಿ :

ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಸಲ್ಲದ ಚರ್ಚೆ ಮಾಡುವುದನ್ನು ತಪ್ಪಿಸಿ. ಅಪಘಾತಗಳು ಸಂಭವಿಸುವ ಸಾಧ್ಯತೆಯಿರುವುದರಿಂದ, ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ನೀರಿಗೆ ಸಂಬಂಧಿಸಿದ ಉದ್ಯಮದಲ್ಲಿ ಆದಾಯ ಹೆಚ್ಚು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ನಿಮ್ಮನ್ನು ಅವಲೋಕನ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ವಹಿಸಿ.

-ಲೋಹಿತ ಹೆಬ್ಬಾರ್-8762924271 (what’s app only)

Source link

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್​ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್​ಸಿಬಿ ಒಟ್ಟು 14 ಪಂದ್ಯಗಳನ್ನು ಆಡಲಿದೆ. ಈ 14 ಪಂದ್ಯಗಳಲ್ಲಿ 7 ಪಂದ್ಯಗಳು ಆರ್​ಸಿಬಿಯ ತವರು ಮೈದಾನದಲ್ಲಿ ನಡೆದರೆ, ಉಳಿದ 7 ಪಂದ್ಯಗಳು ಎದುರಾಳಿ ತಂಡದ ತವರು ಮೈದಾನದಲ್ಲಿ ನಡೆಯಲಿವೆ.

ಈ ಆವೃತ್ತಿಯಲ್ಲಿ ಆರ್​ಸಿಬಿ ಎರಡು ತವರು ತಂಡಗಳನ್ನು ಘೋಷಿಸಿಕೊಂಡಿದೆ. ಅದರಂತೆ ಆರ್​ಸಿಬಿ, 5 ಪಂದ್ಯಗಳನ್ನು ತನ್ನ ಅಧಿಕೃತ ತವರು ಮೈದಾನವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಉಳಿದ ಎರಡು ಪಂದ್ಯಗಳನ್ನು ಹೊಸ ತವರು ಮೈದಾನ ಎನಿಸಿಕೊಂಡಿರುವ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ.

ಯಾವ ತಂಡದ ವಿರುದ್ಧ ಎಷ್ಟು ಪಂದ್ಯಗಳನ್ನಾಡಲಿದೆ?

ಉಳಿದಂತೆ ಈ 14 ಲೀಗ್ ಪಂದ್ಯಗಳಲ್ಲಿ ಆರ್​ಸಿಬಿ ಕೆಲವು ತಂಡಗಳ ವಿರುದ್ಧ 2 ಪಂದ್ಯಗಳನ್ನು ಆಡಿದರೆ, ಇನ್ನು ಕೆಲವು ತಂಡಗಳ ವಿರುದ್ಧ ಕೇವಲ 1 ಪಂದ್ಯವನ್ನು ಆಡಲಿದೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್‌, ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಆರ್​ಸಿಬಿ ತಲಾ 2 ಪಂದ್ಯಗಳನ್ನು ಆಡಲಿದೆ. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ತಲಾ ಒಂದು ಪಂದ್ಯವನ್ನು ಆಡಲಿದೆ.

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಆರ್​ಸಿಬಿ ಲೀಗ್ ಹಂತದ ವೇಳಾಪಟ್ಟಿ

1. ಮಾರ್ಚ್ 28 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

2. ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

3. ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)

4. ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)

5. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

6. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)

7. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)

8. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)

9. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)

10. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)

11. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

12. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)

13. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)

14. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

2027ರ ಜನಗಣತಿ: ಏ 1ರಿಂದ ಕರ್ನಾಟಕದಲ್ಲಿ ಮೊದಲ ಹಂತ ಶುರು, ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, ಮಾರ್ಚ್​ 26: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್​ ರೂಪದಲ್ಲಿ ಜನಗಣತಿ ನಡೆಯಲಿದೆ. ಅದರಂತಯೇ ಕರ್ನಾಟಕದಲ್ಲಿ 2027ರ ಜನಗಣತಿಯ (Self-Enumeration) ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ ಗಣತಿಯನ್ನು ಏಪ್ರಿಲ್​​ 1ರಿಂದ 15ರವರೆಗೆ ಅಂದರೆ 15 ದಿನ ನಡೆಸಲು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ? 

2027ರ ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ವಯಂ-ಗಣತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಭಾರತ ಸರ್ಕಾರವು se.census.gov.in ಎಂಬ ವೆಬ್ ಪೋರ್ಟಲ್​ನ್ನು ಅಭಿವೃದ್ಧಿ ಪಡಿಸಿದೆ.

ಇದನ್ನೂ ಓದಿ: ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ

ಪ್ರಚುರ ಪಡಿಸಲಾದ ಬಳಕೆದಾರರ ಮಾರ್ಗದರ್ಶಿಯ ಬಗ್ಗೆ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲಾ ನಿಗಮ, ಮಂಡಳಿ ಇತ್ಯಾದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ನಾಗರಿಕರು, ಗಣತಿದಾರರಿಗೆ ಅರಿವು ಮೂಡಿಸುವಂತೆ ನಾಗರಿಕರು, ಉದ್ಯೋಗಿಗಳು, ಗಣತಿದಾರರಿಗೆ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಏಪ್ರಿಲ್​ 1ರಿಂದ 15ರವರೆಗೆ ಒಟ್ಟು 15 ದಿನಗಳ ಕಾಲ ಕರ್ನಾಟಕದ ರಾಜ್ಯದಲ್ಲಿ ನಡೆಯಲಿರುವ ಮನೆಗಳ ಪಟ್ಟಿ ಮತ್ತು ಮನೆ ಗಣತಿಯ ಸ್ವಯಂ-ಗಣತಿಯನ್ನು ಯಶಸ್ವಿಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಸ್ವಯಂ ಗಣತಿ ಮಾಡುವುದು ಹೇಗೆ?

ಕೇಂದ್ರ ಗೃಹ ಸಚಿವಾಲಯ 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಿದೆ. ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿಯಲ್ಲಿ ಮೊದಲ 15 ದಿನ se.census.gov.in ವೆಬ್​ ಸೈಟ್​ ಮೂಲಕ ಸ್ವಯಂ-ಗಣತಿಗೆ ಅವಕಾಶವಿರುತ್ತದೆ.

ಇದನ್ನೂ ಓದಿ: ಅ. 31ರವರೆಗೆ ಜಾತಿ ಗಣತಿ ಅವಧಿ ವಿಸ್ತರಣೆ: ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಕೈಬಿಟ್ಟ ಸರ್ಕಾರ

ಅದರಂತೆ ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳ ಅವಧಿಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು ಮತ್ತು ಮೊಬೈಲ್, ಇಮೇಲ್‌ನಲ್ಲಿ ಸ್ವಯಂ-ಗಣತಿ ಐಡಿ ಪಡೆಯಬಹುದಾಗಿದೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ ಗಣತಿ ದಂತ್ತಾಂಶದ ಅಂತಿಮ ಸಲ್ಲಿಕೆಗಾಗಿ ಗಣತಿ ಐಡಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಚಿತ್ರೀಕರಣ ಆಗಿತ್ತು. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿರುತ್ತಿತ್ತು. ರಮೇಶ್ ಭಟ್ ಅವರು ಸಮಾಧಾನದಿಂದ ಮಾತನಾಡಿದರು. ಹೊಸದಾಗಿ ಚಿತ್ರೀಕರಣ ಮಾಡಲಾಯಿತು. ಈ ಎಲ್ಲ ಕಾರಣಕ್ಕಾಗಿ ಕರ್ನಾಟಕದ ಅಳಿಯ ಸಿನಿಮಾ ಬಿಡುಗಡೆ ಆಗುವುದು ತಡವಾಯಿತು’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ ಬಂದಂತಾಗಿದೆ.

ಹಾವೇರಿಯ ರಾಣೇಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ, ಸಮಾಜದ ಯಾವುದೇ ವ್ಯಕ್ತಿ ಯಾವುದೇ ಪಕ್ಷದಿಂದ ಸ್ಪರ್ಧಿಸಲಿ. ಸಮಾಜದವರೆಲ್ಲರೂ ಬೆಂಬಲಿಸೋದು ಅವರ ಆದ್ಯ ಕರ್ತವ್ಯ. ಶಾಮನೂರು ಶಿವಶಂಕರಪ್ಪ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ್ದಾರೆ. ಅಖಿಲ ಭಾರತ ವೀರಶೈವಸಂಘವನ್ನು ಸುಧೀರ್ಘವಾಗಿ ಮುನ್ನಡೆಸಿದ್ದಾರೆ. ಅವರ ಮೊಮ್ಮಗ ಈಗ ಚುನಾವಣಾ ಎದುರಿಸ್ತಿದ್ದಾರೆ. ಅವರಿಗೆ ಬೆಂಬಲಿಸಬೇಕು ಅಂತೇಳಿ ಸಮಾಜದವರಿಗೆ ಹೇಳಲು ಬಯಸ್ತೀನಿ ಎಂದು ಕರೆ ನೀಡಿದರು.

ಇದನ್ನೂ ನೋಡಿ: ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್​​ಗೆ ಟೆನ್ಷನ್

Source link

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಆರ್​ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್​ವುಡ್

Source link

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿದ್ದ 6 ವರ್ಷಗಳ ವಯೋಮಿತಿಗೆ 60 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಪೋಷಕರಿಗೆ ಈ ಬಗ್ಗೆ ಗೊಂದಲವಾಗುತ್ತಿದೆ. ಎಲ್‌ಕೆಜಿ ಮತ್ತು ಯುಕೆಜಿ ಸೇರ್ಪಡೆಗೆ ಸೂಕ್ತ ವಯೋಮಿತಿ ಕಾನೂನು ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್‌ಕೆಜಿ, ಯುಕೆಜಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಮಾಡುತ್ತೇವೆ. ಈ ಬಗ್ಗೆ ಅಗತ್ಯ ಸಭೆ ನಡೆಸಲಾಗುತ್ತದೆ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು ಗೊತ್ತಾಗುತ್ತದೆ. ಹನಿಮೂನ್ ಆಗುತ್ತಾ ಅಥವಾ ಆ ದೆವ್ವ ಸೇಡು ತೀರಿಸಿಕೊಳ್ಳುತ್ತಾ ಎಂಬುದೇ ಕಥೆ. ಕಥೆಗೆ ಸೂಕ್ತ ಎಂಬ ಕಾರಣಕ್ಕೆ ಸುಬ್ಬ ಸುಬ್ಬಿ ಅಂತ ಇಟ್ಟಿದ್ದೇವೆ. ಕರ್ನಾಟಕದಲ್ಲಿ 7 ಕೋಟಿ ಜನರು ಇದ್ದಾರೆ. ಒಬ್ಬರ ಕಥೆ, ಮಾತು ಇನ್ನೊಬ್ಬರಿಗೆ ಲಿಂಕ್ ಆಗುತ್ತದೆ’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version