ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ
ಕಾರವಾರ, ಮಾರ್ಚ್ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…