Headlines

ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್, 8 ಬಾರಿ ಲ್ಯಾಂಡಿಂಗ್​ಗೆ ಯತ್ನ

ಕೋಲ್ಕತ್ತಾ, ಮಾರ್ಚ್​ 26: ಕೋಲ್ಕತ್ತಾದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಹೆಲಿಕಾಪ್ಟರ್ ಕೂಡ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದೆ. ಅರ್ಧ ಗಂಟೆ ತಡವಾಗಿ ಇಳಿದಿದೆ. ಅದಕ್ಕೂ ಮುನ್ನ 8 ಬಾರಿ ಲ್ಯಾಂಡಿಂಗ್​ಗೆ ಪ್ರಯತ್ನಿಸಲಾಗಿತ್ತು. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಕೋಲ್ಕತ್ತಾ ವಿಮಾನ ನಿಲ್ದಾಣದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತುತ್ತಿತ್ತು, ಏಕೆಂದರೆ ಹವಾಮಾನ ವೈಪರೀತ್ಯದಿಂದಾಗಿ ಅದಕ್ಕೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಮುಖ್ಯಮಂತ್ರಿ ತಮ್ಮ…

Read More

ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್​ ಲಾಕ್​​

ಬೆಳಗಾವಿ, ಮಾರ್ಚ್​ 26: ಬೆಳಗಾವಿ ಮಾರ್ಕೆಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖೋಟಾ ನೋಟು (Khota Notu) ದಂಧೆಯನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ಬೆಳಗಾವಿಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್​​ನ್ನು ಬಂಧಿಸಿದ್ದಾರೆ. ಎ1 ಮೊಹಮ್ಮದ್‌ ಅರ್ಬಾಜ್ (21), ಎ2 ರೂಪೇಶ್ ವಾಕೋಡೆ (26), ಎ3 ಮೊಹಮ್ಮದ್ ಹುಸೇನ್ ಭಕ್ಷಿ(23), ಶ್ರವಣಕುಮಾರ (25) ಬಂಧಿತರು. ಆರೋಪಿಗಳಿಂದ ಒಂದು ಕಾರು, 2 ಲಕ್ಷ 40 ಸಾವಿರ ರೂ ಮುಖ ಬೆಲೆಯ ಖೋಟಾ ನೋಟು ಮತ್ತು…

Read More

2031ರವರೆಗೂ ಹಣದುಬ್ಬರ ಶೇ. 4ರಲ್ಲಿ ಇರುವಂತೆ ಮಾಡಿ: ಆರ್​ಬಿಐಗೆ ಟಾರ್ಗೆಟ್ ಕೊಟ್ಟ ಸರ್ಕಾರ

ನವದೆಹಲಿ, ಮಾರ್ಚ್ 26: ಕೇಂದ್ರ ಸರ್ಕಾರ ತನ್ನ ಹಣದುಬ್ಬರ (Retail Inflation) ನಿಲುವನ್ನು ಮುಂದುವರಿಸಿದೆ. ಮುಂದಿನ ಐದು ವರ್ಷ, ಅಂದರೆ 2023ರ ಮಾರ್ಚ್​ವರೆಗೂ ರೀಟೇಲ್ ಹಣದುಬ್ಬರ ಶೇ. 4 ಅನ್ನು ಕಾಯ್ದುಕೊಳ್ಳುವಂತೆ ಆರ್​ಬಿಐಗೆ ಸರ್ಕಾರ ಗುರಿ ಕೊಟ್ಟಿದೆ. ರೀಟೇಲ್ ಹಣದುಬ್ಬರ ಶೇ. 4, ಆಚೀಚೆ ಎರಡು ಪ್ರತಿಶತ ಮೀರದಂತೆ ಇರಬೇಕು ಎಂಬುದು ಸರ್ಕಾರದ ನಿರ್ದೇಶನ. ಅಂದರೆ, ಹಣದುಬ್ಬರವು ಶೇ. 2ರಿಂದ ಶೇ. 6ರ ಶ್ರೇಣಿಯಲ್ಲೇ ಇರುವಂತೆ ನೋಡಿಕೊಳ್ಳಬೇಕೆಂದು ಆರ್ಬಿಐಗೆ ಸರ್ಕಾರ ತಿಳಿಸಿದೆ. ಆರ್ಥಿಕತೆಯ ವೇಗವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ…

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More

ಥೈಲ್ಯಾಂಡ್‌ನಲ್ಲಿ ವಿಜಯ್-ರಶ್ಮಿಕಾ ‘ಹನಿಮೂನ್’: ಐಶಾರಾಮಿ ವಾಸ್ತವ್ಯ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಸಹ ಬಲು ಜೋರಾಗಿ ನಡೆಯಿತು. ಬಳಿಕ ಇವರ ಹನಿಮೂನ್ ಪ್ರವಾಸದ​ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು ಆದರೆ ಯುದ್ಧ ಭೀತಿಯ ಕಾರಣ ಎಲ್ಲ ಯೋಜನೆಗಳನ್ನು ಕೈಬಿಟ್ಟರು. ಇದೀಗ ರಶ್ಮಿಕಾ ಮತ್ತು ವಿಜಯ್ ಅವರು ಥಾಯ್ಲೆಂಡ್​​ನಲ್ಲಿ ‘ಬಡ್ಡಿಮೂನ್’ನ ಸಣ್ಣ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ….

Read More

Free railway travel: ಶೌರ್ಯ ಪ್ರಶಸ್ತಿ ವಿಜೇತರಿಗೆ ಸರ್ಕಾರದ ಗಿಫ್ಟ್​, ಜೀವಮಾನವಿಡೀ ರೈಲು ಪ್ರಯಾಣ ಉಚಿತ

ನವದೆಹಲಿ, ಮಾರ್ಚ್​ 26: ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರನ್ನು ಗೌರವಿಸಲು ಕೇಂದ್ರ ಸರ್ಕಾರ ಮಹತ್ವದ ಮತ್ತು ಹೃದಯಸ್ಪರ್ಶಿ ನಿರ್ಧಾರವನ್ನು ತೆಗೆದುಕೊಂಡಿದೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿಗಳನ್ನು ಪಡೆಯುವ ಸೈನಿಕರಿಗೆ ಭಾರತೀಯ ರೈಲ್ವೆ(Indian Railways)ಯಲ್ಲಿ ಜೀವನಪರ್ಯಂತ ಉಚಿತ ಪ್ರಯಾಣ ಅವಕಾಶವನ್ನು ನೀಡಲಾಗುವುದು . ಈ ಹೆಜ್ಜೆ ಕೇವಲ ಅನುಕೂಲಕ್ಕಾಗಿ ಅಲ್ಲ, ಬದಲಾಗಿ ರಾಷ್ಟ್ರವು ತನ್ನ ವೀರರಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರಯೋಜನವು ಪದಕ ವಿಜೇತ ಸೈನಿಕರಿಗೆ ಸೀಮಿತವಾಗಿಲ್ಲ, ಅವರ ಕುಟುಂಬಗಳಿಗೂ ಅನ್ವಯಿಸುತ್ತದೆ ಎಂದು…

Read More

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

ಭಾರತದ ಈ ರೈಲ್ವೆ ನಿಲ್ದಾಣಕ್ಕೆ ವರ್ಷಕ್ಕೆ ಎರಡೇ ಬಾರಿ ರೈಲು ಬರುತ್ತೆ

ನವದೆಹಲಿ, ಮಾರ್ಚ್​ 26: ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ರೈಲ್ವೆ(Railway) ಜಾಲವನ್ನು ಹೊಂದಿದೆ. ನಿತ್ಯವೂ ಸಾವಿರಾರು ಮಂದಿ ರೈಲಿನಲ್ಲಿ ಸಂಚರಿಸುತ್ತಾರೆ. ಅದಕ್ಕಾಗಿಯೇ ಹೆಚ್ಚಿನ ನಿಲ್ದಾಣಗಳು ಯಾವಾಗಲೂ ಜನದಟ್ಟಣೆಯಿಂದ ಕೂಡಿರುತ್ತವೆ. ಆದರೆ ಇಂದು, ಭಾರತದಲ್ಲಿ ಒಂದು ವಿಶಿಷ್ಟ ರೈಲ್ವೆ ನಿಲ್ದಾಣದ ಬಗ್ಗೆ ನಿಮಗೆ ಗೊತ್ತೆ? ಈ ನಿಲ್ದಾಣದಲ್ಲಿ ವರ್ಷದಲ್ಲಿ ಎರಡೇ ಬಾರಿ ರೈಲು ಬರುತ್ತೆ. ಇದು ಪಂಜಾಬ್‌ನ ಹುಸೇನಿವಾಲಾ ರೈಲು ನಿಲ್ದಾಣವಾಗಿದ್ದು, ಫಿರೋಜ್‌ಪುರ ಮತ್ತು ಹುಸೇನಿವಾಲಾ ಗಡಿಯ ನಡುವೆ ಇದೆ. ಈ ನಿಲ್ದಾಣವು ಫಿರೋಜ್‌ಪುರ ಕ್ಯಾಂಟ್‌ನಿಂದ ಬರುವ ರೈಲು…

Read More

ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡಿನ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಅಮಾನತು

ತಂಜಾವೂರು, ಮಾರ್ಚ್ 26: ತಮಿಳುನಾಡಿನ ತಂಜಾವೂರು ಜಿಲ್ಲೆಯ ಒರಥನಾಡುವಿನಲ್ಲಿ ನಡೆದ ತಮಿಳುನಾಡು ವೆಟ್ರಿ ಕಗಮಗನ್‌ನ ಮಹಿಳಾ ದಿನಾಚರಣೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ನಟ ದಳಪತಿ ವಿಜಯ್ ಅವರ ಹಾಡಿಗೆ ನೃತ್ಯ ಮಾಡಿದ್ದರು. ಈ ಘಟನೆ ಸಾಕಷ್ಟು ಸಂಚಲನ ಮೂಡಿಸಿತ್ತು. ತಮಿಳುನಾಡು ವಿಧಾನಸಭಾ ಚುನಾವಣೆಯ (Tamil Nadu Elections) ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳು ಸೀಟು ಹಂಚಿಕೆ ಮತ್ತು ಪ್ರಚಾರದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಚುನಾವಣಾ ಆಯೋಗವು ತಮಿಳುನಾಡಿನಾದ್ಯಂತ ತೀವ್ರ…

Read More

ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳುರಿಗೆ ಬಂದ ಹಡಗು

ಮಂಗಳೂರು, (ಮಾರ್ಚ್ 26): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದ್ದು, ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಇದರ ಮಧ್ಯೆ ಕತಾರ್​​ನಿಂದ ಎಲ್‌ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ (New Mangalore Port) ಆಗಮಿಸಿದೆ. 17 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಕೊರತೆ ನೀಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More