ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ? – Kannada News | A.R. Rahman’s Spiritual Journey: Why Dilip Kumar Converted to Islam

ಮ್ಯೂಸಿಕ್ ಡೈರೆಕ್ಟರ್ ಎ.ಆರ್. ರೆಹಮಾನ್ (Ar Rahman) ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ. ಅವರು ಅನೇಕ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಂಗೀತ ಸಂಯೋಜನೆಯ ಕಾರಣಕ್ಕೆ ಅವರಿಗೆ ಆಸ್ಕರ್ ಅವಾರ್ಡ್ ಕೂಡ ಸಿಕ್ಕಿದೆ ಎಂಬುದು ವಿಶೇಷ. ಧರ್ಮದ ಕಾರಣಕ್ಕೆ ಅವರಿಗೆ ಬಾಲಿವುಡ್​​ನಲ್ಲಿ ಕೆಲಸ ಸಿಗುತ್ತಿಲ್ಲ ಎಂದಿದ್ದರು. ಇದು ವಿವಾದ ಆಗಿತ್ತು. ಹಾಗಾದರೆ ರೆಹಮಾನ್ ಅವರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಗೊಂಡಿದ್ದು ಏಕೆ ಎಂಬ ವಿಷಯದ ಬಗ್ಗೆ ಇಲ್ಲಿದೆ ಮಾಹಿತಿ.

ಎ.ಆರ್. ರೆಹಮಾನ್ ಧರ್ಮದಿಂದ ಮುಸ್ಲಿಂ. ಆದರೆ ಅವರು ಹಿಂದೂವಾಗಿ ಜನಿಸಿದರು ಎಂದು ಬಹಳ ಕಡಿಮೆ ಜನರಿಗೆ ತಿಳಿದಿದೆ. ನಂತರ ಅವರು ಇಸ್ಲಾಂಗೆ ಮತಾಂತರಗೊಂಡರು. ಎ.ಆರ್. ರೆಹಮಾನ್ ನಾಲ್ಕು ವರ್ಷದವನಿದ್ದಾಗಿನಿಂದ ಪಿಯಾನೋ ನುಡಿಸುತ್ತಿದ್ದರು. ಅಂದಿನಿಂದ, ಸಂಗೀತ ಕ್ಷೇತ್ರದಲ್ಲಿ ಅವರ ಪ್ರಯಾಣ ಪ್ರಾರಂಭವಾಯಿತು.

ಅವರು ಮೂಲತಃ ತಮಿಳುನಾಡಿನ ಚೆನ್ನೈನವರು. ಅವರ ಹಿಂದಿನ ಹೆಸರು ದಿಲೀಪ್ ಕುಮಾರ್ ರಾಜಗೋಪಾಲ. ಇಸ್ಲಾಂಗೆ ಮತಾಂತರಗೊಂಡ ನಂತರ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಅವರ ತಂದೆಯೂ ಪ್ರಸಿದ್ಧ ಸಂಗೀತಗಾರರಾಗಿದ್ದರು. ಎ.ಆರ್. ರೆಹಮಾನ್ 9 ವರ್ಷದವರಾಗಿದ್ದಾಗ ಅವರ ತಂದೆ ನಿಧನರಾದರು.

ತಂದೆಯ ಮರಣದ ನಂತರ, ದಿಲೀಪ್ ಕುಮಾರ್ (ಈಗ ರೆಹಮಾನ್) ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಂಡರು. ಆರಂಭಿಕ ದಿನಗಳಲ್ಲಿ, ದಿಲೀಪ್ ಕುಮಾರ್ ಕುಟುಂಬವು ದೊಡ್ಡ ಆರ್ಥಿಕ ತೊಂದರೆಗಳನ್ನು ಎದುರಿಸಬೇಕಾಯಿತು. ದಿಲೀಪ್ ಕುಮಾರ್ ಅವರ ಕುಟುಂಬವು ಅವರ ತಂದೆಯ ಸಂಗೀತ ವಾದ್ಯಗಳನ್ನು ಬಾಡಿಗೆಗೆ ನೀಡುವ ಮೂಲಕ ಜೀವನ ನಡೆಸುತ್ತಿದ್ದರು. ದಿಲೀಪ್ ಕುಮಾರ್ ಶಾಲೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರಲಿಲ್ಲ.

ಇದನ್ನೂ ಓದಿ: ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್

ಆದರೆ ಅವರಿಗೆ ಸಂಗೀತ ಮತ್ತು ಸಂಗೀತ ವಾದ್ಯಗಳ ಬಗ್ಗೆ ತುಂಬಾ ಒಲವು ಇತ್ತು. ರೆಹಮಾನ್ ಹಾಗೂ ಕಟುಂಬ ಖಾದ್ರಿ ಸಾಹೇಬ್ ಎಂಬ ಸುಫಿ ಪೀರ್ (ಸಂತ) ಅವರನ್ನು ಭೇಟಿಯಾದರು. ಈ ಸುಫಿ ಸಂತನ ಪ್ರಭಾವದಿಂದ ರೆಹಮಾನ್ ಅವರ ತಾಯಿ ಮತ್ತು ಕುಟುಂಬ ಸುಫಿ ಇಸ್ಲಾಂನತ್ತ ಆಕರ್ಷಿತರಾದರು. ಅವರು ತಮ್ಮ 23 ನೇ ವಯಸ್ಸಿನಲ್ಲಿ ಕುಟುಂಬದ ಜೊತೆ ಇಸ್ಲಾಂ ಧರ್ಮವನ್ನು ಸ್ವೀಕರಿಸಿದರು. ‘ಇಸ್ಲಾಂ ಧರ್ಮವನ್ನು ಸ್ವೀಕರಿಸಲು ಕಾರಣ ಆ ಧರ್ಮದಿಂದ ನಮಗೆ ಸಿಕ್ಕ ಮಾನಸಿಕ ಶಾಂತಿ’ ಎಂದಿದ್ದರು ರೆಹಮಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ – Kannada News | Man Caught Urinating On Delhi Metro Platform, Sparks Outrage

ನವದೆಹಲಿ, ಜನವರಿ 20: ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ(Urine) ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

ಸಾವಿರಾರು ಪ್ರಯಾಣಿಕರು ಓಡಾಡುವ ಪ್ಲಾಟ್​ಫಾರ್ಮ್​ನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯ ಬೇಜವಾಬ್ದಾರಿಯುತ ವರ್ತನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗಾಜಿನ ಕಾರಿಡಾರ್ ಬಳಿ ನಿಂತು ಮೂತ್ರ ವಿಸರ್ಜನೆ ಮಾಡಿರುವುದನ್ನು ಕಾಣಬಹುದು. ಅದನ್ನು ಮತ್ತೊಬ್ಬ ಪ್ರಯಾಣಿಕ ರೆಕಾರ್ಡ್ ಮಾಡಿದ್ದಾನೆ. ಯಾರೋ ತನ್ನನ್ನು ರೆಕಾರ್ಡ್ ಮಾಡುತ್ತಿರುವುದನ್ನು ಆ ವ್ಯಕ್ತಿ ಗಮನಿಸಿ ಕ್ಷಮೆಯನ್ನೂ ಯಾಚಿಸದೆ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ವಿಡಿಯೋ

ಮೆಟ್ರೋ ಆವರಣದಲ್ಲಿ, ಕೆಲವರು ಬಹಿರಂಗವಾಗಿ ಮೂತ್ರ ವಿಸರ್ಜಿಸುತ್ತಾರೆ ಅಥವಾ ಮಕ್ಕಳನ್ನು ಅದೇ ರೀತಿ ಮಾಡಲು ಬಿಡುತ್ತಾರೆ ಇದು ಗಂಭೀರವಾದ ಸಂಗತಿ. ದೇಶಕ್ಕೆ ಮಾದರಿಯಾಗದಿದ್ದರೂ ತೊಂದರೆಯಿಲ್ಲ, ದೇಶದ ಮರ್ಯಾದಿ ತೆಗೆಯುವ ಇಂಥಾ ಕೆಲಸ ಯಾರೂ ಮಾಡಬೇಡಿ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

Source link

ಗಿಲ್ಲಿ ಗೆದ್ದ ದಿನವೇ ಮತ್ತೊಬ್ಬರಿಗೆ ಸಿಕ್ಕಿದೆ ಬಿಗ್ ಬಾಸ್ ವಿನ್ನರ್ ಟೈಟಲ್ – Kannada News | After Gilli Bigg Boss Kannada Win Divya Ganesh Wins At Tamil Bigg Boss Kannada

ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಪೂರ್ಣಗೊಂಡಿದೆ. ಗಿಲ್ಲಿಗೆ ಗೆಲುವು ಸಿಕ್ಕಿದೆ. ಅದೇ ರೀತಿ ತಮಿಳಿನಲ್ಲೂ ಬಿಗ್ ಬಾಸ್ ಫಿನಾಲೆ ನಡೆದಿದೆ. ಬಿಗ್ ಬಾಸ್ ತಮಿಳಿನ 9 ಸೀಸನ್ ಪೂರ್ಣಗೊಂಡಿದೆ. ಈ ಶೋನಲ್ಲಿ ದಿವ್ಯಾ ಗಣೇಶ್ ಗೆದ್ದಿದ್ದಾರೆ. ಅವರು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಮಾಡಿದ್ದರು ಎಂಬುದು ವಿಶೇಷ. ಅವರು ಗೆದ್ದು ಟೈಟಲ್ ತಮ್ಮದಾಗಿಸಿಕೊಂಡಿದ್ದಾರೆ.

ಬಿಗ್ ಬಾಸ್ ತಮಿಳು ಸೀಸನ್ 9 ಅಕ್ಟೋಬರ್ 5ರಂದು ಪ್ರಾರಂಭವಾಯಿತು. ಜನವರಿ 18ರಂದು ಇದು ಕೊನೆಗೊಂಡಿದೆ. ಈ ಸೀಸನ್ ಒಟ್ಟು 20 ಸ್ಪರ್ಧಿಗಳಿದ್ದರು. ಆದರೆ ಮೊದಲ 2 ವಾರಗಳಲ್ಲಿ 3 ಸ್ಪರ್ಧಿಗಳು ಎಲಿಮಿನೇಟ್ ಆದರು. ಈ ವೇಳೆ ದಿವ್ಯಾ ಗಣೇಶ್, ಅಮಿತ್, ಸಾಂಡ್ರಾ ಮತ್ತು ಪ್ರಜಿನ್ 3ನೇ ವಾರದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ಪ್ರವೇಶಿಸಿದರು. ನಂತರ, ಒಟ್ಟು 21 ಸ್ಪರ್ಧಿಗಳೊಂದಿಗೆ ಕಾರ್ಯಕ್ರಮ ನಡೆಯಿತು.

ಗಾನಾ ವಿನೋದ್ ಸೀಸನ್ 9ರ ಪ್ರಶಸ್ತಿಯನ್ನು ಗೆಲ್ಲುವ ಅವಕಾಶ ಹೊಂದಿದ್ದರು. ಆದರೆ, ಅವರು ಕ್ಯಾಶ್​​ಪ್ರೈಸ್ ಪೆಟ್ಟಿಗೆ ತೆಗೆದುಕೊಂಡು ರೇಸ್​​ನಿಂದ ಹೊರ ಹೋದರು. ದಿವ್ಯಾ ಗಣೇಶ್ ಬಿಗ್ ಬಾಸ್ ಸೀಸನ್ 9 ಅನ್ನು ಗೆದ್ದರು ಮತ್ತು ಪ್ರಶಸ್ತಿ ವಿಜೇತರಾದರು. ಶಬರಿ ಮೊದಲ ರನ್ನರ್ ಅಪ್ ಮತ್ತು ವಿಕೆಲ್ಸ್ ವಿಕ್ರಮ್ ಎರಡನೇ ರನ್ನರ್ ಅಪ್ ಆಗಿದ್ದರು ಎಂಬುದು ಗಮನಾರ್ಹ.

ದಿವ್ಯಾ ಗಣೇಶ್ ಬಿಗ್ ಬಾಸ್ ತಮಿಳು ಸೀಸನ್ 9 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಪ್ರವೇಶಿಸಿದ್ದರು. ಅವರು ವಿಜಯ್ ಟಿವಿಯ ಪ್ರಸಿದ್ಧ ಧಾರಾವಾಹಿ ನಟಿಯರಲ್ಲಿ ಒಬ್ಬರು. ತಮಿಳಿನ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ಜೆನ್ನಿ ಪಾತ್ರದಲ್ಲಿ ನಟಿಸುವ ಮೂಲಕ ಅವರು ಬಹಳ ಪ್ರಸಿದ್ಧರಾಗಿದ್ದಾರೆ. ಅವರು ಸಿನಿಮಾದಲ್ಲಿ ಸಣ್ಣ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಅವರು ಹಳ್ಳಿ ನಟಿಯಾಗಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಬಿಗ್ ಬಾಸ್ ತಮಿಳು ಸೀಸನ್ 9 ರಲ್ಲಿ ಅವರು ಅತ್ಯಂತ ಧೈರ್ಯಶಾಲಿ ಮಹಿಳೆ ಎಂದು ಕರೆಯಲ್ಪಟ್ಟರು ಎಂಬುದು ಗಮನಾರ್ಹ.

ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ?

ದಿವ್ಯಾ ಬಿಗ್ ಬಾಸ್ ತಮಿಳು ಸೀಸನ್ 9 ಕಾರ್ಯಕ್ರಮಕ್ಕೆ ವೈಲ್ಡ್‌ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದು ಗಮನಾರ್ಹ. ಅವರು ಈ ಸೀಸನ್‌ನಲ್ಲಿ 106 ದಿನಗಳ ಕಾಲ ಇಲ್ಲದಿದ್ದರೆ, ಅವರು ತಮ್ಮ ದಿನಗಳಲ್ಲಿ ಜನರಲ್ಲಿ ಜನಪ್ರಿಯ ವ್ಯಕ್ತಿಯಾಗುತ್ತಿದ್ದರು ಎಂಬುದು ಗಮನಾರ್ಹ. ಈ ಪರಿಸ್ಥಿತಿಯಲ್ಲಿ, ಈ ಹಿಂದೆ 7 ನೇ ಸೀಸನ್‌ನಲ್ಲಿ ವೈಲ್ಡ್‌ಕಾರ್ಡ್ ಸ್ಪರ್ಧಿಯಾಗಿ ಬಿಗ್ ಬಾಸ್ ತಮಿಳು ಕಾರ್ಯಕ್ರಮಕ್ಕೆ ಪ್ರವೇಶಿಸಿದ್ದ ಅರ್ಚನಾ ಅವರು ಗೆದ್ದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ? – Kannada News | Big Boss Kannada 12 Winner Gilli Gets Extra 20 Lakh RS From Sharavana

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿಗೆ ಬಂಪರ್ ಲಾಟರಿ ಹೊಡೆದಿದೆ. ಬಿಗ್ ಬಾಸ್ ಕಡೆಯಿಂದ 50 ಲಕ್ಷ ರೂಪಾಯಿ (ತೆರಿಗೆ ಕಟ್ ಆಗಿ ಸಿಗೋದು 35 ಲಕ್ಷ ರೂಪಾಯಿ), ಮಾರುತು ಸುಜುಕಿ ವಿಕ್ಟೋರಿಸ್ ಕಾರು ಹಾಗೂ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ ಸಿಕ್ಕಿದೆ. ಈಗ ಅವರಿಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬಂದಿವೆ. ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಗೆದ್ದವರಿಗೆ ಪ್ರತಿ ಬಾರಿಯೂ 50 ಲಕ್ಷ ರೂಪಾಯಿ ಸಿಗುತ್ತದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಕೆಲವೊಮ್ಮ ಬಹುಮಾನವಾಗಿ ವಸ್ತುಗಳು ಸಿಗುತ್ತವೆ. ಈ ಬಾರಿ ಗಿಲ್ಲಿ ನಟ ಅವರಿಗೆ ಅದೃಷ್ಟ ಒಲಿದಿದೆ. ಅವರಿಗೆ ಈಗಾಗಲೇ 80 ಲಕ್ಷ ರೂಪಾಯಿ ಅಷ್ಟು(ಟ್ಯಾಕ್ಸ್ ಹೊರತುಪಡಿಸಿ) ಮೌಲ್ಯದ ವಸ್ತು/ಹಣ ಬಿಗ್ ಬಾಸ್​​ನಿಂದ ಸಿಕ್ಕಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿತೇ ಎಂಬ ಪ್ರಶ್ನೆ ಮೂಡಿದೆ.

ಬಿಗ್ ಬಾಸ್ ರನ್ನರ್ ಅಪ್​​ ರಕ್ಷಿತಾ ಶೆಟ್ಟಿಗೆ 20 ಲಕ್ಷ ರೂಪಾಯಿ ವೋಚರ್ ಶರವಣ ಅವರ ‘ಸಾಯಿ ಗೋಲ್ಡ್ ಪ್ಯಾಲೇಸ್’ ಕಡೆಯಿಂದ ಸಿಕ್ಕಿತ್ತು. ಅವರೇ ಗಿಲ್ಲಿಗೆ 20 ಲಕ್ಷ ರೂಪಾಯಿ ಕೊಡೋದಾಗಿ ಘೋಷಣೆ ಮಾಡಿದ್ದರು. ‘ನಾನು ಬಿಗ್ ಬಾಸ್​​ಗೆ ತೆರಳುತ್ತಿದ್ದೇನೆ. ಗಿಲ್ಲಿನೇ ಗೆಲ್ಲೋದು ಅನ್ನೋದು ನನ್ನ ಅಭಿಪ್ರಾಯ. ಅವರು ಸಾಕಷ್ಟು ಮನರಂಜನೆ ನೀಡಿದ್ದಾರೆ. ಗಿಲ್ಲಿ ಗೆದ್ದರೆ ಅವರಿಗೆ 20 ಲಕ್ಷ ರೂಪಾಯಿ ಕೊಡುತ್ತೇನೆ. ಚೆಕ್ ರೆಡಿ ಇದೆ’ ಎಂದು ಶರವಣ ಅವರು ಫಿನಾಲೆಗೆ ತೆರಳುವಾಗ ಹೇಳಿದ್ದರು.

ಇದನ್ನೂ ಓದಿ: ‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ

ವೇದಿಕೆ ಮೇಲೆ ಗಿಲ್ಲಿ ನಟ ಅವರಿಗೆ ಶರವಣ 20 ಲಕ್ಷ ರೂಪಾಯಿನ ನೀಡಿಲ್ಲ. ಗಿಲ್ಲಿಯೇ ಗೆದ್ದಿರುವುದರಿಂದ ಪ್ರತ್ಯೇಕವಾಗಿ ಈ ಮೊತ್ತವನ್ನು ಅವರು ಗಿಲ್ಲಿಗೆ ಕೊಟ್ಟಿರಬಹುದು ಎಂದು ಹೇಳಲಾಗುತ್ತಾ ಇದೆ. ಗಿಲ್ಲಿ ನಟ ಅವರು ಗೆದ್ದ ಬಳಿಕ ಹುಟ್ಟೂರಿಗೆ ತೆರಳಿದ್ದಾರೆ. ಅಲ್ಲಿ ಅದ್ದೂರಿಯಾಗಿ ಅವರಿಗೆ ಸ್ವಾಗತ ಸಿಕ್ಕಿದೆ. ಸಿಕ್ಕ ಜನಪ್ರಿಯತೆ ನೋಡಿ ಅವರಿಗೇ ಅಚ್ಚರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB – Kannada News | RCB Created all times record in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ​ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ.

Source link

ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss

ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.

ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್​​ಗಳ ಕಳ್ಳಾಟ

ಇದೀಗ ತನಿಖೆ ವೇಳೆ ಕೂಡ, ಕಂಡಕ್ಟರ್​​ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.

ವಂಚನೆ ಎಸಗಲು ಉಪಯೋಗಿಸುವ ತಂತ್ರ ಇದುವೇ ನೋಡಿ!

ಶಕ್ತಿ ಯೋಜನೆಯ ಉಚಿತ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ‘ಉಚಿತ ಟಿಕೆಟ್’ ಎಂದು ಪ್ರಿಂಟ್ ಮಾಡಲಾಗಿದೆ. ಇಂಗ್ಲಿಷ್​ನಲ್ಲಿ‘ಫ್ರೀ ಟಿಕೆಟ್’ ಎಂದು ಪ್ರಿಂಟ್ ಮಾಡಿಲ್ಲ. ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ಇತರ ರಾಜ್ಯಗಳ ಜನರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡುವ ಕಂಡಕ್ಟರ್​​ಗಳು ಅವರಿಂದ ವೈಯಕ್ತಿಕ ಯುಪಿಐ ಸ್ಕ್ಯಾನರ್​ಗೆ ದುಡ್ಡು ಹಾಕಿಸಿಕೊಳ್ಳುತ್ತಾರೆ.

ಈ ಕಿಲಾಡಿ ಕಂಡಕ್ಟರ್​​ಗಳು ಡಿಪೋದಿಂದ ಬಸ್​ಗಳು ಹೊರಗೆ ಬರುತ್ತಿದ್ದಂತೆಯೇ ಬಸ್​​​ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್​​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರೆ. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್​​ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್​​ನಲ್ಲಿರುವಸ್ಕ್ಯಾನರ್​​​ಗಳನ್ನು ನೀಡಿ ಪ್ರಯಾಣಿಕರಿಂದ ಸ್ವಂತ ಬ್ಯಾಂಕ್ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​ಗಳು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರತಿಯೊಬ್ಬರ ಅಕೌಂಟ್​​​ನಲ್ಲಿ 50 ಸಾವಿರ ರೂಪಾಯಿವರೆಗೆ ಯುಪಿಐ ಮಾಡಿಸಿಕೊಂಡಿರುವುದು ಬಯಲಾಗಿದೆ. ಈಗಾಗಲೇ ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳು ಈ ಮಾಹಿತಿಯನ್ನು ಬಿಎಂಟಿಸಿ ಎಂಡಿ ಶಿವಕುಮಾರ್​ಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ?

ಒಟ್ಟಿನಲ್ಲಿ ಶಕ್ತಿ ಯೋಜನೆಯ ಟಿಕೆಟ್​​ಗಳನ್ನು ಹೊರ ರಾಜ್ಯದವರಿಗೆ ಕೊಡುತ್ತಿರುವುದು, ನಿಗಮದ ಯುಪಿಐ ಸ್ಕ್ಯಾನರ್​ಗಳನ್ನು ಕಿತ್ತು ತಮ್ಮ ಸ್ವಂತ ಯುಪಿಐ ಸ್ಕ್ಯಾನರ್​​ಗಳನ್ನು ನೀಡಿ ಹಣ ಹಾಕಿಸಿಕೊಳ್ಳುತ್ತಿರುವ ಕಂಡಕ್ಟರ್​​ಗಳ ವಿರುದ್ಧ ಬಿಎಂಟಿಸಿ ನಿಗಮ ಕಠಿಣ ಕ್ರಮ ಕೈಗೊಳ್ಳದೇ ಹೋದರೆ ಮತ್ತಷ್ಟು ಕಂಡಕ್ಟರ್​​ಗಳು ಈ ದಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home

ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ.

ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು ಮತ್ತು ಎಲೆಗಳು ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತವೆ.

ಆಧ್ಯಾತ್ಮಿಕವಾಗಿ, ಬೇವಿನ ಮರವನ್ನು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿವಾಹ ಸಮಸ್ಯೆಗಳು, ಮಾಟಮಂತ್ರ ಅಥವಾ ನಕಾರಾತ್ಮಕ ಶಕ್ತಿಗಳಿಂದ ಬಳಲುತ್ತಿರುವವರು ಈ ಮರಕ್ಕೆ ಅರಿಶಿಣ-ಕುಂಕುಮ ಹಚ್ಚಿ ಪೂಜಿಸುವುದರಿಂದ ಶುಭಫಲಗಳು ದೊರೆಯುತ್ತವೆ. ಶನಿ, ರಾಹು, ಕೇತು ಗ್ರಹಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡುವ ಶಕ್ತಿಯೂ ಇದಕ್ಕಿದೆ ಎಂದು ನಂಬಲಾಗಿದೆ. ಜೀವನದಲ್ಲಿ ಸ್ಥಿರತೆ, ಆರೋಗ್ಯ ಮತ್ತು ಮನಃಶಾಂತಿ ನೀಡಲು ಬೇವಿನ ಮರ ಸಹಾಯಕವಾಗಿದೆ. ಈಶಾನ್ಯ ಅಥವಾ ನೈಋತ್ಯ ದಿಕ್ಕಿನಲ್ಲಿ ಬೇವಿನ ಮರ ಇರುವುದು ಮಂಗಳಕರ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ – Kannada News | Gilli’s Dignified Response to Ashwini Gowda’s Gilli Is not a Poor Man Remarks

‘ಬಿಗ್ ಬಾಸ್ ಕನ್ನ ಸೀಸನ್ 12’ರ  (BBK 12) ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ರ್ಯಾಲಿ ನಡೆಸಿದ್ದಾರೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ತಮ್ಮಿಷ್ಟದ ಸ್ಪರ್ಧಿ, ಊರಿನ ಹುಡುಗ ಗೆದ್ದು ಬಂದಿದ್ದನ್ನು ನೋಡಿ ಊರಿನವರು ಖುಷಿಪಟ್ಟಿದ್ದಾರೆ. ಈಗ ಅಶ್ವಿನಿ ಗೌಡ ಅವರು ಗಿಲ್ಲಿ ಬಗ್ಗೆ ಕಿರಿಕ್ ತೆಗೆದಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕವೂ ಅವರು ಆರೋಪ ಮುಂದುವರಿಸಿದ್ದಾರೆ. ‘ಅಶ್ವಿನಿ ಗೌಡ ಹಾಗೆ ಹೇಳಲು ಸಾಧ್ಯವೇ ಇಲ್ಲ’ ಎಂಬುದು ಗಿಲ್ಲಿ ಮಾತು.

ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮುಗಿಯುತ್ತಿದ್ದಂತೆ, ‘ಸರಿಯಾದ ವ್ಯಕ್ತಿಗೆ ಗೆಲುವು ಸಿಕ್ಕಿದೆ’ ಎಂದು ಹೇಳಿದ್ದರು. ಆದರೆ, ಮರುದಿನ ಅವರು ಮಾತು ಬದಲಾಯಿಸಿದ್ದಾರೆ. ಹೋದಲ್ಲಿ, ಬಂದಲ್ಲಿ ಗಿಲ್ಲಿ ಬಗ್ಗೆ ಮಾತನಾಡುತ್ತಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು ಎಂದು ಡಾಲಿ ಧನಂಜಯ್ ಅವರು ಹೇಳಿದ್ದಾರೆ. ಅದು ನಿಜಕ್ಕೂ ಸತ್ಯ. ಬಡವರ ಮಕ್ಕಳು ಬೆಳೆಯಬೇಕು. ಆದರೆ, ಬಡವರ ಮಕ್ಕಳ ರೀತಿ ನಾಟಕ ಆಡುವವರು ಗೆದ್ದರೆ? ಅದು ಸರಿ ಅಲ್ಲ ಎಂದು ನನಗೆ ಅನಿಸುತ್ತದೆ’ ಎಂದು ಗಿಲ್ಲಿ ವಿಜಯದ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಈ ಬಗ್ಗೆ ಗಿಲ್ಲಿಗೆ ಪ್ರಶ್ನೆ ಮಾಡಲಾಗಿದೆ. ‘ಅಶ್ವಿನಿ ಗೌಡ ಅವರು ನಿಮ್ಮ ಬಗ್ಗೆ ಹೀಗೆಲ್ಲ ಹೇಳಿದ್ದಾರೆ. ಇದಕ್ಕೆ ಏನಂತೀರಾ’ ಎಂದು ಕೇಳಲಾಗಿದೆ. ಆಗ ಗಿಲ್ಲಿ ಅವರು, ‘ನಾವು ತೀರಾ ಬಡವರು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅಶ್ವಿನಿ ಅವರು ಹೊರಗೆ ಬಂದಮೇಲೆ ಹೀಗೆ ಮಾತನಾಡಿದ್ರಾ? ಅವರು ಸಾಮಾನ್ಯವಾಗಿ ಹೀಗೆಲ್ಲ ಹೇಳಲ್ಲ’ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

ಗಿಲ್ಲಿ ಅವರ ಈ ಗುಣ ಅನೇಕರಿಗೆ ಇಷ್ಟ ಆಗಿದೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡಬೇಕು ಎಂಬುದು ಗಿಲ್ಲಿಯ ತತ್ವ. ಹೊರಗೆ ಬಂದ ಬಳಿಕವೂ ಅದನ್ನು ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂಬುದು ವಿಶೇಷ. ಗಿಲ್ಲಿ ಅವರು ತಮಗೆ ಸಿಕ್ಕ ಜನಪ್ರಿಯತೆ ನೋಡಿ ಶಾಕ್ ಆಗಿದ್ದಾರೆ. ಅವರಿಗೆ ಖುಷಿ ಹಾಗೂ ಅಚ್ಚರಿ ಎರಡೂ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:00 am, Tue, 20 January 26

Source link

Exit mobile version