IPL 2026: ಕಳೆದ 5 ಆವೃತ್ತಿಗಳ ಫಲಿತಾಂಶ; ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ – Kannada News | RCB IPL 2026 Championship Prediction: Can Past Trends Crown Royal Challengers Bengaluru?

2026 ರ ಐಪಿಎಲ್‌ನ (IPL 2026) ಲೀಗ್ ಸುತ್ತು ಅಂತ್ಯವಾಗಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಹಾಲಿ ಚಾಂಪಿಯನ್ ಆರ್​ಸಿಬಿ (RCB) ಕ್ವಾಲಿಫೈಯರ್ 1ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಏಕೆಂದರೆ ಉಭಯ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಅಗ್ರಸ್ಥಾನದಲ್ಲಿರುವ ಆರ್​ಸಿಬಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಇದೆ.

ಆರ್​ಸಿಬಿಯೇ ಚಾಂಪಿಯನ್

ಉಭಯ ತಂಡಗಳು ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಹೀಗಾಗಿ ಯಾವ ತಂಡಕ್ಕೆ ಚಾಂಪಿಯನ್ ಪಟ್ಟ ಸಿಗಲಿದೆ ಎಂದು ಹೇಳುವುದು ಕಷ್ಟಕರ. ಆದರೆ ಕಳೆದ 5 ಐಪಿಎಲ್ ಆವೃತ್ತಿಗಳಲ್ಲಿ ಯಾವ ತಂಡ ಚಾಂಪಿಯನ್ ಆಗಿದೆ ಎಂಬುದನ್ನು ಗಮನಿಸಿದರೆ, ಕಾಕತಾಳೀಯವಾಗಿ ಈ ಬಾರಿ ಆರ್​ಸಿಬಿಯೇ ಚಾಂಪಿಯನ್ ಆಗಲಿದೆ. ಅದು ಹೇಗೆ ಎಂಬುದನ್ನು ವಿವರವಾಗಿ ನೋಡುವುದಾದರೆ..

ಕಳೆದ 5 ವರ್ಷಗಳ ಅಂಕಿ ಅಂಶ ಹೀಗಿದೆ

2020 ರ ಐಪಿಎಲ್‌ನ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ 2021 ರ ಐಪಿಎಲ್​ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಸಿಎಸ್​ಕೆ, ಫೈನಲ್ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಟ್ರೋಫಿ ಗೆದ್ದುಕೊಂಡಿತ್ತು. ಹಾಗೆಯೇ 2022 ರ ಐಪಿಎಲ್​ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ಗುಜರಾತ್ ತಂಡ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಇದಾದ ಬಳಿಕ ನಡೆದಿದ್ದ 2023 ರ ಐಪಿಎಲ್‌ನಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಸಿಎಸ್​ಕೆ, ಗುಜರಾತ್ ತಂಡವನ್ನು ಮಣಿಸಿ ಪ್ರಶಸ್ತಿ ಮೂಡಿಗೇರಿಸಿಕೊಂಡಿತ್ತು. ನಂತರ 2024 ರ ಐಪಿಎಲ್‌ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ಕೆಕೆಆರ್, ಫೈನಲ್​ನಲ್ಲಿ ಸನ್‌ರೈಸರ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಇನ್ನು 2025 ರ ಆವೃತ್ತಿಯಲ್ಲಿ ಅಂದರೆ ಹಿಂದಿನ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಆರ್​ಸಿಬಿ, ಪಂಜಾಬ್ ತಂಡವನ್ನು ಸೋಲಿಸಿ ಮೊಟ್ಟ ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿದಿತ್ತು.

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?

ಅಂದರೆ 2020 ರ ಐಪಿಎಲ್​ನಿಂದ ಕಳೆದ ಆವೃತ್ತಿಯವರೆಗೆ ಗಮನಿಸಿದರೆ, 2020, 2022, 2024 ರ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದ ತಂಡ ಚಾಂಪಿಯನ್ ಆದರೆ, 2021, 2023 ಹಾಗೂ 2025 ರ ಆವೃತ್ತಿಗಳಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ತಂಡಗಳು ಚಾಂಪಿಯನ್ ಆಗಿವೆ. ಇದೀಗ ಇದೇ ಟ್ರೆಂಡ್ ಮುಂದುವರೆದರೆ, 2026 ರ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಆರ್​ಸಿಬಿಯೇ ಚಾಂಪಿಯನ್ ಆಗಲಿದೆ. ಕಳೆದ ಐದು ವರ್ಷಗಳ ಟ್ರೆಂಡ್ ಮುಂದುವರೆದು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಆಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:27 pm, Sun, 24 May 26

Source link

ಭಾರತದ ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳಲ್ಲಿ ಡೀಪ್-ಟೆಕ್ ಕ್ರಾಂತಿ: ಕ್ಯಾಂಪಸ್ ಫಂಡ್ ವರದಿ – Kannada News | Indian Student Startups Pivot to Deep Tech: Campus Fund Report Reveals EdTech Decline

ಸ್ಟುಡೆಂಟ್ ಸ್ಟಾರ್ಟ್‌ಅಪ್‌Image Credit source: AI/Mediaforge/TV9

ನವದೆಹಲಿ, ಮೇ 24: ಭಾರತದ ಯುವಜನರು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಶುರುವಾಗುವ ಸ್ಟಾರ್ಟಪ್​ಗಳು ಡೀಪ್ ಟೆಕ್ ಕ್ಷೇತ್ರದಲ್ಲಿ ಹೆಚ್ಚು ಕೇಂದ್ರಿತವಾಗುತ್ತಿವೆ ಎನ್ನುವ ದತ್ತಾಂಶ ಹೊರಬಂದಿದೆ. ಕ್ಯಾಂಪಸ್ ಫಂಡ್ (Campus Fund) ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಸ್ಟೂಡೆಂಟ್ ಆಂಟ್ರಪ್ರೆನರ್‌ಶಿಪ್ ಇನ್ ಇಂಡಿಯಾ’ (State of Student Entrepreneurship in India) ವರದಿಯ 5ನೇ ಆವೃತ್ತಿಯ ಪ್ರಕಾರ, ಭಾರತೀಯ ಕಾಲೇಜು ವಿದ್ಯಾರ್ಥಿಗಳು ಆರಂಭಿಸುತ್ತಿರುವ ಸ್ಟಾರ್ಟ್‌ಅಪ್‌ಗಳಲ್ಲಿ ಇದೇ ಮೊದಲ ಬಾರಿಗೆ ಡೀಪ್-ಟೆಕ್ (Deep-Tech) ಅತ್ಯಂತ ದೊಡ್ಡ ವಿಭಾಗವಾಗಿ ಹೊರಹೊಮ್ಮಿದೆ. ಇದು ದೇಶದ ಸಾಂಪ್ರದಾಯಿಕ ಸ್ಟಾರ್ಟ್‌ಅಪ್ ಮಾರುಕಟ್ಟೆಯ ಚಿತ್ರಣವನ್ನೇ ಬದಲಾಯಿಸುತ್ತಿದೆ.

ಕೇವಲ ನಾಲ್ಕು ವರ್ಷಗಳ ಹಿಂದೆ ಡೀಪ್-ಟೆಕ್ ವಿಭಾಗವು ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳ ಟಾಪ್ 5 ಪಟ್ಟಿಯಲ್ಲೂ ಇರಲಿಲ್ಲ. ಆದರೆ ಪ್ರಸ್ತುತ ವಿದ್ಯಾರ್ಥಿ ನೇತೃತ್ವದ ಸ್ಟಾರ್ಟ್‌ಅಪ್‌ಗಳಲ್ಲಿ ಶೇ. 16.87 ರಷ್ಟು ಡೀಪ್-ಟೆಕ್ ವಲಯಕ್ಕೆ ಸೇರಿವೆ. ಇದರಲ್ಲಿ ಪ್ರಮುಖವಾಗಿ ಅಪ್ಲೈಡ್ ಎಐ (Applied AI) ಮತ್ತು ಕ್ರಾಸ್-ಡೊಮೇನ್ ಸಂಶೋಧನೆಗಳು ಸೇರಿವೆ. ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಫೋಟೋನಿಕ್ಸ್‌ನಂತಹ ಸುಧಾರಿತ ತಂತ್ರಜ್ಞಾನಗಳೂ ಮುಂದಿನ ಹಂತದಲ್ಲಿ ಬೆಳೆಯುತ್ತಿವೆ.

ಕುಸಿತ ಕಂಡ EdTech ಮತ್ತು ಸರ್ವಿಸ್ ಸೆಕ್ಟರ್ಸ್

ಜೆನೆರೇಟಿವ್ ಎಐ (Generative AI) ಮತ್ತು ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್‌ಗಳ (LLM) ಆಗಮನದಿಂದಾಗಿ, ಹಳೆಯ ಮಾದರಿಯ ಕೋಚಿಂಗ್ ಮತ್ತು ಕಂಟೆಂಟ್ ಕ್ರಿಯೇಷನ್ ಆಧಾರಿತ ಎಡ್-ಟೆಕ್ (ಶಿಕ್ಷಣ ತಂತ್ರಜ್ಞಾನ) ಸ್ಟಾರ್ಟ್‌ಅಪ್‌ಗಳ ಸಂಖ್ಯೆ ಶೇ. 36 ರಷ್ಟು ಕುಸಿದಿದೆ. ಅದೇ ರೀತಿ, ಸಾಂಪ್ರದಾಯಿಕ ಸೇವಾ ವಲಯದ (Services) ಸ್ಟಾರ್ಟ್‌ಅಪ್‌ಗಳು ಶೇ. 52 ರಷ್ಟು ಕುಸಿತ ಕಂಡಿವೆ. ವಿದ್ಯಾರ್ಥಿಗಳು ಈಗ ಸುಲಭವಾಗಿ ಕಾಪಿ ಮಾಡಬಹುದಾದ ವ್ಯವಹಾರಗಳ ಬದಲಿಗೆ, ನಕಲು ಮಾಡಲು ಕಷ್ಟವಾಗಿರುವ ಬಲವಾದ ತಂತ್ರಜ್ಞಾನದ (Defensible Technology) ಕಡೆಗೆ ಮುಖ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ

ಸಂಶೋಧನೆ ಮತ್ತು ಪಿಎಚ್‌ಡಿ (PhD) ಸಂಸ್ಥಾಪಕರ ಹೆಚ್ಚಳ

ಭಾರತದ ಕ್ಯಾಂಪಸ್‌ಗಳಲ್ಲಿ ಕೇವಲ ಪದವಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಉನ್ನತ ಸಂಶೋಧನೆ ಮಾಡುವ ಪಿಎಚ್‌ಡಿ (PhD) ವಿದ್ಯಾರ್ಥಿಗಳೂ ಸ್ಟಾರ್ಟ್‌ಅಪ್ ಕ್ಷೇತ್ರಕ್ಕೆ ಧುಮುಕುತ್ತಿದ್ದಾರೆ. ಪಿಎಚ್‌ಡಿ ಸಂಸ್ಥಾಪಕರ ಸಂಖ್ಯೆ 2020-21ರಲ್ಲಿ ಕೇವಲ 35 ಇದ್ದದ್ದು, ಈಗ (2024-25ರಲ್ಲಿ) 237 ಕ್ಕೆ (7 ಪಟ್ಟು) ಏರಿಕೆಯಾಗಿದೆ. ಇವರು ಕಾರ್ಪೊರೇಟ್ ಉದ್ಯೋಗಗಳಿಗೆ ಇಳಿಯದೆ, ಪ್ರಯೋಗಾಲಯದ ಸಂಶೋಧನೆಗಳನ್ನು ನೇರವಾಗಿ ಮಾರುಕಟ್ಟೆಯ ಉತ್ಪನ್ನಗಳನ್ನಾಗಿ ಪರಿವರ್ತಿಸುತ್ತಿರುವ ಕಾಯಕ ನಡೆಸುತ್ತಿದ್ದಾರೆ.

ಸ್ಟುಡೆಂಟ್ ಸ್ಟಾರ್ಟಪ್​ಗಳು ಕರ್ನಾಟಕದಲ್ಲೇ ಹೆಚ್ಚು

ಈ ಹಿಂದೆ ಭಾರತದ ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳ ಪೈಕಿ ಶೇ. 60 ಕ್ಕೂ ಹೆಚ್ಚು ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ನಂತಹ ಮೆಟ್ರೋ ನಗರಗಳಲ್ಲೇ ಕೇಂದ್ರೀಕೃತವಾಗಿದ್ದವು. ಆದರೆ ಈಗ ಅಲ್ಲಿ ಅದು ಶೇ. 40 ಕ್ಕಿಂತ ಕಡಿಮೆಯಾಗಿದೆ.

ನಗರಗಳ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ದೆಹಲಿ (ಶೇ. 13.27) ವಿದ್ಯಾರ್ಥಿ ಸ್ಟಾರ್ಟ್‌ಅಪ್‌ಗಳ ಸಂಖ್ಯೆಯಲ್ಲಿ ಬೆಂಗಳೂರನ್ನು (ಶೇ. 12.99) ಹಿಂದಿಕ್ಕಿದೆ.

ರಾಜ್ಯಗಳ ಮಟ್ಟದಲ್ಲಿ ಕರ್ನಾಟಕ (ಶೇ. 15.29) ಇನ್ನೂ ಮೊದಲ ಸ್ಥಾನದಲ್ಲಿದೆ. ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು ತೀವ್ರ ಪೈಪೋಟಿ ನೀಡುತ್ತಿವೆ.

ಕೇವಲ 50,000 ಕ್ಕಿಂತ ಕಡಿಮೆ ಜನಸಂಖ್ಯೆ ಇರುವ ರಾಜಸ್ಥಾನದ ಪಿಲಾನಿ (Pilani) ಎಂಬ ಸಣ್ಣ ಪಟ್ಟಣವು ದೇಶದ ಒಟ್ಟು ವಿದ್ಯಾರ್ಥಿ ಸ್ಟಾರ್ಟ್‌ಅಪ್‌ಗಳ ಹರಿವಿನಲ್ಲಿ ಶೇ. 1.02 ರಷ್ಟು ಕೊಡುಗೆ ನೀಡುತ್ತಿದೆ. ಬಿಟ್ಸ್ ಪಿಲಾನಿ (BITS Pilani) ಮತ್ತು ಐಐಟಿ ಮದ್ರಾಸ್‌ನಂತಹ ಶಿಕ್ಷಣ ಸಂಸ್ಥೆಗಳು ಸ್ಟಾರ್ಟ್‌ಅಪ್‌ಗಳ ಪ್ರಮುಖ ಕೇಂದ್ರಗಳಾಗಿವೆ.

ಇದನ್ನೂ ಓದಿ: ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ

ಕ್ಯಾಂಪಸ್ ಫಂಡ್‌ನ ಸಂಸ್ಥಾಪಕಿ ಮತ್ತು ಸಿಇಒ ರಿಚಾ ಬಾಜಪಾಯಿ ಮಾತನಾಡಿ, “ಐದು ವರ್ಷಗಳ ಹಿಂದೆ ‘ವಿದ್ಯಾರ್ಥಿಗಳು ದೊಡ್ಡ ಕಂಪನಿಗಳನ್ನು ಕಟ್ಟಲು ಸಾಧ್ಯವೇ?’ ಎಂಬ ಪ್ರಶ್ನೆ ಇತ್ತು. ಆದರೆ ಇಂದು ಆ ಪ್ರಶ್ನೆ ಇಲ್ಲ. ಈಗಿರುವ ಪ್ರಶ್ನೆಯೇನೆಂದರೆ, ವಿದ್ಯಾರ್ಥಿಗಳು ಅಭಿವೃದ್ಧಿಪಡಿಸುತ್ತಿರುವ ಅತ್ಯಾಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ಭಾರತದ ಬಂಡವಾಳ, ನೀತಿಗಳು ಮತ್ತು ಶೈಕ್ಷಣಿಕ ಮೂಲಸೌಕರ್ಯಗಳು ವೇಗವಾಗಿ ಸ್ಪಂದಿಸಲು ಸಿದ್ಧವಾಗಿವೆಯೇ? ಎಂಬುದಾಗಿದೆ” ಎಂದು ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು – Kannada News | BJP National President Nitin Nabin First Reaction about Karnataka after meeting with Party Leader In Bengaluru

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More

Source link

ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR – Kannada News | Bowring Hospital Tragedy: Cause of Death of 7 Revealed, FIR Filed Against Contractor

ಬೌರಿಂಗ್ ಆಸ್ಪತ್ರೆ ದುರಂತImage Credit source: tv9 kannada

ಬೆಂಗಳೂರು, ಮೇ 24: ನಗರದ ಬೌರಿಂಗ್ ಆಸ್ಪತ್ರೆಯ (Bowring Hospital Tragedy) ಕಾಂಪೌಂಡ್ ಕುಸಿದು ಏಳು ಜನ ಅಮಾಯಕರು ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್​​ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರ ದೂರು ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ.

ಮುಖ್ಯಾಂಶಗಳು

  • ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣ
  • ಕಮರ್ಷಿಯಲ್ ಸ್ಟ್ರೀಟ್ ಠಾಣೆ ಮೆಟ್ಟಿಲೇರಿದ ಎಕ್ಸಿಕ್ಯೂಟಿವ್ ಇಂಜಿನಿಯರ್​​
  • ಚೆನ್ನೈ ಮೂಲದ ಕಂಪನಿ ವಿರುದ್ಧ ಎಫ್​ಐಆರ್​ ದಾಖಲು

ಚೆನ್ನೈ ಮೂಲದ ಎಎಸ್​​ಆರ್ ಟ್ರೇಡರ್ಸ್ ಕಂಪನಿ ಬೌರಿಂಗ್ ಮತ್ತು ಲೇಡಿ ಕರ್ಝನ್ ಮೆಡಿಕಲ್ ಕಾಲೇಜ್​​ನಿರ್ಮಾಣದ ಗುತ್ತಿಗೆ ಪಡೆದಿತ್ತು. ನೆಲಸಮ ಮಾಡಿದ್ದ ಕಟ್ಟಡದ ಅವಶೇಷ ಹಾಗೂ ಹೆಚ್ಚುವರಿ ತ್ಯಾಜ್ಯಗಳನ್ನು ನಿಯಮಾನುಸಾರ ಸ್ಥಳದಿಂದ ತೆರವುಗೊಳಿಸಿರಲಿಲ್ಲ. ಬದಲಿಗೆ, ಭಾರಿ ಪ್ರಮಾಣದ ತ್ಯಾಜ್ಯವನ್ನು ಕಾಂಪೌಂಡ್​ ಪಕ್ಕದಲ್ಲೇ ರಾಶಿ ಹಾಕಲಾಗಿತ್ತು. ಹೀಗಾಗಿ ಭಾರ ತಡೆಯಲಾರದೆ ಗೋಡೆ ಕುಸಿದು ಬಿದ್ದಿದ್ದರಿಂದ ಏಳು ಜನ ಅಮಾಯಕರು ಜೀವ ಕಳೆದುಕೊಂಡಿದ್ದರು.

ನೋಟಿಸ್​​ಗೆ ಪ್ರತಿಕ್ರಿಯಿಸದ ಗುತ್ತಿಗೆದಾರ ಕಂಪನಿ

ಇನ್ನು ತ್ಯಾಜ್ಯ ತೆರವುಗೊಳಿಸದ ಹಾಗೂ ನಿಯಮ ಉಲ್ಲಂಘಿಸಿದ ಕುರಿತು ಸ್ಪಷ್ಟೀಕರಣ ನೀಡುವಂತೆ ಸರ್ಕಾರದ ವತಿಯಿಂದ ಎಎಸ್‌ಆರ್ ಟ್ರೇಡರ್ಸ್ ಕಂಪನಿಯ ಇಮೇಲ್ ಐಡಿಗೆ ನೋಟಿಸ್ ಕಳುಹಿಸಲಾಗಿತ್ತು. ಮೇ 18ರ ಒಳಗಾಗಿ ಲಿಖಿತ ಸ್ಪಷ್ಟೀಕರಣ ನೀಡಬೇಕೆಂದು ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ಗಡುವು ನೀಡಿದ್ದರೂ ಗುತ್ತಿಗೆದಾರ ಕಂಪನಿಯು ಇಮೇಲ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Bengaluru Rain Tragedy: ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಘನಘೋರ ದುರಂತ; ಕಾಂಪೌಂಡ್ ಕುಸಿದು 7 ಜನ ಸಾವು

ಸರ್ಕಾರದ ನೋಟಿಸ್ ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಇಂಜಿನಿಯರ್ ಚಂದ್ರು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ

ಏಪ್ರಿಲ್​​ 29ರಂದು ವರುಣಾರ್ಭಟಕ್ಕೆ ಬೆಂಗಳೂರಿನಲ್ಲಿ ಘೋರ ದುರಂತವೇ ನಡೆದು ಹೋಗಿತ್ತು. ಆಲಿಕಲ್ಲು, ಬಿರುಗಾಳಿಯೊಂದಿಗೆ ಅಬ್ಬರಿಸಿದ್ದ ಮಳೆ ಬೃಹತ್‌ ಕಾಂಪೌಂಡನ್ನೇ ಉರುಳಿಸಿತ್ತು. 7 ಜನರನ್ನ ಬಲಿ ಪಡೆದಿತ್ತು. ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದಿತ್ತು. ಕಾಂಪೌಂಡ್‌ ಬಳಿಯೇ ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದರೆ, ಇತರೆ 7 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ವರದಿ: ವಿಕಾಸ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಳಿ ಶರ್ಟು ಪಂಚೆ ತೊಟ್ಟು ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ, ವಿಶೇಷತೆಯೇನು? – Kannada News | Rakshit Shetty seen wearing traditional dress here is the detail

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್​ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್​​ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ.

ರಕ್ಷಿತ್ ಶೆಟ್ಟಿ ಅವರು ಕುಟುಂಬದೊಟ್ಟಿಗೆ ಇರುವ ಕೆಲ ಚಿತ್ರಗಳು ವೈರಲ್ ಆಗಿವೆ. ಚಿತ್ರಗಳಲ್ಲಿ ನಟ ರಕ್ಷಿತ್ ಶೆಟ್ಟಿ ಅವರು ಬಿಳಿ ಶರ್ಟು, ಪಂಚೆ ತೊಟ್ಟು ಮದುಮಗನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಗಳು ನೋಡಿದವರು ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡರೇ? ರಕ್ಷಿತ್ ಶೆಟ್ಟಿಯ ನಿಶ್ಚಿತಾರ್ಥದ ಚಿತ್ರಗಳು ಇವು ಇರಬಹುದೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ನಿಜ ಕತೆ ಬೇರೆಯೇ ಇದೆ.

ರಕ್ಷಿತ್ ಶೆಟ್ಟಿ ಶರ್ಟು, ಪಂಚೆ ತೊಟ್ಟು ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಅವರ ಪೋಷಕರ ಕಾರಣಕ್ಕೆ. ರಕ್ಷಿತ್ ಶೆಟ್ಟಿಯ ಪೋಷಕರ 50ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗಿದ್ದು ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ-ಹವನಗಳನ್ನು ಮಾಡಲಾಗಿದೆ. ಆಪ್ತ ಸಂಬಂಧಿಗಳು, ಸ್ನೇಹಿತರನ್ನು ಸಹ ಕಾರ್ಯಕ್ರಮಕ್ಕೆ ಕರೆಯಲಾಗಿತ್ತು. ಈ ವೇಳೆ ನಟ ರಕ್ಷಿತ್ ಶೆಟ್ಟಿ ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಹೋಮ-ಹವನಗಳಲ್ಲಿ ಭಾಗಿ ಆಗಿದ್ದರು. ಅದೇ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ:‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

ರಕ್ಷಿತ್ ಶೆಟ್ಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಸಿನಿಮಾದ ಬಳಿಕ ಇನ್ಯಾವುದೇ ಸಿನಿಮಾನಲ್ಲಿ ನಟಿಸಿಲ್ಲ. ಬಹು ವರ್ಷಗಳಿಂದ ಕತೆ ತಿದ್ದುತಿದ್ದ ‘ರಿಚರ್ಟ್ ಆಂಟೊನಿ’ ಸಿನಿಮಾದ ಚಿತ್ರೀಕರಣವನ್ನು ಶೀಘ್ರವೇ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ. ಅದರ ಜೊತೆಗೆ ‘ಪುಣ್ಯಕೋಟಿ’ ಹಾಗೂ ಇನ್ನೂ ಒಂದು ಸಿನಿಮಾದ ಚಿತ್ರಕತೆಯನ್ನೂ ಸಹ ರೆಡಿ ಮಾಡಿಕೊಂಡಿರುವುದಾಗಿ ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣವನ್ನು ಸದ್ದಿಲ್ಲದೆ ಶುರು ಮಾಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Guru Sanchara 2026: ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Libra Rashi Phala 2026: Astrological Forecast for Guru Sanchara

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ತುಲಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಜೂನ್ 2ರಿಂದ ಪ್ರಾರಂಭವಾಗಿ ತುಲಾ ರಾಶಿಯವರಿಗೆ 10ನೇ ಮತ್ತು 11ನೇ ಮನೆಯಲ್ಲಿ ನಡೆಯಲಿದೆ. 10ನೇ ಮನೆ ಕರ್ಮಸ್ಥಾನವಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರಗಳ ತುಲಾ ರಾಶಿಯವರಿಗೆ ಈ ಸಂಚಾರ ಮಹತ್ವಪೂರ್ಣವಾಗಿದೆ. ಆರಂಭಿಕ ಹಂತದಲ್ಲಿ ಗುರುಬಲದ ಕೊರತೆ ಕಂಡುಬರಲಿದ್ದು, ಆರ್ಥಿಕ ವಿಷಯಗಳಲ್ಲಿ ದುಂದುವೆಚ್ಚ ಮತ್ತು ಹೆಚ್ಚಿನ ಹೂಡಿಕೆಗೆ ಇದು ಸೂಕ್ತ ಸಮಯವಲ್ಲ. ಹಣಕಾಸು ನಿರ್ವಹಣೆಯಲ್ಲಿ ಎಚ್ಚರಿಕೆ ಅಗತ್ಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ.

ರಾಜಸ್ಥಾನ್ ಈ ಪಂದ್ಯವನ್ನು ಗೆಲ್ಲಬೇಕಾದರೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅವರಿಂದ ಒಂದೊಳ್ಳೆ ಜೊತೆಯಾಟದ ಅವಶ್ಯಕತೆ ಇತ್ತು. ಆದರೆ ಇವರಿಬ್ಬರು ತಂಡಕ್ಕೆ ಅದನ್ನು ನೀಡುವಲ್ಲಿ ವಿಫಲರಾದರು. ಯಶಸ್ವಿ ಜೈಸ್ವಾಲ್ 17 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 27 ರನ್ ಬಾರಿಸಿ ಔಟಾದರೆ, ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ 6 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿ ಔಟಾದರು. ಹೀಗಾಗಿ ರಾಜಸ್ಥಾನ್ 33 ರನ್​ಗಳಿಗೆ ತನ್ನ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು.

Source link

ಮೂರೇ ದಿನಕ್ಕೆ 100 ಕೋಟಿ ಬಾಚಿದ ‘ದೃಶ್ಯಂ 3’: ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? – Kannada News | Drishyam 3 movie collects 100 crore rs in three days

ಮೋಹನ್​​ಲಾಲ್ (Mohanlal) ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ‘ದೃಶ್ಯಂ’ ಸರಣಿಯ ಮೂರನೇ ಸಿನಿಮಾ ಕೆಲವು ದಿನಗಳ ಹಿಂದೆಯಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ದೃಶ್ಯಂ’ ಸರಣಿ ಭಾರತೀಯ ಚಿತ್ರರಂಗದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಭಾರಿ ದೊಡ್ಡ ಯಶಸ್ಸು ಗಳಿಸಿದ್ದು, ಇದೀಗ ‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾದ ಬಗ್ಗೆ ಅಷ್ಟೇನೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರಲಿಲ್ಲ. ಹಾಗಿದ್ದರೂ ಸಹ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ವಿ ಆಗಿದೆ.

‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿ ಕೇವಲ ಮೂರು ದಿನಗಳಷ್ಟೆ ಆಗಿದ್ದು ಕೇವಲ ಈ ಮೂರು ದಿನಗಳಲ್ಲಿಯೇ ಸಿನಿಮಾ 100 ಕೋಟಿ ಗಳಿಕೆ ಮಾಡಿದೆ. ಸಿನಿಮಾವು ಮಲಯಾಳಂ ಮಾತ್ರವಲ್ಲದೆ ಇನ್ನೂ ಕೆಲವು ಭಾಷೆಗಳಿಗೆ ಡಬ್ ಆಗಿ ಬಿಡುಗಡೆ ಆಗಿದ್ದು, ಇದೇ ಕಾರಣಕ್ಕೆ ಕೇರಳ ಮಾತ್ರವಲ್ಲದೆ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿಯೂ ಸಿನಿಮಾಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಮಾತ್ರವೇ ಅಲ್ಲದೆ, ದುಬೈ, ಗಲ್ಫ್ ರಾಷ್ಟ್ರಗಳು, ಅಮೆರಿಕ ಇನ್ನೂ ಕೆಲವು ದೇಶಗಳಲ್ಲಿಯೂ ಸಹ ‘ದೃಶ್ಯಂ 3’ ಸಿನಿಮಾಕ್ಕೆ ಭಾರಿ ಗಳಿಕೆ ದೊರೆತಿದೆ.

‘ದೃಶ್ಯಂ 3’ ಸಿನಿಮಾ ಕೇವಲ ಮೂರು ದಿನಗಳಲ್ಲಿ 100 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲಯಾಳಂ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆಯಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ 100 ಕೋಟಿ ಗಳಿಕೆ ಮಾಡಿದ ಮಲಯಾಳಂ ಸಿನಿಮಾ ಎನಿಸಿಕೊಂಡಿದೆ ‘ದೃಶ್ಯಂ 3’. ಕರ್ನಾಟಕದಲ್ಲಿ ‘ದೃಶ್ಯಂ 3’ ಸಿನಿಮಾದ ಕನ್ನಡ ಆವೃತ್ತಿ ಬಿಡುಗಡೆ ಆಗಿದೆಯಾದರೂ ಹೆಚ್ಚಿನ ಜನ ಮಲಯಾಳಂ ಸಿನಿಮಾವನ್ನೇ ನೋಡಿ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ:ಪ್ಯಾಟ್ರಿಯಾಟ್ ಸಿನಿಮಾ ಬಗ್ಗೆ ಮಮ್ಮೂಟ್ಟಿ-ಮೋಹನ್​​ಲಾಲ್ ಮಾತುಕತೆ

ಕರ್ನಾಟಕದಲ್ಲಿ ಮೂರು ದಿನಕ್ಕೆ ‘ದೃಶ್ಯಂ 3’ ಸಿನಿಮಾ 6 ಕೋಟಿಗೂ ಹೆಚ್ಚು ಮೊತ್ತದ ಗಳಿಕೆ ಮಾಡಿದೆ. ವೀಕೆಂಡ್​​ನಲ್ಲಿ ಸಿನಿಮಾದ ಗಳಿಕೆ ಹೆಚ್ಚಾಗಿದ್ದು, ಮೂರನೇ ದಿನ 2.50 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಆ ಮೂಲಕ ಸಿನಿಮಾದ ಮೂರು ದಿನದ ಒಟ್ಟು ಗಳಿಕೆ 6 ಕೋಟಿ ದಾಟಿದೆ ಎನ್ನಲಾಗುತ್ತಿದೆ.

‘ದೃಶ್ಯಂ 3’ ಸಿನಿಮಾದ ಹಿಂದಿ ಆವೃತ್ತಿ ಬಿಡುಗಡೆ ಆಗಿಲ್ಲ. ವಿಶೇಷವಾಗಿ ‘ದೃಶ್ಯಂ 3’ ಸಿನಿಮಾ ಉತ್ತರ ಭಾರತದಲ್ಲಿ ಬಿಡುಗಡೆ ಆಗಿಲ್ಲ. ಹಾಗಾಗಿ ಸಿನಿಮಾದ ಗಳಿಕೆಗೆ ತುಸು ಪೆಟ್ಟು ಬಿದ್ದಿದೆ. ‘ದೃಶ್ಯಂ 3’ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡಲಾಗುತ್ತಿದ್ದು, ಇದೇ ಕಾರಣಕ್ಕೆ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಾಗಿಲ್ಲ. ಹಾಗಿದ್ದರೂ ಸಹ ಸಿನಿಮಾ ಮೊದಲ ಮೂರು ದಿನಗಳಲ್ಲಿ ಉತ್ತಮ ಗಳಿಕೆಯನ್ನೇ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಯುರೋಪಿಯನ್ನರು ಭಾರತೀಯರಿಂದ ಈ ವಿಷ್ಯಗಳನ್ನು ಕಲಿಯಬೇಕು ಎಂದ ವಿದೇಶಿ ಮಹಿಳೆ – Kannada News | Lithuanian woman admires these five things about Indians

ಮೋನಿಕಾ ಕುಂಜೇಶ್ವರಿ ದಾಸಿImage Credit source: Instagram

ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಈ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು ಕಣ್ತುಂಬಿಸಿಕೊಳ್ಳುತ್ತಾರೆ. ಅದಲ್ಲದೇ ಇಲ್ಲಿನ ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಭಾರತೀಯರ ಆಚಾರ ವಿಚಾರ ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗುವುದಿದೆ. ಇದೀಗ ವಿದೇಶಿ ಮಹಿಳೆ ಯುರೋಪಿಯನ್ನರು ಭಾರತೀಯರಿಂದ (Indians) ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದಿದ್ದಾರೆ. ಇದೇ ವೇಳೆ ಭಾರತೀಯ ಆತಿಥ್ಯ, ಸಮುದಾಯ ಜೀವನವನ್ನು ಈ ಮಹಿಳೆ ಶ್ಲಾಘಿಸಿದ್ದಾರೆ. ವಿದೇಶಿ ಮಹಿಳೆಯ ಈ ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಮೋನಿಕಾ ಕುಂಜೇಶ್ವರಿ ದಾಸಿ (monika_kunjeswari) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾರತದಲ್ಲಿದ್ದಾಗ ಗಮನಿಸಿದ ವಿಷಯಗಳನ್ನು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋದ ಕ್ಲಿಪ್‌ನ ಶೀರ್ಷಿಕೆಯಲ್ಲಿ, ಯುರೋಪಿಯನ್ನರು ಭಾರತೀಯರಿಂದ ಕಲಿಯಬೇಕಾದ ವಿಷಯಗಳು. ಇದು ವಿವಾದಾತ್ಮಕವಾಗಿರಬಹುದು ಎಂದು ನನಗೆ ತಿಳಿದಿದೆ. ಆದರೆ ಭಾರತದಲ್ಲಿ ವರ್ಷಗಳ ಕಾಲ ನೆಲೆಸಿದ ಬಳಿಕ ಈ ಪಾಶ್ಚಿಮಾತ್ಯ ದೇಶಗಳು ಭಾರತೀಯ ಸಂಸ್ಕೃತಿಯಿಂದ ಕಲಿಯಬಹುದಾದ ಕೆಲವು ವಿಷಯಗಳಿವೆ ಎಂದು ನಾನು ಗಮನಿಸಿದೆ. ಯುರೋಪಿನ ಅನೇಕ ಜನರು ಭಾರತದ ಹಳ್ಳಿಗಳಿಗೆ ಅಥವಾ ಸಣ್ಣ ಪಟ್ಟಣಗಳಿಗೆ ಭೇಟಿ ನೀಡುತ್ತಾರೆ. ಹಾಗೂ ಇಲ್ಲಿನ ಜನರು ‘ಸರಳ’ ಎಂದು ಭಾವಿಸುತ್ತಾರೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಇಲ್ಲಿ ಕಂಡುಕೊಂಡ ಕೆಲವು ಮೌಲ್ಯಗಳು ನಾವು ವಿದೇಶದಲ್ಲಿ ನಿಧಾನವಾಗಿ ಕಳೆದುಕೊಳ್ಳುತ್ತಿರುವ ವಿಷಯಗಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಭಾರತದಲ್ಲಿ ಅತಿಥಿಗಳನ್ನು ನಡೆಸಿಕೊಳ್ಳುವ ರೀತಿ ಅದ್ಭುತವಾಗಿದೆ. ಯಾರಾದರೂ ನಿಮ್ಮ ಮನೆಗೆ ಬಂದರೆ, ನೀವು ಅವರಿಗೆ ಆಹಾರ, ಚಹಾ ನೀಡುತ್ತೀರಿ. ಹಾಗೂ ಅವರಿಗೆ ಆರಾಮದಾಯಕವಾಗಿಸುತ್ತೀರಿ. ಇದನ್ನು ಮೂಲಭೂತ ನಡವಳಿಕೆ ಎಂದು ಪರಿಗಣಿಸಲಾಗುತ್ತದೆ. ಲಿಥುವೇನಿಯಾದಲ್ಲಿಯೂ ನಮಗೆ ಇದೇ ರೀತಿಯದ್ದೇನೋ ಇದೆ, ಆದರೆ ಭಾರತದಲ್ಲಿ ಅದು ನಿಜವಾಗಿಯೂ ಬೇರೆಯದೇ ಮಟ್ಟದಲ್ಲಿದೆ ಎಂದು ಉಲ್ಲೇಖಿಸಿದ್ದಾರೆ.

ಸ್ನೇಹಿತರು ಸ್ನೇಹಿತರಿಗೆ ಸಹಾಯ ಮಾಡುತ್ತಾರೆ. ನೆರೆಹೊರೆಯವರು ಪರಸ್ಪರ ಈ ಬಗ್ಗೆ ತಿಳಿದಿದ್ದಾರೆ. ಯಾರಿಗಾದರೂ ಏನಾದರೂ ಅಗತ್ಯವಿದ್ದರೆ, ಸಹಾಯ ಮಾಡಲು ಸಿದ್ಧರಿರುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಒಂಟಿತನದಿಂದ ಬಳಲುತ್ತಿದ್ದಾರೆ. ಈ ಸಮುದಾಯದ ಪ್ರಜ್ಞೆಯನ್ನು ಕಳೆದುಕೊಳ್ಳುವುದು ಒಂದು ಕಾರಣ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಮನೆಗಳಲ್ಲಿ ಆಹಾರವು ಭಾವನಾತ್ಮಕ ಮತ್ತು ಸಾಮಾಜಿಕ ಮೌಲ್ಯವನ್ನು ಉಳಿಸಿಕೊಂಡಿದೆ. ಮನೆಯಲ್ಲಿ ಅಡುಗೆ ಮಾಡುವುದು. ಒಟ್ಟಿಗೆ ಕುಳಿತು ತಿನ್ನುವುದು ಸಾಮಾನ್ಯ. ಇದು ಎಲ್ಲವೂ ಅನುಕೂಲಕ್ಕಾಗಿ ಅಲ್ಲ. ಆಹಾರವನ್ನು ವೇಗವಾಗಿ ಸೇವಿಸುವುದನ್ನು ಒಳಗೊಂಡಿಲ್ಲ ಎಂದಿದ್ದಾರೆ.

ಭಾರತೀಯರು ಸ್ವಚ್ಛತೆಯನ್ನು ಗಂಭೀರವಾಗಿ ಪರಿಗಣಿಸುವುದನ್ನು ಗಮನಿಸಿದ್ದೇನೆ. ಸ್ನಾನ ಮಾಡುವುದು, ಬಟ್ಟೆ ಬದಲಾಯಿಸುವುದು, ನಿಮ್ಮನ್ನು ತಾಜಾವಾಗಿರಿಸಿಕೊಳ್ಳುವುದು. ಈ ಅಭ್ಯಾಸವನ್ನು ತುಂಬಾ ಹತ್ತಿರದಿಂದ ನಾನು ನೋಡಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅದು ತುಂಬಾ ಒಳ್ಳೆಯ ಅಭ್ಯಾಸ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿರುವುದನ್ನು ನೀವು ನೋಡಬಹುದು.

ಇನ್ನು ಹಬ್ಬಗಳು, ನೃತ್ಯ, ಹಾಡುಗಾರಿಕೆ, ಒಟ್ಟಿಗೆ ಆಚರಿಸುತ್ತಾರೆ. ಜೀವನವನ್ನು ಆನಂದಿಸಲು ಜನರಿಗೆ ವಿಶೇಷ ಕಾರಣ ಬೇಕಾಗಿಲ್ಲ. ಕೆಲವೊಮ್ಮೆ ಯುರೋಪಿನಲ್ಲಿ ನಾವು ತುಂಬಾ ಗಂಭೀರವಾಗಿರುತ್ತೇವೆ, ವಿಷಯಗಳನ್ನು ಸರಳವಾಗಿ ಆನಂದಿಸುವುದು ಹೇಗೆ ಎಂಬುದನ್ನು ನಾವು ಮರೆತುಬಿಡುತ್ತೇವೆ ಎಂದು ನನಗೆ ಅನಿಸುತ್ತದೆ. ಖಂಡಿತವಾಗಿ ಪ್ರತಿಯೊಂದು ದೇಶವೂ ಒಳ್ಳೆಯ ಮತ್ತು ಕೆಟ್ಟ ಅಂಶಗಳನ್ನು ಹೊಂದಿರುತ್ತದೆ. ಆದರೆ ಇವು ನಾನು ಭಾರತದಿಂದ ವೈಯಕ್ತಿಕವಾಗಿ ಕಲಿತ ಕೆಲವು ವಿಷಯಗಳು ಎಂದಿದ್ದಾರೆ.

ಇದನ್ನೂ ಓದಿ: ಎಳನೀರು ವ್ಯಾಪಾರಿಯೊಂದಿಗೆ ಚೌಕಾಸಿ ಮಾಡಿದ ವಿದೇಶಿ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇದು ಭಾರತದ ಬಗ್ಗೆ ತುಂಬಾ ಸುಂದರವಾದ ಅವಲೋಕನ ಎಂದಿದ್ದಾರೆ. ಇನ್ನೊಬ್ಬರು, ಒಳ್ಳೆಯದದ್ದನ್ನು ಹುಡುಕುವ ಹಾಗೂ ಅಳವಡಿಸಿಕೊಳ್ಳುವ ನಿಮ್ಮ ಗುಣ ದೊಡ್ಡದು ಎಂದು ಹೊಗಳಿದ್ದಾರೆ. ಮತ್ತೊಬ್ಬರು, ಅತಿಥಿ ದೇವೋ ಭವ ನಿಜವಾಗಿಯೂ ಭಾರತೀಯ ಸಂಸ್ಕೃತಿಯ ಅತ್ಯುತ್ತಮ ಭಾಗಗಳಲ್ಲಿ ಒಂದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:02 pm, Sun, 24 May 26

Source link

Exit mobile version