World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

ರಂಗಭೂಮಿ (Theatre) ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ. ಹೀಗಾಗಿ ಈ ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಪ್ರಾಚೀನ ಕಾಲದ ಕಲಾ ಪ್ರಕಾರಗಳಲ್ಲಿ ಒಂದಾದ ಈ ರಂಗಭೂಮಿ  ಹಿಂದಿನಿಂದಲೂ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲಿದೆ. ಈ ಹಿನ್ನಲೆಯಲ್ಲಿ ರಂಗಭೂಮಿಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್ 27. ಈ ದಿನದಂದು ವಿಶ್ವ ರಂಗಭೂಮಿ ದಿನವನ್ನು (World Theatre Day) ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ರಂಗಭೂಮಿ ದಿನದ ಇತಿಹಾಸವೇನು?

ವಿಶ್ವ ರಂಗಭೂಮಿ ದಿನದ ಇತಿಹಾಸದತ್ತ ಕಣ್ಣಾಯಿಸಿದರೆ 1961 ರಲ್ಲಿ ಅಂತಾರಾಷ್ಟ್ರೀಯ ರಂಗಭೂಮಿ ಸಂಸ್ಥೆ ಅಥವಾ ಇಂಟರ್‌ನ್ಯಾಷನಲ್‌ ಥಿಯೇಟರ್‌ ಇನ್ಸ್ಟಿಟ್ಯೂಟ್‌ (ಐಟಿಐ) ಈ ದಿನದ ಆಚರಣೆಯನ್ನು ಪರಿಚಯಿಸಿತು. ವಿಶ್ವ ರಂಗಭೂಮಿ ದಿನದಂದು ಫ್ರೆಂಚ್ ನಾಟಕಕಾರ ಜೀನ್ ಕಾಕ್ಟೋ ಅವರು ಮೊದಲ ಸಂದೇಶವನ್ನು ನೀಡುವ ಕೆಲಸವನ್ನು ಮಾಡಿದರು. ಅಂದಿನಿಂದ ಪ್ರತಿ ವರ್ಷ ಮಾರ್ಚ್ 27 ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮಾರ್ಚ್‌ 26 ರಂದು ನೇರಳೆ ದಿನವನ್ನು ಆಚರಿಸುವುದೇಕೆ ಗೊತ್ತಾ?

ವಿಶ್ವ ರಂಗಭೂಮಿ ದಿನದ ಮಹತ್ವ, ಆಚರಣೆ ಹೇಗೆ?

ಆಧುನಿಕತೆಗೆ ತೆರೆದು ಕೊಳ್ಳುತ್ತಿದ್ದಂತೆ ಪ್ರಾಚೀನ ಕಲೆಗಳು ಕಣ್ಮರೆಯಾಗುತ್ತಿದೆ. ಈ ಪ್ರಾಚೀನ ಕಲೆಯಾದ ರಂಗಭೂಮಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು. ರಂಗಭೂಮಿ ಕಲೆಗಳ ಸೌಂದರ್ಯ, ಸಾಂಸ್ಕೃತಿಕ ವಿನಿಮಯ ಮತ್ತು ಸಮಾಜದ ಮೇಲೆ ಅದರ ಪ್ರಭಾವವನ್ನು ಆಚರಿಸುವುದು. ಈ ಕಲೆಯನ್ನೇ ನಂಬಿಕೊಂಡಿರುವ ಕಲಾವಿದರನ್ನು ಗೌರವಿಸುವುದು ಈ ದಿನದ ಮಹತ್ವವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಮತ್ತು ನಾಟಕ ಅಕಾಡೆಮಿಗಳು ಈ ದಿನದಂದು ವಿಶೇಷ ರಂಗಚಟುವಟಿಕೆಗಳನ್ನು ಆಯೋಜಿಸುತ್ತವೆ. ನಾಟಕ ಪ್ರದರ್ಶನಗಳು ಹಾಗೂ ಜಾಗೃತಿ ಕಾರ್ಯಾಗಾರಗಳು ನಡೆಯುತ್ತವೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ನಟಿ ಸಂಜನಾ ಬುರ್ಲಿಗೆ ತಾಳಿ ಕಟ್ಟಿ ಪ್ರೀತಿಯಿಂದ ಕೆನ್ನೆಗೆ ಮುತ್ತಿಟ್ಟ ಸಮರ್ಥ್

Source link

ತುಳಸಿ ಕಟ್ಟೆಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? ಪ್ರತೀ ಸುತ್ತಿನ ಹಿಂದಿನ ಮಹತ್ವ ಇಲ್ಲಿ ತಿಳಿಯಿರಿ

ಭಾರತೀಯ ಸಂಸ್ಕೃತಿಯಲ್ಲಿ ವೃಕ್ಷಗಳಿಗೆ ವಿಶೇಷ ಸ್ಥಾನಮಾನವಿದೆ. ವೃಕ್ಷೋ ರಕ್ಷತಿ ರಕ್ಷಿತಃ ಎಂಬ ಮಾತು ಮರಗಳ ಸಂರಕ್ಷಣೆ ಮತ್ತು ಅದರ ಪ್ರಯೋಜನಗಳನ್ನು ಸಾರುತ್ತದೆ. ಆಹಾರ, ನೆರಳು, ವಾಸಕ್ಕೆ ಸಹಕಾರಿ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ವೃಕ್ಷಗಳ ಜೊತೆಗೆ, ಕೆಲವು ವೃಕ್ಷಗಳನ್ನು ಪೂಜನೀಯ ಭಾವದಿಂದ ಕಾಣಲಾಗುತ್ತದೆ. ಅವುಗಳಲ್ಲಿ ಅರಳೀ ಮರದ ಜೊತೆಗೆ ತುಳಸಿ ಗಿಡವು ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ಪ್ರತಿಯೊಂದು ಮನೆಯಲ್ಲೂ ತುಳಸಿ ಗಿಡ ಇರಲೇಬೇಕು ಎಂಬ ನಂಬಿಕೆಯಿದೆ. ತುಳಸಿ ಗಿಡವನ್ನು ಕೇವಲ ಬೆಳೆಸುವುದು, ನೀರು ಹಾಕುವುದು, ಅಥವಾ ವಿವಾಹ ಮಾಡಿಸುವುದು ಮಾತ್ರವಲ್ಲದೆ, ಅದರ ಸುತ್ತ ಪ್ರದಕ್ಷಿಣೆ ಮಾಡುವ ವಿಶೇಷ ತಂತ್ರವೂ ಇದೆ ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಬೆಳಗಿನ ಜಾವ ಕೇವಲ ಐದು ನಿಮಿಷಗಳ ಕಾಲ ತುಳಸಿ ಗಿಡಕ್ಕೆ ಪ್ರದಕ್ಷಿಣೆ ಮಾಡುವುದರಿಂದ ಅಪಾರ ಫಲಗಳು ಲಭಿಸುತ್ತವೆ. ಆದಾಗ್ಯೂ, 11 ಪ್ರದಕ್ಷಿಣೆಗಳ ಮಿತಿಯನ್ನು ಕಾಯ್ದುಕೊಳ್ಳಬೇಕು. ಪ್ರತಿಯೊಂದು ಪ್ರದಕ್ಷಿಣೆಯು ವಿಭಿನ್ನ ಹಾಗೂ ಗಹನವಾದ ಪ್ರಯೋಜನಗಳನ್ನು ನೀಡುತ್ತದೆ.

ಪ್ರತೀ ಸುತ್ತಿನ ಹಿಂದಿನ ಮಹತ್ವ ಇಲ್ಲಿ ತಿಳಿಯಿರಿ

  • ಒಂದು ಪ್ರದಕ್ಷಿಣೆ (ಗೋಪ ಪ್ರದಕ್ಷಿಣೆ): ತುಳಸಿಗೆ ಒಂದು ಪ್ರದಕ್ಷಿಣೆ ಮಾಡಿ ನಮಸ್ಕರಿಸಿದರೆ, ಸಾಕ್ಷಾತ್ ಸ್ಥಿತಿಕಾರಕನಾದ ವಿಷ್ಣುವು ನಮ್ಮ ಕಡೆ ಕಣ್ಬಿಡುತ್ತಾನೆ, ಗೋವಿಂದನು ನಮ್ಮ ಮೇಲೆ ಅನುಗ್ರಹವನ್ನು ತೋರುತ್ತಾನೆ ಎಂದು ಹೇಳಲಾಗುತ್ತದೆ.
  • ಎರಡು ಪ್ರದಕ್ಷಿಣೆಗಳು: ಈ ಪ್ರದಕ್ಷಿಣೆಗಳು ವೈಕುಂಠದ ಹಾದಿಯನ್ನು ಸ್ಪಷ್ಟಪಡಿಸುತ್ತವೆ, ಭಕ್ತರಿಗೆ ಮೋಕ್ಷ ಮಾರ್ಗವನ್ನು ತೋರಿಸುತ್ತವೆ ಎಂದು ನಂಬಲಾಗಿದೆ.
  • ಮೂರು ಪ್ರದಕ್ಷಿಣೆಗಳು: ಮನಸ್ಸಿನ ಶುದ್ಧಿಗೆ ಇದು ಅತ್ಯಂತ ಪರಿಣಾಮಕಾರಿ. ದೈವಿಕ ಬಲ ಹೊಂದಿರುವವರ ಮುಖ, ಚಟುವಟಿಕೆಗಳು ಮತ್ತು ಮಾತುಗಳು ವಿಶೇಷವಾಗಿರುವಂತೆ, ಮೂರು ಪ್ರದಕ್ಷಿಣೆಗಳು ಮನಸ್ಸನ್ನು ನಿರ್ಮಲಗೊಳಿಸುತ್ತವೆ.
  • ನಾಲ್ಕು ಪ್ರದಕ್ಷಿಣೆಗಳು: ಸಂಪತ್ತಿನ ಅನುಗ್ರಹಕ್ಕೆ ಇದು ಸಹಕಾರಿ. ಆರ್ಥಿಕ ಅಡೆತಡೆಗಳು ನಿವಾರಣೆಯಾಗಿ ಸಂಪತ್ತು ಹರಿದು ಬರಲು ಮಾರ್ಗವಾಗುತ್ತದೆ.
  • ಐದು ಪ್ರದಕ್ಷಿಣೆಗಳು: ಸಂತಾನದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಲು ಐದು ಪ್ರದಕ್ಷಿಣೆಗಳು ನೆರವಾಗುತ್ತವೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚುತ್ತದೆ.
  • ಆರು ಪ್ರದಕ್ಷಿಣೆಗಳು: ದೀರ್ಘಾಯುಷ್ಯ ಪ್ರಾಪ್ತಿಗಾಗಿ ಆರು ಪ್ರದಕ್ಷಿಣೆಗಳನ್ನು ಮಾಡಲಾಗುತ್ತದೆ. ಆರೋಗ್ಯ ಮತ್ತು ದೀರ್ಘ ಜೀವನಕ್ಕೆ ಇದು ಶುಭಕಾರಿ.
  • ಏಳು ಪ್ರದಕ್ಷಿಣೆಗಳು: ಜ್ಯೋತಿಷ್ಯದಲ್ಲಿ ಕಳತ್ರ ಭಾವ ಎಂದು ಕರೆಯಲ್ಪಡುವ ಕುಟುಂಬ ನಿರ್ವಹಣೆಗೆ ಏಳು ಪ್ರದಕ್ಷಿಣೆಗಳು ಶಕ್ತಿ ನೀಡುತ್ತವೆ. ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ.
  • ಎಂಟು ಪ್ರದಕ್ಷಿಣೆಗಳು: ಏಕಾಗ್ರತೆ ಹೆಚ್ಚಾಗಿ, ಮನಸ್ಸಿನಲ್ಲಿ ಸಾವಿನ ಕುರಿತ ಆತಂಕಗಳು ದೂರವಾಗುತ್ತವೆ. ಜೀವನದ ಬಗ್ಗೆ ಧನಾತ್ಮಕ ದೃಷ್ಟಿಕೋನ ಮೂಡುತ್ತದೆ.
  • ಒಂಬತ್ತು ಪ್ರದಕ್ಷಿಣೆಗಳು: ಎಲ್ಲಾ ರೀತಿಯ ರೋಗರುಜಿನಗಳು ದೂರವಾಗಿ, ಹಿಂದಿನ ಜನ್ಮಗಳ ಕರ್ಮಫಲದ ಪ್ರಭಾವ ಕಡಿಮೆಯಾಗುತ್ತದೆ. ಆರೋಗ್ಯ ಮತ್ತು ಶಾಂತಿಗೆ ಇದು ಸಹಕಾರಿ.
  • ಹತ್ತು ಪ್ರದಕ್ಷಿಣೆಗಳು: ಸತ್ಕರ್ಮಗಳನ್ನು, ಧರ್ಮ ಕಾರ್ಯಗಳನ್ನು ಮಾಡಲು ಮನಸ್ಸನ್ನು ಪ್ರೇರೇಪಿಸುತ್ತದೆ. ಸಮಾಜ ಮತ್ತು ವೈಯಕ್ತಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುತ್ತದೆ.
  • ಹನ್ನೊಂದು ಪ್ರದಕ್ಷಿಣೆಗಳು: ವಿವಾಹ, ಮನೆ ಕಟ್ಟಿಸುವಿಕೆ, ಸಾಲ ಮುಕ್ತಿ ಮುಂತಾದ ನಿಮ್ಮ ಅಭೀಷ್ಟಗಳು ಈಡೇರುತ್ತವೆ. ಇದು ಇಷ್ಟಾರ್ಥ ಸಿದ್ಧಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಈ ಪ್ರದಕ್ಷಿಣೆಯನ್ನು ಪ್ರತಿದಿನ ಕನಿಷ್ಠ 48 ದಿನಗಳ ಕಾಲ ನಿರಂತರವಾಗಿ ಮಾಡಿದರೆ ಸಾಕಷ್ಟು ಶುಭ ಫಲಗಳು ದೊರೆಯುತ್ತವೆ ಎಂದು ನಂಬಲಾಗಿದೆ. ನಿಮ್ಮ ಮನೆಯಲ್ಲಿರುವ ತುಳಸಿ ಗಿಡವು ದೇವಸ್ಥಾನವಿದ್ದಂತೆ, ಅಲ್ಲಿ ದೇವರೇ ನೆಲೆಸಿರುತ್ತಾನೆ ಎಂಬ ಭಾವನೆಯಿಂದ ಈ ಆಚರಣೆಯನ್ನು ಕೈಗೊಳ್ಳಬೇಕು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ನವದೆಹಲಿ, ಮಾರ್ಚ್​ 27: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು  ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ಮಧ್ಯೆ ಈ ಕಡಿತ ಮಾಡಲಾಗಿದೆ.
ಪೆಟ್ರೋಲ್: ಲೀಟರ್‌ಗೆ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಮತ್ತು ಅಮೆರಿಕ-ಇರಾನ್ ಯುದ್ಧದ ಬೆದರಿಕೆಯಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 114 ಡಾಲರ್​ಗಿಂತ ಹೆಚ್ಚಿದ್ದವು. ಡೀಸೆಲ್ ಮೇಲಿನ ಸುಂಕ 10 ರೂ.ನಿಂದ ಶೂನ್ಯಕ್ಕೆ ಇಳಿಕೆಯಾಗಿದೆ.

 

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

‘ಸ್ವಸ್ತಿಕ್’ ಕನ್ನಡದ ‘ಧುರಂಧರ್’; ಉಪ್ಪಿ-ರಣವೀರ್ ಚಿತ್ರಕ್ಕೂ ಇದೆ ಹೋಲಿಕೆ

‘ಧುರಂಧರ್ 2’ ಸಿನಿಮಾ ಸದ್ಯ ಎಲ್ಲೆಡೆ ಚರ್ಚೆ ಆಗುತ್ತಾ ಇದೆ. ಈ ಸಿನಿಮಾ ನೋಡಿದ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಜಸ್ಕಿರತ್ ಸಿಂಗ್ ರಂಗಿ ಎಂಬ ವ್ಯಕ್ತಿ ಹಮ್ಜಾ ಅಲಿ ಮಜಾರಿ ಆಗಿ ಪಾಕಿಸ್ತಾನಕ್ಕೆ ತೆರಳುತ್ತಾನೆ. ಅಲ್ಲಿ ಆತ ಉಗ್ರರ ಜೊತೆ ಸೇರುತ್ತಾನೆ.ಅವರನ್ನೇ ನಾಶ ಮಾಡುತ್ತಾನೆ. ಈ ಸಂದರ್ಭದಲ್ಲಿ ಎಲ್ಲರೂ 1998ರಲ್ಲಿ ಬಂದ ಉಪೇಂದ್ರ ನಿರ್ದೇಶನದ ‘ಸ್ವಸ್ತಿಕ್’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕೂಡ ಉಗ್ರರ ಕಥೆಯನ್ನು ಹೊಂದಿತ್ತು.

ಪಾರ್ವತಮ್ಮ ರಾಜ್​​​ಕುಮಾರ್ ಅವರು ‘ಸ್ವಸ್ತಿಕ್’ ಚಿತ್ರ ನಿರ್ಮಾಣ ಮಾಡಿದ್ದರು. ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ರಾಘವೇಂದ್ರ ರಾಜ್​​ಕುಮಾರ್, ವಿಜಯಲಕ್ಷ್ಮೀ, ಶ್ರೀನಾಥ್ ಮೊದಲಾದವರು ನಟಿಸಿದ್ದರು. ಈ ಸಿನಿಮಾ ರಿಲೀಸ್ ಆಗಿ ಮೂರು ದಶಕ ಕಳೆಯುತ್ತಾ ಬಂದಿದೆ. ಈ ಸಿನಿಮಾ ಸಂಪೂರ್ಣವಾಗಿ ಭಯೋತ್ಪಾದನೆಯ ಮೇಲೆ ಇದೆ. ಈ ಚಿತ್ರದ ದೃಶ್ಯವೊಂದು ಈಗ ವೈರಲ್ ಆಗಿದೆ.

ಸಿಬಿಐ ಮುಖ್ಯಸ್ಥ (ಶ್ರೀನಾಥ್) ಗುರು (ರಾಘವೇಂದ್ರ ರಾಜ್​​​ಕುಮಾರ್) ಬಳಿ ಬಂದು ಭಯೋತ್ಪಾದಕ ಜೊತೆ ಸೇರುವಂತೆ ಕೋರುತ್ತಾನೆ. ಭಯೋತ್ಪಾದಕರ ಜೊತೆ ಸೇರಿ ಅವರಲ್ಲಿ ಒಬ್ಬರಾಗಿ ಭಯೋತ್ಪಾದಕ ಪ್ಲ್ಯಾನ್ ನಾಶ ಮಾಡುವಂತೆ ಸಿಬಿಐ ಮುಖ್ಯಸ್ಥ ಕೋರಿಕೆ ಇಡುತ್ತಾನೆ. ಈ ರೀತಿಯಲ್ಲಿ ದೃಶ್ಯ ಇದೆ. ಇದನ್ನು ಅನೇಕರು ‘ಧುರಂಧರ್’ ಚಿತ್ರಕ್ಕೆ ಹೋಲಿಕೆ ಮಾಡಿದ್ದಾರೆ.

ಧುರಂಧರ್ ಸಿನಿಮಾದಲ್ಲೂ ರಣವೀರ್ ಸಿಂಗ್ ಬಳಿ ಬರುವ ಆರ್​ ಮಾಧವನ್ ಇದೇ ರೀತಿಯ ಬೇಡಿಕೆ ಇಡುತ್ತಾನೆ. ಈ ದೃಶ್ಯಕ್ಕೆ ಹೋಲಿಕೆ ಇರುವುದರಿಂದ ಅನೇಕರು ‘ಸ್ವಸ್ತಿಕ್’ ಚಿತ್ರವನ್ನು ‘ಧುರಂಧರ್’ ಸಿನಿಮಾಗೆ ಹೋಲಿಕೆ ಮಾಡುತ್ತಿದ್ದಾರೆ. ‘ಸ್ವಸ್ತಿಕ್’ ಚಿತ್ರದಲ್ಲಿ ಸೇನಾ ಮುಖ್ಯಸ್ಥನೇ ವಿಲನ್ ಆಗಿರುತ್ತಾನೆ. ಉಗ್ರರ ಜೊತೆ ಸೇರಿ ಆತನೇ ಕೆಟ್ಟ ಕೆಲಸ ಮಾಡುತ್ತಾ ಇರುತ್ತಾನೆ. ಆದರೆ,‘ಧುರಂಧರ್ 2’ ಚಿತ್ರದಲ್ಲಿ ಆ ರೀತಿ ಆಗುವುದಿಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಈಗ ಧುರಂಧರ್ ರಿಲೀಸ್ ಬೆನ್ನಲ್ಲೇ ಈ ಸಿನಿಮಾದ ಕ್ಲಿಪ್ ವೈರಲ್ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆಯೇ ಉಪೇಂದ್ರ ಅವರು ಅಷ್ಟು ಬ್ರಿಲಿಯಂಟ್ ಆಗಿ ಸಿನಿಮಾ ಮಾಡಿದ್ದರು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

20 ಬಾರಿ ಬೇಯಿಸಿದರೂ ಮಾಂಸ ಬೆಂದಿಲ್ಲ ಎಂದು ಕುಕ್ಕರ್ ಹಿಡಿದು ಪೊಲೀಸ್ ಠಾಣೆಗೆ ಹೋದ ವ್ಯಕ್ತಿ

ಆಂಧ್ರಪ್ರದೇಶ, ಮಾರ್ಚ್​ 27: ಮಾಂಸ(Meat) ಬೇಯಲಿಲ್ಲ ಎಂದ್ರೆ ಯಾರಾದ್ರೂ ಪೊಲೀಸ್ ಠಾಣೆಗೆ ಹೋಗ್ತಾರಾ ಎಂದು ನೀವು ಪ್ರಶ್ನೆ ಕೇಳಬಹುದು. ಇಲ್ಲೊಬ್ಬ ವ್ಯಕ್ತಿ  ಇಪ್ಪತ್ತು ಬಾರಿ ಬೇಯಿಸಿದರೂ ಬೇಯದ ಮಾಂಸವಿರುವ ಕುಕ್ಕರ್ ಹಿಡಿದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಎನ್​ಡಿಟಿವಿ ವರದಿ ಪ್ರಕಾರ,  ತಡಿಪತ್ರಿಯ ಪುಟ್ಲೂರು ರಸ್ತೆಯ ನಿವಾಸಿ ಸೋದಲ ಹಾಜಿ ಸ್ಥಳೀಯ ಮಾರಾಟಗಾರರಿಂದ ಮೇಕೆ ತಲೆಯ ಮಾಂಸವನ್ನು ಖರೀದಿಸಿದ್ದರು.
ಸ್ಥಳೀಯವಾಗಿ ತಲಾಕುರ ಎಂದು ಕರೆಯಲ್ಪಡುವ ಸಾಂಪ್ರದಾಯಿಕ ತಲೆ ಮಾಂಸದ ಕರಿಯನ್ನು ತಯಾರಿಸಲು ಉತ್ಸುಕರಾಗಿದ್ದ ಹಾಜಿ,   ಮಾಂಸವನ್ನು ಬೇಯಿಸಲು ಪ್ರಾರಂಭಿಸಿದರು. ಸುಮಾರು 20 ಪ್ರಯತ್ನಗಳ ನಂತರವೂ, ಮಾಂಸವು ಗಟ್ಟಿಯಾಗಿಯೇ ಉಳಿದಿತ್ತು. ಗೊಂದಲಕ್ಕೊಳಗಾದ ಮತ್ತು ಹತಾಶನಾದ ಹಾಜಿ, ಇಡೀ ಅಡುಗೆ ಪಾತ್ರೆಯನ್ನು ಸಾಕ್ಷಿಯಾಗಿ ತೆಗೆದುಕೊಂಡು ನೇರವಾಗಿ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಒಮ್ಮೆ ಈ ದೂರಿನ ಬಗ್ಗೆ ಪೊಲೀಸ್ ಅಧಿಕಾರಿಗಳು ಆರಂಭದಲ್ಲಿ ಆಶ್ಚರ್ಯಚಕಿತರಾದರು ಆದರೆ ಸಮಸ್ಯೆಯನ್ನು ತನಿಖೆ ಮಾಡಲು ಒಪ್ಪಿಕೊಂಡರು.
ಮಾಂಸ ಮಾರಾಟಗಾರರೊಂದಿಗೆ ನಡೆದ ಚರ್ಚೆ ಬಳಿಕ, ಪಟ್ಟಣ ವೃತ್ತ ನಿರೀಕ್ಷಕ ಆನಂದ ರಾವ್ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಿದರು.ಮಾರಾಟಗಾರರು ಅದೇ ಪ್ರಮಾಣದ ತಾಜಾ, ಖಾದ್ಯ ಮಟನ್‌ನೊಂದಿಗೆ ಬದಲಿಯನ್ನು ಒದಗಿಸಲು ಒಪ್ಪಿಕೊಂಡರು.
ಆ ಮಾಂಸವು ಕತ್ತರಿಸಿಟ್ಟು ಬು ಸಮಯ ಕಳೆದಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಇದು ಅನೇಕ ಪ್ರಯತ್ನಗಳ ಹೊರತಾಗಿಯೂ ಅದು ಗಟ್ಟಿಯಾಗಿ ಮತ್ತು ಬೇಯಿಸದೆ ಇರುವುದಕ್ಕೆ ಕಾರಣವಾಗಿರಬಹುದು. ಮಾರಾಟಗಾರರು ಸ್ಪಷ್ಟ ವಿವರಣೆಯನ್ನು ನೀಡಲಿಲ್ಲ, ಆದರೆ ಪ್ರಾಣಿಯ ವಯಸ್ಸು ಕಾರಣ ಎಂದು ಹೇಳಲಾಗುತ್ತಿದೆ.
ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್​ನತ್ತ ಸುಳಿಯದ ವಾಹನ ಸವಾರರು

ರಾಯಚೂರು, ಮಾರ್ಚ್ 27: ನಯಾರಾ ಕಂಪನಿಯ ಪೆಟ್ರೋಲ್ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದರಿಂದ ಇದೀಗ ಆ ಕಂಪನಿ ಬಂಕ್​ಗಳತ್ತ ಗ್ರಾಹಕರೇ ಸುಳಿಯುತ್ತಿಲ್ಲ. ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 3 ರೂ. ಏರಿಕೆಯಾಗಿದೆ. ಈ ಏಕಾಏಕಿ ದರ ಹೆಚ್ಚಳದಿಂದಾಗಿ ಬೈಕ್ ಸವಾರರು ನಯಾರಾ ಪೆಟ್ರೋಲ್ ಬಂಕ್‌ಗಳಿಂದ ದೂರ ಸರಿಯುತ್ತಿದ್ದಾರೆ. ಬಂಕ್‌ನತ್ತ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ ನಯಾರಾ ಪೆಟ್ರೋಲ್ ಬಂಕ್‌ಗಳಿಗೆ ಹೆದ್ದಾರಿ ಮಾರ್ಗವಾಗಿ ಹೋಗುವವರು ಮಾತ್ರ ಭೇಟಿ ನೀಡುತ್ತಿದ್ದಾರೆ. ಉಳಿದ ಬೈಕ್ ಸವಾರರು ನಗರದೊಳಗಿನ ಇತರ ಪೆಟ್ರೋಲ್ ಬಂಕ್‌ಗಳ ಕಡೆಗೆ ಮುಖ ಮಾಡಿದ್ದು, ಅಲ್ಲಿ ಸಂದಣಿ ಹೆಚ್ಚಾಗಿದೆ. 300 ರೂಪಾಯಿಗೆ 3 ಲೀಟರ್ ಪೆಟ್ರೋಲ್ ಸಿಗುತ್ತಿದ್ದ ಜಾಗದಲ್ಲಿ, ಈಗ 315 ರೂಪಾಯಿಗೆ ಕೇವಲ 2.8 ಲೀಟರ್ ಸಿಗುತ್ತಿದೆ ಎಂದು ಬೈಕ್ ಸವಾರರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ.

ಉತ್ತಮ ಲಾಭ ಪಡೆಯುವ ನಿರೀಕ್ಷೆ

ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ 2 ಮತ್ತು 4 ಗ್ರಾಂ ಗೋಲ್ಡ್ ಕಾಯಿನ್‌ಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಉತ್ತಮ ಲಾಭ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಜನರು ಹೂಡಿಕೆಗಾಗಿ ಕಾಯಿನ್‌ಗಳನ್ನು ಖರೀದಿಸುತ್ತಿದ್ದಾರೆ.

ಚಿನ್ನದ ದರದಲ್ಲಿ ಅಸ್ಥಿರತೆ

ಇನ್ನೊಂದೆಡೆ, ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಅಸ್ಥಿರತೆ ಕಂಡುಬಂದಿದೆ. ನಿನ್ನೆ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,450 ರೂಪಾಯಿ ಏರಿಕೆಯಾಗಿದೆ. ಮಾರ್ಚ್ 23ರಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 12,635 ರೂಪಾಯಿಯಾಗಿದ್ದು, ಎರಡು ದಿನಗಳಲ್ಲಿ 345 ರೂಪಾಯಿ ಏರಿಕೆಯಾಗಿದೆ. ಆದರೆ, ಇಂದು ಮಾರುಕಟ್ಟೆ ಆರಂಭದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,465 ರೂಪಾಯಿಯಾಗಿದ್ದು, ಸಂಜೆ ವೇಳೆಗೆ 215 ರೂಪಾಯಿ ಇಳಿಕೆಯಾಗಿ 13,250 ರೂಪಾಯಿಗೆ ತಲುಪಿದೆ.

ಇದನ್ನೂ ಓದಿ ಚಿನ್ನದ ದರ ಹಾವು-ಏಣಿ ಆಟದ ಮಧ್ಯೆ ಬೆಂಗಳೂರಿನಲ್ಲಿ ಅಕ್ಷಯ ತೃತೀಯಕ್ಕೆ ಈಗಲೇ ಗೋಲ್ಡ್ ಬುಕ್ಕಿಂಗ್ ಜೋರು! ಜ್ಯುವೆಲ್ಲರಿಗಳಲ್ಲಿ ಕ್ಯೂ

ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗಬಹುದು ಎಂಬ ಭಯದಲ್ಲಿ ಗ್ರಾಹಕರು ಕಡಿಮೆ ದರದಲ್ಲಿ ಚಿನ್ನ ಖರೀದಿಸಲು ಮುಂದಾಗಿದ್ದಾರೆ. ಆಭರಣಗಳಿಗಿಂತ ಗೋಲ್ಡ್ ಕಾಯಿನ್‌ಗಳ ಮೇಲೆ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ‘ಬಾಸ್’ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್

‘ಬಾಸ್’ ಹೆಸರಿನ ಚಿತ್ರವನ್ನು ಮಾಡಲಾಗಿದೆ. ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ ಎಂದು ಹೇಳಲಾಗುತ್ತಾ ಇದೆ. ಈ ವಿಷಯವಾಗಿ ಪ್ರಥಮ್ ಮಾಡಿದ್ದಾರೆ. ‘ನನಗೆ ಕೋಪ ಬಂದಾಗ ಕೆಲವು ಮಾತುಗಳನ್ನು ಆಡಿದ್ದೇನೆ. ಹಾಗಂತ ಅವರ ಮೇಲೆ ವೈಯಕ್ತಿಕವಾಗಿ ಏನೋ ಇದೆ ಎಂದಲ್ಲ. ಯಾರೇ ಸಿನಿಮಾ ಮಾಡಿದರೂ ಮತ್ತೊಬ್ಬರಿಗೆ ನೋವಾಗಂದತೆ ಮಾಡಲಿ’ ಎಂದು ಪ್ರಥಮ್ ಕೋರಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

ಇಂದೋರ್, ಮಾರ್ಚ್​ 27: ವಸತಿ ಪ್ರದೇಶದಲ್ಲಿ ಪೆಂಟ್​ಹೌಸ್​ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್​​ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹತ್ತರಿಂದ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version