ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡ ಸಂಧು ಅವರಿಗೆ ಟ್ರಂಪ್ ಅಭಿನಂದನೆ – Kannada News | Trump Congratulates Tarunjeet Sandhu on Delhi LG Role: Diplomat to Lead Delhi

ನವದೆಹಲಿ, ಏಪ್ರಿಲ್ 17: ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದಿರುವ ಅನುಭವಿ ರಾಜತಾಂತ್ರಿಕ ತರಂಜಿತ್ ಸಿಂಗ್ ಸಂಧು ಅವರಿಗೆ ಜಾಗತಿಕ ಮಟ್ಟದ ಪ್ರಶಂಸೆ ಹರಿದುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಶುಕ್ರವಾರ ಸಂಧು ಅವರನ್ನು ಅಭಿನಂದಿಸಿದ್ದು, ದೆಹಲಿಯ ಪ್ರಗತಿಯಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಮೆಚ್ಚುಗೆ
ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಸಂಧು ಅವರ ಕುರಿತು ಬರೆದುಕೊಂಡಿರುವ ಟ್ರಂಪ್, ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿರುವ ತರಂಜಿತ್ ಸಂಧು ಅವರಿಗೆ ಅಭಿನಂದನೆಗಳು, ಒಬ್ಬ ಅನುಭವಿ ರಾಜತಾಂತ್ರಿಕರಾಗಿ ಅವರು ಯಾವಾಗಲೂ ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಲು ಶ್ರಮಿಸಿದ್ದಾರೆ. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ರಾಜತಾಂತ್ರಿಕ ಚತುರ ಸಂಧು
ತರಂಜಿತ್ ಸಿಂಗ್ ಸಂಧು ಅವರು ಕೇವಲ ಅಧಿಕಾರಿಯಲ್ಲ, ಬದಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಧ್ವನಿಯಾಗಿದ್ದವರು.

ಅಮೆರಿಕದಲ್ಲಿ ರಾಯಭಾರಿ: 2020 ರಿಂದ 2024 ರವರೆಗೆ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಇವರು, ಶ್ವೇತಭವನದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಭಾರತೀಯ ವಿದೇಶಾಂಗ ಸೇವೆಯಿಂದ (IFS) ನಿವೃತ್ತರಾದ ನಂತರ ಸಕ್ರಿಯ ರಾಜಕಾರಣಕ್ಕೆ ಇಳಿದಿದ್ದರು.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

2024ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ ಸಂಧು ಅವರನ್ನು ಅಮೃತಸರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಆದರೆ, ಆ ಚುನಾವಣೆಯಲ್ಲಿ ಅವರಿಗೆ ಜಯ ಸಿಗಲಿಲ್ಲ. ಆದರೂ ಅವರ ಅನುಭವ ಮತ್ತು ಆಡಳಿತಾತ್ಮಕ ಕೌಶಲ್ಯವನ್ನು ಗುರುತಿಸಿದ ಕೇಂದ್ರ ಸರ್ಕಾರ, ಮಾರ್ಚ್ 5 ರಂದು ಅವರನ್ನು ದೇಶದ ರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿತು.

ದೆಹಲಿಯ ಪ್ರಗತಿಗೆ ಹೊಸ ಭರವಸೆ
ಒಬ್ಬ ಅನುಭವಿ ರಾಜತಾಂತ್ರಿಕ ದೆಹಲಿಯ ಎಲ್‌ಜಿಯಾಗಿ ನೇಮಕಗೊಂಡಿರುವುದು ಜಾಗತಿಕ ಮಟ್ಟದಲ್ಲೂ ಕುತೂಹಲ ಮೂಡಿಸಿದೆ. ದೆಹಲಿಯ ಆಡಳಿತಾತ್ಮಕ ಸವಾಲುಗಳನ್ನು ಎದುರಿಸುವಲ್ಲಿ ಮತ್ತು ನಗರವನ್ನು ಜಾಗತಿಕ ಮಟ್ಟದ ಸುಸಜ್ಜಿತ ರಾಜಧಾನಿಯನ್ನಾಗಿ ಮಾಡುವಲ್ಲಿ ಸಂಧು ಅವರ ಅಂತರರಾಷ್ಟ್ರೀಯ ಅನುಭವ ಸಹಕಾರಿಯಾಗಲಿದೆ ಎಂಬುದು ತಜ್ಞರ ಅಭಿಪ್ರಾಯ.

ಒಬ್ಬ ಭಾರತೀಯ ಅಧಿಕಾರಿಯ ನೇಮಕಕ್ಕೆ ಅಮೆರಿಕ ಅಧ್ಯಕ್ಷರು ಬಹಿರಂಗವಾಗಿ ಅಭಿನಂದನೆ ಸಲ್ಲಿಸಿರುವುದು ಸಂಧು ಅವರ ವ್ಯಕ್ತಿತ್ವ ಮತ್ತು ಅವರ ಕೆಲಸದ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ದೆಹಲಿಯ ಅಭಿವೃದ್ಧಿಯ ಹಾದಿಯಲ್ಲಿ ಸಂಧು ಯಾವ ರೀತಿ ಹೊಸ ಅಧ್ಯಾಯ ಬರೆಯಲಿದ್ದಾರೆ ಎಂಬುದು ಈಗ ಎಲ್ಲರ ಕುತೂಹಲವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:30 am, Fri, 17 April 26

Source link

ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ; ರಸ್ತೆಗೆ ಉರುಳಿದ ವಿದ್ಯುತ್ ಕಂಬ! – Kannada News | Mudigere Rain Havoc: Chikkamagaluru Storm Topples Trees, Snaps Power Lines, Damages Homes

ಚಿಕ್ಕಮಗಳೂರು, ಏ.17: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ನೆನ್ನೆ ಕೆಲವು ಕಡೆ ಭಾರೀ ಮಳೆ ಬಂದಿದೆ. ಈ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತಗಳು ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ ಮೇಲ್ಚಾವಣಿಯ ಹೆಂಚುಗಳು ಪುಡಿಪುಡಿಯಾಗಿದ್ದು, ಕಟ್ಟಡಕ್ಕೆ ಹಾನಿಯಾಗಿದೆ. ಮರ ಬೀಳುವ ಸಮಯದಲ್ಲಿ ಮನೆಯಲ್ಲೇ ಇದ್ದ ಕುಟುಂಬಸ್ಥರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಣಕಲ್ ಮತ್ತು ಮತ್ತಿಕಟ್ಟಿ ಗ್ರಾಮಗಳ ನಡುವಿನ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಅಡ್ಡಲಾಗಿ ಬಿದ್ದಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ. ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ತೋಟಗಳಲ್ಲಿನ ಬೆಳೆಗಳಿಗೂ ಹಾನಿಯಾಗುವ ಭೀತಿ ಎದುರಾಗಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇನ್ನು ಚಿತ್ರದುರ್ಗದ ಕೆಲವೊಂದು ಕಡೆ ಮಳೆಯಿಂದ ಭಾರೀ ಪ್ರಮಾಣದ ಹಾನಿಗಳು ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ.

ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನರು ಚರಂಡಿ ಪೈಪ್‌ಗಳಿಂದ ನೀರು ಹಿಡಿಯುವ ದುಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಜೀವಜಲವಾಗಿದ್ದ ಸ್ವರ್ಣ ನದಿಯ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಒಂದು ಮೀಟರ್‌ನಷ್ಟು ಕುಸಿದಿದೆ.

ಏತನ್ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿಸಿಗಳ ಸಭೆಯಲ್ಲಿ, ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಮಾಹಿತಿ ಪಡೆಯಲಾಯಿತು. ನೀರಾವರಿಗಿಂತ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಡಿಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮುಂಗಾರು ಕಡಿಮೆಯಾಗುವ ಆತಂಕವಿದ್ದು, 213 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗೆ 11 ಎಲಿವೇಟೆಡ್ ಕಾರಿಡಾರ್, ಪ್ರಮುಖ ಆಸ್ತಿಗಳಿಗೆ ತೆರಿಗೆ ವಿನಾಯಿತಿ! ಸಚಿವ ಸಂಪುಟ ಮಹತ್ವದ ನಿರ್ಧಾರ – Kannada News | Karnataka Cabinet Approves 11 Elevated Corridors Worth rs 13262 Cr; Property Tax Waiver for Raj Bhavan, Kanteerava Stadium

ಸಚಿವ ಸಂಪುಟ ಸಭೆಯ ಬಳಿಕ ಹೊರ ತೆರಳುತ್ತಿರುವ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಲ್ಯಾಣ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೃಹತ್ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ಮೂಲಸೌಕರ್ಯಕ್ಕೆ ಬಲ

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆಯ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 75.60 ಕಿಮೀ ಉದ್ದದ 11 ಎತ್ತರಿಸಿದ (Elevated) ಕಾರಿಡಾರ್‌ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 13,262.70 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಅಲ್ಲದೆ, ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಹೆಚ್ಚುವರಿ 2 ಪಥದ ಮೇಲ್ಸೇತುವೆ ಹಾಗೂ ಐಒಸಿ (IOC) ಜಂಕ್ಷನ್ ಬಳಿ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಾಣದ ಪರಿಷ್ಕೃತ ಅಂದಾಜು ಮೊತ್ತ 436.44 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ.

ಪ್ರಮುಖ ಸ್ವತ್ತುಗಳಿಗೆ ತೆರಿಗೆ ವಿನಾಯಿತಿ

ಸಚಿವ ಸಂಪುಟವು ಬೆಂಗಳೂರಿನ ಕೆಲವು ಪ್ರಮುಖ ಐತಿಹಾಸಿಕ ಮತ್ತು ಸರ್ಕಾರಿ ಸ್ವತ್ತುಗಳಿಗೆ ಭಾರಿ ಮೊತ್ತದ ಆಸ್ತಿ ತೆರಿಗೆ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಾಜಭವನ, ಕುಮಾರ ಕೃಪಾ ಅತಿಥಿ ಗೃಹ, ಶ್ರೀ ಕಂಠೀರವ ಕ್ರೀಡಾಂಗಣ ಹಾಗೂ ದಕ್ಷಿಣ ಪಾಲಿಕೆ ವ್ಯಾಪ್ತಿಯ ಕೋರಮಂಗಲ ಕ್ರೀಡಾಂಗಣಕ್ಕೆ ಆಸ್ತಿ ತೆರಿಗೆ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇದರಿಂದ ಸುಮಾರು 81 ಕೋಟಿ ರೂ.ಗಳಷ್ಟು ತೆರಿಗೆ ಮೊತ್ತ ಮನ್ನಾ ಆದಂತಾಗಿದೆ.

ಇತರ ಪ್ರಮುಖ ನಿರ್ಧಾರಗಳು

  • ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ನೂತನ ಕೇಂದ್ರ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ. ಅನುಮೋದನೆ.
  • ಸಾರಿಗೆ ಇಲಾಖೆ: ಸುಪ್ರೀಂ ಕೋರ್ಟ್ ಆದೇಶದಂತೆ 16 ಮೋಟಾರು ವಾಹನ ನಿರೀಕ್ಷಕರ (MVI) ನೇಮಕಾತಿಗೆ ಘಟನೋತ್ತರ ಅನುಮೋದನೆ.
  • ಕಾರವಾರ ವಿಮಾನ ನಿಲ್ದಾಣ: ಕಾರವಾರ ವಿಮಾನ ನಿಲ್ದಾಣದ ಅಭಿವೃದ್ಧಿ ಜವಾಬ್ದಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ವರ್ಗಾಯಿಸಲು ಸಮ್ಮತಿ.

ಇದನ್ನೂ ಓದಿ: ಸಂಪುಟ ಸಭೆಯಲ್ಲಿ ಕಿಡಿ ಹೊತ್ತಿಸಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ತಲೆದಂಡಕ್ಕೆ ಸಚಿವರ ಆಕ್ಷೇಪ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:37 am, Fri, 17 April 26

Source link

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಏಪ್ರಿಲ್ 16ರಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ 7 ವಿಕೆಟ್​​​ಗಳ ಸೋಲನ್ನು ಕಂಡಿದೆ. ಮುಂಬೈ ಇಂಡಿಯನ್ಸ್ ನೀಡಿದ 195 ರನ್​​ಗಳ ಬೃಹತ್ ಮೊತ್ತವನ್ನು ಅನಾಯಾಸವಾಗಿ ಹೊಡೆದು ಹಾಕಿದೆ ಪಂಜಾಬ್ ತಂಡ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಹೋಂ ಗ್ರೌಂಡ್​​ನಲ್ಲೇ ಈ ಸೋಲು ಉಂಟಾಗಿದ್ದು ಮುಂಬೈ ತಂಡಕ್ಕೆ ಭಾರೀ ಮುಖಭಂಗ ಆದಂತೆ ಆಗಿದೆ. ಕ್ವಿಂಟನ್ ಡಿಕಾಕ್ ಅವರ ಶತಕದ ನಡುವೆಯೂ ಮುಂಬೈಗೆ ಗೆಲುವು ಸಿಕ್ಕಿಲ್ಲ.

ಸೋಲಿನ ನಂತರ ಮಾತನಾಡಿದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ಪರಿಸ್ಥಿತಿಯನ್ನು ಸರಿಪಡಿಸಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೇ ಎಂದು ಯೋಚಿಸಬೇಕಿದೆ ಎಂದಿದ್ದಾರೆ. ಹಾರ್ದಿಕ್ ಕ್ಯಾಪ್ಟನ್ಸಿ ಹೋಗಬಹುದೇ ಎಂಬ ಪ್ರಶ್ನೆ ಕೂಡ ಮೂಡಿದೆ.

ಇದನ್ನೂ ಓದಿ: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು

‘ನಾವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೇ ಅಥವಾ ಈಗ ಆಡುತ್ತಿರುವ ರೀತಿಯೇ ಆಡಿ ಪರಿಸ್ಥಿತಿಯನ್ನು ಬದಲಾಯಿಸುವ ಪ್ರಯತ್ನ ಮಾಡಬೇಕೇ ಎಂಬುದನ್ನು ನೋಡಬೇಕಿದೆ. ವೈಕ್ತಿಕವಾಗಿ ಎಡವುತ್ತಿದ್ದೀವಾ, ಗುಂಪಿನಲ್ಲಿ ಎಡವುತ್ತಿದ್ದೀವಾ ಅಥವಾ ನಮ್ಮ ಯೋಜನೆ ಸರಿಯಾಗಿ ಆಗುತ್ತಿಲ್ಲವೇ ಎಂಬಿತ್ಯಾದಿ ವಿಷಯಗಳನ್ನು ನೋಡಬೇಕಿದೆ. ಮುಂದೆ ಏನು ಮಾಡಬಹುದು ಎಂದು ನೋಡೋಣ’ ಎಂದು ಅವರು ಹೇಳಿದರು.
ಪಾಂಡ್ಯ ಕ್ಯಾಪ್ಟನ್ಸಿ ಬಗ್ಗೆ ಈಗಾಗಲೇ ಅಭಿಮಾನಿಗಳಿಂದ ಸಾಕಷ್ಟು ಟೀಕೆ ಕೇಳಿ ಬಂದಿದೆ. ಅವರು ಪ್ರೀತಿ ಬಗ್ಗೆ ಮಾತ್ರ ಗಂಭೀರವಾಗಿದ್ದಾರೆಯೇ ಹೊರತು ಆಟದ ಬಗ್ಗೆ ಗಂಭೀರವಾಗಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಗೆಲುವಿನ ರುಚಿ ಕಾಣಲು ಕ್ಯಾಪ್ಟನ್ಸಿ ಬದಲಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bird Flu: ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ; ಪೌಲ್ಟ್ರಿ ಫಾರಂ ಬಂದ್! – Kannada News | Bengaluru Bird Flu Alert: H5N1 Virus outbreak in poultry farm of Hesaraghatta

ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ

ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಡೆಸಿದ ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ.

ತಾಪಮಾನ ಹೆಚ್ಚಾದಂತೆ ವೇಗವಾಗಿ ಹರಡುತ್ತೆ ವೈರಸ್!

ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಲ್ಲಿಯೂ ಕಂಡು ಬರುತ್ತದೆ. ಈಗ ಇದೇ ವೈರಸ್ ನಗರದಲ್ಲಿ ಕಂಡುಬರುತ್ತಿದ್ದು, ಪೌಲ್ಟ್ರಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಕೋಳಿ ಸಾಕಾಣಿಕೆದಾರರನ್ನು ವೈದ್ಯಾಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಸುತ್ತಮುತ್ತಲಿನ ಕೋಳಿ ಶೆಡ್‌ಗಳಲ್ಲೂ ತಪಾಸಣೆ ನಡೆಸುವಂತೆ ಪಶುವೈದ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಎಚ್ಚರಿಕಾ ನೋಟಿಸ್ ನೀಡಲಾಗಿದೆ. ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೋಳಿ ಅಂಗಡಿಗಳಲ್ಲಿ ವಿಶೇಷ ಪರಿಶೀಲನೆ ನಡೆಯುತ್ತಿದೆ. ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಈ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ ಹಕ್ಕಿ ಜ್ವರ ಮನುಷ್ಯರಿಗೂ ತಗುಲಬಹುದು; ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಮುಂಜಾಗ್ರತಾ ಕ್ರಮಗಳೇನು?

ಇದು ಮನುಷ್ಯರಿಗೂ ಹರಡಬಹುದಾದ್ದರಿಂದ ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಸೋಂಕಿತ ಹಕ್ಕಿಗಳನ್ನು ಸ್ಪರ್ಶಿಸಬಾರದು. ಆಹಾರವನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಹಸಿ ಮೊಟ್ಟೆ ಮತ್ತು ಸರಿಯಾಗಿ ಬೇಯಿಸದ ಮಾಂಸವನ್ನು ತಿನ್ನಬಾರದು. ಕೈಗಳನ್ನು ನಿಯಮಿತವಾಗಿ ತೊಳೆಯುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು ಸುರಕ್ಷಿತ ಕ್ರಮಗಳಾಗಿವೆ.

ವರದಿ: ಮಂಜುನಾಥ್,ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇವರಾಜ್​​ಗೆ ಈ ಇಬ್ಬರು ಹೀರೋಗಳ ಮೇಲಿದೆ ವಿಶೇಷ ಗೌರವ – Kannada News | Devaraj on Chiranjeevi and Balakrishna: Telugu Stars’ Professionalism and Kindness

ಸುದೀರ್ಘ ಚಲನಚಿತ್ರ ಪ್ರಯಾಣವನ್ನು ಹೊಂದಿರುವ ನಟ ದೇವರಾಜ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಪ್ರಮುಖ ಘಟನೆಗಳನ್ನು ಮತ್ತು ತೆಲುಗು ಚಲನಚಿತ್ರೋದ್ಯಮದ ದಿಗ್ಗಜರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ದೇವರಾಜ್ ಅವರು ಚಿರಂಜೀವಿ ಮತ್ತು ನಂದಮೂರಿ ಬಾಲಕೃಷ್ಣ ಅವರ ವ್ಯಕ್ತಿತ್ವಗಳು ಮತ್ತು ವೃತ್ತಿಗೆ ಅವರ ಬದ್ಧತೆಯನ್ನು ಹೊಗಳಿದರು.

ಬಾಲಕೃಷ್ಣ ಅವರ ಶಿಸ್ತು ಮತ್ತು ವೃತ್ತಿಯ ಬಗೆಗಿನ ಬದ್ಧತೆಯನ್ನು ದೇವರಾಜ್ ತುಂಬಾ ಮೆಚ್ಚಿಕೊಂಡರು. ‘ಚಿತ್ರೀಕರಣದ ಆರಂಭದಲ್ಲಿ ಬಾಲಕೃಷ್ಣ ಅವರೊಂದಿಗೆ ಮಾತನಾಡಲು ಹೆದರುತ್ತಿದ್ದೆ. ನಂತರ ಅವರ ಸ್ನೇಹಪರ ಸ್ವಭಾವ ಎಷ್ಟು ಎಂದು ಅರ್ಥವಾಯಿತು. ನರಸಾಪುರ ಅರಣ್ಯದಲ್ಲಿ ಚಿತ್ರೀಕರಣ ಮುಗಿದ ನಂತರ ಬಾಲಕೃಷ್ಣ ಸ್ವತಃ ನನ್ನನ್ನು ಹೋಟೆಲ್‌ಗೆ ಬಿಟ್ಟರು. ನಾನು ಎಂದಿಗೂ ಅದನ್ನು ಮರೆಯುವುದಿಲ್ಲ. ಈ ಘಟನೆ ಬಾಲಕೃಷ್ಣ ಅವರದ್ದು ಎಷ್ಟು ಮಹಾನ್ ವ್ಯಕ್ತಿತ್ವ ಎಂಬುದನ್ನು ತೋರಿಸುತ್ತದೆ’ ಎಂದು ಅವರು ಹೇಳಿದರು.

ಚಿರಂಜೀವಿ ಜೊತೆಗಿನ ತಮ್ಮ ಒಡನಾಟವನ್ನು ದೇವರಾಜ್ ವಿವರಿಸಿದರು. ‘ಚಿರಂಜೀವಿ ಯಾವಾಗಲೂ ತುಂಬಾ ಸ್ನೇಹಪರ ಮತ್ತು ಗೌರವಾನ್ವಿತ ವ್ಯಕ್ತಿ. ಚಿತ್ರದ ಶೂಟಿಂಗ್ ಒಂದರ ಘಟನೆ ಇದು. ತಮಿಳುನಾಡು-ಕೇರಳ ಗಡಿಯಲ್ಲಿ ರೈಲಿನಲ್ಲಿ ಶೂಟಿಂಗ್ ನಡೆಯಿತು. ಶೂಟಿಂಗ್ ವಿಳಂಬವಾದ ಕಾರಣ, ಮರುದಿನವೂ ಅವರು ಕೆಲಸ ಮಾಡಬೇಕಾಯಿತು. ಕೆಲಸ ಮುಗಿದ ನಂತರ, ಚಿರಂಜೀವಿ ನನಗೆ ಊಟದ ವ್ಯವಸ್ಥೆ ಮಾಡಿದರು. ಒಬ್ಬ ಸ್ಟಾರ್ ನಾಯಕನಾಗಿ ಇದನ್ನೆಲ್ಲಾ ಮಾಡುವ ಅಗತ್ಯವಿಲ್ಲದಿದ್ದರೂ, ಚಿರಂಜೀವಿ ತೋರಿಸಿದ ಈ ಆತಿಥ್ಯ ಮತ್ತು ಮಾನವೀಯತೆ’ ನನ್ನ ಮೇಲೆ ಪ್ರಭಾವ ಬೀರಿತು ಎಂದಿದ್ದಾರೆ ದೇವರಾಜ್ .

ಇದನ್ನೂ ಓದಿ: ‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

ತೆಲುಗು ಆಫರ್ ಕಡಿಮೆ ಆದಾಗ ಚಿರಂಜೀವಿ ಅವರು ತೆಲುಗು ಚಿತ್ರಗಳಲ್ಲಿ ಏಕೆ ನಟಿಸುತ್ತಿಲ್ಲ ಎಂದು ಕೇಳಿದ್ದಾಗಿ ದೇವರಾಜ್ ನೆನಪಿಸಿಕೊಂಡರು. ಒಬ್ಬ ಸ್ಟಾರ್ ನಾಯಕ ಸಮಸ್ಯೆಗಳನ್ನು ಸ್ವತಃ ಕೇಳಿ ತಿಳಿದುಕೊಳ್ಳುವುದು ಅಸಾಮಾನ್ಯ ಎಂದು ದೇವರಾಜ್ ಹೇಳಿದರು. ದೇವರಾಜ್ ಇತ್ತೀಚೆಗೆ ನಟನೆಯನ್ನು ಕಡಿಮೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:12 am, Fri, 17 April 26

Source link

Video: ಕೆಲಸ ಕಳೆದುಕೊಂಡ ಸ್ನೇಹಿತನಿಗೆ ಬೇಕರಿ ತೆರೆಯಲು ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ ಫ್ರೆಂಡ್ – Kannada News | Friendship Beyond Words: Man Gifts Rs 37 Lakh Car to Help Friend Rebuild Life

ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹಿತ ನೀಡಿದ ‘ಕೊಡುಗೆ’ ಈಗ ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಸ್ನೇಹವೆಂಬುದು ಸುಖ ಬಂದಾಗ ಜತೆಗಿರುವುದು ಕಷ್ಟ ಬಂದಾಗಿ ಓಡಿ ಹೋಗುವುದಲ್ಲ, ಬದಲಾಗಿ ಆ ಕಷ್ಟದಿಂದ ಮೇಲೆತ್ತಲು ತನಗಾದ ಸಹಾಯ ಮಾಡುವುದು, ಇಲ್ಲೊಬ್ಬ ವ್ಯಕ್ತಿ ಕೆಲಸ ಕಳೆದುಕೊಳ್ಳುತ್ತಾನೆ, ಆತನಿಗೆ ಸಹಾಯ ಮಾಡಲು ಸ್ನೇಹಿತನೊಬ್ಬ ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟಿದ್ದಾನೆ.

ಅವನೊಬ್ಬ ಸಾಮಾನ್ಯ ಉದ್ಯೋಗಿ, ಒಂದು ದಿನ ಇದ್ದಕ್ಕಿದ್ದಂತೆ ಕೆಲಸ ಹೋಯಿತು. ಕೈಯಲ್ಲಿ ಹಣವಿಲ್ಲ, ಮುಂದೆ ಏನು ಮಾಡಬೇಕೆಂಬ ದಾರಿಯೂ ತೋಚಲಿಲ್ಲ. ಈ ನೋವಿನಲ್ಲಿದ್ದಾಗ ಅವನಿಗೆ ನೆರವಾಗಿದ್ದು ಅವನ ಬಾಲ್ಯದ ಗೆಳೆಯ. ಆ ಗೆಳೆಯ ಕೇವಲ ಸಾಂತ್ವನದ ಮಾತುಗಳನ್ನು ಹೇಳಿ ಸುಮ್ಮನಾಗಲಿಲ್ಲ. ಗೆಳೆಯನಿಗೆ ಬೇಕರಿ ವ್ಯವಹಾರ ಪ್ರಾರಂಭಿಸುವ ಆಸೆ ಇತ್ತು, ಆದರೆ ಬಂಡವಾಳವಿರಲಿಲ್ಲ. ತಾನು ಅತಿ ಹೆಚ್ಚು ಪ್ರೀತಿಸುತ್ತಿದ್ದ, ಬರೋಬ್ಬರಿ 37 ಲಕ್ಷ ರೂ. ಮೌಲ್ಯದ ತನ್ನ ಐಷಾರಾಮಿ ಕಾರನ್ನೇ ಗೆಳೆಯನ ಕೈಗಿಟ್ಟು ಅದರೊಳಗೆ ಬೇಕರಿ ನಡೆಸುವಂತೆ ಹೇಳಿದ್ದಾನೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ! ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ – Kannada News | IPL Ticket Black Marketing Racket Busted in Bengaluru: KSCA Member Involved, CCB Seizes Tickets Worth 17 Lakhs

ಐಪಿಎಲ್ ಟಿಕೆಟ್ (ಸಾಂದರ್ಭಿಕ ಚಿತ್ರ) ಹಾಗೂ ಆರೋಪಿ ಚಂದ್ರಶೇಖರ್Image Credit source: tv9

ಬೆಂಗಳೂರು, ಏಪ್ರಿಲ್ 17: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೊಬ್ಬನೇ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಎಸ್​ಸಿಎ ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ ಎಸಗುತ್ತಿದ್ದ ಎಂಬುದು ಸಿಸಿಬಿ ವಿಚಾರಣೆ ವೇಳೆ ಬಯಲಾಗಿದೆ.

ಸಿಸಿಬಿ ಕಾರ್ಯಾಚರಣೆ ವೇಳೆ ಲಾಕ್ ಆದ ಆರೋಪಿಗಳು

ಸಿಸಿಬಿ ಡಿಸಿಪಿ ಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. 15 ಸಾವಿರ ರೂಪಾಯಿ ಬೆಲೆಯ ಟಿಕೆಟ್‌ಗಳನ್ನು ಈತ ಬರೋಬ್ಬರಿ 19 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಸೆರೆಹಿಡಿದಿದ್ದಾರೆ. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಆಘಾತಕಾರಿಯಾಗಿದ್ದು, ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಎಂಬುವವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.

17 ಲಕ್ಷ ರೂ. ಮೌಲ್ಯದ ಟಿಕೆಟ್ ಖರೀದಿಸಿ ಅಕ್ರಮ

ಆರೋಪಿ ಗಣೇಶ್ ಹರಿಕೇಶ್, ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದ. ಆ ಬಳಿಕ ಚಂದ್ರಶೇಖರ್ ಮೂಲಕ ಅವುಗಳನ್ನು ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆರ್‌ಸಿಬಿಯ ಮೊದಲ ಪಂದ್ಯದಲ್ಲಿ ಇವರು 81 ಟಿಕೆಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆಯಾಗಿ 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಿದ್ದು, ಅವುಗಳ ಪೈಕಿ 100 ಟಿಕೆಟ್​ಗಳನ್ನು ಬ್ಲಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

  • 15,000 ರೂ. ಮೌಲ್ಯದ ಐಪಿಎಲ್ ಟಿಕೆಟ್‌ಗಳನ್ನು 19,000 ರೂ.ಗೆ ಮಾರಾಟ.
  • ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಮತ್ತು ಹೋಟೆಲ್ ಕ್ಯಾಪ್ಟನ್ ಚಂದ್ರಶೇಖರ್ ಪ್ರಮುಖ ಆರೋಪಿಗಳು.
  • ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಒಟ್ಟು 181 ಐಪಿಎಲ್ ಟಿಕೆಟ್‌ಗಳ ಅಕ್ರಮ ವ್ಯವಹಾರ ಪತ್ತೆ.
  • ಟಿಕೆಟ್ ಪೂರೈಸಿದ ಖಾಸಗಿ ಕಂಪನಿಗಳಿಗೂ ಸಿಸಿಬಿಯಿಂದ ತನಿಖೆಯ ಬಿಸಿ.

ಇದನ್ನೂ ಓದಿ: ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಸದ್ಯ ಚಂದ್ರಶೇಖರ್ ಬಂಧನವಾಗುತ್ತಿದ್ದಂತೆ ಗಣೇಶ್ ಹರಿಕೇಶ್ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಟಿಕೆಟ್ ಪೂರೈಸಿದ ಜೀನಿ ಸೇರಿದಂತೆ ಎರಡು ಖಾಸಗಿ ಸಂಸ್ಥೆಗಳಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version