ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್ – Kannada News | How Urban Challenge Fund can help cities become economic growth engine

ನವದೆಹಲಿ, ಫೆಬ್ರುವರಿ 15: ನಗರಗಳನ್ನು ಆರ್ಥಿಕ ಅಭಿವೃದ್ಧಿ ಎಂಜಿನ್ ಆಗಿ ಮಾರ್ಪಡಿಸಲು ಕೇಂದ್ರ ಸಂಪುಟವು ಅರ್ಬನ್ ಚಾಲೆಂಜ್ ಫಂಡ್ (Urban Challenge Fund) ಅನ್ನು ಆರಂಭಿಸಿದೆ. ಇದಕ್ಕಾಗಿ ಒಂದು ಲಕ್ಷ ಕೋಟಿ ರೂ ಮೀಸಲಿರಿಸಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ದೇಶದ ವಿವಿಧ ನಗರಗಳಲ್ಲಿ ಒಟ್ಟಾರೆ ನಾಲ್ಕು ಲಕ್ಷ ಕೋಟಿ ರೂ ಹೂಡಿಕೆ ಆಗಲಿದೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಫಂಡಿಂಗ್ ಸಾಂಪ್ರದಾಯಿಕ ಅನುದಾನ ಆಧಾರಿತವಾಗಿರುವುದಿಲ್ಲ. ಮಾರುಕಟ್ಟೆ ಮತ್ತು ಸುಧಾರಣೆ ಆಧಾರಿತವಾದ ನಗರ ಅಭಿವೃದ್ಧಿ ಮಾದರಿಯನ್ನು ಅನುಸರಿಸಲಾಗುತ್ತದೆ.

ನಗರಗಳಲ್ಲಿನ ಯೋಜನೆಗಳು ಸರ್ಕಾರಿ ಅನುದಾನಗಳ ಮೇಲೆ ಅವಲಂಬಿತವಾಗಿರುವುದನ್ನು, ಮತ್ತು ಅನುಷ್ಠಾನದಲ್ಲಿ ಶಿಸ್ತಿನ ಕೊರತೆ ಇರುವುದನ್ನು ತಪ್ಪಿಸಲು ಈ ಹೊಸ ಮಾದರಿ ಕಂಡುಕೊಳ್ಳಲಾಗಿದೆ. ಸುಧಾರಣೆ, ಸ್ವಾವಲಂಬನೆಯನ್ನು ಉತ್ತೇಜಿಸಲಾಗುತ್ತದೆ. ನಗರ ಮೂಲಸೌಕರ್ಯ ಯೋಜನೆಗಳಲ್ಲಿ ಖಾಸಗಿ ಹೂಡಿಕೆಗೂ ಉತ್ತೇಜಿಸಲಾಗುತ್ತದೆ.

ಇದನ್ನೂ ಓದಿ: ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ

ಕೇಂದ್ರದಿಂದ ಶೇ. 25 ಫಂಡಿಂಗ್; ಉಳಿದವು?

ಹತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರಗಳು ಅರ್ಬನ್ ಚಾಲೆಂಜ್ ಫಂಡ್ ಪಡೆಯಲು ಅರ್ಹವಾಗಿರುತ್ತವೆ.

ಆಯ್ಕೆಯಾಗುವ ಯೋಜನೆಗಳಿಗೆ ಶೇ. 25ರಷ್ಟು ಫಂಡಿಂಗ್ ಅನ್ನು ಕೇಂದ್ರ ಒದಗಿಸುತ್ತದೆ. ಮುನಿಸಿಪಾಲ್ ಬಾಂಡ್, ಬ್ಯಾಂಕ್ ಸಾಲ, ಪಬ್ಲಿಕ್-ಪ್ರೈವೇಟ್ ಪಾಲುದಾರಿಕೆಗಳ ಮೂಲಕ ಕನಿಷ್ಠ ಶೇ. 50ರಷ್ಟು ಫಂಡಿಂಗ್ ಅನ್ನು ನಗರಗಳು ಸೃಷ್ಟಿಸಿಕೊಳ್ಳಬೇಕು. ಇನ್ನುಳಿದ ಹಣವನ್ನು ರಾಜ್ಯಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇತರರ ಮೂಲಕ ಪಡೆಯಬೇಕು.

ಪ್ರಾಜೆಕ್ಟ್​ಗಳಿಗೆ ಸುಮ್ಮನೆ ಫಂಡಿಂಗ್ ಸಿಕ್ಕೋದಿಲ್ಲ

ಪ್ರಾಜೆಕ್ಟ್​ಗಳಿಗೆ ಸುಮ್ಮನೆ ಫಂಡಿಂಗ್ ಸಿಕ್ಕೋದಿಲ್ಲ. ಯೋಜನೆಯಿಂದ ಆರ್ಥಿಕ ಪರಿಣಾಮ, ಸುಸ್ಥಿರತೆ, ಹವಾಮಾನ ಭದ್ರತೆ, ಸುಧಾರಣಾ ಕ್ರಮಗಳ ಅನುಷ್ಠಾನ, ದೀರ್ಘಾವಧಿ ಹಣಕಾಸು ಸ್ವಾವಲಂಬನೆ ಹೇಗೆ ಸಾಧಿಸಲಾಗುತ್ತದೆ ಎಂಬುದನ್ನು ಮನವರಿಕೆ ಮಾಡುವ ಪ್ರಾಜೆಕ್ಟ್​ಗಳಿಗೆ ಫಂಡಿಂಗ್ ಸಿಗುತ್ತದೆ. ಅದರಲ್ಲೂ ಪ್ರಾಜೆಕ್ಟ್​ನ ಬೆಳವಣಿಗೆ ಹೇಗೆ ಆಗುತ್ತಿದೆ ಎಂದು ನೋಡಿಕೊಂಡು ಹಂತ ಹಂತವಾಗಿ ಫಂಡಿಂಗ್ ಕೊಡಲಾಗುತ್ತದೆ. ಸುಧಾರಣೆಗಳನ್ನು ಅಳವಡಿಸಿಕೊಳ್ಳಲು ವಿಫಲವಾಗುವ ನಗರಗಳಿಗೆ ಮತ್ತಷ್ಟು ಫಂಡಿಂಗ್ ಸಿಕ್ಕೋದಿಲ್ಲ.

ಇದನ್ನೂ ಓದಿ: ಫೆ. 16ರಿಂದ ಎಐ ಇಂಪ್ಯಾಕ್ಟ್ ಸಮಿಟ್; ದಕ್ಷಿಣ ದೇಶಗಳ ಪ್ರಬಲ ಉಪಸ್ಥಿತಿ; 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ

ನಗರ ಸ್ಥಳೀಯ ಸಂಸ್ಥೆಗಳಿಗೆ ಯಾರು ಕೊಡುತ್ತಾರೆ ಸಾಲ?

ನಗರ ಸ್ಥಳೀಯ ಸಂಸ್ಥೆಗಳು ಹೆಚ್ಚಾಗಿ ಸರ್ಕಾರಿ ಅನುದಾನ ಪಡೆದು ಜೀವಂತವಾಗಿರುವಂತಹವು. ಇವುಗಳಿಗೆ ಕ್ರೆಡಿಟ್ ಹಿಸ್ಟರಿ ಇಲ್ಲದಿರುವುದರಿಂದ ಹಣಕಾಸು ಸಂಸ್ಥೆಗಳಿಂದ ಸಾಲ ಸಿಗುವುದು ಕಷ್ಟ. ಅದಕ್ಕಾಗಿ ಕೇಂದ್ರ ಸಂಪುಟವು 5,000 ರೂಗಳ ಕ್ರೆಡಿಟ್ ರೀಪೇಮೆಂಟ್ ಗ್ಯಾರಂಟಿ ಸ್ಕೀಮ್ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು – Kannada News | Three Die After Motorcycle Plunges Off Washed Out Bridge in Madhya Pradesh

ಮಧ್ಯಪ್ರದೇಶ, ಫೆಬ್ರವರಿ 15: ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ(Bridge)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು.

ಮುರಿದ ಸೇತುವೆ ಮೇಲೆ ಪ್ರವೇಶಿಸದಂತೆ ವಾಹನಗಳ ಸಂಚಾರವನ್ನು ತಡೆಯಲು ಯಾವುದೇ ಬ್ಯಾರಿಕೇಡಿಂಗ್ ಅಥವಾ ಎಚ್ಚರಿಕೆ ಫಲಕವನ್ನು ಅಳವಡಿಸಿರಲಿಲ್ಲ. ಕತ್ತಲೆಯಲ್ಲಿ ಸೇತುವೆ ಹಾನಿಗೊಳಗಾಗಿರುವುದನ್ನು ಅರಿಯದ ಅವರು, ಅತಿ ವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿ ನೇರವಾಗಿ ಮುರಿದ ಭಾಗಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಮೋಟಾರ್ ಸೈಕಲ್ ಸೇತುವೆಯ ಕುಸಿದ ಭಾಗದ ಕೆಳಗೆ ಸಿಲುಕಿಕೊಂಡಿತ್ತು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು 21 ವರ್ಷದ ಅಜಯ್ ಘೋಸಿ, 21 ವರ್ಷದ ಅಮಿತ್ ಕುರ್ಮಿ ​​ಮತ್ತು 22 ವರ್ಷದ ಪವನ್ ಕುರ್ಮಿ ​​ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಅಪಘಾತದ ನಂತರ ಮೂವರು ಸ್ಥಳದಲ್ಲೇ ಸಾಕಷ್ಟು ಸಮಯದವರೆಗೆ ಇದ್ದರು ಮತ್ತು ಜನರು ಅವರನ್ನು ಗಮನಿಸುವ ಹೊತ್ತಿಗೆ ಅವರು ಆಗಲೇ ಮೃತಪಟ್ಟಿದ್ದರು.

ಮತ್ತಷ್ಟು ಓದಿ: ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಈ ಘಟನೆಯು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ವರ್ಷದ ಮಳೆಯಲ್ಲಿ ಸೇತುವೆ ಹಾನಿಗೊಳಗಾಗಿದ್ದರೂ, ಅಧಿಕಾರಿಗಳು ಮಾರ್ಗವನ್ನು ಮುಚ್ಚಲಿಲ್ಲ ಅಥವಾ ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸಿರಲಿಲ್ಲ ಏಕೆ ಎಂಬುದು ಪ್ರಶ್ನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಹಿಳೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​: ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ – Kannada News | Twists in Hassan Missing Case: Priyanka and David Under Police Custody After Elopement

ಹಾಸನ/ ತುಮಕೂರು, ಫೆಬವರಿ 15: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾಳನ್ನು ಪರಪುರುಷನ ಜೊತೆ ಪತ್ತೆ ಮಾಡಿರುವ ಪೊಲೀಸರು, ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ವಶಕ್ಕೆ ಪಡೆದು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ತ್ತೊಂದೆಡೆ ಊರಿಗೆ ಏಕಪತ್ನಿ ವ್ರತಸ್ಥನಾಗಿ ಕಂಡವನ ಮನೆಯಲ್ಲಿಯೇ ಪ್ರಿಯಾಂಕಾ ಪತ್ತೆಯಾಗಿರೋದು ಸ್ಥಳೀಯರು ಹೌಹಾರುವಂತೆ ಮಾಡಿದೆ. ಸ್ವಾರಿ ಗರ್ಲ್ಸ್​, ನನ್ನ ಹೆಂಡತಿ ಫುಲ್ ಸ್ಟ್ರಿಕ್ಟ್ ಎಂದು ಬೈಕ್​​ ಮೇಲೆ ಸ್ಟಿಕ್ಕರ್​​ ಹಾಕಿಸಿಕೊಂಡಿದ್ದ ಈತ, ಅದರ ಟ್ಯಾಂಕ್​​ ಮೇಲೆ ಡಾರ್ಲಿಂಗ್​​ ಅಂತಲೂ ಬರೆಸಿದ್ದ. ಖುದ್ದು ಮನೆ ಮಾಲೀಕ ಹೇಳುವಂತೆ ಬೆಕ್ಕಿನಂತೆ ಓಡಾಡುತಿದ್ದ ಈತನ ಮನೆಯಲ್ಲಿ ಮಹಿಳೆ ಪ್ರಿಯಾಂಕಾ ಸೇರಿದ್ದೇಗೆ ಎಂಬ ಗೊಂದಲ ಮುಂದುವರಿದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯ ಇನ್ನಷ್ಟೇ ಹೊರ ಬರಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಿವ ಶಂಭೋ ಸ್ವಯಂಭೋ: ಶಿವರಾತ್ರಿಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಹಾಡು – Kannada News | Shiva Shambho Swayambho: Hombale Films releases new AI song on Maha Shivaratri

ಸಿನಿಮಾ ನಿರ್ಮಾಣ ಕ್ಷೇತ್ರದಲ್ಲಿ ಈಗಾಗಲೇ ಅನೇಕ ದಾಖಲೆಗಳನ್ನು ಬರೆದಿರುವ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಹೊಸ ಹೆಜ್ಜೆ ಇಟ್ಟಿದೆ. ಶಿವರಾತ್ರಿ (Maha Shivaratri) ಹಬ್ಬದ ಪ್ರಯುಕ್ತ ಹೊಸ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಶಿವನ ಕುರಿತಾದ ಈ ಹಾಡನ್ನು ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಮೂಲಕ ಅನಾವರಣ ಮಾಡಲಾಗಿದ್ದು, ಶಿವನ ಭಕ್ತರಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿನಲ್ಲಿ ಎಐ ಬಳಕೆ ಗಮನ ಸೆಳೆಯುತ್ತಿದೆ. ‘ಶಿವ ಶಂಭೋ ಸ್ವಯಂಭೋ’ (Shiva Shambho Swayambho) ಹಾಡಿನ ವಿಶೇಷತೆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅದ್ದೂರಿ ಸಿನಿಮಾಗಳಿಗೆ ಬಂಡವಾಳ ಹೂಡುವುದು ಮಾತ್ರವಲ್ಲದೇ ಸಂಗೀತ ಕ್ಷೇತ್ರಕ್ಕೂ ‘ಹೊಂಬಾಳೆ ಫಿಲ್ಮ್ಸ್’ ಪಾದಾರ್ಪಣೆ ಮಾಡಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಮಹಾಶಿವರಾತ್ರಿಯ ಪ್ರಯುಕ್ತ ‘ಶಿವ ಶಂಭೋ ಸ್ವಯಂಭೋ’ ಎಂಬ ನವೀನ ಭಕ್ತಿಗೀತೆಯನ್ನು ಜನರಿಗೆ ಅರ್ಪಿಸಲಾಗಿದೆ. ಭಕ್ತರಿಗೆ ಶಿವರಾತ್ರಿಯ ಉಡುಗೊರೆ ರೀತಿಯಲ್ಲಿ ಈ ಹಾಡು ರಿಲೀಸ್ ಆಗಿದೆ.

ಪೂಜ್ಯ ಸ್ವಾಮಿ ದಯಾನಂದ ಸರಸ್ವತಿ ಅವರ ಮೂಲ ಸಾಹಿತ್ಯಕ್ಕೆ, ನಾರಾಯಣ ಶರ್ಮ ಮತ್ತು ಸಚಿನ್ ಬಾಗ್ಲಿ ಅವರು ಸಮಕಾಲೀನ ಶೈಲಿಯಲ್ಲಿ ಸಂಗೀತ ಸಂಯೋಜಿಸಿದ್ದಾರೆ. ಆ ಮೂಲಕ ಸಂಗೀತದ ನಾವೀನ್ಯತೆಯನ್ನು ಪರಿಚಯಿಸಲಾಗಿದೆ. ಇದು ಈ ಹಾಡಿನ ಮೊದಲ ವಿಶೇಷವಾಗಿದೆ.

‘ಶಿವ ಶಂಭೋ ಸ್ವಯಂಭೋ’ ಹಾಡು:

ಈ ಹಾಡಿನಲ್ಲಿ AI ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಹಾಡಿನ ದೃಶ್ಯ ವೈಭವವನ್ನು ಕಟ್ಟಿಕೊಡಲಾಗಿದೆ. ಹೊಂಬಾಳೆ ಸಂಸ್ಥೆಯ ಆಂತರಿಕ ವಿಎಫ್‌ಎಕ್ಸ್ ವಿಭಾಗವಾದ ‘ಅಸ್ತ್ರ ಸ್ಟುಡಿಯೋ’ ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ ಇದನ್ನು ಸಿದ್ಧಪಡಿಸಿದೆ. ಬಿಡುಗಡೆಗೆ ಮುನ್ನವೇ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಹಾಡಿನ ಪ್ರೋಮೋ 6 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಪಡೆದು ದಾಖಲೆ ಬರೆದಿದೆ.

ಇದನ್ನೂ ಓದಿ: ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ

ಇದು ತಮ್ಮ ಹೊಸ ಮೈಲಿಗಲ್ಲು ಎಂದು ‘ಹೊಂಬಾಳೆ ಫಿಲ್ಮ್ಸ್’ ಹೇಳಿದೆ. ಕೇವಲ ಸಿನಿಮಾಗಳಿಗೆ ಸೀಮಿತವಾಗದೆ, ಸಮಗ್ರ ಮನರಂಜನಾ ವ್ಯವಸ್ಥೆಯನ್ನು ನಿರ್ಮಿಸುವ ಉದ್ದೇಶದಿಂದ ‘ಹೊಂಬಾಳೆ ಫಿಲ್ಮ್ಸ್’ ಈ ಹೊಸ ಹೆಜ್ಜೆ ಇಟ್ಟಿದೆ. ಸಂಪ್ರದಾಯ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಈ ಅಪೂರ್ವ ಸಮ್ಮಿಲನವು ಯುವ ಪೀಳಿಗೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ‘ಹೊಂಬಾಳೆ ಫಿಲ್ಮ್ಸ್’ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Solar Eclipse 2026: ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Pisces by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೀನ ರಾಶಿಯವರ ಮೇಲೆ ಬೀರುವ ಪ್ರಭಾವದ ಕುರಿತು ಮಾಹಿತಿ ನೀಡಿದ್ದಾರೆ. ಮೀನ ರಾಶಿಯವರು ಸಾಡೇ ಸಾತಿಯ ಗರ್ಭ ಭಾಗದಲ್ಲಿರುವುದರಿಂದ ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಆದಾಯದಲ್ಲಿ ಏರಿಕೆ ಮತ್ತು ಉದ್ಯೋಗದಲ್ಲಿ ಶುಭ ಫಲಗಳ ಸಾಧ್ಯತೆಯಿದೆ, ಕೆಲವರಿಗೆ ಉದ್ಯೋಗ ಬದಲಾವಣೆಯ ಯೋಗವಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾದರೂ ಚೇತರಿಕೆ ಕಾಣುವಿರಿ.

ಮಾನಸಿಕವಾಗಿ ಆಪ್ತರಿಂದ ತಪ್ಪು ಕಲ್ಪನೆಗಳಿಗೆ ಒಳಗಾಗುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ಶುಭವಾಗಲಿದ್ದು, ಶಿಕ್ಷಣದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ. ರಾಜಕೀಯ ವ್ಯಕ್ತಿಗಳಿಗೆ ಶುಭ ಫಲಗಳಿದ್ದು, ಕೃಷಿ ಮತ್ತು ಭೂಮಿಯಿಂದ ಲಾಭವಾಗಲಿದೆ. ಸಾಲ ವಸೂಲಿಯಾಗುವ ಸಾಧ್ಯತೆಯಿದೆ. ಆದರೆ, ಹೊಸ ಹೂಡಿಕೆ ಮತ್ತು ಪಾಲುದಾರಿಕೆಯಲ್ಲಿ ಜಾಗರೂಕರಾಗಿರುವುದು ಉತ್ತಮ. ಮಾನಸಿಕ ನೆಮ್ಮದಿ ಕಡಿಮೆಯಾಗುವ ಸಾಧ್ಯತೆಯೂ ಇರುವುದರಿಂದ, ಹನುಮನಿಗೆ ತೈಲಾಭಿಷೇಕ ಮತ್ತು ಪಂಚ ದೀಪಗಳ ದಾನ ಮಾಡುವುದು ಹಾಗೂ ವಿನಾಯಕನ ಪೂಜೆ ಮತ್ತು “ಓಂ ಗಂ ಗಣಪತಯೇ ನಮಃ” ಮಂತ್ರ ಜಪಿಸುವುದರಿಂದ ಗ್ರಹಣ ದೋಷಗಳು ನಿವಾರಣೆಯಾಗುತ್ತವೆ.

ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು – Kannada News | Mandya Chemical Tank Explosion: 2 Workers Dead During Kirti Factory Relocation

ಕೆಮಿಕಲ್ ಟ್ಯಾಂಕ್ ಸ್ಫೋಟImage Credit source: Tv9 Kannada

ಮಂಡ್ಯ/ ಬೆಂಗಳೂರು, ಫೆಬ್ರವರಿ 15: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ.

4 ವರ್ಷಗಳ ಹಿಂದೆಯೂನಡೆದಿತ್ತು ಅವಘಡ

ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆಯೂ ಅವಘಡ ನಡೆದಿತ್ತು. ರಾಸಾಯನಿಕ ಸೋರಿಕೆಯಾಗಿ‌ ನೂರಾರು ಎಕರೆ ಬೆಳೆ ಹಾನಿಯ ಜೊತೆಗೆ ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ವೇಳೆ ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿದ್ದು, ಹೀಗಾಗಿ ಕಾರ್ಖಾನೆyನ್ನ ಸದ್ಯ ಬೇರೆಡೆ ಸ್ಥಳಾಂತರ ಮಾಡಿಸಲಾಗುತ್ತಿತ್ತು. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇದ್ದಿದ್ದರಿಂದ ಮತ್ತೆ ದುರಂತ ನಡೆದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:  ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ; 11 ಜನರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟ: ನವ ದಂಪತಿಗೆ ಗಾಯ

ಗ್ಯಾಸ್ ಸಿಲಿಂಡರ್ ಸೋರಿಕೆ ಹಿನ್ನೆಲೆ ಉಂಟಾದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್​​ನಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಇತ್ತೀಚೆಗೆ ಮದುವೆಯಾಗಿದ್ದ ಬಾಗೇಪಲ್ಲಿ ಮೂಲದ ದಂಪತಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕೃಷ್ಣಮ್ಮ ಮತ್ತು ರಾಜು ಗಾಯಾಳುಗಳಾಗಿದ್ದು, ಸ್ಥಳೀಯರು ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ.

ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು ಆಡಿರಲೇಬೇಕು. ಅಂದರೆ ಉಭಯ ತಂಡಗಳು ಕನಿಷ್ಠ 30 ಎಸೆತಗಳನ್ನು ಎದುರಿಸಿದರೆ ಮಾತ್ರ ಡಿಎಲ್​​​ಎಸ್​ ನಿಯಮದ ಪ್ರಕಾರ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

  • ಕನಿಷ್ಠ ಓವರ್‌ಗಳು: ಪಂದ್ಯದ ಅಧಿಕೃತ ಫಲಿತಾಂಶ ಘೋಷಿಸಲು ಉಭಯ ತಂಡಗಳು ಕನಿಷ್ಠ ತಲಾ 5 ಓವರ್‌ಗಳನ್ನು ಆಡಲೇಬೇಕು.
  • ಪರಿಸ್ಥಿತಿ: ಮಳೆಯಿಂದಾಗಿ ಪಂದ್ಯವು ಸ್ಥಗಿತಗೊಂಡರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡ (ಉದಾಹರಣೆಗೆ ಭಾರತ) ಕನಿಷ್ಠ 5 ಓವರ್‌ಗಳನ್ನು ಪೂರ್ಣಗೊಳಿಸಿದರೆ ಮಾತ್ರ DLS ವಿಧಾನದಡಿ ವಿಜೇತರನ್ನು ನಿರ್ಧರಿಸಲು ಸಾಧ್ಯವಾಗುತ್ತದೆ.
  • ಪಂದ್ಯ ರದ್ದು: ಒಂದು ವೇಳೆ ಮಳೆಯ ಕಾರಣದಿಂದ ಎರಡೂ ತಂಡಗಳು ತಲಾ 5 ಓವರ್‌ಗಳನ್ನು ಆಡಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ‘ರದ್ದು’ ಎಂದು ಘೋಷಿಸಲಾಗುತ್ತದೆ.
  • ಮೀಸಲು ದಿನ: ಗ್ರೂಪ್ ಹಂತದ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇರುವುದಿಲ್ಲ. ಪಂದ್ಯವನ್ನು ನಿಗದಿತ ದಿನದಂದೇ ಮುಗಿಸಬೇಕಾಗುತ್ತದೆ.
  • ಒಂದು ಅಂಕ: ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದೇ ಅಂಕಗಳನ್ನು ಪಡೆಯಲಿದ್ದಾರೆ.

ಅಂದರೆ ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಫಲಿತಾಂಶ ನಿರ್ಧಾರವಾಗಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​​ಗಳನ್ನು ಆಡಲೇಬೇಕು. ಉದಾಹರಣೆಗೆ…

ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿ 20 ಓವರ್​​ಗಳಲ್ಲಿ 150 ರನ್​​ಗಳಿಸಿದೆ ಎಂದಿಕೊಟ್ಟುಕೊಳ್ಳಿ. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 5 ಓವರ್​​ಗಳಲ್ಲಿ 50 ರನ್​​ ಗಳಿಸಿದ್ದಾಗ ಮಳೆ ಬಂದು ಪಂದ್ಯ ಸ್ಥಗಿತಗೊಂಡರೆ ಡಿಎಲ್​​ಎಸ್ ನಿಯಮದಡಿ ಯಾವ ತಂಡ ಹೆಚ್ಚು ರನ್​​ಗಳಿಸಿದೆ ಎಂಬ ಆಧಾರದ ಮೇಲೆ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಪಾಕಿಸ್ತಾನ್ ನೀಡಿದ ಗುರಿಯನ್ನು ಬೆನ್ನತ್ತುವಾಗ ಮಳೆ ಬಂದು ದ್ವಿತೀಯ ಇನಿಂಗ್ಸ್ 4.5 ಓವರ್​​ಗಳಿಗೆ ಸೀಮಿತವಾದರೆ ಡಿಎಲ್​​ಎಸ್ ನಿಯಮವನ್ನು ಅನ್ವಯಿಸುವುದಿಲ್ಲ. ಬದಲಾಗಿ ಪಂದ್ಯವನ್ನು ಮುಂದುವರೆಸಲು ಅವಕಾಶ ಇದೆಯೇ ಎಂದು ನೋಡಲಾಗುತ್ತದೆ. ಇದಾಗ್ಯೂ ಪಂದ್ಯವನ್ನು ಮುಂದುವರೆಸಲು ಸಾಧ್ಯವಿಲ್ಲದಿದ್ದರೆ ಮಾತ್ರ ಮ್ಯಾಚ್ ಅನ್ನು ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..!

ಅಂದರೆ ಇಲ್ಲಿ ಎರಡೂ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿದ್ದರೆ ಮಾತ್ರ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶವನ್ನು ನಿರ್ಧರಿಸಲು ಅವಕಾಶವಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ ಯಾರು ವಿಜಯಿ ಎಂದು ನಿರ್ಧಾರವಾಗಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​​ಗಳ ಇನಿಂಗ್ಸ್ ಆಡಲೇಬೇಕು.

Source link

ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ – Kannada News | Trusted Tech Alliance formed by 15 companies, including Jio, Anthropic, Ericsson

ನವದೆಹಲಿ, ಫೆಬ್ರುವರಿ 15: ಎಐ ಸೆಕ್ಟರ್ ಬಹಳ ವೇಗವಾಗಿ ಬೆಳವಣಿಗೆ ಹೊಂದುತ್ತಿರುವಂತೆಯೇ ಜಾಗತಿಕವಾಗಿ ಸಹಭಾಗಿತ್ವ, ಹೊಂದಾಣಿಕೆ, ಮೈತ್ರಿಗಳು ಏರ್ಪಡುವ ಟ್ರೆಂಡ್ ಶುರುವಾದಂತಿದೆ. ಜಿಯೋ ಪ್ಲಾಟ್​ಫಾರ್ಮ್ಸ್ನಿಂದ (Jio Platforms) ಹಿಡಿದು ಆಂಥ್ರೋಪಿಕ್​ವರೆಗೆ 15 ಕಂಪನಿಗಳು ಗುಂಪು ಮಾಡಿಕೊಂಡಿವೆ. ಸೆಮಿಕಂಡಕ್ಟರ್​ನಿಂದ ಹಿಡಿದು ಕ್ಲೌಡ್ ಇನ್​ಫ್ರಾಸ್ಟ್ರಕ್ಚರ್​ವರೆಗೆ ಎಐ ಸಂಬಂಧಿತ ಕ್ಷೇತ್ರಗಳಲ್ಲಿರುವ ಈ ಕಂಪನಿಗಳು ಒಟ್ಟಿಗೆ ಸೇರಿ ಟ್ರಸ್ಟೆಡ್ ಟೆಕ್ ಅಲಾಯನ್ಸ್ (Trusted Tech Alliance- ವಿಶ್ವಾಸೀ ತಂತ್ರಜ್ಞಾನ ಮೈತ್ರಿ) ಕೂಟ ರಚಿಸಿವೆ.

ಜರ್ಮನಿಯಲ್ಲಿ ನಡೆದ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್​ನಲ್ಲಿ (Munich Security Conference) ಈ ಎಐ ಮೈತ್ರಿಕೂಟ ಗುಂಪನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಏಷ್ಯಾ, ಆಫ್ರಿಕಾ ಯೂರೋಪ್ ಮತ್ತು ಉತ್ತರ ಅಮೆರಿಕದ 15 ಕಂಪನಿಗಳು ಸದ್ಯ ಈ ಹೊಂದಾಣಿಕೆ ಮಾಡಿಕೊಂಡಿವೆ.

ಇದನ್ನೂ ಓದಿ: ಫೆ. 16ರಿಂದ ಎಐ ಇಂಪ್ಯಾಕ್ಟ್ ಸಮಿಟ್; ದಕ್ಷಿಣ ದೇಶಗಳ ಪ್ರಬಲ ಉಪಸ್ಥಿತಿ; 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ

ಟ್ರಸ್ಟೆಡ್ ಟೆಕ್ ಅಲಾಯನ್ಸ್​ನ 15 ಕಂಪನಿಗಳು

  1. ಆಂಥ್ರೋಪಿಕ್, ಅಮೆರಿಕ
  2. ಅಮೇಜಾನ್ ವೆಬ್ ಸರ್ವಿಸಸ್ (ಎಡಬ್ಲ್ಯುಎಸ್), ಅಮೆರಿಕ
  3. ಕಸ್ಸಾವ ಟೆಕ್ನಾಲಜೀಸ್, ದಕ್ಷಿಣ ಆಫ್ರಿಕಾ
  4. ಕೋಹೀರ್ (Cohere), ಕೆನಡಾ
  5. ಎರಿಕ್ಸನ್, ಸ್ವೀಡನ್, ಯುರೋಪ್
  6. ಗೂಗಲ್ ಕ್ಲೌಡ್, ಅಮೆರಿಕ
  7. ಹ್ಯಾನ್​ವಾ (Hanwha), ದಕ್ಷಿಣ ಕೊರಿಯಾ
  8. ಜಿಯೋ ಪ್ಲಾಟ್​ಫಾರ್ಮ್ಸ್, ಭಾರತ
  9. ಮೈಕ್ರೋಸಾಫ್ಟ್, ಅಮೆರಿಕ
  10. ನೊಕಿಯಾ, ಫಿನ್​ಲ್ಯಾಂಡ್ (ಯೂರೋಪ್)
  11. ಎನ್​ಸ್ಕೇಲ್ (Nscale), ಯೂರೋಪ್
  12. ಎನ್​ಟಿಟಿ, ಜಪಾನ್
  13. ರಾಪಿಡಸ್, ಜಪಾನ್
  14. ಸಾಬ್, ಅಮೆರಿಕ
  15. ಎಸ್​ಎಪಿ, ಜರ್ಮನಿ

ಎಐ ಹೊಂದಾಣಿಕೆಗೆ ಐದು ಅಂಶಗಳು

ಟ್ರಸ್ಟೆಡ್ ಟೆಕ್ ಅಲಾಯನ್ಸ್ ಅಥವಾ ವಿಶ್ವಾಸೀ ತಂತ್ರಜ್ಞಾನ ಮೈತ್ರಿಗೆ ಐದು ಅಂಶಗಳು ಆಧಾರವಾಗಿರುತ್ತವೆ. ಪಾರದರ್ಶಕ ಕಾರ್ಪೊರೇಟ್ ಆಡಳಿತ ಮತ್ತು ನೈತಿಕ ನಡಾವಳಿ; ಕಾರ್ಯಾಚರಣೆಯ ಪಾರದರ್ಶಕತೆ; ಸುಭದ್ರ ಅಭಿವೃದ್ಧಿ ಮೊದಲಾದವರು ಸೇರಿವೆ.

ಇದನ್ನೂ ಓದಿ: ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ

ಆಯಾ ನಾಡಿನ ಕಾನೂನು ಕಟ್ಟಳೆಗಳಿಗೆ ಗೌರವ ಕೊಡುವುದು, ಡಾಟಾ ರಕ್ಷಣೆ, ಉತ್ತಮ ಪೂರೈಕೆ ಸರಪಳಿ ನಿರ್ಮಿಸುವುದು, ಸುಭದ್ರವಾದ ಡಿಜಿಟಲ್ ಇಕೋಸಿಸ್ಟಂ ನಿರ್ಮಿಸುವುದು ಇವೇ ಮುಂತಾದ ಕಾರ್ಯಗಳಿಗೆ ಈ ಮೈತ್ರಿಕೂಟ ಆದ್ಯತೆ ಕೊಡುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Solar Eclipse 2026: ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ? – Kannada News | Solar Eclipse 2026: What Kumbha Rashi Can Expect, According to Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕುಂಭ ರಾಶಿಯಲ್ಲಿ ಜನ್ಮ ಗ್ರಹಣವಾಗಿ ಸಂಭವಿಸುತ್ತಿದ್ದು, ಈ ರಾಶಿಯವರಿಗೆ ಡಾ. ಬಸವರಾಜ ಗುರೂಜಿ ಅವರು ಕೆಲವು ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ. ಧನಿಷ್ಠಾ, ಶತಭಿಷಾ, ಮತ್ತು ಪೂರ್ವಾಭಾದ್ರಾ ನಕ್ಷತ್ರದವರು, ಮಹಿಳೆಯರು ಮತ್ತು ಮಕ್ಕಳು ವಿಶೇಷವಾಗಿ ಜಾಗ್ರತರಾಗಿರಬೇಕು. ಈ ಅವಧಿಯಲ್ಲಿ ದೇಹದಲ್ಲಿ ಅನಗತ್ಯ ಬದಲಾವಣೆಗಳು, ಬೇಕಾದವರು ದೂರವಾಗುವುದು, ಆರ್ಥಿಕ ನಿರ್ಧಾರಗಳಲ್ಲಿ ಗೊಂದಲ ಮತ್ತು ಅಧಿಕಾರದಲ್ಲಿ ಹಿನ್ನಡೆ ಸಂಭವಿಸಬಹುದು. ಮಧ್ಯಾಹ್ನ 3:26 ರಿಂದ ಸಂಜೆ 7:50ರವರೆಗೆ ಪ್ರಯಾಣಿಸುವುದು ಶುಭವಲ್ಲ, ವಿಶೇಷವಾಗಿ ಗರ್ಭಿಣಿಯರು, ವೃದ್ಧರು, ಅಸಹಾಯಕರು, ಮತ್ತು ಮಾನಸಿಕ ಅಸ್ವಸ್ಥರು ಹೊರಗೆ ಹೋಗದಿರುವುದು ಉತ್ತಮ.

ಮೋಸ, ನಷ್ಟ, ಸಾಲಗಾರರ ಕಾಟ, ಕುಟುಂಬದಲ್ಲಿ ಸಣ್ಣಪುಟ್ಟ ಕಿರಿಕಿರಿ, ಮಕ್ಕಳ ವಿಷಯದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು, ಮತ್ತು ಪ್ರೇಮ ವ್ಯವಹಾರಗಳಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ಹಿತಶತ್ರುಗಳ ಕಾಟ ಮತ್ತು ವಿವಾಹ ವಿಳಂಬ ಸಾಧ್ಯತೆಯೂ ಇದೆ. ಆರೋಗ್ಯದ ವಿಚಾರದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಪರಿಹಾರವಾಗಿ, ಶಿವನ ಸ್ತೋತ್ರ, ಶಿವನಾಮ ಸ್ಮರಣೆ, ಕಾಲಭೈರವನ ಸ್ತೋತ್ರಗಳನ್ನು ಜಪಿಸಬೇಕು. ಗೋವಿನ ದರ್ಶನ, ತಾಮ್ರದ ಪದಾರ್ಥಗಳ ದಾನ, ಬೆಲ್ಲದ ಪಾಯಸ ದಾನ, ಅನ್ನದಾನ, ನವಧಾನ್ಯಗಳನ್ನು ಕೆಂಪು ವಸ್ತ್ರದಲ್ಲಿ ದೇವಸ್ಥಾನಕ್ಕೆ ನೀಡುವುದು ಶುಭ ಫಲಗಳನ್ನು ನೀಡುತ್ತದೆ. ಗುರುವಿನ ದೃಷ್ಟಿಯಿಂದ ಕಷ್ಟದ ಸಮಯದಲ್ಲಿ ನೆರವು ದೊರೆಯುತ್ತದೆ.

ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಾಯಿಯ ಫೋಟೋ ಶೂಟ್​​ ವೇಳೆ ಅವಘಡ: ನೀರಿಗೆ ಬಿದ್ದು ಕಣ್ಮುಚ್ಚಿದ 3 ವರ್ಷದ ಕಂದಮ್ಮ – Kannada News | Tragedy During Maternity Photoshoot: Three Year Old Child Drowns After Falling into Water

ನೀರಿಗೆ ಬಿದ್ದು 3 ವರ್ಷದ ಕಂದಮ್ಮ ಸಾವುImage Credit source: Tv9 Kannada

ನೆಲಮಂಗಲ/ಚಿಕ್ಕಮಗಳೂರು, ಫೆಬ್ರವರಿ 15: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್ (3) ಮೃತ ಮಗುವಾಗಿದ್ದು, ತಾಯಿ ಗರ್ಭಿಣಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್​​ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.

ಲಕ್ಷ್ಮೀರ್ ಜೆ.ಪಿ. ನಗರ ನಿವಾಸಿಯಾಗಿರುವ ಸ್ವಾತಿ ಹಾಗೂ ಚರಣ್ ರಾಜ್ ದಂಪತಿಯ ಮಗುವಾಗಿದ್ದು, ಒಂದು ವಾರದ ಹಿಂದೆ ಕೆಲಸದ ನಿಮಿತ್ತ ಚರಣ್ ರಾಜ್ ವಿದೇಶಕ್ಕೆ ತೆರಳಿದ್ದರು. ಪೋಟೋ ಶೂಟ್ ಮಾಡಿಸುವುದಾಗಿ ಗಂಡನ ಬಳಿ ಹೇಳಿ ಸ್ವಾತಿ ಸ್ನೇಹಿತೆಯೊಂದಿಗೆ ಬಂದಿದ್ದರು. ಈ ವೇಳೆ ಅವಘಡ ನಡೆದಿದೆ. ಇನ್ನು ವಿದೇಶದಲ್ಲಿರುವ ಚರಣ್ ರಾಜ್ ನಾಳೆ ಬೆಂಗಳೂರಿಗೆ ಬರಲಿದ್ದು, ಈ ಹಿನ್ನೆಲೆ ಮಗುವಿನ ಮರಣೋತ್ತರ ಪರೀಕ್ಷೆ ನಾಳೆ ನಡೆಸಲಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:  ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ; ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ

ಇಬ್ಬರ ಶವ ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿದ್ದ ಪ್ರಕರಣ ಸಂಬಂಧ ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕೊಡಗು ಮೂಲದ ಯೋಗೇಶ್(17), ಅಭಿಷೇಕ್(23) ಮೃತರಾಗಿದ್ದು, ಇವರ ಕುಟುಂಬ ಕಾಫಿ ತೋಟದ ಕೆಲಸಕ್ಕೆ ಬಂದಿದ್ದ ವೇಳೆ ನದಿಯಲ್ಲಿ ಈಜಲು ಇವರಿಬ್ಬರು ತೆರಳಿದ್ದರು. ಈ ವೇಳೆ ಕುಟುಂಬದವರ ಮುಂದೆಯೇ ನದಿಯಲ್ಲಿ ಮುಳುಗಿ ಪ್ರಾಣಬಿಟ್ಟಿದ್ದರು. ಮೃತ ದೇಹಗಳಿಗಾಗಿ ಹುಡುಕಾಡಿದ್ದ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜು ತಜ್ಞರು ಅಂತಿಮವಾಗಿ ಅವನ್ನು ಹೊರ ತೆಗೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version