ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಟ್ರಾಫಿಕ್ ಮತ್ತು ವಾಯುಮಾಲಿನ್ಯದ ಸಮಸ್ಯೆಗೆ ಮುಕ್ತಿ ನೀಡಲು ಬಿಎಂಆರ್‌ಸಿಎಲ್ (BMRCL) ತನ್ನ ಜಾಲ ವಿಸ್ತರಣೆಗೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮತ್ತು ಬ್ಲೂ ಲೈನ್ ಮೆಟ್ರೋ ಮಾರ್ಗಗಳಿಗಾಗಿ ಅತ್ಯಾಧುನಿಕ ಚಾಲಕರಹಿತ (Driverless Train) ರೈಲುಗಳು ಶೀಘ್ರದಲ್ಲೇ ಆಗಮಿಸಲಿವೆ. ಬೆಂಗಳೂರಿನ ಬಿಇಎಂಎಲ್ (BEML) ಕಾರ್ಖಾನೆಯಿಂದ ಈ ತಿಂಗಳು ಮತ್ತು ಮುಂದಿನ ತಿಂಗಳಲ್ಲಿ ಒಟ್ಟು ನಾಲ್ಕು ಹೊಸ ರೈಲು ಸೆಟ್‌ಗಳು ಬಿಎಂಆರ್‌ಸಿಎಲ್ ಕೈಸೇರಲಿವೆ.

ಮೇ ತಿಂಗಳಲ್ಲಿ ಪಿಂಕ್ ಲೈನ್ ಭಾಗಶಃ ಆರಂಭ ಸಾಧ್ಯತೆ

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಪಿಂಕ್ ಲೈನ್ ಮಾರ್ಗದ ಕಾಮಗಾರಿ ಅಂತಿಮ ಹಂತದಲ್ಲಿದೆ. ವಿಶೇಷವಾಗಿ ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವಿನ ಒಟ್ಟು ಆರು ಮೆಟ್ರೋ ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಈ ಮಾರ್ಗಕ್ಕಾಗಿ ಈಗಾಗಲೇ 5 ರೈಲುಗಳು ಬಂದಿದ್ದು, ಏಪ್ರಿಲ್ ವೇಳೆಗೆ ಮತ್ತೊಂದು ರೈಲು ಆಗಮಿಸಲಿದೆ. ಇದರಿಂದ ದಕ್ಷಿಣ ಬೆಂಗಳೂರಿನ ಜನರಿಗೆ ಟ್ರಾಫಿಕ್ ಕಿರಿಕಿರಿಯಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ಏರ್ ಪೋರ್ಟ್ ಮಾರ್ಗಕ್ಕೂ ಸಜ್ಜಾಗುತ್ತಿದೆ ಬ್ಲೂ ಲೈನ್

ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 59 ಕಿ.ಮೀ ಉದ್ದದ ಬ್ಲೂ ಲೈನ್ ಮಾರ್ಗವು ಬೆಂಗಳೂರಿನ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.

  • ಸಿಲ್ಕ್ ಬೋರ್ಡ್ ಟು ಕೆ.ಆರ್. ಪುರ: 19.75 ಕಿ.ಮೀ (13 ನಿಲ್ದಾಣಗಳು)
  • ಕೆ.ಆರ್. ಪುರ ಟು ಏರ್ ಪೋರ್ಟ್: 38 ಕಿ.ಮೀ ವಿಸ್ತೀರ್ಣ

ಈ ಬೃಹತ್ ಮಾರ್ಗಕ್ಕಾಗಿ ಒಟ್ಟು 38 ಚಾಲಕರಹಿತ ರೈಲುಗಳಿಗೆ ಬಿಇಎಂಎಲ್‌ಗೆ ಆರ್ಡರ್ ನೀಡಲಾಗಿದೆ. ಇದರ ಮೊದಲ ಹಂತವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಎರಡು ರೈಲುಗಳು ಬರಲಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಮೆಟ್ರೋ ಮಾರ್ಗಗಳ ವಿಸ್ತರಣೆಯ ಬಗ್ಗೆ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಎರಡನೇ ಅತಿದೊಡ್ಡ ಟ್ರಾಫಿಕ್ ಸಿಟಿ ಎಂಬ ಕುಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಮೆಟ್ರೋ ಒಂದೇ ಸರಿಯಾದ ಪರಿಹಾರ. ಪಿಂಕ್ ಲೈನ್ ಬೇಗ ಆರಂಭವಾದರೆ ತಾವರೆಕೆರೆ ಮತ್ತು ಸಿಲ್ಕ್ ಬೋರ್ಡ್ ಭಾಗದ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಪ್ರಯಾಣಿಕರು ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಅವರು ಪೆದ್ದಿ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಡೆಯಿಂದ ಇಂದು ಏನಾದರೂ ಅಪ್​​​ಡೇಟ್ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರ ಬರ್ತ್​​ಡೇ ಸಂದರ್ಭದಲ್ಲಿ ಅವರ ಸಂಭಾವನೆ ಹಾಗೂ ಅವರ ಐಷಾರಾಮಿ ಜೀವನದ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ.

ರಾಮ್ ಚರಣ್ ಅವರ ಪ್ರತಿ ತಿಂಗಳ ಗಳಿಕೆ 3 ಕೋಟಿ ರೂಪಾಯಿ. ವಿವಿಧ ಉದ್ಯಮಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಆಸ್ತಿ 1400 ಕೋಟಿ ರೂಪಾಯಿ. ‘ಆರ್​ಆರ್​ಆರ್’ ಚಿತ್ರಕ್ಕಾಗಿ ಅವರು ಬರೋಬ್ಬರಿ 45 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದರು ಎನ್ನಲಾಗಿದೆ. ರಾಮ್ ಚರಣ್ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಾರೆ. ಅವರು ಒಂದಲ್ಲ ಎರಡಲ್ಲ 34 ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ ಎಂದರೆ ನಂಬಲೇಬೇಕು. ಪೆಪ್ಸಿ, ಅಪೊಲೋ ಜಿಯಾ, ಫ್ರೂಟಿ ಮೊದಲಾದ ಬ್ರ್ಯಾಂಡ್​ಗಳನ್ನು ಅವರು ಪ್ರಮೋಟ್​ ಮಾಡುತ್ತಾರೆ.

ಅವರ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಜುಬ್ಲಿ ಹಿಲ್ಸ್​ನಲ್ಲಿ 25 ಸಾವಿರ ಚದರ ಅಡಿಯ ಜಾಗ ಹೊಂದಿದ್ದು, ಐಷಾರಾಮಿ ಮನೆ ಇದೆ. ಇದರ ಬೆಲೆ 38 ಕೋಟಿ ರೂಪಾಯಿ ಎನ್ನಲಾಗಿದೆ. ಮುಂಬೈನಲ್ಲಿ ಮನೆ ಹೊಂದಿರುವ ಕೆಲವೇ ಕೆಲವು ದಕ್ಷಿಣದ ಸ್ಟಾರ್​ಗಳಲ್ಲಿ ರಾಮ್​ ಚರಣ್ ಹೆಸರೂ ಇದೆ. ಅವರು ಮುಂಬೈನಲ್ಲಿ ದುಬಾರಿ ಪೆಂಟ್​ಹೌಸ್ ಹೊಂದಿದ್ದಾರೆ. ಮುಂಬೈ ಹೋದಾಗ ಇಲ್ಲಿ ವಾಸಿಸುತ್ತಾರೆ.

ರಾಮ್ ಚರಣ್ ಬಳಿ ದುಬಾರಿ ಕಾರು ಹಾಗೂ ಜೆಟ್​ಗಳಿವೆ. TRUJet ಹೆಸರಿನ ಏರ್​ಲೈನ್ಸ್​ನ ರಾಮ್ ಚರಣ್ ಹೊಂದಿದ್ದರು. ಇವರ ಬಳಿ ಪ್ರೈವೆಟ್ ಜೆಟ್ ಕೂಡ ಇದೆ. ಇದರ ಜೊತೆಗೆ ಮರ್ಸಿಡೀಸ್​ಬೆಂಜ್ ಮೇಬ್ಯಾಷ್ ಜಿಎಲ್​ಎಸ್​ 600 ಇದೆ. ಇದರ ಬೆಲೆ 4 ಕೋಟಿ ರೂಪಾಯಿಗೂ ಅಧಿಕವಾಗಿದೆ. ಆಡಿ, ರೋಲ್ಸ್ ರಾಯ್ಸ್ ಪ್ಯಾಂಟಂ, ರೇಂಜ್ ರೋವರ್ ಆಟೋಬಯೋಗ್ರಫಿ, ಆಸ್ಟನ್ ಮಾರ್ಟಿನ್, ಫೆರಾರಿ ಕಾರುಗಳ ಒಡೆಯ ಅವರಾಗಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರು ಪತ್ನಿ ಉಪಾಸನಾ ಜೊತೆ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಕ್ಲಿನ್​ಕಾರಾ ಹೆಸರಿನ ಮಗಳು ಕೂಡ ಇದ್ದಾಳೆ. ಈಗ ಅವಳಿ ಮಕ್ಕಳು ಜನಿಸಿದ್ದಾರೆ. ಸಿನಿಮಾ ವಿಚಾರಕ್ಕೆ ಬರೋದಾದರೆ ರಾಮ್ ಚರಣ್ ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಸೋಲಿನ ಬೇಸರದಲ್ಲಿದ್ದಾರೆ. ಪೆದ್ದಿ ಚಿತ್ರದಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರಿಗೆ (Ram Charan) ಇಂದು (ಮಾರ್ಚ್​ 27) ಜನ್ಮದಿನ. ಈ ಬಾರಿ ಅವರಿಗೆ ಖುಷಿ ಹಾಗೂ ದುಃಖ ಎರಡೂ ಇದೆ. ಅವರ ಬಾಳಲ್ಲಿ ಅವಳಿ ಮಕ್ಕಳ ಆಗಮನ ಆಗಿದೆ. ಇದೇ ವೇಳೆ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿದೆ. ರಾಮ್ ಚರಣ್ ಅವರ ಆಸ್ತಿ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಒಟ್ಟೂ ಆಸ್ತಿ ಬರೋಬ್ಬರಿ 1,400 ಕೋಟಿ ರೂಪಾಯಿ ಅಷ್ಟಿದೆ. ಇದಕ್ಕೆ ಕಾರಣಾಗಿದ್ದು ಉದ್ಯಮ. ಹೌದು, ರಾಮ್ ಚರಣ್ ಕೇವಲ ಹೀರೋ ಮಾತ್ರವಲ್ಲ, ಅವರು ಯಶಸ್ವಿ ಉದ್ಯಮಿ ಕೂಡ ಹೌದು. ಆ ಬಗ್ಗೆ ಇಲ್ಲಿದೆ ವಿವರ.

ರಾಮಚರಣ್ ಸಿನಿಮಾಗೆ ಕಾಲಿಟ್ಟಿದ್ದು ‘ಚಿರುತಾ’ ಸಿನಿಮಾ ಮೂಲಕ. ಈ ಚಿತ್ರ 2007ರಲ್ಲಿ ತೆರೆಗೆ ಬಂತು. ರಾಮ್ ಚರಣ್ ತಂದೆ ಚಿರಂಜೀವಿ ಸ್ಟಾರ್ ಹೀರೋ. ಹೀಗಾಗಿ, ಚಿತ್ರದಲ್ಲಿ ನಟಿಸಲು ಸುಲಭದಲ್ಲಿ ಅವಕಾಶ ಸಿಕ್ಕಿತು. 19 ವರ್ಷಗಳಲ್ಲಿ ರಾಮ್ ಚರಣ್ ಮಾಡಿದ್ದು ಕೇವಲ 15 ಸಿನಿಮಾ ಮಾತ್ರ.

ರಾಮ್ ಚರಣ್ ಬಣ್ಣ ಹಚ್ಚಿದ ಸಿನಿಮಾಗಳ ಪೈಕಿ ದೊಡ್ಡ ಗೆಲುವು ಕಂಡಿದ್ದು ಕಡಿಮೆ. ‘ಮಗಧೀರ’, ‘ರಂಗಸ್ಥಳಂ’, ‘ಆರ್​ಆರ್​ಆರ್’ ಚಿತ್ರಗಳು ಸೂಪರ್ ಡೂಪರ್ ಹಿಟ್ ಆದವು. ‘ಬ್ರೂಸ್​ಲಿ’ ಚಿತ್ರವು ಸಾಧಾರಣ ಗೆಲುವು ಕಂಡಿತು. ಉಳಿದ ಸಿನಿಮಾಗಳು ಅಂದುಕೊಂಡಂತೆ ಯಶಸ್ಸು ಕಂಡಿಲ್ಲ ಎಂದರೂ ತಪ್ಪಾಗಲಾರದು. ರಾಮ್ ಚರಣ್ ಅವರು ಉದ್ಯಮದಿಂದ ಹೆಚ್ಚು ಹಣ ಮಾಡುತ್ತಾ ಇದ್ದಾರೆ.

ರಾಮ್ ಚರಣ್ ಅವರು ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದ್ದಾರೆ. ಹೈದರಾಬಾದ್ ಪೋಲೋ ರೈಡಿಂಗ್ ಕ್ಲಬ್ ಅವರ ಹೆಸರಲ್ಲಿ ಇದೆ. ರಾಮ್ ಚರಣ್ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ‘ಖಿಲಾಡಿ ನಂಬರ್ 150’ (2017), ‘ಸೈರಾ ನರಸಿಂಹ ರೆಡ್ಡಿ’ (2019), ‘ಆಚಾರ್ಯ’ (2022) ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್​​ಗೆ ಗಂಭೀರ ಗಾಯ: ‘ಪೆದ್ದಿ’ ಬಿಡುಗಡೆ ಇನ್ನಷ್ಟು ಮುಂದಕ್ಕೆ

ರಾಮ್ ಚರಣ್ ಅವರು ಏರ್​ಲೈನ್ಸ್ ಹೊಂದಿದ್ದರು. ಇದಕ್ಕೆ ಟ್ರ್ಯೂಜೆಟ್ ಎನ್ನುವ ಹೆಸರನ್ನು ಕೂಡ ಇಡಲಾಗಿತ್ತು. ಆದರೆ, ಇತ್ತೀಚೆಗೆ ಇದು ಆಪರೇಷನ್ ನಿಲ್ಲಿಸಿದೆ. ರಾಮ್ ಚರಣ್ ಅವರು ಅಪೊಲೋ ಆಸ್ಪತ್ರೆಯಲ್ಲಿ ಹೂಡಿಕೆ ಮಾಡಿದ್ದಾರೆ. ಇದನ್ನು ಅವರ ಪತ್ನಿ ಉಪಾಸನಾ ತಾತ ಪ್ರತಾಪ್ ಚಂದ್ರ ರೆಡ್ಡಿ ಆರಂಭಿಸಿದ್ದರು. ಇದರ ಜೊತೆ ಸಿನಿಮಾಗಳಿಗೆ ರಾಮ್ ಚರಣ್ ದೊಡ್ಡ ಮಟ್ಟದ ಸಂಭಾವನೆ ಪಡೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು

ಚಿಂದ್ವಾರ, ಮಾರ್ಚ್​ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಈಗ ಜಿಲ್ಲಾ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ಕರೆದೊಯ್ಯಲಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ವಿಡಿಯೋ

ಬಸ್‌ನಲ್ಲಿದ್ದ ಬಹುತೇಕ ಎಲ್ಲರೂ ಗಾಯಗೊಂಡರು. ಗಾಯಾಳುಗಳಲ್ಲಿ ಒಬ್ಬರನ್ನು ನಾಗ್ಪುರಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಭೋಪಾಲ್‌ನಲ್ಲಿರುವ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಯಾದವ್ ಹೇಳಿದರು. ಜಬಲ್ಪುರದ ವೈದ್ಯರ ತಂಡವನ್ನು ಚಿಂದ್ವಾರ ಮತ್ತು ನಾಗ್ಪುರಕ್ಕೆ ಕಳುಹಿಸಲು ಸೂಚಿಸಲಾಗಿದೆ. ಚಿಂದ್ವಾರದ ಉಸ್ತುವಾರಿ ಸಚಿವ ರಾಕೇಶ್ ಸಿಂಗ್ ಅವರಿಗೂ ತಮ್ಮ ವೇಳಾಪಟ್ಟಿಯನ್ನು ಬದಲಾಯಿಸಿಕೊಂಡು ಚಿಂದ್ವಾರ ತಲುಪಲು ಸೂಚಿಸಲಾಗಿದೆ ಎಂದು ಯಾದವ್ ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪಾಕಿಸ್ತಾನ್ ಸೂಪರ್ ಲೀಗ್ ಉದ್ಘಾಟನಾ ಪಂದ್ಯ ನೋಡಲು ಒಬ್ಬರೂ ಬರಲಿಲ್ಲ

ಪಾಕಿಸ್ತಾನ ಸೂಪರ್ ಲೀಗ್ (PSL) ಆರಂಭ ಆಗಿದೆ. ಮಾರ್ಚ್ 26ರಂದು ಓಪನಿಂಗ್ ಮ್ಯಾಚ್ ನಡೆದಿದೆ. ಆದರೆ, ಈ ಪಂದ್ಯವನ್ನು ನೋಡಲು ಒಬ್ಬೇ ಒಬ್ಬರೂ ಬಂದಿರಲಿಲ್ಲ. ಹಾಗಂತ ಇದರ ಮೇಲೆ ಯಾರೊಬ್ಬರಿಗೂ ಆಸಕ್ತಿ ಇಲ್ಲ ಎಂದಲ್ಲ. ಇದಕ್ಕೆ ಕಾರಣ ಆಗಿದ್ದು ಇಸ್ರೇಲ್​-ಅಮೆರಿಕ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ. ಈ ಯುದ್ಧ ಪಿಎಸ್​​​ಎಲ್​ ಮೇಲೆ ನೇರ ಪರಿಣಾಮ ಬೀರಿದೆ.

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಒಟ್ಟೂ 8 ತಂಡಗಳು ಆಡುತ್ತಿವೆ. ಮಾರ್ಚ್ 26ರಿಂದ ಆರಂಭ ಆಗಿ ಮೇ 3ರಂದು ಫೈನಲ್ ನಡೆಯಲಿದೆ. ಯುದ್ಧದ ಪರಿಸ್ಥಿತಿಯಿಂದ ಇರಾನ್ ಹಾರ್ಮೂಜ್ ಜಲಸಂಧಿಯನ್ನು ನಿರ್ಬಂಧಿಸಿದೆ. ಹೀಗಾಗಿ, ತೈಲ ಹಾಗೂ ಗ್ಯಾಸ್ ಹಡಗು ಇಲ್ಲಿಂದ ಹೊರ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪಾಕಿಸ್ತಾನದಲ್ಲಿ ತೈಲದ ಕೊರತೆ ಉಂಟಾಗಿದೆ.

ಸದ್ಯದ ಪರಿಸ್ಥಿತಿಯನ್ನು ಗಮನಿಸಿ ಪಿಎಸ್​​​ಎಲ್​​ಗೆ ಅಭಿಮಾನಿಗಳು ಬರದಂತೆ ತಡೆ ಹಾಕಲಾಗಿದೆ. ಅಲ್ಲದೆ, ಎಲ್ಲಾ ಪಂದ್ಯಗಳು ಕೇವಲ ಕರಾಚಿ ಹಾಗೂ ಲಾಹೋರ್​​ನಲ್ಲಿ ಮಾತ್ರ ನಡೆಯಲಿವೆ. ಈ ಬಗ್ಗೆ ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿತ್ತು.

ಇದನ್ನೂ ಓದಿ: ಆರ್​​ಸಿಬಿ ಹೆಸರು ಬದಲಾವಣೆ ವಿಷಯ; ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟ ಅನನ್ಯಾ ಬಿರ್ಲಾ

ಒಂದೊಮ್ಮೆ ಮೇ 3ರ ಒಳಗೆ ಸದ್ಯದ ಯುದ್ಧದ ಪರಿಸ್ಥಿತಿ ಕೊನೆಯಾಗಿ ತೈಲ ಹಾಗೂ ಗ್ಯಾಸ್ ಮತ್ತೆ ಪೂರೈಕೆ ಆದರೆ, ಫ್ಯಾನ್ಸ್​​ನ ಮತ್ತೆ ಕರೆಸಿಕೊಳ್ಳಲಾಗುವುದು ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಸದ್ಯ ಖಾಲಿ ಸ್ಟೇಡಿಯಂ ಹಾಗೂ ಫೋಟೋ ಹಾಗೂ ವಿಡಿಯೋಗಳನ್ನು ಕೆಲವರು ಪೋಸ್ಟ್ ಮಾಡುತ್ತಿದ್ದಾರೆ. ‘ಪಾಕಿಸ್ತಾನಕ್ಕೆ ಅವಮಾನ. ಪಿಎಸ್​​​ಎಲ್​ ಪಂದ್ಯ ನೋಡಲು ಯಾರೊಬ್ಬರೂ ಬಂದಿಲ್ಲ’ ಎಂದು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯೇ ಇದೆ ಎಂಬುದು ಕೆಲವರಿಗೆ ಗೊತ್ತಾಗಿದೆ.

ಮೊದಲ ಪಂದ್ಯದ ಫಲಿತಾಂಶ

ಲಾಹೋರ್ ಹಾಗೂ ಹೈದರಾಬಾದ್ ಮಧ್ಯೆ ಮೊದಲ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಲಾಹೋರ್ 69 ರನ್​​​ಗಳ ಗೆಲುವು ಕಂಡಿದೆ.

ಇನ್ನಷ್ಟು ಕ್ರಿಕೆಟ್​​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 27: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮನೆಯಲ್ಲಿದ್ದ ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ಮನೆಮಂದಿ ಶಾಕ್; ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಚಾಂಪ್, ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಹೊರತೆಗೆದರು. ಬಳಿಕ ಹಾವನ್ನು ಯಾವುದೇ ಹಾನಿಯಾಗದಂತೆ ಸಮೀಪದ ಕಾಡಿಗೆ ಬಿಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲು ಐದು, ಈಗ ಹತ್ತು ದಿನ, ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಗಡುವು ವಿಸ್ತರಿಸಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್​ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏಪ್ರಿಲ್ 27 ರಂದು ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು.

ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6 ರವರೆಗೆ ವಿಸ್ತರಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಗುರುವಾರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

ಏಪ್ರಿಲ್ 6 ರವರೆಗೆ ಇರಾನ್‌ನ ಇಂಧನ ಸ್ಥಾವರದ ಮೇಲೆ ಬಾಂಬ್ ಹಾಕುವುದಿಲ್ಲ, ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳು ಉತ್ತಮವಾಗಿ ಮುಂದುವರೆದಿವೆ ಎಂದು ಟ್ರಂಪ್ ಹೇಳಿದ್ದಾರೆ.

ಅವರ ಸರ್ಕಾರವು ಇರಾನ್‌ನ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಇನ್ನೂ 10 ದಿನಗಳವರೆಗೆ ನಿಲ್ಲಿಸುತ್ತದೆ. ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷರು ಇರಾನ್‌ಗೆ ಐದು ದಿನಗಳ ವಿಸ್ತರಣೆಯನ್ನು ನೀಡಿದ್ದರು. ಹಾರ್ಮುಜ್ ಜಲಸಂಧಿ ಐದು ದಿನಗಳಲ್ಲಿ ತೆರೆಯದಿದ್ದರೆ ಮತ್ತು ಇರಾನ್ ಮಾತುಕತೆಗೆ ಬಾರದಿದ್ದರೆ ಅದು ಇದುವರೆಗಿನ ಅತಿದೊಡ್ಡ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದರು.

ಮತ್ತಷ್ಟು ಓದಿ: ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಎರಡೂ ದೇಶಗಳ ನಡುವಿನ ಕದನ ವಿರಾಮ ಮಾತುಕತೆಗಳ ಕುರಿತು ಭಿನ್ನಾಭಿಪ್ರಾಯಗಳಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಇರಾನ್ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕ ಮತ್ತು ಇಸ್ರೇಲಿ ನೆಲೆಗಳ ಮೇಲೆ ದಾಳಿ ಮಾಡಿದೆ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ರಫ್ತುಗಳನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸಿದೆ.

ಯುದ್ಧವನ್ನು ಕೊನೆಗೊಳಿಸಲು 15 ಅಂಶಗಳ ಕಾರ್ಯಸೂಚಿಯನ್ನು ಇರಾನ್‌ಗೆ ಕಳುಹಿಸಲಾಗಿದೆ ಎಂದು ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ದೃಢಪಡಿಸಿದರು, ಆದರೆ ಇರಾನ್ ಅದನ್ನು ಏಕಪಕ್ಷೀಯವೆಂದು ತಿರಸ್ಕರಿಸಿದೆ.

ಎರಡೂ ಕಡೆಯವರು ಕದನ ವಿರಾಮ ಅಥವಾ ರಾಜಿ ಕುರಿತು ಮಾತುಕತೆ ನಡೆಸುವ ವದಂತಿಗಳಿದ್ದರೂ, ಎರಡೂ ಕಡೆಯವರು ಕಟ್ಟುನಿಟ್ಟಿನ ನಿಲುವುಗಳನ್ನು ಹೊಂದಿದ್ದಾರೆ. ಯಾವುದೇ ಔಪಚಾರಿಕ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳುವ ಮೂಲಕ ಇರಾನ್ ಈ ಮಾತುಕತೆಗಳನ್ನು ಪದೇ ಪದೇ ನಿರಾಕರಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ.

ಸಂಚಾರ ನಿರ್ಬಂಧ ಎಲ್ಲೆಲ್ಲಿ?

  • ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್ ಕಡೆಯಿಂದ: ಮೈಸೂರು ರಸ್ತೆ ಮುಖಾಂತರ ಕೆಂಗೇರಿ ಕಡೆಗೆ ಹೋಗುವ ಎಲ್ಲಾ ಮಾದರಿಯ ವಾಹನಗಳನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
  • ಭಾರೀ ವಾಹನಗಳಿಗೆ ಸೂಚನೆ: ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವ ಭಾರೀ ವಾಹನಗಳನ್ನು ಹೊರತುಪಡಿಸಿ, ಉಳಿದ ವಾಹನಗಳಿಗೆ ಎಂದಿನಂತೆ ಸಂಚರಿಸಲು ಅವಕಾಶ ನೀಡಲಾಗಿದೆ.

ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು

  1. ಮಜೆಸ್ಟಿಕ್ ಮತ್ತು ಸಿಟಿ ಮಾರ್ಕೆಟ್‌ನಿಂದ ಮೈಸೂರು ರಸ್ತೆ ಕಡೆಗೆ ಹೋಗುವವರು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಅವಲಹಳ್ಳಿ ಮುಖ್ಯ ರಸ್ತೆ ಮೂಲಕ ಬೆಂಗಳೂರು ಒನ್ ಜಂಕ್ಷನ್ ತಲುಪಬೇಕು. ಅಲ್ಲಿಂದ ಎಡ ತಿರುವು ಪಡೆದು ಕೆ.ಇ.ಬಿ. ಜಂಕ್ಷನ್ ಬಳಿ ಬಲ ತಿರುವು ಪಡೆದು ಪಿ.ಇ.ಎಸ್.ಐ.ಟಿ. ಕಾಲೇಜು (ದೇವೇಗೌಡ ಸರ್ಕಲ್) ಮುಖಾಂತರ ನಾಯಂಡಹಳ್ಳಿ ಹತ್ತಿರ ಮೈಸೂರು ರಸ್ತೆಯನ್ನು ಸೇರಬಹುದು.
  2. ಮೈಸೂರು ರಸ್ತೆ ಮೇಲ್ಸೇತುವೆ ಬಳಸುವ ಸರಕು ವಾಹನಗಳು ಮೈಸೂರು ರಸ್ತೆ ವೆಟನರಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಗುಡ್ ಶೆಡ್ ರಸ್ತೆ ಮೂಲಕ ಶಾಂತಲಾ ಜಂಕ್ಷನ್ – ಕೋಡೆ ಸರ್ಕಲ್ – ಲುಲು ಮಾಲ್ – ಹುಣಸೇಮರ ಜಂಕ್ಷನ್ ಮೂಲಕ ಮಾಗಡಿ ರಸ್ತೆಯತ್ತ ಸಂಚರಿಸಬಹುದು.
  3. ಕೆಂಗೇರಿ ಕಡೆಯಿಂದ ನಗರಕ್ಕೆ ಪ್ರವೇಶಿಸುವವರು (ಮಾರ್ಚ್ 28-29ರ ವಿಶೇಷ ಸೂಚನೆ) ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ನಾಗರಭಾವಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆಯಬೇಕು. ಚಂದ್ರಾ ಲೇಔಟ್ 80 ಅಡಿ ರಸ್ತೆಯಲ್ಲಿ ಚಲಿಸಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಮುಖಾಂತರ ಎಂ.ಸಿ. ಸರ್ಕಲ್ ತಲುಪಿ ಮಾಗಡಿ ರಸ್ತೆ ಸೇರಬಹುದು.

ಬೆಂಗಳೂರು ಸಂಚಾರಿ ಪೊಲೀಸ್ ಎಕ್ಸ್ ಸಂದೇಶ

ಸಾರ್ವಜನಿಕರಿಗೆ ಸಂಚಾರಿ ಪೊಲೀಸರ ಮನವಿ

ರಥೋತ್ಸವದ ಸಮಯದಲ್ಲಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಹಾಗೂ ಅನಿವಾರ್ಯವಿದ್ದಲ್ಲಿ ಮಾತ್ರ ಈ ರಸ್ತೆಯನ್ನು ಬಳಸುವಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಚರಿಸುವ ಮುನ್ನ ಗೂಗಲ್ ಮ್ಯಾಪ್ ಅಥವಾ ಸಂಚಾರಿ ಪೊಲೀಸರ ಅಧಿಕೃತ ಸೂಚನೆಗಳನ್ನು ಗಮನಿಸುವುದು ಉತ್ತಮ.

ಮಾರತ್ತಹಳ್ಳಿ ಬ್ರಿಡ್ಜ್​ನಲ್ಲೂ ಸಂಚಾರ ಬದಲಾವಣೆ

ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆ ಮಾರ್ಚ್​ 27 ರಿಂದ ಇಂದಿನಿಂದ 3 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 12ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, HAL ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು, ವೈಟ್‌ ಫೀಲ್ಡ್ ಕಡೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ HAL ಕಡೆಗೂ ಸಂಚಾರ ನಿರ್ಬಂಧ ಮಾಡಲಾಗಿದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ.

‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡುತ್ತಿದೆ. ಗುರುವಾರ (ಮಾರ್ಚ್ 26) 49 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಇಷ್ಟು ಅಬ್ಬರದ ಗಳಿಕೆ ಆಗುತ್ತಿರುವುದು ನಿಜಕ್ಕೂ ಶಾಕಿಂಗ್ ಎನಿಸಿದೆ. ಈ ಸಿನಿಮಾಗೆ ಗುರುವಾರ ಬರೋಬ್ಬರಿ 19,493 ಶೋಗಳನ್ನು ನೀಡಲಾಗಿತ್ತು. ಈ ಚಿತ್ರದ ಭಾರತದ ನೆಟ್ ಕಲೆಕ್ಷನ್ 674 ಕೋಟಿ ರೂಪಾಯಿ ಆಗಿದೆ. ಭಾರತದ ಗ್ರಾಸ್ ಕಲೆಕ್ಷನ್ 805 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾಗೆ ವಿಶ್ವ ಮಟ್ಟದಲ್ಲಿ 1067 ಕೋಟಿ ರೂಪಾಯಿ ಗಳಿಕೆ ಆಗಿದೆ.

ಗುರುವಾರ ‘ಧುರಂಧರ್ 2’ ಸಿನಿಮಾದ ತೆಲುಗು ವರ್ಷನ್​ಗೆ 2.50 ಕೋಟಿ ರೂಪಾಯಿ ಗಳಿಕೆ ಆಗಿದೆ. ಆದರೆ, ಇದೇ ದಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ ಮಾತ್ರ. ಇದು ಚಿತ್ರಕ್ಕೆ ಭಾರೀ ಹಿನ್ನಡೆ ತಂದಿದೆ.

ಪವನ್ ಕಲ್ಯಾಣ್ ಸಿನಿಮಾ ಭಾರತದಲ್ಲಿ 66 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಅರ್ಧದಷ್ಟು ಗಳಿಕೆ ಮೊದಲ ದಿನವೇ ಬಂದಿತ್ತು. ಆ ಬಳಿಕ ಸಿನಿಮಾದ ಗಳಿಕ ಸಂಪೂರ್ಣವಾಗಿ ತಗ್ಗಿ ಹೋಗಿದೆ. ಮುಂದಿನ ದಿನಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಪರಿಸ್ಥಿತಿ ಮತ್ತಷ್ಟು ಹೀನಾಯ ಆಗಬಹುದು.

ಇದನ್ನೂ ಓದಿ: ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

ಪವನ್ ಕಲ್ಯಾಣ್ ಅವರು ಸದ್ಯಕ್ಕಂತೂ ಸಿನಿಮಾ ಮಾಡುತ್ತಿಲ್ಲ. ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಅವರು ಸಿನಿಮಾ ರಂಗದಿಂದಲೇ ದೂರ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version