Headlines

ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್​ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್ – Kannada News | Uttar Pradesh CM Yogi Adityanath Orders SIT Probe Into Noida Techie Death Noida CEO Removed

ನೊಯ್ಡಾ, ಡಿಸೆಂಬರ್ 19: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರು ನೊಯ್ಡಾ ಟೆಕ್ಕಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಈ ವಿಷಯದ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಮೀರತ್ ವಿಭಾಗೀಯ ಆಯುಕ್ತರು ಈ SIT ನೇತೃತ್ವ ವಹಿಸಲಿದ್ದಾರೆ. ಮೀರತ್ ವಲಯದ ಹೆಚ್ಚುವರಿ ಮಹಾನಿರ್ದೇಶಕರು (ADG) ಮತ್ತು ಲೋಕೋಪಯೋಗಿ ಇಲಾಖೆಯ (PWD) ಮುಖ್ಯ…

Read More

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur

ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…

Read More

WPL 2026: ಬೆತ್ ಮೂನಿ, ಸೋಫಿ ಡಿವೈನ್ ವಿಕೆಟ್ ಉರುಳಿಸಿದ ಸಯಾಲಿ ಸತ್ಘರೆ – Kannada News | WPL: RCB Sets 177 Target vs GG; Sayali Satghare Delivers Early Blows

ಮಹಿಳಾ ಪ್ರೀಮಿಯರ್​ ಲೀಗ್​ನ 12ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ನಡುವೆ ವಡೋದರಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿದ ಗುಜರಾತ್ ತಂಡ ಎರಡನೇ ಓವರ್​ನಲ್ಲೇ ಎರಡು ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಎಂದಿನಂತೆ ಆರ್​ಸಿಬಿ ಪರ ಲಾರೆನ್ ಬೆಲ್ ಮೊದಲ ಓವರ್​ ಬೌಲ್ ಮಾಡಿದರು. ಈ ಓವರ್​ನಲ್ಲಿ ಗುಜರಾತ್…

Read More

Video: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ – Kannada News | Bengaluru: A woman claiming that Bengaluru’s outskirts feel unsafe at night

ಬೆಂಗಳೂರು, ಜನವರಿ 19: ಬಸ್ಸಿನಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಹೆಣ್ಣು ಮಕ್ಕಳಿಗೆ ಹಾಡುಹಗಲಲ್ಲೇ ಅಹಿತಕರ ಅನುಭವವಾಗಿರಬಹುದು. ಆದರೆ ಬೆಂಗಳೂರಿನ (Bengaluru) ಹೊರವಲಯದಲ್ಲಿರಾತ್ರಿ ಓಡಾಡುತ್ತಿದ್ದ ಮಹಿಳೆಗೆ , ಹೆಣ್ಣು ಮಕ್ಕಳಿಗೆ ಈ ಸ್ಥಳ ಸೇಫ್ ಅಲ್ಲ ಎಂದೆನಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಜಿಮ್‌ನಿಂದ ಹಿಂತಿರುಗುವ ವೇಳೆ ವಿಡಿಯೋ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ದಿಯಪ್ಪರ್‌ಗರ್ಲಿ (@theyappergirlie) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆ ವಿಡಿಯೋವನ್ನು ಹಂಚಿ ಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಬೆಂಗಳೂರಿನ ಹೊರವಲಯದಲ್ಲಿ ರಾತ್ರಿ 9 ಗಂಟೆ…

Read More

ಕಾಬೂಲ್‌ನಲ್ಲಿ ಭೀಕರ ಸ್ಫೋಟ; 7 ಮಂದಿ ಸಾವು, 13 ಜನರಿಗೆ ಗಾಯ – Kannada News | 7 people Killed and 13 Injured In Afghanistans Kabul Blast

ಕಾಬೂಲ್, ಜನವರಿ 19: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ (Blast) 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಸ್ಫೋಟ ನಡೆದ ಶಹರ್-ಎ-ನಾವ್ ಕಾಬೂಲ್‌ನ ಸುರಕ್ಷಿತ ಭಾಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ – Kannada News | Writ petition filed challenging court order to provide home cooked meals to Pavithra Gowda

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ಕಾನೂನಿನ ತೊಡಕು ಉಂಟಾಗುತ್ತಿದೆ. ಪವಿತ್ರಾ ಗೌಡ (Pavithra Gowda) ಅವರು ಗಂಭೀರವಾದ ಕೊಲೆ ಪ್ರಕರಣದಲ್ಲಿ ಸಿಲುಕುಕೊಂಡಿರುವುದರಿಂದ ಅವರಿಗೆ ಜೈಲಿನಲ್ಲಿ ನಿಯಮಗಳು ಕಠಿಣ ಆಗಿವೆ. ಕೊನೇ ಪಕ್ಷ ವಾರಕ್ಕೆ ಒಮ್ಮೆಯಾದರೂ ಮನೆ ಊಟ ಪಡೆಯಲು ಕೂಡ ಅವರು ಕಷ್ಟಪಡುವಂತಾಗಿದೆ. ಈ ಮೊದಲು ಪವಿತ್ರಾ…

Read More

ಯುಎಇ ಅಧ್ಯಕ್ಷರಿಗೆ ಉಡುಗೊರೆಯಾಗಿ ಕುಸುರಿ ಕೆತ್ತನೆಯ ಮರದ ಉಯ್ಯಾಲೆ ನೀಡಿದ ಮೋದಿ – Kannada News | PM Modi Gifted Handmade Wooden jhula and pashmina shawl to UAE President during his India visit

ನವದೆಹಲಿ, ಜನವರಿ 19: 2 ಗಂಟೆಗಳ ಭಾರತದ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಮರದ ಕೆತ್ತನೆಯ ಉಯ್ಯಾಲೆ ಮತ್ತು ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡರು. ಬಳಿಕ ಅವರು ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸವಾದಲ್ಲಿ ಸಭೆ ನಡೆಸಿದರು. ತಮ್ಮ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More