Headlines

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

ಥಾಣೆ, ಮಾರ್ಚ್​ 26: ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕಿ ತನ್ನ ಆರು ವರ್ಷದ ಸಹೋದರನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ನಾಯಿ ಇದ್ದಕ್ಕಿದ್ದಂತೆ ಅವಳ ಮೇಲೆ ಹಾರಿ ಅವಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಆದರೆ ನಾಯಿ ಆಕೆಯನ್ನು ಗಟ್ಟಿಯಾಗಿ ಕಚ್ಚಿದ್ದು, ಆಕೆ ಕೂಗಿಕೊಂಡಾಗ ನಿವಾಸಿಗಳು ಆಕೆಯನ್ನು ರಕ್ಷಿಸಲು ಓಡಿ ಬಂದಿದ್ದಾರೆ.   ವಿಡಿಯೋ…

Read More

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಕಲಬುರಗಿ, (ಮಾರ್ಚ್ 26): ವ್ಯಕ್ತಿಯೋರ್ವ, ಪತ್ನಿಯ ಕತ್ತು ಕೊಯ್ದು ಬಳಿಕ ಆಕೆ ಮೇಲೆ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ. ಶೈಲಾ (28), ಪತಿಯಿಂದಲೇ ಬರ್ಬರವಾಗಿ ಹತ್ಯೆಯಾದ ಮಹಿಳೆ. ಅಕ್ಷಯ್‌ ಕೊಲೆ ಮಾಡಿದ ಆರೋಪಿ. 28 ವರ್ಷದ ಮಹಿಳೆಯನ್ನ ಕಾರಿನಲ್ಲಿ ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೂಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ…

Read More

ಏಳು ಗಂಟೆಗಳ ಬಳಿಕ ದೆಹಲಿಗೆ ವಾಪಸಾದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮಾರ್ಚ್​ 26: ದೆಹಲಿಯಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ತಾಂತ್ರಿಕ ದೋಷದ ಹಿನ್ನೆಲೆ ಏಳು ಗಂಟೆಗಳ ಬಳಿಕ ದೆಹಲಿಗೆ ಹಿಂದಿರುಗಿದೆ. A350-900 ವಿಮಾನ VT-JRF ಮಾರ್ಚ್ 15 ರಂದು ತಾಂತ್ರಿಕ ಸಮಸ್ಯೆಯನ್ನು ಎದುರಿಸಿತ್ತು.ನ್ಯೂಯಾರ್ಕ್‌ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ವಿಮಾನವನ್ನು ಐರಿಶ್ ಪಟ್ಟಣವಾದ ಶಾನನ್‌ಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿದ್ದವು. ಗುರುವಾರ ದೆಹಲಿಯಿಂದ ಲಂಡನ್‌ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ AI111, ತಾಂತ್ರಿಕ ದೋಷದ ನಂತರ ಮುನ್ನೆಚ್ಚರಿಕೆಯಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು…

Read More

‘ಧುರಂಧರ್ 2’ ನೋಡದಿದ್ದರೂ ಚಿತ್ರತಂಡದ ಸಾಧನೆಗೆ ಭೇಷ್ ಎಂದ ಆಮಿರ್ ಖಾನ್

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಅವರು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಯಶಸ್ಸನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪ್ರೇಕ್ಷಕರಿಂದ ಪಡೆಯುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಆಮಿರ್ ಖಾನ್ (Aamir Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್​ಪಾಲ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಹೊಗಳುತ್ತಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆಗಿನ ಸಂವಾದದಲ್ಲಿ…

Read More

ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ: ಋತುಚಕ್ರ ರಜೆ ಆದೇಶ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮಹಿಳೆಯರು

ಬೆಂಗಳೂರು, ಮಾರ್ಚ್​ 26: ರಾಜ್ಯ ಸರ್ಕಾರ ಮಹಿಳಾ ನೌಕರರ ಆರೋಗ್ಯ ಮತ್ತು ಕಾರ್ಯದಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಋತುಚಕ್ರ ರಜೆ (Menstrual Leave) ಸೌಲಭ್ಯವನ್ನು ನೀಡಿದೆ. ಈ ಬಗ್ಗೆ ಇತ್ತೀಚೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದರು. ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ ಋತುಚಕ್ರ ರಜೆ ಪ್ರಶ್ನಿಸಿ ವಿವಿಧ ಕಂಪನಿಗಳ ಮಹಿಳಾ ಉದ್ಯೋಗಿಗಳಿಂದಲೇ ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಲಾಗಿದ್ದು,…

Read More

ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ರಾಮ್ ಗೋಪಾಲ್ ವರ್ಮಾ

ರಾಮ್ ಗೋಪಾಲ್ ವರ್ಮಾ (Ram Gopal Varma) ಒಂದು ಕಾಲದ ಭಾರತದ ಸ್ಟಾರ್ ಸಿನಿಮಾ ನಿರ್ದೇಶಕ. ಸಿನಿಮಾ ನಿರ್ದೇಶನದಲ್ಲಿ ಹೊಸ ಮಾದರಿ ಹಾಕಿಕೊಟ್ಟ ನಿರ್ದೇಶಕ. ರಾಮ್ ಗೋಪಾಲ್ ವರ್ಮಾ ಹಾದಿ ಹಿಡಿದು ಬಂದ ಹಲವರು ಇಂದು ಸ್ಟಾರ್ ನಿರ್ದೇಶಕರುಗಳಾಗಿದ್ದಾರೆ. ಆದರೆ ಕಳೆದ ಕೆಲ ವರ್ಷಗಳಿಂದ ರಾಮ ಗೋಪಾಲ್ ವರ್ಮಾ ಸಿನಿಮಾಗಳಿಗಿಂತಲೂ ವಿವಾದಗಳಿಂದ, ಟ್ವೀಟ್​​ಗಳಿಂದ, ಸಂದರ್ಶನಗಳಿಂದ ಮಾತ್ರವೇ ಸದ್ದು, ಸುದ್ದಿ ಮಾಡುತ್ತಿದ್ದಾರೆ. ಆದರೆ ಇದೀಗ ವರ್ಮಾ, ಹೊಸ ಘೋಷಣೆ ಮಾಡಿದ್ದು, ತಾವು ತೆಲುಗು ಚಿತ್ರರಂಗವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗಲಾಟ…

Read More

ವಂದೇ ಭಾರತ್ ರೈಲಿನ ಊಟದಲ್ಲಿ ಹುಳುಗಳು ಪತ್ತೆ; ಅಡುಗೆ ಕಂಪನಿಗೆ 50 ಲಕ್ಷ ರೂ. ದಂಡ

ನವದೆಹಲಿ, ಮಾರ್ಚ್ 26: ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (Vande Bharat Express) ನೀಡಲಾದ ಊಟದಲ್ಲಿ ಮೊಸರಿನಲ್ಲಿ ಹುಳುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ. ದಂಡ ವಿಧಿಸಿದೆ. ಹಾಗೇ, ಅಡುಗೆ ಒದಗಿಸುವವರಿಗೆ 50 ಲಕ್ಷ ರೂ. ದಂಡ ವಿಧಿಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿರುವ ಮೊಸರಿನಲ್ಲಿ ಹುಳುಗಳು ಕಂಡುಬಂದಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಸಚಿವಾಲಯ ಕಠಿಣ ಕ್ರಮ ಕೈಗೊಂಡಿದೆ. IRCTCಗೆ 1 ಮಿಲಿಯನ್ (10 ಲಕ್ಷ) ಮತ್ತು ಅಡುಗೆ…

Read More

Video: ಮಾಲಕಿಯ ಮೊಬೈಲ್ ಯಾರು ಮುಟ್ಟದಂತೆ ಕಾವಲಿಗೆ ನಿಂತ ಶ್ವಾನ

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನ ಮನೆಯ ಮಾಲೀಕರಿಗೆ (owner) ನಿಷ್ಠಾವಂತರಾಗಿರುತ್ತದೆ. ಮನೆಯವರ ಮಾತನ್ನು ಚಾಚು ತಪ್ಪದ್ದಂತೆ ಕೇಳುತ್ತದೆ. ಇದೀಗ ಈ ಮನೆ ಮಾಲಕಿ ಹೇಳಿದ ಮಾತನ್ನು ಚಾಚು ತಪ್ಪದ್ದಂತೆ ಈ ಶ್ವಾನವು ಪಾಲಿಸಿದೆ. ಮಾಲಕಿಯ ಮೊಬೈಲ್‌ ಯಾರು ಮುಟ್ಟದಂತೆ ಕಾವಲಿಗೆ ನಿಂತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಶ್ವಾನದ ಕರ್ತವ್ಯ ನಿಷ್ಠೆಯನ್ನು ಮೆಚ್ಚಿಕೊಂಡಿದ್ದಾರೆ. Rashmi Prajapati ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಶ್ವಾನದ…

Read More

ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು…

Read More

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಈ ಸಿನಿಮಾ ನೋಡಿರುವ ಶಿವರಾಜ್​ಕುಮಾರ್ (Shivarajkumar) ಅವರು ಮೆಚ್ಚಿಕೊಂಡಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಶಿವಣ್ಣ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರ ನಟನೆ, ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಶಿವಣ್ಣ ಭೇಷ್ ಎಂದಿದ್ದಾರೆ. ಇದರಿಂದಾಗಿ ‘ಧುರಂಧರ್ 2’ ಚಿತ್ರತಂಡಕ್ಕೆ ಬಲ ಹೆಚ್ಚಿದಂತಾಗಿದೆ. ಶಿವರಾಜ್​ಕುಮಾರ್ ಅವರ ವಿಮರ್ಶೆಗೆ ಆದಿತ್ಯ ಧರ್ (Aditya Dhar) ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಈ ಮಾತುಗಳಿಗೆ…

Read More