Headlines

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಈ ಸಿನಿಮಾ ನೋಡಿರುವ ಶಿವರಾಜ್​ಕುಮಾರ್ (Shivarajkumar) ಅವರು ಮೆಚ್ಚಿಕೊಂಡಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಶಿವಣ್ಣ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರ ನಟನೆ, ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಶಿವಣ್ಣ ಭೇಷ್ ಎಂದಿದ್ದಾರೆ. ಇದರಿಂದಾಗಿ ‘ಧುರಂಧರ್ 2’ ಚಿತ್ರತಂಡಕ್ಕೆ ಬಲ ಹೆಚ್ಚಿದಂತಾಗಿದೆ. ಶಿವರಾಜ್​ಕುಮಾರ್ ಅವರ ವಿಮರ್ಶೆಗೆ ಆದಿತ್ಯ ಧರ್ (Aditya Dhar) ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಈ ಮಾತುಗಳಿಗೆ…

Read More

17 ನಗರ, 22 ಪಂದ್ಯಗಳು; ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿ ಪ್ರಕಟ

19ನೇ ಆವೃತ್ತಿಯ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿದೆ. ಈ ಲೀಗ್​ಗೆ ಬಿಸಿಸಿಐ (BCCI) ಕೂಡ ಸರ್ವ ತಯಾರಿಯನ್ನು ಮಾಡಿಕೊಂಡಿದೆ. ಇತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸಿಕೊಂಡಿವೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಇದೆಲ್ಲದರ ನಡುವೆ ಬಿಸಿಸಿಐ, ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2026-27ರ ಕ್ರೀಡಾ ಕ್ಯಾಲೆಂಡರ್​ನಲ್ಲಿ ಭಾರತ ಪುರುಷರ ತಂಡ ತನ್ನ…

Read More

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ವ್ಯಕ್ತಿ ಸಾವು!

ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್​​ಫಾರ್ಮ್​ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

ಬೆಂಗಳೂರು, ಮಾರ್ಚ್​ 26: ಪೀಣ್ಯದ ಹೆಚ್​ಎಂಟಿ ಲೇಔಟ್‌ನ​ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ ಡಬಲ್ ಮರ್ಡರ್​​ (murder) ನಡೆದಿರುವಂತಹ ಘಟನೆ ನಡೆದಿದೆ. ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ಮತ್ತು ತಮ್ಮನನ್ನ ಹತ್ಯೆ ಮಾಡಲಾಗಿದೆ. ಯಮುನಾ(36) ಮತ್ತು ಸುದೀಪ್(34) ಕೊಲೆಯಾದವರು. ಸ್ಥಳಕ್ಕೆ ಡಿಸಿಪಿ ನಾಗೇಶ್, ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಡೆದಿದ್ದೇನು? ಆರೋಪಿ ತಾಯಿ ಛಾಯಾ ಹಾಗೂ ಯುಮುನಾ ಗಂಡನ ಮಧ್ಯೆ ಅಕ್ರಮ ಸಂಬಂಧ ಹಿನ್ನೆಲೆ ಇದನ್ನು ಪ್ರಶ್ನಿಸಲು ಛಾಯಾ ಮನೆಗೆ ಬಂದಿದ್ದ…

Read More

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 26: ಇರಾನ್ ಯುದ್ಧ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ (crude oil price) ಎರಡು ಪಟ್ಟು ಹೆಚ್ಚಾಗಿದೆ. ಆದರೂ ಭಾರತದಲ್ಲಿ ಸರ್ಕಾರದ ಸೂಚನೆ ಮೇರೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಏರಿಸಲಾಗಿಲ್ಲ. ಇದೀಗ ಖಾಸಗಿ ಇಂಧನ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5.30 ರೂ ಏರಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ. ಭಾರತದಲ್ಲಿ 2022ರಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ…

Read More

ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್

ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ.  ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ…

Read More

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ…

Read More

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವು

ಜೆರುಸಲೇಂ, ಮಾರ್ಚ್​ 26: ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು. ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್​​ನ ಮೂರು ಡಜನ್​ಗಿಂತಲೂ…

Read More

ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 26: ಬೆಂಗಳೂರು ಮಹಾನಗರದಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ ಮತ್ತು ಖಾತಾ ಬದಲಾವಣೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‘ಫೇಸ್‌ಲೆಸ್ ಆನ್‌ಲೈನ್ ಇ-ಖಾತಾ ಡಿಜಿಟಲ್ ಪ್ರಾಪರ್ಟಿ ರೆಕಾರ್ಡ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ಗೆ ಗೋಲ್ಡ್ ಮೆಡಲ್ ಲಭಿಸಿದೆ. ಇದು ಆಡಳಿತವನ್ನು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಇದುವರೆಗೆ 9.5 ಲಕ್ಷ ಖಾತೆಗಳನ್ನು ವಿತರಿಸಲಾಗಿದೆ. ಎ ಟು…

Read More

PM Narendra Modi: ವಿಶ್ವದ ಅತ್ಯಂತ ಜನಪ್ರಿಯ, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 26: ಮಾರ್ನಿಂಗ್ ಕನ್ಸಲ್ಟ್ ವಿಶ್ವದ ಅತ್ಯಂತ ವಿಶ್ವಾಸಾರ್ಹ ಮತ್ತು ಜನಪ್ರಿಯ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಲೀಡರ್ ಅಪ್ರೂವಲ್ ರ‍ೇಟಿಂಗ್ ಟ್ರ್ಯಾಕರ್​​ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಶೇ. 68ರಷ್ಟು ಜನ ಮೋದಿಯವರ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತದೆ ಈ ಸಮೀಕ್ಷಾ ವರದಿ. ಈ ಸಮೀಕ್ಷೆಯು ಮಾರ್ಚ್​ 2026ರ ಮೊದಲ ವಾರದ ದತ್ತಾಂಶವನ್ನು ಆಧರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆಯ ರೇಟಿಂಗ್ ಕೇವಲ ಶೇ….

Read More