ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ ಅತ್ಯಂತ ಪ್ರಮುಖ ಭಾಗವಾಗಿ ಫೆಬ್ರವರಿಯಿಂದ ಮುಚ್ಚಲ್ಪಟ್ಟಿದ್ದ ಹಾರ್ಮುಜ್ ಜಲಸಂಧಿಯನ್ನು ಜಾಗತಿಕ ಹಡಗು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಇತರೆ ದೇಶಗಳು ಕೂಡ ನಿಟ್ಟುಸಿರು ಬಿಡುವಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Tv9 Kannada News Live: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Karnataka Minimum Wage Hike, Telangana Heatwave Deaths and Actor Chetan Controversy

ಬೆಂಗಳೂರು, ಮೇ 24: ಕರ್ನಾಟಕದಲ್ಲಿ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು  (Minimum Wage) ಶೇ 60 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿಗೆ 16 ಜನರು ಬಲಿಯಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಜಾಗದ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ.

ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಬಂಪರ್ ಕೊಡುಗೆ

ಕರ್ನಾಟಕ ಸರ್ಕಾರವು 81 ವಲಯಗಳ ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ. ಕಾರ್ಮಿಕ ಇಲಾಖೆಯು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇ 22ರ ಶುಕ್ರವಾರವೇ ಈ ಅಧಿಕೃತ ಆದೇಶ ಹೊರಡಿಸಿದೆ. ಹೊಸ ನಿಯಮದಂತೆ ಇಡೀ ರಾಜ್ಯವನ್ನು 3 ವಲಯಗಳಾಗಿ ವಿಂಗಡಿಸಲಾಗಿದ್ದು, ಬೆಂಗಳೂರಿನಲ್ಲಿ ಉನ್ನತ ಕುಶಲ ಕಾರ್ಮಿಕರ ಮಾಸಿಕ ವೇತನ 31,114 ರೂ.ಗೆ ಏರಲಿದೆ. ಈ ಹೊಸ ಕನಿಷ್ಠ ವೇತನ ಸೌಲಭ್ಯವು ಇ-ಕಾಮರ್ಸ್, ಕೊರಿಯರ್ ಮತ್ತು ಖಾಸಗಿ ಶಾಲಾ ಸಿಬ್ಬಂದಿಗೂ ಅನ್ವಯವಾಗಲಿದ್ದು, ಈ ಹಿಂದೆ ಇದ್ದ 4 ಪ್ರತ್ಯೇಕ ವಲಯಗಳ ವರ್ಗೀಕರಣ ಪದ್ಧತಿಯನ್ನು ರದ್ದುಗೊಳಿಸಿ ಎಲ್ಲಾ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತರಲಾಗಿದೆ.

ಇದನ್ನೂ ಓದಿ ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ 60ರಷ್ಟು ಹೆಚ್ಚಳ!

ತೆಲಂಗಾಣದಲ್ಲಿ ಭೀಕರ ಬಿಸಿಲಿನ ಬೇಗೆ

ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ ಮತ್ತು ತೀವ್ರ ಬಿಸಿಲಿಗೆ ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ತುರ್ತು ಪರಿಶೀಲನಾ ಸಭೆ ನಡೆಸಿದ ಬಳಿಕ ಜಯಶಂಕರ್ ಭೂಪಾಲಪಲ್ಲಿಯಲ್ಲಿ 4, ವಾರಂಗಲ್, ಕರೀಮನಗರ, ನಿಜಾಮಾಬಾದ್‌ನಲ್ಲಿ ತಲಾ 3 ಹಾಗೂ ಗದ್ವಾಲ್, ರಂಗಾರೆಡ್ಡಿ, ಸೂರ್ಯಪೇಟ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

ಇದನ್ನೂ ಓದಿ ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು

ಡಾ. ರಾಜ್‌ಕುಮಾರ್ ಸಮಾಧಿ ಜಾಗದ ವಿವಾದ: ತಮ್ಮ ಹೇಳಿಕೆಗೆ ನಟ ಚೇತನ್ ಅಹಿಂಸಾ ಬದ್ಧ

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಪ್ರಶ್ನಿಸಿ ನೀಡಿದ್ದ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ರಾಜ್​ಕುಮಾರ್ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ, ಚೇತನ್ ತಮ್ಮ ನಿಲುವಿಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವೂ ರಾಜ್‌ಕುಮಾರ್ ಅಭಿಮಾನಿಗಳೇ, ಆದರೆ ಸರ್ಕಾರದ ಪಾಲಿಸಿಯಲ್ಲಿನ ಪಕ್ಷಪಾತದ ಬಗ್ಗೆ ನಾನು ಮೂರು ಸಾಲಿನ ಪೋಸ್ಟ್ ಮಾಡಿದ್ದೆ. ನಾನು ಹೇಳಿದ್ದರಲ್ಲಿ ಸತ್ಯ ಇದೆ ಎಂದು ಕರ್ನಾಟಕದ ಜನ ದೊಡ್ಡ ಪ್ರಮಾಣದಲ್ಲಿ ಒಪ್ಪಿಕೊಂಡಿದ್ದಾರೆ. ನಮಗೆ ಸಮಾನತೆಯ, ನ್ಯಾಯದ, ವೈಜ್ಞಾನಿಕತೆಯ ಸಮಾಜ ಬೇಕು” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:00 am, Sun, 24 May 26

Source link

ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ಮಂಗಳೂರು, ಮೇ 24: ವೀಕೆಂಡ್ ಹಾಗೂ ಬೇಸಿಗೆ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಶ್ರೀ ಮಂಜುನಾಥ ಸ್ವಾಮಿಯ ನೆಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಮತ್ತು ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿದ ಭಕ್ತರಿಂದ ದೇವಾಲಯಗಳ ಆವರಣದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜಂಗುಳಿ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ವಿವಿಧ ಪೂಜಾ ಸೇವೆಗಳನ್ನು ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಇದೇ ರೀತಿಯ ಜನಸಂದಣಿ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ; ಅಮೆರಿಕದ ಹೊಸ ಒಪ್ಪಂದದಲ್ಲೇನಿದೆ? – Kannada News | Iran agreed to surrender enriched uranium aas part of new US Peace deal

ಟೆಹ್ರಾನ್, ಮೇ 24: ಅಮೆರಿಕ ಪ್ರಸ್ತಾಪಿಸಿರುವ ಐತಿಹಾಸಿಕ ಶಾಂತಿ ಒಪ್ಪಂದದ (Peace Deal) ಭಾಗವಾಗಿ ತನ್ನ ಬಳಿ ಇರುವ ಸಂಸ್ಕರಿತ ಯುರೇನಿಯಂ (Enriched Uranium) ದಾಸ್ತಾನನ್ನು ಸಂಪೂರ್ಣವಾಗಿ ಒಪ್ಪಿಸಲು ಇರಾನ್ (Iran War) ಒಪ್ಪಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಜಾಗತಿಕ ರಾಜಕಾರಣ ಮತ್ತು ಮಧ್ಯಪ್ರಾಚ್ಯದ ಭದ್ರತೆಯ ದೃಷ್ಟಿಯಿಂದ ಈ ಬೆಳವಣಿಗೆಯನ್ನು ಅತ್ಯಂತ ಮಹತ್ವದ ತಿರುವು ಎಂದು ಪರಿಗಣಿಸಲಾಗಿದೆ.

ಪ್ರಮುಖ ಮುಖ್ಯಾಂಶಗಳು:

  • ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ
  • ಇರಾನ್-ಅಮೆರಿಕದ ನಡುವಿನ ಸಂಘರ್ಷದಲ್ಲಿ ಮಹತ್ವದ ತಿರುವು
  • ಉಭಯ ದೇಶಗಳೊಂದಿಗೆ ಶಾಂತಿ ಮಾತುಕತೆ

ಪ್ರಸ್ತುತ ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿರುವ ವಿಶಾಲ ಶಾಂತಿ ಒಪ್ಪಂದದ ಭಾಗವಾಗಿ ಇರಾನ್ ತನ್ನ ಹೆಚ್ಚು ಪುಷ್ಟೀಕರಿಸಿದ ಯುರೇನಿಯಂ ದಾಸ್ತಾನು ತ್ಯಜಿಸಲು ಒಪ್ಪಿಕೊಂಡಿದೆ ಎಂದು ಇಬ್ಬರು ಯುಎಸ್ ಅಧಿಕಾರಿಗಳು ದಿ ನ್ಯೂಯಾರ್ಕ್ ಟೈಮ್ಸ್‌ಗೆ ತಿಳಿಸಿದ್ದಾರೆ. ಯುದ್ಧವನ್ನು ಕೊನೆಗೊಳಿಸುವ ಮತ್ತು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಗುರಿಯನ್ನು ಹೊಂದಿರುವ ಒಪ್ಪಂದವನ್ನು ವಾಷಿಂಗ್ಟನ್ ಮತ್ತು ಟೆಹ್ರಾನ್ ಅಂತಿಮಗೊಳಿಸುವ ಹಂತಕ್ಕೆ ಬಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇದನ್ನೂ ಓದಿ: ಯುರೇನಿಯಂ ಇರಾನ್‌ನಲ್ಲಿಯೇ ಉಳಿಯಬೇಕು; ಅಮೆರಿಕದ ಪ್ರಮುಖ ಬೇಡಿಕೆ ತಿರಸ್ಕರಿಸಿದ ಮೊಜ್ತಾಬಾ ಖಮೇನಿ

ಇರಾನ್ ಮತ್ತು ಅಮೆರಿಕ ನಡುವೆ ತೆರೆಮರೆಯಲ್ಲಿ ನಡೆಯುತ್ತಿದ್ದ ಸುದೀರ್ಘ ಮಾತುಕತೆಗಳ ಫಲವಾಗಿ, ಇರಾನ್ ತನ್ನ ಪರಮಾಣು ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲು ಹಾಗೂ ಶೇಖರಿಸಿಟ್ಟಿರುವ ಸಂಸ್ಕರಿತ ಯುರೇನಿಯಂ ಅನ್ನು ಬಿಟ್ಟುಕೊಡಲು ಸಿದ್ಧವಾಗಿದೆ. ಉಲ್ಬಣಗೊಂಡಿರುವ ಪ್ರಾದೇಶಿಕ ಉದ್ವಿಗ್ನತೆಯನ್ನು ತಿಳಿಗೊಳಿಸಲು ಮತ್ತು ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ಸಡಿಲಗೊಳಿಸುವ ಪ್ರಸ್ತಾಪವನ್ನು ಅಮೆರಿಕ ಮುಂದಿಟ್ಟಿದೆ.

ಪರಮಾಣು ಬಾಂಬ್ ಅಥವಾ ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ತಯಾರಿಸಲು ‘ಸಂಸ್ಕರಿತ ಯುರೇನಿಯಂ’ ಅತ್ಯಂತ ಅಗತ್ಯವಾದ ಕಚ್ಚಾವಸ್ತುವಾಗಿದೆ. ಇರಾನ್ ರಹಸ್ಯವಾಗಿ ಪರಮಾಣು ಬಾಂಬ್ ತಯಾರಿಸುತ್ತಿದೆ ಎಂದು ಅಮೆರಿಕ ಮತ್ತು ಇಸ್ರೇಲ್ ದೀರ್ಘಕಾಲದಿಂದ ಆರೋಪಿಸುತ್ತಿದ್ದವು. ಈ ಹೊಸ ಒಪ್ಪಂದದ ಪ್ರಕಾರ, ಇರಾನ್ ತನ್ನ ಬಳಿ ಇರುವ ಹೆಚ್ಚಿನ ಪ್ರಮಾಣದ ಯುರೇನಿಯಂ ಅನ್ನು ಬೇರೆ ದೇಶಕ್ಕೆ ರಫ್ತು ಮಾಡಬೇಕಾಗುತ್ತದೆ ಅಥವಾ ಅದನ್ನು ಸಂಪೂರ್ಣವಾಗಿ ನಾಶಪಡಿಸಬೇಕಾಗುತ್ತದೆ. ಇದರಿಂದಾಗಿ ಇರಾನ್ ಸದ್ಯದ ಭವಿಷ್ಯದಲ್ಲಿ ಪರಮಾಣು ಬಾಂಬ್ ತಯಾರಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳಲಿದೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹತ್ಯೆಗೆ ಸುಪಾರಿ ಕೊಟ್ಟಿತೇ ಇರಾನ್?

ಈ ಕಠಿಣ ನಿರ್ಧಾರಕ್ಕೆ ಇರಾನ್ ಒಪ್ಪಿಕೊಳ್ಳಲು ಪ್ರಮುಖ ಕಾರಣ ಆರ್ಥಿಕ ಬಿಕ್ಕಟ್ಟು. ಅಮೆರಿಕ ವಿಧಿಸಿರುವ ಕಠಿಣ ಆರ್ಥಿಕ ನಿರ್ಬಂಧಗಳಿಂದಾಗಿ ಇರಾನ್‌ನ ತೈಲ ವ್ಯಾಪಾರ ಮತ್ತು ಬ್ಯಾಂಕಿಂಗ್ ವಲಯ ಭಾರಿ ನಷ್ಟ ಅನುಭವಿಸುತ್ತಿದೆ. ಈ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಇರಾನ್ ಮೇಲಿನ ಅಂತಾರಾಷ್ಟ್ರೀಯ ಆರ್ಥಿಕ ನಿರ್ಬಂಧಗಳು ಸಡಿಲಗೊಳ್ಳಲಿವೆ. ಇದರಿಂದ ಇರಾನ್ ಮತ್ತೆ ಜಾಗತಿಕ ಮಾರುಕಟ್ಟೆಗೆ ತೈಲ ರಫ್ತು ಮಾಡಲು ಮತ್ತು ತನ್ನ ಆರ್ಥಿಕತೆಯನ್ನು ಸುಧಾರಿಸಿಕೊಳ್ಳಲು ಹಾದಿ ಸುಗಮವಾಗಲಿದೆ. ಹೀಗಾಗಿ, ಇರಾನ್ ಅಮೆರಿಕದ ಈ ಷರತ್ತಿಗೆ ಒಪ್ಪಿಗೆ ನೀಡಿದೆ ಎನ್ನಲಾಗುತ್ತಿದೆ.

ಏನಿದು ಸಂಸ್ಕರಿತ ಯುರೇನಿಯಂ?:

ಯುರೇನಿಯಂ ಅನ್ನು ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚು ಸಂಸ್ಕರಿಸಿದಾಗ (Enriched) ಅದನ್ನು ಪರಮಾಣು ಬಾಂಬ್‌ ತಯಾರಿಸಲು ಬಳಸಬಹುದು. ಇರಾನ್ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಯುರೇನಿಯಂ ಸಂಸ್ಕರಣೆ ಮಾಡುತ್ತಿದೆ. ಅದರಿಂದ ಅದು ಯಾವುದೇ ಕ್ಷಣದಲ್ಲೂ ಅಣುಬಾಂಬ್ ತಯಾರಿಸಬಹುದು ಎಂದು ಅಮೆರಿಕ, ಇಸ್ರೇಲ್ ಮತ್ತು ಪಾಶ್ಚಿಮಾತ್ಯ ದೇಶಗಳು ಆತಂಕ ವ್ಯಕ್ತಪಡಿಸುತ್ತಿದ್ದವು. ಈಗ ಇರಾನ್ ಆ ಸಂಗ್ರಹವನ್ನು ಬಿಟ್ಟುಕೊಡುತ್ತಿರುವುದರಿಂದ ಜಾಗತಿಕ ಪರಮಾಣು ಭದ್ರತೆಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. ಉಭಯ ದೇಶಗಳ ಉನ್ನತ ಅಧಿಕಾರಿಗಳು ಶೀಘ್ರದಲ್ಲೇ ಈ ಒಪ್ಪಂದದ ಅಂತಿಮ ಕರಡಿಗೆ ಅಧಿಕೃತವಾಗಿ ಸಹಿ ಹಾಕುವ ಸಾಧ್ಯತೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 12:18 pm, Sun, 24 May 26

Source link

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ – Kannada News | Explosives found on pm modis route six police personnel suspended for security lapse in bengaluru

ಪ್ರಧಾನಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​: 6 ಮಂದಿ ಪೊಲೀಸರ ತಲೆದಂಡ

ಬೆಂಗಳೂರು, ಮೇ 24: ಮೇ 10ರಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಆರ್ಟ್​​ ಆಫ್​​ ಲಿವಿಂಗ್​​ಗೆ ತೆರಳುವ ಮಾರ್ಗ ಸಮೀಪವೇ ಸ್ಫೋಟಕ ಪತ್ತೆ ಕೇಸ್ ಸಂಬಂಧ ಪೊಲೀಸ್​​ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಲೆದಂಡವಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ ಪೊಲೀಸ್ ಅಧಿಕಾರಿಗಳು ‌ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಿ ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್​​
  • ಪ್ರಕರಣ ಸಂಬಂಧ ಒಟ್ಟು 6 ಮಂದಿ ಪೊಲೀಸರ ತಲೆದಂಡ
  • ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಅವರಿಂದ ಆದೇಶ

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್​ಐ, ಓರ್ವ ASI, ನಾಲ್ವರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ 10ರಂದು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹಿಗಾಗಿ ಅಲರ್ಟ್​​ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ; ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಮೇ 10ರಂದು ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಸ್ಫೋಟಕಗಳು ಕಂಡುಬಂದಿದ್ದವು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕವೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:56 am, Sun, 24 May 26

Source link

ಕೊನೆಗೂ ಕ್ಯಾಪ್ಚರ್ ಆಯ್ತು ನರಭಕ್ಷಕ ವ್ಯಾಘ್ರ: ಬಾಲಕನನ್ನು ಕೊಂದಿದ್ದ ಚಿರತೆ ಇದೇನಾ? – Kannada News | Chamarajanagar Leopard Captured: Child Killer Feline Trapped in Hanur, Sent to FSL

ಕೊನೆಗೆ ಕ್ಯಾಪ್ಚರ್ ಆಯ್ತು ನರಭಕ್ಷಕ ವ್ಯಾಘ್ರ

ಚಾಮರಾಜನಗರ, ಮೇ 24: ಜಿಲ್ಲೆಯಲ್ಲಿ ಚಿರತೆಯ ಅಟ್ಟಹಾಸ ಮಿತಿ ಮೀರಿದೆ. 15 ದಿನಗಳ ಹಿಂದೆ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರಿ ಬಾಲಕ ಚಿರತೆ  (Cheetah) ದಾಳಿಗೆ ಬಲಿಯಾಗಿದ್ದ. ಈ ಹಿನ್ನೆಲೆ ಕಳೆದ 15 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಈ ಪ್ರಾಣಿ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಬಳಿ ಇಟ್ಟಿದ್ದ ಬೋನಿನಲ್ಲಿ ಹೆಣ್ಣು ಚಿರತೆಯು ಸೆರೆಯಾಗಿದ್ದು, ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟದ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಬಾಲಕನನ್ನು ಕೊಂದಿದ್ದು ಇದೇ ಚಿರತೆ ಎಂಬುದಕ್ಕೆ ಸದ್ಯಕ್ಕೆ ಯಾವ ಸಾಕ್ಷಿಯೂ ಇಲ್ಲದ ಕಾರಣ ಚಿರತೆ ಸ್ಯಾಂಪಲ್ ಕಲೆಕ್ಟ್ ಮಾಡಿ FSLಗೆ ಕಳುಹಿಸಲಾಗಿದೆ.

ಮುಖ್ಯಾಂಶಗಳು

  • ಹನೂರು ತಾಲೂಕಿನ ಇಂಡಿಗನತ್ತ ಹಾಡಿಯಲ್ಲಿ ನರಭಕ್ಷಕ ಹೆಣ್ಣು ಚಿರತೆ ಕೊನೆಗೂ ಸೆರೆಯಾಗಿದೆ.
  • ಬಾಲಕನನ್ನು ಕೊಂದ ಚಿರತೆ ಇದೇನಾ ಎಂದು ತಿಳಿಯಲು ಎಫ್‌ಎಸ್‌ಎಲ್‌ಗೆ ಸ್ಯಾಂಪಲ್ ರವಾನೆ.
  • ಸೆರೆಯಾದ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುವುದು.

ಹಗಲಿರುಳೆನ್ನದೆ ನಡೆಸಿದ್ದ ಕಾರ್ಯಾಚರಣೆ ಕೊನೆಗೂ ಸಕ್ಸಸ್

ಕೆಲ ದಿನಗಳ ಹಿಂದೆ ಹರ್ಷಿತ್ ಎಂಬ ಬಾಲಕ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹರಕೆ ತೀರಿಸಲು ಪಾದಯಾತ್ರೆ ಕೈಗೊಂಡಿದ್ದ. ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕತೆ ಮುಗಿಸಿತ್ತು.

ಅಂದಿನಿಂದ ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವೈಲ್ಡ್ ಲೈಫ್ ಸಿಬ್ಬಂದಿ ಜಂಟಿಯಾಗಿ ಈ ಬೃಹತ್ ಕಾರ್ಯಾಚರಣೆ ನಡೆಸಿದ್ದರು. ಸುಮಾರು 30 ಮಂದಿ ಚಿರತೆ ತಜ್ಞರು (Leopard Experts), ಶಾರ್ಪ್ ಶೂಟರ್ಸ್ ಹಾಗೂ ಅರಣ್ಯ ವೀಕ್ಷಕರು (Watchers) ಕಳೆದ ಎರಡು ವಾರಗಳಿಂದ ಹಗಲಿರುಳು ದಟ್ಟ ಅರಣ್ಯದಲ್ಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೂ ಚಿರತೆ ಬರೋಬ್ಬರಿ 5 ಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳ ಮೇಲೆ ದಾಳಿ ನಡೆಸಿ ಕೊಂದು ತಿನ್ನುವ ಮೂಲಕ ಅರಣ್ಯ ಸಿಬ್ಬಂದಿಯ ನಿದ್ದೆಗೆಡಿಸಿತ್ತು.

ನಾಲ್ಕು ಕಡೆಗಳಲ್ಲಿ ಕೇಜ್

ಚಿರತೆ ಹಾವಳಿ ತಡೆಯಲು ಅರಣ್ಯ ಇಲಾಖೆಯು ಇಂಡಿಗನತ್ತ, ನಾಗಮಲೆ, ಮೆಂದಾರೆ ಸೇರಿದಂತೆ ಒಟ್ಟು ನಾಲ್ಕು ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನು (Cages) ಇಟ್ಟಿತ್ತು. ಈ ಪೈಕಿ ಇಂಡಿಗನತ್ತ ಹಾಡಿಯ ಬಳಿ ಇರಿಸಲಾಗಿದ್ದ ವಿಶೇಷ ‘ತುಮಕೂರು ಕೇಜ್’ನಲ್ಲಿ ಶ್ವಾನವೊಂದನ್ನು ಕಟ್ಟಲಾಗಿತ್ತು. ಇಂದು ಮುಂಜಾನೆ ಆ ಶ್ವಾನವನ್ನು ಬೇಟೆಯಾಡಲು ಬಂದ ಚಿರತೆಯು ಬೋನಿನೊಳಗೆ ಪ್ರವೇಶಿಸುತ್ತಿದ್ದಂತೆ ಲಾಕ್ ಆಗಿದೆ. ಈ ಕುರಿತು ಕಾವೇರಿ ವನ್ಯಜೀವಿಧಾಮದ ಡಿಸಿಎಫ್ (DCF) ಸುರೇಂದ್ರ ಅವರು ಟಿವಿ9 ವಾಹಿನಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಮಾದಪ್ಪನ ಬೆಟ್ಟದಲ್ಲಿ ನರಭಕ್ಷಕನ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬಾಲಕನನ್ನೇ ಕೊಂದು ತಿಂದ ಚಿರತೆ!

ಚಿರತೆ ಸ್ಯಾಂಪಲ್ ಟೆಸ್ಟ್

ಬೋನಿನಲ್ಲಿ ಸಿಲುಕಿರುವ ಚಿರತೆಯೇ ನಾಗಮಲೆಯಲ್ಲಿ ಹರ್ಷಿತ್ ಎಂಬ ಬಾಲಕನನ್ನು ಕೊಂದ ನರಭಕ್ಷಕನಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಸಿಬ್ಬಂದಿ ಮುಂದಾಗಿದ್ದಾರೆ. ಇದಕ್ಕಾಗಿ ಸೆರೆಯಾದ ಚಿರತೆಯ ಲಾಲಾರಸ, ಮಲ ಮತ್ತು ಮೂತ್ರದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿಕೊಡಲಾಗುತ್ತಿದೆ. ಸದ್ಯಕ್ಕೆ ಈ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲು ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಿಷಭ್ ಪಂತ್​ಗೆ ಗೇಟ್ ಪಾಸ್​? ಟಾಮ್ ಮೂಡಿ ಬಿಚ್ಚಿಟ್ಟ ಸತ್ಯ! – Kannada News | IPL 2026: LSG Set for Major Leadership Overhaul

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸತೊಡಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಗ್ಲೋಬಲ್ ಕ್ರಿಕೆಟ್ ಡೈರೆಕ್ಟರ್ ಟಾಮ್ ಮೂಡಿ ನೀಡಿರುವ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

“ನಾಯಕತ್ವದ ಬಗ್ಗೆ ಗಂಭೀರ ಚಿಂತನೆ ಅಗತ್ಯ”

ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಾಮ್ ಮೂಡಿ, “ಲಕ್ನೋ ಸೂಪರ್ ಜೈಂಟ್ಸ್​ ತಂಡದ ಭವಿಷ್ಯದ ನಾಯಕತ್ವದ ಬಗ್ಗೆ ನಾವು ಅತ್ಯಂತ ಗಂಭೀರವಾಗಿ ಯೋಚಿಸಬೇಕಾದ ಸಮಯ ಬಂದಿದೆ” ಎಂದು ನೇರವಾಗಿ ಹೇಳಿದ್ದಾರೆ. ಈ ಮೂಲಕ ಕೋಟಿ ಕೋಟಿ ಮುಖಬೆಲೆಗೆ ತಂಡ ಸೇರಿದ್ದ ರಿಷಭ್ ಪಂತ್ ಅವರ ನಾಯಕತ್ವಕ್ಕೆ ಕತ್ತರಿ ಬೀಳುವುದು ಬಹುತೇಕ ಖಚಿತ ಎಂಬ ಮುನ್ಸೂಚನೆ ಸಿಕ್ಕಿದೆ.

ಬದಲಾವಣೆಗೆ ಪ್ರಮುಖ ಕಾರಣಗಳು:

  • ಸತತ ಎರಡು ಸೀಸನ್‌ಗಳ ವೈಫಲ್ಯ: 2025ರ ಐಪಿಎಲ್‌ನಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡ, ಈ ಬಾರಿ (2026) ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳಲ್ಲೊಂದಾಗಿ ಹೊರಬಿದ್ದಿದೆ.
  •  ನಾಯಕನಾಗಿ ಪಂತ್ ವೈಫಲ್ಯ: ರಿಷಭ್ ಪಂತ್ ನಾಯಕತ್ವದಲ್ಲಿ ತಂಡವು ಕಳೆದ ಎರಡು ಸೀಸನ್‌ಗಳಲ್ಲಿ ಕೇವಲ 10 ಪಂದ್ಯಗಳನ್ನು ಗೆದ್ದು, ಬರೋಬ್ಬರಿ 18 ಪಂದ್ಯಗಳಲ್ಲಿ ಸೋಲನುಭವಿಸಿದೆ.
  •  ನಾಯಕನ ಮೇಲಿನ ಒತ್ತಡ: ₹27 ಕೋಟಿ ನೀಡಿ ರಿಷಭ್ ಪಂತ್ ಅವರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಾಗಿತ್ತು. ಆದರೆ ನಾಯಕತ್ವದ ಭಾರದಿಂದಾಗಿ ಅವರ ಬ್ಯಾಟಿಂಗ್ ಪ್ರದರ್ಶನದ ಮೇಲೆಯೂ ತೀವ್ರ ಪರಿಣಾಮ ಬೀರಿದೆ. ಅವರು ಎರಡು ಸೀಸನ್‌ಗಳಿಂದ ಕೇವಲ 135.74 ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ.
  •  ತಂಡದ ಆಂತರಿಕ ಭಿನ್ನಾಭಿಪ್ರಾಯ: ಸೀಸನ್ ಮಧ್ಯದಲ್ಲಿ “ತಂಡದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅತಿ ಹೆಚ್ಚು ನಾಯಕರುಗಳು ಇದ್ದಾರೆ” ಎಂದು ಪಂತ್ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದು ಮ್ಯಾನೇಜ್‌ಮೆಂಟ್ ಮತ್ತು ನಾಯಕನ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿತ್ತು.

ಭವಿಷ್ಯದ ಯೋಜನೆ ಏನು?

ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿಯು ಮುಂದಿನ ಸೀಸನ್‌ಗೆ ಸಂಪೂರ್ಣ ಹೊಸ ನಾಯಕತ್ವ ಮತ್ತು ತಂತ್ರಗಾರಿಕೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗುತ್ತಿದೆ. “ನಾವು ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಆದರೆ ತಂಡದ ಹಿತದೃಷ್ಟಿಯಿಂದ ಕಠಿಣ ಮತ್ತು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ” ಎಂದು ಮೂಡಿ ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಐಪಿಎಲ್ 2028 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಇತ್ತ ನಾಯಕತ್ವ ಕಳೆದುಕೊಂಡ ಬಳಿಕ ರಿಷಭ್ ಪಂತ್  ಕೇವಲ ವಿಕೆಟ್ ಕೀಪರ್ ಬ್ಯಾಟರ್ ಆಗಿ ಮುಂದುವರಿಯುತ್ತಾರಾ ಅಥವಾ ತಂಡದಿಂದಲೇ ಹೊರ ಬರಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Source link

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಮೇ 25 ರಿಂದ ಮೇ 31ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯವನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಾನಗಳು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಮೇಷ ರಾಶಿಯಲ್ಲಿ, ರವಿ ವೃಷಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಗುರು, ಶುಕ್ರ ಮತ್ತು ಬುಧ ಗ್ರಹಗಳು ಮಿಥುನ ರಾಶಿಯಲ್ಲಿ ಸಂಚರಿಸಲಿವೆ. ಮೇ 29 ರಂದು ಬುಧ ಗ್ರಹ ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶಿಸಲಿದೆ.

ಈ ವಾರದಲ್ಲಿ ಕೊಕ್ಕಡ ಪುತ್ತಿಗೆ ವರ್ದಂತಿ, ಸರ್ವತ್ರ ಏಕಾದಶಿ, ಸೌರ ನರಸಿಂಹ ಜಯಂತಿ ಮತ್ತು ಪ್ರದೋಷದಂತಹ ಶುಭ ದಿನಗಳು ಇವೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಸಂಬಂಧಗಳು ಮತ್ತು ಪ್ರಯಾಣದ ಯೋಗಗಳ ಬಗ್ಗೆ ಸೂಕ್ತ ಸಲಹೆಗಳನ್ನು ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಅಲ್ಲದೆ, ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ದೇವಸ್ಥಾನಗಳಿಗೆ ಭೇಟಿ, ದಾನ, ಮಂತ್ರ ಜಪ ಮತ್ತು ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ವಾರದಲ್ಲಿ ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಗುರೂಜಿ ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ – Kannada News | Digital Arrest Fraud: Elderly Woman Extorted of ₹24 Crore in Bengaluru, Five Arrested After Bank Manager Alerts Police

ಬೆಂಗಳೂರು, ಮೇ 24: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್​​ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಪ್ರಕರಣ ಬಯಲು
  • ವೃದ್ಧೆಯಿಂದ ಕೋಟಿ ಕೋಟಿ ಸುಲಿಗೆ ಮಾಡಿರುವ ಖದೀಮರು
  • ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ಎಂಬವರಿಗೆ ಪ್ರಾಪರ್ಟಿ ಮಾರಿದ್ದರಿಂದ ಕೋಟ್ಯಾಂತರ ರೂಪಾಯಿ ಹಣ ಬಂದಿತ್ತು. ಇವರ ಬ್ಯಾಂಕ್​​ ವಹಿವಾಟು ಮಾಹಿತಿ ಪಡೆದ ಆರೋಪಿಗಳು ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ಅವರನ್ನು ಬೆದರಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಲಕ್ಷ್ಮೀ ಅವರಿಗೆ ಭಯ ಹುಟ್ಟಿಸಿದ್ದ ಖದೀಮರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 24 ಕೋಟಿ ರೂಪಾಯಿ ಹಣವನ್ನು ಅವರಿಂದ ಪೀಕಿದ್ದಾರೆ. ಹೀಗಿದ್ದರೂ ಇವರ ಹಣದಾಹ ಮಾತ್ರ ತೀರಿರಲಿಲ್ಲ. ಹೀಗಾಗಿ ಮನೆಯಲ್ಲಿದ್ದ 1 ಕೆಜಿ 300 ಗ್ರಾಂ ಚಿನ್ನವನ್ನ ಅಡಿಟ್ಟು ಹಣ ಪಡೆಯಲು ಲಕ್ಷೀ ಬ್ಯಾಂಕ್​​ಗೆ ತೆರಳಿದ್ದರು. ಇದನ್ನು ಗಮನಿಸಿದ ಬ್ರಾಂಚ್ ಮ್ಯಾನೇಜರ್​​, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ; 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ಇನ್ನು ಕೂಡಲೇ ಬ್ಯಾಂಕ್​​ಗೆ ಬಂದ ಸಿಸಿಬಿ ಸೈಬರ್​​ ಪೊಲೀಸರು, ಲಕ್ಷ್ಮೀ ಅವರನ್ನು ಈ ಸಂಬಂಧ ವಿಚಾರಿಸಿದ್ದಾರೆ. ಆದರೆ ಆರಂಭದಲ್ಲಿ ಏನನ್ನೂ ಅವರು ಬಾಯು ಬಿಟ್ಟಿರಲಿಲ್ಲ. ಹೀಗಾಗಿ ತಮ್ಮದೇ ಸ್ಟೈಲ್​​ನಲ್ಲಿ ಪೊಲೀಸರು ಕೇಳಿದಾಗ ಡಿಜಿಟಲ್​​ ಅರೆಸ್ಟ್​​ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ಪಡೆದಿರುವ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪ್ರಕರಣ ಸಂಬಂಧ ತನಿಖೆಗಿಳಿದ ಖಾಕಿ ಮುಂಬೈ ,ಅಲಹಬಾದ್, ದೆಹಲಿ ಮೂಲದ ಆರೋಪಿಗನ್ನು ಹೆಡೆಮುರಿ ಕಟ್ಟಿದೆ. ಗೌರವ್ ಕುಮಾರ್ , ಓಂ ಪ್ರಕಾಶ್ ರಾಜ್ ಪುತ್ ಸೇರಿದಂತೆ ಐವರನ್ನು ಅರೆಸ್ಟ್ ಮಾಡಲಾಗಿದೆ. ಸುಲಿಗೆ ಮಾಡಿದ್ದ ಹಣವನ್ನು ಆರೋಪಿಗಳು ಒಟ್ಟು 22 ಖಾತೆಗಳಿಗೆ ವರ್ಗಾಯಿಸಿದ್ದು, 60 ಲಕ್ಷ ಹಣ ಇರುವ ಅಕೌಂಟ್​​ನ ಪೊಲೀಸರು ಸೀಜ್​​ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:25 am, Sun, 24 May 26

Source link

‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್ – Kannada News | Rocking Star Yash talks about Toxic movie female characters ahead of release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಸದ್ಯ ಬಿಡುಗಡೆಯ ಹಂತದಲ್ಲಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾ ಬಿಡುಗಡೆಗೂ ಮುನ್ನ ನಟ ಯಶ್ (Yash) ಈ ಚಿತ್ರದ ಕಥೆ ಮತ್ತು ಅದರಲ್ಲಿನ ಮಹಿಳಾ ಪಾತ್ರಗಳ ಕುರಿತು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿರುವ ಮಹಿಳಾ ಪಾತ್ರಗಳು ಅತ್ಯಂತ ಶಕ್ತಿಶಾಲಿ ಹಾಗೂ ಬೋಲ್ಡ್ ಆಗಿ ಮೂಡಿಬಂದಿವೆ ಎಂದು ಅವರು ಹೇಳಿದ್ದಾರೆ.

‘ವೆರೈಟಿ ಇಂಡಿಯಾ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಯಶ್, ‘ಸಾಮಾನ್ಯವಾಗಿ ಪುರುಷರಿಗೆ ಗ್ಯಾಂಗ್‌ಸ್ಟರ್ ಜಗತ್ತು ಅಥವಾ ಮನುಷ್ಯರ ಕರಾಳ ಮುಖದ ಬಗ್ಗೆ ಮಾತನಾಡಲು ಹೆಚ್ಚಿನ ಅವಕಾಶಗಳು ಸಿಗುತ್ತವೆ. ಆದರೆ ಆಳವಾದ ಭಾವನೆಗಳ ತಿಳುವಳಿಕೆ ಇರುವ ಗೀತು ಮೋಹನ್‌ದಾಸ್ ಅವರಂತಹ ನಿರ್ದೇಶಕಿ ಈ ಕರಾಳ ಜಗತ್ತಿನ ಕಥೆಯನ್ನು ಕೈಗೆತ್ತಿಕೊಂಡಾಗ, ಪ್ರತಿಯೊಂದು ದೃಶ್ಯವೂ ವಿಭಿನ್ನ ತಿರುವು ಪಡೆದುಕೊಳ್ಳುತ್ತದೆ’ ಎಂದಿದ್ದಾರೆ.

ಮುಂದುವರಿದು ಮಾತನಾಡಿದ ಯಶ್ ಅವರು, ‘ನಮ್ಮ ಸಿನಿಮಾದಲ್ಲಿ ಕೆಲವು ಮಹಿಳಾ ಪಾತ್ರಗಳಿವೆ. ಅವರು ನಿಜಕ್ಕೂ ತುಂಬಾ ಬೋಲ್ಡ್ ಮತ್ತು ಶಕ್ತಿಶಾಲಿ ಮಹಿಳೆಯರು. ತಮ್ಮ ಜೀವನದ ಜವಾಬ್ದಾರಿಯನ್ನು ತಾವೇ ಹೊತ್ತು, ಯಾವುದೇ ಪರಿಸ್ಥಿತಿಯಲ್ಲೂ ಬದುಕುಳಿಯುವ ಧೀರರು. ಪ್ರತಿಯೊಬ್ಬ ಮನುಷ್ಯನಲ್ಲೂ ಒಂದು ರೀತಿಯ ವಿಭಿನ್ನ ಹಿಂಸೆ ಇರುತ್ತದೆ. ಆದ್ದರಿಂದ, ಅಂತಹ ಪ್ರಬಲ ವ್ಯಕ್ತಿತ್ವಗಳನ್ನು ಕಥೆಯೊಳಗೆ, ಅದೂ ಕೂಡ ಒಬ್ಬ ಮಹಿಳೆಯ ದೃಷ್ಟಿಕೋನದ ಮೂಲಕ ತಂದಾಗ ಅದು ಪ್ರೇಕ್ಷಕರಿಗೆ ಸಂಪೂರ್ಣ ಹೊಸ ಅನುಭವ ನೀಡುತ್ತದೆ’ ಎಂದು ಯಶ್ ವಿವರಿಸಿದ್ದಾರೆ.

‘ಟಾಕ್ಸಿಕ್’ ಒಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಗೀತು ಮೋಹನ್‌ದಾಸ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಕ್ಷಯ್ ಒಬೆರಾಯ್, ಸುದೇವ್ ನಾಯರ್, ಅಮಿತ್ ತಿವಾರಿ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.

ಇದನ್ನೂ ಓದಿ: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ: ಯಶ್ ಸಿನಿಮಾದ ತೆರೆಹಿಂದೆ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರು

ಈ ಚಿತ್ರವನ್ನು ಏಕಕಾಲದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಆ್ಯಕ್ಷನ್ ಸೀಕ್ವೆನ್ಸ್‌ಗಳಿಗಾಗಿ ಹಾಲಿವುಡ್‌ನ ಪ್ರಸಿದ್ಧ ‘ಜಾನ್ ವಿಕ್’ ಸಿನಿಮಾ ಖ್ಯಾತಿಯ ಜೆಜೆ ಪೆರ್ರಿ ಸಾಹಸ ನಿರ್ದೇಶನ ಮಾಡಿದ್ದರೆ, ಭಾರತದ ಖ್ಯಾತ ಅನ್ಬರಿವ್ ಜೋಡಿ ಕೂಡ ಕೆಲವು ಪ್ರಮುಖ ಸಾಹಸ ದೃಶ್ಯಗಳನ್ನು ಸಂಯೋಜಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version