ನವದೆಹಲಿ, ಮಾರ್ಚ್ 26: ಆನ್ಲೈನ್ನಲ್ಲಿ ಸಾಕಷ್ಟು ವಂಚನೆಗಳಾಗುತ್ತವೆ. ವಾಟ್ಸಾಪ್, ಟೆಲಿಗ್ರಾಮ್ ಇತ್ಯಾದಿ ಮೆಸೇಜಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ವಂಚಕ ವೆಬ್ಸೈಟ್ಗಳಿಗೆ ದಾರಿ ಕೊಡುವ ನಕಲಿ ಲಿಂಕ್ಗಳನ್ನು ಹಾಕಿ ಯಾಮಾರಿಸುವವರು ಬಹಳ ಇದ್ದಾರೆ. ಹಾಗೆಯೇ, ಷೇರು ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮೂಲಕ ಅದ್ಬುತವಾಗಿ ಸಂಪಾದನೆ ಮಾಡಬಹುದು ಎಂದು ಪುಸಲಾಯಿಸಿ, ನಕಲಿ ಟ್ರೇಡಿಂಗ್ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಮಾಡಲಾಗುತ್ತದೆ. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇವಕ್ಕೆ ಕಡಿವಾಣ ಹಾಕಲು ಮತ್ತು ಹೂಡಿಕೆದಾರರನ್ನು ವಂಚಕರಿಂದ ರಕ್ಷಿಸಲು ಸೆಬಿ (SEBI) ಹೊಸ ಉಪಾಯ ಮಾಡಿದೆ. ಷೇರು ಟ್ರೇಡಿಂಗ್ ಆ್ಯಪ್ಗಳನ್ನು ಸುಲಭವಾಗಿ ಗುರುತಿಸಬಲ್ಲಂತಹ ಉಪಾಯ ಇದು.
ಸೆಬಿಯಿಂದ ಮಾನ್ಯತೆ ಹೊಂದಿರುವ ಷೇರು ಟ್ರೇಡಿಂಗ್ ಆ್ಯಪ್ಗಳಿಗೆ ಗೂಗಲ್ ಪ್ಲೇಸ್ಟೋರ್ನಲ್ಲಿ ವೆರಿಫೈ ಲೇಬಲ್ ಹಾಕುವ ಕ್ರಮವನ್ನು ಸೆಬಿ ಜಾರಿಗೆ ತಂದಿದೆ. ಷೇರು ಮಾರುಕಟ್ಟೆಯ ಬ್ರೋಕರ್ ಎಂದು ಹೇಳಿ ಜನರನ್ನು ವಂಚಿಸುತ್ತಿರುವ ಸಮಸ್ಯೆ ನಿವಾರಿಸಲು ಈ ಪ್ರಯತ್ನ ನಡೆದಿದೆ.
ಇತ್ತೀಚಿನ ವರ್ಷಗಳಲ್ಲಿ ಪ್ಲೇಸ್ಟೋರ್ನಲ್ಲಿ ನಕಲಿ ಟ್ರೇಡಿಂಗ್ ಆ್ಯಪ್ಗಳ ಸಂಖ್ಯೆ ಬಹಳ ಹೆಚ್ಚಿದೆ. ಗ್ರೋ, ಝಿರೋಧ ಕೈಟ್, ಏಂಜೆಲ್ ಒನ್ ಇತ್ಯಾದಿ ಅಧಿಕೃತ ಪ್ಲಾಟ್ಫಾರ್ಮ್ಗಳನ್ನು ಹೋಲುವ ರೀತಿಯ ನಕಲಿ ಆ್ಯಪ್ಗಳನ್ನು ತಯಾರಿಸಿ ಅಮಾಯಕ ಜನರನ್ನು ಸೆಳೆಯಲಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆತಂಕ ಮೂಡಿಸುತ್ತಿವೆ.
ಈ ಕಾರಣಕ್ಕೆ ಸೆಬಿ ನೊಂದಾಯಿತ ಟ್ರೇಡಿಂಗ್ ಆ್ಯಪ್ಗಳಿಗೆ ಪ್ಲೇ ಸ್ಟೋರ್ನಲ್ಲಿ ವೆರಿಫೈಡ್ ಟ್ಯಾಗ್ ಕಾಣುವಂತೆ ಇಡಲಾಗುತ್ತಿದೆ. ಈ ಕಾರ್ಯಕ್ಕಾಗಿ ಸೆಬಿ ಮತ್ತು ಗೂಗಲ್ ಕೈಜೋಡಿಸಿವೆ.
19ನೇ ಆವೃತ್ತಿಯ ಐಪಿಎಲ್ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ನಡೆಯಲಿರುವ ಉಳಿದ 50 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಈ ಎಲ್ಲಾ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಡಬಲ್ ಹೆಡರ್ ಪಂದ್ಯ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಎರಡನೇ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಎಂದಿನಂತೆ ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ದಿನಾಂಕಗಳನ್ನು ಲೀಗ್ ಹಂತದ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು.
ಐಪಿಎಲ್ 2026 ರ ಸಂಪೂರ್ಣ ವೇಳಾಪಟ್ಟಿ
1. ಮಾರ್ಚ್ 28 (ಶನಿವಾರ): ಸನ್ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
2. ಮಾರ್ಚ್ 29 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
3. ಮಾರ್ಚ್ 30 (ಸೋಮವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
4. ಮಾರ್ಚ್ 31 (ಮಂಗಳವಾರ): ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
5. ಏಪ್ರಿಲ್ 01 (ಬುಧವಾರ): ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
6. ಏಪ್ರಿಲ್ 02 (ಗುರುವಾರ): ಸನ್ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
7. ಏಪ್ರಿಲ್ 03 (ಶುಕ್ರವಾರ): ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
8. ಏಪ್ರಿಲ್ 04 (ಶನಿವಾರ): ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಮಧ್ಯಾಹ್ನ 3:30)
9. ಏಪ್ರಿಲ್ 04 (ಶನಿವಾರ): ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
10. ಏಪ್ರಿಲ್ 05 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
11. ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
12. ಏಪ್ರಿಲ್ 06 (ಸೋಮವಾರ): ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
13. ಏಪ್ರಿಲ್ 07 (ಮಂಗಳವಾರ): ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
14. ಏಪ್ರಿಲ್ 08 (ಬುಧವಾರ): ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಸಂಜೆ 7:30)
15. ಏಪ್ರಿಲ್ 09 (ಗುರುವಾರ): ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
16. ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)
17. ಏಪ್ರಿಲ್ 11 (ಶನಿವಾರ): ಸನ್ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಮಧ್ಯಾಹ್ನ 3:30)
18. ಏಪ್ರಿಲ್ 11 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
19. ಏಪ್ರಿಲ್ 12 (ಭಾನುವಾರ): ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಮಧ್ಯಾಹ್ನ 3:30)
20. ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
21. ಏಪ್ರಿಲ್ 13 (ಸೋಮವಾರ): ರಾಜಸ್ಥಾನ ರಾಯಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
22. ಏಪ್ರಿಲ್ 14 (ಮಂಗಳವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
23. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
24. ಏಪ್ರಿಲ್ 16 (ಗುರುವಾರ): ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
25. ಏಪ್ರಿಲ್ 17 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
26. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)
27. ಏಪ್ರಿಲ್ 18 (ಶನಿವಾರ): ಚೆನ್ನೈ ಸೂಪರ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
28. ಏಪ್ರಿಲ್ 19 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಮಧ್ಯಾಹ್ನ 3:30)
29. ಏಪ್ರಿಲ್ 19 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
30. ಏಪ್ರಿಲ್ 20 (ಸೋಮವಾರ): ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
31. ಏಪ್ರಿಲ್ 21 (ಮಂಗಳವಾರ): ಡೆಲ್ಲಿ ಕ್ಯಾಪಿಟಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
32. ಏಪ್ರಿಲ್ 22 (ಬುಧವಾರ): ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
33. ಏಪ್ರಿಲ್ 23 (ಗುರುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
34. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
35. ಏಪ್ರಿಲ್ 25 (ಶನಿವಾರ): ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಮಧ್ಯಾಹ್ನ 3:30)
36. ಏಪ್ರಿಲ್ 25 (ಶನಿವಾರ): ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
37. ಏಪ್ರಿಲ್ 26 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಮಧ್ಯಾಹ್ನ 3:30)
38. ಏಪ್ರಿಲ್ 26 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
39. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
40. ಏಪ್ರಿಲ್ 28 (ಮಂಗಳವಾರ): ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
41. ಏಪ್ರಿಲ್ 29 (ಬುಧವಾರ): ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
42. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
43. ಮೇ 01 (ಶುಕ್ರವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
44. ಮೇ 02 (ಶನಿವಾರ): ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
45. ಮೇ 03 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
46. ಮೇ 03 (ಭಾನುವಾರ): ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
47. ಮೇ 04 (ಸೋಮವಾರ): ಲಕ್ನೋ ಸೂಪರ್ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
48. ಮೇ 05 (ಮಂಗಳವಾರ): ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
49. ಮೇ 06 (ಬುಧವಾರ): ಪಂಜಾಬ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
50. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
51. ಮೇ 08 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
52. ಮೇ 09 (ಶನಿವಾರ): ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
53. ಮೇ 10 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಮಧ್ಯಾಹ್ನ 3:30)
54. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
55. ಮೇ 11 (ಸೋಮವಾರ): ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
56. ಮೇ 12 (ಮಂಗಳವಾರ): ಸನ್ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
57. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
58. ಮೇ 14 (ಗುರುವಾರ): ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
59. ಮೇ 15 (ಶುಕ್ರವಾರ): ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
60. ಮೇ 16 (ಶನಿವಾರ): ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
61. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)
62. ಮೇ 17 (ಭಾನುವಾರ): ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
63. ಮೇ 18 (ಸೋಮವಾರ): ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
64. ಮೇ 19 (ಮಂಗಳವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
65. ಮೇ 20 (ಬುಧವಾರ): ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
66. ಮೇ 21 (ಗುರುವಾರ): ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
67. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
68. ಮೇ 23 (ಶನಿವಾರ): ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
69. ಮೇ 24 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಮಧ್ಯಾಹ್ನ 3:30)
70. ಮೇ 24 (ಭಾನುವಾರ): ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಾಸ್ಕೋ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಈ ಸಂಘರ್ಷವು ಕೋವಿಡ್ನಂತೆ ಜಾಗತಿಕ ಪರಿಣಾಮ ಬೀರಬಹುದು ಎಂದರು. ಸಂಘರ್ಷವು ಈಗಾಗಲೇ ಇಂಟರ್ನ್ಯಾಷನಲ್ ಲಾಜಿಸ್ಟಿಕ್ಸ್, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ ಮತ್ತು ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ ಎಂದು ಹೇಳಿದ್ದಾರೆ.
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮಧ್ಯಪ್ರಾಚ್ಯವನ್ನು ವ್ಯಾಪಕ ಬಿಕ್ಕಟ್ಟಿನ ಹತ್ತಿರಕ್ಕೆ ತಳ್ಳಿದೆ. ಮಧ್ಯಪ್ರಾಚ್ಯದಲ್ಲಿ ಈಗ ಎದ್ದಿರುವ ಬಿಕ್ಕಟ್ಟು ಬೇಗ ಬಗೆಹರಿಯುವುದಿಲ್ಲ, ಯಾವಾಗ ಅಂತ್ಯವಾಗುತ್ತೆ ಅಂತಾ ಯುದ್ಧ ಆರಂಭಿಸಿದವರಿಗೆ ಗೊತ್ತಿಲ್ಲ.ಯಾವಾಗ ಏನಾಗುತ್ತೋ ಅಂತಾ ಹೇಳಲು ಯಾರಿಗೂ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಮೇಲ್ನೋಟಕ್ಕೆ ಇದು ಕೇವಲ ಮೂರು ದೇಶಗಳ ನಡುವಿನ ಕಾದಾಟದಂತೆ ಕಾಣಿಸಬಹುದು, ಆದರೆ ಸಾಕಷ್ಟು ರಾಷ್ಟ್ರಗಳ ಮೇಲೆ ಇದರ ದುಷ್ಪರಿಣಾಮ ಬೀರುತ್ತಿದೆ.ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವೆ ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ, ರಷ್ಯಾ ಇರಾನ್ನ ಪರಿವಾಗಿ ಕೆಲಸ ಮಾಡುತ್ತಿದೆ.
ಉಕ್ರೇನ್ ಯುದ್ಧದಲ್ಲಿ ತನಗೆ ನಿರಂತರವಾಗಿ ಆತಂಕ ತಂದೊಡ್ಡಿದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಲಾಡಿಮಿರ್ ಪುಟಿನ್ಗೆ ಇದೊಂದು ಉತ್ತಮ ಅವಕಾಶ ಎಂದೇ ಹೇಳಬಹುದು. ರಷ್ಯಾ ನೀಡುತ್ತಿರುವ ಈ ನೈಜ ಸಮಯದ ಗುಪ್ತಚರ ಮಾಹಿತಿ ಆಧರಿಸಿ, ಇರಾನ್ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದೆ.
ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು.
ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್ನ ಮೂರು ಡಜನ್ಗಿಂತಲೂ ಹೆಚ್ಚು ಪ್ರಮುಖ ಮಿಲಿಟರಿ ಕಮಾಂಡರ್ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಬಹುದು. ಇರಾನ್ ತನ್ನ ಉನ್ನತ ಮಿಟಿಲರಿ ಅಧಿಕಾರಿಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಭಯವಿದೆ, ಇದು ಗಲ್ಫ್ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಭದ್ರತಾ ಬಿಕ್ಕಟ್ಟನ್ನು ಇನ್ನಷ್ಟು ಆಳಗೊಳಿಸುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ, ಮಾರ್ಚ್ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death)ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್ ಎನ್ನುವವರನ್ನು ಮದುವೆಯಾಗಿ 16 ವರ್ಷವಾಗಿದೆ. ದಂಪತಿ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲವಂತೆ. ಆದರೆ ಇತ್ತೀಚೆಗೆ ತವರು ಮನೆಗೆ ಹೋಗಿದ್ದು, ಮಾವನ ತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದರಂತೆ.
ವಾಪಸ್ ಗಂಡನ ಮನೆಗೆ ಬರುತ್ತಿದ್ದಂತೆ ವಿಚಿತ್ರವಾಗಿ ವರ್ತಿಸುವುದು, ಕುಂತ್ರು ನಿಂತ್ರು ಯಾರೋ ಎದುರುಗಡೆ ಬಂದು ಕಾಟ ಕೊಡುತ್ತಿರುವ ಅನುಭವ ಆಗುತ್ತಿತ್ತಂತೆ. ಹೀಗಾಗಿ ಪತಿ ರಮೇಶ್ ಕೆಲಸ ಕಾರ್ಯ ಬಿಟ್ಟು ಒಂದು ವಾರದಿಂದ ದೇವರು ದಿಂಡಿರು, ಮಂತ್ರವಾದಿ ಎಂದು ಅಲೆದಾಡಿದ್ದಾರೆ. ಮೇಲೂರಿನ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಮಂತ್ರವಾದಿ ಬಳಿ ಹೋಗಿ ತಾಯತ ಕಟ್ಟಿಸಿದ್ದರು. ಆದರೂ ವಾಸಿಯಾಗಿರಲಿಲ್ಲ. ಬಳಿಕ ವೈದ್ಯರ ಬಳಿ ತೋರಿಸಿದರೂ ಏನೂ ಪ್ರಯೋಜನವಾಗಿಲ್ಲ. ವಿಚಿತ್ರವಾಗಿ ವರ್ತಿಸಿ ಕೊನೆಗೆ ಪ್ರಾಣವನ್ನೇ ಬಿಟ್ಟಿದ್ದಾರೆ.
ಮೃತಳ ತಾಯಿ ಆಕ್ರೋಶ
ಯಾರೋ ದೊಡ್ಡಬಳ್ಳಾಪುರದ ಸುನಿಲ್ ಎನ್ನುವವರ ದೃಶ್ಯ ಕಣ್ಮುಂದೆ ಬರುತ್ತೆ. ತಾಳುವುದಕ್ಕೆ ಆಗುತ್ತಿಲ್ಲ ಅಂತ ಚಡಪಡಿಸುತ್ತಿದ್ದರೆಂದು ರಮೇಶ್ ಹೇಳಿದ್ದಾರೆ. ಇತ್ತ ಮಂಜಳಾ ತವರು ಮನೆಯವರು ಏಕೆ ನಮಗೆ ಮೊದಲೇ ಹೇಳಲಿಲ್ಲ. ಸತ್ತ ಮೇಲೆ ಹೇಳಿದ್ದಾರೆ ಅಂತ ಮೃತಳ ತಾಯಿ ಗಂಗಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಜುಳಾರಿಗೆ ದೆವ್ವ, ಭೂತದ ಕಾಟನೋ ಇಲ್ಲಾ ಯಾರದ್ದಾದರೂ ಭಯನೋ ಗೊತ್ತಿಲ್ಲ. ಮನೋರೋಗ ತಜ್ಞರ ಬಳಿ ಚಿಕಿತ್ಸೆ ಕೊಡಿಸಿದ್ದರೆ ಮಂಜುಳಾ ಬದುಕುಳಿಯುತ್ತಿದ್ದರೋ ಏನೋ, ಮಂತ್ರವಾದಿಗಳ ಮಾತು ಕೇಳಿ, ದೆವ್ವದ ಭೀತಿಯಿಂದ ಆಚೆ ಬರದೆ ಮೃತಪಟ್ಟಿರುವುದು ಮಾತ್ರ ವಿಪರ್ಯಾಸ.
ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ನೋಡನೋಡುತ್ತಿದ್ದಂತೆಯೇ ಒಂದು ತಿಂಗಳು ಕಳೆದಿದೆ.
ಮದುವೆಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಭಾರಿ ಗ್ರ್ಯಾಂಡ್ ಆಗಿ ನಡೆದ ರಶ್ಮಿಕಾ ಮಂದಣ್ಣ-ವಿಜಯ್ ಮದುವೆಯ ಸುಂದರ ಕ್ಷಣಗಳು ಈ ಫೋಟೋಗಳಲ್ಲಿ ಸೆರೆಯಾಗಿವೆ.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಬಟ್ಟೆಯನ್ನು ಸಖತ್ ರಾಯಲ್ ಆಗಿ ವಿನ್ಯಾಸ ಮಾಡಲಾಗಿತ್ತು. ನಂತರ ನಡೆದ ರಿಸೆಪ್ಷನ್ ಕೂಡ ತುಂಬಾ ಅದ್ದೂರಿಯಾಗಿ ಆಯೋಜನಗೊಂಡಿತ್ತು.
ಸಿನಿಮಾದಲ್ಲಿ ಮಾತ್ರವಲ್ಲದೇ ನಿಜಜೀವನದಲ್ಲೂ ರಶ್ಮಿಕಾ ಹಾಗೂ ವಿಜಯ್ ಜೋಡಿ ಆಗಿದ್ದು ಅವರ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಮದುವೆಯ ಫೋಟೋಸ್ ನೋಡಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.
‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಬಳಿಕ ‘ರಣಬಾಲಿ’ ಸಿನಿಮಾದಲ್ಲಿ ಕೂಡ ರಶ್ಮಿಕಾ ಹಾಗೂ ವಿಜಯ್ ಜೋಡಿ ಆಗುತ್ತಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.
ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ.
ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ವರದಿಯ ಪ್ರಕಾರ, ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ (Thunderstorms & Gusty Winds) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲು ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಮರದ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಮುಂದಿನ 7 ದಿನಗಳ #ಹವಾಮಾನ#ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಹಾಗೂ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ pic.twitter.com/2E0tFxVFZ7
— Karnataka State Natural Disaster Monitoring Centre (@KarnatakaSNDMC) March 26, 2026
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಲೆನಾಡು ಭಾಗಗಳಾದ ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ, ಸೆಖೆ ಹೆಚ್ಚಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಬಿಸಿಲಿನ ತಾಪಮಾನ 40°C ದಾಟುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ.
ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್ ಮರ್ಡರ್ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು. ಈ ವೇಳೆ ಮನೆಯಲ್ಲೇ ಇದ್ದ ಛಾಯಾಳ ಮಗ, ಇಬ್ಬರನ್ನೂ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇನ್ನು ಕೊಲೆಯಾದ ಸುದೀಪ್ ಮಾವನ ಆಕ್ರಂದನ ಮುಗಿಲು ಮುಟ್ಟಿದೆ.
ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ‘ಧುರಂಧರ್: ದಿ ರಿವೆಂಜ್’(Dhurandhar: The Revenge) ಚಿತ್ರದ ನಾಗಾಲೋಟಕ್ಕೆ ತಡೆ ಇಲ್ಲದಂತಾಗಿದೆ. ವಾರಾಂತ್ಯದ ನಂತರವೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಿತ್ರ, ಮಾರ್ಚ್ 23 (ಸೋಮವಾರ) ಮತ್ತು ಮಾರ್ಚ್ 24 (ಮಂಗಳವಾರ) ಕೂಡ ತಲಾ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದೆ.
2025ರಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು ಭಾರತದಲ್ಲಿ ಬರೋಬ್ಬರಿ 1000 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿ ದಾಖಲೆ ನಿರ್ಮಿಸಿತ್ತು. ಇದೀಗ ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ ಚಿತ್ರವು ಹಳೇ ದಾಖಲೆಯನ್ನು ಅಳಿಸಿ ಹಾಕುವುದು ಮಾತ್ರವಲ್ಲದೆ, ಹೊಸ ಮೈಲಿಗಲ್ಲು ಸ್ಥಾಪಿಸುವತ್ತ ಮುನ್ನುಗ್ಗುತ್ತಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಹೊಸ ಇತಿಹಾಸ ಬರೆಯುವ ಲಕ್ಷಣ ಕಾಣಿಸಿದೆ.
ರಣವೀರ್ ಸಿಂಗ್ ಅಭಿನಯದ ಈ ಚಿತ್ರವು ಆರಂಭದಲ್ಲಿ 1000 ಕೋಟಿ ರೂಪಾಯಿಗಳ ಗಡಿಯನ್ನು ದಾಟಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪ್ರಸ್ತುತ ಚಿತ್ರಮಂದಿರಗಳಲ್ಲಿ ಕಂಡುಬರುತ್ತಿರುವ ಕ್ರೇಜ್ ನೋಡಿದರೆ ಈ ಚಿತ್ರವು ಕೇವಲ ದೇಶೀಯ ಮಾರುಕಟ್ಟೆಯಲ್ಲೇ 1500 ಕೋಟಿ ರೂಪಾಯಿಗಳ ಲೈಫ್ ಟೈಮ್ ಗಳಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ರಣವೀರ್ ಸಿಂಗ್ ಅವರ ಅಭಿನಯ ಮತ್ತು ಅದ್ದೂರಿ ಮೇಕಿಂಗ್ ಈ ಸಿನಿಮಾದ ಯಶಸ್ಸಿಗೆ ಪ್ರಮುಖ ಕಾರಣಗಳಾಗಿವೆ. ದಿನದಿಂದ ದಿನಕ್ಕೆ ಚಿತ್ರದ ಜನಪ್ರಿಯತೆ ಹೆಚ್ಚುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್ 2’ ಅಬ್ಬರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಅನೇಕ ಸೆಲೆಬ್ರಿಟಿಗಳು ಭೇಷ್ ಎನ್ನುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
‘ಧುರಂಧರ್ 2’ ಸಿನಿಮಾ ತೆರೆಕಂಡು ಒಂದು ವಾರ ಕಳೆದಿದೆ. ಅಷ್ಟರಲ್ಲೇ ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾಗೆ 600 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಆಗಿದೆ. ವಿಶ್ವಾದ್ಯಂತ 1000 ಕೋಟಿ ರೂಪಾಯಿ ಮೀರಿದೆ. ಹಿಂದಿ ಮಾತ್ರವಲ್ಲದೇ ದಕ್ಷಿಣ ಭಾರತದ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿ ತೆರೆಕಂಡಿದೆ.
ನವದೆಹಲಿ, ಮಾರ್ಚ್ 26: ಆಸ್ಪತ್ರೆಯಲ್ಲಿ ತಾಯಿ ಸೋನಿಯಾಗಾಂಧಿಯನ್ನು ಚೆನ್ನಾಗಿ ನೋಡಿಕೊಂಡ ಕೇರಳದ ನರ್ಸ್ ಬಗ್ಗೆ ರಾಹುಲ್ ಗಾಂಧಿ(Rahul Gandhi) ಶ್ಲಾಘಿಸಿದ್ದರು. ಅದಕ್ಕೆ ವೈದ್ಯರಾದ ಸುಧೀರ್ ಕುಮಾರ್ ಮಾತನಾಡಿದ್ದು, ಎಲ್ಲಾ ನರ್ಸ್, ವೈದ್ಯರು ಹಾಗೂ ಇತರೆ ಆರೋಗ್ಯ ವೃತ್ತಿಪರರ ಬಗ್ಗೆ ನಮಗೆ ಹೆಮ್ಮೆ ಇದೆ. ರಾತ್ರಿಯಲ್ಲಿ ಕೆಲಸ ಮಾಡದೆ ಬೇರೆ ಆಯ್ಕೆ ಅವರಿಗಿರುವುದಿಲ್ಲ.
ರಾತ್ರಿಯಲ್ಲಿ ಕೆಲಸ ಮಾಡುವ ನರ್ಸ್ಗಳು ಹಗಲಿನ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಬಿಡುವಿನ ವೇಳೆ ಮಲಗುತ್ತಾರೆ. ರಾತ್ರಿ ಶಿಫ್ಟ್ ಸರದಿಯಲ್ಲಿ ಬರುತ್ತವೆ. ಹೆಚ್ಚಿನ ನರ್ಸ್ಗಳು ಕೇರಳದವರಾಗಿದ್ದರೂ, ಇತರ ಭಾರತೀಯ ರಾಜ್ಯಗಳ ನರ್ಸ್ಗಳು ಕೂಡ ಕೆಲಸ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಬರೆದಿದ್ದಾರೆ.
‘‘ ನಾನು ಆಸ್ಪತ್ರೆಯಲ್ಲಿ ತಾಯಿಯಿದ್ದ ಕೋಣೆಯಲ್ಲಿ ಒಂದು ಸಣ್ಣ ಸೋಫಾದ ಮೇಲೆ ಮಲಗಿದ್ದೆ, ಎಲ್ಲಾ ಮಕ್ಕಳಂತೆ ನಾನೂ ಕೂಡ ತಾಯಿಯ ಆರೋಗ್ಯದ ಬಗ್ಗೆ ಚಿಂತಿತನಾಗಿದ್ದೆ. ಕೇರಳದ ನರ್ಸ್ ಒಬ್ಬರು ನನ್ನ ತಾಯಿಯ ಬ್ಗಗೆ ತುಂಬಾ ಕಾಳಜಿವಹಿಸಿದ್ದರು, ಅದು ನನಗೆ ಸಮಾಧಾನ ತಂದಿತ್ತು’’ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಕೇರಳ ಒಂದರಲ್ಲೇ ಸುಮಾರು 5,00000 ನೋಂದಾಯಿತ ನರ್ಸ್ಗಳಿದ್ದಾರೆ. ಕೇರಳವು ಏಪ್ರಿಲ್ 9 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆಯನ್ನು ನಡೆಸಲಿದೆ.
Thank you Rahul Gandhi sahab. We are proud of all nurses, doctors and other healthcare professionals. Most of them work at nights (we have no choice and we love doing what we do- taking care of patients). Off course, nurses who work during nights, take off during daytime… https://t.co/DVSvIJBd8E
— Dr Sudhir Kumar MD DM (@hyderabaddoctor) March 25, 2026
‘‘ರಾತ್ರಿಯಿಡೀ, ಒಂದೇ ಒಂದು ವಿಷಯ ನನಗೆ ಸಮಾಧಾನ ನೀಡಿತ್ತು. ಪ್ರತಿ ಗಂಟೆಗೊಮ್ಮೆ ನನ್ನ ತಾಯಿಯನ್ನು ಪರೀಕ್ಷಿಸಲು ಕೇರಳದ ಒಬ್ಬ ನರ್ಸ್ ಬರುತ್ತಿದ್ದರು. ಪ್ರತಿ ಗಂಟೆಗೂ ಅವರು ಬಂದು ಅವರನ್ನು ಪರಿಶೀಲಿಸುತ್ತಿದ್ದರು. ಅವರು ನಗುತ್ತಾ ಅವರ ಕೈ ಹಿಡಿದುಕೊಳ್ಳುತ್ತಿದ್ದರು. ಕೇರಳದ ನರ್ಸ್ಗಳು ತಮ್ಮ ಅತ್ಯಂತ ಕಷ್ಟದ ಕ್ಷಣಗಳಲ್ಲಿ ಎಷ್ಟು ಮಂದಿಗೆ ಸಾಂತ್ವನ ನೀಡಿರಬಹುದು’’.
ಬೆಳಗ್ಗೆ ನಾನು ಅವರನ್ನು ಕೇಳಿದೆ, “ನೀವು ರಾತ್ರಿ ಮಲಗುತ್ತೀರಾ ಅಥವಾ ರಾತ್ರಿಯಿಡೀ ಕೆಲಸ ಮಾಡುತ್ತೀರಾ? ಅದಕ್ಕೆ ಅವರು ನಾನು ರಾತ್ರಿಯಿಡೀ ಕೆಲಸ ಮಾಡುತ್ತೇನೆ ಎಂದರು, ಹಾಗಾಗಿ, ಪ್ರಪಂಚದಾದ್ಯಂತ ಜನರು ನಿದ್ರಿಸುತ್ತಿರುವಾಗ, ಕೇರಳದ ಮಹಿಳೆಯರು, ಕೇರಳದಲ್ಲಿ ಮಾತ್ರವಲ್ಲದೆ ದೆಹಲಿಯಲ್ಲಿ, ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತ, ಜನರನ್ನು ಸಾಂತ್ವನ ನೀಡುತ್ತಿದ್ದಾರೆ’’ ಎಂದು ರಾಹುಲ್ ಹೇಳಿದ್ದರು.
ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ ಸಮುದಾಯದಿಂದ ಯಾವುದೇ ಬಂಡಾಯ ಇಲ್ಲ. ನಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ನಿಲ್ಲುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ನಮ್ಮ ಸಮುದಾಯಕ್ಕೆ ಆದ ಅನ್ಯಾಯ ಹೈಕಮಾಂಡ್ ನಾಯಕರು ಸರಿ ಮಾಡ್ತೇವೆ ಎಂದು ಹೇಳಿದ್ದಾರೆ. ದಾವಣೆಗೆರೆ ವಸ್ತು ಸ್ಥಿತಿ ಬೇರೆಯೇ ಇದೆ. ಬಾಗಲಕೋಟೆಯ ವಸ್ತು ಸ್ಥಿತಿ ಬೇರೆ ಇದೆ. ಬಾಗಲಕೋಟೆಯ ಶಾಸಕರಾಗಿದ್ದ ದಿವಂಗತ ಎಚ್.ವೈ ಮೇಟಿ ಅವರು ನಮ್ಮ ಸಮುದಾಯದ ಜನರನ್ನು ಸರಿಯಾಗಿ ನೋಡಿಕೊಂಡಿದ್ದಾರೆ. ನಾವೆಲ್ಲರೂ ಮೇಟಿ ಕುಟುಂಬದ ಪರ ನಿಲ್ಲುತ್ತೇವೆ. ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜೊತೆಗೆ ನಿಲ್ಲುತ್ತೆ. ಈ ಬಾರಿ ನಾವು ಉಮೇಶ್ ಪರ ಕೆಲಸ ಮಾಡ್ತೇವೆ, ಇಲ್ಲಿ ನಮ್ಮ ಬಂಡಾಯ ಇಲ್ಲ ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ನಿಟ್ಟುಸಿರುಬಿಟ್ಟಿದೆ.