ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಜೂನ್ 30 ರವರೆಗೆ ‘ಮೆಸೇಜ್ ಎಡಿಟಿಂಗ್’ ಆಯ್ಕೆ ಇರುವುದಿಲ್ಲ – Kannada News | Telegram Unbanned in India: Message Editing Restricted Until June 30 After NEET Leak Row

ನವದೆಹಲಿ, ಜೂನ್ 22: ನೀಟ್ -ಯುಜಿ ಮರು ಪರೀಕ್ಷೆ 2026 ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ಹೇರಿದ್ದ ನಿಷೇಧವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಹಿಂಪಡೆದಿದೆ. ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಆ್ಯಪ್‌ನ ಪ್ರಮುಖ ಆಯ್ಕೆಯಾದ ‘ಮೆಸೇಜ್-ಎಡಿಟಿಂಗ್’ ಮೇಲಿನ ನಿರ್ಬಂಧವನ್ನು ಜೂನ್ 30 ರವರೆಗೆ ಮುಂದುವರಿಸಲು ಸರ್ಕಾರ ಆದೇಶಿಸಿದೆ.

ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳಲ್ಲಿ ಆ್ಯಪ್ ಇನ್ನು ಲಭ್ಯವಾಗಿಲ್ಲದಿದ್ದರೂ, ಇಂಟರ್ನೆಟ್ ಸೇವಾ ಪೂರೈಕೆದಾರರು (ISP) ಹಂತಹಂತವಾಗಿ ನಿಷೇಧವನ್ನು ರದ್ದುಗೊಳಿಸುತ್ತಿರುವುದರಿಂದ ಶೀಘ್ರದಲ್ಲೇ ಇದು ದೇಶದ ಬಳಕೆದಾರರಿಗೆ ಪೂರ್ಣ ಪ್ರಮಾಣದಲ್ಲಿ ಸಿಗಲಿದೆ.

ಟೆಲಿಗ್ರಾಮ್ ನಿಷೇಧಕ್ಕೆ ಅಸಲಿ ಕಾರಣವೇನು?
ನೀಟ್ ಪರೀಕ್ಷಾ ಬಿಕ್ಕಟ್ಟು: ಇತ್ತೀಚೆಗೆ ನಡೆದ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಸೋರಿಕೆಯಾಗಿ, ಕಾನೂನುಬಾಹಿರವಾಗಿ ಮಾರಾಟವಾಗುತ್ತಿರುವುದು ಪತ್ತೆಯಾಗಿತ್ತು.

ಜೂನ್ 21 ರಂದು ನಡೆದ ನೀಟ್ ಮರುಪರೀಕ್ಷೆಯ ಸಮಯದಲ್ಲಿ ಯಾವುದೇ ಅಕ್ರಮಗಳು ನಡೆಯಬಾರದು ಎಂಬ ಕಾರಣಕ್ಕೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಶಿಫಾರಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಸರ್ಕಾರ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು.

ಹೈಕೋರ್ಟ್‌ನಲ್ಲಿ ಟೆಲಿಗ್ರಾಮ್‌ಗೆ ಹಿನ್ನಡೆ: ನಿಷೇಧದ ವಿರುದ್ಧ ಟೆಲಿಗ್ರಾಮ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಸರ್ಕಾರದ ಕ್ರಮ ಕಾನೂನುಬದ್ಧವಾಗಿದೆ ಎಂದು ನ್ಯಾಯಾಧೀಶ ತೇಜಸ್ ಕರಿಯಾ ತೀರ್ಪು ನೀಡಿದ್ದರು. ತಾನು ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದ 900 ಕ್ಕೂ ಹೆಚ್ಚು ಲಿಂಕ್‌ಗಳನ್ನು ಈಗಾಗಲೇ ಡಿಲೀಟ್ ಮಾಡಿರುವುದಾಗಿ ಟೆಲಿಗ್ರಾಮ್ ಕೋರ್ಟ್‌ಗೆ ತಿಳಿಸಿತ್ತು.

ಮತ್ತಷ್ಟು ಓದಿ: ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಸಂಸ್ಥಾಪಕ ಪಾವೆಲ್ ಡುರೊವ್ ಆಕ್ರೋಶ: ಭಾರತ ಸರ್ಕಾರದ ಈ ಕ್ರಮವನ್ನು ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೊವ್ ಖಂಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಅಸಲಿ ಅಪರಾಧಿಗಳನ್ನು ಹಿಡಿಯುವ ಬದಲು, ಭಾರತ ಸರ್ಕಾರ ದೇಶದ 15 ಕೋಟಿ ಸಾಮಾನ್ಯ ಬಳಕೆದಾರರಿಗೆ ಶಿಕ್ಷೆ ವಿಧಿಸಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇಂಟರ್ನೆಟ್ ಫ್ರೀಡಂ ಫೌಂಡೇಶನ್ (IFF) ಕೂಡ ಸರ್ಕಾರದ ನಿರ್ಧಾರವನ್ನು ಟೀಕಿಸಿದೆ. ವಿಶೇಷವಾಗಿ ಜೂನ್ 30 ರವರೆಗೆ ‘ಮೆಸೇಜ್ ಎಡಿಟಿಂಗ್’ ನಿರ್ಬಂಧಿಸಿರುವ ಕ್ರಮಕ್ಕೆ ಯಾವುದೇ ಸ್ಪಷ್ಟ ಕಾನೂನು ಆಧಾರವಿಲ್ಲ ಮತ್ತು ಇದು ಪರೀಕ್ಷಾ ವಂಚನೆಗೆ ತರಲಾದ ಅಸಮಾನ ಪರಿಹಾರ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಮನೆ ಮಂದಿ – Kannada News | Family gives grand welcome to daughter who went abroad for work upon her return home

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ  ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಕಷ್ಟವಾದ್ರೂ ಸರಿಯೇ, ಮಕ್ಕಳನ್ನು ದೂರದ ಊರು, ದೇಶಕ್ಕೆ ಕಳುಹಿಸಿಕೊಡುತ್ತಾರೆ. ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ಸಂಭ್ರಮಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳನ್ನು ಮನೆಮಂದಿಯೆಲ್ಲಾ ಜತೆ ಸೇರಿ ಸಂಪ್ರದಾಯಿಕವಾಗಿ ಬರಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಹೃದಯ ಗೆದ್ದಿದೆ.

ಕೆನ್ನಿ ಪಟೇಲ್ (@kennypatel_20) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ವಿದೇಶದಿಂದ ಬಂದ ಮಗಳನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳುವುದನ್ನು ಕೊಳ್ಳಬಹುದು. ಪ್ರವೇಶದ್ವಾರದ ಹೊರಗೆ, ಹಲವಾರು ಕುಟುಂಬ ಸದಸ್ಯರು ಅವಳನ್ನು ಸ್ವಾಗತಿಸಲು ಕಾಯುತ್ತಿದ್ದಾರೆ. ಯುವತಿ ಮನೆಗೆ ಬರುತ್ತಿದ್ದಂತೆ ಅವಳ ಅಜ್ಜಿ ಆಕೆಯ ತಲೆಯ ಸುತ್ತಲೂ ನೀರನ್ನು ಸುತ್ತುವ ಮೂಲಕ ದೃಷ್ಟಿ ತೆಗೆಯುತ್ತಾರೆ. ಯುವತಿ ತನ್ನ ತಾಯಿಯನ್ನು ಅಪ್ಪಿಕೊಳ್ಳುತ್ತಾಳೆ. ಮನೆ, ಮೆಟ್ಟಿಲು ಹಾಗೂ ದ್ವಾರವನ್ನು ಹೂಗಳಿಂದ ಅಲಂಕರಿಸಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಪುಟ್ಟ ಹುಡುಗನು ಗಂಟೆ ಬಾರಿಸುತ್ತಾ ಆಕೆಯನ್ನು ಸ್ವಾಗತಿಸುತ್ತಾನೆ. ಆ ಮಹಿಳೆಯೊಬ್ಬರು ಯುವತಿಗೆ ಆರತಿ ಬೆಳಗಿದ್ದಾರೆ. ಮನೆ ಮಗಳು ಮನೆಯ ಹೊಸ್ತಿಲು ದಾಟಿ ಒಳಗ ಬರುವ ಮುನ್ನ ಕೆಂಪು ಬಣ್ಣದ ಓಕುಳಿ ನೀರಿರುವ ತಟ್ಟೆಗೆ ಪಾದವನ್ನು ಇಟ್ಟು , ಬಿಳಿ ಬಟ್ಟೆಯ ಮೇಲೆ ತನ್ನ ಹೆಜ್ಜೆಗುರುತುಗಳನ್ನು ಮೂಡಿಸಿದ್ದಾಳೆ. ಕೊನೆಗೆ ತನ್ನ ಪೋಷಕರು ಮತ್ತು ಅಜ್ಜಿಯೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುವ ದೃಶ್ಯ ಇಲ್ಲಿದೆ.

ಇದನ್ನೂ ಓದಿ: ಹೆತ್ತವರನ್ನು ತಾನು ಕೆಲಸ ಮಾಡುವ ಅಮೆಜಾನ್ ಆಫೀಸಿಗೆ ಕರೆತಂದ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆ 82 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇಂತಹ ಕುಟುಂಬವನ್ನು ಪಡೆದ ನೀವೇ ಅದೃಷ್ಟವಂತರು ಎಂದಿದ್ದಾರೆ. ಮತ್ತೊಬ್ಬರು, ಇಂತಹ ಹಳೆಯ ಆಚರಣೆಗಳನ್ನು ಭಾರತದಲ್ಲಿ ಕಾಣಲು ಮಾತ್ರ ಸಾಧ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮನೆ ಮಂದಿಯ ಖುಷಿ ಮುಖದಲ್ಲೇ ವ್ಯಕ್ತವಾಗುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು! – Kannada News | Chamarajanagar Tribal Issue: Adivasi Soliga Families Deprived of Ration Cards for a Decade

ಚಾಮರಾಜನಗರ, ಜೂನ್ 22: ಕಾಡಿನಲ್ಲಿ ಬೇಟೆಯಾಡುತ್ತಾ, ಗೆಡ್ಡೆ ಗೆಣಸು ತಿಂದು ಸ್ವಚ್ಛಂದವಾಗಿ ಬದುಕುತ್ತಿದ್ದ ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಜಿಲ್ಲೆಯ (Chamarajanagar) ಮಲೆ ಮಹದೇಶ್ವರ ಬೆಟ್ಟದ ಕೂಗಳತೆ ದೂರದಲ್ಲಿರುವ ಆನೆ ದಿಂಬ ಎಂಬ ಸ್ಥಳದಲ್ಲಿ ಅವರಿಗೆ ಆಶ್ರಯ ಕಲ್ಪಿಸಲಾಯಿತು. ಆದರೆ, ಕಾಡಿನಿಂದ ನಾಡಿಗೆ ಬಂದ ಈ ಸೋಲಿಗ ಜನಾಂಗದ ಬದುಕು ಈಗ ಬೀದಿಗೆ ಬಿದ್ದಿದೆ. ದಶಕಗಳು ಕಳೆದರೂ ಇಲ್ಲಿನ ಹತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾಗಲಿ, ಒಂದು ರೇಷನ್ ಕಾರ್ಡ್ (Ration Card) ಆಗಲಿ ಸಿಕ್ಕಿಲ್ಲ. ಕೂಲಿ ಕೆಲಸ ಸಿಕ್ಕರೆ ಮಾತ್ರ ಇವರ ಮನೆಯಲ್ಲಿ ಒಲೆ ಉರಿಯುತ್ತದೆ. ಇಲ್ಲದಿದ್ದರೆ ಹಸಿವಿನಿಂದ ಕಣ್ಣೀರು ಇಡುವುದೇ ಇವರ ದಿನಚರಿಯಾಗಿದೆ.

ಮುಖ್ಯಾಂಶಗಳು

  • ಚಾಮರಾಜನಗರದ ಆನೆ ದಿಂಬ ಹಾಡಿಯ ಆದಿವಾಸಿಗಳಿಗೆ ದಶಕಗಳಿಂದ ಸಿಗದ ರೇಷನ್ ಕಾರ್ಡ್.
  • ಪಡಿತರ ಚೀಟಿ ಇಲ್ಲದೆ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಿಂದ ಸೋಲಿಗರು ವಂಚಿತರಾಗಿದ್ದಾರೆ.
  • ಕಚೇರಿಗಳಿಗೆ ಅಲೆದು ಸುಸ್ತಾಗಿರುವ ಆದಿವಾಸಿ ಕುಟುಂಬಗಳು ಹಸಿವಿನಿಂದ ತತ್ತರಿಸುವಂತಾಗಿದೆ ಎಂದು ವರದಿ.

ಅಧಿಕಾರಿಗಳ ನಿರ್ಲಕ್ಷ್ಯ

ತಮಗೆ ಪಡಿತರ ಚೀಟಿ ನೀಡುವಂತೆ ಬಡ ಆದಿವಾಸಿಗಳು ಕಳೆದ 10 ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಅಧಿಕಾರಿಗಳ ಕೈಕಾಲು ಹಿಡಿದು ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಅರ್ಜಿ ಸಲ್ಲಿಸಿ ಇವರ ಚಪ್ಪಲಿ ಸವಿದಿದೆಯೇ ಹೊರತು, ಅಧಿಕಾರಿಗಳ ಕಲ್ಲೆದೆಯು ಕರಗಿಲ್ಲ. ಸೋಲಿಗ ಜನಾಂಗದವರೆಂದರೆ ಈ ಅಧಿಕಾರಿ ವರ್ಗಕ್ಕೆ ಯಾಕಿಷ್ಟು ನಿರ್ಲಕ್ಷ್ಯ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಧಿಕಾರಿಗಳ ಈ ಬೇಜವಾಬ್ದಾರಿತನ ಹಾಗೂ ಕಳ್ಳಾಟದ ಪರಿಣಾಮವಾಗಿ, ಇಂದಿಗೂ ಸಣ್ಣ ಗುಡಿಸಿಲುಗಳಲ್ಲಿ ವಾಸಿಸುತ್ತಿರುವ ಈ ಕುಟುಂಬಗಳು ಅನ್ನಕ್ಕಾಗಿ ಪರದಾಡುವಂತಾಗಿದೆ.

ಅನ್ನಭಾಗ್ಯ ಯೋಜನೆಯಿಂದ ವಂಚಿತರಾದ ಕಟ್ಟಕಡೆಯ ವರ್ಗ

ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯಡಿ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದೆ. ಸಮಾಜದ ಕಟ್ಟಕಡೆಯ ವರ್ಗಕ್ಕೂ ಈ ಸೌಲಭ್ಯ ತಲುಪಬೇಕು ಎಂಬುದು ಸರ್ಕಾರದ ಆಶಯ. ಆದರೆ, ಆನೆ ದಿಂಬ ಹಾಡಿಯ ಆದಿವಾಸಿಗಳಿಗೆ ರೇಷನ್ ಕಾರ್ಡ್ ಇಲ್ಲದ ಕಾರಣ, ಅವರು ಈ ಯೋಜನೆಯಿಂದ ಸಂಪೂರ್ಣವಾಗಿ ವಂಚಿತರಾಗಿದ್ದಾರೆ. ಹಸಿವು ಮುಕ್ತ ರಾಜ್ಯದ ಭರವಸೆಗಳು ಈ ಹಾಡಿಯ ಜನರ ಪಾಲಿಗೆ ಕೇವಲ ಕನಸಾಗಿಯೇ ಉಳಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಿಂದ ನೀಟ್​​ ಪರಿಕ್ಷಾರ್ಥಿಗಳಿಗೆ ಸಮಸ್ಯೆ: ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್​​ ಕೌಂಟರ್​​ – Kannada News | BJP Blames Congress Ceremony for NEET Student Delays; Karnataka Home Minister Denies Claims

ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್​​ ಕೌಂಟರ್​​Image Credit source: PTI

ಬೆಂಗಳೂರು, ಜೂನ್​ 22: ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​​ ನಿನ್ನೆ (ಜೂನ್​​ 21) ಪದಗ್ರಹಣ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅದ್ಯಕ್ಷ ಡಿಕೆ ಶಿವಕುಮಾರ್​​ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದ್ದಾರೆ. ಆದರೆ ನೀಟ್​​ ಪರೀಕ್ಷೆಯ ದಿನವೇ ಈ ಕಾರ್ಯಕ್ರಮ ನಡೆದಿರೋದೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕ್ರಮದಿಂದ ನೀಟ್ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಬಿಜೆಪಿ ದೂರಿದ್ದರೆ, ಬಿಜೆಪಿಯವರಿಂದ ನಾವು ಏನು ಪಾಠ ಕಲಿಯಬೇಕಾಗಿಲ್ಲ ಎಂದು ಕಾಂಗ್ರೆಸ್​​ ಕೌಂಟರ್​​ ಕೊಟ್ಟಿದೆ.

‘ಪರೀಕ್ಷೆಗಳು ಇದ್ದಾಗ ಸಮಸ್ಯೆ ಆಗಬಾರದು’

ನೀಟ್​​ ಪರೀಕ್ಷೆಯ ದಿನವೇ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿಸೂರ್ಯ ಕಿಡಿ ಕಾರಿದ್ದು, ಹರಿಪ್ರಸಾದ್ ನಿನ್ನೆ ಬದಲು ಇಂದು ಕಾರ್ಯಕ್ರಮ ಮಾಡಬೇಕಿತ್ತು. ಕಾಂಗ್ರೆಸ್ ನಾಯಕ ರಾಹುಲ್ ದೊಡ್ಡದಾಗಿ ಭಾಷಣ ಬಿಗಿಯುತ್ತಾರೆ. ನಾವು ಮಕ್ಕಳ ಪರವಾಗಿ ಇದ್ದೇವೆ ಎಂದು ಡ್ರಾಮಾ ಮಾಡುತ್ತಾರೆ. ಈಗಲಾದರೂ ಸಿಎಂ ಇಂತಹ ಕಾರ್ಯಕ್ರಮ ಬಗ್ಗೆ ಗಮನ ಹರಿಸಲಿ. ಪರೀಕ್ಷೆಗಳು ಇದ್ದಾಗ ಜನರಿಗೆ ಸಮಸ್ಯೆ ಆಗದಂತೆ ನಿಯಮ ತರಬೇಕು. ಇಂತಹ ಸಂದರ್ಭಗಳಲ್ಲಿ ಈ ರೀತಿ ಕಾರ್ಯಕ್ರಮಕ್ಕೆ ಅವಕಾಶ ಕೊಡಬಾರದು. ವಿಐಪಿ ಸಂಸ್ಕೃತಿಯಿಂದ ಟ್ರಾಫಿಕ್ ಸಮಸ್ಯೆ ನಿಯಮ ಬದಲಾಗಬೇಕು ಎಂದವರು ಆಗ್ರಹಿಸಿದ್ದಾರೆ.‌

ಇದನ್ನೂ ಓದಿ: ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು; ಒಬ್ಬೊಬ್ಬರದು ಒಂದೊಂದು ಕಥೆ

‘ಈ ಖಾಲಿ ಟ್ರಂಕ್​ಗಳ ಜೊತೆ ಏನು ಮಾತಾಡೋದು’

ಇನ್ನು ಬಿಜೆಪಿಗರ ಈ ಆರೋಪ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಬಿಜೆಪಿಯವರಿಂದ ನಾವು ಏನು ಪಾಠ ಕಲಿಯಬೇಕಾಗಿಲ್. ಅವರು ನಿಜವಾಗಲೂ ವಿದ್ಯಾರ್ಥಿಗಳ ಪರವಾಗಿದ್ರೆ ಮೊದಲು ಕ್ಷಮೆ ಕೇಳಲಿ. 22 ಲಕ್ಷ ವಿದ್ಯಾರ್ಥಿಗಳಿಗೆ ಮೋಸ ಮಾಡಿದ್ರಲ್ಲ, ಆಗ ಏಕೆ ಮಾತಾಡಲಿಲ್ಲ? 10 ವರ್ಷದಲ್ಲಿ 90 ಪೇಪರ್ ಲೀಕ್ ಆಗಿದೆ. ಆಮೇಲೆ ಮೂವರು ಎಕ್ಸಾಂಗೆ ಏನಕ್ಕೆ ಬರಲಿಕ್ಕೆ ಆಗಿಲ್ಲ ಅಂತಾ ನೋಡಲಿ. ನಿಜವಾದ ಕಾರಣಗಳು ನಾನು ಬಹಿರಂಗವಾಗಿ ಹೇಳಿದ್ದೇನೆ. ಓರ್ವ ಮಾಗಡಿಯಿಂದ ಬರ್ತಿದ್ದು, ಮಾಗಡಿನಲ್ಲಿ ನಮ್ದು ಱಲಿ ಇತ್ತಾ? ಇನ್ನೊಬ್ಬರು ಪರೀಕ್ಷೆಗೆ ಹಳೆಯ ಹಾಲ್ ಟಿಕೆಟ್ ತಂದಿದ್ದರು. ಮತ್ತೊಬ್ಬರು ಆರ್.ಟಿ ನಗರದಿಂದ ಬರುತ್ತಿದ್ದರು ಎನ್ನಲಾಗಿದೆ. ರಾಜಕೀಯ ಮಾಡಬೇಕು ಅಂದ್ರೆ ಲಾಜಿಕಲ್ ಆಗಿ ಮಾಡಿ. ಮುಂಬೈ, ಪರೇಲಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಆಗಿಲ್ಲ. ಹಾಗಿದ್ರೆ ಅದಕ್ಕೆ ಮಹಾರಾಷ್ಟ್ರ ಸರ್ಕಾರ ಕಾರಣ ಅಲ್ವಾ? ಪ್ರಶ್ನೆ ಪತ್ರಿಕೆ ಲೀಕ್ ಆದಾಗ ಪ್ರಧಾನ್​ ರಾಜೀನಾಮೆ ಕೊಟ್ರಾ? ಈ ಖಾಲಿ ಟ್ರಂಕ್​ಗಳ ಜೊತೆ ಏನು ಮಾತಾಡೋದು ಎಂದು ಹೇಳಿವ ಮೂಲಕ ತೇಜಸ್ವಿ ಸೂರ್ಯಗೆ ಪ್ರಿಯಾಂಕ್​​ ಕೌಂಟರ್​​ ಕೊಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾನವೀಯತೆಯ ಮಹಾ ಮಾತೆ: ಮನೆ ಮಾರಿ ಸೈನಿಕರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದ ಕ್ಯಾನ್ಸರ್ ಪೀಡಿತ ನಿವೃತ್ತ ಶಿಕ್ಷಕಿ ಕರಿಬಸಮ್ಮ – Kannada News | Davanagere Retired Teacher KB Karibasamma Donates Rs 10 Lakh to Soldiers Fund by Selling House

ದಾವಣಗೆರೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿಗೆ ಚೆಕ್ ಹಸ್ತಾಂತರಿಸಿದ ಕೆಬಿ ಕರಿಬಸಮ್ಮImage Credit source: tv9

ದಾವಣಗೆರೆ, ಜೂನ್ 22: ದೇಶ ಕಾಯುವ ಸೈನಿಕರ ಮೇಲಿನ ಗೌರವ ಮತ್ತು ದೇಶಪ್ರೇಮಕ್ಕೆ ಸಾಟಿಯಿಲ್ಲದಂತಹ ಹೃದಯಸ್ಪರ್ಶಿ ವಿದ್ಯಮಾನಕ್ಕೆ ದಾವಣಗೆರೆ (Davanagere) ಜಿಲ್ಲೆ ಸಾಕ್ಷಿಯಾಗಿದೆ. ಜಿಲ್ಲೆಯ ಹಿರಿಯ ನಿವಾಸಿ, ನಿವೃತ್ತ ಶಿಕ್ಷಕಿ ಹಾಗೂ ದಯಾಮರಣ ಹೋರಾಟಗಾರ್ತಿಯೂ ಆಗಿರುವ 86 ವರ್ಷ ವಯಸ್ಸಿನ ಕೆಬಿ ಕರಿಬಸಮ್ಮ ಅಜ್ಜಿ (KB Karibasamma) ತಮ್ಮ ಆಸ್ತಿಯನ್ನು ಸೈನಿಕರ ನಿಧಿಗೆ ಅರ್ಪಿಸಿದ್ದಾರೆ. ಭಾರತದ ಗಡಿ ಕಾಯುವ ಯೋಧರ ಕಲ್ಯಾಣಕ್ಕಾಗಿ ಬರೋಬ್ಬರಿ 10 ಲಕ್ಷ ರೂಪಾಯಿಗಳ ಧನಸಹಾಯದ ಚೆಕ್ ಅನ್ನು ಅವರು ದಾವಣಗೆರೆ ಜಿಲ್ಲಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿಗೆ ಹಸ್ತಾಂತರಿಸಿದ್ದಾರೆ.

ಮುಖ್ಯಾಂಶಗಳು

  • ಮನೆ ಮಾರಿದ ಹಣ ಸೈನಿಕರ ನಿಧಿಗೆ ಅರ್ಪಣೆ.
  • ಡಿಸಿಗೆ 10 ಲಕ್ಷ ರೂ. ಚೆಕ್ ನೀಡಿದ ಅಜ್ಜಿ.
  • ಕ್ಯಾನ್ಸರ್ ಇದ್ದರೂ ದೇಶಪ್ರೇಮ ಮೆರೆದ ನಿವೃತ್ತ ಶಿಕ್ಷಕಿ.

ಮನೆ ಮಾರಿದ ಹಣ, ಪಿಂಚಣಿಯೇ ದೇಣಿಗೆ

ಈ ವಿನೂತನ ಮತ್ತು ಆದರ್ಶಪ್ರಾಯ ಕಾರ್ಯದ ಕುರಿತು ಮಾತನಾಡಿರುವ ಕರಿಬಸಮ್ಮ ಅಜ್ಜಿ, ‘ನಾನು ಶಿಕ್ಷಕಿಯಾಗಿ ಸೇವೆ ಆರಂಭಿಸಿದ ದಿನದಿಂದಲೂ ದೇಶ ಕಾಯುವ ಸೈನಿಕರ ಬಗ್ಗೆ ನನ್ನಲ್ಲಿ ಅಪಾರ ಗೌರವ ಮತ್ತು ಪ್ರೀತಿ ಇತ್ತು. ಕೆಲ ವರ್ಷಗಳ ಹಿಂದೆ ಒಂದು ಪುಟ್ಟ ಮನೆ ಮಾಡಿಕೊಂಡಿದ್ದೆ. ಅದನ್ನು ಇತ್ತೀಚೆಗೆ 6 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿ ಆ ಹಣವನ್ನು ಬ್ಯಾಂಕ್‌ನಲ್ಲಿ ಇಟ್ಟಿದ್ದೆ. ಅದರೊಂದಿಗೆ ನನಗೆ ಬರುತ್ತಿದ್ದ ಶಿಕ್ಷಕ ವೃತ್ತಿಯ ಪಿಂಚಣಿ ಹಣವನ್ನೂ ಒಟ್ಟುಗೂಡಿಸಿ, ಈಗ ಒಟ್ಟು 10 ಲಕ್ಷ ರೂಪಾಯಿಗಳನ್ನು ಸೈನಿಕರ ನಿಧಿಗೆ ನೀಡಿದ್ದೇನೆ. ಈ ಹಣ ಸೈನಿಕರ ಕಲ್ಯಾಣಕ್ಕೆ ಬಳಕೆಯಾಗುತ್ತಿರುವುದು ನನಗೆ ಅಪಾರ ಸಂತೋಷ ತಂದಿದೆ’ ಎಂದು ಭಾವುಕರಾಗಿ ನುಡಿದಿದ್ದಾರೆ.

ಕ್ಯಾನ್ಸರ್ ನಡುವೆಯೂ ಮಾದರಿಯಾದ ಅಜ್ಜಿ

ಕರಿಬಸಮ್ಮ ಅಜ್ಜಿಯವರು ಪ್ರಸ್ತುತ ವಯೋಸಹಜ ಕಾಯಿಲೆಗಳಾದ ಬಿಪಿ, ಶುಗರ್ ಮಾತ್ರವಲ್ಲದೆ ಮಾರಕ ಕ್ಯಾನ್ಸರ್ ರೋಗದಿಂದಲೂ ಬಳಲುತ್ತಿದ್ದಾರೆ. ‘ನನಗೆ ಕ್ಯಾನ್ಸರ್ ಬಂದಿದೆ, ಯಾವಾಗ ಏನಾಗುತ್ತದೆಯೋ ಗೊತ್ತಿಲ್ಲ. ಆದರೆ ನಾನು ಬದುಕಿರುವಾಗಲೇ ದೇಶಕ್ಕಾಗಿ ಪ್ರಾಣ ಮುಡುಪಾಗಿಡುವ ಸೈನಿಕರಿಗೆ ಸಣ್ಣದೊಂದು ಅಳಿಲು ಸೇವೆ ಮಾಡಬೇಕು ಎಂಬ ಆಸೆಯಿತ್ತು, ಅದು ಇಂದು ಈಡೇರಿದೆ’ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.

ಕರಿಬಸಮ್ಮರನ್ನು ದಾವಣಗೆರೆ ಜಿಲ್ಲಾಧಿಕಾರಿ ಗೌರವಿಸಿದರು

ಕಾಯಿಲೆಯ ನೋವಿನ ನಡುವೆಯೂ ಸ್ವಾರ್ಥವಿಲ್ಲದೆ ಸೈನಿಕರ ನಿಧಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ತಮ್ಮ ಆಸ್ತಿಯನ್ನು ಧಾರೆ ಎರೆದಿರುವ ಈ ಅಜ್ಜಿಯ ದೇಶಪ್ರೇಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘಿಸಿ, ನಮನ ಸಲ್ಲಿಸಿದ್ದಾರೆ.

ಯಾರು ಈ ಕರಿಬಸಮ್ಮ ಅಜ್ಜಿ?

ದಾವಣಗೆರೆಯ ಬಿ ಕರಿಬಸಮ್ಮ ಅಜ್ಜಿ ನಿವೃತ್ತ ಶಿಕ್ಷಕಿ. ಅದಕ್ಕಿಂತ ಹೆಚ್ಚಾಗಿ, ಮಾರಣಾಂತಿಕ ಕಾಯಿಲೆಗಳಿಂದ ನರಳುತ್ತಿರುವ ವೃದ್ಧರಿಗೆ ಘನತೆಯಿಂದ ಸಾಯುವ ಹಕ್ಕು (ದಯಾಮರಣದ ಹಕ್ಕು) ಸಿಗಬೇಕೆಂದು ದಶಕಗಳಿಂದ ಹೋರಾಟ ಮಾಡುತ್ತಿದ್ದಾರೆ. ಆ ಮೂಲಕವೇ ಸಮಾಜದಲ್ಲಿ ಚಿರಪರಿಚಿತರಾಗಿದ್ದಾರೆ. ಸದ್ಯ, ದಾವಣಗೆರೆಯ ವೃದ್ಧಾಶ್ರಮವೊಂದರಲ್ಲಿ ವಾಸ ಮಾಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:01 pm, Mon, 22 June 26

Source link

Video: ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು, ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಇರಾನ್ ಖಂಡನೆ – Kannada News | US Iran Tensions: Iran Condemns Israeli Attacks in Lebanon Amidst Aid Offers and Nuclear Standoff

ಟೆಹ್ರಾನ್, ಜೂನ್ 22: ಅಮೆರಿಕವು ಇರಾನ್‌ಗೆ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ  ದೃಢಪಡಿಸಿದ್ದಾರೆ. ಈ ನೆರವು ಇರಾನ್‌ನ ಪುನರ್ನಿರ್ಮಾಣ ಕಾರ್ಯಗಳಿಗೆ ಮೀಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಬೆಳವಣಿಗೆಗಳ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್‌ನಿಂದ ತಮ್ಮ ಸೇನೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೆ, ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದುವುದನ್ನು ನಾವು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

ಈ ಹಿಂದೆ ಯುದ್ಧ ನಿಲ್ಲಿಸಲು ಮತ್ತು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರೂ, 60 ದಿನಗಳ ಕಾಲ ಯುದ್ಧ ಮಾಡಬಾರದು ಎಂದು ಹೇಳಿದ್ದರೂ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಇನ್ನಷ್ಟು ಗೊಂದಲಮಯವಾಗಿದೆ. ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗಳು ಆರಂಭವಾಗುವ ಮುನ್ನವೇ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಎಚ್ಚರಿಕೆ ನೀಡಿದ್ದು, ಹಿಜ್ಬುಲ್ಲಾ ಉಗ್ರಪಡೆಗಳ ಮೂಲಕ ದಾಳಿಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇರಾನ್, ಇಸ್ರೇಲ್ ದಾಳಿ ನಿಲ್ಲುವವರೆಗೂ ಮಾತುಕತೆ ಅಸಾಧ್ಯ ಎಂದು ಹೇಳಿದೆ. ಈ ಅನಿಶ್ಚಿತತೆಯು ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸುವ ಸಾಧ್ಯತೆಗಳ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಗಳು ಮುಂದುವರೆದಿರುವಾಗಲೇ, ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದಲ್ಲಿ ಹೊಸ ಬೆಳವಣಿಗೆಗಳು ಕಂಡುಬರುತ್ತಿವೆ. ಅಮೆರಿಕವು ಇರಾನ್‌ಗೆ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಘೋಷಿಸಿದ್ದಾರೆ. ಈ ಹಣವನ್ನು ಇರಾನ್‌ನಲ್ಲಿನ ಪುನರ್ನಿರ್ಮಾಣ ಕಾರ್ಯಗಳಿಗೆ ಬಳಸಲಾಗುವುದು ಎಂದು ತಿಳಿಸಲಾಗಿದೆ. ಆದರೆ, ಅಮೆರಿಕದ ಈ ಕ್ರಮದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಹೊಡೆಯೋರು ಇವರೇ, ಬೀಳಿಸೋರು ಇವರೇ, ಕಟ್ ಕೊಡೋಕೆ ದುಡ್ಡು ಕೊಡೋರು ಇವರೇ ಎಂದು ವಿಮರ್ಶಿಸುತ್ತಿದ್ದಾರೆ, ಇದು ಪರಿಸ್ಥಿತಿಯ ವಿಚಿತ್ರತೆಯನ್ನು ಎತ್ತಿ ತೋರಿಸುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

‘ಶಿಕ್ಷಣ ಅಂದ್ರೆ ಶಾಲೆಗೆ ಹೋಗೋದಲ್ಲ, ಸಿನಿಮಾ ಜ್ಞಾನ’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ, ಕ್ಷಮೆಯಾಚನೆ – Kannada News | Neninasam Satish Clarifies ‘Cinema Education’ Remark, Apologizes to Producers for Ayogya 2 Row

‘ಅಯೋಗ್ಯ 2’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರ ಕುರಿತು ತಾವು ನೀಡಿದ್ದ ಹೇಳಿಕೆ ಚಿತ್ರರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ, ನಟ ನೀನಾಸಂ ಸತೀಶ್ ಅವರು ವಿಡಿಯೋ ಸಂದೇಶವೊಂದರ ಮೂಲಕ ತಮ್ಮ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಯಾಚನೆ ಮಾಡೋದಾಗಿಯೂ ಹೇಳಿದ್ದಾರೆ.

ಇತ್ತೀಚೆಗೆ ‘ಅಯೋಗ್ಯ 2’ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡಿದ್ದ ಅವರು, ‘ ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದ ಮೇಲೂ ಯಾಕೆ ಸಿನಿಮಾ ಮಾಡಬೇಕು? ನಿರ್ಮಾಪಕರಿಗೆ ಶಿಕ್ಷಣದ ಅವಶ್ಯಕತೆ ಇದೆ ಎಂದು ಹೇಳಿದ್ದರು. ಇದು ನಿರ್ಮಾಪಕರನ್ನು ಕೆರಳಿಸಿದೆ. ಈ ಬೆನ್ನಲ್ಲೇ ಸತೀಶ್ ವಿಡಿಯೋ ಮಾಡಿದ್ದಾರೆ.

‘ನಾನು ಪತ್ರಿಕಾಗೋಷ್ಠಿಯಲ್ಲಿ ‘ಎಜುಕೇಷನ್’ ಎಂಬ ಪದವನ್ನು ಬಳಸಿದ್ದೆ. ಆದರೆ ಅದರ ಅರ್ಥ ಶಾಲೆಗೆ ಹೋಗಿ ಓದುವುದಲ್ಲ, ಬದಲಿಗೆ ಚಿತ್ರರಂಗಕ್ಕೆ ಹೊಸದಾಗಿ ಬರುವ ನಿರ್ಮಾಪಕರಿಗೆ ಸಿನಿಮಾ ಪ್ರಕ್ರಿಯೆಯ ಬಗ್ಗೆ ಇರುವ ಜ್ಞಾನದ ಕುರಿತು ನಾನು ಹೇಳಿದ್ದೆ. ಯಾವ ಇಲಾಖೆಗೆ ಎಷ್ಟು ಹಣ ಹೋಗುತ್ತಿದೆ, ಯಾವ ವಿಭಾಗದಲ್ಲಿ ನಾವು ತೊಡಗಿಸಿಕೊಳ್ಳಬೇಕು ಎಂಬ ಕನಿಷ್ಠ ತಿಳಿವಳಿಕೆ ಇದ್ದರೆ ಒಳ್ಳೆಯದು ಎಂಬುದು ನನ್ನ ಉದ್ದೇಶವಾಗಿತ್ತು. ನಾನು ಕೂಡ ನಿರ್ಮಾಪಕನಾಗಿ ಸೋತವನು. ಆ ಸೋಲಿನಿಂದ ಕಲಿಯಲು ನನಗೇ ಸಾಕಷ್ಟು ಸಮಯ ಬೇಕಾಯಿತು. ಹೊಸ ನಿರ್ಮಾಪಕರುಗಳು ಚಿತ್ರರಂಗಕ್ಕೆ ಬಂದು ನಷ್ಟ ಅನುಭವಿಸಬಾರದು ಎಂಬ ಕಾಳಜಿಯಿಂದ ಆ ಮಾತು ಹೇಳಿದ್ದೆ’ ಎಂದು ಸತೀಶ್ ವಿವರಿಸಿದ್ದಾರೆ.

ನಿರ್ಮಾಪಕರು ಇದ್ದರೆನೇ ಚಿತ್ರರಂಗ:

‘ಕನ್ನಡ ಚಿತ್ರರಂಗದಲ್ಲಿ ಲಕ್ಷಾಂತರ ಜನರ ಬದುಕು ಅಡಗಿದೆ. ಚಿತ್ರರಂಗ ಉಳಿಯಬೇಕು ಮತ್ತು ಬೆಳೆಯಬೇಕು ಎನ್ನುವುದಷ್ಟೇ ನನ್ನ ಆಶಯ. ನಿರ್ಮಾಪಕರು ಇದ್ದರೆ ಮಾತ್ರ ಚಿತ್ರರಂಗ ಇರಲು ಸಾಧ್ಯ. ಚಿತ್ರರಂಗವನ್ನು ಕಟ್ಟುವಲ್ಲಿ ಪ್ರತಿಯೊಬ್ಬ ನಿರ್ಮಾಪಕರ ಕೊಡುಗೆಯೂ ದೊಡ್ಡದಿದೆ. ಯಾರನ್ನೂ ವೈಯಕ್ತಿಕವಾಗಿ ನಿಂದಿಸುವ ಉದ್ದೇಶ ನನಗಿರಲಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್

ನಿರ್ಮಾಪಕರ ಸಂಘಕ್ಕೆ ಕ್ಷಮೆ:

‘ನನ್ನ ಹೇಳಿಕೆಯಿಂದ ಚಿತ್ರರಂಗದ ಹಿರಿಯ ನಿರ್ಮಾಪಕರಿಗೆ, ಅದರಲ್ಲೂ ವಿಶೇಷವಾಗಿ ನಿರ್ಮಾಪಕರ ಸಂಘದ ಪದಾಧಿಕಾರಿಗಳಿಗೆ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಯಾರನ್ನೂ ನೋಯಿಸಿ ಖುಷಿಪಡುವ ವ್ಯಕ್ತಿತ್ವ ನನ್ನದಲ್ಲ. ನಾನು ಕೂಡ ಇನ್ನೂ ಕಲಿಯುತ್ತಿರುವ ಹಂತದಲ್ಲೇ ಇದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದರಿಂದ ಚಿತ್ರತಂಡಗಳು ಡಿಮೋಟಿವೇಟ್ ಆಗುತ್ತವೆ ಎಂಬ ಕಾರಣಕ್ಕೆ ನಾನು ಧ್ವನಿ ಎತ್ತಿದ್ದೆ. ನಮ್ಮ ‘ಅಯೋಗ್ಯ-2’ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, ಇಡೀ ಚಿತ್ರರಂಗ ಹಾಗೂ ನಿರ್ಮಾಪಕರ ಬೆಂಬಲ ನಮಗೆ ಬೇಕು’ ಎಂದು ಸತೀಶ್ ನೀನಾಸಂ ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

 ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್:​ 12 ಅಂಕಗಳು ಕಡಿತ..! – Kannada News | England docked 12 WTC points

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಆತಿಥೇಯ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಗ್ ಶಾಕ್ ನೀಡಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ (ಸ್ಲೋ ಓವರ್ ರೇಟ್) ಕಾರಣಕ್ಕಾಗಿ ಇಂಗ್ಲೆಂಡ್‌ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC)  ಸರಣಿಯ 12 ಅಂಕಗಳನ್ನು ಕಡಿತಗೊಳಿಸಲಾಗಿದೆ. ಹಾಗೆಯೇ ಆಟಗಾರರಿಗೆ ಪಂದ್ಯ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಿದ್ದಾರೆ.

12 ಅಂಕಗಳು ಕಡಿತವೇಕೆ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ನಿಯಮಗಳ ಪ್ರಕಾರ, ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ಕಡಿಮೆ ಬೌಲಿಂಗ್ ಮಾಡಿದ ಪ್ರತಿ ಓವರ್‌ಗೆ ತಂಡವು ಒಂದು ಚಾಂಪಿಯನ್‌ಶಿಪ್ ಅಂಕವನ್ನು ಕಳೆದುಕೊಳ್ಳಬೇಕಾಗುತ್ತದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನಿಗದಿತ ಸಮಯದಲ್ಲಿ ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ 12 ಓವರ್​ಗಳು ಹಿಂದಿದ್ದ ಕಾರಣ 12 ಅಂಕಗಳನ್ನು ಕಡಿತಗೊಳಿಸಲಾಗಿದೆ.

ಹಾಗೆಯೇ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಪ್ರತಿ ಓವರ್ ತಡವಾದರೆ ಆಟಗಾರರಿಗೆ ಪಂದ್ಯದ ಸಂಭಾವನೆಯ ಶೇ. 5 ರಷ್ಟು ದಂಡ ವಿಧಿಸಲಾಗುತ್ತದೆ. ಇಲ್ಲಿ ಗರಿಷ್ಠ ಮಿತಿ ಪ್ರಮಾಣದಂತೆ ಇಂಗ್ಲೆಂಡ್ ತಂಡಕ್ಕೆ ಶೇ. 50 ರಷ್ಟು ದಂಡ ವಿಧಿಸಲಾಗಿದೆ.

ಇಂಗ್ಲೆಂಡ್‌ಗೆ ಭಾರಿ ಹಿನ್ನಡೆ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕಗಳ ಕಡಿತವು ಇಂಗ್ಲೆಂಡ್ ತಂಡದ WTC ಫೈನಲ್ ತಲುಪುವ ಕನಸಿಗೆ ಭಾರಿ ಹೊಡೆತ ನೀಡಿದೆ. ಏಕೆಂದರೆ 12 ಅಂಕಗಳ ಕಡಿತದೊಂದಿಗೆ ಇದೀಗ ಪಾಯಿಂಟ್ಸ್ ಪರ್ಸೆಂಟೇಜ್ 26.38 ಕ್ಕೆ ಕುಸಿದಿದೆ.

  • ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ WTC ಪಾಯಿಂಟ್ಸ್ ಪರ್ಸೆಂಟೇಜ್ (PCT) ಶೇ. 34.72 ರಷ್ಟಿತ್ತು.
  • ಸ್ಲೋ ಓವರ್​ ರೇಟ್ ತಪ್ಪಿನ ಶಿಕ್ಷೆಯಿಂದಾಗಿ 12 ಅಂಕಗಳನ್ನು ಕಳೆದುಕೊಂಡಿರುವ ಇಂಗ್ಲೆಂಡ್ ತಂಡದ ಪ್ರಸ್ತುತ  WTC ಪಾಯಿಂಟ್ಸ್ ಪರ್ಸೆಂಟೇಜ್ (PCT)  26.38 ಕ್ಕೆ ಕುಸಿದಿದೆ.

ಈ ಅಂಕಗಳ ಕಡಿತದೊಂದಿಗೆ ಸದ್ಯ ಇಂಗ್ಲೆಂಡ್ WTC ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲೇ ಮುಂದುವರಿದಿದ್ದರೂ, ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳೊಂದಿಗಿನ ಅಂತರ ಮತ್ತಷ್ಟು ಹೆಚ್ಚಾಗಿದೆ.

ಹಾಗೆಯೇ ಕೇವಲ 38 ಅಂಕಗಳನ್ನು ಹೊಂದಿರುವ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಿಂದ ಹೊರಬಿದ್ದಿದೆ ಎಂದೇ ಹೇಳಬಹುದು. ಏಕೆಂದರೆ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ವಿರುದ್ಧದ ಸರಣಿಗಳನ್ನು ಗೆದ್ದರೂ ಇಂಗ್ಲೆಂಡ್ ತಂಡ ಫೈನಲ್​ಗೇರುವುದಿಲ್ಲ.

ಇದನ್ನೂ ಓದಿ: ಗೋಲುಗಳ ಸುರಿಮಳೆ… ಫಿಫಾ ವಿಶ್ವಕಪ್​ನಲ್ಲಿ ಹೊಸ ಇತಿಹಾಸ

ಬದಲಾಗಿ ಟಾಪ್-4 ನಲ್ಲಿರುವ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಶ್ರೀಲಂಕಾ ತಂಡಗಳ ಸರಣಿ ಸೋಲುಗಳನ್ನು ಕೂಡ ಇಂಗ್ಲೆಂಡ್ ಎದುರು ನೋಡಬೇಕಾಗುತ್ತದೆ. ಹೀಗೆ ನಾಲ್ಕೈದು ತಂಡಗಳ ಫಲಿತಾಂಶದ ಆಧಾರದ ಮೇಲೆ ಆಂಗ್ಲರ ಪಡೆ ಫೈನಲ್​ಗೇರುವುದು ಅಸಾಧ್ಯದ ಮಾತು. ಹೀಗಾಗಿಯೇ ಅಂಕಗಳ ಕಡಿತದೊಂದಿಗೆ ಇಂಗ್ಲೆಂಡ್ ತಂಡದ ಫೈನಲ್ ಕನಸು ಕೂಡ ಕಮರಿದೆ ಎಂದೇ ಹೇಳಬಹುದು.

Source link

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ: ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್​​ – Kannada News | Fake Nagasadhus Deceive Man and Steal Ring in Bengaluru

ಬೆಂಗಳೂರು, ಜೂನ್​​ 22: ನಕಲಿ ನಾಗಸಾಧುಗಳ ಸೋಗಿನಲ್ಲಿ ಬಂದ ವಂಚಕರು ಅಮಾಯಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಆರ್‌ಪಿಸಿ ಲೇಔಟ್ ನಿವಾಸಿ ಅರುಣ್ ಶ್ರೀಪಾದ್ ಎಂಬುವರು ಇಂತಹದೊಂದು ವಂಚನೆಗೆ ಒಳಗಾಗಿದ್ದಾರೆ. ಸಾಧುಗಳ ವೇಷದಲ್ಲಿದ್ದ ಕೆಲ ವ್ಯಕ್ತಿಗಳು ಅರುಣ್ ಶ್ರೀಪಾದ್ ಅವರ ಬಳಿ ತೆರಳಿ, ಕಾಶಿ ಮತ್ತು ಗಂಗಾ ಸ್ನಾನದ ಮಹತ್ವದ ಬಗ್ಗೆ ಮನವರಿಕೆ ಮಾಡಿದ್ದಾರೆ. ಧಾರ್ಮಿಕ ಚರ್ಚೆಗಳಲ್ಲಿ ತೊಡಗಿಸಿಕೊಂಡು, ಅವರ ನಂಬಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಆಶೀರ್ವಾದ ಮಾಡುವ ಸೋಗಿನಲ್ಲಿ ಅರುಣ್ ಶ್ರೀಪಾದ್ ಅವರ ಕೈಲಿದ್ದ ಉಂಗುರವನ್ನು ಎಗರಿಸಿ ಕ್ಷಣ ಮಾತ್ರದಲ್ಲಿ ಕಣ್ಮರೆಯಾಗಿದ್ದಾರೆ. ವಂಚಕರು ಪರಾರಿಯಾದ ನಂತರವೂ, ಅರುಣ್ ಶ್ರೀಪಾದ್​​ಗೆ ತಮ್ಮ ಉಂಗುರ ಕಳುವಾಗಿರುವ ಬಗ್ಗೆ ತಕ್ಷಣವೇ ಅರಿವಾಗಿಲ್ಲ. ಮನೆಗೆ ತಲುಪಿದಾಗಷ್ಟೇ ಅವರು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್ – Kannada News | Gadag Illegal Money Lending Scam: Rowdy Sheeter Allots 5 Acre Farmers Land For Rs 17 Lakh Loan Arrested

ಆರೋಪಿಗಳಾದ ರೌಡಿಶೀಟರ್ ಯುವರಾಜ್ ಕೊರವರ ಹಾಗೂ ರವಿ ಕೌಜಗೇರಿImage Credit source: tv9

ಗದಗ, ಜೂನ್ 22: ಗದಗ (Gadag) ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಮತ್ತು ಮೀಟರ್ ಬಡ್ಡಿ ಮಾಫಿಯಾದ ದೌರ್ಜನ್ಯ ಮಿತಿಮೀರಿದೆ. ಸಾಲದ ನೆಪದಲ್ಲಿ ಅನ್ನದಾತನ ಆಸ್ತಿಯನ್ನೇ ದೋಚಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗದಗ ತಾಲೂಕಿನ ಬೆಳಹೋಡ ಗ್ರಾಮದ ನಿವಾಸಿಗಳಾದ ರೈತ ಮಹ್ಮದ್ ರಫೀಕ್ ದೊಡ್ಡಮನಿ ಮತ್ತು ಅವರ ಸಹೋದರರಿಗೆ ಕೇವಲ 17 ಲಕ್ಷ ರೂಪಾಯಿ ಸಾಲ ನೀಡಿ, ಅವರ ಕೋಟ್ಯಂತರ ರೂಪಾಯಿ ಮೌಲ್ಯದ 5 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಡ್ಡಿ ದಂಧೆಕೋರರು ತಮ್ಮದಾಗಿಸಿಕೊಂಡಿದ್ದಾರೆ. ಬೆಟಗೇರಿ ಮೂಲದ ಈ ಕಿರಾತಕರಿಂದ ಮೋಸಹೋಗಿ ಇಡೀ ರೈತ ಕುಟುಂಬ ಈಗ ಬೀದಿಗೆ ಬಿದ್ದಿದೆ.

ಮುಖ್ಯಾಂಶಗಳು

  • 17 ಲಕ್ಷಕ್ಕೆ ಕೋಟ್ಯಂತರ ರೂ. ಆಸ್ತಿ ಲೂಟಿ.
  • ಹಾಫ್ ರಿಜಿಸ್ಟ್ರೇಷನ್ ನೆಪದಲ್ಲಿ ವಂಚಿಸಿ ಖರೀದಿ ಪತ್ರ.
  • ರೌಡಿಶೀಟರ್ ಸೇರಿ ಇಬ್ಬರು ಆರೋಪಿಗಳ ಬಂಧನ.

ನಂಬಿಸಿ ನಕಲಿ ಖರೀದಿ ಪತ್ರ ಸೃಷ್ಟಿಸಿದ ಕಿರಾತಕರು

ಬೆಳಹೋಡ ಗ್ರಾಮದ ರೈತ ಮಹ್ಮದ್ ರಫೀಕ್ ತುರ್ತು ಅಗತ್ಯಕ್ಕಾಗಿ ಬೆಟಗೇರಿಯ ಬಡ್ಡಿ ದಂಧೆಕೋರರನ್ನು ಸಂಪರ್ಕಿಸಿ 17 ಲಕ್ಷ ರೂಪಾಯಿ ಸಾಲ ಕೇಳಿದ್ದರು. ಆದರೆ, ದಂಧೆಕೋರರು ಮುಂಗಡ ಬಡ್ಡಿಯಾಗಿ 5 ಲಕ್ಷ ರೂಪಾಯಿಗಳನ್ನು ಕಡಿತಗೊಳಿಸಿ, ರೈತನ ಕೈಗೆ ಕೊಟ್ಟಿದ್ದು ಕೇವಲ 12 ಲಕ್ಷ ರೂಪಾಯಿ ಮಾತ್ರ. ಈ ಸಾಲಕ್ಕೆ ಪ್ರತಿಯಾಗಿ ರೈತನಿಂದ 5 ಎಕರೆ ಜಮೀನಿನ ಅಡಮಾನ ಪತ್ರ (ಹಾಫ್ ರಿಜಿಸ್ಟ್ರೇಷನ್) ಮಾಡಿಸಿಕೊಳ್ಳುವುದಾಗಿ ನಂಬಿಸಿದ್ದರು. ಆದರೆ ಉಪನೋಂದಣಾಧಿಕಾರಿ ಕಚೇರಿಯಲ್ಲಿ ರೈತನಿಗೆ ತಿಳಿಯದಂತೆ ವಂಚಿಸಿ, ಶೇಷಗೀರಿಸಾ ಬಾಕಳೆ ಎಂಬಾತನ ಹೆಸರಿಗೆ ನೇರವಾಗಿ ಜಮೀನಿನ ಅಸಲಿ ‘ಖರೀದಿ ಪತ್ರ’ವನ್ನೇ (Sale Deed) ಬರೆಸಿಕೊಂಡು ವಂಚಿಸಿದ್ದಾರೆ. ಈಗ ಕೇವಲ 17 ಲಕ್ಷಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಸರಿಹೋಯಿತು ಎಂದು ದಂಧೆಕೋರರು ಬೆದರಿಕೆ ಹಾಕುತ್ತಿದ್ದಾರೆ.

ರೈತನ ಬೆನ್ನಿಗೆ ನಿಂತ ಎಸ್ಪಿ, ಇಬ್ಬರ ಬಂಧನ

ಸರ್ವಸ್ವವನ್ನೂ ಕಳೆದುಕೊಂಡು ಕಂಗಾಲಾದ ರೈತ ಕುಟುಂಬವು ಜಮೀನು ಉಳಿಸಿಕೊಡುವಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರೋಹನ್ ಜಗದೀಶ್ ಅವರ ಮೊರೆ ಹೋಗಿತ್ತು. ರೈತರ ಅಳಲನ್ನು ಆಲಿಸಿ ಅವರ ಬೆಂಬಲಕ್ಕೆ ನಿಂತ ಎಸ್ಪಿ ರೋಹನ್ ಜಗದೀಶ್, ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು. ಎಸ್ಪಿಯವರ ಸೂಚನೆ ಮೇರೆಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಮುಖ ಆರೋಪಿಗಳಾದ ರೌಡಿಶೀಟರ್ ಯುವರಾಜ್ ಕೊರವರ ಹಾಗೂ ರವಿ ಕೌಜಗೇರಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿರುವ ಉಳಿದ ಮೂವರು ಆರೋಪಿಗಳಾದ ಬಸನಗೌಡ ಕರಮುಡಿ, ಶೇಷಗೀರಸಾ ಬಾಕಳೆ ಮತ್ತು ಜಗದೀಶ ಅಯ್ಯನಗೌಡರ ತಲೆಮರೆಸಿಕೊಂಡಿದ್ದು, ಪೊಲೀಸರು ಇವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದರ್ಗಾವಾಲೆ ಕೊಲೆ ಬೆನ್ನಲ್ಲೇ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್: ಬುಡ ಸಮೇತ ಕಿತ್ತೊಗೆಯಲು ಎಸ್ಪಿ ಪ್ಲಾನ್

ಜಿಲ್ಲೆಯಲ್ಲಿ ವಾರದ ಹಿಂದಷ್ಟೇ ಬಡ್ಡಿ ಹಣಕ್ಕಾಗಿ ಮನೆಯ ಕಂಪೌಂಡ್ ಧ್ವಂಸಗೊಳಿಸಿದ ಘಟನೆ ನಡೆದಿತ್ತು. ಆ ಘಟನೆಯ ನೆನಪು ಮಾಸುವ ಮುನ್ನವೇ ಈ ದೊಡ್ಡ ವಂಚನೆ ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:32 am, Mon, 22 June 26

Source link

Exit mobile version