Headlines

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ – Kannada News | PM Kisan Samman Nidhi Yojana, registration, eligibility, beneficiaries number and other details

ನವದೆಹಲಿ, ಮೇ 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ….

Read More

ಎಬೋಲಾ ಆತಂಕ; ಕಾಂಗೋ, ಉಗಾಂಡಾ, ದಕ್ಷಿಣ ಸುಡಾನ್‌ ಪ್ರಯಾಣಿಕರಿಗೆ ಭಾರತದಿಂದ ಮಾರ್ಗಸೂಚಿ ಬಿಡುಗಡೆ – Kannada News | Ebola Outbreak India issues guidelines for passengers traveling to Congo, Uganda and South Sudan

ನವದೆಹಲಿ, ಮೇ 24: ಆಫ್ರಿಕಾ ದೇಶಗಳಲ್ಲಿ ಹರಡುತ್ತಿರುವ ಭೀಕರ ಎಬೋಲಾ (Ebola) ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನಮ್ಮ ದೇಶದ ನಾಗರಿಕರಿಗೆ ಅತ್ಯಂತ ಮಹತ್ವದ ಮಾರ್ಗಸೂಚಿಯನ್ನು (Travel Advisory) ಬಿಡುಗಡೆ ಮಾಡಿದೆ. ಕಾಂಗೋ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾರತೀಯರಿಗೆ ಸೂಚಿಸಿದೆ. ಇತ್ತೀಚೆಗೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ವೈರಸ್‌ನ ಅತ್ಯಂತ ಅಪರೂಪದ ಹಾಗೂ ಅಪಾಯಕಾರಿ ತಳಿಯಾದ…

Read More

Unique Traditions: ಜಗತ್ತಿನಾದ್ಯಂತ ಭಾನುವಾರ ವಾರದ ರಜೆ; ಆದರೆ ನೇಪಾಳದಲ್ಲೇಕೆ ಶನಿವಾರ ರಜೆ? ಇಲ್ಲಿದೆ ಅಸಲಿ ಕಾರಣ! – Kannada News | Why Nepal’s Weekly Holiday is Saturday? Unveiling unique traditions and working Sundays

ನೇಪಾಳದಲ್ಲೇಕೆ ಶನಿವಾರ ರಜೆ? Image Credit source: gemini ai ವಿಶ್ವದ ಬಹುತೇಕ ದೇಶಗಳಲ್ಲಿ ಭಾನುವಾರ ಬಂತೆಂದರೆ ಸಾಕು ಹಾಲಿಡೇ ಮೂಡ್ ಶುರುವಾಗುತ್ತದೆ. ಶಾಲೆ-ಕಾಲೇಜುಗಳಿಂದ ಹಿಡಿದು ಸರ್ಕಾರಿ ಕಚೇರಿಗಳವರೆಗೆ ಎಲ್ಲದಕ್ಕೂ ಭಾನುವಾರವೇ ವಾರದ ಅಧಿಕೃತ ರಜೆ (Weekly Holiday). ಭಾರತದ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೋಲುವ, ನಮ್ಮ ಪಕ್ಕದಲ್ಲೇ ಇರುವ ಹಿಂದೂ ರಾಷ್ಟ್ರ ನೇಪಾಳವು ಕೂಡ ಹೆಚ್ಚಿನ ವಿಷಯಗಳಲ್ಲಿ ಭಾರತವನ್ನೇ ಅನುಸರಿಸುತ್ತದೆ. ಆದರೆ, ರಜೆಯ ವಿಷಯಕ್ಕೆ ಬಂದರೆ ಮಾತ್ರ ನೇಪಾಳದ ನಿಯಮವೇ ಬೇರೆ. ನೇಪಾಳದಲ್ಲಿ ಭಾನುವಾರ ಯಾವುದೇ ರಜೆ…

Read More

Optical Illusion: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ – Kannada News | Optical illusion: If your eyes are sharp, can you tell where the zero is in this picture

ಆಪ್ಟಿಕಲ್‌ ಇಲ್ಯೂಷನ್‌ Image Credit source: Tv9 Telugu ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲ, ಬುದ್ಧಿವಂತಿಕೆಗೆ ಸವಾಲಾಗಿದೆ. ಈ ಇಲ್ಯೂಷನ್ ಚಿತ್ರವನ್ನು ನೋಡುವಾಗ ಸುಲಭವಾಗಿ ಕಂಡರೂ ಒಗಟು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದೀಗ ವೈರಲ್ ಆಗಿರುವ ಒಗಟಿನ ಚಿತ್ರದಲ್ಲಿ o ಅಕ್ಷರಗಳ ನಡುವೆ ಅಡಗಿರುವ ಸೊನ್ನೆಯನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯಾವಕಾಶ 10 ಸೆಕೆಂಡುಗಳು ಮಾತ್ರ…

Read More

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ! – Kannada News | Karnataka Rain Havoc: One Dead in Koppal, Hailstorms Lash Belagavi, Alerts Issued

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ…

Read More

Gold Rate: ಹತ್ತು ದಿನದಲ್ಲಿ ಚಿನ್ನದ ಬೆಲೆ 300 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 24th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 24: ಚಿನ್ನದ ಬೆಲೆಯಲ್ಲಿ ಏರಿಳಿತದ ಆಟ ನಡೆಯುತ್ತಿದೆ. ಶುಕ್ರವಾರ ಗ್ರಾಮ್​ಗೆ 40 ರೂ ಹೆಚ್ಚಿದ್ದ ಇದರ ಬೆಲೆ ಈಗ ಅಷ್ಟೇ ಪ್ರಮಾಣದಲ್ಲಿ ಕಡಿಮೆಗೊಂಡಿದೆ. ಕಳೆದ 10 ದಿನದಲ್ಲಿ ಏರುಪೇರುಗಳೊಂದಿಗೆ ಚಿನ್ನದ ಬೆಲೆಯಲ್ಲಿ (Gold Rates) ಸುಮಾರು 300 ರೂನಷ್ಟು ಕಡಿಮೆ ಆಗಿರುವುದು ಗಮನಾರ್ಹ. ವಿದೇಶಗಳಲ್ಲೂ ಈ ಏರಿಳಿಕೆಯ ಆಟ ನಡೆಯುತ್ತಿದೆ. ಬೆಳ್ಳಿ ಬೆಲೆಯಲ್ಲೂ ಹೀಗೆ ಏರಿಕೆ, ಇಳಿಕೆಗಳು ಆಗುತ್ತಲೇ ಇವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,800 ರುಪಾಯಿ…

Read More

ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು? – Kannada News | Bengaluru’s Pothole Ridden Roads Allegedly Cost Student a UPSC Exam Chance

ಬೆಂಗಳೂರು, ಮೇ 24: ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಲ್ಲಿರುವ ಬೆಂಗಳೂರಿನ (Bengaluru) ರಸ್ತೆಗಳ ದುರಾವಸ್ಥೆ ಈಗ ಮತ್ತೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಗರದ ಕಿತ್ತುಹೋದ ರೋಡ್​​ಗಳಿಂದ ವಿದ್ಯಾರ್ಥಿಯೋರ್ವ UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಯ ಶ್ರಮ ನೀರಲ್ಲಿ ಹೋಮ ಮಾಡಿದಂತಾಗಿದೆ ಎಂಬ ಮಾತುಗಳು…

Read More

ರೋಹಿತ್ 200 ಹೊಡಿಲಿ, ಸೂರ್ಯವಂಶಿ ಡಕೌಟ್ ಆಗಲಿ: ಚಹಲ್ ಪ್ರಾರ್ಥನೆ! – Kannada News | IPL 2026: Yuzvendra Chahal’s Hilarious Playoff Qualification Logic Goes Viral

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 68 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮೂಲಕ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿರುವ ತಂಡಗಳೆಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್. ಈ ಮೂರು ತಂಡಗಳ ಭವಿಷ್ಯ ನಿರ್ಧರಿಸುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್…

Read More

ಕ್ರಿಕೆಟ್ ತಾಳ್ಮೆಯನ್ನೂ ಪರೀಕ್ಷಿಸುತ್ತದೆ… ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್ ! – Kannada News | Sachin Tendulkar’s Emotional Post for Son Arjun’s IPL Debut Goes Viral

ಕ್ರಿಕೆಟ್ ಜಗತ್ತಿನ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರ ಐಪಿಎಲ್ 2026ರ ಸೀಸನ್‌ನ ಮೊದಲ ಪಂದ್ಯದ ಪ್ರದರ್ಶನವನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೃದಯಸ್ಪರ್ಶಿ ಸಂದೇಶವೊಂದು ಸದ್ಯ ಭಾರಿ ವೈರಲ್ ಆಗಿದೆ. ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅರ್ಜುನ್ ತೆಂಡೂಲ್ಕರ್ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದರು. ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ತಂಡಕ್ಕೆ ಟ್ರೇಡ್ ಆಗಿದ್ದ ಅರ್ಜುನ್, ಇಡೀ ಸೀಸನ್ ಬೆಂಚ್…

Read More

Hanuman Flag Vastu: ಮನೆಯ ಮೇಲೆ ಹಾರಾಡಲಿ ಹನುಮದ್ ಧ್ವಜ; ಇಲ್ಲಿದೆ ಅಸಲಿ ವಾಸ್ತು ರಹಸ್ಯ! – Kannada News | Hanuman Flag Vastu: Benefits, Placement and Home Protection

ಮನೆಯ ಮೇಲ್ಛಾವಣಿಯ ಮೇಲೆ ಹನುಮದ್ ಧ್ವಜImage Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ವಸ್ತುವಿಗೂ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಸನಾತನ ಧರ್ಮದಲ್ಲಿ ಆಂಜನೇಯ ಸ್ವಾಮಿಯನ್ನು ಸಕಲ ಭಯ ನಿವಾರಕ, ಸಂಕಟಮೋಚನ ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ಅನೇಕರು ತಮ್ಮ ಮನೆಯ ಮೇಲ್ಛಾವಣಿಯ (ಟೆರೇಸ್) ಮೇಲೆ ಹನುಮಂತನ ಚಿತ್ರವಿರುವ ಕೆಂಪು ಅಥವಾ ಕೇಸರಿ ಧ್ವಜವನ್ನು ಹಾರಿಸುವುದನ್ನು ನೀವು ನೋಡಿರಬಹುದು. ಕೆಲವರು ಇದನ್ನು ಕೇವಲ ಒಂದು ಧಾರ್ಮಿಕ ಪದ್ಧತಿ ಎಂದು ಭಾವಿಸುತ್ತಾರೆ. ಆದರೆ ಇದರ ಹಿಂದೆ…

Read More