ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಪ್ರತಿದಾಳಿಗೆ ಆಗಂತುಕ ಸಾವು – Kannada News | Shooting Near White House: Suspect Killed in Return Fire, President Donald Trump Safe

ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿImage Credit source: shutterstock.com

ವಾಷಿಂಗ್‌ಟನ್, ಮೇ 24: ಅಮೆರಿಕದ ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್​ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎನ್ನಲಾಗಿದೆ. ​ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಸಂಜೆ ಸುಮಾರು 6 ಗಂಟೆಯ ನಂತರ ವ್ಯಕ್ತಿಯೋರ್ವ ಭದ್ರತಾ ತಪಾಸಣಾ ಕೇಂದ್ರದತ್ತ ಬಂದು ತನ್ನ ಬ್ಯಾಗಿನಿಂದ ಗನ್ ತೆಗೆದು ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ಆರಂಭಿಸಿದ್ದ ಎನ್ನಲಾಗಿದೆ.

ಟ್ರಂಪ್​​ ಸೇಫ್​​

ಇನ್ನು ದಾಳಿಯ ವೇಳೆ ಅದಕ್ಕೆ ಪ್ರತಿಯಾಗಿ ಅಧಿಕಾರಿಗಳು ಗುಂಡು ಹಾರಿಸಿದ್ದು, ಶಂಕಿತನಿಗೆ ಗುಂಡು ತಗುಲಿತ್ತು. ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಘಟನೆಯಲ್ಲಿ ಓರ್ವ ಪಾದಚಾರಿಗೂ ಗಾಯಗಳಾಗಿವೆ. ಆದರೆ ಆ ವ್ಯಕ್ತಿಗೆ ಶಂಕಿತನ ಗುಂಡಿನಿಂದ ಗಾಯವಾಗಿದೆಯೋ ಅಥವಾ ಅಧಿಕಾರಿಗಳ ಪ್ರತಿದಾಳಿಯ ವೇಳೆ ಗಾಯವಾಗಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸೀಕ್ರೆಟ್ ಸರ್ವಿಸ್ ಅಧಿಕಾರಿಗಳಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆ ನಡೆಯುವ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈಟ್ ಹೌಸ್ ಒಳಗೇ ಇದ್ದರು. ಆದರೆ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಕ್ಷಣೆಗೆ ಹೋದವರಿಗೇ ಕಾದಿತ್ತು ಆಪತ್ತು, ಅಮೆರಿಕದಲ್ಲಿ ಮೂವರನ್ನು ಬಲಿ ಪಡೆದ ನಿಗೂಢ ವಸ್ತು, ಸಿಬ್ಬಂದಿ ಅಸ್ವಸ್ಥ

ಇನ್ನು ವೈಟ್ ಹೌಸ್ ಸಮೀಪ ಗುಂಡಿನ ದಾಳಿ ನಡೆದಿರುವುದು ಇದು ಮೊದಲೇನಲ್ಲ. ಕಳೆದ ನವೆಂಬರ್‌ನಲ್ಲಿ ವೆಸ್ಟ್ ವರ್ಜೀನಿಯಾ ನ್ಯಾಷನಲ್ ಗಾರ್ಡ್‌ನ ಇಬ್ಬರು ಸದಸ್ಯರ ಮೇಲೆ ಕೂಡ ಇದೇ ಪ್ರದೇಶದಲ್ಲಿ ದಾಳಿ ನಡೆದಿತ್ತು. ಆ ಘಟನೆಯಲ್ಲಿ ಅಮೆರಿಕ ಸೇನೆಯ ಸ್ಪೆಷಲಿಸ್ಟ್ ಸಾರಾ ಬೆಕ್‌ಸ್ಟ್ರೋಮ್ ಮೃತಪಟ್ಟಿದ್ದು, ಆಂಡ್ರೂ ವೋಲ್ಫ್ ಗಂಭೀರವಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ಏಪ್ರಿಲ್ 25ರಂದು ಅಧ್ಯಕ್ಷ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಅಸೋಸಿಯೇಷನ್ ಡಿನ್ನರ್ ಕಾರ್ಯಕ್ರಮದ ವೇಳೆ ಹತ್ಯೆ ಯತ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕ್ಯಾಲಿಫೋರ್ನಿಯಾದ ಕೋಲ್ ಟೋಮಾಸ್ ಆಲೆನ್ ವಿರುದ್ಧ ಟ್ರಂಪ್ ಹತ್ಯೆ ಯತ್ನದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಆತ ಫೆಡರಲ್ ಕಸ್ಟಡಿಯಲ್ಲಿ ಇದ್ದಾನೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:29 am, Sun, 24 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ, ಅತಿಯಾದ ಆತಂಕ – Kannada News | Horoscope May 24 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ಹಿತಶತ್ರಗಳು ಸೋಲನ್ನು ಒಪ್ಪಿದರೂ ಇನ್ನೊಂದು ರೀತಿಯಲ್ಲಿ ಗೆಲ್ಲುವ ಯೋಜನೆ ಮಾಡುವರು. ಗಳಿಸಿಕೊಂಡ‌ ಭಾವಕ್ಕಿಂತ ಉಳಿಸಿಕೊಂಡ ಭಾವವೇ ಮೇಲು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ಬಾರದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಾಗುವುದು.

ವೃಷಭ ರಾಶಿ:

ನಿಮ್ಮನ್ನು ಜ್ಞಾನವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಸ್ನೇಹವನ್ನು ಉಳಿಸಿಕೊಳ್ಳಲಾಗದು. ಕಲಿಕೆಯ ವಿಚಾರದಲ್ಲಿ ನೀವು ಎಂದಿಗಿಂತ ಹೆಚ್ಚು ಪ್ರಯತ್ನಶೀಲರು. ವಿವೇಚನೆ ಹೆಚ್ಚಲಿದೆ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು.

ಮಿಥುನ ರಾಶಿ:

ಕಷ್ಟಗಳನ್ನು ಹಂಚಿಕೊಂಡು ಹಿರಿಯರೊಂದಿಗೆ ಆತ್ಮೀಯತೆ ಬೆಳೆಯಲಿದೆ. ಕುಟುಂಬದ ಸೆಳೆತದಿಂದ ವಿದ್ಯಾಭ್ಯಾಸ ಹಾಳಾಗುವುದು. ವ್ಯಾಪಾರವನ್ನು ಬೆಳಗಿಸಲು ಅನೇಕ ಅವಕಾಶಗಳಿವೆ. ಆದರೆ ನಿಮ್ಮ ನಿರ್ಲಕ್ಷ್ಯವು ಕೆಲಸವನ್ನು ಹಾಳು ಮಾಡಬಹುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ಹಳೆಯ ರೋಗಗಳಿಂದ ನೀವು ಮುಕ್ತರಾದಂತೆ ತೋರುವುದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ.

ಕರ್ಕಾಟಕ ರಾಶಿ:

ಅನಗತ್ಯ ಧೈರ್ಯವನ್ನು ತೋರಿಸುವುದನ್ನು ತಪ್ಪಿಸುವುದು ಸೂಕ್ತ. ನಿಮ್ಮ ವಸ್ತುಗಳನ್ನು ಜೋಪಾನ‌‌ ಮಾಡಿಕೊಳ್ಳಬೇಕು. ನೀವು ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ. ಅನುಭವಿ ಜನರನ್ನು ಸಂಪರ್ಕಿಸಲಾಗುವುದು. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯವು ಹದ ತಪ್ಪುವುದು.

ಸಿಂಹ ರಾಶಿ:

ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ. ಸಂಗಾತಿಯನ್ನು ಅಮೂಲ್ಯ ವಸ್ತುಗಳಿಂದ ಸುಮ್ಮನಾಗಿಸುವಿರಿ. ಆರಂಭದಲ್ಲಿ, ಕೆಲವು ಕೆಲಸಗಳನ್ನು ಯೋಚಿಸದೆ ಮಾಡಲಾಗುತ್ತದೆ ಮತ್ತು ಕೆಲವು ಪ್ರಜ್ಞಾಪೂರ್ವಕವಾಗಿ ಮುಂದುವರಿಯುತ್ತದೆ. ಇದು ಗುರಿಯ ಸಾಧನೆಗೆ ಅಥವಾ ಅನುಭವದ ಅನನ್ಯ ಕೊಡುಗೆಗೆ ಕಾರಣವಾಗುತ್ತದೆ. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು.

ಕನ್ಯಾ ರಾಶಿ :

ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ. ದಾನ ಮಾಡುವ ಮನೋಭಾವವು ಹೆಚ್ಚಾಗುತ್ತದೆ. ಅಭ್ಯಾಸವನ್ನು ಸೃಜನಾತ್ಮಕವಾಗಿ ಮಾಡಿಕೊಳ್ಳುವಿರಿ. ನೀವು ಇಂದು ಮಂಗಲಕಾರ್ಯವನ್ನು ಯೋಜಿಸುವಿರಿ. ಕೆಲವು ನಕಾರಾತ್ಮಕ ಸುದ್ದಿಗಳಿಂದಾಗಿ ನಿಮ್ಮ ಮನಸ್ಸು ಚಿಂತಿತವಾಗಬಹುದು. ನೀವು ಸಂತಾನದ ಸಂತೋಷವನ್ನು ಹೊಂದಿರುತ್ತೀರಿ. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು.

ತುಲಾ ರಾಶಿ:

ಶಿಕ್ಷಣದ ಬಗ್ಗೆ ನಿಮಗಿರುವ ಆಸಕ್ತಿ ಮತ್ತಷ್ಟು ಅಧಿಕವಾಗಬಹುದು. ಸೂಕ್ತ ಸಮಯಕ್ಕೆ ಚಿಕಿತ್ಸೆಯಿಂದ ಆರೋಗ್ಯ ಚೆನ್ನಾಗಿ ಆಗುವುದು. ಮಕ್ಕಳ ಚಿಂತೆಯಿಂದ ಎಲ್ಲ ಸಂತೋಷಗಳು ಮರೆಯಾಗಲಿವೆ. ಯಾರ ನಕಾರಾತ್ಮಕ ವಿಚಾರವೂ ನಿಮಗೆ ಏನೂ ಮಾಡದು. ಅನವಶ್ಯಕವಾದ ಸಮಸ್ಯೆಗಳು ನಿಮ್ಮನ್ನು ಕಾಡಿಯಾವು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು.

ವೃಶ್ಚಿಕ ರಾಶಿ:

ವಿರೋಧಿಗಳ ಯೋಜನೆಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ. ಸರ್ಕಾರಿ ಕೆಲಸಗಳು ವಿಳಂಬವಾಗುವುದು. ಅಹಂಕಾರದಿಂದ ಪರರ ಸಲಹೆಯನ್ನು ಸ್ವೀಕರಿಸಲಾರಿರಿ. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ. ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ.

ಧನು ರಾಶಿ:

ನಿಮ್ಮ ಇಂದಿನ ಆರ್ಥಿಕ ಲೆಕ್ಕಾಚಾರ ಸರಿಯಾಗಲಿದೆ. ಸಹನೆಯ ನಿಮ್ಮ ಗುಣದಿಂದ ಸಾಕಷ್ಟು ಅನುಕೂಲವನ್ನು‌ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆ ತಂದುಕೊಳ್ಳುವಿರಿ. ಹೊಸತನ್ನು ಕಲಿಯಬೇಕು ಎನದನುವ ತುಡಿತ ಇರಲಿದೆ. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಂದು ಮಾಡುವ ಎಲ್ಲ ಕಾರ್ಯಗಳನ್ನೂ ಪೂರ್ಣ ಮಾಡಲಾರಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು.

ಮಕರ ರಾಶಿ :

ನಿಮಗೆ ಸಿಗುವ ಹೊಸ ಭರವಸೆಗಳು ಸಂತೋಷವನ್ನು ತರುತ್ತವೆ. ಭೂಮಿಯ ವ್ಯವಹಾರವನ್ನು ಮಾಡಲಿದ್ದೀರಿ. ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಉದ್ಯಮಕ್ಕೆ ಸಹಕಾರಿ. ಸೇವೆ ಮತ್ತು ದಾನದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಪ್ರಯೋಜನಕಾರಿಯಾಗಲಿವೆ. ವಿದೇಶದ ಸಂಪರ್ಕವನ್ನು ಮಾಡಲು ಅವಕಾಶ ಸಿಗಲಿದೆ. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ.

ಕುಂಭ ರಾಶಿ:

ನಿಮ್ಮ ಜಾಣ್ಮೆಯಿಂದ ಆದಾಯದ ಪೂರ್ಣಲಾಭವನ್ನು ಮಾಡಿಕೊಳ್ಳುವಿರಿ. ಮನೆಯಲ್ಲಿ ಸಂತೋಷದ ವಾತಾವರಣವು ಇರುತ್ತದೆ. ಸಹೋದರನ ನಡವಳಿಕೆಯಿಂದ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕ ಯೋಗವಿದೆ. ತರಾತುರಿಯಲ್ಲಿ ಮಾಡಿದ ಕೆಲಸವು ಹಾನಿಯನ್ನುಂಟು ಮಾಡುತ್ತದೆ. ಮಗುವಿನ ನಡವಳಿಕೆಯು ನೋವನ್ನು ಉಂಟುಮಾಡುತ್ತದೆ. ಕಳ್ಳತನದ ಭೀತಿಯಿಂದ ವಸ್ತುಗಳನ್ನು ಜೋಪಾನ ಮಾಡಿಕೊಳ್ಳುವಿರಿ. ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು.

ಮೀನ ರಾಶಿ:

ತ್ವರಿತ ನಿರ್ಣಯದಿಂದ ನಿಂದನೆ. ಸೃಜನಶೀಲತಯಿಂದ ನಿಮ್ಮ ಮನಸ್ಸು ಅರಳುವುದು. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ. ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧ್ರುವ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:10 – 18:46, ಯಮಗಂಡ ಕಾಲ 12:21 – 13:57, ಗುಳಿಕ ಕಾಲ 15:34 – 17:10

-ಲೋಹಿತ ಹೆಬ್ಬಾರ್-8762924271 (what’s app only)

Source link

LSG vs PBKS: ಶ್ರೇಯಸ್ ಶತಕ; ಪಂಜಾಬ್ ಪ್ಲೇಆಫ್‌ ಆಸೆ ಜೀವಂತ

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿತ್ತು. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಪಂಜಾಬ್ ಕಿಂಗ್ಸ್​ಗೆ ಬಹುಮುಖ್ಯವಾಗಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಲಕ್ನೋ ತಂಡವನ್ನು ಮಣಿಸಿದ ಪಂಜಾಬ್ ತಂಡ ತನ್ನ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 197 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ನಾಯಕ ಶ್ರೇಯಸ್ ಅಯ್ಯರ್ ಅವರ ಅಬ್ಬರದ ಬ್ಯಾಟಿಂಗ್​ನಿಂದ ಸುಲಭವಾಗಿ ಜಯ ಸಾಧಿಸಿತು.

Source link

ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು, ಮೇ.23: ನಗರಕ್ಕೆ ಹೊಸ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಗೆ ಆನೇಕಲ್ ತಾಲ್ಲೂಕಿನ ಸೂರ್ಯ ನಗರದಲ್ಲಿ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಶಾಸಕ ಶಿವಲಿಂಗೇಗೌಡ, ಆನೇಕಲ್ ಶಿವಣ್ಣ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಉಪಸ್ಥಿತರಿದ್ದರು. ಡಿಕೆ ಶಿವಕುಮಾರ್ ಅವರು ಮಾತನಾಡಿ, ಈ ಯೋಜನೆ ಬೆಂಗಳೂರಿಗೆ ಹೊಸ ಕೊಡುಗೆಯಾಗಲಿದೆ ಎಂದು ಹೇಳಿದರು. ಲಕ್ಷಾಂತರ ಕ್ರೀಡಾಪಟುಗಳು ಮತ್ತು ಅಭಿಮಾನಿಗಳು ಬೆಂಗಳೂರಿನ ಹೊರಗೆ ಭವ್ಯವಾದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮತ್ತು ಇತರ ಕ್ರೀಡೆಗಳನ್ನು ನೋಡಲು ಅವಕಾಶವನ್ನು ಕಲ್ಪಿಸುವುದು ಯೋಜನೆಯ ಉದ್ದೇಶವಾಗಿದೆ. ಇದು ಬೆಂಗಳೂರಿನಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯಕವಾಗಲಿದೆ ಎಂದು ಅವರು ತಿಳಿಸಿದರು. ಈ ಐತಿಹಾಸಿಕ ಕಾರ್ಯಕ್ರಮವು ಸರ್ಕಾರ ಮತ್ತು ಜನರ ಸಹಕಾರದಿಂದ ಸಾಧ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು. ರೈತರ ಸಹಕಾರ ಹಾಗೂ ಸ್ಥಳೀಯ ನಾಯಕರಾದ ಡಿ.ಕೆ. ಸುರೇಶ್ ಮತ್ತು ಶಿವಣ್ಣ ಅವರ ಪ್ರಯತ್ನಗಳು ಈ ಯೋಜನೆಗೆ ಪೂರಕವಾಗಿವೆ ಎಂದು ಡಿಕೆ ಶಿವಕುಮಾರ್ ಶ್ಲಾಘಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ಗೆ ಶುರುವಾಯ್ತು ಸಂಕಷ್ಟ, ಚರ್ಚೆ ಬಳಿಕವೂ ಪ್ರದರ್ಶಕರ ವಿರೋಧ – Kannada News | Telangana Exhibitors oppose price hike for Ram Charan’s Peddi movie

ತೆಲುಗು ಚಿತ್ರರಂಗದಲ್ಲಿ (Tollywood) ಕಳೆದ ಒಂದೆರಡು ವರ್ಷಗಳಿಂದಲೂ ಸಿನಿಮಾ ನಿರ್ಮಾಪಕರು, ಪ್ರದರ್ಶಕರು ಮತ್ತು ವಿತರಕರ ನಡುವೆ ಭಿನ್ನಾಭಿಪ್ರಾಯಗಳು ಚಾಲ್ತಿಯಲ್ಲಿವೆ. ಲಾಭ ಹಂಚಿಕೆ ವಿಚಾರವಾಗಿ ಪದೇ-ಪದೇ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇವೆ. ಹಲವು ಸುತ್ತುಗಳ ಚರ್ಚೆಗಳು ಸಹ ನಡೆದಿವೆ. ಇತ್ತೀಚೆಗಂತೂ ಕೆಲ ನಿರ್ಮಾಪಕರು, ವಿತರಕರು ಬಹಿರಂಗವಾಗಿ ಏಕವಚನದಲ್ಲಿ ಬೈದಾಡಿಕೊಂಡಿದ್ದೂ ಸಹ ಇದೆ. ಆದರೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಾಪಕರು, ಪ್ರದರ್ಶಕರು ಲಾಭ ಹಂಚಿಕೆ ಷರತ್ತಿಗೆ ಒಪ್ಪಿಕೊಂಡಿದ್ದರು. ಆದರೆ ಲಾಭ ಹಂಚಿಕೆಯು ‘ಪೆದ್ದಿ’ ಸಿನಿಮಾ ಬಿಡುಗಡೆ ನಂತರ ಎನ್ನಲಾಗಿತ್ತು. ಸರಿ ಎಂದು ಒಪ್ಪಿಕೊಂಡಿದ್ದ ಪ್ರದರ್ಶಕರು ಈಗ ಮತ್ತೆ ತಕರಾರು ತೆಗೆದಿದ್ದಾರೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ತೆಲಂಗಾಣ ಸಿನಿಮಾ ಪ್ರದರ್ಶಕರು ಸಿನಿಮಾದ ವಿರುದ್ಧ ನಿಂತಿದ್ದಾರೆ. ‘ಪೆದ್ದಿ’ ಸಿನಿಮಾದ ಟಿಕೆಟ್ ದರ ಹೆಚ್ಚಳಕ್ಕೆ ತೆಲಂಗಾಣದ ಪ್ರದರ್ಶಕರು ವಿರೋಧಿಸಿರುವುದು ಮಾತ್ರವೇ ಅಲ್ಲದೆ, ‘ಪೆದ್ದಿ’ ಸಿನಿಮಾ ಮೂಲಕವೇ ಲಾಭಾಂಶ ಹಂಚಿಕೆ ಪ್ರಾರಂಭವಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ತೆಲಂಗಾಣ ಪ್ರದರ್ಶಕರ ಸಂಘವು ಪತ್ರಿಕಾಗೋಷ್ಠಿ ನಡೆಸಿ, ಏಕ-ಪರದೆ ಚಿತ್ರಮಂದಿರಗಳಲ್ಲಿ ಇನ್ನು ಮುಂದೆ ದೊಡ್ಡ ಸಿನಿಮಾಗಳ ಟಿಕೆಟ್ ದರಗಳನ್ನು ಹೆಚ್ಚಿಸುವುದಿಲ್ಲ ಎಂದಿದ್ದಾರೆ. ಟಿಕೆಟ್ ದರಗಳನ್ನು ಅತಿಯಾಗಿ ಹೆಚ್ಚಿಸುವುದರಿಂದ ಸಾಮಾನ್ಯ ಪ್ರೇಕ್ಷಕರು ಚಿತ್ರಮಂದಿರಗಳಿಂದ ದೂರ ಉಳಿಯುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳಿಗೆ ಸೆಳೆಯಲು ಟಿಕೆಟ್ ದರಗಳನ್ನು ಸಾಮಾನ್ಯ ಮಟ್ಟದಲ್ಲೇ ಇಡಲು ನಿರ್ಧರಿಸಲಾಗಿದ್ದು, ಈ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೂ ಪತ್ರ ಬರೆಯಲಾಗಿದ್ದು, ‘ಪೆದ್ದಿ’ ಸೇರಿದಂತೆ ಯಾವುದೇ ದೊಡ್ಡ ಸಿನಿಮಾಗಳ ಟಿಕೆಟ್ ದರ ಹೆಚ್ಚಿಸದಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ರಾಮ್ ಗೋಪಾಲ್ ವರ್ಮಾ

ಈ ವಿವಾದದ ಮುಖ್ಯ ಕಾರಣ ‘ಬಾಡಿಗೆ ಪದ್ಧತಿ’ ಮತ್ತು ‘ಲಾಭ ಹಂಚಿಕೆ ಪದ್ಧತಿ’ ನಡುವಿನ ಸಂಘರ್ಷವಾಗಿದೆ. ಚಿತ್ರಮಂದಿರಗಳ ಮಾಲೀಕರು ಹಳೆಯ ಬಾಡಿಗೆ ಪದ್ಧತಿಯನ್ನು ಸಂಪೂರ್ಣವಾಗಿ ವಿರೋಧಿಸುತ್ತಿದ್ದು, ಮಲ್ಟಿಪ್ಲೆಕ್ಸ್‌ಗಳಂತೆ ತಮಗೂ ಶೇಕಡಾವಾರು ಆದಾಯ ಹಂಚಿಕೆ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಮೊದಲ ವಾರದಲ್ಲಿ ಶೇಕಡಾ 60, ಎರಡನೇ ವಾರದಲ್ಲಿ ಶೇಕಡಾ 50 ಮತ್ತು ಆನಂತರ ಶೇಕಡಾ 40 ರಷ್ಟು ಆದಾಯದ ಪಾಲನ್ನು ತಮಗೆ ನೀಡಬೇಕು, ಇಲ್ಲದಿದ್ದರೆ ಚಿತ್ರವನ್ನು ಪ್ರದರ್ಶಿಸುವುದಿಲ್ಲ ಎಂದು ಅವರು ಕಟ್ಟುನಿಟ್ಟಾದ ಆದೇಶವನ್ನು ನೀಡಿದ್ದಾರೆ.

ಇತ್ತೀಚೆಗಷ್ಟೇ ತೆಲುಗು ಫಿಲ್ಮ್ ಚೇಂಬರ್ ನೇತೃತ್ವದಲ್ಲಿ ನಡೆದ ಸಭೆಯೊಂದರಲ್ಲಿ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಮತ್ತು ‘ಪೆದ್ದಿ’ ಚಿತ್ರದ ಬಿಡುಗಡೆಗೆ ಹಾದಿ ಸುಗಮವಾಗಿದೆ ಎಂದು ಹೇಳಲಾಗಿತ್ತು. ಆದರೆ, ಆ ನಂತರ ತೆಲಂಗಾಣ ರಾಜ್ಯ ಚಲನಚಿತ್ರ ಚೇಂಬರ್ ಅಧ್ಯಕ್ಷ ಸುನಿಲ್ ನಾರಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚಿತ್ರರಂಗದೊಳಗಿನ ಭಿನ್ನಾಭಿಪ್ರಾಯಗಳು ಮತ್ತೆ ಬಹಿರಂಗಗೊಂಡಿವೆ. ಪ್ರದರ್ಶಕರು ತಮ್ಮ ಪಟ್ಟು ಸಡಿಲಿಸದ ಕಾರಣ ‘ಪೆದ್ದಿ’ ಚಿತ್ರದ ವಿವಾದವು ಮತ್ತೆ ಮೊದಲಿನ ಸ್ಥಿತಿಗೆ ಬಂದು ತಲುಪಿದೆ.

ತೆಲಂಗಾಣವು ತೆಲುಗು ಚಿತ್ರರಂಗಕ್ಕೆ ಅತ್ಯಂತ ದೊಡ್ಡ ಮಾರ್ಕೆಟ್ ಆಗಿರುವುದರಿಂದ, ಪ್ರದರ್ಶಕರ ಈ ಹಠಾತ್ ನಿರ್ಧಾರವು ‘ಪೆದ್ದಿ’ ಚಿತ್ರದ ಆರಂಭಿಕ ದಿನಗಳ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಚಿತ್ರದ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ಸಿಕ್ಕಿದ್ದರೂ, ತೆಲಂಗಾಣದಲ್ಲಿ ಹಳೆಯ ದರದಲ್ಲೇ ಟಿಕೆಟ್ ಮಾರಾಟ ಮಾಡಿದರೆ ನಿರ್ಮಾಪಕರಿಗೆ ನಷ್ಟವಾಗಲಿದೆ. ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಎದುರಾಗಿರುವ ಈ ಬಿಕ್ಕಟ್ಟನ್ನು ಬಗೆಹರಿಸಲು ಮೆಗಾಸ್ಟಾರ್ ಚಿರಂಜೀವಿ ಅವರು ಮಧ್ಯಸ್ಥಿಕೆ ವಹಿಸುತ್ತಾರೆಯೇ ಎಂಬುದನ್ನು ಇಡೀ ಚಿತ್ರರಂಗ ಕುತೂಹಲದಿಂದ ನೋಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾರ್ಟರ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ – Kannada News | Constable’s Wife Dies in Quarters After Family Dispute

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಮುಖ್ಯಾಂಶಗಳು

  • ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಪತ್ನಿ ಆತ್ಮಹತ್ಯೆ
  • ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
  • ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ 8 ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಈ ಕುಟುಂಬ ವಾಸವಾಗಿತ್ತು. ನಿನ್ನೆ (ಮೇ 22) ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. “ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷ್ಮೀಪ್ರಿಯಾ, ನಿನ್ನೆ ರಾತ್ರಿ ರಾಜೇಶ್ ನೈಟ್ ಡ್ಯೂಟಿಗೆ ತೆರಳಿದ್ದಾಗ ಇತ್ತ ಕ್ವಾರ್ಟರ್ಸ್‌ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಇನ್ನು ಘಟನೆ ನಡೆದ ಬೆನ್ನಲ್ಲೇ ಮೃತ ಲಕ್ಷ್ಮೀಪ್ರಿಯಾ ಪೋಷಕರು, ರಾಜೇಶ್​ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಯಾದಾಗಿನಿಂದಲೂ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬ ಸದಸ್ಯರು ಲಕ್ಷ್ಮೀಪ್ರಿಯಾಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಹಿಂಸೆ ನೀಡುತ್ತಿದ್ದರು. ನಿನ್ನೆ ನಡೆದ ಜಗಳ ಹಾಗೂ ಈ ಹಿಂದಿನ ಕಿರುಕುಳವೇ ಮಗಳ ಆತ್ಮಹತ್ಯೆಗೆ ನೇರ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಕೆ.ಆರ್.ಪುರಂ ಠಾಣೆಯಲ್ಲಿ ಕೇಸ್ ದಾಖಲು

ಮೃತ ಲಕ್ಷ್ಮೀಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ ಅದರ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ, ಅದಾದ ಬಳಿಕ ಮತ್ತೆ ಸುಕುಮಾರ್. ಒಟ್ಟಾರೆ ಮುಂದಿನ ಕೆಲ ವರ್ಷಗಳ ಕಾಲ ಅಲ್ಲು ಅರ್ಜುನ್ ಬ್ಯುಸಿ.

ಆದರೆ ಇಷ್ಟು ಸಿನಿಮಾಗಳಲ್ಲಿ ಮಲಯಾಳಂ ನಟ ಬಾಸಿಲ್ ನಿರ್ದೇಶನ ಮಾಡಲಿರುವ ಸಿನಿಮಾ ಸಖತ್ ಕುತೂಹಲ ಮೂಡಿಸಿತ್ತು. ಏಕೆಂದರೆ ಬಾಸಿಲ್ ಅವರು ಅಲ್ಲು ಅರ್ಜುನ್​​ಗಾಗಿ ಸೂಪರ್ ಹೀರೋ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಹಿಂದೆ ಬಾಸಿಲ್ ಅವರು ‘ಮಿನ್ನಲ್ ಮುರಲಿ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಅದು ಭಾರತದ ಅತ್ಯುತ್ತಮ ಸೂಪರ್ ಹೀರೋ ಸಿನಿಮಾಗಳಲ್ಲಿ ಒಂದಾಗಿದೆ. ಈಗ ಅದೇ ಬಾಸಿಲ್, ಅಲ್ಲು ಅರ್ಜುನ್​​ಗೆ ಸೂಪರ್ ಹೀರೋ ಸಿನಿಮಾ ನಿರ್ದೇಶಿಸಲು ಮುಂದಾಗಿರುವುದು ಸಹಜವಾಗಿಯೇ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ:ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ಆದರೆ ಬಾಸಿಲ್ ಜೋಸೆಫ್, ಅಲ್ಲು ಅರ್ಜುನ್ ಅವರಿಗೆ ಶಕ್ತಿಮಾನ್ ಕತೆಯನ್ನು ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಕಾರಣವೆಂದರೆ ಬಾಸಿಲ್ ಜೋಸೆಫ್, ಬಾಲಿವುಡ್ ನಟ ರಣ್ವೀರ್ ಸಿಂಗ್ ಜೊತೆಗೆ ‘ಶಕ್ತಿಮಾನ್’ ಸಿನಿಮಾ ಮಾಡಲು ಮುಂದಾಗಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆ ಸಿನಿಮಾ ರದ್ದಾದ ಬಳಿಕ ಬಾಸಿಲ್ ಜೋಸೆಫ್, ಅಲ್ಲು ಅರ್ಜುನ್ ಜೊತೆ ಸಿನಿಮಾ ಘೋಷಿಸಿದರು. ಅದೂ ಸೂಪರ್ ಹೀರೋ ಸಿನಿಮಾ ಹಾಗಾಗಿ ಅದು ಶಕ್ತಿಮಾನ್ ಕತೆಯೇ ಆಗಿರಬೇಕು ಎಂಬ ಅನುಮಾನ ಅಭಿಮಾನಿಗಳಿಗೆ ಇತ್ತು. ಆದರೆ ಅದು ಸುಳ್ಳಾಗಿದೆ. ಬಾಸಿಲ್ ಅವರು, ಅಲ್ಲು ಅರ್ಜುನ್​​ಗಾಗಿ ಶಕ್ತಿಮಾನ್ ಕತೆಯನ್ನು ಸಿನಿಮಾ ಮಾಡುತ್ತಿಲ್ಲವಂತೆ.

ಬಾಸಿಲ್ ಅವರು ಅಲ್ಲು ಅರ್ಜುನ್​​ಗೆ ಯಾವ ರೀತಿಯ ಕತೆಯನ್ನು ಸಿನಿಮಾ ಮಾಡಲಿದ್ದಾರೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಆದರೆ ಅದೊಂದು ಸೂಪರ್ ಹೀರೋ ಮಾದರಿಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ‘ಶಕ್ತಿಮಾನ್’ಗಾಗಿ ಮಾಡಿದ್ದ ಕತೆಯನ್ನೇ ಬೇರೊಬ್ಬ ಸೂಪರ್ ಹೀರೋ ರೀತಿ ಬಾಸಿಲ್ ಪ್ರೆಸೆಂಟ್ ಮಾಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ ‘ಶಕ್ತಿಮಾನ್’ ಪಾತ್ರದ ಮೇಲೆ ಈಗಾಗಲೇ ಬೇರೊಬ್ಬ ನಿರ್ಮಾಪಕರ ಹಕ್ಕಿದೆ. ಎಲ್ಲದಕ್ಕೂ ಸಮಯ ಉತ್ತರ ನೀಡಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ – Kannada News | Ram Charan starrer Peddi musical event organized in Bhopal

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ ನಟ ರಾಮ್ ಚರಣ್ ಚುಟುಕಾಗಿ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ – Kannada News | Kalaburagi Student Suicide: NEET Dream Crushed by Exam Pressure, Awaits Results

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ.

ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಬಗ್ಗೆ ಅಪಾರ ಆಸಕ್ತಿ ಮತ್ತು ನಿರೀಕ್ಷೆ ಹೊಂದಿದ್ದ ಆಕೆ, ಇತ್ತೀಚೆಗಷ್ಟೇ ನೀಟ್ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪರೀಕ್ಷೆಯ ಫಲಿತಾಂಶದ ಕುರಿತಾದ ಆತಂಕ ಅಥವಾ ಒತ್ತಡವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ನೀಟ್ ಹಗರಣಕ್ಕೆ ಮತ್ತೊಂದು ಬಲಿ; ಪತ್ರಿಕೆ ಸೋರಿಕೆಯಿಂದ ಪರೀಕ್ಷೆ ರದ್ದಾಗಿದ್ದಕ್ಕೆ 22 ವರ್ಷದ ವಿದ್ಯಾರ್ಥಿ ಸಾವು

ಘಟನೆ ಕುರಿತು ಮಾಧ್ಯಮಗಳ ಎದುರು ಕಣ್ಣೀರು ಹಾಕಿದ ಮೃತಳ ತಂದೆ ರಾಜಶೇಖರ್, “ಮಗಳಿಗೂ ನಮಗೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ, ಕುಟುಂಬಸ್ಥರ ಜೊತೆ ಅತ್ಯಂತ ಚೆನ್ನಾಗಿಯೇ ಇದ್ದಳು. ಪಿಯುಸಿಯಲ್ಲಿ 92% ಅಂಕ ಬಂದಿತ್ತು, ಇವಾಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ. ನಾವು ಯಾರ ಮೇಲೆಯೂ ಆಪಾದನೆ ಮಾಡುವುದಿಲ್ಲ ಮತ್ತು ಯಾರ ಮೇಲೂ ದೂರಲು ಹೋಗುವುದಿಲ್ಲ” ಎಂದು ಭಾವುಕರಾಗಿ ಹೇಳಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:46 pm, Sat, 23 May 26

Source link

ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ – Kannada News | IPL 2026 Playoffs: RCB Faces Setback as jacob bethell Out, Phil Salt Returns to Boost Squad

ಐಪಿಎಲ್ 2026 (IPL 2026) ರ ಪ್ಲೇಆಫ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಸಕಲ ತಯಾರಿಯನ್ನು ನಡೆಸುತ್ತುದೆ. ಈ ನಡುವೆ ತಂಡಕ್ಕೆ ಹಿನ್ನಡೆಯುಂಟಾಗಿದ್ದು, ತಂಡದ ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಬೆಥೆಲ್ ತಂಡವನ್ನು ತೊರೆದು ತವರಿಗೆ ಮರಳಿದ್ದಾರೆ. ಅಂದರೆ ಆರ್​ಸಿಬಿ ಬೆಥೆಲ್ ಇಲ್ಲದೆ ಪ್ಲೇಆಫ್‌ ಆಡಲಿದೆ.

ಐಪಿಎಲ್​ನಿಂದ ಹೊರಬಿದ್ದ ಬೆಥೆಲ್

ಗಾಯದ ಕಾರಣದಿಂದಾಗಿ ಬೆಥೆಲ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಆಡಿರಲಿಲ್ಲ. ಅವರ ಸ್ಥಾನದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಆಡಿದ್ದರು. ವಾಸ್ತವವಾಗಿ ಬೆಥೆಲ್ ಕೂಡ ಫಿಲ್ ಸಾಲ್ಟ್ ಗಾಯಗೊಂಡ ಕಾರಣ ತಂಡದಲ್ಲಿ ಆಡುವ ಅವಕಾಶ ಪಡೆದರು. ಅದರಂತೆ ಆಡಿದ ಏಳು ಪಂದ್ಯಗಳಲ್ಲಿ ಕೇವಲ 96 ರನ್ ಕಲೆಹಾಕಲಷ್ಟೇ ಶಕ್ತರಾದರು. ಬೆಥೆಲ್ ಈಗ ಇಂಗ್ಲೆಂಡ್​ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿದ್ದಾರೆ.

ಕೊಹ್ಲಿ ಜೊತೆ ಆರಂಭಿಕರು ಯಾರು?

ಬೆಥೆಲ್ ತಂಡ ತೊರೆದಿರುವುದರಿಂದ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಗಾಯದಿಂದ ತಂಡ ತೊರೆದಿದ್ದ ಫಿಲ್ ಸಾಲ್ಟ್ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಮೇ 22 ರಂದು ಹೈದರಾಬಾದ್‌ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯಕ್ಕೂ ಮುನ್ನ ಸಾಲ್ಟ್ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಅವರು ಪ್ಲೇಆಫ್‌ ಸುತ್ತಿನಲ್ಲಿ ಕಣಕ್ಕಿಳಿಯುವುದು ಖಚಿತ. ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿರುವ ಸಾಲ್ಟ್ ಸರಾಸರಿ 33.66 ಮತ್ತು 168 ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸಿದ್ದಾರೆ. ಗಾಯಗೊಳ್ಳುವ ಮೊದಲು ಅವರು ಎರಡು ಅರ್ಧಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸಾಲ್ಟ್ ಆಗಮನ ಆರ್​ಸಿಬಿಗೆ ಆನೆಬಲ ತಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:19 pm, Sat, 23 May 26

Source link

Exit mobile version