Headlines

ಸಾಲವೆಂದರೆ ಮಾರುದೂರ ಹೋಗುತ್ತೀರಾ? ಕೆಟ್ಟಸಾಲ, ಒಳ್ಳೆಯ ಸಾಲದ ವ್ಯತ್ಯಾಸ ತಿಳಿದಿರಿ… ಇಲ್ಲಿವೆ ಕೆಲ ಟ್ರಿಕ್ಸ್ – Kannada News | Know the difference of good debt, bad debt, learn the smart ways for wealth creation

ಪ್ರತಿಯೊಬ್ಬರೂ ಸಂಪೂರ್ಣ ಸಾಲಮುಕ್ತರಾಗಲು (Debt-free) ಬಯಸುತ್ತಾರೆ. ಆದರೆ ಶತಾಯಗತಾಯ ಯಾವುದೇ ಸಾಲವಿಲ್ಲದೆ ಬದುಕುತ್ತೇನೆ ಎಂದು ಹಠ ಹಿಡಿಯುವುದು ಸರಿಯಾದ ನಿರ್ಧಾರವಾಗದು ಎಂದು ಹಲವು ಪರಿಣಿತರು ಹೇಳುವುದುಂಟು. ಯಾವಾಗ ಸಾಲ ಮಾಡಬೇಕು, ಯಾಕೆ ಸಾಲ ಮಾಡಬೇಕು ಎನ್ನುವ ವಿವೇಚನೆ ಇರಬೇಕು. ಸಂಪೂರ್ಣ ಸಾಲ ರಹಿತರಾಗುವುದು ಕೆಲವು ಸಂದರ್ಭಗಳಲ್ಲಿ ನಿಮ್ಮ ಆಸ್ತಿ ಹಾಗೂ ಸಂಪತ್ತು ವೃದ್ಧಿಗೆ ಅಡ್ಡಿಯಾಗಬಹುದು. ಸಾಲರಹಿತವಾಗಿ ಬದುಕುತ್ತೇನೆ ಎನ್ನುವ ಬದಲು ಸಾಲವನ್ನು ಬುದ್ಧಿವಂತಿಕೆಯಿಂದ ಉಪಯೋಗಿಸುವ ಪ್ರಮುಖ ಹಣಕಾಸು ತಂತ್ರಗಳನ್ನು ತಿಳಿದಿರುವುದು ಉತ್ತಮ. ‘ಒಳ್ಳೆಯ ಸಾಲ’ ಮತ್ತು ‘ಕೆಟ್ಟ…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – Kannada News | No Relief for Actress Ranya Rao in Gold Smuggling Case as High Court Dismisses Habeas Corpus Plea

ಬೆಂಗಳೂರು, ಡಿಸೆಂಬರ್ 19: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ….

Read More

‘ಕಾಕ್​​ಟೇಲ್ 2’: ಕೃತಿಯೇ ಎಲ್ಲ, ರಶ್ಮಿಕಾ-ಶಾಹಿದ್ ಲೆಕ್ಕಕ್ಕಿಲ್ಲ – Kannada News | Cocktail 2 twitter review: Rashmika Hindi criticized badly

ರಶ್ಮಿಕಾ ಮಂದಣ್ಣ (Rashmika Mandanna), ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿರುವ ‘ಕಾಕ್​​ಟೇಲ್ 2’ ಹಿಂದಿ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ನಿರ್ಮಿಸಿ, ಭಾರಿ ಪ್ರಚಾರದೊಂದಿಗೆ ಸಿನಿಮಾ ಬಿಡುಗಡೆ ಆಗಿದೆ. ಆದರೆ ಮೊದಲ ದಿನವೇ ಸಿನಿಮಾಕ್ಕೆ ಭರಪೂರ ಋಣಾತ್ಮಕ ವಿಮರ್ಶೆಗಳು ಎದುರಾಗಿವೆ. ಸಿನಿಮಾನಲ್ಲಿ ಗ್ಲಾಮರ್ ಹೊರತಾಗಿ ಇನ್ನೇನೂ ಇಲ್ಲ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ. ಕೆಲವರಂತೂ ಇದೊಂದು ‘ಅನವಶ್ಯಕ’ ಸೀಕ್ವೆಲ್ ಎಂದು ಸಹ ಕರೆದಿದ್ದಾರೆ. #Cocktail2Review : ⭐️✨#Cocktail2 is…

Read More

ಟೀಮ್ ಇಂಡಿಯಾಗೆ ಕ್ಲೀನ್ ಸ್ವೀಪ್ ಗೆಲುವು ಅನಿವಾರ್ಯ! – Kannada News | IND vs SL: Clean Sweep Crucial for Team India

ಆಗಸ್ಟ್ 15 ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಕೇವಲ ಮತ್ತೊಂದು ದ್ವಿಪಕ್ಷೀಯ ಸರಣಿಯಲ್ಲ. ಇದು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ (WTC) ಫೈನಲ್ ಟಿಕೆಟ್ ನಿರ್ಧರಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ, ಭಾರತ ತಂಡ ಈ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವುದು ಅನಿವಾರ್ಯವಾಗಿದೆ. ಇದಕ್ಕೆ ಪ್ರಮುಖ ಕಾರಣಗಳೇನು ಎಂಬುದರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ. WTC ಅಂಕಪಟ್ಟಿ ಮತ್ತು PCT ಲೆಕ್ಕಾಚಾರ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್…

Read More

ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ತೋರಿದ ಭಾರತ

ನವದೆಹಲಿ, ಮಾರ್ಚ್ 18: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಇನ್ನೂ ನಿಂತಿಲ್ಲ. ಅತ್ತ ಇರಾನ್ ಕೂಡ ದಾಳಿ ನಡೆಸುವುದನ್ನು ನಿಲ್ಲಿಸಿಲ್ಲ. ಈ ಯುದ್ಧದಲ್ಲಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅಮೆರಿಕ ದೇಶದ ಮೇಲೆ ಯಾವುದೇ ದಾಳಿ ನಡೆದಿಲ್ಲ. ಆದರೆ, ಇಸ್ರೇಲ್ ಮತ್ತು ಇರಾನ್ ಅಕ್ಷರಶಃ ಸ್ಮಶಾನದಂತಾಗಿದೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್ ವಿರುದ್ಧ ಬೇರೆ ದೇಶಗಳು ಯುದ್ಧನೌಕೆಗಳನ್ನು ಕಳುಹಿಸಿ ಎಚ್ಚರಿಕೆ ನೀಡಬೇಕೆಂದು ಅಮೆರಿಕ ಅಧ್ಯಕ್ಷ ಟ್ರಂಪ್ (Donald Trump) ಘೋಷಿಸಿದ್ದರು. ಇರಾನ್…

Read More

ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್; ಬಿಗ್ ಬಾಸ್ ಬಳಿಕ ಪ್ರಸಾರ – Kannada News | Srujan Lokesh Shruthi And Sadhu Kokila In Gicchi Gili Gili Junior Show

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್​​ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೀದರ್‌: ಭಾಲ್ಕಿಯಲ್ಲಿ ಭೀಕರ ಅಪಘಾತ, ಬೈಕ್-ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ – Kannada News | Bidar Road Accident: Three Youths Killed in Bike Car Collision; Lorry Catches Fire Near Bhalki

ಬೀದರ್, ಏಪ್ರಿಲ್ 30: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಬುಧವಾರ (ಏಪ್ರಿಲ್ 29) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮತ್ತು ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಬೆಚ್ಚಿಬೀಳಿಸುವಂತಿದೆ. ಭಾಲ್ಕಿ ತಾಲ್ಲೂಕಿನ ಕಳಸದಾಳ ವ್ಯಾಪ್ತಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ಕಳಸದಾಳ ಗ್ರಾಮದ ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25) ಮತ್ತು ಕಾಕನಾಳ ಗ್ರಾಮದ ರಾಜೇಂದ್ರ ಪಾಂಚಾಳ (28) ಎಂದು…

Read More

ಪ್ರಶಸ್ತಿಗಳು ಪದವಿಗಳಲ್ಲ… ವ್ಯಕ್ತಿಯ ಹೆಸರಿಗೆ ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಸೇರಿಸುವಂತಿಲ್ಲ: ಬಾಂಬೆ ಹೈಕೋರ್ಟ್ – Kannada News | Bharat Ratna, Padma Awards Not Titles, Can’t Be Used As Prefix, Suffix: Bombay High Court

ನವದೆಹಲಿ, ಡಿಸೆಂಬರ್ 27: ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಇತ್ಯಾದಿ ನಾಗರಿಕ ಪ್ರಶಸ್ತಿಗಳು (civilian awards) ಅಧಿಕೃತ ಪದವಿಗಳಲ್ಲ (titles). ಅವುಗಳನ್ನು ಪ್ರಶಸ್ತಿವಿಜೇತರ ಹೆಸರಿನ ಹಿಂದೆ ಅಥವಾ ಮುಂದೆ ಜೋಡಿಯಾಗಿ ಬಳಸಲು ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಪದ್ಮಶ್ರೀ ಡಾ. ಶರದ್ ಎಂ ಹರ್ಡೀಕರ್ ಅವರನ್ನೊಳಗೊಂಡ ರಿಟ್ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್​ನ ಏಕಸದಸ್ಯ ಪೀಠದ ನ್ಯಾಯಾಧೀಶ ಸೋಮಶೇಖರ್ ಸುಂದರೇಶನ್ ಈ ತೀರ್ಪು ನೀಡಿದ್ದಾರೆ. ಹೈಕೋರ್ಟ್​ನಿಂದ ಬಂದ ಈ ತೀರ್ಪು ಹೊಸದಲ್ಲ. ಈ…

Read More

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಬೆಂಗಳೂರು, ಏಪ್ರಿಲ್​​ 08: ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದಿಂದ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳಸಿರುವ ಪ್ರಕರಣ ಸಂಬಂಧ ಪತಿಯ ವಿರುದ್ಧದ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಯ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಅದಾಗಲೇ ದಂಪತಿ ಬೇರೆಯಾಗಿದ್ದರೂ ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಕಾರಣ ಪತಿಯ ವಿರುದ್ಧ ಐಪಿಸಿ ಸೆ. 376(ಬಿ) ಅಡಿ ಕೇಸ್ ದಾಖಲಾಗಿತ್ತು. ಪತ್ನಿ ದಾಖಲಿಸಿದ್ದ ಕೇಸ್ ರದ್ದು ಕೋರಿ ಹೈಕೋರ್ಟ್​ಗೆ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ…

Read More

MI vs SRH: ವರ್ಕ್ ಆಗುತ್ತಿಲ್ಲ ಜಸ್ಪ್ರೀತ್ ಮ್ಯಾಜಿಕ್: ವಾಂಖೆಡೆಯಲ್ಲಿ ವೃತ್ತಿಜೀವನದ ದುಬಾರಿ ಬೌಲಿಂಗ್ ಮಾಡಿದ ಬುಮ್ರಾ – Kannada News | Jasprit Bumrah magic not working in IPL 2026 He bowls most expensive bowling of his career at Wankhede

ಬೆಂಗಳೂರು (ಏ. 30): ಐಪಿಎಲ್ 2026 ರ 41 ನೇ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 243 ರನ್ ಗಳಿಸಿತು. ವಿಶ್ವಶ್ರೇಷ್ಠ ಬೌಲರ್​ಗಳನ್ನು ಹೊಂದಿರುವ ಮುಂಬೈಗೆ ಈ ಪಂದ್ಯದಲ್ಲಿ ಗೆಲುವು ಖಚಿತ ಎಂದೇ ನಂಬಲಾಗಿತ್ತು. ಆದರೆ, ಹೈದರಾಬಾದ್ ತಂಡವು ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ನ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah)…

Read More