ಯಾಣದ ಕಪ್ಪು ಶಿಲೆಗಳಿಗೆ ಈಗ ‘ರಾಷ್ಟ್ರೀಯ ಪಾರಂಪರಿಕ’ ಕಿರೀಟ: ಜಿಎಸ್‌ಐನಿಂದ ಐತಿಹಾಸಿಕ ಘೋಷಣೆ! – Kannada News | Yana Caves Declared National Geo heritage Site by GSI in Uttar Kannada

ಉತ್ತರ ಕನ್ನಡ, ಏಪ್ರಿಲ್ 17: ಜಿಲ್ಲೆಯ ಗೋಕರ್ಣ (Gokarna) ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.

ಪತ್ರದಲ್ಲೇನಿದೆ?

ಯಾಣಲ್ಲಿನ ಗಮನಾರ್ಹ ಶಿಲಾ ದ್ರವ್ಯರಾಶಿಗಳು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಅವು ಪೂರ್ವ-ಕೇಂಬ್ರಿಯನ್ ಡೊಲೊಮಿಟಿಕ್ ಸುಣ್ಣದ ಕಲ್ಲುಗಳಿಂದ ಕೂಡಿವೆ. ಲಕ್ಷಾಂತರ ವರ್ಷಗಳಿಂದ ತೀವ್ರವಾದ ಉಷ್ಣವಲಯದ ಹವಾಮಾನ, ರಾಸಾಯನಿಕ ಕರಗುವಿಕೆಯೊಂದಿಗೆ ವಿಶಿಷ್ಟವಾದ ಕಾರ್ಸ್ಟ್ ವೈಶಿಷ್ಟ್ಯಗಳ ಬೆಳವಣಿಗೆಗೆ ಕಾರಣವಾಗಿದೆ. ಯಾಣ ಪ್ರದೇಶವು 61 ವಿಭಿನ್ನ ಕಾರ್ಸ್ಟ್‌ಗಳನ್ನು ಹೊಂದಿದ್ದು, ಭೈರವೇಶ್ವರ ಶಿಖರ ಮತ್ತು ಮೋಹಿನಿ ಶಿಖರಗಳು ಅತ್ಯಂತ ಪ್ರಬಲವಾದ ಶಿಖರಗಳಾಗಿವೆ. ಈ ಪ್ರಸಿದ್ಧ ಜೋಡಿ ಬೃಹತ್ ಕಪ್ಪು ಏಕಶಿಲೆಗಳು ಜನಪ್ರಿಯ ಪೌರಾಣಿಕ ನಿರೂಪಣೆಗಳೊಂದಿಗೆ ಸಂಬಂಧ ಹೊಂದಿವೆ ಮತ್ತು ತೀರ್ಥಯಾತ್ರೆಗೆ ಹೆಸರುವಾಸಿಯಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಸಲಹಾ ವಿಜ್ಞಾನಿ ಎಂ.ಡಿ. ಸುಭಾಷ್ ಚಂದ್ರನ್ ಹೇಳಿದ್ದೇನು?

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಸಲಹಾ ವಿಜ್ಞಾನಿ ಎಂ.ಡಿ. ಸುಭಾಷ್ ಚಂದ್ರನ್, ಇದು ಶ್ಲಾಘನೀಯ ಹೆಜ್ಜೆ ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ ಇದು ಭೂವೈಜ್ಞಾನಿಕ ಸ್ಮಾರಕವನ್ನು ಹೊಂದಿರುವ ಉತ್ತಮ ಅರಣ್ಯವಾಗಿದ್ದು, ಅಘನಾಶಿನಿ ನದಿಗೆ ಶಾಶ್ವತ ನೀರಿನ ಮೂಲವಾಗಿದೆ. ಸುಣ್ಣ ಸಮೃದ್ಧವಾದ ಡಾಲಮೈಟ್ ಇರುವುದರಿಂದ, ಇಲ್ಲಿನ ಜಲ ಸಂಪನ್ಮೂಲಗಳು ದೀರ್ಘಕಾಲಿಕವಾಗಿವೆ. ಯಾಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚಿನ ರಕ್ಷಣೆ ನೀಡುವುದು ಒಳ್ಳೆಯ ಕೆಲಸವಾಗಿದೆ. ಯಾಣ ನದಿಯ ಜೀವವೈವಿಧ್ಯತೆಯ ರಕ್ಷಣೆಗಾಗಿ ಬಫರ್ ವಲಯವನ್ನು ಸಹ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಭೂ ಪರಂಪರೆಯ ಭೂ ಸಂರಕ್ಷಣೆಗೆ ಜಿಎಸ್‌ಐ ನೋಡಲ್ ಏಜೆನ್ಸಿಯಾಗಿದ್ದು, ಇದನ್ನು ಸಾಮಾನ್ಯವಾಗಿ ಭೂ-ಪರಂಪರೆ ತಾಣಗಳು ಎಂದು ಕರೆಯಲಾಗುತ್ತದೆ. ಇದು ಗಮನಾರ್ಹವಾದ ವೈಜ್ಞಾನಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸೌಂದರ್ಯದ ಮೌಲ್ಯದ ಭೌಗೋಳಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಭೂವೈಜ್ಞಾನಿಕ ಸಂಪತ್ತನ್ನು ಭೂ-ಪರಂಪರೆ ತಾಣಗಳಾಗಿ ಗುರುತಿಸುವುದನ್ನು ಒಳಗೊಂಡಿರುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:59 am, Fri, 17 April 26

Source link

ನಿಮ್ಮ ದಿನವನ್ನು ಧನಾತ್ಮಕವಾಗಿ ಆರಂಭಿಸಲು ಈ ಸಲಹೆಗಳನ್ನು ಪಾಲಿಸಿ – Kannada News | How to start the day positively? Here are some tips

ನಾವು ಬೆಳಗ್ಗೆ ನಮ್ಮ ದಿನವನ್ನು ಪ್ರಾರಂಭಿಸುವ ವಿಧಾನವು ನಮ್ಮ ಇಡೀ ದಿನದ ದಿಕ್ಕನ್ನು ನಿರ್ಧರಿಸುತ್ತದೆ. ಹಾಗಾಗಿ ದಿನವನ್ನು ಧನಾತ್ಮಕ ರೀತಿಯಲ್ಲಿ ಪ್ರಾರಂಭಿಸುವುದು  ತುಂಬಾನೇ ಮುಖ್ಯ. ದಿನವನ್ನು ಸರಿಯಾಗಿ ಮತ್ತು ಧನಾತ್ಮಕವಾಗಿ ಪ್ರಾರಂಭಿಸಿದರೆ ಕೆಲಸಗಳೂ ಸರಿಯಾದ ಸಮಯಕ್ಕೆ ಪೂರ್ಣಗೊಳ್ಳುತ್ತವೆ, ಯಶಸ್ಸಿನ ಮೆಟ್ಟಿಲನ್ನು ಕೂಡ ಸುಲಭವಾಗಿ ಏರಬಹುದು. ಇದಕ್ಕಾಗಿ ಬೆಳಗಿನ ದಿನಚರಿಯಲ್ಲಿ (Morning Routine) ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ. ಈ ಸಣ್ಣ ಅಭ್ಯಾಸಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುವುದು ಮಾತ್ರವಲ್ಲ, ನಿಮ್ಮ ಜೀವನವನ್ನೇ ಬದಲಿಸುತ್ತದೆ. ಹಾಗಿದ್ರೆ ಬೆಳಗಿನ ದಿನಚರಿಯಲ್ಲಿ ಪಾಲಿಸಬೇಕಾದ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ದಿನವನ್ನು ಸರಿಯಾಗಿ ಮತ್ತು ಸಕಾರಾತ್ಮಕವಾಗಿ ಪ್ರಾರಂಭಿಸುವುದು ಹೇಗೆ?

ಬೆಳಗ್ಗೆ ಬೇಗ ಎದ್ದೇಳಿ: ನಿಮ್ಮ ದಿನವನ್ನು ಸಕಾರಾತ್ಮಕವಾಗಿ ಪ್ರಾರಂಭಿಸಲು ಬೆಳಗ್ಗೆ ಬೇಗನೆ ಏಳುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಬೆಳಗ್ಗೆ ಬೇಗನೆ ಏಳುವುದರಿಂದ ದಿನವನ್ನು ಶಾಂತವಾಗಿ ಮತ್ತು ಆತುರವಿಲ್ಲದೆ ಪ್ರಾರಂಭಿಸಬಹುದು. ಕ್ರಮೇಣ ನಿಮ್ಮ ಜಡತ್ವವೂ ದೂರವಾಗುತ್ತದೆ.

ಸಾಮಾಜಿಕ ಜಾಲತಾಣ ಮತ್ತು ಫೋನ್‌ಗಳಿಂದ ದೂರವಿರಿ: ಫೋನ್ ಬಳಸುವ ಬದಲು, ಪ್ರತಿದಿನ ನಿಮ್ಮೊಂದಿಗೆ  ನೀವು ಸ್ವಲ್ಪ ಸಮಯ ಕಳೆಯಿರಿ. ಅಲ್ಲದೆ, ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸಿ, ಏಕೆಂದರೆ ಸಾಮಾಜಿಕ ಮಾಧ್ಯಮದ ಪೋಸ್ಟ್ ನಿಮ್ಮ ಮನಸ್ಥಿತಿಯನ್ನು ಯಾವಾಗ, ಹೇಗೆ ಹಾಳು ಮಾಡುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ. ಆದ್ದರಿಂದ, ಬೆಳಿಗ್ಗೆ ಎದ್ದ ನಂತರ ಫೋನ್‌ ನೋಡುತ್ತಾ ಸಮಯ ಕಳೆಯಬೇಡಿ. ಬದಲಿಗೆ ಧ್ಯಾನ ಮಾಡಿ, ವಾಕಿಂಗ್‌ ಮಾಡುತ್ತಾ ನಿಮ್ಮೊಂದಿಗೆ ನೀವು ಸಮಯ ಕಳೆಯಿರಿ. ಇದರಿಂದ ನಿಮ್ಮ ಸಂಪೂರ್ಣ ದಿನ ಸಕಾರಾತ್ಮಕವಾಗಿರುತ್ತದೆ.

ಧ್ಯಾನ ಮಾಡಿ: ದಿನವನ್ನು ಸಕಾರಾತ್ಮಕವಾಗಿ ಆರಂಭಿಸಲು  ಧ್ಯಾನ ಅಥವಾ ಪ್ರಾಣಾಯಾಮವನ್ನು ಅಭ್ಯಾಸ ಮಾಡಿ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ, ಗಮನವನ್ನು ಸುಧಾರಿಸುತ್ತದೆ ಮತ್ತು ನಕಾರಾತ್ಮಕ ಆಲೋಚನೆಗಳನ್ನು ಕಡಿಮೆ ಮಾಡುತ್ತದೆ. ಕೇವಲ 10-15 ನಿಮಿಷಗಳ ಧ್ಯಾನವು ನಿಮ್ಮ ಇಡೀ ದಿನದ ಮನಸ್ಥಿತಿಯನ್ನು ಬದಲಾಯಿಸಬಹುದು.

ವ್ಯಾಯಾಮ ಅಥವಾ ಯೋಗ ಮಾಡಿ: ಬೆಳಗಿನ ದಿನಚರಿಯಲ್ಲಿ ಲಘು ವ್ಯಾಯಾಮ, ಯೋಗ ಅಥವಾ ವಾಕಿಂಗ್‌ ಅಭ್ಯಾಸ ಮಾಡಿ.  ಇದು ದೇಹವನ್ನು ಸಕ್ರಿಯವಾಗಿರಿಸುತ್ತದೆ, ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆಲಸ್ಯವನ್ನು ನಿವಾರಿಸುತ್ತದೆ. ಮತ್ತು ನಿಮ್ಮನ್ನು ಇಡೀ ದಿನ ಚೈತನ್ಯಶೀಲರನ್ನಾಗಿರಿಸುತ್ತದೆ.

ಆರೋಗ್ಯಕರ ಉಪಹಾರ ಸೇವಿಸಿ: ಇಡೀ ದಿನ ಸಕಾರಾತ್ಮಕವಾಗಿರಲು, ಆಕ್ಟಿವ್‌ ಆಗಿರಲು ಆರೋಗ್ಯಕ ಉಪಹಾರ ಸೇವನೆ ಮಾಡುವುದು ಸಹ ಮುಖ್ಯ. ಹಾಗಾಗಿ ಮನಸ್ಸು ಮತ್ತು ದೇಹ ಎರಡಕ್ಕೂ ಸರಿಯಾದ ಶಕ್ತಿಯನ್ನು ಒದಗಿಸುವ ಆರೋಗ್ಯಕರ ಮತ್ತು ಪೌಷ್ಟಿಕ ಉಪಹಾರವನ್ನು ಸೇವನೆ ಮಾಡಿ.

ಇದನ್ನೂ ಓದಿ: ನಿತ್ಯವೂ ಒಂದು ಬಾಳೆಹಣ್ಣು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ?

ದಿನದ ಯೋಜನೆಗಳನ್ನು ಬರೆದಿಡಿ: ನಿಮ್ಮ ದಿನವನ್ನು ಯೋಜಿಸಲು ಬೆಳಿಗ್ಗೆ ಅತ್ಯುತ್ತಮ ಸಮಯ. ಯಶಸ್ವಿ ಜನರು ತಮ್ಮ ದೈನಂದಿನ ಕೆಲಸಗಳನ್ನು ಬರೆದಿಟ್ಟುಕೊಳ್ಳುತ್ತಾರೆ, ಅವುಗಳಿಗೆ ಆದ್ಯತೆ ನೀಡುತ್ತಾರೆ ಮತ್ತು ತಮ್ಮ ಗುರಿಗಳನ್ನು ಸ್ಪಷ್ಟವಾಗಿ ಇಟ್ಟುಕೊಳ್ಳುತ್ತಾರೆ. ಇದು ಅವರ ಕೆಲಸದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ನೀವು ಸಹ ಮಾಡಿ ಮುಗಿಸಬೇಕಾದ ಕೆಲಸಗಳ ಪಟ್ಟಿಯನ್ನು ಬರೆದಿಡಿ.

ಸಕಾರಾತ್ಮಕ ಚಿಂತನೆ ಮತ್ತು ಕಲಿಕೆ: ಬೆಳಗ್ಗೆ ಎದ್ದ ತಕ್ಷಣ ಮೊಬೈಲ್‌ ನೋಡುವ ಬದಲು ಸ್ಪೂರ್ತಿದಾಯಕ ಪುಸ್ತಕಗಳನ್ನು ಓದುವುದು, ಪಾಡ್‌ಕ್ಯಾಸ್ಟ್‌ಗಳನ್ನು ಕೇಳುವುದು ಅಥವಾ ತಮ್ಮ ಗುರಿಗಳ ಬಗ್ಗೆ ಯೋಚಿಸುವುದು ಮತ್ತು ಯೋಜಿಸುವುದರಲ್ಲಿ ಸ್ವಲ್ಪ ಸಮಯ ಕಳೆಯಿರಿ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಸಕಾರಾತ್ಮಕ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:59 am, Fri, 17 April 26

Source link

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ

ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಮಳೆ ಕೊರತೆಯಿಂದಾಗಿ ರಾಜ್ಯದ 213 ತಾಲ್ಲೂಕುಗಳು ಮತ್ತು 2,410 ಗ್ರಾಮ ಪಂಚಾಯತ್‌ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಗುರುತಿಸಲಾಗಿದೆ. ಸದ್ಯ 114 ತಾಲ್ಲೂಕುಗಳಲ್ಲಿ ಈಗಾಗಲೇ ನೀರಿನ ಅತೀ ಹೆಚ್ಚಿನ ಸಮಸ್ಯೆ ಕಂಡುಬಂದಿದ್ದು, 137 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

ಹಣದ ಕೊರತೆಯಿಲ್ಲ, ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಿಎಂ ಸೂಚನೆ

ಕುಡಿಯುವ ನೀರು ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಯಲ್ಲಿ ಒಟ್ಟು 419.5 ಕೋಟಿ ರೂಪಾಯಿ ಹಣ ಲಭ್ಯವಿದ್ದು, ಅನುದಾನದ ಕೊರತೆಯಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಕೃಷಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲು ಆದ್ಯತೆ ನೀಡಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಟ್ಯಾಂಕರ್ ಬಳಸುವಂತೆ ಸೂಚಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಅತೀ ಹೆಚ್ಚು ಶಾಖದ ಅಲೆ (Heatwave) ಇರುವುದರಿಂದ ಸಾರ್ವಜನಿಕರಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಪ್ರಸ್ತುತ, ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 321.93 ಟಿಎಂಸಿ ಅಡಿ ನೀರು ಲಭ್ಯವಿದೆ. ಇದು ಒಟ್ಟು ಸಾಮರ್ಥ್ಯದ ಸುಮಾರು ಶೇ 36 ಆಗಿದೆ. ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದು, ತಾಲ್ಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು 24X7 ವಿದ್ಯುತ್ ಪೂರೈಕೆಯೊಂದಿಗೆ ಆರ್‌ಒ ಘಟಕಗಳ ನಿರಂತರ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’: 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ! – Kannada News | Vande Bharat Sleeper: Bengaluru to Pune in 13 Hours, Route and Schedule

ಬೆಂಗಳೂರು, ಏ.17: ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್​​ ಎಕ್ಸ್​​ಪ್ರಸ್ ರೈಲು ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಇನ್ಮುಂದೆ ಮತ್ತಷ್ಟು ವೇಗವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಮಾರ್ಗದಲ್ಲಿ ಸಂಚಾರಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆಯಾಗಲಿದೆ.

ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ ಕೊಯಮತ್ತೂರು ಎಕ್ಸ್‌ಪ್ರೆಸ್ ಸುಮಾರು 19 ಗಂಟೆ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಹೊಸ ವಂದೇ ಭಾರತ್ ಸ್ಲೀಪರ್ ರೈಲು ಈ ಸಮಯವನ್ನು 13 ಗಂಟೆಗೆ ಇಳಿಸಲಿದೆ. ಇದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಿಂದ ಹೊರಟು ಪುಣೆ, ಸೊಲ್ಲಾಪುರ ಮತ್ತು ವಾಡಿ ಮೂಲಕ ಬೆಂಗಳೂರು ತಲುಪಲಿದೆ. ದೌಂಡ್-ವಾಡಿ ಮತ್ತು ವಾಡಿ-ಗುಂತಕಲ್ ನಡುವಿನ ರೈಲ್ವೆ ಹಳಿಗಳನ್ನು ಗಂಟೆಗೆ 130 ಕಿ.ಮೀ ವೇಗದಲ್ಲಿ ಚಲಿಸಲು ಅನುವಾಗುವಂತೆ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದಾಗಿ ರೈಲು ಅತಿ ವೇಗವಾಗಿ ಗುರಿ ತಲುಪಲು ಸಾಧ್ಯವಾಗಲಿದೆ.

ವೇಳಾಪಟ್ಟಿ ಮತ್ತು ವಿಶೇಷತೆಗಳು:

ಆರಂಭ: ಡಿಸೆಂಬರ್ 2026 ರಿಂದ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ.

ದಿನಗಳು: ವಾರದಲ್ಲಿ 6 ದಿನ ಸಂಚಾರ (ಒಂದು ದಿನ ನಿರ್ವಹಣೆಗಾಗಿ ಮೀಸಲು).

ಸಮಯ: ಎರಡೂ ನಗರಗಳಿಂದ ರಾತ್ರಿ 9 ಗಂಟೆಗೆ ರೈಲು ಹೊರಡಲಿದ್ದು, ರಾತ್ರೋರಾತ್ರಿ ಪ್ರಯಾಣಕ್ಕೆ ಅನುಕೂಲವಾಗಲಿದೆ.

ಬೋಗಿಗಳು: ಒಟ್ಟು 16 ಬೋಗಿಗಳಿದ್ದು, 823 ಪ್ರಯಾಣಿಕರಿಗೆ ಅವಕಾಶವಿದೆ (11 ಎಸಿ 3-ಟೈರ್, 4 ಎಸಿ 2-ಟೈರ್ ಮತ್ತು 1 ಫಸ್ಟ್ ಎಸಿ).

ಅಂದಾಜು ಟಿಕೆಟ್ ದರ (ಊಟದ ವ್ಯವಸ್ಥೆ ಒಳಗೊಂಡಿದೆ):

ಎಸಿ 3-ಟೈರ್: ಸುಮಾರು 2,500 ರೂ.

ಎಸಿ 2-ಟೈರ್: 3,000 ರೂ. ನಿಂದ 3,200 ರೂ.

ಫಸ್ಟ್ ಎಸಿ: 3,600 ರೂ. ನಿಂದ 3,900 ರೂ.

(ಗಮನಿಸಿ: ಕೇವಲ ಕನ್ಫರ್ಮ್ ಆದ ಟಿಕೆಟ್ ಪಡೆಯಲು ಮಾತ್ರ ಅವಕಾಶವಿದ್ದು, ಆರ್‌ಎಸಿ ಅಥವಾ ವೈಟಿಂಗ್ ಲಿಸ್ಟ್ ಸೌಲಭ್ಯ ಇರುವುದಿಲ್ಲ).

ಇದನ್ನೂ ಓದಿ: ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ!

ಆಧುನಿಕ ಸೌಲಭ್ಯಗಳು:

ರೈಲಿನಲ್ಲಿ ಓದುವ ದೀಪಗಳು (Reading lights), ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳು, ಆರ್ಥೋಪೆಡಿಕ್ ಬರ್ತ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿವೆ. ಸುರಕ್ಷತೆಗಾಗಿ ಭಾರತೀಯ ತಂತ್ರಜ್ಞಾನದ ‘ಕವಚ’ (Kavach) ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಈ ಬಾರಿಯ ಐಪಿಎಲ್​​ನಲ್ಲಿ ಮುಂಬೈ ತಂಡ ಸತತ ನಾಲ್ಕನೇ ಸೋಲನ್ನು ಕಂಡಿದೆ. ಮುಂಬೈ ನೀಡಿದ 196 ರನ್​​ಗಳ ಟಾರ್ಗೆಟ್​​ನ ಪಂಜಾಬ್ ಕೇವಲ 16.3 ಓವರ್​​ಗಳಲ್ಲಿ ತಲುಪಿದೆ. ಈ ಮೂಲಕ ಏಳು ವಿಕೆಟ್​​ಗಳ ಗೆಲುವು ಕಂಡಿದೆ. ಈ ಸೋಲಿನ ಬೆನ್ನಲ್ಲೇ ತಂಡದ ಹುಳುಕು ಎದ್ದು ಕಾಣಿಸುತ್ತಿದೆ. ಬುಮ್ರಾ ಅವರು ಹಾರ್ದಿಕ್ ಬಗ್ಗೆ ಅಸಮಧಾನ ಹೊರಹಾಕುತ್ತಿರುವುದು ಕಾಣಿಸಿದೆ.

ಬೂಮ್ರಾ ತಮ್ಮ ಬಾಲಿಂಗ್​​ಗೆ ಅನುಗುಣವಾಗಿ ಫೀಲ್ಡಿಂಗ್ ಸೆಟ್ ಮಾಡಿದ್ದರು. ಆದರೆ, ಅದನ್ನು ಹಾರ್ದಿಕ್ ಬದಲಿಸಿದರು. ಆರಂಭದಲ್ಲಿ ಬೂಮ್ರಾ ವಾದಕ್ಕೆ ಇಳಿದರು. ಕೊನೆಗೆ ವಾದ ಮಾಡಿ ಪ್ರಯೋಜನ ಇಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಬೂಮ್ರಾ ಯಾರ ಮೇಲೂ ಸಿಟ್ಟು ಮಾಡಿಕೊಂಡವರಲ್ಲ. ಕೂಲ್ ಆಗಿ ಬಾಲ್ ಹಾಕುತ್ತಾರೆ. ಆದಾಗ್ಯೂ ಅವರ ಮುಖದಲ್ಲಿ ಅಸಮಾಧಾನ ಇರೋದು ಕಂಡುಬಂತು. ಕೊನೆಗೆ ವಾದ ಮಾಡುವುದನ್ನು ನಿಲ್ಲಿಸಿದರು. ಅಲ್ಲಿಗೆ ಕಿತ್ತಾಟ ಕೊನೆ ಆಯಿತು.

ಪಂದ್ಯ ಸೋತ ಬಳಿಕ ಮಾತನಾಡಿದ ಹಾರ್ದಿಕ್, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸಮಯದಲ್ಲಿ ನಾನು ಹೇಳಲು ಏನೂ ಉಳಿದಿಲ್ಲ. ನಮ್ಮಲ್ಲಿ ಏನು ಕೊರತೆಯಿದೆ ಎಂದು ನೋಡಬೇಕು. ನಾವು ಕುಳಿತು ಆ ಬಗ್ಗೆ ಯೋಚಿಸುತ್ತೇವೆ. ನಾವು ಮುಂದೆ ಏನು ಮಾಡಬಹುದು ಎಂದು ನೋಡುತ್ತೇವೆ’ ಎಂದು ಪಂದ್ಯದ ನಂತರ ಹೇಳಿದರು.

ಇದನ್ನೂ ಓದಿ: ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ

ಹಾರ್ದಿಕ್ ಪಾಂಡ್ಯ ವರ್ತನೆ ಬಗ್ಗೆ ತಂಡದಲ್ಲೇ ಅಸಮಾಧಾನ ಇದೆ ಎನ್ನಲಾಗಿದೆ. ಇದು ಹೀಗೆಯೇ ಮುಂದುವರಿದರೆ ಅವರನ್ನು ಕ್ಯಾಪ್ಟನ್ಸಿಯಿಂದ ಕೆಳಕ್ಕೆ ಇಳಿಸಬಹುದು. ಮೇಜರ್ ಆಪರೇಷನ್ ಆಗದೇ ಇದ್ದರೆ ಸೋಲು ಹೀಗೆಯೇ ಮುಂದುವರಿಯಲಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡ ಸಂಧು ಅವರಿಗೆ ಟ್ರಂಪ್ ಅಭಿನಂದನೆ – Kannada News | Trump Congratulates Tarunjeet Sandhu on Delhi LG Role: Diplomat to Lead Delhi

ನವದೆಹಲಿ, ಏಪ್ರಿಲ್ 17: ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದಿರುವ ಅನುಭವಿ ರಾಜತಾಂತ್ರಿಕ ತರಂಜಿತ್ ಸಿಂಗ್ ಸಂಧು ಅವರಿಗೆ ಜಾಗತಿಕ ಮಟ್ಟದ ಪ್ರಶಂಸೆ ಹರಿದುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಶುಕ್ರವಾರ ಸಂಧು ಅವರನ್ನು ಅಭಿನಂದಿಸಿದ್ದು, ದೆಹಲಿಯ ಪ್ರಗತಿಯಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಮೆಚ್ಚುಗೆ
ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಸಂಧು ಅವರ ಕುರಿತು ಬರೆದುಕೊಂಡಿರುವ ಟ್ರಂಪ್, ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿರುವ ತರಂಜಿತ್ ಸಂಧು ಅವರಿಗೆ ಅಭಿನಂದನೆಗಳು, ಒಬ್ಬ ಅನುಭವಿ ರಾಜತಾಂತ್ರಿಕರಾಗಿ ಅವರು ಯಾವಾಗಲೂ ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಲು ಶ್ರಮಿಸಿದ್ದಾರೆ. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ರಾಜತಾಂತ್ರಿಕ ಚತುರ ಸಂಧು
ತರಂಜಿತ್ ಸಿಂಗ್ ಸಂಧು ಅವರು ಕೇವಲ ಅಧಿಕಾರಿಯಲ್ಲ, ಬದಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಧ್ವನಿಯಾಗಿದ್ದವರು.

ಅಮೆರಿಕದಲ್ಲಿ ರಾಯಭಾರಿ: 2020 ರಿಂದ 2024 ರವರೆಗೆ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಇವರು, ಶ್ವೇತಭವನದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಭಾರತೀಯ ವಿದೇಶಾಂಗ ಸೇವೆಯಿಂದ (IFS) ನಿವೃತ್ತರಾದ ನಂತರ ಸಕ್ರಿಯ ರಾಜಕಾರಣಕ್ಕೆ ಇಳಿದಿದ್ದರು.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

2024ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ ಸಂಧು ಅವರನ್ನು ಅಮೃತಸರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಆದರೆ, ಆ ಚುನಾವಣೆಯಲ್ಲಿ ಅವರಿಗೆ ಜಯ ಸಿಗಲಿಲ್ಲ. ಆದರೂ ಅವರ ಅನುಭವ ಮತ್ತು ಆಡಳಿತಾತ್ಮಕ ಕೌಶಲ್ಯವನ್ನು ಗುರುತಿಸಿದ ಕೇಂದ್ರ ಸರ್ಕಾರ, ಮಾರ್ಚ್ 5 ರಂದು ಅವರನ್ನು ದೇಶದ ರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿತು.

ದೆಹಲಿಯ ಪ್ರಗತಿಗೆ ಹೊಸ ಭರವಸೆ
ಒಬ್ಬ ಅನುಭವಿ ರಾಜತಾಂತ್ರಿಕ ದೆಹಲಿಯ ಎಲ್‌ಜಿಯಾಗಿ ನೇಮಕಗೊಂಡಿರುವುದು ಜಾಗತಿಕ ಮಟ್ಟದಲ್ಲೂ ಕುತೂಹಲ ಮೂಡಿಸಿದೆ. ದೆಹಲಿಯ ಆಡಳಿತಾತ್ಮಕ ಸವಾಲುಗಳನ್ನು ಎದುರಿಸುವಲ್ಲಿ ಮತ್ತು ನಗರವನ್ನು ಜಾಗತಿಕ ಮಟ್ಟದ ಸುಸಜ್ಜಿತ ರಾಜಧಾನಿಯನ್ನಾಗಿ ಮಾಡುವಲ್ಲಿ ಸಂಧು ಅವರ ಅಂತರರಾಷ್ಟ್ರೀಯ ಅನುಭವ ಸಹಕಾರಿಯಾಗಲಿದೆ ಎಂಬುದು ತಜ್ಞರ ಅಭಿಪ್ರಾಯ.

ಒಬ್ಬ ಭಾರತೀಯ ಅಧಿಕಾರಿಯ ನೇಮಕಕ್ಕೆ ಅಮೆರಿಕ ಅಧ್ಯಕ್ಷರು ಬಹಿರಂಗವಾಗಿ ಅಭಿನಂದನೆ ಸಲ್ಲಿಸಿರುವುದು ಸಂಧು ಅವರ ವ್ಯಕ್ತಿತ್ವ ಮತ್ತು ಅವರ ಕೆಲಸದ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ದೆಹಲಿಯ ಅಭಿವೃದ್ಧಿಯ ಹಾದಿಯಲ್ಲಿ ಸಂಧು ಯಾವ ರೀತಿ ಹೊಸ ಅಧ್ಯಾಯ ಬರೆಯಲಿದ್ದಾರೆ ಎಂಬುದು ಈಗ ಎಲ್ಲರ ಕುತೂಹಲವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:30 am, Fri, 17 April 26

Source link

ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ; ರಸ್ತೆಗೆ ಉರುಳಿದ ವಿದ್ಯುತ್ ಕಂಬ! – Kannada News | Mudigere Rain Havoc: Chikkamagaluru Storm Topples Trees, Snaps Power Lines, Damages Homes

ಚಿಕ್ಕಮಗಳೂರು, ಏ.17: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ನೆನ್ನೆ ಕೆಲವು ಕಡೆ ಭಾರೀ ಮಳೆ ಬಂದಿದೆ. ಈ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತಗಳು ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ ಮೇಲ್ಚಾವಣಿಯ ಹೆಂಚುಗಳು ಪುಡಿಪುಡಿಯಾಗಿದ್ದು, ಕಟ್ಟಡಕ್ಕೆ ಹಾನಿಯಾಗಿದೆ. ಮರ ಬೀಳುವ ಸಮಯದಲ್ಲಿ ಮನೆಯಲ್ಲೇ ಇದ್ದ ಕುಟುಂಬಸ್ಥರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಣಕಲ್ ಮತ್ತು ಮತ್ತಿಕಟ್ಟಿ ಗ್ರಾಮಗಳ ನಡುವಿನ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಅಡ್ಡಲಾಗಿ ಬಿದ್ದಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ. ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ತೋಟಗಳಲ್ಲಿನ ಬೆಳೆಗಳಿಗೂ ಹಾನಿಯಾಗುವ ಭೀತಿ ಎದುರಾಗಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇನ್ನು ಚಿತ್ರದುರ್ಗದ ಕೆಲವೊಂದು ಕಡೆ ಮಳೆಯಿಂದ ಭಾರೀ ಪ್ರಮಾಣದ ಹಾನಿಗಳು ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ.

ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನರು ಚರಂಡಿ ಪೈಪ್‌ಗಳಿಂದ ನೀರು ಹಿಡಿಯುವ ದುಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಜೀವಜಲವಾಗಿದ್ದ ಸ್ವರ್ಣ ನದಿಯ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಒಂದು ಮೀಟರ್‌ನಷ್ಟು ಕುಸಿದಿದೆ.

ಏತನ್ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿಸಿಗಳ ಸಭೆಯಲ್ಲಿ, ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಮಾಹಿತಿ ಪಡೆಯಲಾಯಿತು. ನೀರಾವರಿಗಿಂತ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಡಿಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮುಂಗಾರು ಕಡಿಮೆಯಾಗುವ ಆತಂಕವಿದ್ದು, 213 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗೆ 11 ಎಲಿವೇಟೆಡ್ ಕಾರಿಡಾರ್, ಪ್ರಮುಖ ಆಸ್ತಿಗಳಿಗೆ ತೆರಿಗೆ ವಿನಾಯಿತಿ! ಸಚಿವ ಸಂಪುಟ ಮಹತ್ವದ ನಿರ್ಧಾರ – Kannada News | Karnataka Cabinet Approves 11 Elevated Corridors Worth rs 13262 Cr; Property Tax Waiver for Raj Bhavan, Kanteerava Stadium

ಸಚಿವ ಸಂಪುಟ ಸಭೆಯ ಬಳಿಕ ಹೊರ ತೆರಳುತ್ತಿರುವ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಲ್ಯಾಣ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೃಹತ್ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ಮೂಲಸೌಕರ್ಯಕ್ಕೆ ಬಲ

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆಯ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 75.60 ಕಿಮೀ ಉದ್ದದ 11 ಎತ್ತರಿಸಿದ (Elevated) ಕಾರಿಡಾರ್‌ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ 13,262.70 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಅಲ್ಲದೆ, ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಹೆಚ್ಚುವರಿ 2 ಪಥದ ಮೇಲ್ಸೇತುವೆ ಹಾಗೂ ಐಒಸಿ (IOC) ಜಂಕ್ಷನ್ ಬಳಿ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಾಣದ ಪರಿಷ್ಕೃತ ಅಂದಾಜು ಮೊತ್ತ 436.44 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ.

ಪ್ರಮುಖ ಸ್ವತ್ತುಗಳಿಗೆ ತೆರಿಗೆ ವಿನಾಯಿತಿ

ಸಚಿವ ಸಂಪುಟವು ಬೆಂಗಳೂರಿನ ಕೆಲವು ಪ್ರಮುಖ ಐತಿಹಾಸಿಕ ಮತ್ತು ಸರ್ಕಾರಿ ಸ್ವತ್ತುಗಳಿಗೆ ಭಾರಿ ಮೊತ್ತದ ಆಸ್ತಿ ತೆರಿಗೆ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಾಜಭವನ, ಕುಮಾರ ಕೃಪಾ ಅತಿಥಿ ಗೃಹ, ಶ್ರೀ ಕಂಠೀರವ ಕ್ರೀಡಾಂಗಣ ಹಾಗೂ ದಕ್ಷಿಣ ಪಾಲಿಕೆ ವ್ಯಾಪ್ತಿಯ ಕೋರಮಂಗಲ ಕ್ರೀಡಾಂಗಣಕ್ಕೆ ಆಸ್ತಿ ತೆರಿಗೆ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇದರಿಂದ ಸುಮಾರು 81 ಕೋಟಿ ರೂ.ಗಳಷ್ಟು ತೆರಿಗೆ ಮೊತ್ತ ಮನ್ನಾ ಆದಂತಾಗಿದೆ.

ಇತರ ಪ್ರಮುಖ ನಿರ್ಧಾರಗಳು

  • ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ನೂತನ ಕೇಂದ್ರ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ. ಅನುಮೋದನೆ.
  • ಸಾರಿಗೆ ಇಲಾಖೆ: ಸುಪ್ರೀಂ ಕೋರ್ಟ್ ಆದೇಶದಂತೆ 16 ಮೋಟಾರು ವಾಹನ ನಿರೀಕ್ಷಕರ (MVI) ನೇಮಕಾತಿಗೆ ಘಟನೋತ್ತರ ಅನುಮೋದನೆ.
  • ಕಾರವಾರ ವಿಮಾನ ನಿಲ್ದಾಣ: ಕಾರವಾರ ವಿಮಾನ ನಿಲ್ದಾಣದ ಅಭಿವೃದ್ಧಿ ಜವಾಬ್ದಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ವರ್ಗಾಯಿಸಲು ಸಮ್ಮತಿ.

ಇದನ್ನೂ ಓದಿ: ಸಂಪುಟ ಸಭೆಯಲ್ಲಿ ಕಿಡಿ ಹೊತ್ತಿಸಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ತಲೆದಂಡಕ್ಕೆ ಸಚಿವರ ಆಕ್ಷೇಪ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:37 am, Fri, 17 April 26

Source link

Exit mobile version