ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು ಈ ಘಟನೆಯು ಮತ್ತೆ ಚರ್ಚೆಗೆ ಗ್ರಾಸವಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಈ ಸಿನಿಮಾ ನೋಡಿರುವ ಶಿವರಾಜ್​ಕುಮಾರ್ (Shivarajkumar) ಅವರು ಮೆಚ್ಚಿಕೊಂಡಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಶಿವಣ್ಣ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರ ನಟನೆ, ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಶಿವಣ್ಣ ಭೇಷ್ ಎಂದಿದ್ದಾರೆ. ಇದರಿಂದಾಗಿ ‘ಧುರಂಧರ್ 2’ ಚಿತ್ರತಂಡಕ್ಕೆ ಬಲ ಹೆಚ್ಚಿದಂತಾಗಿದೆ. ಶಿವರಾಜ್​ಕುಮಾರ್ ಅವರ ವಿಮರ್ಶೆಗೆ ಆದಿತ್ಯ ಧರ್ (Aditya Dhar) ಪ್ರತಿಕ್ರಿಯೆ ನೀಡಿದ್ದಾರೆ.

‘ನಿಮ್ಮ ಈ ಮಾತುಗಳಿಗೆ ಧನ್ಯವಾದಗಳು ಸರ್. ನಿಮ್ಮಿಂದ ಈ ಮೆಚ್ಚುಗೆ ಬರುತ್ತಿರುವುದು ನಿಜಕ್ಕೂ ಬಹಳಷ್ಟು ಅರ್ಥಪೂರ್ಣವಾಗಿದೆ. ಪ್ರಾಮಾಣಿಕತೆ ಮತ್ತು ದೃಢನಿಶ್ಚಯದಿಂದ ಕಥೆಗಳನ್ನು ಹೇಳುವುದನ್ನು ಮುಂದುವರಿಸಲು ನಿಮ್ಮ ಬೆಂಬಲವು ನಮಗೆ ಪ್ರೋತ್ಸಾಹ ನೀಡುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಆದಿತ್ಯ ಧರ್ ಅವರು ಟ್ವೀಟ್ ಮಾಡಿದ್ದಾರೆ.

ಶಿವಣ್ಣ ಹೇಳಿದ್ದೇನು?

‘ಧುರಂಧರ್: ದಿ ರಿವೇಂಜ್’ ಸಿನಿಮಾ ಬಹಳ ಚೆನ್ನಾಗಿದೆ. ಈ ಸಿನಿಮಾದಲ್ಲಿನ ಪ್ರತಿಯೊಂದು ಅಂಶ ಕೂಡ ಇಷ್ಟ ಆಯಿತು. ರಣವೀರ್ ಸಿಂಗ್ ಬ್ರಿಲಿಯಂಟ್. ಹಳೇ ಸಾಂಗ್ ಬಳಸಿಕೊಂಡಿರುವ ಸಂಗೀತ ನಿರ್ದೇಶಕ ಶಾಶ್ವತ್ ಸಚ್​ದೇವ್ ಅವರ ಕೆಲಸ ಪರಿಣಾಮಕಾರಿ ಆಗಿದೆ. ನಿರ್ದೇಶಕ ಆದಿತ್ಯ ಧರ್ ಅವರ ಕೆಲಸಕ್ಕೆ ಗೌರವ ಸಲ್ಲಬೇಕು. ಸೈನಿಕನ ದೇಶಭಕ್ತಿಯೇ ಈ ಸಿನಿಮಾದ ಜೀವಾಳ. ಇಡೀ ಧುರಂಧರ್ 2 ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಈ ಹಿಂದೆ ‘ಧುರಂಧರ್’ ಮೊದಲ ಭಾಗವನ್ನು ವೀಕ್ಷಿಸಿದ್ದಾಗಲೂ ಶಿವರಾಜ್​ಕುಮಾರ್ ಅವರು ಹೊಗಳಿದ್ದರು. ‘ರಣವೀರ್ ಸಿಂಗ್ ಅವರು ಮಾಡಿದ ಪಾತ್ರ ಸುಲಭವಲ್ಲ. ಅದನ್ನು ಅವರು ಬಹಳ ಬ್ರಿಲಿಯಂಟ್ ಆಗಿ ನಿಭಾಯಿಸಿದ್ದಾರೆ’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂಬೈನಲ್ಲಿ ನಡೆದ ‘45’ ಸಿನಿಮಾದ ಸುದ್ದಿಗೋಷ್ಠಿ ವೇಳೆ ಅವರು ಈ ಮಾತು ಹೇಳಿದ್ದರು.

ಇದನ್ನೂ ಓದಿ: ‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ರಣವೀರ್ ಸಿಂಗ್ ಜತೆ ‘ಧುರಂಧರ್ 2’ ಸಿನಿಮಾದಲ್ಲಿ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಕಬೀರ್ ಬೇಡಿ, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರಿಷಬ್ ಶೆಟ್ಟಿ, ರಜನಿಕಾಂತ್, ಅಲ್ಲು ಅರ್ಜುನ್, ಮಹೇಶ್ ಬಾಬು, ರಾಮ್ ಚರಣ್, ರಾಜಮೌಳಿ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

17 ನಗರ, 22 ಪಂದ್ಯಗಳು; ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿ ಪ್ರಕಟ

19ನೇ ಆವೃತ್ತಿಯ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿದೆ. ಈ ಲೀಗ್​ಗೆ ಬಿಸಿಸಿಐ (BCCI) ಕೂಡ ಸರ್ವ ತಯಾರಿಯನ್ನು ಮಾಡಿಕೊಂಡಿದೆ. ಇತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸಿಕೊಂಡಿವೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಇದೆಲ್ಲದರ ನಡುವೆ ಬಿಸಿಸಿಐ, ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2026-27ರ ಕ್ರೀಡಾ ಕ್ಯಾಲೆಂಡರ್​ನಲ್ಲಿ ಭಾರತ ಪುರುಷರ ತಂಡ ತನ್ನ ತವರಿನಲ್ಲಿ ಆಡಲಿರುವ ಅಂತಾರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಪ್ರಕಾರ ನಾಲ್ಕು ಬಲಿಷ್ಠ ತಂಡಗಳು ಭಾರತಕ್ಕೆ ಬರಲಿವೆ. ಅವುಗಳಲ್ಲಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ವೆ ಮತ್ತು ಆಸ್ಟ್ರೇಲಿಯಾ ತಂಡಗಳು ಸೇರಿದ್ದು, ಈ ತಂಡಗಳು ಭಾರತದಲ್ಲಿ ಬಹು-ಸ್ವರೂಪದ ಸರಣಿಯನ್ನು ಆಡಲಿವೆ. ಈ ನಾಲ್ಕು ತಂಡಗಳಿಗೆ ಭಾರತದ 17 ನಗರಗಳು ಆತಿಥ್ಯವಹಿಸಲಿದ್ದು, ಇದರಲ್ಲಿ ಒಟ್ಟಾರೆ 22 ಅಂತರರಾಷ್ಟ್ರೀಯ ಪಂದ್ಯಗಳು ನಡೆಯಲಿವೆ.

ವೆಸ್ಟ್ ಇಂಡೀಸ್ ಪ್ರವಾಸ

ಸೆಪ್ಟೆಂಬರ್ 27, 2026 ರಂದು ವೆಸ್ಟ್ ಇಂಡೀಸ್‌ ಪ್ರವಾಸದೊಂದಿಗೆ ಈ ಸೀಸನ್ ಆರಂಭವಾಗಲಿದೆ. ಕೆರಿಬಿಯನ್ ತಂಡ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ನಂತರ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಅದರಂತೆ ಏಕದಿನ ಪಂದ್ಯಗಳು ತಿರುವನಂತಪುರ, ಗುವಾಹಟಿ ಮತ್ತು ನ್ಯೂ ಚಂಡೀಗಢದಲ್ಲಿ ನಡೆದರೆ, ಟಿ20 ಸರಣಿ ಲಕ್ನೋ, ರಾಂಚಿ, ಇಂದೋರ್, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್ ಪ್ರವಾಸ

ಶ್ರೀಲಂಕಾ ಪ್ರವಾಸ

ನಂತರ ಡಿಸೆಂಬರ್ ತಿಂಗಳಲ್ಲಿ ಶ್ರೀಲಂಕಾ ತಂಡ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 3 ಪಂದ್ಯಗಳ ಟಿ20 ಸರಣಿಗಾಗಿ ಭಾರತಕ್ಕೆ ಬರಲಿದೆ. ಏಕದಿನ ಪಂದ್ಯಗಳು ದೆಹಲಿ, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿದ್ದು, ರಾಜ್‌ಕೋಟ್, ಕಟಕ್ ಮತ್ತು ಪುಣೆಯಲ್ಲಿ ಟಿ20 ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

ಶ್ರೀಲಂಕಾ ಪ್ರವಾಸ

ಜಿಂಬಾಬ್ವೆ ಪ್ರವಾಸ

ಹೊಸ ವರ್ಷದ ಆರಂಭದಲ್ಲಿ ಅಂದರೆ 2027 ರ ಜನವರಿಯಲ್ಲಿ ಜಿಂಬಾಬ್ವೆ ತಂಡ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಮೂರು ಪಂದ್ಯಗಳು ಕೋಲ್ಕತ್ತಾ, ಹೈದರಾಬಾದ್ ಮತ್ತು ಮುಂಬೈನಲ್ಲಿ ನಡೆಯಲಿವೆ.

ಜಿಂಬಾಬ್ವೆ ಪ್ರವಾಸ

ಆಸ್ಟ್ರೇಲಿಯಾ ಪ್ರವಾಸ

ಆಸ್ಟ್ರೇಲಿಯಾ ಪ್ರವಾಸ

ಆ ನಂತರ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದ್ದು, ಉಭಯ ತಂಡಗಳು ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಮೊದಲ ಪಂದ್ಯ ಜನವರಿ 21, 2027 ರಂದು ನಾಗ್ಪುರದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಕ್ರಮವಾಗಿ ಚೆನ್ನೈ, ಗುವಾಹಟಿ, ರಾಂಚಿ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿವೆ. ಒಟ್ಟು ಐದು ಪಂದ್ಯಗಳ ಈ ಟೆಸ್ಟ್ ಸರಣಿಯ ಮುಕ್ತಾಯದೊಂದಿಗೆ ಈ ವೇಳಾಪಟ್ಟಿಯೂ ಅಂತ್ಯವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ವ್ಯಕ್ತಿ ಸಾವು!

ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್​​ಫಾರ್ಮ್​ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

ಬೆಂಗಳೂರು, ಮಾರ್ಚ್​ 26: ಪೀಣ್ಯದ ಹೆಚ್​ಎಂಟಿ ಲೇಔಟ್‌ನ​ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ ಡಬಲ್ ಮರ್ಡರ್​​ (murder) ನಡೆದಿರುವಂತಹ ಘಟನೆ ನಡೆದಿದೆ. ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ಮತ್ತು ತಮ್ಮನನ್ನ ಹತ್ಯೆ ಮಾಡಲಾಗಿದೆ. ಯಮುನಾ(36) ಮತ್ತು ಸುದೀಪ್(34) ಕೊಲೆಯಾದವರು. ಸ್ಥಳಕ್ಕೆ ಡಿಸಿಪಿ ನಾಗೇಶ್, ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ನಡೆದಿದ್ದೇನು?

ಆರೋಪಿ ತಾಯಿ ಛಾಯಾ ಹಾಗೂ ಯುಮುನಾ ಗಂಡನ ಮಧ್ಯೆ ಅಕ್ರಮ ಸಂಬಂಧ ಹಿನ್ನೆಲೆ ಇದನ್ನು ಪ್ರಶ್ನಿಸಲು ಛಾಯಾ ಮನೆಗೆ ಬಂದಿದ್ದ ಯಮುನಾ ಮತ್ತು ತಮ್ಮ ಸುದೀಪ್ ಜಗಳವಾಡುತ್ತಿದ್ದರು. ಈ ವೇಳೆ ಜಗಳದ ಮಧ್ಯೆ ಎಂಟ್ರಿಯಾದ ಛಾಯಾ ಪುತ್ರ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆಗೈದಿದ್ದಾನೆ.

ಅಪ್ರಾಪ್ತ ಬಾಲಕ ಇಬ್ಬರಿಗೂ ಹತ್ತಾರು ಬಾರಿ ಚಾಕುವಿನಿಂದ ಇರಿದಿದ್ದಾನೆ. ನಂತರ ಕೋಣೆ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಪೊಲೀಸರು ಬಂದರೂ ಬಾಗಿಲು ತೆಗೆದಿರಲಿಲ್ಲ. ತಂದೆ ಬಂದು ಹೇಳಿದಾಗ ಬಾಗಿಲು ತೆಗೆದು ಅಪ್ರಾಪ್ತ ಹೊರಬಂದಿದ್ದಾನೆ.

ಮಟ ಮಟ ಮಧ್ಯಾಹ್ನವೇ ನಡುರಸ್ತೆಯಲ್ಲಿ ಪತ್ನಿ ಕತ್ತು ಕೊಯ್ದ ಪತಿ

ಮಟ ಮಟ ಮಧ್ಯಾಹ್ನವೇ ನಡುರಸ್ತೆಯಲ್ಲಿ ಪತ್ನಿ ಕತ್ತು ಕೊಯ್ದ ಪತಿ ಕೊಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಬಳ್ಳೂರ್ಗಿ ಬಳಿ ಭೀಕರ ಹತ್ಯೆ ನಡೆದಿದೆ. ಪತಿ ಅಕ್ಷಯ್‌ನಿಂದ ಪತ್ನಿ ಶೈಲಾ (28)ರನ್ನ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?

ಕೊಲೆಯಾದ ಮಹಿಳೆ ಮಹಾರಾಷ್ಟ್ರ ಮೂಲದವರು. ಸ್ಥಳಕ್ಕೆ ಕಾರಿನಲ್ಲಿ ಪತ್ನಿಯನ್ನ ಕರೆದುಕೊಂಡು ಬಂದಿದ್ದ ಪತಿ ಬಳಿಕ ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ ಕೊಲೆ ಮಾಡಿದ್ದಾರೆ. ಪತ್ನಿಯ ಕತ್ತು ಕೊಯುತ್ತಿರುವ ದೃಶ್ಯ ಸ್ಥಳಿಯರೊಬ್ಬರ ಮೊಬೈಲ್‌ನಲ್ಲಿ ಸೆರೆ ಆಗಿದೆ.

ಟೆಂಪೊ ಟ್ರಾವೆಲರ್ಸ್‌‌ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಮಹಿಳೆ ಸಾವು

ಟೆಂಪೊ ಟ್ರಾವೆಲರ್ಸ್‌‌ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಮಾದಿನಾಳ ಕ್ರಾಸ್ ಬಳಿ ಈ ದುರಂತ ನಡೆದಿದೆ. ಟೆಂಪೊ ಟ್ರಾವೆಲರ್ಸ್​ನಲ್ಲಿದ್ದ ಕಸ್ತೂರಿಬಾಯಿ ಕೃಷ್ಣ ರಾಠೋಡ(50) ಮೃತ ಮಹಿಳೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?

ಕಸ್ತೂರಿಬಾಯಿಯನ್ನು ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಲಮಿ ತಾಂಡಾದ ಸಂಜಯ ಸುರಪುರ ಹಾಗೂ ಗುರಪ್ಪ ಚೌವ್ಹಾನ್ ಇವರಿಗೆ ಗಾಯಗಳಾಗಿದ್ದು, ಮುದ್ದೇಬಿಹಾಳ ತಾಲ್ಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 26: ಇರಾನ್ ಯುದ್ಧ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ (crude oil price) ಎರಡು ಪಟ್ಟು ಹೆಚ್ಚಾಗಿದೆ. ಆದರೂ ಭಾರತದಲ್ಲಿ ಸರ್ಕಾರದ ಸೂಚನೆ ಮೇರೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಏರಿಸಲಾಗಿಲ್ಲ. ಇದೀಗ ಖಾಸಗಿ ಇಂಧನ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5.30 ರೂ ಏರಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ.

ಭಾರತದಲ್ಲಿ 2022ರಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ ಆಗಿದ್ದು ಇದೇ ಮೊದಲು. 2022ರ ಮೇ ತಿಂಗಳಲ್ಲಿ ಪೆಟ್ರೋಲ್ ದರ ಪರಿಷ್ಕರಣೆ ಆಗಿತ್ತು. ಮತ್ತೊಂದು ಖಾಸಗಿ ರೀಟೇಲರ್ ಆಗಿರುವ ಜಿಯೋ ಬಿಪಿ ಇನ್ನೂ ಕೂಡ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿಲ್ಲ. ಪೆಟ್ರೋಲ್ ರೀಟೇಲ್ ಕ್ಷೇತ್ರದಲ್ಲಿ ಶೇ. 90ರಷ್ಟು ಪಾರಮ್ಯ ಹೊಂದಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಎಚ್​ಪಿ ಮತ್ತು ಬಿಪಿ ತಮ್ಮ ಸಾಮಾನ್ಯ ಪೆಟ್ರೋಲ್, ಡೀಸಲ್ ದರಗಳನ್ನು ಏರಿಸಿಲ್ಲ.

ಇದನ್ನೂ ಓದಿ: ಹೆಲ್ತ್ ಇನ್ಷೂರೆನ್ಸ್; ಕಾರ್ಪೊರೇಟ್ ಪಾಲಿಸಿ ಜೊತೆಗೆ ವೈಯಕ್ತಿಕ ವಿಮೆಯೂ ಇರಲಿ: ನಿತಿನ್ ಕಾಮತ್ ಸಲಹೆ

ಕೆಲ ದಿನಗಳ ಹಿಂದೆ ಈ ಒಎಂಸಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ಬೆಲೆಗಳನ್ನು ಏರಿಸಿದ್ದವು. ಪ್ರೀಮಿಯಮ್ 95-ಆಕ್ಟೇನ್ ಪೆಟ್ರೋಲ್ ಬೆಲೆಯಲ್ಲಿ ಲೀಟರ್​ಗೆ 2 ರೂನಷ್ಟು ಏರಿಕೆ ಮಾಡಲಾಯಿತು. ಇಂಡಸ್ಟ್ರಿಯಲ್ ಡೀಸಲ್ ಬೆಲೆಯಲ್ಲೂ ಏರಿಕೆ ಮಾಡಲಾಗಿತ್ತು. ಆದರೆ, ಮಾಮೂಲಿಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ಹೆಚ್ಚಳ ಮಾಡಲಾಗಿಲ್ಲ. ನಯಾರಾ ಪೆಟ್ರೋಲ್ ಪಂಪ್​ಗಳಲ್ಲಿ ಮಾತ್ರವೇ ಬೆಲೆ ಏರಿಕೆ ಆಗಿದೆ.

ಖಾಸಗಿ ಕಂಪನಿಗಳಿಗೆ ನಷ್ಟದ ಹೊರೆ ಅಧಿಕ

ಸರ್ಕಾರ 2022ರಿಂದ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಫ್ರೀಜ್ ಮಾಡಿದೆ. ತೈಲ ಬೆಲೆ ಏರಿಕೆಯಾದಾಗ ಸರ್ಕಾರಿ ಸ್ವಾಮ್ಯದ ಒಎಂಸಿಗಳಿಗೆ ನಷ್ಟದ ಹೊರೆ ಕಡಿಮೆ ಮಾಡಲು ಸರ್ಕಾರ ನೆರವಾಗುತ್ತದೆ. ಖಾಸಗಿ ರೀಟೇಲ್ ಕಂಪನಿಗಳಿಗೆ ಸರ್ಕಾರದ ನೆರವು ಸಿಗುವುದಿಲ್ಲ. ತೈಲ ಬೆಲೆ ಕಡಿಮೆ ಇದ್ದಾಗ ಬಂದಿರುವ ಲಾಭದಿಂದ ಈಗ ಆಗುವ ನಷ್ಟವನ್ನು ಸರಿದೂಗಿಸಲು ಯತ್ನಿಸುವುದು ಅನಿವಾರ್ಯ. ಅದು ಸಾಧ್ಯವಾಗದಿದ್ದರೆ ಪೆಟ್ರೋಲ್, ಡೀಸಲ್ ಬೆಲೆ ಏರಿಸುವುದು ಅನಿವಾರ್ಯ. ಅಂತೆಯೇ, ರಷ್ಯಾದ ರಾಸ್​ನೆಫ್ಟ್ (Rosneft) ಮಾಲಕತ್ವದ ನಯಾರಾ ಎನರ್ಜಿ ಸಂಸ್ಥೆ ಬೆಲೆ ಏರಿಸಿದೆ.

ಇದನ್ನೂ ಓದಿ: ಪಿಎಂ ಎಸ್​ವೈಎಂ ಸ್ಕೀಮ್; ತಿಂಗಳಿಗೆ ಕೇವಲ 55 ರೂ ಹೂಡಿಕೆ; ಉತ್ತಮ ಮಾಸಿಕ ವರಮಾನ ಸೃಷ್ಟಿ

ಭಾರತದಲ್ಲಿ 1,02,075 ಪೆಟ್ರೋಲ್ ಪಂಪ್​ಗಳಿವೆ. ಈ ಪೈಕಿ ನಯಾರಾ ಎನರ್ಜಿಯ ಪಂಪ್​ಗಳ ಸಂಖ್ಯೆ 6,967. ಜಿಯೊ ಬಿಪ್ ಔಟ್​ಲೆಟ್​ಗಳ ಸಂಖ್ಯೆ 2,185. ಇನ್ನುಳಿದ 90,000ಕ್ಕೂ ಅಧಿಕ ಪೆಟ್ರೋಲ್ ಪಂಪ್​ಗಳು ಇಂಡಿಯನ್ ಆಯಿಲ್, ಬಿಪಿ ಮತ್ತು ಎಚ್​ಪಿಗೆ ಸೇರಿದ್ದಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್

ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ.  ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ ಹಾಗೂ ಅವರ ಪತ್ನಿ ಅಲ್ಲದೇ ಲೋಕಾಯಯಕ್ತ ಪೊಲಿಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ, ದೇವರಾಜ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನ ಮುಂದೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.

ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ ಕಾರಣವೂ ಇದೆ. ವಾಸ್ತವವಾಗಿ ಕಳೆದ ವರ್ಷ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಜಯೋತ್ಸವದ ಮೆರವಣಿಗೆಯ ವೇಳೆ ಕಾಲ್ತುಳಿತ ಉಂಟಾಗಿ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಆ ಅವಘಡದಲ್ಲಿ ಮಡಿದವರ ಗೌರವಾರ್ಥವಾಗಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

ಮೇಲೆ ಹೇಳಿದಂತೆ ಈ ಬಾರಿಯ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರ ಮೊದಲ ಪಂದ್ಯಕ್ಕೂ ಮುನ್ನ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಇದು ಪ್ರಮುಖ ಕಾರಣವಾಗಿದೆ.

ಉದ್ಘಾಟನಾ ಸಮಾರಂಭ ಏಕೆ ಇರುವುದಿಲ್ಲ?

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ, ಈ ಐಪಿಎಲ್‌ನ ಸಮಾರೋಪ ಸಮಾರಂಭವನ್ನು ಮೇ 31 ರಂದು ನಡೆಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಹೇಳಿರುವುದಾಗಿ TOI ಉಲ್ಲೇಖಿಸಿದೆ.

ಈ ಹಿಂದೆಯೂ ರದ್ದುಗೊಳಿಸಲಾಗಿತ್ತು

ಕಳೆದ ಆವೃತ್ತಿಯ ಐಪಿಎಲ್ ಉದ್ಘಾಟನಾ ಸಮಾರಂಭವು ಕೋಲ್ಕತ್ತಾದಲ್ಲಿ ನಡೆದಿತ್ತು. ಇದರಲ್ಲಿ ಶಾರುಖ್ ಖಾನ್, ಶ್ರೇಯಾ ಘೋಷಾಲ್, ದಿಶಾ ಪಟಾನಿ ಮತ್ತು ಕರಣ್ ಔಜ್ಲಾ ಅವರಂತಹ ಕಲಾವಿದರು ಪ್ರದರ್ಶನ ನೀಡಿದ್ದರು. ಆದಾಗ್ಯೂ ಐಪಿಎಲ್ ಉದ್ಘಾಟನಾ ಸಮಾರಂಭ ರದ್ದಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸೈನಿಕರ ಸ್ಮರಣಾರ್ಥ ಐಪಿಎಲ್ 2019 ರ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ನಿಗದಿಪಡಿಸಿದ ಹಣವನ್ನು ಹುತಾತ್ಮರ ಕುಟುಂಬಗಳಿಗೆ ವಿತರಿಸಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವು

ಜೆರುಸಲೇಂ, ಮಾರ್ಚ್​ 26: ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು.

ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್​​ನ ಮೂರು ಡಜನ್​ಗಿಂತಲೂ ಹೆಚ್ಚು ಪ್ರಮುಖ ಮಿಲಿಟರಿ ಕಮಾಂಡರ್​ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಬಹುದು. ಇರಾನ್ ತನ್ನ ಉನ್ನತ ಮಿಟಿಲರಿ ಅಧಿಕಾರಿಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಭಯವಿದೆ, ಇದು ಗಲ್ಫ್​ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಭದ್ರತಾ ಬಿಕ್ಕಟ್ಟನ್ನು ಇನ್ನಷ್ಟು ಆಳಗೊಳಿಸುವ ಸಾಧ್ಯತೆ ಇದೆ.

ಇರಾನ್‌ನ ಪ್ರಬಲ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ನೌಕಾ ವಿಭಾಗದ ನೇತೃತ್ವ ವಹಿಸಿದ್ದ ತಂಗ್ಸಿರಿ, ಬಂದರು ನಗರಿ ಬಂದರ್ ಅಬ್ಬಾಸ್‌ನಲ್ಲಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳು ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಕಾರಣರಾಗಿದ್ದರು.

ಮತ್ತಷ್ಟು ಓದಿ: ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ದಾಳಿಯ ಬಗ್ಗೆ ಇರಾನ್ ಅಥವಾ ಇಸ್ರೇಲ್ ಸೇನೆಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇರಾನ್ ಇಸ್ರೇಲ್‌ನ ಟೆಲ್ ಅವೀವ್ ಸೇರಿದಂತೆ ವಸತಿ ಪ್ರದೇಶಗಳ ಮೇಲೆ ಎರಡು ಗಂಟೆಗಳಲ್ಲಿ ನಾಲ್ಕು ಕ್ಷಿಪಣಿಗಳನ್ನು ಹಾರಿಸಿತು, ಇದರಿಂದಾಗಿ ಏಳು ಜನರು ಗಾಯಗೊಂಡರು. ಲೆಬನಾನ್ ಇಸ್ರೇಲ್ ಮೇಲೆ ಹಲವಾರು ಡ್ರೋನ್‌ಗಳನ್ನು ಸಹ ಹಾರಿಸಿದೆ. ಬುಧವಾರ ರಾತ್ರಿ ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಉಗ್ರಗಾಮಿಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಐಡಿಎಫ್ ಸೈನಿಕ ಸಾವನ್ನಪ್ಪಿದ್ದಾರೆ.

ಇರಾನ್ ಭಾರತ, ಪಾಕಿಸ್ತಾನ, ಚೀನಾ, ರಷ್ಯಾ ಮತ್ತು ಟರ್ಕಿ ಸೇರಿದಂತೆ ತನ್ನ ಇತರ ಸ್ನೇಹಪರ ರಾಷ್ಟ್ರಗಳಿಗೆ ಕಿರಿದಾದ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.ಹಾರ್ಮುಜ್ ಮುಚ್ಚುವಿಕೆಯಿಂದಾಗಿ ಜಾಗತಿಕ ತೈಲ ಬಿಕ್ಕಟ್ಟಿನ ಬಗ್ಗೆ ಅಮೆರಿಕ ಚಿಂತಿತವಾಗಿದೆ. ಜಾಗತಿಕ ಇಂಧನದ ಐದನೇ ಒಂದು ಭಾಗವು ಅದರ ಮೂಲಕ ಹಾದುಹೋಗುತ್ತದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 26: ಬೆಂಗಳೂರು ಮಹಾನಗರದಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ ಮತ್ತು ಖಾತಾ ಬದಲಾವಣೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‘ಫೇಸ್‌ಲೆಸ್ ಆನ್‌ಲೈನ್ ಇ-ಖಾತಾ ಡಿಜಿಟಲ್ ಪ್ರಾಪರ್ಟಿ ರೆಕಾರ್ಡ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ಗೆ ಗೋಲ್ಡ್ ಮೆಡಲ್ ಲಭಿಸಿದೆ. ಇದು ಆಡಳಿತವನ್ನು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತ, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಇದುವರೆಗೆ 9.5 ಲಕ್ಷ ಖಾತೆಗಳನ್ನು ವಿತರಿಸಲಾಗಿದೆ. ಎ ಟು ಬಿ ಖಾತಾ ಪರಿವರ್ತನೆ ಪ್ರಕ್ರಿಯೆ ಚುರುಕುಗೊಂಡಿದ್ದು, 1.2 ಲಕ್ಷ ಅರ್ಜಿಗಳಲ್ಲಿ 60,000 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಭ್ರಷ್ಟಾಚಾರವನ್ನು ತಡೆಗಟ್ಟಲು ಫೇಸ್‌ಲೆಸ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ. 50×80 ಅಳತೆಯ ಪ್ಲಾಟ್‌ಗಳಿಗೆ ‘ನಂಬಿಕೆ ನಕ್ಷೆ’ ಎಂಬ ಸ್ವಯಂಚಾಲಿತ ಯೋಜನಾ ಅನುಮೋದನೆ ವ್ಯವಸ್ಥೆಯನ್ನು 2024ರಲ್ಲಿ ಪರಿಚಯಿಸಲಾಗಿದೆ. ಆಸಕ್ತಿ ಮತ್ತು ದಂಡವನ್ನು ಮನ್ನಾ ಮಾಡುವ ಒಂದು ಬಾರಿ ಇತ್ಯರ್ಥ ಯೋಜನೆಯನ್ನು ಕೂಡ ಸದನದಲ್ಲಿ ಪಾಸ್ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version