Headlines

IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ – Kannada News | IPL 2026: SRH Beats RCB; Kavya Maran’s Viral Reaction to Krunal Pandya’s Bowling

2026 ರ ಐಪಿಎಲ್‌ನ (IPL 2026) 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೈದರಾಬಾದ್ 55 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದಿದ್ದ ಮಾತಿನ ಚಕಮಕಿ ಇದೀಗ ಸಖತ್ ಸದ್ದು ಮಾಡಿದೆ. ಇದರ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಿಕಿ ಕಾವ್ಯ ಮಾರನ್ (Kavya Maran), ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ (Krunal…

Read More

ಈ ವಾರ ಒಟಿಟಿಯಲ್ಲಿ ಭರ್ಜರಿ ಸಿನಿಮಾಗಳು, ತಪ್ಪದೇ ನೋಡಿ

ರಣ್ವೀರ್ ಸಿಂಗ್ ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ 2025ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಈ ವಾರ ಮತ್ತೊಮ್ಮೆ ಒಟಿಟಿಗೆ ಬಂದಿದೆ. ಕಳೆದ ವರ್ಷ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಜಿಯೋ ಹಾಟ್​​ಸ್ಟಾರ್​​ಗನಲ್ಲಿ ಬಿಡುಗಡೆ ಆಗಿದೆ. ಚಿತ್ರಮಂದಿರದಲ್ಲಿ ಇರದಿದ್ದ ಕೆಲ ಸೀನ್​​ಗಳು ಸಿನಿಮಾನಲ್ಲಿ ಇರಲಿವೆಯಂತೆ. ‘ಔಟ್ ಆಫ್ ಸಿಲೆಬಸ್’ ಒಂದು ಕನ್ನಡ ಸಿನಿಮಾ ಆಗಿದ್ದು, ಪ್ರದೀಪ್ ದೊಡ್ಡಯ್ಯ ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಸಿನಿಮಾನಲ್ಲಿ ಹೃತಿಕಾ ಶ್ರೀನಿವಾಸ್ ನಾಯಕಿ. ಯೋಗರಾಜ್ ಭಟ್,…

Read More

Video: ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ

ಜನಸಂಚಾರ ಹೆಚ್ಚಿದ್ದ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರನೊಬ್ಬ ಸ್ಪೀಡ್ ಬ್ರೇಕರ್‌ನ್ನು ಗಮನಿಸದೇ ವೇಗದಲ್ಲೇ ದಾಟಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಬೆನ್ನೆಲುಬಿಗೆ ಗಂಭೀರ ಪೆಟ್ಟಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸವಾರನ ನಿರ್ಲಕ್ಷ್ಯ ಮತ್ತು ಅತಿವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು – Kannada News | Bengaluru CNG Price Increased by Rs 2: Commuters and Drivers Worried

ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್​​ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಶಾಂತಿನಗರದ ಗಿಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ…

Read More

ಶಿರಸಿಯಲ್ಲಿ ನಡುರಸ್ತೆಯಲ್ಲೇ ನಡುಕ ಹುಟ್ಟಿಸಿದ ಗ್ಯಾಂಗ್‌ವಾರ್!: 6 ಯುವಕರ ವಿರುದ್ಧ ಪ್ರಕರಣ ದಾಖಲು – Kannada News | Sirsi Youth Brawl: After Bike Accident, Gang War Erupts; Police Take Action

ಶಿರಸಿ, ಮೇ.23: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪಟ್ಟಣವಾದ ಶಿರಸಿಯಲ್ಲಿ ಕೇವಲ ಒಂದು ಬೈಕ್ ಅಪಘಾತದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಗ್ಯಾಂಗ್‌ವಾರ್ ನಡೆದಿದೆ. ನಗರದ ಸಿಂಪಿಗಲ್ಲಿಯ ನಡುರಸ್ತೆಯಲ್ಲೇ ಯುವಕರ ಎರಡು ಗುಂಪುಗಳು ಪರಸ್ಪರ ಅಟ್ಟಾಡಿಸಿಕೊಂಡು ಮಾರಾಮಾರಿ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಶಿರಸಿ ಟೌನ್ ಪೊಲೀಸ್ ಠಾಣೆಯಲ್ಲಿ 6 ಯುವಕರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೇ 21ರ ರಾತ್ರಿ ಶಿರಸಿಯ ದೇವಿಕೆರೆ ಬಳಿ ದ್ವಿಚಕ್ರ ವಾಹನಗಳ ನಡುವೆ ಸಣ್ಣದೊಂದು…

Read More

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL) ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ…

Read More

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!

ಬಳ್ಳಾರಿ, ಮೇ 23: ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್‌ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದ್ದರು. ಜನರು ಸಾಲ ಮಾಡಿ ಮನೆಗಳನ್ನು ನಿರ್ಮಿಸಿಕೊಂಡ ನಂತರ, ಜಿಲ್ಲಾಡಳಿತವು…

Read More

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More