ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ – Kannada News | India vs new zealand t20 series 2026 schedule

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ.

ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ ನಾಲ್ಕನೇ ಮತ್ತು ಐದನೇ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ ಮತ್ತು ತಿರುವನಂತಪುರದಲ್ಲಿ ಜರುಗಲಿದೆ.

ಈ ಐದು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಜನವರಿ 31 ರಂದು ಐದು ಮ್ಯಾಚ್​ಗಳ ಸರಣಿ ಮುಗಿಯಲಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರಿಗೆ ಕೆಲ ದಿನಗಳ ವಿಶ್ರಾಂತಿ ಸಿಗಲಿದೆ. ಆ ಬಳಿಕ ಟೀಮ್ ಇಂಡಿಯಾ ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯು ಭಾರತ ತಂಡದ ಪಾಲಿಗೆ ಮಹತ್ವದ್ದಾಗಿ ಪರಿಣಮಿಸಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್.

ಇದನ್ನೂ ಓದಿ: ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00 ಗಂಟೆಗೆ ಶುರು
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00 ಗಂಟೆಗೆ ಶುರು
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00 ಗಂಟೆಗೆ ಶುರು
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00 ಗಂಟೆಗೆ ಶುರು
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00 ಗಂಟೆಗೆ ಶುರು

Published On – 9:55 am, Mon, 19 January 26

Source link

Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ – Kannada News | Seconds From Disaster, Railway Officer’s Brave Rescue Caught on Camera

ಪ್ರಯಾಗ್​ರಾಜ್, ಜನವರಿ 19: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ರೈಲಿನಡಿಗಾಗುತ್ತಿದ್ದ ತಂದೆ-ಮಗನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 15018 ಕಾಶಿ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ನಿಂದ ಹೊರಬರಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ತನ್ನ ಚಿಕ್ಕ ಮಗನನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ರೈಲು ಚಲಿಸುತ್ತಿದ್ದಾಗಲೇ ಅದನ್ನು ಹತ್ತಲು ಪ್ರಯತ್ನಿಸಿದ್ದರು, ಈ ಪ್ರಯತ್ನದಲ್ಲಿ, ಅವರು ಕಾಲು ತಪ್ಪಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಜಾರಿದ್ದರು. ಕರ್ತವ್ಯದಲ್ಲಿದ್ದ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿ ಮತ್ತು ಬಾಲಕನನ್ನು ಸುರಕ್ಷಿತವಾಗಿ ಎಳೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಮ್ಮ ಮನೆ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಥಳಿಸಿ, ಮೂತ್ರ ಕುಡಿಸಿದ ಕುಟುಂಬ ಸದಸ್ಯರು – Kannada News | Bhopal Man Brutally Tortured for Love: Forced to Drink Urine and Assaulted by Family

ಭೋಪಾಲ್, ಜನವರಿ 19: ತಮ್ಮ ಮನೆ ಹುಡುಗಿಯ ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಥಳಿಸಿದ ಕುಟುಂಬದವರು ಆತನಿಗೆ ಬಲವಂತವಾಗಿ ಮೂತ್ರ(Urine) ಕುಡಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಭೋಪಾಲ್‌ನ ಕೋಲಾರದ ನಿವಾಸಿ 18 ವರ್ಷದ ಸೋನು ಎಂಬಾತನನ್ನು ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ,  ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಆಘಾತಕಾರಿ ಅಲೆಗಳನ್ನು ಸೃಷ್ಟಿಸಿರುವ ಹಲ್ಲೆಯ ವೀಡಿಯೊ ಈಗ ವೈರಲ್ ಆಗಿದೆ.

ಈ ದೃಶ್ಯಾವಳಿಯಲ್ಲಿ ಸೋನು ಅವರನ್ನು ಹಲವಾರು ಪುರುಷರು ನಿರ್ದಯವಾಗಿ ಥಳಿಸುತ್ತಿರುವುದನ್ನು ಮತ್ತು ಬಿಯರ್ ಬಾಟಲಿಯಿಂದ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು.
ಪೊಲೀಸ್ ಮೂಲಗಳ ಪ್ರಕಾರ, ಸೋನು ಝಾಲಾವರ್ ಜಿಲ್ಲೆಯ ಪುಲೋರೋ ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಸುಮಾರು 15 ದಿನಗಳ ಹಿಂದೆ, ಆ ಯುವತಿ ತನ್ನ ಮನೆಯನ್ನು ಬಿಟ್ಟು ಭೋಪಾಲ್‌ಗೆ ಬಂದು, ಅಲ್ಲಿ ಸೋನು ಜೊತೆ ವಾಸಿಸುತ್ತಿದ್ದಳು. ಬಳಿಕ ಅವರು ಮಗಳನ್ನು ಮನೆಗೆ ಕರೆದುಕೊಂಡು ಹೋದರು.

ಮತ್ತಷ್ಟು ಓದಿ: ಬೇಸಿಗೆಯಲ್ಲೂ ಪದೇ ಪದೇ ಮೂತ್ರ ಬರುತ್ತಾ? ನಿಮ್ಮ ದೇಹದಲ್ಲಿ ಶುರುವಾಗಿದೆ ಈ ಸಮಸ್ಯೆ

ಸ್ವಲ್ಪ ಸಮಯದ ನಂತರ, ಸೋನುಗೆ ಆ ಯುವತಿ ಕರೆ ಮಾಡಿ ತನ್ನನ್ನು ಭೇಟಿಯಾಗಲು ರಾಜಸ್ಥಾನಕ್ಕೆ ಬರುವಂತೆ ಕೇಳಿಕೊಂಡಿದ್ದಾಳೆ. ಆ ಕರೆಯನ್ನು ನಂಬಿ, ಆತ ಪುಲೋರೋ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದ. ಆದರೆ ಅದು ಹೊಂಚು ದಾಳಿಯಾಗಿತ್ತು.ಆತ ಗ್ರಾಮವನ್ನು ತಲುಪಿದ ತಕ್ಷಣ, ಯುವತಿಯ ಕುಟುಂಬದ ಸದಸ್ಯರು ಅವನನ್ನು ಅಪಹರಿಸಿ ಮನೆಯಲ್ಲಿ ಇರಿಸಿದರು, ನಂತರ ಗಂಟೆಗಳ ಕಾಲ ನಿರಂತರ ಹಿಂಸೆ ಕೊಟ್ಟಿದ್ದಾರೆ.

ಸೋನು ಮೇಲೆ ಗಂಟೆಗಟ್ಟಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು, ಒದೆಯಲಾಯಿತು, ಹೊಡೆದರು ಮತ್ತು ಬೆದರಿಕೆ ಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ರಹಿಂಸೆ ದೈಹಿಕ ಹಿಂಸೆಯನ್ನು ಮೀರಿ ಹೋಯಿತು. ಅವನನ್ನು ಮಾನಸಿಕವಾಗಿ ಕುಗ್ಗಿಸಲು ಮತ್ತು ಅವಮಾನ ಮಾಡಲು, ಆರೋಪಿಗಳು ಅವನಿಗೆ ಮೂತ್ರ ಕುಡಿಸುವಂತೆ ಒತ್ತಾಯಿಸಿದ್ದರು, ಆ ಕೃತ್ಯವನ್ನು ರೆಕಾರ್ಡ್​ ಮಾಡಲಾಗಿದೆ.

ನಂತರ ಆ ವಿಡಿಯೋವನ್ನು ಭೋಪಾಲ್‌ನಲ್ಲಿರುವ ಸೋನು ಅವರ ಕುಟುಂಬಕ್ಕೆ ಕಳುಹಿಸಲಾಯಿತು, ಇದು ಭಯ ಮತ್ತು ಹತಾಶೆಯನ್ನು ಉಂಟುಮಾಡಿತು. ಕುಟುಂಬವು ತಕ್ಷಣ ಸಹಾಯಕ್ಕಾಗಿ ಕೋಲಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿತು. ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಕೋಲಾರ ಪೊಲೀಸರು ದೃಢಪಡಿಸಿದ್ದಾರೆ.

ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ನಾವು ರಾಜಸ್ಥಾನ ಪೊಲೀಸರೊಂದಿಗೆ ನಿರಂತರ ಸಮನ್ವಯದಲ್ಲಿದ್ದೇವೆ. ಯುವಕನ ಹೇಳಿಕೆ ದಾಖಲಿಸಲಾಗುತ್ತಿದೆ ಮತ್ತು ವೀಡಿಯೊವನ್ನು ಪರಿಶೀಲಿಸಲಾಗುತ್ತಿದೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇನ್ಸ್‌ಪೆಕ್ಟರ್ ಸಂಜಯ್ ಸೋನಿ ಹೇಳಿದ್ದಾರೆ.

ಅಪಹರಣ, ಕಾನೂನುಬಾಹಿರ ಬಂಧನ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಮಾನವೀಯ ಕೃತ್ಯಗಳಿಗೆ ಸಂಬಂಧಿಸಿದ ಬಹು ವಿಭಾಗಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ.

ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ ಕಾರ್ಯಕ್ರಮದಡಿ ಪರಿಶೀಲನೆ 2024 ರಿಂದ ಚುರುಕುಗೊಂಡಿತ್ತು. 2024ರ ಮಾರ್ಚ್ ವೇಳೆಗೆ 27,380 ಜಾಗಗಳನ್ನು ಪರಿಶೀಲನೆ ನಡೆಸಲಾಗಿದ್ದರೆ, ಜುಲೈ ವೇಳೆಗೆ ಆ ಸಂಖ್ಯೆ 10.7 ಲಕ್ಷಕ್ಕೆ ಏರಿಕೆ ಕಂಡಿತ್ತು. ಸೆಪ್ಟೆಂಬರ್ ವೇಳೆಗೆ 13, ದಾಟಿತ್ತು. 2025ರ ಡಿಸೆಂಬರ್ 24ರ ವೇಳೆಗೆ ಒಟ್ಟು 13,94,519 ಸರ್ಕಾರಿ ಜಾಗಗಳನ್ನು ಪರಿಶೀಲನೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಹೇಗೆ ನಡೆದಿತ್ತು ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್?

ಗ್ರಾಮ ಲೆಕ್ಕಿಗರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು (ವಿಎಒ) ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ಭೂ ಗಡಿಗಳನ್ನು ಪರಿಶೀಲನೆ ನಡೆಸಿದ್ದರು. ಇದರಲ್ಲಿ ಅಧಿಕಾರಿಗಳು ಪ್ರತಿಯೊಂದು ಸ್ಥಳಕ್ಕೆ ಭೌತಿಕವಾಗಿ ಭೇಟಿ ನೀಡಿ, ಅದರ ಗಡಿಗಳಲ್ಲಿ ನಡೆದುಕೊಂಡು ಹೋಗಿ ಛಾಯಾಚಿತ್ರಗಳು ಮತ್ತು ಕಿರು ವೀಡಿಯೊಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು.
ಈ ವ್ಯವಸ್ಥೆಯು ಕಚೇರಿಗಳಿಂದ ದತ್ತಾಂಶ ನಮೂದನ್ನು ತಡೆಯುತ್ತದೆ, ಇದು ಆನ್-ಗ್ರೌಂಡ್ ಪರಿಶೀಲನೆಯನ್ನು ಖಚಿತಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ಡಿಜಿಟಲ್ ಪರಿಶೀಲನೆಗಳು ಇತರ ನಿರ್ದಿಷ್ಟ ಕ್ರಮಗಳ ಮೂಲಕ ಶಿಸ್ತುಬದ್ಧವಾಗಿ ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಹಿಂದೆ, ಕೆಲಸದ ಒತ್ತಡ ಮತ್ತು ಬಹು ಜವಾಬ್ದಾರಿಗಳಿಂದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಭೂಮಿ ಪರಿಶೀಲನೆ ಕಾರ್ಯವನ್ನು ತಪ್ಪಿಸುತ್ತಿದ್ದರು. ಅದಕ್ಕಾಗಿ ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ತರಬೇಕಾಯಿತು ಎಂದೂ ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು.

318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿದರ್ಭ ತಂಡವು 38 ರನ್​ಗಳ ಜಯ ಸಾಧಿಸಿದೆ. ವಿಶೇಷ ಎಂದರೆ ಇದು ವಿದರ್ಭ ತಂಡದ ಚೊಚ್ಚಲ ವಿಜಯ ಹಝಾರೆ ಟ್ರೋಫಿ. ಅಂದರೆ ಇದೇ ಮೊದಲ ಬಾರಿಗೆ ದೇಶೀಯ ಏಕದಿನ ಟೂರ್ನಿಯಲ್ಲಿ ವಿದರ್ಭ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

 

Source link

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ! – Kannada News | Virat Kohli and Rohit Sharma will be away from national duty until at least June

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ.

Source link

ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ – Kannada News | BBK 12 Winner Gilli’s Gratitude: Thanks to Sudeep, His Gang and Zee Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅವರ ಹೆಸರನ್ನು ಘೋಷಣೆ ಮಾಡಲಾಯಿತು ಎಂಬುದು ವಿಶೇಷ. ಗಿಲ್ಲಿ ನಟನಿಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಗಿಲ್ಲಿ ನಟನ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಕಿಚ್ಚನಿಗೆ ಧನ್ಯವಾದ

112 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿಯನ್ನು ಅನೇಕ ಬಾರಿ ತಿದ್ದಿದ್ದಾರೆ. ತಪ್ಪಾದಾಗ ತಪ್ಪು ಎಂದು ಹೇಳಿದ್ದಾರೆ. ಉತ್ತಮವಾಗಿ ಆಡಿದಾಗ ಚಪ್ಪಾಳೆ ನೀಡಿದ್ದಾರೆ. ಇದೆಲ್ಲವನ್ನೂ ಗಿಲ್ಲಿ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ‘ಸಾಯೋವರೆಗೂ ನಿಮ್ಮನ್ನು ಮರೆಯಲ್ಲ’ ಎಂದು ಗಿಲ್ಲಿ ಹೇಳಿದ್ದಾರೆ. ಈ ಮೂಲಕ ಕಿಚ್ಚನಿಗೆ ವಿಶೇಷ ಗೌರವ ನೀಡಿದ್ದಾರೆ.

ಗ್ಯಾಂಗ್​​ನ ಮರೆತಿಲ್ಲ ಗಿಲ್ಲಿ

ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ತಮ್ಮದೇ ಆದ ಗ್ಯಾಂಗ್ ಕಟ್ಟಿಕೊಂಡಿದ್ದರು. ಇದರಲ್ಲಿ ರಕ್ಷಿತಾ ಶೆಟ್ಟಿ, ರಘು ಹಾಗೂ ಕಾವ್ಯಾ ಪ್ರಮುಖರು. ಇವರಿಗೆ ವೇದಿಕೆ ಮೇಲೆಯೇ ಸುದೀಪ್ ಧನ್ಯವಾದ ಹೇಳಿದ್ದಾರೆ. ‘ನನ್ನ ಜರ್ನಿಯಲ್ಲಿ ಹೊರಗೆ ಅಭಿಮಾನಿಗಳು ಹೇಗೆ ಬೆಂಬಲವಾಗಿ ನಿಂತರೋ ಮನೆ ಒಳಗೆ ರಘು ಅಣ್ಣ, ರಕ್ಷಿತಾ ಹಾಗೂ ಕಾವ್ಯಾ ಬೆಂಬಲವಾಗಿ ನಿಂತರು. ಅವರಿಗೂ ಧನ್ಯವಾದ’ ಎಂದು ಗಿಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ

ಜೀ ಕನ್ನಡದ ಪೋಸ್ಟ್

ಜೀ ಕನ್ನಡ ವಾಹಿನಿಯಲ್ಲಿ ಹಲವು ಶೋಗಳನ್ನು ಮಾಡಿದವರು ಗಿಲ್ಲಿ ನಟ. ಅವರ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಜೀ ಕನ್ನಡ. ಹೀಗಾಗಿ, ಜೀ ಶುಭಾಶಯ ತಿಳಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ‘ತನ್ನ ಕಾಮಿಡಿ ಟೈಮಿಂಗ್, ಅಮೋಘ ಪ್ರತಿಭೆಯ ಮೂಲಕ ವಿಜೇತನಾಗಿ ಕರುನಾಡಿನ ಮನಗೆದ್ದ ನಮ್ಮ ಗಿಲ್ಲಿಗೆ ಅಭಿನಂದನೆ’ ಎಂದಿದೆ ಜೀ. ಈ ಪೋಸ್ಟ್​​ನ ಗಿಲ್ಲಿ ನಟ ಖುಷಿಯಿಂದ ಹಂಚಿಕೊಂಡಿದ್ದಾರೆ. ಅವರು ಏರಿದ ಏಣಿಯನ್ನು ಮರೆತಿಲ್ಲ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:32 am, Mon, 19 January 26

Source link

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ!

ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ

ಬೆಂಗಳೂರಿನ ಗಾಳಿಯ ಗುಣಮಟ್ಟ 169 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಅದರೊಂದಿಗೆ ಮಂಗಳೂರಿನ ಗಾಳಿಯಗುಣಮಟ್ಟ 185ಕ್ಕೆ ತಲುಪಿದ್ದು, ತೀರಾ ಕಳಪೆ ಮಟ್ಟಕ್ಕೆ ಕುಸಿದಿದೆ. ನಗರದಲ್ಲಿ PM2.5 ಮಟ್ಟ 84 ಹಾಗೂ PM10 ಮಟ್ಟ 116ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ.

ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –169
  • ಮಂಗಳೂರು-185
  • ಮೈಸೂರು – 104
  • ಬೆಳಗಾವಿ – 80
  • ಕಲಬುರ್ಗಿ-84
  • ಶಿವಮೊಗ್ಗ – 64
  • ಬಳ್ಳಾರಿ – 168
  • ಹುಬ್ಬಳ್ಳಿ- 86
  • ಉಡುಪಿ –171
  • ವಿಜಯಪುರ –68

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version