೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’ – Kannada News | India lose an ODI series to New Zealand at home for the first time in 37 years

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸರಣಿ ಶುರುವಾಗಿದ್ದು 1988 ರಲ್ಲಿ. ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು 4-0 ಅಂತರದಿಂದ ಸೋಲಿಸಿದ್ದರು. ಇದಾದ ಬಳಿಕ ಭಾರತಕ್ಕೆ ಆಗಮಿಸಿದ ನ್ಯೂಝಿಲೆಂಡ್ 2-3 (1995) 2-3 (1999), 0-5 (2010), 2-3 (2016), 1-2 (2017), 0-3 (2023) ಅಂತರದಿಂದ ಸರಣಿಗಳನ್ನು ಸೋತಿದ್ದರು.

Source link

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

Source link

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat kohli creates new world record with different venues century

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

Source link

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ.

ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ ಕಲಹಗಳನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಲಾಭವನ್ನು ತರಲು ಸಹಾಯ ಮಾಡುತ್ತದೆ. ಮಕ್ಕಳು ಓದುವ ಜಾಗದಲ್ಲಿ ಈ ಚಿತ್ರವನ್ನು ಇಡುವುದರಿಂದ ಅವರ ಮನಸ್ಸು ಸ್ಥಿರವಾಗಿ, ಏಕಾಗ್ರತೆ ಹೆಚ್ಚಿ ಆಲೋಚನಾ ಶಕ್ತಿ ವೃದ್ಧಿಯಾಗುತ್ತದೆ. ಇದು ನಕಾರಾತ್ಮಕ ಶಕ್ತಿಗಳನ್ನು ನಿವಾರಿಸಿ, ಮನೆಯ ಯಜಮಾನನಿಗೆ ಉದ್ಯೋಗದಲ್ಲಿ ನೆಮ್ಮದಿ ಹಾಗೂ ಗೃಹಿಣಿಗೆ ಆತ್ಮಶಕ್ತಿಯನ್ನು ಹೆಚ್ಚಿಸುತ್ತದೆ. ಈ ನಂಬಿಕೆಗಳು ಮಾನಸಿಕ ಶಾಂತಿ ಮತ್ತು ಧೈರ್ಯವನ್ನು ನೀಡುತ್ತವೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು – Kannada News | Bigg Boss Kannada 12 Winner Gilli’s Prize Money Tax: What He Really Gets

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ ಮೊತ್ತ ಅವರಿಗೆ ಸಿಗೋದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್’ ಅಲ್ಲಿ ಸ್ಪರ್ಧಿಸಿದರೆ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ಅದರಲ್ಲೂ ಗೆದ್ದವರಿಗೆ 50 ಲಕ್ಷ ರೂಪಾಯಿ ಸಿಗುತ್ತದೆ. ಗೆದ್ದ ವ್ಯಕ್ತಿಗೆ ಸಂಪೂರ್ಣ ಹಣ ಸಿಗುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿಲ್ಲ. ಹೌದು, ಬಿಗ್ ಬಾಸ್ ಪ್ರೈಜ್ ಮೊತ್ತಕ್ಕೆ ಸರ್ಕಾರ ದೊಡ್ಡ ಮೊತ್ತದ ಟ್ಯಾಕ್ಸ್ ಹೇರುತ್ತದೆ. ಆ ಮೊತ್ತ ಕೇಳಿದರೆ ಯಾರಿಗಾದರೂ ಅಚ್ಚರಿ ಆಗುತ್ತದೆ.

ತೆರಿಗೆ ಎಷ್ಟು?

ಮನರಂಜನೆ ಕ್ಷೇತ್ರದಲ್ಲಿ ಸಿಗೋ ಬಹುಮಾನ ಮೊತ್ತಕ್ಕೆ ಸರ್ಕಾರ ಬರೋಬ್ಬರಿ ಶೇ. 30ರಷ್ಟು ಟ್ಯಾಕ್ಸ್ ವಿಧಿಸುತ್ತದೆ. ಬರುವ ಒಟ್ಟೂ ಹಣದಲ್ಲಿ ಶೇ. 30ರಷ್ಟು ಹಣ ಸರ್ಕಾರಕ್ಕೆ ಟ್ಯಾಕ್ಸ್ ರೂಪದಲ್ಲಿ ಹೋಗುತ್ತದೆ. ಈ ಟ್ಯಾಕ್ಸ್ ಮೊತ್ತವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ. ಹೀಗಾಗಿ ಗಿಲ್ಲಿಗೆ ಈ ಹಣದಲ್ಲಿ ಸಿಗೋದು ಕೇವಲ 35 ಲಕ್ಷ ರೂಪಾಯಿ. ಗಿಲ್ಲಿಗೆ ಸುದೀಪ್ ಘೋಷಿಸಿರೋ 10 ಲಕ್ಷಕ್ಕೂ ಈ ಟ್ಯಾಕ್ಸ್ ಅನ್ವಯ ಆಗುತ್ತದೆಯೇ ಎಂಬ ಸ್ಪಷ್ಟನೆ ಇಲ್ಲ.

ಇದನ್ನೂ ಓದಿ: ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ

ಟಿವಿ ರಿಯಾಲಿಟಿ ಶೋ, ಲಾಟರಿ, ಸ್ಪರ್ಧೆ, ಕಾರ್ಡ್​ ಗೇಮ್​ನಲ್ಲಿ ಆಡಿ ಗೆದ್ದಲ್ಲಿ ಶೇ. 30 ತೆರಿಗೆ ಪಾವತಿಸಬೇಕು. ಕನಿಷ್ಠ 10 ಸಾವಿರ ರೂಪಾಯಿ ಇಂದ ಈ ತೆರಿಗೆ ಅನ್ವಯ ಆಗುತ್ತದೆ. ಅಂದರೆ ನೀವು ಮನರಂಜನಾ ಕ್ಷೇತ್ರದಲ್ಲಿ 10 ಸಾವಿರ ಬಹುಮಾನ ಗೆದ್ದರೆ ಮೂರು ಸಾವಿರ ಕಟ್ ಆಗಿ, 7 ಸಾವಿರ ಮಾತ್ರ ಕೈ ಸೇರುತ್ತದೆ.

ಉಳಿದ ಸ್ಪರ್ಧಿಗಳಿಗೂ ಇದು ಅನ್ವಯ

ಕೇವಲ ಗಿಲ್ಲಿ ಮಾತ್ರವಲ್ಲದೆ ರನ್ನರ್ ಅಪ್​ ಆದ ರಕ್ಷಿತಾ ಅವರೂ ತೆರಿಗೆ ಹಣ ಪಾವತಿಸಬೇಕು. ಅವರಿಗೆ ಒಟ್ಟೂ 25 ಲಕ್ಷ ರೂಪಾಯಿ ಸಿಕ್ಕಿದ್ದು, ಇದರಲ್ಲಿ ಅವರಿಗೆ 17,50,000 ಮಾತ್ರ ಸಿಗಲಿದೆ. ಉಳಿದ ಮೊತ್ತ ತೆರಿಗೆ ರೂಪದಲ್ಲಿ ಸರ್ಕಾರದ ಕೈ ಸೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಭೇಷ್ ಎಂದು ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರ – Kannada News | Karnataka Ranks Second in PM Fasal Bima Yojana Implementation, Wins Centre’s Praise and Award

ಬೆಂಗಳೂರು, ಜನವರಿ 19: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana – PMFBY) ಅನುಷ್ಠಾನದಲ್ಲಿ ಕರ್ನಾಟಕ (Karnataka) ರಾಜ್ಯವು ಎರಡನೇ ಸ್ಥಾನ ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಈ ಮಹತ್ವದ ಸಾಧನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಅಭಿನಂದಿಸಿದೆ. 2024–25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿರುವುದಕ್ಕಾಗಿ ಕರ್ನಾಟಕಕ್ಕೆ ಈ ಗೌರವ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕದಲ್ಲಿ ಒಟ್ಟು 27,04,166 ರೈತರು ಬೆಳೆ ವಿಮೆ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದು, ಇವರಲ್ಲಿ 11,85,642 ರೈತರು ವಿಮಾ ಪರಿಹಾರಕ್ಕಾಗಿ ಕ್ಲೇಮ್ ಸಲ್ಲಿಸಿದ್ದಾರೆ. ಈ ಕ್ಲೇಮ್ ಮೊತ್ತ 2,094 ಕೋಟಿ ರೂ. ಆಗಿದೆ. ನೈಸರ್ಗಿಕ ವಿಕೋಪಗಳು, ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಮಯಕ್ಕೆ ಸರಿಯಾಗಿ ಪರಿಹಾರ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದು ಈ ಸಾಧನೆಯಿಂದ ಸ್ಪಷ್ಟವಾಗಿದೆ.

ಕೇಂದ್ರ ಕೃಷಿ ಇಲಾಖೆಯು ಕರ್ನಾಟಕ ಸರ್ಕಾರದ ರೈತಪರ ನೀತಿಗಳು ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದೆ. ಬೆಳೆ ವಿಮೆ ಯೋಜನೆಯ ಮೂಲಕ ರೈತರ ಆದಾಯ ರಕ್ಷಣೆ ಹಾಗೂ ಆರ್ಥಿಕ ಭದ್ರತೆಗೆ ರಾಜ್ಯ ಸರ್ಕಾರ ನೀಡುತ್ತಿರುವ ಒತ್ತಾಸೆ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.

ಈ ಯೋಜನೆಯಡಿ ರೈತರು ಮುಂಗಾರು ಬೆಳೆಗೆ ಶೇ. 2 ಮತ್ತು ಹಿಂಗಾರು ಬೆಳೆಗೆ ಶೇ. 1.5 ರಷ್ಟು ಮಾತ್ರ ಪ್ರೀಮಿಯಂ ಪಾವತಿಸಬೇಕಾಗುತ್ತದೆ. ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಎನ್ನುವುದು ನೈಸರ್ಗಿಕ ವಿಕೋಪಗಳು, ಕೀಟಬಾಧೆ ಅಥವಾ ರೋಗಗಳಿಂದಾಗಿ ಬೆಳೆ ನಷ್ಟ ಅನುಭವಿಸುವ ರೈತರಿಗೆ ಆರ್ಥಿಕ ರಕ್ಷಣೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 2016ರಲ್ಲಿ ಜಾರಿಗೆ ತಂದ ಒಂದು ಮಹತ್ವಾಕಾಂಕ್ಷೆಯ ವಿಮಾ ಯೋಜನೆಯಾಗಿದೆ. ‘ಒಂದು ರಾಷ್ಟ್ರ, ಒಂದು ಯೋಜನೆ’ ಎಂಬ ತತ್ವದಡಿ ಕಾರ್ಯನಿರ್ವಹಿಸುವ ಈ ಯೋಜನೆಯಲ್ಲಿ, ರೈತರು ಅತ್ಯಂತ ಕಡಿಮೆ ಪ್ರೀಮಿಯಂ ದರವನ್ನು (ಮುಂಗಾರು ಬೆಳೆಗೆ ಶೇ 2, ಹಿಂಗಾರು ಬೆಳೆಗೆ ಶೇ 1.5 ಮತ್ತು ವಾಣಿಜ್ಯ/ತೋಟಗಾರಿಕೆ ಬೆಳೆಗಳಿಗೆ ಶೇ 5 ರಷ್ಟನ್ನು ರೈತರು ಪಾವತಿಸಬೇಕಾಗುತ್ತದೆ. ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ) ಪಾವತಿಸುವ ಮೂಲಕ ಬಿತ್ತನೆಯ ಪೂರ್ವ ಹಂತದಿಂದ ಕೊಯ್ಲಿನ ನಂತರದ ಹಂತದವರೆಗೆ ಸಂಭವಿಸುವ ಬೆಳೆ ಹಾನಿಗೆ ಸಮಗ್ರ ವಿಮಾ ರಕ್ಷಣೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: PMFBY- ಪಿಎಂ ಫಸಲ್ ಬಿಮಾ ಯೋಜನೆ: 30 ಲಕ್ಷ ರೈತರಿಗೆ ಕೇಂದ್ರದಿಂದ 3,200 ಕೋಟಿ ರೂ ಬಿಡುಗಡೆ

ರೈತರ ಆದಾಯವನ್ನು ಸ್ಥಿರಗೊಳಿಸಲು ಮತ್ತು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ.

ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು ಎಂಬುದು ಎಲ್ಲರ ಕೋರಿಕೆ ಆಗಿತ್ತು. ಆದರೆ, ಇದನ್ನು ಧ್ರುವಂತ್​​ಗೆ ನೀಡಿದ್ದು ಸರಿ ಅಲ್ಲ ಎಂಬ ಮಾತುಗಳು ವ್ಯಕ್ತವಾದವು. ಈ ವಿಷಯದಲ್ಲಿ ಸುದೀಪ್ ಅವರು ಸಾಕಷ್ಟು ದ್ವೇಷವನ್ನು ಕಟ್ಟಿಕೊಳ್ಳಬೇಕಾಯಿತು. ‘ಸುದೀಪ್​​ಗೆ ಗಿಲ್ಲಿಯನ್ನು ಕಂಡರೆ ಆಗೊಲ್ಲ’ ಎಂಬ ಮಾತುಗಳು ಕೇಳಿ ಬಂದವು. ಆದರೆ, ಹೃದಯದಿಂದ ಸುದೀಪ್ ಆ ರೀತಿ ಅಲ್ಲ ಎಂಬುದು ಸಾಬೀತಾಗಿದೆ.

ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. ಆ ಬಳಿಕ ಗಿಲ್ಲಿಗೆ ಅಶ್ವಸೂರ್ಯ ರಿಯಾಲಿಟೀಸ್ ಕಡೆಯಿಂದ 50 ಲಕ್ಷ ರೂಪಾಯಿ ಹಣ ಸಿಕ್ಕಿತು. ಮಾರುತಿ ಸುಜುಕಿ ಕಡೆಯಿಂದ ವಿಕ್ಟೋರಿಸ್ ಕಾರು ಕೂಡ ದೊರೆಯಿತು. ಇಷ್ಟೇ ಅಲ್ಲ, ಸುದೀಪ್ ತಾವು 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದರು. ಕಿಚ್ಚನ ನಡೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್

ಸುದೀಪ್ ಅವರು ಬಿಗ್ ಬಾಸ್ ವೇದಿಕೆಯನ್ನು ತುಂಬಾನೇ ಪ್ರೀತಿ ಮಾಡುತ್ತಾರೆ. ವೇದಿಕೆ ಏರುವ ಸ್ಪರ್ಧಿಗಳಿಗೂ ಸಾಕಷ್ಟು ಪ್ರೀತಿ ಕೊಡುತ್ತಾರೆ. ಅದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಸುದೀಪ್ ನಡೆಯನ್ನು ಎಲ್ಲರೂ ಶ್ಲಾಘಿಸಿದ್ದಾರೆ. ಗಿಲ್ಲಿ ಅವರು ಬಿಗ್ ಬಾಸ್ ವಿನ್ನರ್ ಆದರೆ, ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ. ಅವರಿಗೆ 25 ಲಕ್ಷ ರೂಪಾಯಿ ಹಣ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್​​ಬಾಸ್ ಮನೆಯ ಬೆಂಕಿಯುಂಡೆ ಅಶ್ವಿನಿಗೆ ಧಕ್ಕಲಿಲ್ಲ ಗೆಲುವು – Kannada News | Bigg Boss Kannada 12: Ashwini became second runner up

ಅಶ್ವಿನಿ, ಬಿಗ್​​ಬಾಸ್(Bigg Boss) ಕನ್ನಡ ಸೀಸನ್ 12ರ ಅಪರೂಪದ ಸ್ಪರ್ಧಿ. ಹೋರಾಟಗಾರ್ತಿ, ತಾಯಿ, ಸಹೋದರಿ, ಜಗಳಗಂಟಿ, ಮಾಸ್ಟರ್ ಮೈಂಡ್ ಹೀಗೆ ಆಟದ ಬೇರೆ ಬೇರೆ ಹಂತದಲ್ಲಿ ಬೇರೆ ಬೇರೆ ರೀತಿಯಾಗಿ ತಮ್ಮನ್ನು ತೋರ್ಪಡಿಸಿಕೊಂಡ ಅಶ್ವಿನಿ, ಗಿಲ್ಲಿಗೆ ನಿಜವಾದ ಪ್ರತಿಸ್ಪರ್ಧಿ ಎನಿಸಿಕೊಂಡಿದ್ದರು. ಅಶ್ವಿನಿಗೆ ಇರುವ ರಕ್ಷಣಾ ವೇದಿಕೆ ಹಿನ್ನೆಲೆ ಹಾಗೂ ದಿಟ್ಟ ಮಹಿಳೆಯಾಗಿ ಅವರು ಸಂಪಾದಿಸಿರುವ ಮಹಿಳಾ ಸ್ಪರ್ಧಿಗಳ ಕಾರಣಕ್ಕೆ ಅಶ್ವಿನಿ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದರು. ಆದರೆ ಅದೀಗ ಸುಳ್ಳಾಗಿದೆ ಅಶ್ವಿನಿ ಅವರು ಅದ್ಭುತವಾದ ಆಟದ ಹೊರತಾಗಿಯೂ ಎರಡನೇ ರನ್ನರ್ ಅಪ್ ಆಗಿದ್ದಾರೆ.

ಅಶ್ವಿನಿ, ಇಡೀ ಸೀಸನ್​​ನಲ್ಲಿ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ವೈರಲ್ ಆಗುತ್ತಲೇ ಇದ್ದರು. ಆರಂಭದಲ್ಲಿ ಬಲು ಗಂಭೀರವಾಗಿ, ಪ್ರಬುದ್ಧೆಯಾಗಿ ತಮ್ಮನ್ನು ತಾವು ತೋರ್ಪಡಿಸಿಕೊಂಡ ಅಶ್ವಿನಿ, ರಕ್ಷಿತಾರ ಘಟನೆಯ ಬಳಿಕ ಮನೆಯಲ್ಲಿ ವಿಲನ್ ರೀತಿ ಬಿಂಬಿತವಾಗಲು ಆರಂಭಿಸಿದರು. ಆತ್ಮಗೌರವಕ್ಕಾಗಿ ಇತರರ ಗೌರವಕ್ಕಾಗಿ, ಸ್ವ ಆತ್ಮಗೌರವಕ್ಕಾಗಿ, ಟಾಸ್ಕ್​​ಗಾಗಿ, ಅಧಿಕಾರಕ್ಕಾಗಿ ಹೀಗೆ ಹಲವು ಕಾರಣಗಳಿಗೆ ಹಲವರೊಟ್ಟಿಗೆ ಜಗಳ ಮಾಡಿದ ಅಶ್ವಿನಿ ಅವರನ್ನು ಜಗಳಗಂಟಿ ಎಂದೇ ಮನೆಯಲ್ಲಿ ಕೆಲವರು ಬಿಂಬಿಸಿದ್ದರು.

ಇದನ್ನೂ ಓದಿ:ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ

ಅಷ್ಟು ಮಾತ್ರವಲ್ಲದೆ, ತಮ್ಮಿಂದ ತಪ್ಪಾಗಿದೆ ಎಂಬುದು ಗೊತ್ತಾದಾಗ ಬಹಳ ಕಿರಿಯಳಾದ ರಕ್ಷಿತಾ ಬಳಿ ಕ್ಷಮೆ ಕೇಳಿದರು. ಸೀಸನ್​ನ ಕೊನೆಯ ವರೆಗೆ ಕೇಳುತ್ತಲೇ ಬಂದರು. ಜಗಳ ಮಾಡಿದ ರಘು ಜೊತೆಗೆ ಗೆಳೆತನ ಮಾಡಿಕೊಂಡರು. ಎಲ್ಲರೂ ದೂರ ತಳ್ಳಿದ್ದ ಧ್ರುವಂತ್ ಅನ್ನು ಗೆಳೆಯರನ್ನಾಗಿ ಮಾಡಿಕೊಂಡು ಅವರಲ್ಲಿ ಆಟದ ಸ್ಪೂರ್ತಿ ತುಂಬಿದರು. ಎಷ್ಟೇ ಜಗಳ ಆದರೂ ಮನೆಯವರಿಗೆ ಅಡುಗೆ ಮಾಡಿ ಹಾಕಿ ತಾಯಿಯಂತೆ ನೋಡಿಕೊಂಡರು.

ಗಿಲ್ಲಿ ಮತ್ತು ಗ್ಯಾಂಗ್ ಅಶ್ವಿನಿ ಅವರನ್ನು ನಾನಾ ರೀತಿಯಲ್ಲಿ ಟೀಕೆ ಮಾಡಿತ್ತು. ಸ್ವತಃ ಗಿಲ್ಲಿ, ಅಶ್ವಿನಿಯನ್ನು ‘ಮುದುಕಿ, ಹಲ್ಲು ಸೆಟ್ಟು, ಬಿಳಿ ಕೂದಲು’ ಎಂದೆಲ್ಲ ಹೀನಾಯವಾಗಿ ಟೀಕೆ ಮಾಡಿದ್ದರು, ಅಷ್ಟೆಲ್ಲ ಅವಮಾನಗಳು ಆದರೂ ಸಹ ಒಮ್ಮೆ ಸಹ ಬಿಟ್ಟು ಕೊಡದೆ ಹೋರಾಡಿದರು. ಸ್ವತಃ ಗಿಲ್ಲಿಯೇ ಅವರಷ್ಟು ಗಟ್ಟಿ ಮಹಿಳೆಯನ್ನು ನಾನು ನೋಡಿಲ್ಲ ಎಂದುಬಿಟ್ಟರು. ಅವಶ್ಯಕತೆ ಇದ್ದಾಗ ಹುಲಿಯಂತೆ ಹೋರಾಡಿದ ಅಶ್ವಿನಿ, ಸುದೀಪ್ ಹೇಳಿದರೆಂದು ಅಚಾನಕ್ಕಾಗಿ ತಮ್ಮ ವ್ಯಕ್ತಿತ್ವವನ್ನೇ ಬದಲಾಯಿಸಿಕೊಂಡು ಮೆತ್ತಗಾಗಿಬಿಟ್ಟರು, ಅವಮಾನಗಳನ್ನು ನಗುವಿಂದಲೇ ಸಹಿಸಿಕೊಂಡರು. ಒಟ್ಟಾರೆ ಎಲ್ಲ ರೀತಿಯಲ್ಲಿಯೂ ಅಶ್ವಿನಿ ಆಟ ಆಡಿದರು.

ಸುದೀಪ್ ಅವರು ಸ್ವತಃ ಅಶ್ವಿನಿಯ ಆಟವನ್ನು ಬಹುವಾಗಿ ಕೊಂಡಾಡಿದರು. ಅಶ್ವಿನಿ ಅವರ ಛಲ, ಕಿಚ್ಚು, ಅವರ ಪ್ರಬುದ್ಧತೆಯನ್ನು ಸುದೀಪ್ ಅವರು ಹೊಗಳಿದರು. ಅಶ್ವಿನಿ ಅವರು ಸಹ ಖುಷಿಯಿಂದಲೇ ಎವಿಕ್ಷ್ ಅನ್ನು ಒಪ್ಪಿಕೊಂಡು ಇತರೆ ಸ್ಪರ್ಧಿಗಳಾದ ರಕ್ಷಿತಾ ಮತ್ತು ಗಿಲ್ಲಿಗೆ ಶುಭ ಹಾರೈಸಿದರು. ಮಾತ್ರವಲ್ಲದೆ, ಸೀಸನ್​​ನ ಆರಂಭದಲ್ಲಿ ಮಾಡಿದ ತಪ್ಪಿಗೆ ಮತ್ತೊಮ್ಮೆ ರಕ್ಷಿತಾಗೆ ಕ್ಷಮೆ ಕೇಳಿ ವೇದಿಕೆಯಿಂದ ಕೆಳಗಿಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:34 pm, Sun, 18 January 26

Source link

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ.

ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ ಅವರು ರನ್ನರ್​ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಳ್ಳಬೇಕಿತ್ತು.ಇದನ್ನು ಗಿಲ್ಲಿ ಕೂಡ ಹೇಳಿಕೊಂಡಿದ್ದರು. ಅವರಿಗೆ ಈ ವಿಷಯದಲ್ಲಿ ತುಂಬಾನೇ ಬೇಸರ ಇತ್ತು. ಕೊನೆಗೂ ಗಿಲ್ಲಿಗೆ ಗೆಲುವು ಸಿಕ್ಕಿದೆ. ಅವರು ಬರೋಬ್ಬರಿ 40 ಕೋಟಿಗೂ ಅಧಿಕ ಮತ ಪಡೆದಿದ್ದಾರೆ.

ಕಳೆದ ಬಾರಿಯ ವಿನ್ನರ್ ಹನುಮಂತ 5 ಕೊಟಿ ವೋಟ್ ಪಡೆದಿದ್ದರು. ಇದಕ್ಕಿಂತ ಹತ್ತು ಪಟ್ಟು ವೋಟ್​​ನ ಗಿಲ್ಲಿ ಪಡೆದುಕೊಂಡಿದ್ದಾರೆ ಎಂಬುದು ವಿಶೇಷ. ಗಿಲ್ಲಿ ಕ್ರೇಜ್​​ಗೆ ವೋಟಿಂಗ್ ಲೈನ ಶೇಕ್ ಆಗಿದೆ. ಗಿಲ್ಲಿ ಫ್ಯಾನ್ಸ್ ಕ್ರೇಜ್ ಏನು ಎಂಬುದು ಗೊತ್ತಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಂಟ್ರಿ ಕೊಟ್ಟಾಗಲೇ ಕ್ರೇಜ್ ನಿಧಾನಕ್ಕೆ ಆರಂಬ ಆಯಿತು. ಯಾವಾಗ ಅಶ್ವಿನಿ ಜೊತೆ ಅವರು ಸೆಣೆಸಾಟಕ್ಕೆ ಇಳಿದರೋ ಆಗ ಅವರ ಕ್ರೇಜ್ ಹೆಚ್ಚುತ್ತಾ ಹೋಯಿತು. ಅವರು ಕೊಡೋ ತಿರುಗೇಟಿಗೆ ಎಲ್ಲರೂ ಫಿದಾ ಆದರು. ಪ್ರತಿ ಹಂತದಲ್ಲೂ ಹಾಸ್ಯ ಮಾಡುತ್ತಾ ಮನರಂಜನೆ ನೀಡಿದರು. ಈ ಕಾರಣದಿಂದ ಗಿಲ್ಲಿ ನಟ ಎಲ್ಲರಿಗೂ ಇಷ್ಟ ಆದರು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಗಿಲ್ಲಿಯ ಅಭಿಮಾನಿ ಆದರು. ನಂತರದಲ್ಲಿ ಅವರಿಗೆ ಕಾಂಪಿಟೇಟರ್ ಇಲ್ಲ ಎಂಬಂತಾಯಿತು. ಕೊನೆಗೂ ಅವರು ಗೆದ್ದು ಬೀಗಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?

ಗಿಲ್ಲಿಗೆ 50 ಲಕ್ಷ ಕ್ಯಾಶ್ ಪ್ರೈಸ್ ಸಿಕ್ಕಿದೆ. ಇದರ ಜೊತೆಗೆ ಮಾರುತಿ ಸುಜುಕಿ ವಿಕ್ಟರಿಸ್ ಕಾರ್ ಅವರ ಕೈ ಸೇರಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಗಿಲ್ಲಿ ಜೀವನ ಇದರಿಂದ ಮತ್ತಷ್ಟು ಸುಧಾರಿಸಲಿದೆ ಎಂಬುದು ಅಭಿಮಾನಿಗಳ ಆಶಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:35 pm, Sun, 18 January 26

Source link

Exit mobile version