RCB ವಿರುದ್ಧ ಸಿಡಿಲಬ್ಬರ… ಐಪಿಎಲ್ ಇತಿಹಾಸ ಬದಲಿಸಿದ SRH

Source link

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ? – Kannada News | Ranbir Kapoor’s Ramayana Part 1 Preponed to Oct 30, 2026; What it Means for Yash

ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ ಅಕ್ಟೋಬರ್ 30, 2026ರಂದೇ ಸಿನಿಮಾ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.

ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ದೀಪಾವಳಿ ಹಬ್ಬದ ರಜೆಯ ದಿನಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಹಬ್ಬದ ವಾರದಲ್ಲೇ ರಿಲೀಸ್ ಮಾಡುವ ಬದಲು, ಒಂದು ವಾರ ಮೊದಲೇ ಸಿನಿಮಾ ರಿಲೀಸ್ ಮಾಡಿ ಸಿನಿಮಾಗೆ ಬಾಯ್ಮಾತಿನ ಪ್ರಚಾರ ನೀಡಲು ತಂಡ ಪ್ಲಾನ್ ಮಾಡಿಕೊಂಡಿದೆ ಎಂದು ವರದಿ ಆಗಿದೆ.

ಮೊದಲ ವಾರವೇ ಸಿನಿಮಾ ಭದ್ರವಾಗಿ ನೆಲೆಯೂರಿದರೆ, ಎರಡನೇ ವಾರದಲ್ಲಿ ಬರುವ ದೀಪಾವಳಿ ರಜೆಗಳ ಸರಣಿಯಲ್ಲಿ ಚಿತ್ರದ ಕಲೆಕ್ಷನ್ ಮೊದಲ ವಾರಕ್ಕಿಂತ ದುಪ್ಪಟ್ಟಾಗಲಿದೆ ಎನ್ನುವುದು ಚಿತ್ರತಂಡದ ಲೆಕ್ಕಾಚಾರ. ಸದ್ಯ ವಿತರಕರೊಂದಿಗೆ ಬರೋಬ್ಬರಿ 450 ಕೋಟಿ ಬಿಸಿನೆಸ್ ಮಾತುಕತೆ ನಡೆಯುತ್ತಿದ್ದು, ಡೀಲ್ ಕ್ಲೋಸ್ ಆದ ತಕ್ಷಣವೇ ಅಕ್ಟೋಬರ್ 30ರ ಹೊಸ ರಿಲೀಸ್ ಡೇಟ್ ಅಧಿಕೃತವಾಗಿ ಹೊರಬೀಳಲಿದೆ.

‘ಟಾಕ್ಸಿಕ್’ ಚಿತ್ರಕ್ಕೂ ಎದುರಾಯ್ತಾ ರಿಲೀಸ್ ಒತ್ತಡ?

‘ರಾಮಾಯಣ’ ಚಿತ್ರದ ಈ ಹೊಸ ಮಾಸ್ಟರ್ ಪ್ಲಾನ್‌ನಿಂದಾಗಿ ಈಗ ಯಶ್ ಅವರ ಮತ್ತೊಂದು ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ (Toxic) ಮೇಲೂ ಇದರ ಪ್ರಭಾವ ಬೀರುವ ಸಾಧ್ಯತೆ ಇದೆ. ಯಶ್ ಅವರು ‘ರಾಮಾಯಣ’ದಲ್ಲಿ ರಾವಣನ ಪಾತ್ರ ಮಾಡುತ್ತಿರುವುದರಿಂದ, ಒಂದೇ ವರ್ಷ ಅವರ ಎರಡು ಬಿಗ್ ಸಿನಿಮಾಗಳು ಮುಖಾಮುಖಿಯಾಗುತ್ತಿವೆ. ಚಿತ್ರರಂಗದ ನಿಯಮದ ಪ್ರಕಾರ, ‘ರಾಮಾಯಣ’ ಅಕ್ಟೋಬರ್ ಕೊನೆಯಲ್ಲಿ ಬರುವುದರಿಂದ ಅದಕ್ಕೂ ಕನಿಷ್ಠ ಎರಡು ತಿಂಗಳು ಮೊದಲೇ, ಅಂದರೆ ಆಗಸ್ಟ್ ತಿಂಗಳಲ್ಲೇ ‘ಟಾಕ್ಸಿಕ್’ ಸಿನಿಮಾವನ್ನು ರಿಲೀಸ್ ಮಾಡಬೇಕಾದ ಅನಿವಾರ್ಯತೆ ಚಿತ್ರತಂಡಕ್ಕೆ ಎದುರಾಗಲಿದೆ. ಇಲ್ಲದಿದ್ದರೆ ಎರಡೂ ಚಿತ್ರಗಳ ಕಲೆಕ್ಷನ್ ಹಾಗೂ ಹೈಪ್ ಮೇಲೆ ಹೊಡೆತ ಬೀಳುವ ಆತಂಕವಿದೆ.

ಇದನ್ನೂ ಓದಿ: ಸಾಯಿ ಪಲ್ಲವಿ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ರಾಮಾಯಣ’ ಟೀಂ

ಇನ್ನು ‘ರಾಮಾಯಣ’ ಸಿನಿಮಾದ ಎರಡನೇ ಭಾಗವನ್ನು ಮುಂದಿನ ವರ್ಷ ಅಂದರೆ 2027ರ ದೀಪಾವಳಿಗೆ ರಿಲೀಸ್ ಮಾಡಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

TV9 Kannada News Live: ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಹಿಂದೂಗಳದ್ದೇ ತರಕಾರು, ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ, ಇವು ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Cow Slaughter Debate, Aishwarya’s Cannes Moment and Kohli Head Clash Dominate News Cycle Today’s Biggest Headlines Across India

ನವದೆಹಲಿ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದು, ತಮ್ಮ ಹಬ್ಬಗಳಲ್ಲಿ ಗೋ ಹತ್ಯೆ ಮಾಡುವುದಿಲ್ಲ ಎಂದು ಹೇಳಿವೆ. ಆದರೆ ಅಚ್ಚರಿ ಎಂಬಂತೆ ಹಿಂದೂಗಳು ಗೋ ಹತ್ಯೆ ನಿಷೇಧದ ವಿರುದ್ಧ ಬೀದಿಗಿಳಿದಿದ್ದಾರೆ ಇದಕ್ಕೆ ಕಾರಣ ಇಲ್ಲಿದೆ.

ಪಶ್ಚಿಮ ಬಂಗಾಳದ ಹೊಸ ಸರ್ಕಾರವು ರಾಜ್ಯದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜಾನುವಾರುಗಳ ವಧೆಯನ್ನು ನಿಷೇಧಿಸಿ, 1950ರ ಕಾನೂನು ಮತ್ತು ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ. ಮುಂಬರುವ ಬಕ್ರೀದ್ ಹಬ್ಬದ ಮುನ್ನವೇ ಜಾರಿಯಾಗಿರುವ ಈ ಕಠಿಣ ನಿಯಮಗಳಿಗೆ ತಡೆ ನೀಡಲು ಹೈಕೋರ್ಟ್ ಕೂಡ ನಿರಾಕರಿಸಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ
ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಆರಾಧ್ಯ ಬಚ್ಚನ್ ಕೆಂಪು ಬಣ್ಣದ ಗೌನ್ ಧರಿಸಿ ಕಂಗೊಳಿಸಿದರು. ಐಶ್ವರ್ಯಾ ರೈ ಗುಲಾಬಿ ಬಣ್ಣದ ಆಕರ್ಷಕ ಉಡುಪಿನಲ್ಲಿ ಅದ್ಭುತವಾಗಿ ಕಾಣಿಸಿಕೊಂಡರು. ಐಶ್ವರ್ಯಾ ಅವರ ಡ್ರೆಸ್ ಹೂವಿನ ಅಲಂಕಾರದಿಂದ ಕೂಡಿದ್ದು, ಎಂದಿನ ತಮ್ಮ ಸಿಗ್ನೇಚರ್ ರೆಡ್ ಲಿಪ್ಸ್ಟಿಕ್ ಬದಲಿಗೆ ಈ ಬಾರಿ ಲೈಟ್ ಮೇಕ್ಅಪ್ ಲುಕ್‌ನಲ್ಲಿ ಎಲ್ಲರ ಮನ ಗೆದ್ದರು. ಸದ್ಯ ಇವರಿಬ್ಬರ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ: ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ

ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ.

ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್ ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ ಔಟಾಗಿ ಹೊರ ನಡೆಯುತ್ತಿದ್ದ ಹೆಡ್ ಅವರ ಮುಂದೆ ಆಕ್ರೋಶಭರಿತರಾಗಿ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದರು. ಇದಾಗ್ಯೂ ಟ್ರಾವಿಸ್ ಹೆಡ್ ಯಾವುದೇ ತಿರುಗೇಟು ನೀಡಿರಲಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..!

ಮಾತಿನ ಚಕಮಕಿ… ಕ್ರೀಡಾ ಸ್ಫೂರ್ತಿಯನ್ನೇ ಮರೆತ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯವು ಕೇವಲ ರನ್‌ಗಳ ಮಳೆಯಿಂದಷ್ಟೇ ಅಲ್ಲ, ಇಬ್ಬರು ಜಾಗತಿಕ ಕ್ರಿಕೆಟ್ ದಿಗ್ಗಜರ ವಾಕ್ಸಮರದಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್​ ನಡುವೆ ನಡೆದ ತೀವ್ರ ಮಾತಿನ ಚಕಮಕಿ ಹಾಗೂ ಪಂದ್ಯದ ಬಳಿಕ ಕೊಹ್ಲಿ ನಡೆದುಕೊಂಡು ರೀತಿ ಇದೀಗ ಚರ್ಚಾ ವಿಷಯವಾಗಿದೆ.
ಎಸ್‌ಆರ್‌ಎಚ್ ಇನಿಂಗ್ಸ್ ವೇಳೆ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್ ಸಲಾಮ್ ದಾರ್ ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಈ ವೇಳೆ ಮೈದಾನದಲ್ಲಿದ್ದ ವಿರಾಟ್ ಕೊಹ್ಲಿ, ಹೆಡ್ ಮುಂದೆಯೇ ಅತ್ಯಂತ ಆಕ್ರಮಣಕಾರಿಯಾಗಿ ಕಿರುಚಾಡಿ ಸಂಭ್ರಮಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..! – Kannada News | What happened between Virat Kohli and Travis Head in RCB vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ…

ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ ಔಟಾಗಿ ಹೊರ ನಡೆಯುತ್ತಿದ್ದ ಹೆಡ್ ಅವರ ಮುಂದೆ ಆಕ್ರೋಶಭರಿತರಾಗಿ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದರು. ಇದಾಗ್ಯೂ ಟ್ರಾವಿಸ್ ಹೆಡ್ ಯಾವುದೇ ತಿರುಗೇಟು ನೀಡಿರಲಿಲ್ಲ.

ಹೆಡ್ ಸವಾಲು: 256 ರನ್​ಗಳ ಕಠಿಣ ಗುರಿ ಬೆನ್ನತ್ತಲು ಬಂದ ವಿರಾಟ್ ಕೊಹ್ಲಿಗೆ ಆಕ್ರಮಣಕಾರಿಯಾಗಿ ಆಡುವಂತೆ ಟ್ರಾವಿಸ್ ಹೆಡ್ ಸವಾಲು ಹಾಕಿದ್ದಾರೆ. ಅಂದರೆ ಈ ಪಂದ್ಯದಲ್ಲಿ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ್ದರು. ಈ ವೇಳೆ ಬಿಗ್ ಶಾಟ್ ಆಡು ನೋಡೋಣ ಎಂದು ಹೆಡ್ ಕೆಣಕಿದ್ದಾರೆ.

ಕೊಹ್ಲಿ ತಿರುಗೇಟು: ಟ್ರಾವಿಸ್ ಹೆಡ್ ಸವಾಲಿಗೆ ತಿರುಗೇಟು ನೀಡಿದ ವಿರಾಟ್ ಕೊಹ್ಲಿ, “ಈಗ ನೀನು ಇಂಪ್ಯಾಕ್ಟ್ ಸಬ್‌ ಆಟಗಾರ ಅಲ್ಲ, ಬಂದು ಎರಡು ಓವರ್ ಬೌಲಿಂಗ್ ಮಾಡು” ಎಂದು ವ್ಯಂಗ್ಯವಾಡಿದ್ದಾರೆ.

ಹೆಡ್ ಕಿಚಾಯಿಸುವಿಕೆ: ಈ ಮಾತಿನ ಚಕಮಕಿ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ(15) ಔಟ್ ಆಗಿದ್ದಾರೆ. ಇತ್ತ ಕೊಹ್ಲಿ ಔಟಾಗಿ ಪೆವಿಲಿಯನ್‌ಗೆ ಮರಳುವಾಗ ಹೆಡ್, “ಫ್ರೆಂಡ್, ನಾನು ಬೌಲಿಂಗ್ ಮಾಡಲು ಬರುವ ಮುನ್ನವೇ ನೀನು ಔಟ್ ಆಗಿ ಹೋದೆ!” ಎಂದು ಕಿಚಾಯಿಸಿದ್ದಾರೆ.

ಈ ವಾಕ್ಸಮರ ಇಲ್ಲಿಗೆ ಮುಗಿಯಬೇಕಿತ್ತು. ಆದರೆ ವಿರಾಟ್ ಕೊಹ್ಲಿ ಪಂದ್ಯದ ನಂತರ ಕೂಡ ಈ ಕೋಪ-ತಾಪವನ್ನು ಮುಂದುವರೆಸಿದ್ದರು.

ಶೇಕ್​ ಹ್ಯಾಂಡ್ ನೀಡದ ಕೊಹ್ಲಿ:

ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ 55 ರನ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಲು ಮೈದಾನಕ್ಕೆ ಬಂದರು. ಈ ವೇಳೆ ಟ್ರಾವಿಸ್ ಹೆಡ್ ಕೈ ಚಾಚಿದರೂ, ವಿರಾಟ್ ಕೊಹ್ಲಿ ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಮುಖ ತಿರುಗಿಸಿಕೊಂಡು ನೇರವಾಗಿ ಪ್ಯಾಟ್ ಕಮಿನ್ಸ್ ಕಡೆಗೆ ನಡೆದು ಹೋದರು. ಅಂದರೆ ಹೆಡ್​ಗೆ ಶೇಕ್ ಹ್ಯಾಂಡ್ ಮಾಡಲು ನಿರಾಕರಿಸಿದರು.

ಇದೀಗ ವಿರಾಟ್ ಕೊಹ್ಲಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಅಲ್ಲದೆ ಈ ವಿಡಿಯೋಗೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಕ್ಲಾಸೆನ್ ಕ್ಲಾಸ್​ಗೆ ಹಳೆಯ ದಾಖಲೆ ಧೂಳೀಪಟ

ಕ್ರೀಡಾ ಸ್ಫೂರ್ತಿಯನ್ನೇ ಮರೆತ ಕೊಹ್ಲಿ:

    • ಮೈದಾನದಲ್ಲಿ ಎಷ್ಟೇ ತೀವ್ರವಾದ ಪೈಪೋಟಿ, ವೈಷಮ್ಯ ಅಥವಾ ಸ್ಲೆಡ್ಜಿಂಗ್ ನಡೆದಿದ್ದರೂ, ಪಂದ್ಯ ಮುಗಿದ ತಕ್ಷಣ ಆಟಗಾರರು ಕೈಕುಲುಕುವ ಮೂಲಕ ಆ ಎಲ್ಲ ಕಹಿ ಘಟನೆಗಳನ್ನು ಮೈದಾನದಲ್ಲೇ ಬಿಟ್ಟು ಬರಬೇಕು ಎಂಬುದು ಕ್ರಿಕೆಟ್‌ನ ಅಲಿಖಿತ ನಿಯಮ.
    • ಟ್ರಾವಿಸ್ ಹೆಡ್ ಪಂದ್ಯದ ನಂತರ ಹಳೆಯದ್ದನ್ನು ಮರೆತು ಕೈ ಚಾಚಿದಾಗ, ಕೊಹ್ಲಿ ಅದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸಿದ್ದು ಕ್ರೀಡೆಯ ಮೂಲ ಆಶಯಕ್ಕೆ ಧಕ್ಕೆ ತಂದಿದೆ.
    • ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ, ಅವರು ಜಾಗತಿಕ ಕ್ರಿಕೆಟ್‌ನ ಅತಿ ದೊಡ್ಡ ಐಕಾನ್. ಕೋಟ್ಯಂತರ ಯುವ ಕ್ರಿಕೆಟಿಗರು ಅವರನ್ನು ರೋಲ್ ಮಾಡೆಲ್ ಆಗಿ ನೋಡುತ್ತಾರೆ.
    • ಇಂತಹ ಹಿರಿಯ ಆಟಗಾರನೇ ಮೈದಾನದಲ್ಲಿ ವೈಯಕ್ತಿಕ ದ್ವೇಷವನ್ನು ಇಟ್ಟುಕೊಂಡು ವರ್ತಿಸಿದರೆ, ಅದು ಉದಯೋನ್ಮುಖ ಆಟಗಾರರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕ್ರಿಕೆಟ್ ಮೈದಾನದಲ್ಲಿ ಆಟಗಾರರ ನಡುವೆ ಆವೇಶ, ಆಕ್ರೋಶಗಳು ಸಹಜ. ಆದರೆ ಪಂದ್ಯ ಮುಗಿದ ಬಳಿಕ ಪರಸ್ಪರ ಹಸ್ತಲಾಘವ ಮಾಡುವುದು ಕೇವಲ ಶಿಷ್ಟಾಚಾರವಲ್ಲ, ಅದು ಕ್ರೀಡೆಗೆ ನೀಡುವ ಗೌರವ. ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವಿನ ಈ ಮುನಿಸು ಐಪಿಎಲ್ ಇತಿಹಾಸದ ಕಹಿ ಘಟನೆಗಳ ಸಾಲಿಗೆ ಸೇರಿದ್ದರೂ, ಮುಂಬರುವ ಪಂದ್ಯಗಳಲ್ಲಿ ಇಬ್ಬರೂ ಹಳೆಯದ್ದನ್ನು ಮರೆತು ಕ್ರೀಡಾ ಸ್ಫೂರ್ತಿ ಮೆರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

Published On – 10:44 am, Sat, 23 May 26

Source link

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರ ಸಮ್ಮತಿ, ಆದ್ರೆ ಹಿಂದೂಗಳದ್ದೇ ಆಕ್ಷೇಪ, ಏಕೆ? – Kannada News | West Bengal Cow Slaughter Ban: Why Muslims Support, But Hindus Oppose

ಕೋಲ್ಕತ್ತಾ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದು, ತಮ್ಮ ಹಬ್ಬಗಳಲ್ಲಿ ಗೋ ಹತ್ಯೆ ಮಾಡುವುದಿಲ್ಲ ಎಂದು ಹೇಳಿವೆ. ಆದರೆ ಅಚ್ಚರಿ ಎಂಬಂತೆ ಹಿಂದೂಗಳು ಗೋ ಹತ್ಯೆ ನಿಷೇಧದ ವಿರುದ್ಧ ಬೀದಿಗಿಳಿದಿದ್ದಾರೆ ಇದಕ್ಕೆ ಕಾರಣ ಇಲ್ಲಿದೆ.

ಪಶ್ಚಿಮ ಬಂಗಾಳದ ಹೊಸ ಸರ್ಕಾರವು ರಾಜ್ಯದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜಾನುವಾರುಗಳ ವಧೆಯನ್ನು ನಿಷೇಧಿಸಿ, 1950ರ ಕಾನೂನು ಮತ್ತು ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ. ಮುಂಬರುವ ಬಕ್ರೀದ್ ಹಬ್ಬದ ಮುನ್ನವೇ ಜಾರಿಯಾಗಿರುವ ಈ ಕಠಿಣ ನಿಯಮಗಳಿಗೆ ತಡೆ ನೀಡಲು ಹೈಕೋರ್ಟ್ ಕೂಡ ನಿರಾಕರಿಸಿದೆ.

ಮೇ 13ರಂದು ಹೊರಡಿಸಲಾದ ಹೊಸ ಸರ್ಕಾರಿ ಆದೇಶದ ಪ್ರಕಾರ, ಯಾವುದೇ ಎತ್ತು, ಹಸು ಅಥವಾ ಎಮ್ಮೆಯನ್ನು ವಧೆ ಮಾಡಬೇಕಾದರೆ, ಅದು ವಧೆಗೆ ಸೂಕ್ತವಾಗಿದೆ ಎಂದು ಪಶುವೈದ್ಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಜಂಟಿ ಪ್ರಮಾಣಪತ್ರ ನೀಡುವುದು ಕಡ್ಡಾಯವಾಗಿದೆ. ಹಬ್ಬದ ಸಂದರ್ಭದಲ್ಲಿ ಈ ನಿಯಮ ಸಡಿಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ್ದು, ಸರ್ಕಾರದ ನಿರ್ಧಾರ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ಓದಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ಸು ಪಡೆಯುವ ತೀರ್ಮಾನ ತೆಗೆದುಕೊಂಡಿಲ್ಲ, ಸಂಪುಟ ಸಭೆಯಲ್ಲಿ ಚರ್ಚಿಸಲಿದ್ದೇವೆ: ಸಿದ್ದರಾಮಯ್ಯ

ವ್ಯಾಪಾರಿಗಳು ಮತ್ತು ರೈತರ ಆಕ್ಷೇಪಕ್ಕೆ ಅಸಲಿ ಕಾರಣವೇನು?
ಈ ಕಾಯ್ದೆಯು ಧಾರ್ಮಿಕ ಆಚರಣೆಗಿಂತ ಹೆಚ್ಚಾಗಿ ಗ್ರಾಮೀಣ ಭಾಗದ ಜನರ ಆರ್ಥಿಕತೆಯ ಮೇಲೆ ಭಾರಿ ಪರಿಣಾಮ ಬೀರಿದೆ. ಬಂಗಾಳದಾದ್ಯಂತ ಇರುವ ಜಾನುವಾರು ಮಾರುಕಟ್ಟೆಗಳು ಈಗ ಸಂಪೂರ್ಣವಾಗಿ ಕಳೆಗುಂದಿವೆ. ಹಬ್ಬದ ಸಮಯದಲ್ಲಿ ಹಸು ಹಾಗೂ ಎಮ್ಮೆಗಳನ್ನು ಮಾರಾಟ ಮಾಡಿ ವರ್ಷದ ಬಹುದೊಡ್ಡ ಆದಾಯ ಗಳಿಸುತ್ತಿದ್ದ ಹೈನುಗಾರರು ಮತ್ತು ವ್ಯಾಪಾರಿಗಳಿಗೆ ಈ ಹೊಸ ನಿಯಮ ತೀವ್ರ ನಿರಾಶೆ ಮೂಡಿಸಿದೆ.

ಪ್ರತಿದಿನ ಸುಮಾರು 2,000 ಹಸುಗಳನ್ನು ಮಾರಾಟ ಮಾಡುತ್ತಿದ್ದ ಪ್ರಸಿದ್ಧ ‘ಪೋಲೆರ್ಹತ್ ಗೋರು ಹಾತ್’ ಮಾರುಕಟ್ಟೆಯಲ್ಲಿ ಈಗ ಹಬ್ಬದ ಸನಿಹದಲ್ಲೂ ಕೇವಲ ಒಂದೆರಡು ಡಜನ್ ಜಾನುವಾರುಗಳು ಮಾತ್ರ ಕಾಣ ಸಿಗುತ್ತಿವೆ. ಜಾನುವಾರು ವ್ಯಾಪಾರ ಹಾಗೂ ಮಾಂಸದ ಉದ್ಯಮವನ್ನು ನಂಬಿಕೊಂಡಿರುವ ಸಾಗಣೆದಾರರು, ಚರ್ಮದ ವ್ಯಾಪಾರಿಗಳು ಮತ್ತು ಕಸಾಯಿಖಾನೆ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಹೀಗಾಗಿ, ಗ್ರಾಮೀಣ ಭಾಗದಲ್ಲಿ ವಯಸ್ಸಾದ ಜಾನುವಾರುಗಳನ್ನು ಸಾಕುವುದು ಹೊರೆಯಾಗುವುದರಿಂದ ಮತ್ತು ಹಬ್ಬದ ವ್ಯಾಪಾರಕ್ಕೆ ಕುತ್ತು ಬಂದಿರುವುದರಿಂದ ಸ್ಥಳೀಯ ರೈತರು ಮತ್ತು ವ್ಯಾಪಾರಿ ವಲಯದಿಂದ ಈ ನಿಯಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜಾನುವಾರುಗಳ ವಧೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ 1950 ರ ಕಾನೂನು ಮತ್ತು 2018 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ಹೊಸ ನಿಯಮದಲ್ಲೇನಿದೆ?
ಮೇ 13 ರಂದು ಹೊರಡಿಸಲಾದ ಹೊಸ ಸಾರ್ವಜನಿಕ ಪ್ರಕಟಣೆಯ ಪ್ರಕಾರ, ರಾಜ್ಯದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜಾನುವಾರುಗಳನ್ನು ವಧೆ ಮಾಡುವಂತಿಲ್ಲ. ಅಷ್ಟೇ ಅಲ್ಲದೆ, ಎತ್ತು, ಹೋರಿ, ಹಸು, ಕರು ಮತ್ತು ಎಮ್ಮೆಗಳನ್ನು ವಧೆ ಮಾಡಬೇಕಾದರೆ ಅವು ವಧೆಗೆ ಯೋಗ್ಯವಾಗಿವೆ ಎಂದು ಪಶುವೈದ್ಯರು ಹಾಗೂ ಪುರಸಭೆಯ ಅಧ್ಯಕ್ಷರು ಅಥವಾ ಪಂಚಾಯತ್ ಮುಖ್ಯಸ್ಥರು ಜಂಟಿ ಪ್ರಮಾಣಪತ್ರ ನೀಡುವುದು ಕಡ್ಡಾಯಗೊಳಿಸಲಾಗಿದೆ. ಈ ರೀತಿ ಪ್ರಮಾಣೀಕರಿಸಿದ ಪ್ರಾಣಿಗಳನ್ನು ಸಹ ಕೇವಲ ಸರ್ಕಾರ ಅನುಮೋದಿಸಿದ ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶ ನೀಡಲಾಗಿದೆ.

ಈದ್ ಅಲ್-ಅಧಾ (ಬಕ್ರೀದ್) ಹಬ್ಬದ ಸಂದರ್ಭದಲ್ಲಿ ಜಾನುವಾರು ವಧೆಯನ್ನು ನಿರ್ಬಂಧಿಸುವ ಸರ್ಕಾರದ ಈ ಅಧಿಸೂಚನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ, ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಪಾರ್ಥ ಸಾರಥಿ ಸೇನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಅರ್ಜಿಗಳನ್ನು ವಜಾಗೊಳಿಸಿದೆ.

ಸರ್ಕಾರದ ಮೇ 13 ರ ಅಧಿಸೂಚನೆಯು 2018 ರಲ್ಲಿ ನ್ಯಾಯಾಲಯವೇ ನೀಡಿದ್ದ ನಿರ್ದೇಶನಗಳ ಅನ್ವಯ ಇರುವುದರಿಂದ, ಇದರಲ್ಲಿ ಹಸ್ತಕ್ಷೇಪ ಮಾಡಲು ಅಥವಾ ತಡೆ ನೀಡಲು ಯಾವುದೇ ಆಧಾರಗಳಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Lakshmi Narayana Yoga: ಲಕ್ಷ್ಮಿ ನಾರಾಯಣ ಯೋಗ; ಮೇ 29 ರಿಂದ ಈ 4 ರಾಶಿಯವರು ಮುಟ್ಟಿದೆಲ್ಲಾ ಚಿನ್ನ! – Kannada News | Lakshmi Narayana Yoga: 4 Zodiac Signs to Gain Immense Wealth and Success by May End

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಈ ಸಂಚಾರದಿಂದಾಗಿ ಜಾತಕದಲ್ಲಿ ಕೆಲವು ಅತ್ಯಂತ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇಂತಹ ಪವಿತ್ರ ಮತ್ತು ಶಕ್ತಿಶಾಲಿ ಯೋಗಗಳಲ್ಲಿ ಒಂದಾದ ‘ಲಕ್ಷ್ಮಿ ನಾರಾಯಣ ಯೋಗ’ ಮೇ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ.

ಮೇ 29 ರಂದು ಬುಧ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದು, ಜೂನ್ 8 ರವರೆಗೆ ಅಲ್ಲಿಯೇ ಸಂಚರಿಸಲಿದೆ. ಈ ಅವಧಿಯಲ್ಲಿ ಸೃಷ್ಟಿಯಾಗುವ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಕೆಲವು ರಾಶಿಯವರ ಜೀವನದಲ್ಲಿ ಸಂಪತ್ತು, ಅದೃಷ್ಟ ಮತ್ತು ಸಂತೋಷ ದುಪ್ಪಟ್ಟಾಗಲಿದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮುಖ್ಯವಾಗಿ ಈ ಕೆಳಗಿನ ನಾಲ್ಕು ರಾಶಿಯವರಿಗೆ ಈ ಯೋಗವು ಅನಿರೀಕ್ಷಿತ ಧನಲಾಭ ಹಾಗೂ ಅಭೂತಪೂರ್ವ ಯಶಸ್ಸನ್ನು ತರಲಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಮಿಥುನ ರಾಶಿ (Gemini):

ಲಕ್ಷ್ಮಿ ನಾರಾಯಣ ಯೋಗವು ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಅತ್ಯುತ್ತಮ ಫಲಿತಾಂಶಗಳನ್ನು ನೀಡಲಿದೆ. ದೀರ್ಘಕಾಲದಿಂದ ನಿಂತಿದ್ದ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿವೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭದ ಪ್ರಮಾಣ ಹೆಚ್ಚಾಗಲಿದೆ. ಹಳೆಯ ಹೂಡಿಕೆಗಳಿಂದ ಉತ್ತಮ ಆದಾಯ ಹರಿದುಬರಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ. ಸಾಲದ ಬಾಧೆಗಳು ಕಡಿಮೆಯಾಗಿ, ಆರ್ಥಿಕ ಪರಿಸ್ಥಿತಿ ಸದೃಢವಾಗಲಿದೆ. ಸುದೀರ್ಘ ಪ್ರಯಾಣದ ಯೋಗವೂ ಇವರಿಗಿದೆ.

ಸಿಂಹ ರಾಶಿ (Leo):

ಸಿಂಹ ರಾಶಿಯವರಿಗೆ ಈ ಯೋಗವು ಅನಿರೀಕ್ಷಿತ ಧನಲಾಭವನ್ನು ತರಲಿದೆ. ಉದ್ಯೋಗದಲ್ಲಿ ಬಡ್ತಿ (Promotion) ಸಿಗುವ ಸಾಧ್ಯತೆಗಳಿದ್ದು, ಹೊಸ ಜವಾಬ್ದಾರಿಗಳು ಅಥವಾ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ವ್ಯಾಪಾರವನ್ನು ವಿಸ್ತರಿಸಲು ಇದು ಅತ್ಯಂತ ಸೂಕ್ತವಾದ ಸಮಯ. ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ಗೌರವ ಹಾಗೂ ಮನ್ನಣೆ ಹೆಚ್ಚಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದ್ದು, ಆದಾಯದ ಮೂಲಗಳು ಹೆಚ್ಚಾಗಲಿವೆ.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ಕನ್ಯಾ ರಾಶಿ (Virgo):

ಕನ್ಯಾ ರಾಶಿಯವರ ವೃತ್ತಿಜೀವನದಲ್ಲಿ (Career) ಈ ಲಕ್ಷ್ಮಿ ನಾರಾಯಣ ಯೋಗವು ಹೊಸ ತಿರುವು ನೀಡಲಿದೆ. ಉದ್ಯೋಗದಲ್ಲಿ ಪ್ರಗತಿ, ಸಂಬಳ ಹೆಚ್ಚಳ ಹಾಗೂ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ಬಹಳ ದಿನಗಳಿಂದ ನಿಂತುಹೋಗಿದ್ದ ಕೆಲಸಗಳು ಪುನರಾರಂಭಗೊಂಡು ಯಶಸ್ವಿಯಾಗಲಿವೆ. ವಿದೇಶದಲ್ಲಿ ಉದ್ಯೋಗದ ಅವಕಾಶಗಳನ್ನು ಹುಡುಕುತ್ತಿರುವವರಿಗೆ ಈ ಸಮಯ ಪೂರಕವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿರತೆ ಲಭಿಸಲಿದೆ.

ತುಲಾ ರಾಶಿ (Libra):

ತುಲಾ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಒಪ್ಪಂದಗಳು ಕೈಗೂಡಲಿವೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಹಳೆಯ ಸಾಲಗಳನ್ನು ತೀರಿಸಲು ಸಾಧ್ಯವಾಗುತ್ತದೆ. ಹೊಸ ಮನೆ ಅಥವಾ ವಾಹನವನ್ನು ಖರೀದಿಸುವ ಯೋಗ ನಿಮಗಿದೆ. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿಯ ವಾತಾವರಣ ನೆಲೆಸಲಿದೆ. ವಿದೇಶ ಪ್ರಯಾಣದ ಕನಸು ಹೊಂದಿರುವವರಿಗೆ ಅವಕಾಶಗಳು ಒದಗಿ ಬರಲಿವೆ.

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಜ್ಯೋತಿಷ್ಯ ಮತ್ತು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಯಾವುದೇ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಸಂಬಂಧಪಟ್ಟ ತಜ್ಞರನ್ನು ಸಂಪರ್ಕಿಸುವುದು ಸೂಕ್ತ.)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದೆಡೆ ಡೀಸೆಲ್ ಸಿಗ್ತಿಲ್ಲ, ಇನ್ನೊಂದೆಡೆ ಬಿತ್ತನೆ ಬೀಜ ಸಿಗ್ತಿಲ್ಲ! ಹಾವೇರಿಯಲ್ಲಿ ರೈತರ ಪರದಾಟ – Kannada News | Haveri Farmers Distress: Long Queues for Seeds and Diesel Shortage Hits Agriculture

ಹಾವೇರಿ, ಮೇ 23: ಮುಂಗಾರು ಆರಂಭದ ಬೆನ್ನಲ್ಲೇ ಹಾವೇರಿ (Haveri) ಜಿಲ್ಲೆಯ ಅನ್ನದಾತರು ಬಿತ್ತನೆ ಬೀಜ ಹಾಗೂ ಡೀಸೆಲ್‌ಗಾಗಿ ತೀವ್ರ ಪರದಾಡುವಂತಾಗಿದ್ದು, ಕೃಷಿ ಇಲಾಖೆ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಒಂದು ಕಡೆ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ಕೃಷಿ ಕೇಂದ್ರಗಳ ಮುಂದೆ ಜಾಗರಣೆ ಮಾಡುತ್ತಿದ್ದರೆ, ಇನ್ನೊಂದೆಡೆ ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್​ಗಳೀಗೆ ಡೀಸೆಲ್ ಸಿಗದೆ ಬಂಕ್‌ಗಳ ಮುಂದೆ ಜನ ಕ್ಯೂ ನಿಂತಿದ್ದಾರೆ.

ಮುಖ್ಯಾಂಶಗಳು

  • ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ರಾತ್ರಿಯಿಡೀ ಕ್ಯೂನಲ್ಲಿ ನಿಂತಿದ್ದಾರೆ.
  • ಕೃಷಿ ಇಲಾಖೆಯ ವಿಳಂಬ ನೀತಿಯಿಂದಾಗಿ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • ಉಳುಮೆ ಮಾಡಲು ಡೀಸೆಲ್ ಸಿಗದೆ ಪೆಟ್ರೋಲ್ ಬಂಕ್‌ಗಳ ಮುಂದೆ ನೂಕುನುಗ್ಗಲು ಉಂಟಾಗಿದೆ.

ಬಿತ್ತನೆ ಬೀಜಕ್ಕಾಗಿ ರಾತ್ರಿಯಿಡೀ ಜಾಗರಣೆ

ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳ್ಳಿಹಳ್ಳಿ ಕೃಷಿ ಕೇಂದ್ರದ ಮುಂದೆ ಸೋಯಾಬೀನ್ ಹಾಗೂ ಶೇಂಗಾ ಬಿತ್ತನೆ ಬೀಜಕ್ಕಾಗಿ ರೈತರು ಕಳೆದ ಎರಡು ದಿನಗಳಿಂದ ಪರದಾಡುತ್ತಿದ್ದಾರೆ. ಕೃಷಿ ಇಲಾಖೆಯ ನೆಟ್‌ವರ್ಕ್ ಸಮಸ್ಯೆ ಮತ್ತು ಅಧಿಕಾರಿಗಳ ವಿಳಂಬ ನೀತಿಯಿಂದಾಗಿ ಸಕಾಲಕ್ಕೆ ಬೀಜ ಸಿಗುತ್ತಿಲ್ಲ. ಇದರಿಂದ ಬೇಸತ್ತ ಅನ್ನದಾತರು, ಬಿತ್ತನೆ ಬೀಜ ಕೈತಪ್ಪಿ ಹೋಗಬಹುದು ಎಂಬ ಆತಂಕದಲ್ಲಿ ರಾತ್ರಿಯಿಡೀ ಕೃಷಿ ಕೇಂದ್ರದ ಮುಂದೆಯೇ ಕ್ಯೂನಲ್ಲಿ ಮಲಗಿ ಜಾಗರಣೆ ಮಾಡಿದ್ದಾರೆ. ಜಿಲ್ಲೆಯ ಹಲವು ಕಡೆಗಳಲ್ಲಿ ಬೀಜಕ್ಕಾಗಿ ತೀವ್ರ ನೂಕುನುಗ್ಗಲು ಉಂಟಾಗಿದ್ದು, ರೈತರು ಕೃಷಿ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ ಹಾವೇರಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಕಳ್ಳತನ: ತಿಜೋರಿ ಸಮೇತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಡೀಸೆಲ್‌ಗೂ ಶುರುವಾಯ್ತು ಹಾಹಾಕಾರ

ಕೇವಲ ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಇಂಧನ ಕೊರೆತಯೂ ಎದುರಾಗಿದೆ. ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಿಗದೆ ಹಾವೇರಿ ಹೊರವಲಯದ ಪೆಟ್ರೋಲ್ ಬಂಕ್‌ಗಳಲ್ಲಿ ರೈತರು ಮುಗಿಬಿದ್ದಿದ್ದಾರೆ. ತಾಲ್ಲೂಕು ಕೇಂದ್ರಗಳಲ್ಲಿ ಇಂಧನದ ಕೊರತೆ ಎದುರಾಗಿದ್ದು, ಬಂಕ್ ಮಾಲೀಕರು ರೈತರ ಕ್ಯಾನ್‌ಗಳಿಗೆ ಡೀಸೆಲ್ ಹಾಕಲು ನಿರಾಕರಿಸುತ್ತಿದ್ದಾರೆ. ಕೈಯಲ್ಲಿ ದುಡ್ಡಿದ್ದರೂ ಜಮೀನು ಹದಗೊಳಿಸಲು ಡೀಸೆಲ್ ಸಿಗುತ್ತಿಲ್ಲ. ಇತ್ತ ಬಿತ್ತನೆ ಬೀಜಕ್ಕೂ ಪರದಾಡುವಂತಾಗಿದೆ. ಹೀಗಾದರೆ ನಾವು ಜೀವನ ಮಾಡುವುದಾದರೂ ಹೇಗೆ? ಎಂದು ರೈತರು ಕಣ್ಣೀರು ಹಾಕುತ್ತಾ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಆರಾಧ್ಯ ಬಚ್ಚನ್ ಕೆಂಪು ಬಣ್ಣದ ಗೌನ್ ಧರಿಸಿ ಕಂಗೊಳಿಸಿದರು. ಐಶ್ವರ್ಯಾ ರೈ ಗುಲಾಬಿ ಬಣ್ಣದ ಆಕರ್ಷಕ ಉಡುಪಿನಲ್ಲಿ ಅದ್ಭುತವಾಗಿ ಕಾಣಿಸಿಕೊಂಡರು. ಐಶ್ವರ್ಯಾ ಅವರ ಡ್ರೆಸ್ ಹೂವಿನ ಅಲಂಕಾರದಿಂದ ಕೂಡಿದ್ದು, ಎಂದಿನ ತಮ್ಮ ಸಿಗ್ನೇಚರ್ ರೆಡ್ ಲಿಪ್ಸ್ಟಿಕ್ ಬದಲಿಗೆ ಈ ಬಾರಿ ಲೈಟ್ ಮೇಕ್ಅಪ್ ಲುಕ್‌ನಲ್ಲಿ ಎಲ್ಲರ ಮನ ಗೆದ್ದರು. ಸದ್ಯ ಇವರಿಬ್ಬರ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಈ ಮೊದಲು ಐಶ್ವರ್ಯಾ ರೈ ಪ್ರಸಿದ್ಧ ಡಿಸೈನರ್ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ‘ಅಬಿಸ್ ಬ್ಲೂ’ ಬಣ್ಣದ ಕೌತುಕದ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಬೆಳಕಿಗೆ ತಕ್ಕಂತೆ ಬಣ್ಣ ಬದಲಾಯಿಸುವ ಈ ವಿಶಿಷ್ಟ ಕಾಸ್ಮಿಕ್ ಡ್ರೆಸ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸೌಂಡ್ ಮಾಡಿತ್ತು.

ಇದನ್ನೂ ಓದಿ: ಮಗಳು ಆರಾಧ್ಯಾ ಜೊತೆ ಕಾನ್ ಸಿನಿಮೋತ್ಸವಕ್ಕೆ ತೆರಳಿದ ಐಶ್ವರ್ಯಾ ರೈ

ಈ ವರ್ಷ ಕಾನ್ ಸಿನಿಮೋತ್ಸವದಲ್ಲಿ ಐಶ್ವರ್ಯಾ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಳ್ಳದಿದ್ದಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ, ವರದಿಗಳ ಪ್ರಕಾರ ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಈಗ ಮಗಳ ಜೊತೆ ಗ್ರಾಂಡ್ ಎಂಟ್ರಿ ಕೊಡುವ ಮೂಲಕ ತಮ್ಮ ಗ್ಲೋಬಲ್ ಕ್ರೇಜ್ ಅನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ಲಾಸೆನ್ ಕ್ಲಾಸ್​ಗೆ ಹಳೆಯ ದಾಖಲೆ ಧೂಳೀಪಟ

Source link

World Turtle Day 2026: ಮನುಷ್ಯದ ಸ್ವಾರ್ಥದಿಂದ ಅಳಿವಿನಂಚಿಗೆ ತಲುಪಿವೆ ಆಮೆಗಳ ಸಂತತಿ – Kannada News | World Turtle Day 2026: Why is it important to celebrate World Turtle Day? Here is the information

ಈ ಭೂಮಿಯ ಮೇಲಿರುವ ಪ್ರತಿಯೊಂದು ಜೀವ ವೈವಿಧ್ಯವೂ ಪರಿಸರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ತಮ್ಮದೇ ಆದ ಪಾತ್ರವನ್ನು ವಹಿಸುತ್ತಿವೆ. ಅದೇ ರೀತಿ ಸರೀಸೃಪ ಗುಂಪಿಗೆ ಸೇರಿದ ಸಾದು ಜೀವಿಯಾದ ಆಮೆಗಳು (Turtle) ಸಹ ಪರಿಸರ ವ್ಯವಸ್ಥೆಯನ್ನು ಸ್ಥಿರವಾಗಿಡುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಹೌದು ಆಲಿವ್‌ ರಿಡ್ಲಿ, ಲೆದರ್‌ ಬ್ಯಾಕ್‌ ಮುಂತಾದ ಸಮುದ್ರ ಆಮೆಗಳು ಕರಾವಳಿ ಪ್ರದೇಶಗಳನ್ನು ಸ್ವಚ್ಛಗೊಳಿಸವಲ್ಲಿ ಮತ್ತು ಸತ್ತ ಮೀನುಗಳನ್ನು ಕೊಳೆತ ಸಸ್ಯರಾಶಿಗಳನ್ನು ತಿನ್ನುವ ಮೂಲಕ ಸಮುದ್ರವನ್ನು ಸ್ವಚ್ಛವಾಗಿಡುವಲ್ಲಿ  ಮತ್ತು ಭೂಮಿಯ ಮೇಲೆ ವಾಸಿಸುವ ಆಮೆಗಳು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಇಂದು ಅಕ್ರಮ ಬೇಟೆ, ಆವಸಸ್ಥಾನದ ನಷ್ಟ, ಹವಾಮಾನ ಬದಲಾವಣೆ ಇವೆಲ್ಲದರ ಕಾರಣದಿಂದಾಗಿ ಅವೆಷ್ಟೋ ಜಾತಿಯ ಆಮೆಗಳು ಅಳಿವಿನಂಚಿಗೆ ತಲುಪಿವೆ, ಅವುಗಳ ಅಸ್ತಿತ್ವಕ್ಕೆ ಕಂಟಕ ಎದುರಾಗಿದೆ. ಹಾಗಾಗಿ ಆಮೆಗಳನ್ನು ಸಂರಕ್ಷಿಸಲು, ಪರಿಸರ ವ್ಯವಸ್ಥೆಯಲ್ಲಿ ಅವುಗಳು ವಹಿಸುವ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 23 ರಂದು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆಮೆ ದಿನದ ಇತಿಹಾಸವೇನು?

ವಿಶ್ವ ಆಮೆ ದಿನದ ಆಚರಣೆಯನ್ನು 2000 ನೇ ಇಸವಿಯಲ್ಲಿ ಅಮೆರಿಕನ್‌ ಟಾರ್ಟಾಯಿಸ್‌ ರೆಸ್ಕ್ಯೂ ಎಂಬ ಲಾಭರಹಿತ ಸಂಸ್ಥೆ ಪ್ರಾರಂಭಿಸಿತು.  ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಆಮೆಗಳನ್ನು ರಕ್ಷಿಸುವ ಅವುಗಳಿಗೆ ಸುರಕ್ಷಿತ ಸ್ಥಳವನ್ನು ಒದಗಿಸಿ ಕೊಡುವ ಉದ್ದೇಶವನ್ನು ಇಟ್ಟುಕೊಂಡು ಈ ದಿನದ ಆಚರಣೆಯನ್ನು ಪ್ರಾರಂಭಿಸಲಾಯಿತು.

ವಿಜ್ಞಾನಿಗಳು ಹೇಳುವ ಪ್ರಕಾರ ಅಮೆಗಳು ಈ ಭೂಮಿಯ ಮೇಲಿರುವ ಅತ್ಯಂತ ಹಳೆಯ ಪ್ರಾಣಿಗಳಾಗಿವೆ. ಆಮೆಗಳು ಭೂಮಿಯ ಮೇಲೆ ಸುಮಾರು 220 ಮಿಲಿಯನ್‌ ವರ್ಷಗಳಿಂದ ಅಸ್ತಿತ್ವದಲ್ಲಿವೆ. ಅಂದರೆ ಡೈನೋಸಾರ್‌ ಭೂಮಿಯ ಮೇಲೆ ಬರುವುದಕ್ಕೂ ಮುಂಚೆಯೇ ಇವುಗಳ ಅಸ್ತಿತ್ವವಿತ್ತು. ಆದರೆ ಇಂದು ಇವುಗಳ ಅಸ್ತಿತ್ವಕ್ಕೆ ಬೆದರಿಕೆ ಉಂಟಾಗಿದೆ. ಹಾಗಾಗಿ ಇವುಗಳ ರಕ್ಷಣೆಯ ಉದ್ದೇಶದಿಂದ ಈ ಲಾಭರಹಿತ ಸಂಸ್ಥೆ ಈ ವಿಶೇಷ ದಿನದ ಆಚರಣೆಯನ್ನು 2000 ನೇ ಇಸವಿಯಲ್ಲಿ ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಈ ವಿಶೇಷ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಆಮೆ ದಿನದ ಮಹತ್ವವೇನು?

  • ಜಗತ್ತಿನಲ್ಲಿ 300 ಜಾತಿಯ ಆಮೆಗಳಿದ್ದು, ಅವುಗಳಲ್ಲಿ 129 ಜಾತಿಯ ಆಮೆಗಳು ಅಳಿವಿನಂಚಿನಲ್ಲಿವೆ. ಹಾಗಾಗಿ ಇವುಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಆಮೆ ದಿನವನ್ನು ಆಚರಿಸಲಾಗುತ್ತದೆ.
  • ಆಮೆಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸುವುದು, ಅಕ್ರಮ ವ್ಯಾಪಾರ, ಬೇಟೆಯಾಡುವಿಕೆಯನ್ನು ತಡೆಗಟ್ಟುವುದು ಈ ದಿನದ ಉದ್ದೇಶವಾಗಿದೆ.
  • ಈ ವಿಶೇಷ ದಿನವು ಆಮೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬುದನ್ನು ನಮಗೆ ನೆನಪಿಸುತ್ತದೆ.
  • ಈ ದಿನ ಜನರಿಗೆ ಶಿಕ್ಷಣ ನೀಡುವ, ಆಮೆಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಕಡಲ ತೀರಗಳನ್ನು ಸ್ವಚ್ಛಗೊಳಿಸುವುದು, ಆಮೆಗಳ ಆವಾಸಸ್ಥಾನಗಳನ್ನು ಸ್ವಚ್ಛಗೊಳಿಸುವುದು ಇತ್ಯಾದಿ ಕಾರ್ಯಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ಜೀವ ವೈವಿಧ್ಯತೆಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ

ಆಮೆಗಳ ಕುರಿತ ಅದ್ಭುತ ಸಂಗತಿಗಳು:

  • ಆಮೆಗಳು ಭೂಮಿಯ ಮೇಲಿನ ಅತ್ಯಂತ ಹಳೆಯ ಜೀವಿಗಳಲ್ಲಿ ಒಂದಾಗಿದ್ದು, ಸುಮಾರು 220 ದಶಲಕ್ಷ ವರ್ಷಗಳಿಂದ ಅಸ್ತಿತ್ವದಲ್ಲಿವೆ.
  • ಆಮೆಗಳು  ಭೂಮಿಯ ಮೇಲಿನ ಅತಿ ಹೆಚ್ಚು ಕಾಲ ಬದುಕುವ ಜೀವಿಗಳಲ್ಲಿ ಒಂದಾಗಿದೆ. ಈ ಸರೀಸೃಪವು 150 ವರ್ಷಗಳಿಗೂ ಹೆಚ್ಚು ಕಾಲ ಬದುಕುತ್ತದೆ ಎಂದು ನಂಬಲಾಗಿದೆ.
  • ಕೆಲವು ಜಾತಿಯ ಆಮೆಗಳು ನೀರಿನ ಅಡಿಯಲ್ಲಿ 6 ಗಂಟೆಗಳವರೆಗೆ ತಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳಬಲ್ಲವು.
  • ಸಮುದ್ರ ಆಮೆಗಳು ವಿಶೇಷವಾಗಿ ಸಂತಾನೋತ್ಪತ್ತಿ ಅವಧಿಯಲ್ಲಿ 10,000 ಕಿಲೋಮೀಟರ್‌ಗಳವರೆಗೆ ಪ್ರಯಾಣಿಸಬಹುದು.
  • ಆಮೆಗಳಿಗೆ ಹಲ್ಲುಗಳಿಲ್ಲ,ಅವು ಆಹಾರವನ್ನು ಜಗಿಯಲು ತಮ್ಮ ಕೊಕ್ಕಿನಂತಹ ಬಾಯಿಗಳನ್ನು ಬಳಸುತ್ತವೆ.
  • ಪ್ರಪಂಚದಾದ್ಯಂತ 300 ಕ್ಕೂ ಹೆಚ್ಚು ಜಾತಿಯ ಆಮೆಗಳಿವೆ. ಆದಾಗ್ಯೂ, ಇವುಗಳಲ್ಲಿ 129 ಜಾತಿಗಳು ಅಳಿವಿನಂಚಿನಲ್ಲಿವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version