ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ನವದೆಹಲಿ, ಮಾರ್ಚ್ 25: ಜಾಗತಿಕ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಅಗತ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan), ಒಡಿಶಾದ ಜಾಜ್‌ಪುರ ಜಿಲ್ಲೆಯ ಚಾಂಡಿಖೋಲ್‌ನಲ್ಲಿ 4 ಮಿಲಿಯನ್ ಮೆಟ್ರಿಕ್ ಟನ್ (MMT) ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು (SPR) ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಕಾರ್ಯಗತಗೊಳಿಸಲು ಒತ್ತಾಯಿಸಿದ್ದಾರೆ.

ಒಡಿಶಾದ ಚಾಂಡಿಖೋಲ್‌ನಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿರುವ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಎನ್​ಐ ಜೊತೆ ಮಾತನಾಡಿರುವ ಅವರು, “ನಾನು ಒಡಿಶಾದ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿಯವರಿಗೆ ಪತ್ರ ಬರೆದಿದ್ದೇನೆ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ನಾವು ಶೀಘ್ರದಲ್ಲೇ ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ನಿರ್ಮಿಸುವ ಕೆಲಸವನ್ನು ಪ್ರಾರಂಭಿಸಿದರೆ ಅದು ದೇಶದ ಭದ್ರತೆಗಾಗಿ ದೇಶದ ತೈಲ ನಿಕ್ಷೇಪಗಳಲ್ಲಿ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಎನ್‌ಇಪಿ ಮತ್ತು ಪಿಎಂಶ್ರೀ ಕುರಿತ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸಚಿವ ಸಂಪುಟವು 2018ರ ಜೂನ್ 27ರಂದು ಚಾಂಡಿಖೋಲೆ SPR ಯೋಜನೆಯನ್ನು ಅನುಮೋದಿಸಿತ್ತು. ಆಗಿನ ರಾಜ್ಯ ನಾಯಕತ್ವದೊಂದಿಗೆ ಈ ಹಿಂದೆ ಮಾತುಕತೆ ನಡೆಸಿದ್ದರೂ ಅದರ ಅನುಷ್ಠಾನವು ಸ್ಥಗಿತಗೊಂಡಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

2025ರ ಏಪ್ರಿಲ್ 8ರಂದು ನವದೆಹಲಿಯಲ್ಲಿ EPIKOL, ಒಡಿಶಾ ಸರ್ಕಾರ ಮತ್ತು ISPRL ನಡುವೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದಾಗ ಈ ಯೋಜನೆಯ ಪ್ರಗತಿ ಪುನರಾರಂಭವಾಯಿತು. ಸುಮಾರು 8,743 ಕೋಟಿ ರೂ. ಮೌಲ್ಯದ ಈ ಯೋಜನೆಯು ಭಾರತದ ಅತಿದೊಡ್ಡ ಭೂಗತ ಕಚ್ಚಾ ತೈಲ ನಿಕ್ಷೇಪವಾಗಲಿದೆ. ಇದು ನೇರವಾಗಿ ಮತ್ತು ಪರೋಕ್ಷವಾಗಿ 5,000ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

30 ಕೋಟಿ ರೂ. ಇದ್ದರೂ ಹಾಳಾಯ್ತು ಯೂಟ್ಯೂಬರ್ ಜೀವನ; ನಡೆಯಲು ಆಗದ ಸ್ಥಿತಿ

‘ನನಗೆ ಮತ್ತೆ ನಡೆಯಲು ಸಾಧ್ಯವಿಲ್ಲವೇ ಅಂತ ಆತಂಕವಾಗುತ್ತಿದೆ’ ಎಂದು ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ (Anurag Dobhal) ಅವರು ಕಣ್ಣೀರು ಹಾಕುತ್ತಿದ್ದಾರೆ. ಯೂಟ್ಯೂಬರ್ ಆಗಿ ಖ್ಯಾತಿ ಪಡೆದಿದ್ದ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಬಿಗ್ ಬಾಸ್ 17ರ ಸ್ಪರ್ಧಿಯಾಗಿದ್ದ ಅನುರಾಗ್ ದೊಭಾಲ್ ಅವರ ಜೀವನ ಈಗ ನರಕ ಆಗಿದೆ. 30 ಕೋಟಿ ರೂಪಾಯಿ ಆಸ್ತಿ ಇದ್ದರೂ ಕೂಡ ಅವರು ನಡೆಯಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ಅಪ್‌ಡೇಟ್ (Anurag Dobhal Health Update) ತಿಳಿದು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿದೆ.

ಶಸ್ತ್ರಚಿಕಿತ್ಸೆಗಳ ನಂತರ ಆಸ್ಪತ್ರೆಯಿಂದ ವಿಡಿಯೋ ಹಂಚಿಕೊಂಡಿರುವ ಅನುರಾಗ್, ‘ಜೀವನದಲ್ಲಿ ನಾನು ಮತ್ತೆ ಎಂದಾದರೂ ನಡೆಯಲು ಸಾಧ್ಯವೇ ಅಥವಾ ಇಲ್ಲವೇ’ ಎಂಬ ನೋವಿನ ಶೀರ್ಷಿಕೆ ನೀಡಿದ್ದಾರೆ. ವಿಡಿಯೋದಲ್ಲಿ ಅವರು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿರುವುದು ಕಾಣಬಹುದು. ‘ನನ್ನ ಒಂದು ಕಾಲು ಸಂಪೂರ್ಣವಾಗಿ ಮರಗಟ್ಟಿದೆ. ಅದನ್ನು ಸರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಸೊಂಟದ ಭಾಗದಲ್ಲಿ ಶಸ್ತ್ರಚಿಕಿತ್ಸೆ ಮಾಡಿರುವುದರಿಂದ ಕಾಲಿನ ನರಗಳು ಹಾನಿಗೊಳಗಾಗಿವೆ. ನಾನು ಹೇಗೆ ಗುಣಮುಖನಾಗುತ್ತೇನೋ ಗೊತ್ತಿಲ್ಲ’ ಎಂದು ಕಣ್ಣೀರಿಟ್ಟಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ಅನುರಾಗ್ ದೊಭಾಲ್ ಅವರು ‘ಇದು ನನ್ನ ಕೊನೆಯ ವಿಡಿಯೋ’ ಎಂದು ಯೂಟ್ಯೂಬ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಪ್ರೇಯಸಿ ರಿತಿಕಾ ಜೊತೆ ಅಂತರ್​ಜಾತಿ ವಿವಾಹ ಮಾಡಿಕೊಂಡಿದ್ದಕ್ಕೆ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ತಮ್ಮ ಬ್ಯಾಂಕ್ ಖಾತೆಯ ನಿಯಂತ್ರಣವನ್ನು ಕೂಡ ಕುಟುಂಬದವರು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಮಾರ್ಚ್ 7ರಂದು ದೆಹಲಿ-ಮೀರಟ್ ಎಕ್ಸ್‌ಪ್ರೆಸ್‌ವೇನಲ್ಲಿ ತಮ್ಮ ಟೊಯೋಟಾ ಫಾರ್ಚುನರ್ ಕಾರನ್ನು 140-150 ಕಿಲೋಮೀಟರ್ ವೇಗದಲ್ಲಿ ಚಲಾಯಿಸುತ್ತಾ ಇನ್‌ಸ್ಟಾಗ್ರಾಮ್ ಲೈವ್ ಬಂದಿದ್ದ ಅನುರಾಗ್ ದೊಭಾಲ್ ಅವರು, ಭೀಕರವಾಗಿ ಅಪಘಾತಕ್ಕೀಡಾಗಿದ್ದರು. ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ಐಸಿಯುಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಅಭಿಮಾನಿಗಳ ಹಾರೈಕೆ: ಅನುರಾಗ್ ಅವರ ಈ ವಿಡಿಯೋ ನೋಡಿ ಅಭಿಮಾನಿಗಳು ಮರುಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಕಾಮೆಂಟ್ ಸೆಕ್ಷನ್‌ನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಈ ಹಂತದಲ್ಲಿ ಮಾನಸಿಕ ಧೈರ್ಯ ಮುಖ್ಯ ಎಂದು ಹಲವರು ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ.

19 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರ ಮಂಚೇನಹಳ್ಳಿ ಗ್ರಾಮದ ನಾಗಮಣಿ ಎಂಬಾಕೆಯನ್ನ ಆಂಧ್ರ ಮೂಲದ ಕದರಿ ಎಂಬ ಗ್ರಾಮಕ್ಕೆ ಸೇರಿದ್ದ ಸುರೇಶ್ ಮದುವೆಯಾಗಿದ್ದ. ಈ ದಂಪತಿ ಇಬ್ಬರು ಮಕ್ಕಳು ಕೂಡ ಇದ್ದಾರಂತೆ. ಮದುವೆಯಾಗಿ ಹತ್ತಾರು ವರ್ಷ ಸಂಸಾರ ಮಾಡಿದ ಸುರೇಶ್​ ಮೊದಲ ಪತ್ನಿಯನ್ನ ಬಿಟ್ಟು 2ನೇ ಮದುವೆಯಾಗಲು ಮುಂದಾಗಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮುನೇಶ್ವರ ದೇಗುಲದ ಬಳಿ ಸುರೇಶ್​ ಎಂಬಾತನ ಎರಡನೇ ಮದುವೆ ಕೂಡ ನಡೆದಿತ್ತು. ಇನ್ನೇನು ತಾಳಿ ಕಟ್ಟೋ ಸಮಯಕ್ಕೆ ಸರಿಯಾಗಿ ಬಂದ ನಾಗಮಣಿ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ನೋಡಿ: ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್

ಇನ್ನೂ ಪೊಲೀಸರ ಸಮೇತ ಮೊದಲ ಪತ್ನಿ ಎಂಟ್ರಿಕೊಡುತ್ತಿದ್ದಂತೆಯೇ ಗಂಡ ಕಕ್ಕಾಬಿಕ್ಕಿಯಾಗಿದ್ದಾರೆ. ಮೊದಲನೆ ಪತ್ನಿಗೆ ವಿಚ್ಚೇಧನ ನೀಡದೆ ಎರಡನೆ ಮದುವೆಯಾಗುವುದು ತಪ್ಪು ಎಂದು ಬುದ್ದಿವಾದ ಹೇಳಿದ್ದು ಮದುವೆಯನ್ನ ನಿಲ್ಲಿಸಿದ್ದು, ಸಿಂಗಾರಗೊಂಡು ಮದುವೆಗೆ ಸಿದ್ದವಾಗಿ ಕುಳಿತಿದ್ದ ಸುರೇಶ್ ನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ನೆಲಮಂಗಲ, ಮಾ.25: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಈ ಕಿರಾತಕ ಕೃತ್ಯ ನಡೆದಿದ್ದು, ಇತರ ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದಾರೆ. ಇಬ್ಬರು ಯುವಕರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಜನನಿಬಿಡ ರಸ್ತೆಯಲ್ಲೇ ಮುಂದಿನ ಚಕ್ರವನ್ನು ಗಾಳಿಯಲ್ಲಿ ಎತ್ತಿ (Wheelie) ಚಲಿಸುವ ಮೂಲಕ ಜೀವದ ಹಂಗು ತೊರೆದು ಸ್ಟಂಟ್ ಮಾಡಿದ್ದಾರೆ. ರಸ್ತೆಯು ಸ್ಟಂಟ್ ಮಾಡುವ ವೇದಿಕೆಯಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಈ ಯುವಕರ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸಣ್ಣ ತಪ್ಪು ಸಂಭವಿಸಿದರೂ ಇದು ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಬಹುದು. ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರ ಚಾಲನಾ ಪರವಾನಗಿಯನ್ನು (DL) ರದ್ದುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು @Karnataka Portfolio ಎಕ್ಸ್​ ಖಾತೆ ಹಂಚಿಕೊಂಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಎಂ ಇಂಟರ್ನ್​ಸಿಪ್ ಸ್ಕೀಮ್ ಪರಿಷ್ಕೃತ ಮಾರ್ಗಸೂಚಿ; ವಯೋಮಿತಿಯಲ್ಲಿ ಬದಲಾವಣೆ, ಭತ್ಯೆ ಹೆಚ್ಚಳ, ಇಂಟರ್ನ್ ಅವಧಿ ಕಿರಿದು

ನವದೆಹಲಿ, ಮಾರ್ಚ್ 25: ಯುವಜನರ ಕೌಶಲ್ಯಾಭಿವೃದ್ಧಿ ಉದ್ದೇಶದಿಂದ ಸರ್ಕಾರ ಪ್ರಾಯೋಗಿಕವಾಗಿ ನಡೆಸುತ್ತಿರುವ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಸ್ಕೀಮ್​ಗೆ (PM Internship Scheme) ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಒಂದು ವರ್ಷ ಇದ್ದ ಇಂಟರ್ನ್​ಶಿಪ್ ಅವಧಿಯನ್ನು 6-9 ತಿಂಗಳಿಗೆ ಇಳಿಸಲಾಗಿದೆ. ಸ್ಕೀಮ್​ಗೆ ಅರ್ಹತಾ ವಯೋಮಿತಿಯನ್ನು 21-24 ವರ್ಷ ಬದಲು 18-25 ವರ್ಷ ವಯೋಮಾನಕ್ಕೆ ಬದಲಾಯಿಸಲಾಗಿದೆ. ಕೇಂದ್ರ ಸಚಿವರು ಈ ಕುರಿತು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಪರಿಷ್ಕೃತ ಮಾರ್ಗಸೂಚಿ ಮಾರ್ಚ್ 12ರಿಂದ ಜಾರಿಗೆ ಬಂದಿದೆ. ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಮತ್ತು ಪದವಿಯ ಕೊನೆಯ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ಮಾಸಿಕ ಭತ್ಯೆಯಲ್ಲಿ ಹೆಚ್ಚಳ

ಪಿಎಂ ಇಂಟರ್ನ್​ಶಿಪ್ ಸ್ಕೀಮ್​ನಲ್ಲಿ ಮಾಸಿಕ ಭತ್ಯೆ 5,000 ರೂ ಇತ್ತು. ಅದನ್ನು 9,000 ರೂಗೆ ಏರಿಸಲಾಗಿದೆ. ಸ್ಕೀಮ್​ನಲ್ಲಿ ರಾಲಿಂಗ್ ಇಂಟರ್ನ್​ಶಿಪ್ ಸೈಕಲ್ ವಿಧಾನ ಅಳವಡಿಸಲಾಗಿದೆ. ಇದರಿಂದ ನಿರಂತರವಾಗಿ ಪೋಸ್ಟಿಂಗ್, ಆಯ್ಕೆಗೆ ಅವಕಾಶ ಇರುತ್ತದೆ. ಮತ್ತೊಂದು ಮಾರ್ಗಸೂಚಿ ಬದಲಾವಣೆ ಎಂದರೆ, ಈ ಸ್ಕೀಮ್​ನಲ್ಲಿ ಭಾಗಿಯಾಗುವ ಕಂಪನಿಗಳ ಸಂಖ್ಯೆಯನ್ನು ಮತ್ತು ವಿಸ್ತಾರವನ್ನು ಹೆಚ್ಚಿಸಲಾಗಿದೆ.

ಇಂಟರ್ನ್​ಸಿಪ್ ಸ್ಕೀಮ್​ನ ಮೊದಲ ಸುತ್ತಿನ ಪ್ರಾಜೆಕ್ಟ್​ನಲ್ಲಿ ಪಾರ್ಟ್ನರ್ ಕಂಪನಿಗಳು 1.27 ಲಕ್ಷ ಇಂಟರ್ನ್​ಶಿಪ್ ಅವಕಾಶ ನೀಡಿದ್ದವು. ಈ ಪೈಕಿ 60,000 ಅಭ್ಯರ್ಥಿಗಳಿಗೆ 82,000 ಆಫರ್ ಕೊಡಲಾಗಿತ್ತು. ಅವರಲ್ಲಿ 8,760 ಮಂದಿ ಇಂಟರ್ನ್​ಶಿಪ್​ಗೆ ಸೇರ್ಪಡೆಯಾಗಿದ್ದರು.

ಇನ್ನು ಎರಡನೇ ಸುತ್ತಿನಲ್ಲಿ ಪಾರ್ಟ್ನರ್ ಕಂಪನಿಗಳು 1.18 ಲಕ್ಷ ಇಂಟರ್ನ್​ಶಿಪ್ ಅವಕಾಶ ನೀಡಿದ್ದವು. 71,000 ಅಭ್ಯರ್ಥಿಗಳಿಗೆ 83,000 ಆಫರ್ ಕೊಡಲಾಗಿತ್ತು. ಈ ಪೈಕಿ 7,300 ಮಂದಿ ಇಂಟರ್ನ್​ಶಿಪ್ ಸೇರ್ಪಡೆಯಾಗಿದ್ದರು.

ಇದನ್ನೂ ಓದಿ: ಸರ್ಕಾರದ ಸುಕನ್ಯಾ ಸಮೃದ್ದಿ ಸ್ಕೀಮ್​ನಲ್ಲಿ ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್ಸ್?

ಈ ಸ್ಕೀಮ್​ನ ಮೊದಲ ಎರಡು ಸುತ್ತಿನಲ್ಲಿ ಅಭ್ಯರ್ಥಿಗಳಿಂದ ನೀರಸ ಪ್ರತಿಕ್ರಿಯೆ ಬರಲು ಕೆಲ ಕಾರಣಗಳನ್ನು ಪತ್ತೆ ಮಾಡಲಾಗಿದೆ. ಇಂಟರ್ನ್​ಶಿಪ್ ಮಾಡಲು ಅಭ್ಯರ್ಥಿಗಳಿಗೆ 5ರಿಂದ 10 ಕಿಮೀ ದೂರ ಪ್ರಯಾಣ ಉತ್ತಮ ಆಯ್ಕೆ ಎಂಬುದು ಇತ್ತೀಚಿನ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹಾಗೆಯೇ, 12 ತಿಂಗಳ ಇಂಟರ್ನ್​ ಅವಧಿ ತೀರಾ ಹೆಚ್ಚಾಯಿತು ಎನ್ನುವ ಅಭಿಪ್ರಾಯಗಳೂ ಬಂದಿದ್ದವು. ಈ ಕಾರಣಕ್ಕೆ ಸರ್ಕಾರ ಸ್ಕೀಮ್​ನ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

ಒಂದು ಗಂಟೆಯ ಹಿಂದಷ್ಟೇ ಇರಾನ್ ನೌಕಾಪಡೆಯು ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿತ್ತು. ಯುಎಸ್ಎಸ್ ಅಬ್ರಹಾಂ ಲಿಂಕನ್ ನಿಕಟ ಕಣ್ಗಾವಲಿನಲ್ಲಿದೆ. ಅದು ಇರಾನ್ ಪ್ರದೇಶವನ್ನು ಸಮೀಪಿಸಿದರೆ ನಾವು ಅದನ್ನು ಹೊಡೆದುರುಳಿಸಬೇಕಾಗುತ್ತದೆ ಎಂದು ಹೇಳಿತ್ತು. ಅದಾದ ಒಂದು ಗಂಟೆಯಲ್ಲೇ ಈ ದಾಳಿ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.

ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ರೋಗಿಗೆ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಅವರು ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಆಪರೇಷನ್ ಮಾಡುವ ಮೊದಲು ಲವಲವಿಕೆಯಿಂದಿದ್ದ ರೋಗಿ, ವೈದ್ಯರ ಎಡವಟ್ಟಿನಿಂದಾಗಿ ಇಂದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂರ್ನಾಲ್ಕು ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೋಗಿಯ ಅಳಿಯ ಕಾಂತರಾಜ್ ಮತ್ತು ಸಂಬಂಧಿ ಉಷಾ ನಾಯ್ಕ್ ಆರೋಪಿಸಿದ್ದಾರೆ. ಘಟನೆ ನಡೆದು 12 ದಿನಗಳಾದರೂ ಆಸ್ಪತ್ರೆಯ ಮುಖ್ಯಸ್ಥರು ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂಬುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಧೋರಣೆಯಿಂದ ಬೇಸತ್ತ ರೋಗಿಯ ಸಂಬಂಧಿಕರು ಇಂದು ಅಮೃತ್ ಲೈಫ್ ಲೈನ್ ಆಸ್ಪತ್ರೆಯ ಮುಂಭಾಗ ಜಮಾಯಿಸಿ ವೈದ್ಯರ ವಿರುದ್ಧ ಘೋಷಣೆ ಕೂಗಿ ಗಲಾಟೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಈ ಆರೋಪವನ್ನು ತಳ್ಳಿಹಾಕಿರುವ ಆಸ್ಪತ್ರೆಯ ಸರ್ಜನ್ ಡಾ. ಧನಂಜಯ್ ಮತ್ತು ಜನರಲ್ ಫಿಸಿಷಿಯನ್ ಡಾ. ಮಧುಸೂಧನ್, ರೋಗಿ ಕೋಮಾಗೆ ಜಾರಿದ್ದಕ್ಕೂ ಹರ್ನಿಯಾ ಆಪರೇಷನ್‌ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸದ್ಯ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ರೋಗಿಯ ಸ್ಥಿತಿ ಸುಧಾರಿಸುತ್ತಿದೆ ಎಂದು ವರದಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

ಒಂದು ಗಂಟೆಯ ಹಿಂದಷ್ಟೇ ಇರಾನ್ ನೌಕಾಪಡೆಯು ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿತ್ತು. ಯುಎಸ್ಎಸ್ ಅಬ್ರಹಾಂ ಲಿಂಕನ್ ನಿಕಟ ಕಣ್ಗಾವಲಿನಲ್ಲಿದೆ. ಅದು ಇರಾನ್ ಪ್ರದೇಶವನ್ನು ಸಮೀಪಿಸಿದರೆ ನಾವು ಅದನ್ನು ಹೊಡೆದುರುಳಿಸಬೇಕಾಗುತ್ತದೆ ಎಂದು ಹೇಳಿತ್ತು. ಅದಾದ ಒಂದು ಗಂಟೆಯಲ್ಲೇ ಈ ದಾಳಿ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅದರಲ್ಲೂ ಮಿಲನಾ ನಾಗರಾಜ್ ಅವರು, ಕತೆ ಕದ್ದ ಆರೋಪದ ಬಗ್ಗೆ ಸಿಟ್ಟಿನಿಂದ ಉತ್ತರಿಸಿದ್ದಾರೆ. ಅಂಥಹಾ ಸಮಯ ಬಂದರೆ ಸಿನಿಮಾನೇ ಮಾಡಲ್ಲ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು ದೊಡ್ಡ ಶಾಕ್ ನೀಡಿದೆ.

ಗೌತಮ್ ವಾಸುದೇವ್ ಮೆನನ್ ಅವರಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದ್ದು, 4.25 ಕೋಟಿ ಹಣವನ್ನು ಬಡ್ಡಿಯ ಸಮೇತ ಆರ್​​ಎಸ್ ಇನ್ಫೋಟೇನ್​​ಮೆಂಟ್ ಹೆಸರಿನ ಸಂಸ್ಥೆಗೆ ನಿಗದಿತ ದಿನಾಂಕದ ಒಳಗಾಗಿ ಪಾವತಿ ಮಾಡುವಂತೆ ಹೇಳಿದೆ. ಈಗಾಗಲೇ ಸಾಕಷ್ಟು ನಷ್ಟದಲ್ಲಿರುವ ಗೌತಮ್ ವಾಸುದೇವ್ ಮೆನನ್ ಅವರಿಗೆ ಇದು ದೊಡ್ಡ ಶಾಕ್ ಆಗಿದೆ.

2008ರಲ್ಲಿ ನಡೆದ ವಿವಾದ ಇದಾಗಿದೆ. 2008 ರಲ್ಲಿ ಗೌತಮ್ ವಾಸುದೇವ್ ಮೆನನ್ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದರು ಆ ಸಿನಿಮಾಕ್ಕೆ ಆರ್​​ಎಸ್ ಇನ್ಫೋಟೇನ್​​ಮೆಂಟ್ ನ ಎಸ್ ಎಲ್ರೆಡ್ ಕುಮಾರ್ ನಿರ್ಮಾಪಕರಾಗಿದ್ದರು. ಪ್ರಾಜೆಕ್ಟ್​ಗಾಗಿ ಅಡ್ವಾನ್ಸ್ ಮೊತ್ತವನ್ನು ಸಹ ಎಲ್ರೆಡ್ ಕುಮಾರ್ ನೀಡಿದ್ದರು. ಆದರೆ ಸಿನಿಮಾ ಪ್ರಾರಂಭವೇ ಆಗಲಿಲ್ಲ. ಆದರೆ ಗೌತಮ್ ಅವರು ಅಡ್ವಾನ್ಸ್ ಮೊತ್ತವನ್ನು ಹಿಂದಿರುಗಿಸಲಿಲ್ಲ. ಆದರೆ 2012 ರಲ್ಲಿ ಬಿಡುಗಡೆ ಆದ ‘ನೀ ದಾನೆ ಎನ್ ಪೊನ್ವಸಂತಮ್’ ಸಿನಿಮಾಕ್ಕೆ ಆ ಅಡ್ವಾನ್ಸ್ ಅನ್ನು ಬಳಸಿದ್ದಾಗಿ ಗೌತಮ್ ಹೇಳಿದ್ದಾರೆ. ಆದರೆ ಅದಕ್ಕೆ ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ. ಇದೇ ಕಾರಣಕ್ಕೆ 2013 ರಲ್ಲಿ ಎಸ್ ಎಲ್ರೆಡ್ ಕುಮಾರ್ ದೂರು ದಾಖಲಿಸಿದ್ದರು. ಇದೀಗ ಮದ್ರಾಸ್ ಹೈಕೋರ್ಟ್ ಸೂಚಿಸಿರುವಂತೆ 4.25 ಕೋಟಿ ಹಣದ ಜೊತೆಗೆ 12 ಲಕ್ಷ ರೂಪಾಯಿ ಹೆಚ್ಚುವರಿ ಹಣವನ್ನು ಸಹ ಅವರು ನೀಡಬೇಕಿದೆ.

ಇದನ್ನೂ ಓದಿ:‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ಗೌತಮ್ ವಾಸುದೇವ್ ಮೆನನ್, ಕೆಲವು ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನೀಡಿದ್ದಾರೆ. ‘ಮಿನ್ನಲೆ’, ‘ರೆಹನಾ ಹೇ ತೇರೆ ದಿಲ್ ಮೇ’, ‘ಕಾಕ ಕಾಕ’, ‘ವೇಟ್ಟೆಯಾಡು ವಿಲೆಯಾಡು’, ‘ವಾರನಂ ಆಯಿರುಂ’, ‘ಯೇ ಮಾಯ ಚೇಸಾವೆ’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಆದರೆ ಅವರು ನಿರ್ದೇಶಿಸಿರುವ ‘ಧ್ರುವ ನಚ್ಚತ್ತಿರಂ’ ಸಿನಿಮಾ ಹಲವು ವರ್ಷಗಳಿಂದ ಬಿಡುಗಡೆ ಆಗದೆ ನಿಂತಿದೆ. 2017 ರಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಹಣಕಾಸಿನ ಸಮಸ್ಯೆ, ಕೋರ್ಟ್ ಸಮಸ್ಯೆಗಳಿಂದಾಗಿ ಇಂದಿಗೂ ಬಿಡುಗಡೆ ಆಗಿಲ್ಲ. ಆ ಸಿನಿಮಾ ಬಿಡುಗಡೆ ಆಗದ ಹೊರತು ಹೊಸ ಸಿನಿಮಾ ಮಾಡುವುದಿಲ್ಲ ಎಂದು ಗೌತಮ್ ಹೇಳಿದ್ದಾರೆ. ‘ಧ್ರುವ ನಚ್ಚತ್ತಿರಮ್’ ಸಿನಿಮಾ ಸಮಸ್ಯೆಯಲ್ಲಿರುವಾಗ ಈಗ ಮದ್ರಾಸ್ ಹೈಕೋರ್ಟ್ ಮತ್ತೊಂದು ಹೊಸ ಶಾಕ್ ಅನ್ನು ಗೌತಮ್ ಅವರಿಗೆ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version