Headlines

‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ

ನಟಿ ಅದಾ ಶರ್ಮಾ (Adah Sharma) ಅವರು ಕನ್ನಡ ಚಿತ್ರರಂಗದವರಿಗೂ ಪರಿಚಿತರು. ಪುನೀತ್ ರಾಜ್​​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ಅವರು ನಟಿಸಿದ್ದರು. ಈ ಸಿನಿಮಾ ಮೆಚ್ಚುಗೆ ಪಡೆಯಿತು. ‘ದಿ ಕೇರಳ ಸ್ಟೋರಿ’ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಸದ್ಯ ಅವರು ಬಾಲಿವುಡ್​​ನಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅದಾ ಶರ್ಮಾ ಅವರು ಆಗಾಗ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಅಶ್ಲೀಲವಾಗಿ ಪ್ರಶ್ನೆ ಕೇಳಿದವರಿಗೆ ಉತ್ತರ ನೀಡಿದ್ದಾರೆ….

Read More

ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ – Kannada News | PM Modi Interview: Private Sector’s Quality Focus Key to Viksit Bharat and Manufacturing Growth

ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು…

Read More

Daily Devotional: ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? – Kannada News | Akhanda Jyoti: Puja room should always be lit up, know why

ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿಯೊಬ್ಬರ ಮನೆಯಲ್ಲಿಯೂ ದೇವರ ಕೋಣೆ ಅಥವಾ ಪೂಜಾ ಸ್ಥಳವು ಸಕಾರಾತ್ಮಕ ಶಕ್ತಿಗಳ ಆಗರವಾಗಬೇಕೆಂಬ ಆಶಯವಿರುತ್ತದೆ. ಈ ನಿಟ್ಟಿನಲ್ಲಿ ಅಖಂಡ ಜ್ಯೋತಿ ಅಥವಾ ನಿರಂತರ ದೀಪಕ್ಕೆ ನಮ್ಮ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವಿದೆ. 24 ಗಂಟೆಯೂ ದೀಪ ಉರಿಯುವುದರಿಂದ ಮನೆಯಲ್ಲಿ ಧನಾತ್ಮಕ ಭಾವನೆಗಳು ಹೆಚ್ಚಿ, ಯಾವುದೇ ಕಷ್ಟಗಳಿದ್ದರೂ ಅವುಗಳ ತೀವ್ರತೆ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ. ಆದರೆ, ಎಣ್ಣೆ ದೀಪ…

Read More

ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners

ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ ದಾವಣಗೆರೆ, ಡಿಸೆಂಬರ್​ 19: ಸದ್ಯ ಇಯರ್​​ ಎಂಡ್​​ ಮೂಡ್​​ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್​, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್​​ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ…

Read More

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ನವದೆಹಲಿ, ಮಾರ್ಚ್ 16: ಇಂದು ಸೋಮವಾರ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha polls) ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಎದುರಿಸುತ್ತಿರುವ 37 ರಾಜ್ಯಸಭಾ ಸ್ಥಾನಗಳು ಮಹಾರಾಷ್ಟ್ರ: 7 ತಮಿಳುನಾಡು: 6 ಪಶ್ಚಿಮ…

Read More

ಆ ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar talks about her land dispute in Hassan

ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಶ್ (Yash) ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮುಂದುವರಿಸಿದ್ದಾರೆ. ಯಶ್ ಅವರು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಕೂಡ ಪುಷ್ಪಾ ಅವರು ಹಠ ಹಿಡಿದಿರುವುದು ಯಾಕೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಅದಕ್ಕೆ ಅವರೇ ಈಗ ಉತ್ತರ ನೀಡಿದ್ದಾರೆ. ‘ನಾನು ಅರುಣ್ ಕುಮಾರ್ ಹೆಂಡತಿ ಆಗಿ ಮಾತನಾಡುತ್ತಿದ್ದೇನೆ. ಯಶ್ ಅಮ್ಮನಾಗಿ ಮಾತನಾಡುತ್ತಿಲ್ಲ. ಯಶ್ ಇಂದು ಕೋಟಿಗಟ್ಟಲೆ ದುಡಿಯುತ್ತಿರಬಹುದು….

Read More

ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್: ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ – Kannada News | Belagavi ED Raid: Money Laundering and Benami Assets Allegations on Y. Manjunath

ವೈ. ಮಂಜುನಾಥ್, ಸತೀಶ್ ಜಾರಕಿಹೊಳಿ ಬೆಳಗಾವಿ, ಜೂ.24: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಲೋಕಾಯುಕ್ತ ಹಾಗೂ ಇಡಿ ದಾಳಿಗಳು ನಡೆಯುತ್ತಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್​​ ಮೇಲೆ ಶಾಕ್​​ ನೀಡಲಾಗುತ್ತಿದೆ. ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ (Y. Manjunath) ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮುಂಜಾನೆ ಭರ್ಜರಿ ಶಾಕ್ ನೀಡಿದ್ದಾರೆ. ಬೇನಾಮಿ ಆಸ್ತಿ ಹಾಗೂ…

Read More

Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್? – Kannada News | If ranji final is draw who will win

ರಣಜಿ ಟೂರ್ನಿಯ 91ನೇ ಸೀಸನ್​ನ ಫೈನಲ್​ ಪಂದ್ಯ ಶುರುವಾಗಿದೆ. ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ಈ ಬಾರಿಯ ಫೈನಲ್​ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಇನಿಂಗ್ಸ್ ಆಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಭೋಜನಾ ವಿರಾಮದ ವೇಳೆಗೆ 34 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 104 ರನ್​ ಕಲೆಹಾಕಿದೆ. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿರುವ ಕಾಶ್ಮೀರಿ ಪಡೆ ಮೊದಲ ಇನಿಂಗ್ಸ್​ನಲ್ಲಿ ಬೃಹತ್…

Read More

ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರಂ, ಮಾರ್ಚ್ 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಹುಲ್ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿಯ ‘ಬಿ-ಟೀಮ್’ ಎಂದು ಟೀಕಿಸಿದ್ದಾರೆ. ಓಲೈಕೆ ರಾಜಕೀಯ ಮಾಡುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಒಂದೇ ರೀತಿಯಲ್ಲಿ ವಿರೋಧಿಸಿವೆ. ಅವೆರಡೂ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇರಳದ ಸಿಎಂ ಆರೋಪಿಸಿದ್ದಾರೆ. ಸುದ್ದಿ…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More