ಅಸ್ಸಾಮ್​ನಲ್ಲಿ ಬಾಗುರುಂಬಾ ದಹೋವು 2026; 10,000 ಬೋಡೋ ಕಲಾವಿದರ ನೃತ್ಯ ವೀಕ್ಷಿಸಿ ಶ್ಲಾಘಿಸಿದ ಮೋದಿ – Kannada News | Bagurumba Dwhou in Guwahati was an experience I’ll always remember, says PM Narendra Modi

ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್​ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು ಕಾಲದಲ್ಲಿ ತುಪಾಕಿ, ಗನ್​ಗಳನ್ನು ಹಿಡಿದು ಪ್ರತ್ಯೇಕತೆಗೆ ಹೋರಾಡುತ್ತಿದ್ದ ಬೋಡೋ ಜನಾಂಗದವರು ಇದೀಗ ತಮ್ಮ ಅದ್ಭುತ ಸಾಂಸ್ಕೃತಿಕ ವೈಭವ ಪ್ರದರ್ಶಿಸಿದರು. ಬೋಡೋ ಸಮುದಾಯದ 10,000ಕ್ಕೂ ಅಧಿಕ ಕಲಾವಿದರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿರು. ಪ್ರಧಾನಿ ನರೇಂದ್ರ ಮೋದಿ ಅವರು ಈ ದೃಶ್ಯ ವೈಭವ ಕಂಡು ಮೂಕವಿಸ್ಮಿತರಾದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ಗೆ ಎರಡು ದಿನಗಳ ಭೇಟಿ ಪೂರ್ಣಗೊಳಿಸಿದ್ದಾರೆ. ನಿನ್ನೆ ಬೋಡೋ ನೃತ್ಯ ಕಾರ್ಯಕ್ರಮ ಇತ್ತು. ಇವತ್ತು ಭಾನುವಾರ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಪ್ರಾಜೆಕ್ಟ್​ಗೆ ಭೂಮಿಪೂಜೆ ನೆರವೇರಿಸಿದರು. ಎರಡು ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ಟ್ರೈನ್​ಗಳಿಗೆ ಚಾಲನೆ ನೀಡಿದರು. ಕಾಲಿಯಾಬಾರ್​ನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಷಣದ ಮೂಲಕ ಅಸ್ಸಾಮ್ ಭೇಟಿ ಮುಗಿಸಲಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ – Kannada News | Surrendered Naxalite Not Released Even After a Year: Mother holds life for her son

ರಾಯಚೂರು, ಜನವರಿ 18: ಅವರೆಲ್ಲಾ ವ್ಯವಸ್ಥೆ ವಿರುದ್ಧ ತೊಡೆ ತಟ್ಟಿ ಶಸ್ತ್ರ ಸಜ್ಜಿತರಾಗಿ ನಕ್ಸಲರು (Naxals) ಅನ್ನೋ ಹಣೆ ಪಟ್ಟಿಕೊಂಡಿರುವವರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎದುರು ಕಳೆದ ವರ್ಷ ಶರಣಾಗಿರುವ ಆರು ಜನ ನಕ್ಸಲರಿಗೆ ಈವರೆಗೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ನಕ್ಸಲ್ ಮಾರೆಪ್ಪ ಅರೋಲಿ ಕುಟುಂಬ ಮಗನ ಬಿಡುಗಡೆಗಾಗಿ ಅಂಗಲಾಚುತ್ತಿದೆ. ಸಾಯುವುದರೊಳಗೆ ಹೆತ್ತ ಮಗನನ್ನ ನೋಡುವ ಬಯಕೆಯಲ್ಲಿ ತಾಯಿ ನಿತ್ಯ ಕಣ್ಣೀರಿಡುತ್ತಿದ್ದಾರೆ.

ನಮಗೆ ಸರ್ಕಾರದ ಸವಲತ್ತು ಬೇಡ; ಮಗ ಬೇಕು

ಶಾಂತಿಗಾಗಿ ನಾಗರಿಕ ವೇದಿಕೆ ಮೂಲಕ 2025ರಲ್ಲಿ ಶರಣಾಗತಿಯಾಗಿ ಸಾರ್ವಜನಿಕ ಜೀವನಕ್ಕೆ ಕಾಲಿಡಲು ಮುಂದಾಗಿರುವ ಆರು ಜನ ನಕ್ಸಲರನ್ನ ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಅಂಗಲಾಚುತ್ತಿದ್ದಾರೆ. ರಾಯಚೂರಿನ ಮಾರೆಪ್ಪ ಅರೋಲಿ ತಾಯಿ ಗೌರಮ್ಮ ಮಗನ ಬರುವಿಕೆಗಾಗಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾಳೆ. ನಮಗೆ ಸರ್ಕಾರದ ಸವಲತ್ತು ಬೇಡ ಮಗ ಬೇಕು ಅಂತ ತಾಯಿ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಶರಣಾಗತಿ ಆಯ್ತು, ಆದರೆ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರ ಎಲ್ಲಿ ಹೋಯ್ತು!?

ರಾಯಚೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆಗಳು ಗರಿಗೆದರಿದ್ದ ಕಾಲದಲ್ಲಿ ಹೊರಾಟಗಳಲ್ಲಿ ತೊಡಗಿದ್ದ ಯುವಕ ಮಾರೆಪ್ಪ ಅರೋಲಿ. ರಾಯಚೂರಿನ ಮಾನ್ವಿ ತಾಲ್ಲೂಕಿನ ಅರೋಲಿ ಗ್ರಾಮದ ಮಾರೆಪ್ಪ, ನಕ್ಸಲ್ ಚಟುವಟಿಕೆಗಳತ್ತ ಆಕರ್ಷಿತನಾಗಿ ಊರನ್ನ ತೊರೆದು ಹೋಗಿದ್ದ. ಸುಮಾರು 25 ವರ್ಷಗಳ ಬಳಿಕ ಶರಣಾಗತಿ ಮೂಲಕ 2025 ರ ಜನವರಿ‌ 8 ರಂದು ಮುಖ್ಯವಾಹಿನಿಗೆ ಬಂದಿದ್ದರು. ರಾಯಚೂರಿನ ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಮಾರೆಪ್ಪನ ಜೊತೆ ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಕೆ.ವಸಂತ, ಟಿ.ಎನ್.ಜಿಷಾ ಸೇರಿ ಆರು ಜನ ನಕ್ಸಲರು ಮುಖ್ಯವಾಹಿನಿಗೆ ಮರಳಿ ಒಂದು ವರ್ಷವಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಈ ಆರು ಜನ ನಕ್ಸಲರು ಶರಣಾಗಿದ್ದರು. ಆದರೆ ಸರ್ಕಾರ ಒಂದು ವರ್ಷವಾದ್ರೂ ಮಗನ ಬಿಡುಗಡೆ ಮಾಡಿಲ್ಲ ಅಂತ ನಕ್ಸಲ್ ಮಾರೆಪ್ಪ ಕುಟುಂಬ ಕಣ್ಣೀರಿಡುತ್ತಿದೆ.

ಸರ್ಕಾರ ನಕ್ಸಲ್ ಮುಕ್ತ ರಾಜ್ಯ ಘೋಷಣೆ ಮಾಡಿ ಒಂದು ವರ್ಷವಾಗಿದೆ. ಹೀಗಾಗಿ ಮಾರೆಪ್ಪನ ಬರುವಿಕೆಗಾಗಿ ಆತನ ಹುಟ್ಟೂರು ಅರೋಲಿ ಗ್ರಾಮದಲ್ಲಿ 81 ವರ್ಷದ ಆತನ ತಾಯಿ ಗೌರಮ್ಮ ಕೊನೆಗಾಲದಲ್ಲಿದ್ದಾರೆ. ಕೊನೆ ಘಳಿಗೆಯಲ್ಲಿ ಮಗನನ್ನ ನೋಡುವ ಅವಕಾಶ ಸಿಗುತ್ತಿದೆ ಅಂತ ನಿಲ್ಲದ ಕಣ್ಣಿರಲ್ಲಿ ಕೈ ತೊಳೆಯುತ್ತಿದ್ದಾರೆ. ಸರ್ಕಾರದಿಂದ ನಮಗೆ ಯಾವುದೇ ಸಹಾಯ ಬೇಡ, ನನ್ನ ಮಗ ಕೊನೆಗಾಲದಲ್ಲಿ ನನ್ನ ಜೊತೆ ಇರಲಿ ಸಾಕು ಅಂತ ಮಗನಿಗಾಗಿ ಕಾಯುತ್ತಿದ್ದಾರೆ.

ಶರಣಾಗತಿಯಾದವರನ್ನ ಬಿಡುಗಡೆ ಮಾಡದೆ ಜೈಲಿನಿಂದ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅವರ 18 ಬೇಡಿಕೆಗಳನ್ನೂ ಈಡೇರಿಸಿಲ್ಲ. ಮುಖ್ಯಮಂತ್ರಿಗಳು ಘೋಷಿಸಿದಂತೆ ಆದಷ್ಟು ಬೇಗ ಶರಣಾದ ಆರು ಜನರನ್ನು ಬಿಡುಗಡೆ ಮಾಡಬೇಕು ಅಂತ ಜಯಣ್ಣನ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಅವರ ಮೇಲಿನ ಮೊಕದ್ದಮೆಗಳನ್ನ ಹಿಂಪಡೆದು ಸಾರ್ವಜನಿಕವಾಗಿ ಬದುಕಲು ಅನುವು ಮಾಡಿಕೊಡುವುದಾಗಿ ಸರ್ಕಾರ ಹೇಳಿತ್ತು. ಈಗ ಅದಕ್ಕೆ ಅವಕಾಶ ಮಾಡಬೇಕು ಅಂತ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮುಂದೆ 6 ನಕ್ಸಲರು ಶರಣಾಗತಿ, ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲು

ನಕ್ಸಲ್ ಚಟುವಟಿಕೆಯಲ್ಲಿ ಸೇರಿ 25 ವರ್ಷಗಳಿಂದ ದೂರವಾಗಿದ್ದ ಮಗ ಈಗಲಾದರೂ ಮನೆಗೆ ಬರ್ತಾನೆ ಅಂತ ಕಾಯುತ್ತಿದ್ದ ಮಾರೆಪ್ಪನ ತಾಯಿ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಸರ್ಕಾರ ಕೊಟ್ಟ ಮಾತಿನ ಕಡೆ ಗಮನ ಹರಿಸಬೇಕು ಅಂತ ಕುಟುಂಬಸ್ಥರು ಮನವಿ ಮಾಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11 ರನ್ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ಈ ಮೂಲಕ ರೋಹಿತ್ ಈ ಇಡೀ ಸರಣಿಯಲ್ಲಿ ಕಲೆಹಾಕಲು ಸಾಧ್ಯವಾಗಿದ್ದು ಕೇವಲ 61 ರನ್‌ ಮಾತ್ರ.

3ನೇ ಪಂದ್ಯದಲ್ಲೂ ರೋಹಿತ್ ವಿಫಲ

ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ, ರೋಹಿತ್ ಶರ್ಮಾ ಉತ್ತಮ ಆರಂಭ ಪಡೆದ ಹೊರತಾಗಿಯೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು. ಆದ್ದರಿಂದ, ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಅವರು ತಪ್ಪು ಸರಿಪಡಿಸಿಕೊಳ್ಳುತ್ತಾರೆ ಎಂಬ ಭರವಸೆ ಇತ್ತು. ಇದಕ್ಕೆ ಪೂರಕವಾಗಿ ನ್ಯೂಜಿಲೆಂಡ್ 338 ರನ್‌ಗಳ ಬೃಹತ್ ಗುರಿಯನ್ನು ನೀಡಿದಾಗ ರೋಹಿತ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆಯಿತ್ತು. ಅದರಂತೆ ರೋಹಿತ್ ಕೂಡ ಮೊದಲ ಎಸೆತದಲ್ಲೇ ಅದ್ಭುತ ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಪ್ರಾರಂಭಿಸಿದರು.

ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ನಂತರ, ಮುಂದಿನ ಐದು ಎಸೆತಗಳಲ್ಲಿ ರನ್ ಗಳಿಸಲು ರೋಹಿತ್​ಗೆ ಸಾಧ್ಯವಾಗಲಿಲ್ಲ. ನಂತರ, ನಾಲ್ಕನೇ ಓವರ್‌ನಲ್ಲಿ, ಜ್ಯಾಕ್ ಫೋಕ್ಸ್ ಅವರ ನಾಲ್ಕನೇ ಎಸೆತದಲ್ಲಿ ವಿಕೆಟ್ ಕೀಪರ್ ಕ್ಯಾಚ್ ಕೈಬಿಡುವ ಮೂಲಕ ರೋಹಿತ್​ಗೆ ಜೀವದಾನವೂ ಸಿಕ್ಕಿತ್ತು. ಆ ಬಳಿಕ ರೋಹಿತ್ ಮುಂದಿನ ಎಸೆತದಲ್ಲೇ ಬೌಂಡರಿ ಬಾರಿಸಿ, ಈ ತಪ್ಪಿಗೆ ನ್ಯೂಜಿಲೆಂಡ್ ಅನ್ನು ಶಿಕ್ಷಿಸುತ್ತಾರೆ ಎಂಬ ಭರವಸೆಯನ್ನು ಹುಟ್ಟುಹಾಕಿದರು. ಆದರೆ ಮುಂದಿನ ಎಸೆತದಲ್ಲೇ ರೋಹಿತ್ ಕ್ಯಾಚಿತ್ತು ಕೇವಲ 11 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.

3 ಪಂದ್ಯಗಳಲ್ಲಿ ಕೇವಲ 61 ರನ್

ಹೀಗಾಗಿ, ಸರಣಿಯು ರೋಹಿತ್‌ಗೆ ನಿರಾಶಾದಾಯಕವಾಗಿ ಕೊನೆಗೊಂಡಿತು. ಮೂರು ಪಂದ್ಯಗಳಲ್ಲಿಯೂ ಅವರು ದೊಡ್ಡ ಹೊಡೆತಗಳನ್ನು ಆಡಲು ಪ್ರಯತ್ನಿಸಿ ಕ್ಯಾಚ್ ಔಟ್ ಆದರು. ವಡೋದರಾದಲ್ಲಿ ನಡೆದ ಮೊದಲ ಏಕದಿನದಲ್ಲಿ ರೋಹಿತ್ 26 ರನ್ ಗಳಿಸಿದರೆ, ರಾಜ್‌ಕೋಟ್‌ನಲ್ಲಿ 24 ರನ್​ಗಳಿಗೆ ಸುಸ್ತಾಗಿದ್ದರು. ಹೀಗಾಗಿ ಮೂರು ಪಂದ್ಯಗಳ ಸರಣಿಯಲ್ಲಿ ರೋಹಿತ್ ಕೇವಲ 20 ರ ಸರಾಸರಿಯಲ್ಲಿ 61 ರನ್ ಗಳಿಸುವಲ್ಲಿ ಯಶಸ್ವಿಯಾದರು. ಇದು ರೋಹಿತ್ ಅವರ ಏಕದಿನ ವೃತ್ತಿಜೀವನದಲ್ಲಿ ಆರಂಭಿಕ ಆಟಗಾರನಾಗಿ ಎರಡನೇ ಕೆಟ್ಟ ಸರಣಿಯಾಗಿದೆ. 15 ವರ್ಷಗಳ ಹಿಂದೆ ರೋಹಿತ್ ಜನವರಿ ತಿಂಗಳಲ್ಲಿ ಇಂತಹ ಪರಿಸ್ಥಿತಿಯನ್ನು ಕಂಡಿದ್ದರು. 2011 ರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಕೇವಲ 49 ರನ್ ಗಳಿಸಿ ಕೆಟ್ಟ ಪ್ರದರ್ಶನ ನೀಡಿದ್ದರು.

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ

2013 ರ ಬಳಿಕ ಕೆಟ್ಟ ಪ್ರದರ್ಶನ

ರೋಹಿತ್ ಆ ಒಂದು ಸರಣಿಯಲ್ಲಿ ಮಾತ್ರ ಇನ್ನಿಂಗ್ಸ್ ಆರಂಭಿಸಿದ್ದರೂ, 2013 ರಲ್ಲಿ ಪೂರ್ಣಾವಧಿ ಆರಂಭಿಕ ಆಟಗಾರನಾದ ನಂತರ ಇದು ಅವರ ಅತ್ಯಂತ ಕೆಟ್ಟ ಸರಣಿಯಾಗಿದೆ (ಕನಿಷ್ಠ ಮೂರು ಇನ್ನಿಂಗ್ಸ್). ಇತ್ತೀಚೆಗೆ ರೋಹಿತ್ ಅತ್ಯುತ್ತಮ ಫಾರ್ಮ್‌ನಲ್ಲಿರುವ ಸಮಯದಲ್ಲಿ ಅವರಿಂದ ಈ ಪ್ರದರ್ಶನ ಬಂದಿದೆ. ಕಳೆದ ವರ್ಷದ ಆಸ್ಟ್ರೇಲಿಯಾ ಪ್ರವಾಸದಲ್ಲಿ, ಅವರು ಒಂದು ಶತಕ ಸೇರಿದಂತೆ 201 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ ಎರಡು ಅರ್ಧಶತಕಗಳನ್ನು ಬಾರಿಸಿದ್ದರು. ಆದರೆ ಕಿವೀಸ್ ವಿರುದ್ಧ ಅದೇ ಪ್ರದರ್ಶನವನ್ನು ಮುಂದುವರೆಸಲು ರೋಹಿತ್​ಗೆ ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:53 pm, Sun, 18 January 26

Source link

Bigg Boss 12 Grand Finale Live Updates: ಆರನೇ ಸ್ಪರ್ಧಿ ಹೊರಕ್ಕೆ – Kannada News | Bigg Boss Kannada 12 Grand Finale Live Updates

  • 18 Jan 2026 07:44 PM (IST)

    ಮೈ ಕೈ ಜಾಕ್ಸನ್ ಪ್ರಶಸ್ತಿ

    ಮಿಡ್ ವೀಕ್ ಎವಿಕ್ಷನ್ ಆದ ಧ್ರುವಂತ್ ಅವರಿಗೆ ಮನೆಯಿಂದ ಹೊರಗೆ ಹೋದ ಬಳಿಕ ಪ್ರಶಸ್ತಿ ಲಭಿಸಿದೆ. ಅದುವೇ ಮೈ-ಕೈ ಜಾಕ್ಸನ್. ಧ್ರುವಂತ್ ಅವರ ಡ್ಯಾನ್ಸ್ ನೋಡಿ ಮೈ-ಕೈ ಜಾಕ್ಸನ್ ಪ್ರಶಸ್ತಿ ನೀಡಲಾಗಿದೆ. ಒಂದು ಲಕ್ಷ ಬಹುಮಾನ ಸಹ ಪಡೆದಿದ್ದಾರೆ.

  • 18 Jan 2026 07:29 PM (IST)

    ಕೈ ಎತ್ತಿಲ್ಲ, ಆದರೆ ಕೈ ಹಿಡಿದಿದ್ದೀನಿ

    ಧನುಶ್ ಅವರ ಪತ್ನಿಯೊಟ್ಟಿಗೆ ಮಾತನಾಡಿದ ಸುದೀಪ್ ಅವರು, ‘ಧನುಶ್ ಅದ್ಭುತ ಆಟಗಾರ, ಅವರ ನಗು ಮಾಸಿಲ್ಲ, ಎಲ್ಲರನ್ನೂ ಗೆದ್ದಿದ್ದಾರೆ, ನನಗೆ ಅವರ ಕೈ ಎತ್ತುವ ಅವಕಾಶ ಸಿಗಲಿಲ್ಲ ಆದರೆ ಅವರ ಕೈ ಹಿಡಿದಿದ್ದೀವಿ’ ಎಂದು ಮಾರ್ಮಿಕವಾಗಿ ಹೇಳಿದರು.

  • 18 Jan 2026 07:21 PM (IST)

    ‘ವ್ಯಕ್ತಿಯಾಗಿ ಗೆದ್ದಿದ್ದೀರಿ’

    ಧನುಶ್ ಅವರು ಆರನೇ ಸ್ಪರ್ಧಿಯಾಗಿ ಹೊರಗೆ ಬಂದಿದ್ದಾರೆ. ಆದರೆ ಸುದೀಪ್ ಅವರು ಧನುಶ್ ಅವರ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಸುದೀಪ್ ಅವರು ಖುದ್ದು ಧನುಶ್ ಅವರ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ನನ್ನ ಮನಸ್ಸು ಗೆದ್ದಿದ್ದಾರೆ ಎಂದಿದ್ದಾರೆ.

  • 18 Jan 2026 07:20 PM (IST)

    ಬಿಕ್ಕಿ ಬಿಕ್ಕಿ ಅತ್ತ ಧನುಶ್ ತಾಯಿ

    ಮಗ ಹೊರಗಡೆ ಬಂದಿದ್ದು ನೋಡಿ ಧನುಶ್ ತಾಯಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕೊನೆಗೆ ಧನುಶ್ ಅವರೇ ಹೋಗಿ ಅವರಿಗೆ ಸಮಾಧಾನ ಮಾಡಿದ್ದಾರೆ.

  • 18 Jan 2026 07:11 PM (IST)

    ಆರನೇ ಸ್ಪರ್ಧಿ ಹೊರಕ್ಕೆ, ಯಾರದು?

    ಧನುಶ್ ಅವರು ಆರನೇ ಸ್ಪರ್ಧಿಯಾಗಿ ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಅವರಿಗೆ 1.37 ಕೋಟಿ ಮತಗಳು ಬಂದಿವೆ. ಧನುಶ್ ಒಳ್ಳೆಯ ಸ್ಪರ್ಧಿ ಆಗಿದ್ದರು. ಆದರೆ ಇದೀಗ ಐದನೇ ರನ್ನರ್ ಅಪ್ ಆಗಿದ್ದಾರೆ

  • 18 Jan 2026 06:45 PM (IST)

    ಬಿಗ್​​ಬಾಸ್ ಮನೆಯತ್ತ ಅಭಿಮಾನಿಗಳ ದಂಡು

    ಬಿಗ್​​ಬಾಸ್ ಫಿನಾಲೆ ನಡೆಯುತ್ತಿರುವ ಬಿಡದಿಯ ಜಾಲಿವುಡ್​ನ ಅಭಿಮಾನಿಗಳ ದಂಡು ಧಾವಿಸುತ್ತಿದೆ. ಬಿಡದಿಗೆ ಹೋಗುವ ರಸ್ತೆಗಳೆಲ್ಲ ಟ್ರಾಫಿಕ್ ಹೆಚ್ಚಾಗುತ್ತಿದೆ.

  • 18 Jan 2026 06:37 PM (IST)

    ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳ ಡ್ಯಾನ್ಸ್

    ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಕಾರ್ಯಕ್ರಮ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳು, ಮನೆಯ ಒಳಗಿನಿಂದಲೇ ಡ್ಯಾನ್ಸ್ ಮಾಡಿ ಪ್ರೇಕ್ಷಕರ ಮನರಂಜಿಸಿದ್ದಾರೆ.

    Boss

  • 18 Jan 2026 06:03 PM (IST)

    ಪ್ರಸಾರ ಆರಂಭ

    ಕಲರ್ಸ್ ಕನ್ನಡ ಹಾಗೂ ಜಿಯೋ ಹಾಟ್​​ಸ್ಟಾರ್​​ನಲ್ಲಿ ಪ್ರಸಾರ ಆರಂಭ ಆಗಿದೆ. ಸಂಜೆ 6 ಗಂಟೆಗೆ ಪ್ರಸಾರ ಶುರುವಾಗಿದೆ.

  • 18 Jan 2026 05:36 PM (IST)

    ಜಾನ್ವಿ ಪೋಸ್ಟ್​​ಗೆ ಆಕ್ರೋಶ

    ಇದೇ ಬಿಗ್​​ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಆಗಿದ್ದ ಜಾನ್ವಿ, ಗಿಲ್ಲಿಯ ಅಭಿಮಾನಿಗಳನ್ನು, ಗಿಲ್ಲಿಗೆ ಮತ ಹಾಕುವವರನ್ನು ಆಡಿಕೊಳ್ಳುವ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿಲ್ಲಿ ಅಭಿಮಾನಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

  • 18 Jan 2026 05:34 PM (IST)

    ಗಿಲ್ಲಿನೇ ಗೆಲ್ಲೋದು: ಹನುಮಂತು

    ಬಿಗ್​​ಬಾಸ್ ಕನ್ನಡ 11ನೇ ಸೀಸನ್​ನ ವಿಜೇತ ಹನುಮಂತು ಟಿವಿ9 ಜೊತೆಗೆ ಮಾತನಾಡಿದ್ದು, ಈ ಬಾರಿಯ ವಿಜೇತ ಗಿಲ್ಲಿಯೇ ಎಂದಿದ್ದಾರೆ. ಸುದೀಪ್ ಹೇಳಿದ 37 ಕೋಟಿ ವೋಟು ಬಂದಿರುವುದು ಗಿಲ್ಲಿಗೇನೆ ಎಂದಿದ್ದಾರೆ.

  • 18 Jan 2026 04:52 PM (IST)

    ಪ್ರೋಮೊ ನೋಡಿ

    ಆರನೇ ಸ್ಪರ್ಧಿಯಾಗಿ ಹೊರ ಹೋಗಿದ್ದು ಯಾರು?

  • 18 Jan 2026 02:56 PM (IST)

    ಗೆಲ್ಲುವವರು ಯಾರು?

    ಫಿನಾಲೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದಾರೆ. ಗಿಲ್ಲಿ ನಟ, ಧನುಶ್, ಅಶ್ವಿನಿ ಗೌಡ, ರಘು, ಕಾವ್ಯಾ ಮತ್ತು ರಕ್ಷಿತಾ ಶೆಟ್ಟಿ. ಈ ಆರು ಮಂದಿಯಲ್ಲಿ ಒಬ್ಬರು ಈ ಬಾರಿ ವಿನ್ನರ್ ಎನಿಸಿಕೊಳ್ಳಲಿದ್ದಾರೆ.

  • 18 Jan 2026 02:54 PM (IST)

    ಶೂಟಿಂಗ್ ಶುರು

    ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆಯ ಚಿತ್ರೀಕರಣ ಈಗಾಗಲೇ ಬಿಡದಿಯ ಜಾಲಿವುಡ್​ ಸ್ಟುಡಿಯೋಸ್​​ನಲ್ಲಿ ಪ್ರಾರಂಭ ಆಗಿದೆ. ಇದೇ ಕಾರಣಕ್ಕೆ ಜಾಲಿವುಡ್ ಸ್ಟುಡಿಯೋ ಬಳಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

  • 18 Jan 2026 02:53 PM (IST)

    ಜಾಲಿವುಡ್ ಸ್ಟುಡಿಯೋ

    ಜಾಲಿವುಡ್ ಸ್ಟುಡಿಯೋದ ಗೇಟ್​ನ ಎದುರು ಸ್ಪರ್ಧಿಗಳ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಫ್ಲೆಕ್ಸ್​ ಬ್ಯಾನರ್​​ಗಳನ್ನು ಹಾಕಿದ್ದಾರೆ. ಒಟ್ಟಾರೆ ಫಿನಾಲೆಗೆ ಭಾರಿ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

  • Source link

    ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ – Kannada News | Bengaluru Matrimonial Fraud: Man Defrauds Woman of 1.75 Cr, Introduces Wife as Sister

    ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್​​ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ.

    ಬಳಿಕ ತನ್ನ ಆಟ ಶುರುಮಾಡಿದ್ದ ಈತ, ಆಸ್ತಿ ಸಂಬಂಧ ಇಡಿಯಲ್ಲಿ ಕೇಸ್ ದಾಖಲಾಗಿದೆ ಮತ್ತು ಅಕೌಂಟ್ ಪ್ರಾಬ್ಲಂ ಆಗಿದೆ ಎಂದಿದ್ದ. ಅದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ಮತ್ತು ಕೋರ್ಟ್ ಪ್ರತಿಗಳನ್ನ ತೋರಿಸಿದ್ದ. ಹಣದ ಅವಶ್ಯಕತೆ ಇದೆ ಎಂದು ಮೊದಲು 15 ಸಾವಿರ ಹಣ ಪಡೆದು, ನಂತರ ಒಟ್ಟಿಗೆ ಬ್ಯುಸಿನೆಸ್ ಮಾಡೋಣ ಅಂತಾ ಯುವತಿ ಹೆಸರಲ್ಲಿ ಲೋನ್ ಮಾಡಿಸಿದ್ದ. ಜೊತೆಗೆ ಯುವತಿ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದ. ಹಂತ ಹಂತವಾಗಿ ಒಟ್ಟು 1.75 ಕೋಟಿ ಹಣ ಪಡೆದಿದ್ದ ಎಂದು ದೂರಲಾಗಿದೆ.

    ಇದನ್ನೂ ಓದಿ: ಬಿಎಸ್ಸಿ ಓದಿ ಶೋಕಿಗಾಗಿ ಕಳವು; ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

    ಇನ್ನು ಒಮ್ಮೆ 22 ಲಕ್ಷ ಹಣ ವಾಪಸ್ ಕೊಟ್ಟಿದ್ದ ಈತ ಉಳಿದ ಹಣ ನೀಡಲು ಹಿಂದೇಟು ಹಾಕಿದ್ದಾನೆ. ಈ ಬಗ್ಗೆ ಕೇಳಿದ್ದಕ್ಕೆ ಯುವತಿ ಹಾಗೂ ಆಕೆಯ ಸ್ನೇಹಿತರಿಗೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಈತನ ಹಿನ್ನೆಲ ಕೆದಕಿದಾಗ ಸ್ಫೋಟಕ ಮಾಹಿತಿ ಬಯಲಾಗಿದೆ. ಅದಾಗಲೇ ಮದುವೆಯಾಗಿ ಮಗು ಇದ್ದರೂ ಮತ್ತೊಬ್ಬ ಯುವತಿಗೆ ಮದುವೆ ಆಮಿಷ ಒಡ್ಡಿದ್ದಲ್ಲದೆ, ಹಣ ಪೀಕಿರೋದು ಬಟಾಬಯಲಾಗಿದೆ. ಅಲ್ಲದೆ ಮನೆಯವರ ಪರಿಚಯದ ವೇಳೆ ತಾನು ತಾಳಿ ಕಟ್ಟಿರುವ ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿದ್ದ ಎಂಬ ವಿಷಯವೂ ಗೊತ್ತಾಗಿದೆ. ಮೋಸ ಹೋದ ವಿಚಾರ ತಿಳಿಯುತ್ತಿದ್ದಂತೆ ಯುವತಿ ವೈಟ್​​ಫೀಲ್ಡ್​​ ಠಾಣೆಗೆ ದೂರು ನೀಡಿದ್ದು, ವಿಜಯ್ ರಾಜ್ ಗೌಡ, ಬೊರೇಗೌಡ, ಸೌಮ್ಯ ಎಂಬವರ ವಿರುದ್ಧ ಕೇಸ್​​ ದಾಖಲಾಗಿದೆ. ಬಳಿಕ ಪ್ರಕರಣವನ್ನು ಪೊಲೀಸರು ಕೆಂಗೇರಿ ಠಾಣೆಗೆ ವರ್ಗಾಯಿಸಿದ್ದು, ತನಿಖೆ ಮುಂದುವರಿದಿದೆ.

    ವರದಿ: ವಿಕಾಸ್​​, ಟಿವಿ9 ಬೆಂಗಳೂರು

    ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

    Published On – 2:52 pm, Sun, 18 January 26

    Source link

    ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

    ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

     

     

     

    Source link

    Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

    ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

    ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ ಈ ಗುಣಗಳು:

    ಮಹಿಳೆಯರು ತಮ್ಮನ್ನು ಅರ್ಥಮಾಡಿಕೊಳ್ಳುವ, ಗೌರವಿಸುವ, ಅವರ ಭಾವನೆಗಳನ್ನು ಗೌರವಿಸುವ  ಮತ್ತು ಸಂಪೂರ್ಣ ಪ್ರಾಮಾಣಿಕತೆಯಿಂದ ಸಂಬಂಧಗಳನ್ನು ನಿರ್ವಹಿಸುವ ಪುರುಷರನ್ನು ಸಖತ್‌ ಇಷ್ಟಪಡುತ್ತಾರೆ ಎನ್ನುತ್ತಾರೆ ಆಚಾರ್ಯ ಚಾಣಕ್ಯರು.

    ಗೌರವ: ಚಾಣಕ್ಯನ ಪ್ರಕಾರ, ಮಹಿಳೆಯರು ತಮ್ಮನ್ನು ಗೌರವಿಸುವ ಮತ್ತು ಪ್ರೀತಿಯಿಂದ ನಡೆಸಿಕೊಳ್ಳುವ ಪುರುಷರತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಮಹಿಳೆಯರು ತಮ್ಮನ್ನು ಸಮಾನವಾಗಿ ಪರಿಗಣಿಸುವ, ತಮ್ಮ ಅಭಿಪ್ರಾಯಗಳಿಗೆ ಬೆಲೆ ನೀಡುವ ಮತ್ತು ತಮ್ಮ ಅಭಿಪ್ರಾಯಗಳನ್ನು ಗೌರವಿಸುವ ಪುರುಷರನ್ನು ಇಷ್ಟಪಡುತ್ತಾರೆ ಎನ್ನುತ್ತಾರೆ ಚಾಣಕ್ಯ.

    ಪ್ರಾಮಾಣಿಕತೆ: ಯಾವುದೇ ಸಂಬಂಧದ ಅಡಿಪಾಯವೇ ಪ್ರಾಮಾಣಿಕತೆ. ಮಹಿಳೆಯರು ತಮ್ಮ ಮಾತಿಗೆ ಬದ್ಧರಾಗಿರುವ, ಸುಳ್ಳು ಮಾತುಗಳನ್ನಾಡದ ಮತ್ತು ಕಷ್ಟದ ಸಮಯದಲ್ಲಿ ತಮ್ಮೊಂದಿಗೆ ನಿಲ್ಲುವ ಪುರುಷರನ್ನು ಹೆಚ್ಚು ಇಷ್ಟಪಡುತ್ತಾರೆ. ಈ ಗುಣಗಳಿರುವ ಪುರುಷನೇ ತಮ್ಮ ಜೀವನಸಂಗಾತಿಯಾಗಬೇಕು ಎಂದು ಬಯಸುತ್ತಾರೆ.

    ಸುರಕ್ಷತೆಯ ಭಾವನೆ: ಮಹಿಳೆಯರು ದೈಹಿಕವಾಗಿ ಮಾತ್ರವಲ್ಲದೆ ಭಾವನಾತ್ಮಕವಾಗಿಯೂ ಸುರಕ್ಷಿತವಾಗಿರುವಂತೆ ಮಾಡುವ, ಕಷ್ಟಕರ ಸಂದರ್ಭಗಳಲ್ಲಿ ತಮ್ಮೊಂದಿಗೆ ನಿಲ್ಲುವ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುವ ಪುರುಷರಲ್ಲಿ ಸುರಕ್ಷತೆಯ ಭಾವವನ್ನು ಬಯಸುತ್ತಾರೆ. ಜೊತೆಗೆ ಈ ಸುರಕ್ಷತೆಯ ಭಾವನೆಯನ್ನು ನೀಡುವ ಪುರುಷನನ್ನು ಇಷ್ಟಪಡುತ್ತಾರೆ.

    ಶಾಂತತೆ ಮತ್ತು ತಾಳ್ಮೆ: ಮಹಿಳೆಯರು ಪುರುಷರಲ್ಲಿ ಕೋಪ ಮತ್ತು ಕಿರಿಕಿರಿ ಸ್ವಭಾವವನ್ನು ಇಷ್ಟಪಡುವುದಿಲ್ಲ. ಬದಲಿಗೆ ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ಶಾಂತ ಮತ್ತು ಸಂಯಮದಿಂದ ಇರುವ ಪುರುಷರತ್ತ ಮಹಿಳೆಯರಿಗೆ ಹೆಚ್ಚು ಆಕರ್ಷಕವಾಗಿರುತ್ತಾರೆ ಎನ್ನುತ್ತಾರೆ ಚಾಣಕ್ಯ.

    ಜವಾಬ್ದಾರಿಯುತ ಪುರುಷ: ಆಚಾರ್ಯ ಚಾಣಕ್ಯರು ಜವಾಬ್ದಾರಿಯುತ ಪುರುಷನನ್ನು ಸಮಾಜ ಮತ್ತು ಕುಟುಂಬದ ಬೆನ್ನೆಲುಬು ಎಂದು ಪರಿಗಣಿಸಿದ್ದಾರೆ. ತನ್ನ ಕರ್ತವ್ಯಗಳನ್ನು ನಿಭಾಯಿಸುವ ಮತ್ತು ಮಹಿಳೆಯರಿಗೆ ಮಾನಸಿಕ ಮತ್ತು ಭಾವನಾತ್ಮಕ ಭದ್ರತೆಯನ್ನು ಒದಗಿಸಬಲ್ಲ ಪುರುಷರನ್ನು ಮಹಿಳೆಯರು ಇಷ್ಟಪಡುತ್ತಾರೆ.

    ಇದನ್ನೂ ಓದಿ: ಪುರುಷರು ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು

    ಒಳ್ಳೆಯ ಕೇಳುಗ: ಚಾಣಕ್ಯ ನೀತಿಯ ಪ್ರಕಾರ, ಮಹಿಳೆಯರು ತಮ್ಮ ಮಾತುಗಳನ್ನು ಶಾಂತವಾಗಿ ಆಲಿಸುವ ಮತ್ತು ಬುದ್ಧಿವಂತಿಕೆಯಿಂದ ಪ್ರತಿಕ್ರಿಯಿಸುವ ಪುರುಷರನ್ನು ಮೆಚ್ಚುತ್ತಾರೆ.

    ಹಾಸ್ಯ ಮತ್ತು ಸಕಾರಾತ್ಮಕ ಚಿಂತನೆ: ಆಚಾರ್ಯ ಚಾಣಕ್ಯರು ಹೇಳುವಂತೆ, ಬಿಕ್ಕಟ್ಟಿನ ಸಮಯದಲ್ಲೂ ತಾಳ್ಮೆ ಮತ್ತು ನಗುವನ್ನು ಕಾಯ್ದುಕೊಳ್ಳುವವರೇ ನಿಜವಾದ ಬುದ್ಧಿವಂತರು. ಮಹಿಳೆಯರು ಸಕಾರಾತ್ಮಕ, ಹಾಸ್ಯಪ್ರಜ್ಞೆಯನ್ನು ಹೊಂದಿರುವ ಮತ್ತು ಸಕಾರಾತ್ಮಕ ಮನಸ್ಥಿತಿಯನ್ನು ಹೊಂದಿರುವ ಪುರುಷರನ್ನು ಇಷ್ಟಪಡುತ್ತಾರೆ.

    ಸಮರ್ಪಣೆ ಮತ್ತು ನಿಷ್ಠೆ: ಮಹಿಳೆಯರು ಸಂಬಂಧದಲ್ಲಿ ನಿಷ್ಠರಾಗಿರುವ, ಸಂಪೂರ್ಣವಾಗಿ ಸಮರ್ಪಿತರಾಗಿರುವ ಪುರುಷರನ್ನು ಇಷ್ಟಪಡುತ್ತಾರೆ ಎನ್ನುತ್ತಾರೆ ಆಚಾರ್ಯ ಚಾಣಕ್ಯರು ಹೇಳುತ್ತಾರೆ.

    ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ? – Kannada News | BBK 12 Grand Finale: Dhanush Eliminated from Top 6! Karnataka awaits the winner

    ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು.

    ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಹಾಗೂ ಧನುಶ್ ಇದ್ದರು. ಈ ಪೈಕಿ ಅತಿ ಕಡಿಮೆ ಮತ ಬಿದ್ದಿದ್ದು ಧನಶ್​ಗೆ. ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಎಲಿಮಿನೇಟ್ ಆಗುತ್ತಾರೆ ಎಂದು ಬಹುತೇಕರು ಊಹಿಸಿದ್ದರು.

    ಧನುಶ್ ಅವರು ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಉತ್ತಮವಾಗಿ ಡ್ಯಾನ್ಸ್ ಕೂಡ ಮಾಡುತ್ತಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಉತ್ತಮವಾಗಿ ಆಡುತ್ತಿದ್ದರು. ಟಾಸ್ಕ್ ವಿನ್ ಆಗಿ ಟಾಪ್ 6ಗೆ ಅವರು ಅರ್ಹತೆ ಪಡೆದುಕೊಂಡಿದ್ದರು.

    ಧನುಶ್ ಅವರು ಟಾಸ್ಕ್ ಉತ್ತಮವಾಗಿ ಆಡಿದರೂ ಉಳಿದ ಸಮಯದಲ್ಲಿ ಸೈಲೆಂಟ್ ಆಗಿಯೇ ಇರುತ್ತಿದ್ದರು. ಯಾರ ಬಗ್ಗೆಯೂ ಅವರು ಮಾತನಾಡುತ್ತಿರಲಿಲ್ಲ. ಯಾವುದೇ ವಿವಾದ ಬಂದರೂ ದೂರ ಸರಿಯುತ್ತಿದ್ದರು. ಬಿಗ್ ಬಾಸ್​​ನಲ್ಲಿ ಈ ರೀತಿಯ ಗುಣ ಹೆಚ್ಚು ಕೆಲಸಕ್ಕೆ ಬರೋದಿಲ್ಲ. ಅವರು ಹೊರ ಹೋಗಲು ಇದುವೇ ಕಾರಣ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಅವರಿಗೆ 1 ಕೋಟಿ 27 ಲಕ್ಷ ವೋಟ್ ಬಿದ್ದಿದೆ. ವಿನ್ನರ್ ವೋಟ್ 40 ಕೋಟಿ ಮೇಲಿದೆ. ಹೀಗಾಗಿ, ಅದಕ್ಕೆ ಹೋಲಿಸಿದರೆ ಇದು ಕಡಿಮೆಯೇ.

    ಇದನ್ನೂ ಓದಿ: ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ

    ಬಿಗ್ ಬಾಸ್​​ನಲ್ಲಿ ಸದ್ಯ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಇದ್ದಾರೆ. ರಾತ್ರಿ ವೇಳೆಗೆ ವಿನ್ನರ್ ಹೆಸರು ಘೋಷಣೆ ಆಗಲಿದೆ. ಈ ಐವರ ಪೈಕಿ ಯಾರು ಕಪ್ ಎತ್ತುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

    ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

    Source link

    ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್ – Kannada News | Daryl Mitchell’s Record Breaking ODI Dominance vs India: Centuries & Historic Feats

    ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

    Source link

    ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ? – Kannada News | EU vs USA tariff conflict, what lessons India can learn from this

    ನವದೆಹಲಿ, ಜನವರಿ 18: ಗ್ರೀನ್​ಲ್ಯಾಂಡ್ ಅನ್ನು ಕೊಡಲು ಒಪ್ಪದ ಡೆನ್ಮಾರ್ಕ್ ದೇಶದ ಪರವಾಗಿ ನಿಂತಿರುವ ಕೆಲ ಐರೋಪ್ಯ ದೇಶಗಳ ಮೇಲೆ ಡೊನಾಲ್ಡ್ ಟ್ರಂಪ್ (Donald Trump) ಶೇ. 10ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಫೆಬ್ರುವರಿ 1ರಿಂದ ಈ ಟ್ಯಾರಿಫ್ ಜಾರಿಗೆ ಬರುತ್ತದೆ. ಜೂನ್ 1ರಿಂದ ಈ ಟ್ಯಾರಿಫ್ ಶೇ. 25ಕ್ಕೆ ಏರಲಿದೆ. ಗ್ರೀನ್​ಲ್ಯಾಂಡ್ ದಕ್ಕುವವರೆಗೂ ಯೂರೋಪಿಯನ್ ದೇಶಗಳ ಮೇಲಿನ ಈ ಟ್ಯಾರಿಫ್ ಕ್ರಮ ಮುಂದುವರಿಯುತ್ತದೆ ಎಂದು ಟ್ರಂಪ್ ಎಚ್ಚರಿಕೆ ಕೊಟ್ಟಿದ್ದಾರೆ.

    ಅಮೆರಿಕದ ನಿಲುವನ್ನು ಖಂಡಿಸಿದ ಯೂರೋಪ್

    ಡೆನ್ಮಾರ್ಕ್, ನಾರ್ವೆ, ಸ್ವೀಡನ್, ಫ್ರಾನ್ಸ್, ಜರ್ಮನಿ, ಯುಕೆ (ಬ್ರಿಟನ್), ದಿ ನೆದರ್​ಲ್ಯಾಂಡ್ಸ್ ಮತ್ತು ಫಿನ್​ಲ್ಯಾಂಡ್ ದೇಶಗಳು ಗ್ರೀನ್​ಲ್ಯಾಂಡ್ ವಿಚಾರವಾಗಿ ಅಮೆರಿಕದ ನಿಲುವಿಗೆ ವಿರುದ್ಧವಾಗಿ ನಿಂತಿವೆ. ಈ ಎಂಟು ಯೂರೋಪಿಯನ್ ದೇಶಗಳಿಗೆ ಸದ್ಯ ಟ್ರಂಪ್ ಟ್ಯಾರಿಫ್ ಪ್ರಕಟಿಸಿದ್ದಾರೆ. ಮುಂದೆ ಇದು ಎಲ್ಲಾ ಐರೋಪ್ಯ ದೇಶಗಳಿಗೆ ಜಾರಿಯಾಗಬಹುದು. ಅಮೆರಿಕದ ಈ ಟ್ಯಾರಿಫ್ ಬೆದರಿಕೆ ಕ್ರಮವನ್ನು ಐರೋಪ್ಯ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ.

    ಇದನ್ನೂ ಓದಿ: ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ

    ಯೂರೋಪಿಯನ್ ಯೂನಿಯನ್​ನಲ್ಲಿ 27 ಸದಸ್ಯ ದೇಶಗಳಿವೆ. ಇಂದು ಭಾನುವಾರ ತುರ್ತು ಸಭೆ ಕರೆದು ಚರ್ಚಿಸಲಾಯಿತು. ಐರೋಪ್ಯ ದೇಶಗಳ ಮೇಲೆ ಟ್ಯಾರಿಫ್ ಹಾಕುವ ಅಮೆರಿಕದ ನಿರ್ಧಾರ ತಪ್ಪು. ಟ್ಯಾರಿಫ್ ಬೆದರಿಕೆ ಮೂಲಕ ತಮ್ಮನ್ನು ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದರೆ ಬಗ್ಗುವುದಿಲ್ಲ ಎಂದು ಇಯು ಹಾಗೂ ಯುಕೆ ಸ್ಪಷ್ಟಪಡಿಸಿವೆ. ಐರೋಪ್ಯ ಒಕ್ಕೂಟದಲ್ಲಿ ಬ್ರಿಟನ್ ಸದಸ್ಯ ದೇಶವಲ್ಲ. ಆದರೂ ಗ್ರೀನ್​ಲ್ಯಾಂಡ್ ವಿಚಾರವಾಗಿ ಐರೋಪ್ಯ ದೇಶಗಳ ನಿಲುವಿಗೆ ಬ್ರಿಟನ್ ಬೆಂಬಲವಾಗಿ ನಿಂತಿದೆ.

    ಯೂರೋಪ್ ಮೇಲೆ ಅಮೆರಿಕ ಟ್ಯಾರಿಫ್; ಭಾರತಕ್ಕಿದೆ ದೊಡ್ಡ ಪಾಠ

    ಡೊನಾಲ್ಡ್ ಟ್ರಂಪ್ ನಾಯಕತ್ವದಲ್ಲಿ ಅಮೆರಿಕ ಸರ್ಕಾರದ ವರ್ತನೆ ಬಹಳ ಅನಿಶ್ಚಿತ ಮತ್ತು ಆಕ್ರಮಣಕಾರಿಯಾಗಿದೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಕುದುರಿಸಿದಾಕ್ಷಣ ಎಲ್ಲವೂ ಸರಿಯಾಗಿ ಬಿಡುತ್ತೆ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಯೂರೋಪ್, ಕೆನಡಾ, ಆಸ್ಟ್ರೇಲಿಯಾ ಇತ್ಯಾದಿ ಮಿತ್ರ ದೇಶಗಳೊಂದಿಗೆ ಟ್ರಂಪ್ ನಡೆದುಕೊಂಡ ರೀತಿಯು ಅಮೆರಿಕದ ಹೊಸ ನೀತಿಗೆ ಕನ್ನಡಿ ಹಿಡಿದಂತಿದೆ.

    ಇದನ್ನೂ ಓದಿ: ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ

    ಅಮೆರಿಕದ ಟ್ರೇಡ್ ಡೀಲ್​ಗೋಸ್ಕರ ಭಾರತ ತನ್ನ ಹಿತಾಸಕ್ತಿಗಳನ್ನು ಬಲಿಕೊಡಬಾರದು. ಅಮೆರಿಕದ ಒತ್ತಡಕ್ಕೆ ಒಳಗಾಗಿ ಇರಾನ್​ನ ಛಾಬಹಾರ್ ಪೋರ್ಟ್ ಪ್ರಾಜೆಕ್ಟ್​ನಿಂದ ಹಿಂದಕ್ಕೆ ಸರಿಯಿತು. ತನ್ನ ಇಂಧನ ಆಮದಿನಲ್ಲಿ ವ್ಯತ್ಯಯ ಮಾಡಿಕೊಂಡಿತು. ಬ್ರಿಕ್ಸ್ ಗುಂಪಿನೊಂದಿಗೆ ತನ್ನ ಪಾಲ್ಗೊಳ್ಳುವಿಕೆಯನ್ನು ಮಿತಿಗೊಳಿಸಿತು. ಇಷ್ಟು ರಾಜಿ ಮಾಡಿಕೊಂಡರೂ ಅಮೆರಿಕವು ಭಾರತಕ್ಕೆ ಧಮಕಿ ಹಾಕುವುದು ಮುಂದುವರಿದೇ ಇದೆ. ಹೀಗಾಗಿ, ಭಾರತವು ಸ್ವಾಯತ್ತ ಕಾರ್ಯತಂತ್ರ ನಿಲುವು ಹೊಂದಿರಬೇಕು ಎಂಬುದು ತಜ್ಞರ ಅನಿಸಿಕೆ.

    ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

    Source link

    Exit mobile version