ಹರಿಹರ ಪಂಚಮಸಾಲಿ ಮಠದಲ್ಲಿ ಮತ್ತೆ ಭಜನೆ, ಪೂಜೆ ಶುರು: ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾದ ವಚನಾನಂದ ಸ್ವಾಮೀಜಿ – Kannada News | Bhajans and Prayers Resume at Harihara Panchamasali Math; Vachanananda Swamiji Prepares to Fight Trust

ದಾವಣಗೆರೆ, ಜುಲೈ 30: ಪಂಚಮಸಾಲಿ ಮಠದಲ್ಲಿ ಈಗ ಹೊಸ ಗಾಳಿ ಬೀಸುತ್ತಿದೆ. ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ (Vachanananda Swamiji) ಜಾಮೀನು ಸಿಕ್ಕಿದೆ. ಇನ್ನೇನು ಸ್ವಾಮೀಜಿ ಜೈಲು ಸೇರುತ್ತಾರೆ ಎನ್ನುವಷ್ಟರಲ್ಲಿಯೇ ಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿತ್ತು. ಒಂದು ಅರ್ಥದಲ್ಲಿ ಸ್ವಾಮೀಜಿ ನಿರಾಳರಾಗಿದ್ದಾರೆ. ಇದೀಗ  ಅಧಿಕೃತವಾಗಿ ಸ್ವಾಮೀಜಿ ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಭಜನೆ, ಪೂಜೆ ಬದಲು ಪೊಲೀಸರ ಬೂಟಿನ ಸದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಮಠ ರಾಜ್ಯದ ಗಮನ ಸೆಳೆದಿತ್ತು….

Read More

ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

90ರ ದಶಕದಲ್ಲಿ ಬಾಲಿವುಡ್ (Bollywood)​​ ಅನ್ನು ಭೂಗತ ಜಗತ್ತು ಇನ್ನಿಲ್ಲದಂತೆ ಕಾಡಿತ್ತು. ಹಲವಾರು ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕ, ನಟಿಯರಿಗೆ ಭೂಗತ ಲೋಕದ ದುರುಳರಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ಟಿ-ಸೀರೀಸ್ ಮಾಲೀಕನ ಕೊಲೆಯನ್ನೂ ಈ ಭೂಗತ ಲೋಕದ ಮಂದಿ ಮಾಡಿದ್ದರು. ಕೆಲವು ನಟರು, ಭಯಗೊಂಡು ಭೂಗತ ಲೋಕದವರ ಪಾರ್ಟಿಗಳಲ್ಲಿ ಸಹ ಕಾಣಿಸಿಕೊಂಡಿದ್ದರು. ಆದರೆ ಕೆಲವರು ಮಾತ್ರ ಧೈರ್ಯವನ್ನು ಅದೆಲ್ಲವನ್ನೂ ಎದುರಿಸಿದ್ದರು. ಇದೀಗ ನಟ ವರುಣ್ ಧವನ್, ತಮ್ಮ ಮನೆಗೆ ಭೂಗತ ಲೋಕದ ಕರೆ ಬಂದಿದ್ದ ಘಟನೆಯನ್ನು ಸಂದರ್ಶನವೊಂದರಲ್ಲಿ…

Read More

ಬಂಗಾಳದ ರೆಸ್ಟೋರೆಂಟ್ ಹೊರಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ದಾಳಿ – Kannada News | TMC MP Mahua Moitra alleged egg attack outside West Bengal restaurant

ಕೊಲ್ಕತ್ತಾ, ಜುಲೈ 1: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಇಂದು ತಮ್ಮ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ತಾವು ಇದ್ದ ರೆಸ್ಟೋರೆಂಟ್‌ವೊಂದರ ಹೊರಗೆ ನೆರೆದಿದ್ದ ಗುಂಪೊಂದು ತಮ್ಮ ಮೇಲೆ ಮೊಟ್ಟೆಗಳನ್ನು ಎಸೆದಿದೆ ಎಂದು ಆರೋಪಿಸಿದ್ದಾರೆ. ಮಹುವಾ ಮೊಯಿತ್ರಾ ತಮ್ಮ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಖಾತೆಗಳಲ್ಲಿ ಈ ಘಟನೆಯ ವಿಡಿಯೋಗಳನ್ನು ಹಂಚಿಕೊಂಡಿದ್ದು, ಈ ಕೃತ್ಯಕ್ಕಾಗಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಪೊಲೀಸರು ಮೂಕಪ್ರೇಕ್ಷಕರಾಗಿ ಅಲ್ಲೇ ನಿಂತುಕೊಂಡು ನೋಡುತ್ತಿದ್ದಾಗ ಈ ದಾಳಿಯನ್ನು ಬಿಜೆಪಿ…

Read More

ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು? – Kannada News | Dhurandhar 2 Box Office: 50 Days of Dominance and Record Breaking Global Collection

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರ ಯಶಸ್ವಿಯಾಗಿ 65 ದಿನಗಳನ್ನು ಪೂರೈಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಮಂದಿರಗಳಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಮುನ್ನುಗ್ಗಿದೆ. ‘ಧುರಂಧರ್ 2’ ಈವರೆಗೆ ದೇಶಾದ್ಯಂತ ಒಟ್ಟು 5,24,278 ಶೋಗಳು ಪ್ರದರ್ಶನ ಕಂಡಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ಬರೋಬ್ಬರಿ 1,799.09 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ….

Read More

ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ? – Kannada News | Bharat Taxi, how investment of Rs 500 from drivers can turn into profit

ನವದೆಹಲಿ, ಫೆಬ್ರುವರಿ 24: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನಿನ್ನೆ ಸೋಮವಾರ (ಫೆ. 23) ಭಾರತ್ ಟ್ಯಾಕ್ಸಿ (Bhara Taxi) ಸೇವೆಗೆ ಚಾಲನೆ ನೀಡಿದ್ದಾರೆ. ಅಮೂಲ್ ನೇತೃತ್ವದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳು ಸೇರಿ ಕಟ್ಟಿರುವ ಕಂಪನಿ ಇದು. ಅಮೂಲ್​ನ ರೀತಿಯಲ್ಲೇ ಭಾರತ್ ಟ್ಯಾಕ್ಸಿಯ ಬ್ಯುಸಿನೆಸ್ ಮಾಡಲ್ ಇದೆ. ಅಮುಲ್​ನಲ್ಲಿ ಹಾಲು ಉತ್ಪಾದಕರೇ ಮಾಲೀಕರಾಗಿದ್ದಾರೆ. ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರಾಗಿರುತ್ತಾರೆ. ಏನಿದು ಭಾರತ್ ಟ್ಯಾಕ್ಸಿ? ಓಲಾ, ಊಬರ್, ರಾಪಿಡೋ, ನಮ್ಮ ಯಾತ್ರಿ ರೀತಿಯಲ್ಲಿ ಭಾರತ್ ಟ್ಯಾಕ್ಸಿ…

Read More

Suryakumar Yadav: ನಾವು ಇನ್ನೆಷ್ಟು ರನ್​ಗಳಿಸಬೇಕು ಅಂತ ಕೇಳಿದೆ..! – Kannada News | Suryakumar yadav post match presentation after IND vs ENG Match

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ 246 ರನ್​ಗಳಿಸುವ ಮೂಲಕ 7 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡರು. ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಅತ್ತ ಏಳು ರನ್​ಗಳ…

Read More

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು, ಜುಲೈ 13: ‘‘ಕಳೆದ 500 ದಿನಗಳಿಂದ ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ  ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಕೆರಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ರೈತ ಮಹಿಳೆಯರ ಆಕ್ರೋಶಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ’’ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು ವಿಚಾರವಾಗಿ ಮಾಧ್ಯಮ ಹೇಳಿಕೆ ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ‘‘ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ನಿಮ್ಮ ಪರವಾಗಿ ಕಾನೂನಾತ್ಮಕ ಹೋರಾಟ…

Read More

SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ (SSLC) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​​ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ….

Read More

ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ…

Read More

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಟಿಎಂಸಿಯ 50…

Read More