Headlines

ರೋಸ್​​ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಮಹಿಳೆ – Kannada News | Rose Day Reel Lands Bihar Woman in Legal Trouble, FIR Registered

ಪಾಟ್ನಾ, ಫೆಬ್ರವರಿ 13: ರೋಸ್​ ಡೇ(Rose Day) ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್​ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅದಕ್ಕೊಂದು ಕಾರಣವಿದೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಾಂಚನ್ ಬ್ಯೂಟಿ ಪಾರ್ಲರ್ ಒಳಗೆ ಪಿಸ್ತೂಲ್ ಹಿಡಿದು ಪೋಸ್ ನೀಡುತ್ತಿರುವ ಪ್ರತ್ಯೇಕ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

ದುರ್ಗಾ ಸಪ್ತಶತಿ ಶ್ರವಣವನ್ನು ಮಾಡಿ. ಆಸ್ತಿ ಖರೀದಿ ಮೊದಲಾದ ವಿಚಾರಗಳಲ್ಲಿ ಕಾಡುತ್ತಿರುವ ಅಡೆತಡೆ ನಿವಾರಣೆಗೆ ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಉದ್ಯೋಗ ಸ್ಥಳದಲ್ಲಿ ನಿಮ್ಮ ಕೈ ಮೇಲಾಗುತ್ತದೆ. ಯಾರು ನಿಮ್ಮ ಸಾಮರ್ಥ್ಯ, ಶಕ್ತಿ ಹಾಗೂ ಪ್ರಭಾವದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುತ್ತಾರೋ ಅಂಥವರೇ ಬೆರಗಾಗುವಂಥ ಸಾಧನೆಗಳು ನಿಮ್ಮಿಂದ ಆಗಲಿದೆ. ಇತರರು ತಮ್ಮಿಂದ ಸಾಧ್ಯವೇ ಇಲ್ಲ ಎಂದು ಕೈ ಚೆಲ್ಲಿ, ಅಸಹಾಯಕರಾದ ಸಂದರ್ಭದಲ್ಲಿ…

Read More

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

Medical Career: ನೀಟ್ ಯುಜಿ ಪಾಸಾಗದೆಯೂ ನೀವು ವೈದ್ಯರಾಗಬಹುದು; ವಿವಿಧ ಕೋರ್ಸ್‌ಗಳ ವಿವರ ಇಲ್ಲಿದೆ – Kannada News | Medical Career Beyond NEET: Top Healthcare Courses After 12th

12ನೇ ತರಗತಿ ಮುಗಿಸಿದ ಬಳಿಕ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನದ ಕನಸು ಕಾಣುವ ವಿದ್ಯಾರ್ಥಿಗಳಿಗೆ NEET ಪರೀಕ್ಷೆ ದೊಡ್ಡ ಅಡ್ಡಿಯಾಗುತ್ತದೆ ಎಂಬ ಭಾವನೆ ಸಾಮಾನ್ಯವಾಗಿದೆ. ಆದರೆ NEET ನಲ್ಲಿ ಉತ್ತೀರ್ಣರಾಗದಿದ್ದರೂ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ವೃತ್ತಿ ನಿರ್ಮಿಸಬಹುದು ಎಂಬುದು ಸತ್ಯ. MBBS ಮಾತ್ರವಲ್ಲದೆ, ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಗೌರವಾನ್ವಿತ ಮತ್ತು ಉತ್ತಮ ಉದ್ಯೋಗಾವಕಾಶಗಳನ್ನು ನೀಡುವ ಕೋರ್ಸ್‌ಗಳು ಲಭ್ಯವಿವೆ. NEET ಅಗತ್ಯವಿರುವ ವೈದ್ಯಕೀಯ ಕೋರ್ಸ್‌ಗಳು: MBBS: ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಕೋರ್ಸ್. NEET-UG ಮೂಲಕ ಪ್ರವೇಶ. ಅವಧಿ 5.5…

Read More

ಮಂಗಳೂರು-ಉಡುಪಿಯಲ್ಲಿ ಹದಗೆಡುತ್ತಿದೆ ವಾಯು ಗುಣಮಟ್ಟ; ಉಸಿರಾಡುವ ಮುನ್ನ ಇರಲಿ ಎಚ್ಚರ.

ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) 58 ರಿಂದ 95 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನು ಹವಾಮಾನ ಇಲಾಖೆಯು ‘ಸಾಧಾರಣ’ (Moderate) ಅಥವಾ ‘ತೃಪ್ತಿಕರ’ (Satisfactory) ವರ್ಗಕ್ಕೆ ಸೇರಿಸಿದೆ. ನಗರದ ಕೆಲವು ಭಾಗಗಳಾದ ಬಿಟಿಎಂ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾಲಿನ್ಯದ ಮಟ್ಟ ತುಸು ಹೆಚ್ಚಿದ್ದು, ಅಲ್ಲಿನ AQI 100ರ ಗಡಿ ದಾಟಿದೆ. ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಹಾಗೂ ಮಕ್ಕಳಿಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು. ಕರಾವಳಿ ಭಾಗದಲ್ಲಿ ಇತ್ತೀಚೆಗೆ ವಾಯು…

Read More

ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು – Kannada News | Gadag: Shivling and Nandi Idol Vandalised in on Shivaratri

ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದೇ ಅಹಿತಕರ ಘಟನೆವೊಂದು ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿನ ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ…

Read More

Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು – Kannada News | Lokayukta Raids Across Karnataka: Anti Corruption Sleuths Conduct Early Morning Operations in Multiple Districts

ಬೆಂಗಳೂರು, ಡಿಸೆಂಬರ್ 23: ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಹಾಗೂ ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ…

Read More

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ. ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ? ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ…

Read More

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? – Kannada News | Ind vs WI Live Streaming When and Where to Watch India vs West Indies T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲಲು ಟೀಮ ಇಂಡಿಯಾ ಮೂರು ಹೆಜ್ಜೆ ದೂರದಲ್ಲಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಬೇಕೆಂದರೆ ಮುಂಬರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಅದರಲ್ಲಿ ಒಂದು ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಿರುವ ಭಾರತ ತಂಡ, ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಈ ಪಂದ್ಯದ…

Read More

ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್​ ಗೈರು, ಇವತ್ತು ನಡೆಯಲ್ಲ ಫಿನಾಲೆ – Kannada News | BBK12 Finale Shock: Sudeep’s Absence Reschedules Grand Finale to Sunday

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಇಂದು ಆಗಮಿಸಲು ಸಾಧ್ಯವಾಗದ ಕಾರಣ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ…

Read More