Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ. ಬಾಯಿರುಚಿಗೆ ಬಿದ್ದು, ಅಧಿಕ ಪ್ರಮಾಣದ ಆಹಾರ ಸೇವನೆ ಮಾಡುವುದಕ್ಕೆ ಹೋಗಬೇಡಿ. ದೇಹದ ತೂಕ ಮತ್ತು ನಿಮ್ಮ ಆರೋಗ್ಯ ಪರಿಸ್ಥಿತಿಯ ಕಡೆಗೂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಚೆನ್ನೈ, ಮಾರ್ಚ್ 24: ತಮಿಳುನಾಡು ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕೇವಲ ಒಂದು ತಿಂಗಳು ಬಾಕಿ ಇರುವಾಗ ಚುನಾವಣಾ ಪ್ರಚಾರ ಭರದಿಂದ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಕೆಲಸಗಳನ್ನು ಸಕ್ರಿಯವಾಗಿ ನಡೆಸುತ್ತಿವೆ. ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ AIADMK (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ತಮಿಳುನಾಡಿನ ಜನರಿಗೆ 297 ಭರವಸೆಗಳನ್ನು ನೀಡಲಾಗಿದೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ಸಾಮಾಜಿಕ…

Read More

ನಮ್ಮ ಮೆಟ್ರೋ 3ನೇ ಹಂತಕ್ಕಾಗಿ 6,775 ಕೋಟಿ ಸಾಲ: ಜಪಾನ್ ಸಂಸ್ಥೆಯೊಂದಿಗೆ ಬಿಎಂಆರ್​ಸಿಎಲ್​ ಒಪ್ಪಂದ

ಬೆಂಗಳೂರು, ಮಾರ್ಚ್​ 24: ನಮ್ಮ ಮೆಟ್ರೋ (namma-metro) 3ನೇ ಹಂತ ಆರೆಂಜ್ ಲೈನ್​ ಯೋಜನೆಗಾಗಿ ಜಪಾನ್​ನಿಂದ ಸಾಲ ಪಡೆದಿದೆ. ಎರಡು ಹಂತದಲ್ಲಿ 6,775 ಕೋಟಿ ರೂ ಸಾಲ ಒಪ್ಪಂದಕ್ಕೆ‌ ಜಪಾನ್ ಸಂಸ್ಥೆ ಜತೆ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿಯಿಂದ 30 ವರ್ಷ ಅವಧಿಗೆ ಸಾಲ ಪಡೆಯಲಾಗಿದೆ. 2032ಕ್ಕೆ ಆರೆಂಜ್ ಮಾರ್ಗ ಸಂಚಾರಕ್ಕೆ ಮುಕ್ತ ಸಾಧ್ಯತೆ ಇದೆ. ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್​ನಿಂದ ಸಾಲ ಈ ಬಗ್ಗೆ ಬೆಂಗಳೂರು ಮೆಟ್ರೋ…

Read More

‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಚಿತ್ರತಂಡದಿಂದ ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಯಾಕೆ ಈ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾವುದೇ ಸಿನಿಮಾಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ತುಂಬಾ ಮುಖ್ಯ. ನಾನು ಡಾರ್ಲಿಂಗ್ ಕೃಷ್ಣ (Darling Krishna)…

Read More

ಸರ್ಕಾರದ ಸುಕನ್ಯಾ ಸಮೃದ್ದಿ ಸ್ಕೀಮ್​ನಲ್ಲಿ ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್ಸ್?

ಸರ್ಕಾರದಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಲ್ಲಿ (Small Saving Schemes) ಹೆಚ್ಚು ಬಡ್ಡಿ ಕೊಡುವುದು ಸುಕನ್ಯಾ ಸಮೃದ್ಧಿ ಸ್ಕೀಮ್ (Sukanya Samriddhi Yojana). 2014-15ರಲ್ಲಿ ಆರಂಭವಾದ ಈ ಯೋಜನೆಯನ್ನು ಬಾಲಕಿಯರ ಭವಿಷ್ಯದ ಭದ್ರತೆಗೆಂದು ರೂಪಿಸಲಾಗಿದೆ. 10 ವರ್ಷದೊಳಗಿನ ವಯಸ್ಸಿನ ಬಾಲಕಿಯರ ಹೆಸರಿನಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್​ನ ಅಕೌಂಟ್ ತೆರೆಯಬಹುದು. ಯಾವುದಾದರೂ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಈ ಅಕೌಂಟ್ ಆರಂಭಿಸಬಹುದು. ಹೂಡಿಕೆ ಅವಧಿ 15 ವರ್ಷ ಇರುತ್ತದೆ. 21 ವರ್ಷಕ್ಕೆ ಮೆಚ್ಯೂರ್ ಆಗುತ್ತದೆ. ಅಂದರೆ, ಇವತ್ತು…

Read More

ಅನುವಾದಿನಿ AIನಿಂದ ಸಿಮ್ ಆಧಾರಿತ ಸಂವಾದಿನಿ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಡಿಜಿಟಲ್ ಜಗತ್ತು ವೇಗವಾಗಿ ಬದಲಾಗುತ್ತಿದೆ. ಡೇಟಾ ಸುರಕ್ಷತೆ ಮತ್ತು ವಿದೇಶಿ ಸರ್ವರ್‌ಗಳ ಮೇಲಿನ ಅವಲಂಬನೆಯಂತಹ ವಿಷಯಗಳು ತೀವ್ರವಾದ ಚರ್ಚೆಗಳಿಗೆ ಕಾರಣವಾಗುತ್ತಿವೆ. ದೇಶದಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಳಸುವ ಸಂವಹನ ಅಪ್ಲಿಕೇಶನ್‌ಗಳು ಹೆಚ್ಚಾಗಿ ವಿದೇಶಿ ಕಂಪನಿಗಳ ಒಡೆತನದಲ್ಲಿವೆ. ಹೀಗಾಗಿ ಸ್ಥಳೀಯ ಪರಿಹಾರಗಳ ಅಗತ್ಯ ಹೆಚ್ಚಾಗಿದೆ. ಇತ್ತೀಚೆಗೆ ಡಿಜಿಟಲ್ ವಂಚನೆಗಳು ಮತ್ತು ಹೊಸ ರೀತಿಯ ಸೈಬರ್ ಅಪರಾಧಗಳು ಜನರನ್ನು ಚಿಂತೆಗೀಡು ಮಾಡುತ್ತಿವೆ. ರಾಷ್ಟ್ರೀಯ ಭದ್ರತೆ ಮತ್ತು ವೈಯಕ್ತಿಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮದಲ್ಲಿ…

Read More

ನನ್ನ ಪಕ್ಷಕ್ಕೆ ನಾನು ಯೋಧನಂತೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್​ ಮಾತು

ನವದೆಹಲಿ, ಮಾರ್ಚ್​ 24: ಸೈನಿಕ ತನ್ನ ದೇಶಕ್ಕಾಗಿ ಹೋರಾಡುವಂತೆ, ರಾಜಕಾರಣಿಯೂ ತನ್ನ ಪಕ್ಷಕ್ಕಾಗಿ ನಿರಂತರವಾಗಿ ಹೋರಾಡಬೇಕು. ನನ್ನ ಪಕ್ಷಕ್ಕೆ ನಾನು ಯೋಧನಂತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಟಿವಿ9 ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜಕಾರಣಿಗಳು ತಮ್ಮ ಕುಟುಂಬ ಮತ್ತು ವೈಯಕ್ತಿಕ ಜೀವನಕ್ಕಿಂತ ಪಕ್ಷದ ಕೆಲಸಕ್ಕೆ ಆದ್ಯತೆ ನೀಡಬೇಕಾಗುತ್ತದೆ ಎಂದಿದ್ದಾರೆ. ತಮ್ಮ ರಾಜಕೀಯ ಜೀವನ ಬಗ್ಗೆ ಮಾತನಾಡಿ ಡಿಕೆ ಶಿವಕುಮಾರ್​, ಕೆಲವೊಮ್ಮೆ ರಾತ್ರಿ 2 ಗಂಟೆಯವರೆಗೆ ಕೆಲಸ…

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

ಮಹೇಶ್ ಬಾಬು ನಟನೆಯ ‘ಪೋಕಿರಿ’ ಮರು ಬಿಡುಗಡೆಗೆ ತೊಂದರೆ; ವಿಲನ್ ಆದ ಪುರಿ ಜಗನ್ನಾಥ್

ತೆಲುಗು ಚಿತ್ರರಂಗದಲ್ಲಿ ಹಳೆಯ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಮರು-ಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಅವರ ಸಿನಿಮಾಗಳಿಗೆ ರೀ-ರಿಲೀಸ್ ಸಮಯದಲ್ಲಿ ಭಾರಿ ಬೇಡಿಕೆ ಇರುತ್ತದೆ. ಇದೇ ಕಾರಣಕ್ಕೆ ಮೇ ತಿಂಗಳಲ್ಲಿ ‘ಪೋಕಿರಿ’ (Pokiri) ಸಿನಿಮಾವನ್ನು ಮತ್ತೆ ಅದ್ದೂರಿಯಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಈಗ ಈ ಬಿಡುಗಡೆಗೆ ಅನಿರೀಕ್ಷಿತ ವಿಘ್ನ ಎದುರಾಗಿದೆ. ಅದಕ್ಕೆಲ್ಲ ಕಾರಣ ಆಗಿರುವುದು ನಿರ್ದೇಶಕ, ನಿರ್ಮಾಪಕ ಪುರಿ ಜಗನ್ನಾಥ್. ಮಹೇಶ್ ಬಾಬು ಸಿನಿಮಾ ಬಿಡುಗಡೆಗೂ ಪುರಿ ಜಗನ್ನಾಥ್…

Read More