NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | NABARD Development Assistant Recruitment 2026: 162 Posts – Apply Online Now!

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ, ನಬಾರ್ಡ್ ಗುಡ್​ ನ್ಯೂಸ್​ ಪ್ರಕಟಿಸಿದೆ. ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ನಬಾರ್ಡ್‌ನ ಅಧಿಕೃತ ವೆಬ್‌ಸೈಟ್ nabard.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಧಿಕೃತ ಅಧಿಸೂಚನೆಯಲ್ಲಿ ಈ ನೇಮಕಾತಿಯನ್ನು ಗ್ರೂಪ್ ಬಿ ಕೇಡರ್ ಅಡಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಈ ನೇಮಕಾತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವುದು ಮತ್ತು ಆಯ್ಕೆಯಾದ ಅಭ್ಯರ್ಥಿಗಳನ್ನು ವಿವಿಧ ನಬಾರ್ಡ್ ಕಚೇರಿಗಳಿಗೆ ನೇಮಿಸಲಾಗುವುದು. ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ವಿವರವಾದ ಜಾಹೀರಾತು ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ:

ಅಭಿವೃದ್ಧಿ ಸಹಾಯಕ ಹುದ್ದೆಗೆ ಅಭ್ಯರ್ಥಿಗಳು ಬಿ.ಎ. ಅಥವಾ ಬಿ.ಕಾಂ. ಪದವಿ ಪಡೆದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು, ಆದರೆ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರ ಅಭ್ಯರ್ಥಿಗಳು ಕೇವಲ ಪದವಿ ಪಡೆದಿದ್ದರೆ ಸಾಕು. ಅಭಿವೃದ್ಧಿ ಸಹಾಯಕ (ಹಿಂದಿ) ಹುದ್ದೆಗೆ ಹಿಂದಿ ಅಥವಾ ಇಂಗ್ಲಿಷ್ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಹಿಂದಿಯಿಂದ ಇಂಗ್ಲಿಷ್‌ಗೆ ಮತ್ತು ಹಿಂದಿಗೆ ಭಾಷಾಂತರಿಸುವ ಉತ್ತಮ ಸಾಮರ್ಥ್ಯವನ್ನು ಹೊಂದಿರಬೇಕು.

ಅಭ್ಯರ್ಥಿಗಳು 21 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು. ಈ ಅರ್ಹತೆ ಮತ್ತು ವಯಸ್ಸಿನ ಅವಶ್ಯಕತೆಗಳು ಹಿಂದಿನ ನೇಮಕಾತಿಯನ್ನು ಆಧರಿಸಿವೆ ಮತ್ತು ಹೊಸ ವಿವರವಾದ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ನಬಾರ್ಡ್ ಅಭಿವೃದ್ಧಿ ಸಹಾಯಕ ನೇಮಕಾತಿ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಹಿಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ಅಂತಿಮ ಆಯ್ಕೆಯು ಎಲ್ಲಾ ಹಂತಗಳಲ್ಲಿನ ಕಾರ್ಯಕ್ಷಮತೆ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳು ನಬಾರ್ಡ್ ವೆಬ್‌ಸೈಟ್‌ಗೆ ಭೇಟಿ ನೀಡಿ ವೃತ್ತಿ ಸೂಚನೆಗಳ ವಿಭಾಗದಲ್ಲಿ ಲಭ್ಯವಿರುವ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಬಹುದು. ಹೊಸ ಅಭ್ಯರ್ಥಿಗಳು ಮೊದಲು ನೋಂದಾಯಿಸಿಕೊಳ್ಳಬೇಕು, ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಬಹು ಮುಖ್ಯವಾಗಿ ಅಭ್ಯರ್ಥಿಗಳು ಅರ್ಜಿ ನಮೂನೆಯ ಪ್ರತಿಯನ್ನು ಇಟ್ಟುಕೊಳ್ಳುವುದು ಅಗತ್ಯ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು, ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ – Kannada News | Bigg Boss Kannada Season 12 Gilli Nata Instagram followers count reached 16 Million

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಅವರ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬರುವುದಕ್ಕೂ ಮುನ್ನ ಗಿಲ್ಲಿ ಅವರಿಗೆ ತಕ್ಕಮಟ್ಟಿಗಿನ ಜನಪ್ರಿಯತೆ ಇತ್ತು. ಆದರೆ ಬಿಗ್ ಬಾಸ್ ಶೋನಿಂದಾಗಿ ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಗಿಲ್ಲಿಯನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ (Gilli Nata Instagram Followers) ಸಂಖ್ಯೆ ಅಚ್ಚರಿಯ ರೀತಿಯಲ್ಲಿ ಏರಿಕೆ ಆಗಿದೆ. ಇದನ್ನು ನೋಡಿದರೆ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ಗಿಲ್ಲಿ ನಟ ಅವರಿಗೆ ಅಚ್ಚರಿ ಆಗುವುದು ಗ್ಯಾರಂಟಿ.

ಬಿಗ್ ಬಾಸ್ ಶೋಗೆ ಹೋಗುವಾಗ ಗಿಲ್ಲಿ ನಟ ಅವರಿಗೆ 1 ಲಕ್ಷದ 6 ಸಾವಿರ ಜನರು ಫಾಲೋವರ್ಸ್ ಇದ್ದರು. ತಮಗೆ ಒಂದು ಮಿಲಿಯನ್, ಅಂದರೆ 10 ಲಕ್ಷ ಫಾಲೋವರ್ಸ್ ಆಗಬೇಕು ಎಂದು ಗಿಲ್ಲಿ ನಟ ಬಯಸಿದ್ದರು. ಅಭಿಮಾನಿಗಳು ಆ ಬಯಕೆಯನ್ನು ಕೆಲವೇ ದಿನಗಳ ಹಿಂದೆ ಈಡೇರಿಸಿದರು. ನೋಡನೋಡುತ್ತಿದ್ದಂತೆಯೇ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಏರಿಕೆ ಕಂಡಿದೆ.

ಇತ್ತೀಚೆಗೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಖಾತೆಗೆ 10 ಲಕ್ಷ (1 ಮಿಲಿಯನ್) ಫಾಲೋವರ್ಸ್ ಆಗಿದ್ದರು. ಫಿನಾಲೆ ಹತ್ತಿರ ಆದಂತೆಲ್ಲ ಗಿಲ್ಲಿ ನಟ ಅವರ ಕ್ರೇಜ್ ಜಾಸ್ತಿ ಆಗುತ್ತಲೇ ಹೋಯಿತು. ಚಿಕ್ಕ ಮಕ್ಕಳಿಂದ ವೃದ್ಧರ ತನಕ ಎಲ್ಲರಿಗೂ ಗಿಲ್ಲಿ ನಟ ನೆಚ್ಚಿನ ಸ್ಪರ್ಧಿ ಆದರು. ಅವರ ಕಾಮಿಡಿಗೆ ಜನರು ಮನಸೋತರು. ಅದರ ಪರಿಣಾಮವಾಗಿ ಫಿನಾಲೆಯ ದಿನ (ಜನವರಿ 18) ಗಿಲ್ಲಿ ನಟ ಅವರನ್ನು ಬರೋಬ್ಬರಿ 16 ಲಕ್ಷ (1.6 ಮಿಲಿಯನ್) ಜನರು ಫಾಲೋ ಮಾಡುತ್ತಿದ್ದಾರೆ.

ಇದು ಇಷ್ಟಕ್ಕೇ ನಿಲ್ಲುವುದಿಲ್ಲ. ಗಂಟೆ ಗಂಟೆಗೂ ಗಿಲ್ಲಿ ನಟ ಅವರ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫಿನಾಲೆ ಮುಗಿಯುವುದರೊಳಗೆ ಮತ್ತೊಂದು ಲಕ್ಷ ಫಾಲೋವರ್ಸ್ ಹೊಸದಾಗಿ ಸೇರ್ಪಡೆ ಆದರೂ ಅಚ್ಚರಿ ಏನಿಲ್ಲ. ಅಷ್ಟೇ ಅಲ್ಲದೇ, ಇನ್ನು ಕೆಲವೇ ದಿನಗಳಲ್ಲಿ ಅವರಿಗೆ ಬರೋಬ್ಬರಿ 2 ಮಿಲಿಯನ್ (20 ಲಕ್ಷ) ಫಾಲೋವರ್ಸ್ ಆಗುವುದು ಖಚಿತ.

ಇದನ್ನೂ ಓದಿ: Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು

ಯೂಟ್ಯೂಬ್ ವಿಡಿಯೋಗಳ ಮೂಲಕ ಗಿಲ್ಲಿ ನಟ ಅವರು ಫೇಮಸ್ ಆಗಿದ್ದರು. ಬಳಿಕ ಅವರಿಗೆ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ನಂತರ ಬಿಗ್ ಬಾಸ್ ಮೂಲಕ ಅದೃಷ್ಟದ ಬಾಗಿಲು ತೆರೆಯಿತು. ಇನ್ಮೇಲೆ ಅವರಿಗೆ ಸಿನಿಮಾ ಅವಕಾಶಗಳು ಹೇರಳವಾಗಿ ಸಿಗಲಿವೆ. ಬಡ ಕುಟುಂಬದಿಂದ ಬಂದ ಅವರು ಈ ಮೂಲಕ ಯಶಸ್ಸು ಗಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ – Kannada News | Bigg Boss Kannada Season 12 Finale Actor Mithra wants Rakshita Shetty to win

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada 12 Finale) ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ (Rakshita Shetty) ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾರೆ. ನಟ ಮಿತ್ರ ಕೂಡ ರಕ್ಷಿತಾ ಶೆಟ್ಟಿಯ ಗೆಲುವನ್ನು ನಿರೀಕ್ಷಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಈ ಮೊದಲು ಯಾವುದೇ ಮನರಂಜನಾ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳದ ರಕ್ಷಿತಾ ಶೆಟ್ಟಿ ಅವರಿಗೆ ಈಗ ಹೆಚ್ಚು ಬೆಂಬಲ ಸಿಗುತ್ತಿದೆ. ಆಕೆಗೆ ಸಾಮಾಜಿಕ ಕಳಕಳಿ ಇದೆ. ಹುಲಿಕುಣಿತದ ಬಗ್ಗೆ ಅವರು ಮಾತನಾಡಿದ್ದು ಇಷ್ಟ ಆಯಿತು. ಚಿಕ್ಕ ವಯಸ್ಸಿನಲ್ಲಿ ಆಕೆಗೆ ಅಷ್ಟು ಪ್ರಬುದ್ಧತೆ ಇದೆ. ಬಿಗ್ ಬಾಸ್​ನಲ್ಲಿ ಗಿಲ್ಲಿ (Gilli Nata) ಒಂದು ತೂಕ ಆದರೆ ರಕ್ಷಿತಾ ಇನ್ನೊಂದು ತೂಕ. ನಮ್ಮ ಮನೆಯಲ್ಲಿ ನಾವು ಆಕೆಗೆ ಸಪೋರ್ಟ್ ಮಾಡುತ್ತೇವೆ’ ಎಂದು ಮಿತ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Source link

‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು – Kannada News | BBK12 Finale: Sudeep’s Winner Won’t Share 50 Lakh Comment Stirring Controversy

ಕಿಚ್ಚ ಸುದೀಪ್ (Sudeep) ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಶೋ ನಡೆಸಿಕೊಡುತ್ತಿದ್ದಾರೆ. ಇಂದು (ಜನವರಿ 18) ಶೋ ಕೊನೆಯಾಗಲಿದೆ. ಅವರು ಈ ಬಾರಿ ವಿವಾದಗಳ ಮೂಲಕವೂ ಚರ್ಚೆಯಾದರು. ಸುದೀಪ್ ಅವರು ಕಿಚ್ಚನ ಚಪ್ಪಾಳೆ ಕೊಟ್ಟಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಸ್ಪಷ್ಟನೆ ಕೊಡುವಾಗ ಅವರು ಆಡಿದ ಮಾತು ಮತ್ತೆ ಚರ್ಚೆಗೆ ಕಾರಣ ಆಗಿದೆ.

ಕಳೆದ ವಾರ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಲಾಯಿತು. ಇದನ್ನು ಅನೇಕರು ಪ್ರಶ್ನೆ ಮಾಡಿದರು. ಈ ವಿಷಯ ಗಿಲ್ಲಿ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು. ಸುದೀಪ್ ಮಾಡಿದ್ದು ಸರಿ ಅಲ್ಲ ಎಂಬ ಮಾತುಗಳು ವ್ಯಕ್ತವಾದವು. ‘ಧ್ರುವಂತ್ ಅಲ್ಲ, ಗಿಲ್ಲಿಗೆ ಚಪ್ಪಾಳೆ ಕೊಡಬೇಕಿತ್ತು’ ಎಂದಿದ್ದಾರೆ ಗಿಲ್ಲಿ ಫ್ಯಾನ್ಸ್. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಚಪ್ಪಾಳೆ ನನ್ನ ವೈಯಕ್ತಿಕ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಆ ಬಳಿಕ ರಘು ಹಾಗೂ ಅಶ್ವಿನಿ ಅವರ ಫನ್ ವಿಟಿ ತೋರಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸುವಾಗ, ‘ನಾನು ಶೋ ಮುಗಿದ ಬಳಿಕ ಮನೆಗೆ ಹೋಗೋದು’ ಎಂದರು ಅಶ್ವಿನಿ. ಆಗ ಸುದೀಪ್, ‘ಶೋ ಮುಗಿಸಿಕೊಂಡು ನಾನು ನಮ್ಮನೆಗೆ ಹೋಗೋದು. ಗೆದ್ದವರು 50 ಲಕ್ಷ ರೂಪಾಯಿ ಯಾರಿಗೂ ಕೊಡಲ್ಲ. ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಇಲ್ಲಿ ನೋಡಿದರೆ ಎಲ್ಲರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅವರಿಗೆ ಗೆದ್ದವರು ಹಣ ಕೊಡಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

ಈ ಬಗ್ಗೆ ಅನೇಕರು ಚರ್ಚೆ ಮಾಡಿದ್ದಾರೆ. ‘ಸಿನಿಮಾ ವಿಷಯದಲ್ಲೂ ಜನರು ಹೀಗೆಯೇ ಮಾಡಿದ್ದರೆ ಏನಾಗುತ್ತಿತ್ತು’ ಎಂದು ಕೆಲವರು ಕೇಳಿದ್ದಾರೆ. ‘ಸಿನಿಮಾ ನೋಡಿದ ಮಾತ್ರಕ್ಕೆ ಆ ಹಣವನ್ನು ಹೀರೋಗಳು ನಮಗೆ ಕೊಡುವುದಿಲ್ಲ ಎಂದು ಸುಮ್ಮನಾಗಿದ್ದರೆ ಏನಾಗುತ್ತಿತ್ತು’ ಎಂಬುದು ಕೆಲವರ ಪ್ರಶ್ನೆ. ‘ಅಭಿಮಾನಿಗಳು ಅಭಿಮಾನ ತೋರಿಸುತ್ತಾರೆ ಹಣ ನಿರೀಕ್ಷೆ ಮಾಡುವುದಿಲ್ಲ’ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ – Kannada News | Noida Techie Dies in Pit: Delivery Agent’s Heroic Bid, Family Blames Negligence

ನೋಯ್ಡಾ, ಜನವರಿ 18: ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ತನ್ನ ಜೀವದ ಹಂಗನ್ನೂ ತೊರೆದು ಡೆಲಿವರಿ ಏಜೆಂಟ್(Delivery Agent) ಹೋರಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಅಲ್ಲೇ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ.

ಟೆಕ್ಕಿ ಯುವರಾಜ್ ಮೆಹ್ತಾ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಯತಪ್ಪಿ ನಿರ್ಮಾಣ ಹಂದಲ್ಲಿರುವ ಮಾಲ್​ನ ನೀರು ತುಂಬಿದ ಗುಂಡಿಗೆ ಕಾರು ಸಮೇತ ಬಿದ್ದಿದ್ದರು. ಕೂಡಲೇ ಟೆಕ್ಕಿ ತಮ್ಮ ತಂದೆಗೆ ಕರೆ ಮಾಡಿ, ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ನಾನು ಹೀಗೆ ನೀರಿನಲ್ಲಿ ಬಿದ್ದಿದ್ದೇನೆ ಬಂದು ಕಾಪಾಡಿ ಎಂದು ಬೇಡಿಕೊಂಡಿದ್ದರು.

ಡೆಲಿವರಿ ಏಜೆಂಟ್ ಬೇರೇನೂ ಯೋಚಿಸದೆ ನೀರಿಗೆ ಇಳಿದಿದ್ದರು, ತಮ್ಮ ಕೈಲಾದ ಪ್ರಯತ್ನ ಮಾಡಿದ್ದರು. ಪೊಲೀಸರು, ಡೈವರ್​ಗಳು ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ ಎಲ್ಲರೂ ಅಲ್ಲಿ ಸೇರಿದ್ದರು. ಫ್ಲಿಪ್‌ಕಾರ್ಟ್ ವಿತರಣಾ ಏಜೆಂಟ್ ಆಗಿರುವ ಮೊನಿಂದರ್, ಮೆಹ್ತಾ ಟಾರ್ಚ್ ಹಿಡಿದು ಕಾರಿನ ಒಳಗಿನಿಂದ ಸಹಾಯಕ್ಕಾಗಿ ಕಿರುಚುತ್ತಿರುವುದನ್ನು ನೋಡಿದ್ದರು.

ಮೆಹ್ತಾ ಉಸಿರಾಡಲು ಕಷ್ಟಪಡುತ್ತಿರುವುದನ್ನು ಅರಿತುಕೊಂಡ ಮೊನಿಂದರ್ ತನ್ನ ಸೊಂಟಕ್ಕೆ ಹಗ್ಗವನ್ನು ಕಟ್ಟಿಕೊಂಡು ಚರಂಡಿಯೊಳಗೆ ಹಾರಿ ಅವನನ್ನು ಉಳಿಸಲು ಪ್ರಯತ್ನಿಸಿದರು.ಮೆಹ್ತಾ ಆಗಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಮಧ್ಯರಾತ್ರಿ ಊಟ ಆರ್ಡರ್, ಕೆಳಗೆ ಬನ್ನಿ ಅಂದ್ರೂ ಬಾರದ ಗ್ರಾಹಕ, ತಾನೇ ತಿಂದ ಜೊಮ್ಯಾಟೊ ಏಜೆಂಟ್

ಸುಮಾರು 10 ದಿನಗಳ ಹಿಂದೆ ಟ್ರಕ್ ಹಳ್ಳಕ್ಕೆ ಬಿದ್ದಾಗಲೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಮೊನಿಂದರ್ ಆರೋಪಿಸಿದರು. ಶುಕ್ರವಾರ ರಾತ್ರಿ ಸೆಕ್ಟರ್ 150 ರ ಬಳಿ ಈ ದುರಂತ ಘಟನೆ ನಡೆದಿದ್ದು, ಟೆಕ್ಕಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನ ಬಳಿ ಇರುವ ನೀರು ತುಂಬಿದ ನಿರ್ಮಾಣ ಗುಂಡಿಗೆ ಡಿಕ್ಕಿ ಹೊಡೆದಿದೆ.

ಆ ಸ್ಥಳದಲ್ಲಿ ಸರಿಯಾದ ಬ್ಯಾರಿಕೇಡಿಂಗ್, ಎಚ್ಚರಿಕೆ ಫಲಕಗಳು ಮತ್ತು ಬೆಳಕಿನ ಕೊರತೆ ಇದೆ ಎಂದು ವರದಿಯಾಗಿದೆ.ಮೆಹ್ತಾ ಅವರ ಕಿರುಚಾಟ ಕೇಳಿ ಆ ದಾರಿಯಲ್ಲಿ ಹೋಗುತ್ತಿದ್ದ ಕೆಲವರು ಸಹಾಯ ಮಾಡಲು ಪ್ರಯತ್ನಿಸಿದರು, ಆದರೆ ಕಾರು ಸಂಪೂರ್ಣವಾಗಿ ಮುಳುಗಿತ್ತು.

ಸುಮಾರು ಐದು ಗಂಟೆಗಳ ರಕ್ಷಣಾ ಪ್ರಯತ್ನದ ಟೆಕ್ಕಿ ಮತ್ತೆ ಕಾರನ್ನು ಕಂದಕದಿಂದ ಹೊರತೆಗೆಯಲಾಯಿತು. ಮೆಹ್ತಾ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಘಟನೆಯ ನಂತರ, ಮೆಹ್ತಾ ಅವರ ಕುಟುಂಬವು ದೂರು ದಾಖಲಿಸಿದ್ದು, ಅಧಿಕಾರಿಗಳು ಸರ್ವಿಸ್ ರಸ್ತೆಯ ಉದ್ದಕ್ಕೂ ಪ್ರತಿಫಲಕಗಳನ್ನು ಅಳವಡಿಸಿಲ್ಲ ಅಥವಾ ಚರಂಡಿಗಳನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ – Kannada News | Mysuru police arrested a BSc Computer Science graduate for his alleged involvement in a series of home thefts

ಆರೋಪಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ

ಮೈಸೂರು, ಜನವರಿ 18: ಬಿಎಸ್ಸಿ ಕಂಪ್ಯೂಟರ್​​ ಸೈನ್ಸ್​​ನಲ್ಲಿ ಪದವಿ ಪಡೆದಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದು, ಸರಣಿ ಕಳ್ಳತನ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದ ಐನಾತಿ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಈತ ಆಂಧ್ರ ಪ್ರದೇಶದ ಡಾ. ಬಿ. ಆರ್. ಅಂಬೇಡ್ಕರ್ ಕೋಣಸೀಮದ ನಿವಾಸಿ. ವಿದ್ಯಾವಂತನಾಗಿದ್ದ ರೆಡ್ಡಿ ಯಾವುದಾದರೂ ಕಂಪನಿಗೆ ಸೇರಿ ಕೆಲಸ ಮಾಡುವ ಬದಲು, ಸುಲಭವಾಗಿ ಹಣ ಮಾಡುವದರ ಹಿಂದೆ ಬಿದ್ದಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇತ್ತೀಚೆಗೆ ಮೈಸೂರಿನಲ್ಲಿ ಸರಣಿ ಮನೆಗಳ್ಳತನವಾಗಿತ್ತು. 2025ರ ಡಿಸೆಂಬರ್ 31ರಂದು  ರಾಮಕೃಷ್ಣನಗರದ ವಾಸು ಬಡಾವಣೆಯ ಪ್ರೊ. ನಾಗಭೂಷಣ್ ಎಂಬುವರ ಮನೆ ಬೀಗ ಮುರಿದು 150 ಗ್ರಾಂ ಬೆಳ್ಳಿ ವಸ್ತುಗಳು, ಮನೆಗೆ ಅಳವಡಿಸಿದ್ದ 3 ಸಿಸಿ ಟಿವಿ ಕ್ಯಾಮರಗಳ ಕಳುವು ಮಾಡಲಾಗಿತ್ತು. ಅದೇ ದಿನ ರಾತ್ರಿ ಕುವೆಂಪುನಗರ ಹೆಚ್ ಬ್ಲಾಕ್ 5ನೇ ಮೇನ್, 1ನೇ ಕ್ರಾಸ್ ನಲ್ಲಿರುವ ಬ್ಯಾಂಕ್ ನಿವೃತ್ತ ನೌಕರ ಅನಂತ ಪದ್ಮನಾಭ ಅವರ ಮನೆಯ ಕಿಟಕಿ ಸರಳು ಮುರಿದು ಒಳನುಗ್ಗಿ 40 ಗ್ರಾಂ ತೂಕದ ಬೆಳ್ಳಿ ನಾಣ್ಯಗಳು ಹಾಗೂ 60,000 ರೂಪಾಯಿ ನಗದು ಕದಿಯಲಾಗಿತ್ತು.

ಮತ್ತೊಂದು ಪ್ರಕರಣದಲ್ಲಿ 2026ರ ಜನವರಿ 2ರಂದು ರಾತ್ರಿ ಶ್ರೀರಾಂಪುರ 2ನೇ ಹಂತ, 2ನೇ ಕ್ರಾಸ್‌ನಲ್ಲಿರುವ ಮೇಘನಾ ಎಂಬುವರ ಮನೆಗೆ ನುಗ್ಗಿ 120 ಗ್ರಾಂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಸ್ಥಳಕ್ಕೆ ಕುವೆಂಪು ನಗರ ಠಾಣೆ ಇನ್ಸ್‌ಪೆಕ್ಟರ್ ಯೋಗೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸುತ್ತಲಿನ ಪ್ರದೇಶದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿ  ಸಂಗ್ರಹಿಸಿ ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.

ಇದನ್ನೂ ಓದಿ: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!

ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ ಪೊಲೀಸರಿಗೆ ಈ ಎಲ್ಲ ಕಡೆ ಕಳ್ಳತನ ಮಾಡಿರುವುದು ಒಬ್ಬನೇ ಅನ್ನೋ ವಿಚಾರ ಸ್ಪಷ್ಟವಾಗಿತ್ತು. ಮತ್ತಷ್ಟು ಮಾಹಿತಿ ಸಂಗ್ರಹಿಸಿದಾಗ ಆರೋಪಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ ಅನ್ನೋ ಅಂತಾರಾಜ್ಯ ಕಳ್ಳ ಅಂತಾ ಗೊತ್ತಾಗಿದೆ. ಆತ ಅದಾಗಲೇ ಆಂಧ್ರಪ್ರದೇಶ, ಪುದುಚೇರಿ, ಕೇರಳ, ಹೈದ್ರಾಬಾದ್, ಹುಬ್ಬಳ್ಳಿ ಧಾರವಾಡಗಳಲ್ಲಿ ಕಳ್ಳತನ ಮಾಡಿದ್ದ. ಒಮ್ಮೆ ಬಂಧಿತನಾಗಿ ಪುದುಚೇರಿ ಜೈಲಿನಲ್ಲಿಯೂ ಇದ್ದ. ಜಾಮೀನಿನ ಮೇಲೆ ಹೊರಗೆ ಬಂದವನು ಮತ್ತೆ ಹಳೇ ಚಾಳಿ ಮುಂದುವರಿಸಿದ್ದ ಎಂಬ ಮಾಹಿತಿ ಸಿಕ್ಕಿದೆ.

ಕಳ್ಳತನಕ್ಕೂ ವಿಶೇಷ ತಯಾರಿ

ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ ತಾನು ಕಳ್ಳತನ ಮಾಡುವ ಮುನ್ನ ವಿಶೇಷ ತಯಾರಿ ನಡೆಸುತ್ತಿದ್ದ. ಮೈಸೂರಿಗೆ ಕಳ್ಳತನಕ್ಕೆ ಬಂದವನು ಮೊದಲು ಹೋಗಿದ್ದು ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನ ಚಾಮುಂಡಿ ಬೆಟ್ಟಕ್ಕೆ. ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ, ಕಳ್ಳತನ ಪ್ರಯತ್ನ ಫಲಿಸಲಿ ಅಂತಾ ಪ್ರಾರ್ಥನೆ ಮಾಡಿದ್ದ. ಇದಾದ ನಂತರ ಮೈಸೂರು ಸುತ್ತ ಒಂದು ರೌಂಡ್ ಹಾಕಿದ್ದ. ತನ್ನ ಕಾರಿನಲ್ಲಿ ಸುತ್ತಾಡಿ ಯಾವ ಮನೆ ಬೀಗ ಹಾಕಿದೆ? ಎಲ್ಲಿ ಸಿಸಿ ಕ್ಯಾಮರಾಗಳಿಲ್ಲ? ತಪ್ಪಿಸಿಕೊಳ್ಳಲು ಸರಿಯಾದ ಮಾರ್ಗ ಯಾವುದು? ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲನೆ ನಡೆಸಿದ್ದ. ನಂತರ ಮಧ್ಯರಾತ್ರಿ 1ರಿಂದ ಮುಂಜಾನೆ 4ಗಂಟೆ ಅವಧಿಯಲ್ಲಿ ಮನೆಗಳವು ಮಾಡುವುದು ಸೂಕ್ತ ಅಂತಾ ನಿರ್ಧರಿಸಿ ಕಳ್ಳತನ ಮಾಡಿ ಯಶಸ್ವಿಯಾಗಿದ್ದ. ಇನ್ನು ಈತ ಮನೆಯಲ್ಲಿದ್ದ ನಗದು, ಚಿನ್ನ, ಬೆಳ್ಳಿ ಸೇರಿ ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದ. ಆದ್ರೆ ಮನೆಯ ದೇವರ ಕೋಣೆಯಲ್ಲಿದ್ದ ಯಾವುದೇ ವಸ್ತುಗಳನ್ನು ಮುಟ್ಟುತ್ತಿರಲಿಲ್ಲ.

ಯಾವಾಗ ಈತನ ಬಗ್ಗೆ ಮಾಹಿತಿ ಸಿಕ್ಕಿತೋ ಮೈಸೂರು ಪೊಲೀಸರು ಅಲರ್ಟ್ ಆಗಿ, ವಿಶೇಷ ತಂಡ ರಚಿಸಿದ್ದರು. ಖಚಿತ ಮಾಹಿತಿ ಆಧರಿಸಿ 2026ರ ಜನವರಿ 6ರಂದು ಮಧ್ಯರಾತ್ರಿ ಹಾಸನ ನಗರದಲ್ಲಿ ದೂರದಲ್ಲಿ ಕಾರು ನಿಲ್ಲಿಸಿ ಮನೆಯೊಂದರಲ್ಲಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ವೆಂಕಟೇಶ್ವರ ರೆಡ್ಡಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 310 ಗ್ರಾಂ ಬೆಳ್ಳಿ ವಸ್ತುಗಳು ಮತ್ತು 67 ಸಾವಿರ ನಗದು ಸೇರಿ ಮೂರು ಸಿಸಿ ಕ್ಯಾಮರಾ, ಕೃತ್ಯಕ್ಕೆ ಬಳಸಿದ್ದ ಪೋರ್ಡ್ ಕಾರು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ – Kannada News | Davos WEF Summit 2026, strong India pavilion and presence in the meeting at Swiss city

ನವದೆಹಲಿ, ಜನವರಿ 18: ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ಸೋಮವಾರದಿಂದ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ (Davos WEF Summit 2026) ಭಾರತ ಸೇರಿದಂತೆ ವಿವಿಧ ದೇಶಗಳ ಆಡಳಿತಗಾರರು, ಉದ್ಯಮಿಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಒಕ್ಕೂಟಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಒಟ್ಟು 3,000ಕ್ಕೂ ಅಧಿಕ ಮಂದಿ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಜನವರಿ 19, ಸೋಮವಾರದಿಂದ ಜನವರಿ 23, ಶುಕ್ರವಾರದವರೆಗೆ ಐದು ದಿನಗಳ ಕಾಲ ಈ ಸಮಿಟ್ ನಡೆಯಲಿದೆ.

ಅಮೆರಿಕ ಈ ಬಾರಿಯ ಸಭೆಯಲ್ಲಿ ವಿಶೇಷ ಅಸ್ಥೆ ವಹಿಸಿದೆ. ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕದ ಅತಿದೊಡ್ಡ ನಿಯೋಗವು ಡಾವೋಸ್ ಸಮಿಟ್​ನಲ್ಲಿ ಪಾಲ್ಗೊಳ್ಳಲಿದೆ. ಬೇರೆ ಬೇರೆ ದೇಶಗಳ ವಿದೇಶ ಮಂತ್ರಿಗಳು, ವಿತ್ತ ಮಂತ್​ರಿಗಳು, ವಾಣಿಜ್ಯ ಮಂತ್ರಿಗಳು ಪಾಲ್ಗೊಳ್ಳಬಹುದು.

ಇದನ್ನೂ ಓದಿ: ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ

ಭಾರತದಿಂದ ಪ್ರಬಲ ತಂಡ…

ಡಾವೋಸ್ ಡಬ್ಲ್ಯುಇಎಫ್ 2026 ಸಭೆಯಲ್ಲಿ ಭಾರತದಿಂದ ಪ್ರಬಲ ಪ್ರಾತಿನಿಧ್ಯ ಇರುತ್ತದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಅಶ್ವಿನಿ ವೈಷ್ಣವ್, ಶಿವರಾಜ್ ಸಿಂಗ್ ಚೌಹಾಣ್, ಕೆ ರಾಮಮೋಹನ್ ನಾಯ್ಡು ಪಾಲ್ಗೊಳ್ಳಬಹುದು. ಆರು ರಾಜ್ಯಗಳ ಮುಖ್ಯಮಂತ್ರಿಗಳು ಡಾವೋಸ್​ಗೆ ತೆರಳುತ್ತಿದ್ದಾರೆ. ಮಹಾರಾಷ್ಟ್ರ ಸಿಎಂ ದೆವೇಂದ್ರ ಫಡ್ಣವಿಸ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಸ್ಸಾಂ ಸಿಎಂ ಹಿಮಂತ ಬಸ್ವ ಶರ್ಮಾ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೇನ್ ಅವರು ಪಾಲ್ಗೊಳ್ಳುತ್ತಿದ್ದಾರೆ. ನೂರಕ್ಕೂ ಅಧಿಕ ಪ್ರಮುಖ ಕಂಪನಿಗಳ ಸಿಇಒಗಳ ಉಪಸ್ಥಿತಿಯೂ ಇರುತ್ತದೆ.

ಡಾವೋಸ್ ಕಾಂಗ್ರೆಸ್ ಸೆಂಟರ್​ನ ಕಟ್ಟಡದ ಒಂದೇ ಫ್ಲೋರ್​ನಲ್ಲಿ ಭಾರತದ ಎಂಟು ರಾಜ್ಯಗಳ ಪೆವಿಲಿಯನ್ ಇದೆ. ಕರ್ನಾಟಕ ತೆಲಂಗಾಣ, ಗುಜರಾತ್, ಉತ್ತರಪ್ರದೇಶ ಹೀಗೆ ವಿವಿಧ ರಾಜ್ಯಗಳಿಗೆ ವಿಶೇಷ ಮೀಟಿಂಗ್ ಹಾಲ್​ಗಳನ್ನು ಒಂದೇ ಫ್ಲೋರ್​ನಲ್ಲಿ ಮೀಸಲಿರಿಸಲಾಗಿದೆ.

ಇದನ್ನೂ ಓದಿ: ಹಲವು ವರ್ಷಗಳ ಬಳಿಕ ಮೊದಲ ಆದಾಯ ಸವಿದ ಭಾರತದ ಡಿಸ್ಕಾಂ ಕಂಪನಿಗಳು

ಕರ್ನಾಟಕದಿಂದ ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ

ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಬೇಕಿತ್ತು. ಆದರೆ, ಕಾರಣಾಂತರದಿಂದ ಅವರು ಹೋಗುತ್ತಿಲ್ಲ. ಸಚಿವರಾದ ಎಂಬಿ ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ವೆಸ್ಟ್ ಕರ್ನಾಟಕ ಎಂದು ಪ್ರತ್ಯೇಕ ಪೆವಿಲಿಯನ್ ನಿರ್ಮಿಸಲಾಗಿದೆ.

ಉದ್ಯಮಿಗಳ ಪೈಕಿ ಮುಕೇಶ್ ಅಂಬಾನಿ, ಎನ್ ಚಂದ್ರಶೇಖರನ್, ಸಂಜೀವ್ ಬಜಾಜ್, ಹರಿ ಎಸ್ ಭಾರ್ತಿಯಾ, ಸುದರ್ಶನ್ ವೇಣು, ಅನೀಶ್ಶಾ, ನಾದಿರ್ ಗೋದ್ರೇಜ್, ಸಾಜ್ಜನ್ ಜಿಂದಾಲ್, ನಿಖಿಲ್ ಕಾಮತ್, ಸುನೀಲ್ ಭಾರ್ತಿ ಮಿಟ್ಟಲ್, ನಂದನ್ ನಿಲೇಕಣಿ, ಸಲೀಲ್ ಪರೇಖ್, ರಿಷದ್ ಪ್ರೇಮ್​ಜಿ ಮೊದಲಾದವರು ಡಾವೋಸ್ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ! – Kannada News | Lokayukta Arrests FDA Caught Red Handed Taking Bribe

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Exit mobile version