ಭೀಮನ ಅಮಾವಾಸ್ಯೆ; ರಾಜ್​ಕುಮಾರ್ ಕಿಡ್ನ್ಯಾಪ್​​ಗೆ ಕಾರಣವಾಗಿತ್ತು ಆ ಒಂದು ಘಟನೆ – Kannada News | Unseen Warning: How Dr Rajkumar Unannounced Gajanur Visit Led to His 2000 Abduction

ರಾಜ್ಯದ ಹಿರಿಯ ರಾಜಕಾರಣಿ,  ಎಸ್.ಎಂ. ಕೃಷ್ಣ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮರು ವರ್ಷವೇ ಎದುರಾದ ಬೃಹತ್ ಸವಾಲೆಂದರೆ ಅದು ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ. ಭೀಮನ ಅಮಾವಾಸ್ಯೆ ದಿನದಂದು ನಡೆದ ಆ ಘಟನೆ ಅತ್ಯಂತ ಕರಾಳ ನೆನಪಾಗಿ ಉಳಿದುಕೊಂಡಿದೆ.

ಪೂಜೆಯ ಶುಭ ದಿನದಂದೇ ನಡೆದ ಕರಾಳ ಘಟನೆ

ಅಂದು ಪತಿಯ ಆಯುಷ್ಯ ಮತ್ತು ಕ್ಷೇಮಕ್ಕಾಗಿ ಮಹಿಳೆಯರು ವಿಶೇಷ ಪೂಜೆ ಸಲ್ಲಿಸುವ ಪವಿತ್ರ ಭೀಮನ ಅಮಾವಾಸ್ಯೆಯ ದಿನ (ಜುಲೈ 30, 2000). ಇಡೀ ನಾಡು ಹಬ್ಬದ ಸಂಭ್ರಮದಲ್ಲಿದ್ದಾಗ, ವೀರಪ್ಪನ್ ಮತ್ತು ಆತನ ಗುಂಪು ಗಾಜನೂರಿನಲ್ಲಿದ್ದ ಡಾ. ರಾಜ್‌ಕುಮಾರ್ ಅವರ ಮನೆಗೆ ನುಗ್ಗಿ ಅವರನ್ನು ಅಪಹರಿಸಿತು. ಪಾರ್ವತಮ್ಮನವರು ಗಂಡನ ಆಯುಷ್ಯಕ್ಕಾಗಿ ಪೂಜೆ ಸಲ್ಲಿಸುವ ಪವಿತ್ರ ದಿನದಂದೇ ಕಾಡುಗಳ್ಳ ವೀರಪ್ಪನ್ ಅಣ್ಣಾವ್ರನ್ನು ಕಾಡಿಗೆ ಎಳೆದೊಯ್ದದ್ದು ಇಡೀ ನಾಡಿಗೆ ಆಘಾತ ತಂದಿತ್ತು.

ಸರ್ಕಾರಕ್ಕೆ ಸುಳಿವಿತ್ತು

ಈ ಅಪಹರಣದ ಹಿಂದೆ ಒಂದು ರೋಚಕ ಹಿನ್ನೆಲೆಯಿತ್ತು. ರಾಜ್‌ಕುಮಾರ್ ಅವರಿಗೆ ವೀರಪ್ಪನ್‌ನಿಂದ ಅಪಾಯವಿದೆ ಎಂಬ ಸುಳಿವು ರಾಜ್ಯ ಸರ್ಕಾರಕ್ಕೆ ಮೊದಲೇ ಇತ್ತು. ಈ ಕಾರಣದಿಂದಲೇ ಕೃಷ್ಣ ಅವರ ಸರ್ಕಾರವು ರಾಜ್‌ಕುಮಾರ್ ಅವರೊಂದಿಗೆ ಒಂದು ಪ್ರಮುಖ ಒಪ್ಪಂದ ಮಾಡಿಕೊಂಡಿತ್ತು.

ತಮಿಳುನಾಡು ಗಡಿಯಲ್ಲಿರುವ ಹುಟ್ಟೂರು ಗಾಜನೂರಿಗೆ ತೆರಳುವುದಿದ್ದರೆ, ಆ ಬಗ್ಗೆ ಮುಂಚಿತವಾಗಿಯೇ ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಮಾಹಿತಿ ನೀಡಬೇಕು ಎಂಬುದು ಆ ಒಪ್ಪಂದವಾಗಿತ್ತು. ಸರ್ಕಾರಕ್ಕೆ ತಿಳಿಸಿದರೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತಿತ್ತು. ರಾಜ್‌ಕುಮಾರ್ ಅವರು ಕೂಡ ಇದಕ್ಕೆ ಒಪ್ಪಿದ್ದರು.

ಇದನ್ನೂ ಓದಿ: ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ 

ಪ್ರತಿ ಬಾರಿಯೂ ಗಾಜನೂರಿಗೆ ತೆರಳುವಾಗ ಅಣ್ಣಾವ್ರು ಸರ್ಕಾರಕ್ಕೆ ಮಾಹಿತಿ ನೀಡುತ್ತಿದ್ದರು. ಆದರೆ, ಅಂದು ಭೀಮನ ಅಮಾವಾಸ್ಯೆಯ ಸಂದರ್ಭದಲ್ಲಿ ಗೃಹಪ್ರವೇಶದ ಕೆಲಸಗಳಿದ್ದ ಕಾರಣ, ಅವರು ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದೆ ನೇರವಾಗಿ ಗಾಜನೂರಿಗೆ ತೆರಳಿದ್ದರು. ಭದ್ರತೆಯೇ ಇಲ್ಲದ ಆ ಕ್ಷಣಕ್ಕಾಗಿ ಕಾಯುತ್ತಿದ್ದ ವೀರಪ್ಪನ್, ನೇರವಾಗಿ ಮನೆಗೆ ನುಗ್ಗಿ ಅಣ್ಣಾವ್ರನ್ನು ಎಳೆದೊಯ್ದನು. ಸುದೀರ್ಘ 108 ದಿನಗಳ ಬಳಿಕ ಡಾ. ರಾಜ್‌ಕುಮಾರ್ ಅವರನ್ನು ಸುರಕ್ಷಿತವಾಗಿ ಮರಳಿ ಕರೆತರಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಜಿರಳೆ’ ಹೇಳಿಕೆ ವಾಣಿಜ್ಯ ದುರುಪಯೋಗ ಸಂಬಂಧ ಪಿಐಎಲ್​​: ಕೇಂದ್ರ ಸರ್ಕಾರ, CBIಗೆ ಸುಪ್ರೀಂ ಕೋರ್ಟ್ ನೋಟಿಸ್ – Kannada News | Supreme Court Issues Notice to Centre and CBI Over Commercial Misuse and Doctoring of CJI’s ‘Cockroach’ Remark

ಕೇಂದ್ರ ಸರ್ಕಾರ, CBIಗೆ ಸುಪ್ರೀಂ ಕೋರ್ಟ್​​ನಿಂದ ನೋಟಿಸ್ ಜಾರಿImage Credit source: Getty Images

ನವದೆಹಲಿ, ಆಗಸ್ಟ್​​ 12: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ (Cockroach) ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿ, ಬಳಿಕ ‘ಕಾಕ್ರೋಚ್​​ ಜನತಾ ಪಾರ್ಟಿ’ ಹುಟ್ಟಿಕೊಂಡು NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಜೆನ್​​ ಜಿ ಪ್ರತಿಭಟನೆಗೆ ಕಾರಣವಾದ ಘಟನೆಯ ಮೂರು ತಿಂಗಳ ಬಳಿಕ, ಈ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಿ ವಾಣಿಜ್ಯವಾಗಿ ಬಳಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು CBIಯಿಂದ ಪ್ರತಿಕ್ರಿಯೆ ಕೇಳಿದೆ.

ಅರ್ಜಿದಾರರ ವಾದವೇನು?

ಅರ್ಜಿದಾರ ಹಾಗೂ ವಕೀಲ ರಾಜಾ ಚೌಧರಿ, ನ್ಯಾಯಾಲಯದ ಕಲಾಪದ ವೇಳೆ ಸಂಪೂರ್ಣ ವಿಭಿನ್ನ ಸಂದರ್ಭದಲ್ಲೇ ಬಳಸಲಾಗಿದ್ದ ‘ಜಿರಳೆ’ ಎಂಬ ಪದವನ್ನು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಿ, ವರ್ಚುವಲ್ ಕೋರ್ಟ್ ಕಲಾಪದ ವಿಡಿಯೋವನ್ನು ಎಡಿಟ್ ಮಾಡಿ, ವಾಣಿಜ್ಯ ಲಾಭಕ್ಕಾಗಿ ಬಳಸಿಕೊಳ್ಳಲಾಗಿದೆ. ಇದರಿಂದ ನ್ಯಾಯಾಂಗದ ಘನತೆಗೆ ಧಕ್ಕೆ ಉಂಟಾಗಿದ್ದು, ಸಂಸ್ಥೆಯ ಸಮಗ್ರತೆಗೆ ಹಾನಿಯಾಗಿದೆ ಎಂದು ಆರೋಪಿಸಿದ್ದರು. ನ್ಯಾಯಾಲಯದ ಮೌಖಿಕ ಹೇಳಿಕೆಗಳು ಅಥವಾ ರೂಪಕಗಳನ್ನು ವಾಣಿಜ್ಯವಾಗಿ ದುರುಪಯೋಗಪಡಿಸಿಕೊಳ್ಳುವ, ಟ್ರೇಡ್‌ಮಾರ್ಕ್ ಆಗಿ ಬಳಸುವ, ಹಣಗಳಿಕೆಯ ಉದ್ದೇಶದಿಂದ ಪ್ರಸಾರ ಮಾಡುವ ಅಥವಾ ಅನುಮತಿಯಿಲ್ಲದೆ ವಾಣಿಜ್ಯ ಬಳಕೆ ಮಾಡುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

ಇದನ್ನೂ ಓದಿ: ಕಾಕ್ರೋಚ್ ಜನತಾ ಪಾರ್ಟಿಯಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ದೇಶವ್ಯಾಪಿ ಅಭಿಯಾನ ಘೋಷಣೆ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಮಾರು ಅರ್ಧ ಗಂಟೆ ಅರ್ಜಿಯ ವಿಚಾರಣೆ ನಡೆಸಿತು.

ಯಾವ ಸಂದರ್ಭದಲ್ಲಿ ‘ಜಿರಳೆ’ ಹೇಳಿಕೆ ಪ್ರಸ್ತಾಪವಾಗಿತ್ತು?

ಮೇ 15ರಂದು ದೆಹಲಿ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಸಂಬಂಧಿಸಿದ ‘ಸಂಜಯ್ ದುಬೆ ವರ್ಸಸ್ ರಿಜಿಸ್ಟ್ರಾರ್ ಜನರಲ್ ಆಫ್ ದೆಹಲಿ ಹೈಕೋರ್ಟ್’ ಪ್ರಕರಣದ ವಿಚಾರಣೆ ವೇಳೆ CJI ನೇತೃತ್ವದ ಪೀಠ ಈ ಹೇಳಿಕೆ ನೀಡಿತ್ತು. ಆ ಸಂದರ್ಭದಲ್ಲಿ ನಕಲಿ ವಕೀಲರ ವಿಚಾರವನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ CJI ಸೂರ್ಯಕಾಂತ್ ಅವರು ‘ಜಿರಳೆ’ ಎಂಬ ಪದವನ್ನು ಬಳಸಿದ್ದರು. ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗ, ವೃತ್ತಿಪರ ಗುಣಮಟ್ಟದ ಕುಸಿತ ಮತ್ತು ಇದರಿಂದ ನ್ಯಾಯಾಂಗ ಸಂಸ್ಥೆಯ ಮೇಲೆ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು ಎಂದು ಚೌಧರಿ ವಿವರಿಸಿದ್ದಾರೆ.

ಮೇ 15ರ ವಿಚಾರಣೆಯ ಬಳಿಕ ನ್ಯಾಯಾಲಯದ ಕಲಾಪಗಳ ಆಯ್ದ ಭಾಗಗಳನ್ನು ಎಡಿಟ್ ಮಾಡಿ ಪ್ರಸಾರ ಮಾಡುವ ವಿಡಿಯೋ ಕ್ಲಿಪ್‌ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ. ನ್ಯಾಯಾಲಯದ ಕಲಾಪದ ವೇಳೆ ಮಾಡಿದ ಮೌಖಿಕ ಹೇಳಿಕೆಗಳನ್ನು ಸಂದರ್ಭದಿಂದ ಬೇರ್ಪಡಿಸಿ, ತಿರುಚಿದ ರೀತಿಯಲ್ಲಿ ವಿಡಿಯೋಗಳು ಹಾಗೂ ಮೀಮ್‌ಗಳಾಗಿ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದನ್ನು ಕೆಲವರು ವಾಣಿಜ್ಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ನ್ಯಾಯಾಲಯಗಳು ಮತ್ತು ನ್ಯಾಯಮೂರ್ತಿಗಳ ಬಗ್ಗೆ ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸುವ ಉದ್ದೇಶದಿಂದ ಇಂತಹ ವಿಡಿಯೋಗಳನ್ನು ತಿರುಚಿ ಪ್ರಸಾರ ಮಾಡುವ ಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಸ್ತುತ ಯಾವುದೇ ಪರಿಣಾಮಕಾರಿ ವ್ಯವಸ್ಥೆ ಇಲ್ಲ ಎಂದು ಅರ್ಜಿದಾರರು ತಿಳಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ – Kannada News | Karnataka Air Quality Index: Madikeri Tops Clean Air List, Bengaluru AQI at 29

ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ

ಬೆಂಗಳೂರು, ಆಗಸ್ಟ್ 12: ಇಂದು ಕರ್ನಾಟಕದ ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದ್ದು, ಬೆಂಗಳೂರಿನಲ್ಲೂ ವಾಯುಮಾಲಿನ್ಯದ ಪ್ರಮಾಣ ಕಡಿಮೆ ದಾಖಲಾಗಿದೆ. ಇಂದು ಬೆಳಗಿನ ಲಭ್ಯವಿರುವ ರಿಯಲ್‌ಟೈಮ್ ಮಾಹಿತಿ ಪ್ರಕಾರ ಬೆಂಗಳೂರಿನ AQI 29ರಷ್ಟಿದ್ದು, ‘ಉತ್ತಮ’ (Good) ಮಟ್ಟದಲ್ಲಿದೆ. ಕರ್ನಾಟಕದಾದ್ಯಂತ 44 ಮಾನಿಟರಿಂಗ್ ಕೇಂದ್ರಗಳಿಂದ ಸಂಗ್ರಹಿಸಲಾದ ಮಾಹಿತಿಯನ್ನು ಆಧರಿಸಿ ಈ ಅಂಕಿಅಂಶಗಳು ಲಭ್ಯವಾಗಿವೆ.

ರಾಜ್ಯದ ಪ್ರಮುಖ ನಗರಗಳ ಪೈಕಿ ಮಂಗಳೂರಿನಲ್ಲಿ AQI 57 ದಾಖಲಾಗಿದ್ದು, ‘ಮಧ್ಯಮ’ (Moderate) ಮಟ್ಟದಲ್ಲಿದೆ. ಕಾರವಾರದಲ್ಲಿ 44, ಯಾದಗಿರಿಯಲ್ಲಿ 32, ಚಾಮರಾಜನಗರದಲ್ಲಿ 31, ಬೆಂಗಳೂರಿನಲ್ಲಿ 29, ಬೀದರ್ ಮತ್ತು ಕೋಲಾರದಲ್ಲಿ ತಲಾ 27, ಮೈಸೂರಿನಲ್ಲಿ 27, ರಾಯಚೂರಿನಲ್ಲಿ 27 ಹಾಗೂ ಕಲಬುರಗಿಯಲ್ಲಿ 24 AQI ದಾಖಲಾಗಿದೆ.

ಯಾವ ನಗರದಲ್ಲಿ ಗಾಳಿ ಹೆಚ್ಚು ಸ್ವಚ್ಛ?

ಕರ್ನಾಟಕದ ಸ್ವಚ್ಛ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮಡಿಕೇರಿ ಅಗ್ರಸ್ಥಾನದಲ್ಲಿದ್ದು, AQI 16 ದಾಖಲಾಗಿದೆ. ಬೆಳಗಾವಿ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ತಲಾ 17, ತುಮಕೂರಿನಲ್ಲಿ 17, ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ 18, ಚಿಕ್ಕಬಳ್ಳಾಪುರದಲ್ಲಿ 19, ಧಾರವಾಡ ಹಾಗೂ ಗದಗದಲ್ಲಿ 19 AQI ದಾಖಲಾಗಿದೆ.

ಇನ್ನು ಹಾವೇರಿಯಲ್ಲಿ 27, ಹುಬ್ಬಳ್ಳಿಯಲ್ಲಿ 28, ಶಿವಮೊಗ್ಗದಲ್ಲಿ 28, ವಿಜಯಪುರದಲ್ಲಿ 33, ಕೊಪ್ಪಳದಲ್ಲಿ 33, ಮಡಿಕೇರಿಯಲ್ಲಿ 16 ಹಾಗೂ ದಾವಣಗೆರೆಯಲ್ಲಿ 18 AQI ದಾಖಲಾಗಿದೆ. ಕರಾವಳಿ ಭಾಗದಲ್ಲೂ ಗಾಳಿಯ ಗುಣಮಟ್ಟ ಬಹುತೇಕ ಉತ್ತಮವಾಗಿದ್ದು, ಉಡುಪಿಯಲ್ಲಿ AQI 41, ಕಾರವಾರದಲ್ಲಿ 44 ಹಾಗೂ ಮಂಗಳೂರಿನಲ್ಲಿ 57 ದಾಖಲಾಗಿದೆ.

ಮಳೆಯ ವಾತಾವರಣ, ಗಾಳಿಯ ಚಲನೆ ಹಾಗೂ ಸ್ಥಳೀಯ ಹವಾಮಾನ ಪರಿಸ್ಥಿತಿಗಳು ವಾಯುಮಾಲಿನ್ಯದ ಮಟ್ಟದ ಮೇಲೆ ಪರಿಣಾಮ ಬೀರುವುದರಿಂದ ದಿನದ ಅವಧಿಯಲ್ಲಿ AQI ಅಂಕೆಗಳು ಬದಲಾಗುವ ಸಾಧ್ಯತೆ ಇದೆ. ಹೀಗಾಗಿ ಸೂಕ್ಷ್ಮ ಕಣಗಳ ಪ್ರಮಾಣ ಹೆಚ್ಚಾಗುವ ಪ್ರದೇಶಗಳಲ್ಲಿ ಜನರು ವಿಶೇಷವಾಗಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಳಿ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ vs ಬಾಂಗ್ಲಾ ಸರಣಿ ಡೌಟ್: ಡೇಟ್ ಫಿಕ್ಸ್ ಮಾಡಿದ ಅಫ್ಘಾನಿಸ್ತಾನ್! – Kannada News | IND vs BAN Series Under Threat After Afghanistan T20I Confirmation

ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ರದ್ದಾಗುವ ಸಾಧ್ಯತೆಯಿದೆ. ಏಕೆಂದರೆ, ಇದೇ ಅವಧಿಯಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿಯನ್ನು ಆಡಲಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು (ACB) ಭಾರತದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೀಗಾಗಿ, ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ನಡೆಯುವುದು ಅನುಮಾನ.

ವೇಳಾಪಟ್ಟಿ ಸಂಘರ್ಷ:

ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ (BCB) ಸೆಪ್ಟೆಂಬರ್ 1 ರಿಂದ 13 ರವರೆಗೆ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲು ಉತ್ಸುಕವಾಗಿತ್ತು. ಆದರೆ, ಅಫ್ಘಾನಿಸ್ತಾನ್ ಮಂಡಳಿ ಈಗ ಸೆಪ್ಟೆಂಬರ್ 13 ರಿಂದ 17 ರವರೆಗೆ ಭಾರತದ ವಿರುದ್ಧ ಸರಣಿ ನಿಗದಿಪಡಿಸಿದೆ.

ಸೆಪ್ಟೆಂಬರ್ 13 ರಂದು ಎರಡೂ ಸರಣಿಗಳ ದಿನಾಂಕಗಳು ಒಟ್ಟಿಗೇ ಎದುರಾಗುವುದರಿಂದ, ಭಾರತ ತಂಡಕ್ಕೆ ಬಾಂಗ್ಲಾದೇಶದಿಂದ ವಾಪಸ್ ಬಂದು ತಕ್ಷಣವೇ ಅಫ್ಘಾನ್ ಎದುರಿಸುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದೆ. ಹೀಗಾಗಿ ಬಾಂಗ್ಲಾ ವಿರುದ್ಧ ಸರಣಿ ರದ್ದಾಗುವುದು ಬಹುತೇಕ ಖಚಿತವಾಗಿದೆ.

ಭಾರತ vs ಆಫ್ಘಾನಿಸ್ತಾನ್ ಸರಣಿ ಮುಖ್ಯಾಂಶಗಳು:

  • ಸ್ವರೂಪ: 3 ಪಂದ್ಯಗಳ ಟಿ20 ಸರಣಿ.
  • ದಿನಾಂಕಗಳು: 2026ರ ಸೆಪ್ಟೆಂಬರ್ 13, 15 ಮತ್ತು 17.
  • ಕ್ರೀಡಾಂಗಣ: ಎಲ್ಲಾ ಪಂದ್ಯಗಳು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿವೆ.
  • ಪ್ರಸಾರ ಹಕ್ಕು: ಡಿಜಿಟಲ್ ಪ್ರಸಾರದ ಹಕ್ಕುಗಳನ್ನು ಫ್ಯಾನ್‌ಕೋಡ್ (FanCode) ಪಡೆದುಕೊಂಡಿದ್ದು, ಟಿವಿ ಪ್ರಸಾರಕ್ಕಾಗಿ ಜಿಯೋಸ್ಟಾರ್, ಸೋನಿ ಸ್ಪೋರ್ಟ್ಸ್ ಹಾಗೂ ಝೀ ಸಂಸ್ಥೆಗಳೊಂದಿಗೆ ಮಾತುಕತೆ ಪ್ರಗತಿಯಲ್ಲಿದೆ.

ರಾಜತಾಂತ್ರಿಕ ಅಡಚಣೆ:

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಉಂಟಾದ ರಾಜಕೀಯ ಅಸ್ಥಿರತೆ ಹಾಗೂ ಭದ್ರತಾ ಕಾರಣಗಳಿಂದಾಗಿ ಭಾರತ ಸರ್ಕಾರವು ಟೀಮ್ ಇಂಡಿಯಾವನ್ನು ಬಾಂಗ್ಲಾದೇಶಕ್ಕೆ ಕಳುಹಿಸಲು ಬಿಸಿಸಿಐಗೆ (BCCI) ಇನ್ನೂ ಹಸಿರು ನಿಶಾನೆ ನೀಡಿಲ್ಲ. ರಾಜತಾಂತ್ರಿಕ ಉದ್ವಿಗ್ನತೆಯೂ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಇನ್ನು 2026ರ ಐಪಿಎಲ್ (IPL) ಸಮಯದಲ್ಲಿ ಬಾಂಗ್ಲಾದೇಶದ ಸ್ಟಾರ್ ಬೌಲರ್ ಮುಸ್ತಾಫಿಝುರ್ ರೆಹಮಾನ್ ಅವರನ್ನು ಬಿಸಿಸಿಐ ಸೂಚನೆ ಮೇರೆಗೆ ಬಾಂಗ್ಲಾ ಮಂಡಳಿ ಅರ್ಧದಲ್ಲೇ ವಾಪಸ್ ಕರೆಸಿಕೊಂಡಿತ್ತು. ಇದು ಉಭಯ ಮಂಡಳಿಗಳ ನಡುವೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಾಂಗ್ಲಾದೇಶ್ ತಂಡವು ಸುರಕ್ಷತೆಯ ಕಾರಣ ನೀಡಿ ಟಿ20 ವಿಶ್ವಕಪ್ ಬಹಿಷ್ಕರಿಸುವ ಆಲೋಚನೆ ನಡೆಸಿತ್ತು, ಇದು ಬಿಸಿಸಿಐ ಕೋಪಕ್ಕೆ ಕಾರಣವಾಗಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಬಿಸಿಸಿಐ ಬಾಂಗ್ಲಾ ಪ್ರವಾಸದ ಬದಲು ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಹೆಚ್ಚಿನ ಆದ್ಯತೆ ನೀಡಿದೆ.

ಬಾಂಗ್ಲಾದೇಶದ ತೆರೆಮರೆಯ ಪ್ರಯತ್ನ:

ಬಿಸಿಸಿಐ  ಅಥವಾ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಈ ಸರಣಿಯನ್ನು ಅಧಿಕೃತವಾಗಿ ‘ರದ್ದು’ ಎಂದು ಘೋಷಿಸಿಲ್ಲ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಈ ಸರಣಿ ನಡೆಯುವುದು ಅಸಾಧ್ಯ ಎನ್ನಲಾಗುತ್ತಿದೆ.

ಅತ್ತ ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್ ನೀಡಿರುವ ಹೇಳಿಕೆಯ ಪ್ರಕಾರ, ಈ ಸರಣಿಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಉಭಯ ದೇಶಗಳ ವಿದೇಶಾಂಗ ಸಚಿವರ ಮಟ್ಟದಲ್ಲಿ ಕೊನೆಯ ಹಂತದ ಮಾತುಕತೆಗಳು ನಡೆಯುತ್ತಿವೆ.

ಇದನ್ನೂ ಓದಿ: IND vs SL: ಸ್ವಿಂಗ್ ಮತ್ತು ಸ್ಪಿನ್ ತಂತ್ರಕ್ಕೆ ಟೀಮ್ ಇಂಡಿಯಾ ರಣತಂತ್ರ!

ಅಫ್ಘಾನಿಸ್ತಾನ್ ಸರಣಿ ಖಚಿತವಾಗಿರುವುದರಿಂದ, ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತ ತಂಡ ಬಾಂಗ್ಲಾದೇಶ್ ಪ್ರವಾಸ ಕೈಗೊಳ್ಳುವುದು ಸಾಧ್ಯವಿಲ್ಲ. ಹೀಗಾಗಿ, ಭವಿಷ್ಯದಲ್ಲಿ ಈ ಸರಣಿಗಾಗಿ ದಿನಾಂಕಗಳನ್ನು ಮರುಹೊಂದಿಸಲು ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿಯು ತೆರೆಮರೆಯ ಪ್ರಯತ್ನಗಳನ್ನು ಆರಂಭಿಸಿದೆ.

Source link

ಭೀಮನ ಅಮವಾಸ್ಯೆ ದಿನ ನಡೆದಿತ್ತು ಅಣ್ಣಾವ್ರ ಕಿಡ್ನ್ಯಾಪ್; 108 ದಿನಗಳ ಕಥನ – Kannada News | 108 Days in the Jungle: Remembering the Shocking Abduction of Dr. Rajkumar by Veerappan on bheemana amavasye

ಜುಲೈ 30, 2000 — ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಇತಿಹಾಸದಲ್ಲೇ ಅತ್ಯಂತ ಕಪ್ಪು ಮತ್ತು ಆತಂಕಕಾರಿ ದಿನ. ತಮಿಳುನಾಡಿನ ಪ್ರಸಿದ್ಧ ಕಾಡುಗಳ್ಳ, ಮರದ ಕಳ್ಳಸಾಗಣೆದಾರ ವೀರಪ್ಪನ್, ಕನ್ನಡದ ಸಾಂಸ್ಕೃತಿಕ ರಾಯಭಾರಿ ಹಾಗೂ ವರನಟ ಡಾ. ರಾಜ್‌ಕುಮಾರ್ ಅವರನ್ನು ಅಪಹರಿಸಿದ ಸುದ್ದಿ ಇಡೀ ದಕ್ಷಿಣ ಭಾರತವನ್ನೇ ಬೆಚ್ಚಿಬೀಳಿಸಿತು. ಅದನ್ನು ಇಂದು ನೆನಪಿಸಿಕೊಳ್ಳಲೂ ಒಂದು ಕಾರಣವಿದೆ. ಇಂದು ಭೀಮನ ಅಮವಾಸ್ಯೆ. ಅದೇ ದಿನ ಅಣ್ಣಾವ್ರ ಕಿಡ್ನ್ಯಾಪ್ ಆಗಿತ್ತು.

ಜುಲೈ 30ರ ಆ ಕಪ್ಪು ರಾತ್ರಿ: ಏನಾಯಿತು?

ಗಾಜನೂರಿನಲ್ಲಿದ್ದ ತಮ್ಮ ಹುಟ್ಟೂರಿನ ಹೊಸ ಮನೆಯ ಗೃಹಪ್ರವೇಶಕ್ಕೆ ಡಾ. ರಾಜ್‌ಕುಮಾರ್ ತೆರಳಿದ್ದರು. ಜುಲೈ 30ರ ರಾತ್ರಿ ಸುಮಾರು 9:30ರ ವೇಳೆಗೆ ಸುರಿಯುತ್ತಿದ್ದ ಮಳೆಯ ನಡುವೆ, ಬಂದೂಕುಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ಬಂದ ವೀರಪ್ಪನ್ ಹಾಗೂ ಆತನ ಸಹಚರರ ಗುಂಪು ಮನೆಗೆ ನುಗ್ಗಿತು.

ಅಲ್ಲಿಂದ ಡಾ. ರಾಜ್‌ಕುಮಾರ್, ಅವರ ಅಳಿಯ ಗೋವಿಂದರಾಜ್, ನಂಟ ನಾಗೇಶ್ ಮತ್ತು ಚಲನಚಿತ್ರ ನಿರ್ಮಾಪಕ ನಾಗಪ್ಪ ಅವರನ್ನು ಬಲವಂತವಾಗಿ ದಟ್ಟ ಅಡವಿಗೆ ಕರೆದೊಯ್ಯಲಾಯಿತು. ನಿರ್ಗಮಿಸುವ ಮುನ್ನ ವೀರಪ್ಪನ್, ರಾಜ್‌ಕುಮಾರ್ ಅವರ ಪತ್ನಿ ಪಾರ್ವತಮ್ಮ ಅವರಿಗೆ ಒಂದು ಆಡಿಯೋ ಕ್ಯಾಸೆಟ್ ನೀಡಿ, ಅದನ್ನು ಆಗಿನ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ತಲುಪಿಸುವಂತೆ ತಿಳಿಸಿದ್ದ.

ಎರಡೂ ರಾಜ್ಯಗಳಲ್ಲಿ ಉದ್ವಿಗ್ನತೆ ಮತ್ತು ಆತಂಕ

ಅಪಹರಣದ ಸುದ್ದಿ ಹಬ್ಬುತ್ತಿದ್ದಂತೆ ಕರ್ನಾಟಕದಲ್ಲಿ ಭಾರೀ ಆಕ್ರೋಶ ಮತ್ತು ಉದ್ವಿಗ್ನತೆ ಸೃಷ್ಟಿಯಾಯಿತು. ಬೆಂಕಿ ಹತ್ತಿ ಉರಿದ ಶಾಲೆ-ಕಾಲೇಜುಗಳು, ಬಂದ್ ಆದ ಸಾರಿಗೆ ವ್ಯವಸ್ಥೆ ಮತ್ತು ಲಕ್ಷಾಂತರ ಅಭಿಮಾನಿಗಳ ಕಣ್ಣೀರು ರಾಜ್ಯದ ಆಡಳಿತ ಯಂತ್ರವನ್ನೇ ನಡುಗಿಸಿತು. ಅತ್ತ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಹಾಗೂ ಇತ್ತ ಎಸ್.ಎಂ. ಕೃಷ್ಣ ಅವರಿಗೆ ಈ ಬಿಕ್ಕಟ್ಟು ಅತಿ ದೊಡ್ಡ ಸವಾಲಾಗಿ ಪರಿಣಮಿಸಿತು.

ವೀರಪ್ಪನ್ ಬೇಡಿಕೆಗಳು ಮತ್ತು ಸಂಧಾನಾಧಿಕಾರಿ ನಕ್ಕೀರನ್ ಗೋಪಾಲ್

ಅಡವಿಯಲ್ಲಿದ್ದ ವೀರಪ್ಪನ್ ತನ್ನ ಬೇಡಿಕೆಗಳ ಪಟ್ಟಿಯನ್ನು ಒಳಗೊಂಡ ಆಡಿಯೋ ಕ್ಯಾಸೆಟ್‌ಗಳನ್ನು ಕಳುಹಿಸಲು ಪ್ರಾರಂಭಿಸಿದ:

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಬೇಡಿಕೆಗಳು.

ತಮಿಳುನಾಡು ಜೈಲಿನಲ್ಲಿದ್ದ ತನ್ನ ಸಹಚರರ ಬಿಡುಗಡೆ.

ತಮಿಳು ಭಾಷೆಗೆ ಸಂಬಂಧಿಸಿದ ಸಾರ್ವಜನಿಕ ಬೇಡಿಕೆಗಳು ಹಾಗೂ ಕೋಟ್ಯಂತರ ರೂಪಾಯಿ ಹಣ.

ಈ ಸಂಕೀರ್ಣ ಪರಿಸ್ಥಿತಿಯನ್ನು ತಿಳಿಗೊಳಿಸಲು ‘ನಕ್ಕೀರನ್’ ಪತ್ರಿಕೆಯ ಸಂಪಾದಕ ಆರ್‌ಆರ್ ಗೋಪಾಲ್ ಅವರನ್ನು ಅಧಿಕೃತ ಸಂಧಾನಾಧಿಕಾರಿಯಾಗಿ ದಟ್ಟ ಅರಣ್ಯಕ್ಕೆ ಕಳುಹಿಸಲಾಯಿತು. ಗೋಪಾಲ್ ಅವರು ಕಾಡಿಗೆ ಹಲವು ಬಾರಿ ತೆರಳಿ ವೀರಪ್ಪನ್ ಜೊತೆ ಮಾತುಕತೆ ನಡೆಸಿದರು ಮತ್ತು ರಾಜ್‌ಕುಮಾರ್ ಅವರ ಕ್ಷೇಮ ಸಮಾಚಾರದ ಆಡಿಯೋ/ವೀಡಿಯೋ ತುಣುಕುಗಳನ್ನು ಹೊರತಂದರು.

108 ದಿನಗಳ ಕಾಡಿನ ಜೀವನ: ರಾಜ್‌ಕುಮಾರ್ ಅವರ ಧೈರ್ಯ

ದಟ್ಟವಾದ ಕಾಡು, ಸುರಿಯುವ ಮಳೆ, ಜಿಗಣೆಗಳು ಮತ್ತು ಸೊಳ್ಳೆಗಳ ಕಾಟದ ನಡುವೆಯೂ ಡಾ. ರಾಜ್‌ಕುಮಾರ್ ಅತ್ಯಂತ ಶಾಂತ ಹಾಗೂ ಧೈರ್ಯಶಾಲಿಯಾಗಿ ಉಳಿದುಕೊಂಡರು. ಅವರು ಪ್ರತಿದಿನ ಬೆಳಗ್ಗೆ ಯೋಗ ಮತ್ತು ಪ್ರಾಣಾಯಾಮ ಮಾಡುವುದನ್ನು ಬಿಡಲಿಲ್ಲ. ತಮ್ಮ ಸೌಮ್ಯ ಸ್ವಭಾವ ಮತ್ತು ಮಾತಿನಿಂದ ವೀರಪ್ಪನ್ ಮತ್ತು ಆತನ ಗುಂಪಿನ ಮನ ಗೆದ್ದರು. ವೀರಪ್ಪನ್ ಸ್ವತಃ ರಾಜ್‌ಕುಮಾರ್ ಅವರ ಅಭಿಮಾನಿಯಂತೆ ನಡೆದುಕೊಳ್ಳಲು ಪ್ರಾರಂಭಿಸಿದನು ಎಂದು ನಂತರದ ದಿನಗಳಲ್ಲಿ ವರದಿಯಾಯಿತು.

ನವೆಂಬರ್ 15: ಐತಿಹಾಸಿಕ ಬಿಡುಗಡೆ

ಸುಮಾರು ಮೂರೂವರೆ ತಿಂಗಳುಗಳ (108 ದಿನಗಳು) ಸುದೀರ್ಘ ಕಾಯುವಿಕೆ, ರಾಜಕೀಯ ತಂತ್ರಗಾರಿಕೆಗಳು ಮತ್ತು ರಹಸ್ಯ ಸಂಧಾನಗಳ ನಂತರ, ನವೆಂಬರ್ 15, 2000ರಂದು ವೀರಪ್ಪನ್, ಡಾ. ರಾಜ್‌ಕುಮಾರ್ ಅವರನ್ನು ಯಾವುದೇ ಷರತ್ತಿಲ್ಲದೆ ಸುರಕ್ಷಿತವಾಗಿ ಬಿಡುಗಡೆ ಮಾಡಿದ.

ಅವರು ಬೆಂಗಳೂರಿಗೆ ಮರಳಿದಾಗ ಇಡೀ ಕರ್ನಾಟಕವೇ ಸಂಭ್ರಮಿಸಿತು. ರಾಜ್ಯಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಅಪಹರಣದಂತಹ ಭೀಕರ ಸನ್ನಿವೇಶದಲ್ಲೂ ಸಮಾಧಾನ ಮತ್ತು ಶಾಂತಿ ಕಾಯ್ದುಕೊಂಡ ಡಾ. ರಾಜ್‌ಕುಮಾರ್ ಅವರ ನಡೆ ಪ್ರತಿಯೊಬ್ಬ ಕನ್ನಡಿಗನಿಗೆ ಸದಾ ಸ್ಫೂರ್ತಿಯಾಗಿ ಉಳಿಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಟಕಟೆಯಲ್ಲಿ ನಟ ಯಶ್, ಆರೋಪ ಮಾಡಿದವರೇ ಫಿದಾ – Kannada News | Yash participated in Aap Ki Adalat show

ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಯಶ್ (Yash), ತಮ್ಮ ನಟನೆಯ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕೆ ಎರಡೆರಡು ಬಾರಿ ಅಮೆರಿಕಕ್ಕೆ ಹೋಗಿ ಬಂದಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಪ್ರಚಾರವನ್ನು ಆರಂಭಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಬಿಡುಗಡೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಪ್ರಚಾರಕ್ಕೆ ವೇಗ ನೀಡಬೇಕಾದ ಸಮಯದಲ್ಲಿ ಯಶ್ ಅವರು ಕಟಕಟೆಯಲ್ಲಿ ನಿಂತಿದ್ದಾರೆ. ಆದರೆ ಯಶ್ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವವರೇ ಯಶ್ ಅವರ ವ್ಯಕ್ತಿತ್ವಕ್ಕೆ ಫಿದಾ ಆಗಿದ್ದಾರೆ.

ಯಶ್, ಕಟಕಟೆಯಲ್ಲಿರುವುದು ನಿಜ, ಆದರೆ ಅದು ಅಸಲಿ ನ್ಯಾಯಾಲಯದ ಕಟಕಟೆ ಅಲ್ಲ ಬದಲಿಗೆ ಖ್ಯಾತ ಪತ್ರಕರ್ತ ರಜತ್ ಶರ್ಮಾ ಅವರು ನಡೆಸಿಕೊಡುವ ‘ಆಪ್​ ಕಿ ಅದಾಲತ್’ ಕಟಕಟೆಯಲ್ಲಿ. ‘ಆಪ್​​ ಕಿ ಅದಾಲತ್’ ಭಾರತೀಯ ಟಿವಿ ಲೋಕದ ಬಹು ಹಳೆಯ ಶೋ. ರಜತ್ ಶರ್ಮಾ ಅವರು ದೇಶದ ಪ್ರಮುಖ ರಾಜಕಾರಣಿಗಳು, ಸಿನಿಮಾ ತಾರೆಯರು, ಟಿವಿ ತಾರೆಯರನ್ನು ಕರೆಸಿ, ಕಟಕೆಯಲ್ಲಿ ನಿಲ್ಲಿಸಿ ಪ್ರಶ್ನೆಗಳನ್ನು ಕೇಳುತ್ತಾರೆ. ಸೆಲೆಬ್ರಿಟಿಗಳು ಅದಕ್ಕೆ ಉತ್ತರ ನೀಡುತ್ತಾರೆ. ಮಾಜಿ ಪ್ರಧಾನಿಗಳು, ಹಾಲಿ ಪ್ರಧಾನಿಗಳು, ಬಾಲಿವುಡ್​​ನ ಖಾನ್​​ಗಳು ಇನ್ನೂ ಹಲವಾರು ಮಂದಿ ಈ ಕಾರ್ಯಕ್ರಮಕ್ಕೆ ಬಂದು ಕಟಕಟೆಯಲ್ಲಿ ಕೂತಿದ್ದಾರೆ.

ಇದೀಗ ನಟ ಯಶ್ ಸಹ ‘ಆಪ್​ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಕಟಕಟೆಯಲ್ಲಿ ಕೂತು ರಜತ್ ಶರ್ಮಾ ಅವರ ಬೆಂಕಿಯುಂಡೆಯಂಥಹಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಯಶ್ ಅವರು ಭಾಗಿಯಾಗಿರುವ ಎಪಿಸೋಡ್ ನ ಚಿತ್ರೀಕರಣ ಆಗಿದ್ದು, ಶೀಘ್ರವೇ ಪ್ರಸಾರ ಆಗಲಿದೆ. ರಜತ್ ಶರ್ಮಾ ಅವರು ಯಶ್ ಅವರು ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ದಿನಕ್ಕೆ ಎರಡು ಹೊತ್ತು ಊಟ ಕೂಡ ಪಡೆಯಲು ಸಹ ಕಷ್ಟ ಪಡುತ್ತಿದ್ದ ಈ ವ್ಯಕ್ತಿ ಈಗ ಕೋಟ್ಯಂತರ ಹಣ ಸಂಪಾದಿಸುತ್ತಾರೆ. ಇವರು ಪರದೆಯ ಮೇಲೆ ಕಾಣಿಸಿಕೊಳ್ಳುವುದಿಲ್ಲ ಬದಲಿಗೆ ಪರದೆಯನ್ನು ಹರಿದು ಹಾಕುತ್ತಾರೆ’ ಎಂದಿದ್ದಾರೆ ರಜತ್ ಶರ್ಮಾ.

ಇದನ್ನೂ ಓದಿ:‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದಿದ್ದಾರೆ ಭಾರೀ ಸಂಭಾವನೆ; ಉಳಿದ ಕಲಾವಿದರು ಪಡೆದಿದ್ದೆಷ್ಟು?

ಯಶ್, ಟಿವಿ ಸಂದರ್ಶನಗಳಿಂದ ದೂರವೇ ಉಳಿದಿರುತ್ತಾರೆ. ಆದರೆ ಇದೀಗ ರಜತ್ ಶರ್ಮಾ ಅವರ ಶೋಗೆ ಹೋಗಿದ್ದಾರೆ. ರಜತ್ ಶರ್ಮಾ ತಮ್ಮ ನೇರಾ-ನೇರಾ ಆರೋಪಗಳು ಪ್ರಶ್ನೆಗಳಿಗೆ ಹೆಸರುವಾಸಿ. ಕಹಿ ಪ್ರಶ್ನೆಗಳನ್ನೇ ಕೇಳುವುದು ಹೆಚ್​ಚು. ಯಶ್ ಅವರಿಗೆ ರಜತ್ ಅವರು ಎಂಥಹಾ ಪ್ರಶ್ನೆಗಳನ್ನು ಹಾಕಿದ್ದಾರೆ, ಅವುಗಳಿಗೆ ಯಶ್ ಉತ್ತರ ಏನಾಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ಅನ್ನು ಗೀತೂ ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ನಯನತಾರಾ ಇನ್ನೂ ಕೆಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast August 12: Rain and Strong Winds Warning Across Districts

ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್ 12ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನಲ್ಲಿ ಗಾಳಿ, ಮಳೆ

ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ, ವಿದ್ಯುತ್ ಕಂಬಗಳ ಸಮೀಪ ನಿಲ್ಲದಂತೆ ಹಾಗೂ ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:18 am, Wed, 12 August 26

Source link

ಜೆಪ್ಟೋಗೆ ಶಾಕ್​​ ಕೊಟ್ಟ ಆಹಾರ ಸುರಕ್ಷತಾ ಇಲಾಖೆ: ಅಸ್ವಚ್ಛವಾಗಿದ್ದ ಹೊಸಕೋಟೆಯ ಗೋದಾಮು ಸೀಜ್​​! – Kannada News | Food Safety Crackdown: Zepto’s Hoskote Warehouse Seized Over Unhygienic Conditions and FSSAI Violations

ಜೆಪ್ಟೋಗೆ ಶಾಕ್​​ ಕೊಟ್ಟ ಆಹಾರ ಸುರಕ್ಷತಾ ಇಲಾಖೆImage Credit source: NDTV

ಹೊಸಕೋಟೆ, ಆಗಸ್ಟ್​​ 12: ಕ್ವಿಕ್‌ ಕಾಮರ್ಸ್‌ ಸಂಸ್ಥೆ ಜೆಪ್ಟೋಗೆ ಸೇರಿದ ಬೆಂಗಳೂರು (Bengaluru) ಹೊರವಲಯದ ಗೋದಾಮಿನ ಮೇಲೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಸಾವಯವ ತ್ಯಾಜ್ಯ, ಎಲ್ಲೆಂದರಲ್ಲಿ ಬಿದ್ದಿದ್ದ ಕವರ್‌ಗಳು ಮತ್ತು ಬಾಟಲಿಗಳು, ನೆಲದ ಮೇಲೆ ಸಂಗ್ರಹವಾಗಿದ್ದ ಕೊಳೆ ಹಾಗೂ ಖಾಲಿ ಕಾರ್ಡ್‌ಬೋರ್ಡ್‌ ಬಾಕ್ಸ್‌ಗಳು ಪತ್ತೆಯಾಗಿವೆ. ಗೋದಾಮಿನ ಪರಿಸ್ಥಿತಿ ಅತ್ಯಂತ ಅಸ್ವಚ್ಛವಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಹಾರ ಉತ್ಪನ್ನಗಳ ಲೇಬಲಿಂಗ್‌ನಲ್ಲಿ ನಿಯಮ ಉಲ್ಲಂಘನೆ, ತಪ್ಪು ಬ್ರ್ಯಾಂಡಿಂಗ್‌ (Misbranding) ಹಾಗೂ ಅಸ್ವಚ್ಛ ರೀತಿಯಲ್ಲಿ ಆಹಾರ ನಿರ್ವಹಣೆ ಸೇರಿದಂತೆ ಹಲವು ಲೋಪಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ.

 FSSAI ನಿಯಮಗಳಿಗೆ ವಿರುದ್ಧವಾದ ಲೇಬಲಿಂಗ್‌ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿರುವ ಜೆಪ್ಟೋ ಗೋದಾಮಿನಲ್ಲಿ ಆಹಾರ ಉತ್ಪನ್ನಗಳ ಗುಣಮಟ್ಟ, ಸುರಕ್ಷತೆ, ಸಂಗ್ರಹಣೆ, ಲೇಬಲಿಂಗ್‌ ಮತ್ತು ಆಹಾರ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸುವ ಉದ್ದೇಶದಿಂದ ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿತ್ತು. ತಪಾಸಣೆ ವೇಳೆ FSSAI ನಿಯಮಗಳಿಗೆ ವಿರುದ್ಧವಾದ ಲೇಬಲಿಂಗ್‌, ತಪ್ಪು ಬ್ರ್ಯಾಂಡಿಂಗ್‌, ಅಸ್ವಚ್ಛ ಆಹಾರ ನಿರ್ವಹಣೆ ಮತ್ತು ಸಂಗ್ರಹಣಾ ಪರಿಸ್ಥಿತಿ ಸೇರಿದಂತೆ ಹಲವು ಆಹಾರ ಸುರಕ್ಷತಾ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಗಳ ಮೇಲೆ ದಾಳಿ: ಇಲಿ, ಹೆಗ್ಗಣಗಳ ಕಂಡು ಹೌಹಾರಿದ ಅಧಿಕಾರಿಗಳು!

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಗೋದಾಮನ್ನು ಸೀಲ್ ಮಾಡಿದ್ದು, ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಆಹಾರ ಉದ್ಯಮ ನಿರ್ವಾಹಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರಿಗೆ ಸುರಕ್ಷಿತ, ಗುಣಮಟ್ಟದ ಹಾಗೂ ಸ್ವಚ್ಛ ಆಹಾರ ಲಭ್ಯವಾಗುವುದನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ ಇಲಾಖೆ ಇಂತಹ ವಿಶೇಷ ತಪಾಸಣಾ ಕಾರ್ಯಾಚರಣೆಗಳನ್ನು ಮುಂದುವರಿಸಲಿದೆ ಎಂದು ತಿಳಿಸಿದೆ.

ಜೆಪ್ಟೋ ಪ್ರತಿಕ್ರಿಯೆ

ಘಟನೆಗೆ ಸಂಬಂಧಿಸಿದಂತೆ ಜೆಪ್ಟೋ ಕೂಡ ಪ್ರತಿಕ್ರಿಯೆ ನೀಡಿದೆ. ದೇಶಾದ್ಯಂತ ಅಧಿಕಾರಿಗಳು ನಿಯಮಿತ ಮೇಲ್ವಿಚಾರಣೆಯ ಭಾಗವಾಗಿ ಆಹಾರ ಸುರಕ್ಷತಾ ತಪಾಸಣೆಗಳನ್ನು ನಡೆಸುತ್ತಾರೆ. ತಪಾಸಣೆ ವೇಳೆ ಅಧಿಕಾರಿಗಳೊಂದಿಗೆ ಸಂಸ್ಥೆ ಸಂಪೂರ್ಣ ಸಹಕರಿಸಿದೆ. ಅಧಿಕಾರಿಗಳು ನೀಡಿದ ಸೂಚನೆಗಳು ಮತ್ತು ಗಮನಕ್ಕೆ ತಂದಿರುವ ಅಂಶಗಳನ್ನು ದಾಖಲಿಸಿಕೊಂಡಿದ್ದು, ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜೆಪ್ಟೋ ವಕ್ತಾರರು ತಿಳಿಸಿರೋದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾಕಿಲ್ಲ ಅನುಮತಿ? ಸರ್ಕಾರ ಹೇಳೋದೇನು? – Kannada News | Why No Bike Taxis in Karnataka? State Tells Supreme Court Security, Lack of Insurance and Safety Rules Mandate Ban

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾಕಿಲ್ಲ ಅನುಮತಿ?

ಬೆಂಗಳೂರು, ಆಗಸ್ಟ್​​ 12: ಸಾರ್ವಜನಿಕ ಸಾರಿಗೆಯಲ್ಲಿನ ವಿಪರೀತ ದಟ್ಟಣೆ ಹಾಗೂ ಹೆಚ್ಚುತ್ತಿರುವ ಪ್ರಯಾಣ ದರಗಳ ಬಗ್ಗೆ ಪ್ರಯಾಣಿಕರ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸಲು ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮೋಟಾರ್‌ಸೈಕಲ್‌ಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ (ಒಪ್ಪಂದದ ಆಧಾರಿತ ಸಾರಿಗೆ) ಪರವಾನಗಿ ನೀಡುವ ಅರ್ಜಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಶೇಷ ಮೇಲ್ಮನವಿ ಅರ್ಜಿ (SLP) ಸಲ್ಲಿಸಿದೆ. ವಾಣಿಜ್ಯ ಉದ್ದೇಶಕ್ಕಾಗಿ ಪ್ರಯಾಣಿಕರನ್ನು ಸಾಗಿಸುವುದು ನಿಯಂತ್ರಿತ ಚಟುವಟಿಕೆಯಾಗಿದ್ದು, ತಮ್ಮ ಮೋಟಾರ್‌ಸೈಕಲ್‌ಗಳನ್ನು ಟ್ಯಾಕ್ಸಿಯಾಗಿ ಬಳಸುವ ಸಹಜ ಹಕ್ಕು ಬೈಕ್ ಮಾಲೀಕರಿಗೆ ಇಲ್ಲ ಎಂದು ಸರ್ಕಾರ ವಾದಿಸಿದೆ.

ಮೋಟಾರ್‌ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನಿಯಂತ್ರಿಸುವ ಕಾನೂನು ಚೌಕಟ್ಟನ್ನು ಹೈಕೋರ್ಟ್ ಪರಿಗಣಿಸಿಲ್ಲ. ಕಾಂಟ್ರಾಕ್ಟ್ ಕ್ಯಾರೇಜ್ ಪರವಾನಗಿಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸುವಂತೆ ನಿರ್ದೇಶಿಸುವ ಮೂಲಕ ರಾಜ್ಯ ಸರ್ಕಾರ ಮತ್ತು ಸಾರಿಗೆ ಪ್ರಾಧಿಕಾರಗಳಿಗೆ ಇರುವ ನಿಯಂತ್ರಣಾಧಿಕಾರವನ್ನು ಹೈಕೋರ್ಟ್ ಗಣನೀಯವಾಗಿ ಸೀಮಿತಗೊಳಿಸಿದೆ ಎಂದು ಸರ್ಕಾರ ತನ್ನ SLPಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

ಬೈಕ್ ಟ್ಯಾಕ್ಸಿಗಳಿಗೆ ಯಾಕಿಲ್ಲ ಅನುಮತಿ?

  • ಮೋಟಾರ್‌ಸೈಕಲ್‌ಗಳನ್ನು ‘ಪ್ರಯಾಣಿಕರ ಸಾರಿಗೆ ವಾಹನ’ಗಳಾಗಿ ಬಳಸಲು ಸಮಗ್ರ ನಿಯಂತ್ರಣ ವ್ಯವಸ್ಥೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಂತಹ ಕಾನೂನು ಚೌಕಟ್ಟಿನ ಅನುಪಸ್ಥಿತಿ ಪರವಾನಗಿ ನಿರಾಕರಿಸಲು ಸಮರ್ಥನೀಯ ಹಾಗೂ ವಿಶೇಷ ಕಾರಣವಾಗಿದೆ ಎಂದು ಸರ್ಕಾರ ವಾದಿಸಿದೆ. 1989ರ ಕೇಂದ್ರ ಮೋಟಾರು ವಾಹನ ನಿಯಮಗಳು ವಾಹನಗಳನ್ನು ಅವುಗಳ ಬಳಕೆ ಮತ್ತು ಕಾರ್ಯನಿರ್ವಹಣೆಯ ಉದ್ದೇಶದ ಆಧಾರದ ಮೇಲೆ ವರ್ಗೀಕರಿಸುತ್ತವೆ. ಈ ನಿಯಮಗಳಲ್ಲಿ ಮೋಟಾರ್‌ಸೈಕಲ್‌ಗಳನ್ನು ಪ್ರಯಾಣಿಕರ ಸಾಗಣೆ ವಾಹನಗಳ ವರ್ಗದಿಂದ ಹೊರಗಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಮೋಟಾರ್‌ಸೈಕಲ್‌ನಲ್ಲಿ ಹಿಂಬದಿ ಸವಾರನನ್ನು ಕೂರಿಸಬಹುದಾದ ಸಾಮರ್ಥ್ಯವಿದೆ ಎಂಬ ಕಾರಣಕ್ಕೆ ಅದನ್ನು ಕಾನೂನುಬದ್ಧವಾಗಿ ಪ್ರಯಾಣಿಕರನ್ನು ಸಾಗಿಸುವ ವಾಹನವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.
  • ಮೋಟಾರ್‌ಸೈಕಲ್‌ಗಳು ಅಪಘಾತಗಳ ಸಂದರ್ಭದಲ್ಲಿ ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆಯಿದ್ದು, ಆಟೋರಿಕ್ಷಾ ಮತ್ತು ಕ್ಯಾಬ್‌ಗಳಂತಹ ಪ್ರಯಾಣಿಕ ವಾಹನಗಳಲ್ಲಿ ಲಭ್ಯವಿರುವ ಕೆಲವು ಸುರಕ್ಷತಾ ಸೌಲಭ್ಯಗಳು ದ್ವಿಚಕ್ರ ವಾಹನಗಳಲ್ಲಿ ಇರುವುದಿಲ್ಲ ಎಂದು ಸರ್ಕಾರ ವಾದಿಸಿದೆ. ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಬಗ್ಗೆಯೂ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವವರ ಸುರಕ್ಷತೆ ಕುರಿತಂತೆ ಸುಪ್ರೀಂ ಕೋರ್ಟ್ ಸಮಿತಿ ಉಲ್ಲೇಖಿಸಿರುವ ಅಪಘಾತ ಸಾವಿನ ಅಂಕಿಅಂಶಗಳನ್ನು ಸರ್ಕಾರ ತನ್ನ ವಾದಕ್ಕೆ ಆಧಾರವಾಗಿ ನೀಡಿದೆ.
  • ದೊಡ್ಡ ಪ್ರಮಾಣದಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುವುದರಿಂದ ನಗರಗಳಲ್ಲಿ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯ ಹೆಚ್ಚಾಗಬಹುದು ಎಂದು ರಾಜ್ಯ ಸರ್ಕಾರ ಹೇಳಿದೆ. ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿರ್ಬಂಧಿಸುವುದರಿಂದ ವಾರ್ಷಿಕವಾಗಿ ಸುಮಾರು 14 ಲಕ್ಷ ಟನ್‌ಗಳಷ್ಟು CO₂ ಹೊರಸೂಸುವಿಕೆಯನ್ನು ತಪ್ಪಿಸಬಹುದು ಎಂಬ ಅಂದಾಜನ್ನೂ ಸರ್ಕಾರ ಉಲ್ಲೇಖಿಸಿದೆ.
  • ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟ ಸಂದರ್ಭದಲ್ಲಿ ಸಮರ್ಪಕ ವಿಮಾ ರಕ್ಷಣೆ ಲಭ್ಯವಿಲ್ಲದಿರುವುದನ್ನೂ ಸರ್ಕಾರ ಪ್ರಮುಖ ಸಮಸ್ಯೆಯಾಗಿ ಉಲ್ಲೇಖಿಸಿದೆ. ಈಗಿರುವ ಬಿಳಿ ಬೋರ್ಡ್ ಮೋಟಾರ್‌ಸೈಕಲ್‌ಗಳನ್ನು ಹಳದಿ ಬೋರ್ಡ್ ವಾಹನಗಳಾಗಿ ಪರಿವರ್ತಿಸಲು ಕರ್ನಾಟಕದ ನಿಯಂತ್ರಣ ವ್ಯವಸ್ಥೆಯಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಹಾಗೆಯೇ ದ್ವಂದ್ವ ನೋಂದಣಿ (dual registration) ಎಂಬ ಪರಿಕಲ್ಪನೆಯೂ ಇಲ್ಲ. ಇದರಿಂದ ಅಪಘಾತದ ಸಂದರ್ಭದಲ್ಲಿ ವಿಮೆ ಪರಿಹಾರ ಮತ್ತು ಅದರ ಪಾವತಿ ಕುರಿತು ಗೊಂದಲ ಉಂಟಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
  • ಬೈಕ್ ಟ್ಯಾಕ್ಸಿಗಳ ಮೇಲಿನ ನಿರ್ಬಂಧದಿಂದ ಮೋಟಾರ್‌ಸೈಕಲ್ ಮಾಲೀಕರ ಜೀವನೋಪಾಯ ಸಂಪೂರ್ಣವಾಗಿ ನಿರ್ಬಂಧಿತವಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಮೋಟಾರ್‌ಸೈಕಲ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದರ ಮೇಲೆ ರಾಜ್ಯ ಸರ್ಕಾರ ಸಂಪೂರ್ಣ ನಿಷೇಧ ಹೇರಿಲ್ಲ. ಪ್ರಯಾಣಿಕರನ್ನು ಸಾಗಿಸಲು ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಮೋಟಾರ್‌ಸೈಕಲ್ ಸವಾರರು ವಿವಿಧ ಪ್ಲಾಟ್‌ಫಾರ್ಮ್‌ಗಳ ಡೆಲಿವರಿ ಮತ್ತು ಲಾಜಿಸ್ಟಿಕ್ಸ್ ಸೇವೆಗಳಲ್ಲಿ, ಕೊರಿಯರ್ ಸೇವೆಗಳಲ್ಲಿ ಹಾಗೂ ಕಾನೂನುಬದ್ಧವಾಗಿ ಅನುಮತಿಸಲಾದ ಇತರ ಚಟುವಟಿಕೆಗಳಲ್ಲಿ ಮುಂದುವರಿದು ಕೆಲಸ ಮಾಡಬಹುದು ಎಂದು ಸರ್ಕಾರ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Horoscope Today: ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ – Kannada News | Horoscope Today 12th August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 12, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರದ ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ ಇದಾಗಿದ್ದು, ಪುಷ್ಯ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿದ್ದಾನೆ. ಇದು ಶ್ರಾವಣ ಮಾಸಕ್ಕೆ ಕಾಲಿಡುತ್ತಿರುವ ದಿನವೂ ಆಗಿದೆ. ಇಂದಿನ ದಿನವು ಪವಿತ್ರ ಕಾರ್ಯಗಳಿಗೆ, ಜಪ, ತಪ ಮತ್ತು ದಾನಗಳಿಗೆ ಪ್ರಾಶಸ್ತ್ಯವಾಗಿದೆ. ಸೂರ್ಯ ಗ್ರಹಣವಿದ್ದರೂ ಭಾರತದಲ್ಲಿ ಗೋಚಾರವಿಲ್ಲದ ಕಾರಣ ಆಚರಣೆಯ ಅವಶ್ಯಕತೆಯಿಲ್ಲ. ಭೀಮನ ಅಮಾವಾಸ್ಯೆಯಾದ ಇಂದು ಪತಿದೇವರನ್ನು ಪೂಜಿಸುವ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸಲಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

Source link

Exit mobile version