ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ – Kannada News | Muslim Leader Alleged On Abdul Jabbar And Zameer For Support BJP And SDPI In Davanagere South By Poll

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ ಅಬ್ದುಲ್ ಜಬ್ಬರ್ ಹಾಗೂ ಜಮೀರ್ ವಿರುದ್ಧ ಕಿಡಿಕಾರಿದ್ದು, ಕಲೆವೊಂದಿಷ್ಟು ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಮನೆಯಲ್ಲಿ ಕುಳಿತುಕೊಂಡು ಬಿಜೆಪಿ ಹಾಗೂ ಎಸ್​​​ಡಿಪಿಐಗೆ ಸಹಾಯ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋಗಳಿವೆ. ಅಧ್ಯಕ್ಷರಿಗೆ ಅವುಗಳನ್ನು ನೀಡುತ್ತೇನೆ ಎಂದು ಅಮಾನತುಗೊಂಡ ಅಬ್ದುಲ್ ಜಬ್ಬಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು

Source link

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ – Kannada News | BCCI Plans Dual T20 Teams for India: Boosts Player Development and Opportunities Post IPL 2026

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗುದೆ.

ಬಿಸಿಸಿಐ ಇದಕ್ಕಾಗಿ ಈಗಾಗಲೇ ಯೋಜನೆ ರೂಪಿಸಲು ಪ್ರಾರಂಭಿಸಿದೆ. ವರದಿಯ ಪ್ರಕಾರ, ಭಾರತದಲ್ಲಿರುವ ಸಾಕಷ್ಟು ಪ್ರತಿಭೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈಗ 30 ರಿಂದ 35 ಆಟಗಾರರ ಗುಂಪನ್ನು ಅಭಿವೃದ್ಧಿಪಡಿಸುವ ಬಗ್ಗೆ ಯೋಚಿಸುತ್ತಿದೆ. ಎರಡು ಅಂತರರಾಷ್ಟ್ರೀಯ ಟಿ20 ತಂಡಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ. ಬಿಸಿಸಿಐನ ಈ ಯೋಜನೆಯನ್ನು ಐಪಿಎಲ್ 2026 ರ ನಂತರ ಜಾರಿಗೆ ತರಲಿದ್ದು, ಇದರಿಂದ ಹೆಚ್ಚಿನ ಆಟಗಾರರಿಗೆ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಗುತ್ತದೆ.

2 ತಂಡಗಳನ್ನು ಕಣಕ್ಕಿಳಿಸಲು ಕಾರಣವೇನು?

ಈಗ ಪ್ರಶ್ನೆ ಏನೆಂದರೆ, ಈ ಯೋಜನೆಯ ಹಿಂದಿನ ಬಿಸಿಸಿಐ ಉದ್ದೇಶವೇನು?. ಈ ವರ್ಷದ ಕೊನೆಯಲ್ಲಿ ಭಾರತವು ಏಷ್ಯನ್ ಕ್ರೀಡಾಕೂಟ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಬಿಸಿಸಿಐ ಇದನ್ನು ಗಮನದಲ್ಲಿಟ್ಟುಕೊಂಡು ಎರಡು ತಂಡಗಳನ್ನು ಕಟ್ಟಲು ಗಮನಹರಿಸುತ್ತಿದೆ. ಈ ವರ್ಷದ ಏಷ್ಯನ್ ಕ್ರೀಡಾಕೂಟ ಮತ್ತು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಏಕಕಾಲದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆದ್ದರಿಂದ, ನಾವು ಎರಡು ತಂಡಗಳನ್ನು ಕಣಕ್ಕಿಳಿಸುವತ್ತ ಗಮನಹರಿಸುತ್ತಿದ್ದು, 30 ರಿಂದ 35 ಕ್ರಿಕೆಟಿಗರ ಗುಂಪನ್ನು ಅಭಿವೃದ್ಧಿಪಡಿಸುವುದು ಈಗ ಮುಖ್ಯವಾಗಿದೆ ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಯಾವ ಆಟಗಾರರಿಗೆ ಅವಕಾಶ ಸಿಗಬಹುದು?

ಈಗ ಪ್ರಶ್ನೆ ಏನೆಂದರೆ, 30-35 ಆಟಗಾರರ ಗುಂಪಿನಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು?. ಈ ಪಟ್ಟಿಯಲ್ಲಿ ಯಾವ ಆಟಗಾರನ ಹೆಸರು ಇರಲಿದೆ ಎಂಬುದನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ. ಆದಾಗ್ಯೂ, ಐಪಿಎಲ್ 2026 ರಲ್ಲಿ ಅವರ ಪ್ರದರ್ಶನ ಮತ್ತು ಪ್ರಸ್ತುತ ಫಾರ್ಮ್ ಅನ್ನು ಪರಿಗಣಿಸಿ, ಕೆಲವು ಆಟಗಾರರ ಹೆಸರುಗಳು ಖಂಡಿತವಾಗಿಯೂ ಚರ್ಚೆಗೆ ಬರಲು ಪ್ರಾರಂಭಿಸಿವೆ. ಬ್ಯಾಟಿಂಗ್‌ನಲ್ಲಿ, ವೈಭವ್ ಸೂರ್ಯವಂಶಿ, ಪ್ರಿಯಾಂಶ್ ಆರ್ಯ, ಯಶಸ್ವಿ ಜೈಸ್ವಾಲ್ ಮತ್ತು ರಜತ್ ಪಾಟಿದಾರ್ ಅವರಂತಹ ಆಟಗಾರರು ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಬೌಲಿಂಗ್‌ನಲ್ಲಿ, ಅಶೋಕ್ ಶರ್ಮಾ, ಕಾರ್ತಿಕ್ ತ್ಯಾಗಿ ಮತ್ತು ರವಿ ಬಿಷ್ಣೋಯ್ ಅವರಂತಹ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಧ್ರುವ್ ಜುರೆಲ್ ಅವರನ್ನು ವಿಕೆಟ್ ಕೀಪಿಂಗ್ ವಿಭಾಗದಲ್ಲಿ ಸೇರಿಸಬಹುದು. ಹಾಗೆಯೇ ಶಶಾಂಕ್ ಸಿಂಗ್ ಮತ್ತು ಅನುಕುಲ್ ರಾಯ್ ಅವರಂತಹ ಹೆಸರುಗಳು ಆಲ್-ರೌಂಡರ್ ಪಟ್ಟಿಯಲ್ಲಿ ಕಾಣಿಸಿಕೊಳ್ಳಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿಯವರ ‘ಝಲ್ಮುರಿ’ ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ – Kannada News | PM Modi’s Jhalmuri video sees 100 million views in just 24 hours

ನರೇಂದ್ರ ಮೋದಿ ಇನ್​ಸ್ಟಾ ವಿಡಿಯೋಗಳುImage Credit source: Narendra Modi’s Insta

ಕೋಲ್ಕತಾ, ಏಪ್ರಿಲ್ 20: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ (West Bengal Assembly Elections) ಪ್ರಚಾರದ ಅಬ್ಬರದ ನಡುವೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್ 19, 2026) ಝಾರ್‌ಗ್ರಾಮ್‌ನಲ್ಲಿ (Jhargram) ಸಾಮಾನ್ಯ ಜನರಂತೆ ರಸ್ತೆ ಬದಿಯ ಅಂಗಡಿಗೆ ಭೇಟಿ ನೀಡಿ ಝಲ್ಮುರಿ (Jhalmuri) ಸವಿದಿದ್ದಾರೆ. ಅವರು ಇನ್​​ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಕೇವಲ 24 ಗಂಟೆಗಳಲ್ಲಿ 100 ಮಿಲಿಯನ್​ಗೂ (10 ಕೋಟಿ) ಅಧಿಕ ವೀಕ್ಷಣೆಗಳನ್ನು ಪಡೆಯುವ ಮೂಲಕ ಹೊಸ ದಾಖಲೆ ಬರೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಯಾವ ಸೆಲಬ್ರಿಟಿಗೂ ಕಡಿಮೆ ಇಲ್ಲದ ಜನಪ್ರಿಯತೆ ತನಗಿದೆ ಎಂಬುದನ್ನು ಪ್ರಧಾನಿಗಳು ಮತ್ತೊಮ್ಮೆ ಸಾಬೀತುಪಡಿಸಿದಂತಿದೆ.

ಏನಿದು ಪ್ರಧಾನಿಗಳ ಝಲ್ಮುರಿ ಘಟನೆ?

ಸತತ ನಾಲ್ಕು ಚುನಾವಣಾ ರ‍್ಯಾಲಿಗಳನ್ನು ಮುಗಿಸಿ ಮರಳುತ್ತಿದ್ದ ಪ್ರಧಾನಿ, ಇದ್ದಕ್ಕಿದ್ದಂತೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಸ್ಥಳೀಯ ವ್ಯಾಪಾರಿ ವಿಕ್ರಮ್ ಸಾಹ ಅವರ ಝಲ್ಮುರಿ ಅಂಗಡಿಗೆ ತೆರಳಿದರು. ಝಲ್ಮುರಿ ಸವಿಯುತ್ತಾ ವ್ಯಾಪಾರಿಯೊಂದಿಗೆ ಆತ್ಮೀಯವಾಗಿ ಮಾತನಾಡಿದ ಮೋದಿ, “ನಾವು ಎಲ್ಲವನ್ನೂ ತಿನ್ನುತ್ತೇವೆ, ಆದರೆ ಜನರ ತಲೆ ತಿನ್ನುವುದಿಲ್ಲ” (Hum sab kuch khate hai, dimaag nahi khate bas) ಎಂದು ತಮಾಷೆ ಮಾಡಿದ್ದು ನೆಟ್ಟಿಗರ ಮನ ಗೆದ್ದಿದೆ. ವ್ಯಾಪಾರಿ ವಿಕ್ರಮ್ ಸಾಹ ಅವರು ಹಣ ಪಡೆಯಲು ನಿರಾಕರಿಸಿದರೂ, ಪ್ರಧಾನಿಯವರು ಪಟ್ಟು ಹಿಡಿದು 10 ರೂಪಾಯಿ ಪಾವತಿಸಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್​ಮುರಿ’ ಸವಿ; ಝಾರ್​ಗ್ರಾಮ್​ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ

ಸಾಮಾಜಿಕ ಜಾಲತಾಣದಲ್ಲಿ ದಾಖಲೆ

ಪ್ರಧಾನಿ ಮೋದಿ ಅವರು ತಮ್ಮ ಇನ್​​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ತಕ್ಷಣವೇ ಅದು ವೈರಲ್ ಆಗಿದೆ. ಲಕ್ಷಾಂತರ ಲೈಕ್ಸ್ ಮತ್ತು ಕಾಮೆಂಟ್‌ಗಳು ಹರಿದುಬಂದಿದ್ದು, ಪ್ರಧಾನಿಯವರ ಸರಳತೆಯನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. “ಮೋದಿ ಜೀ ಕೂಡ ಝಲ್ಮುರಿಯನ್ನು ಅಪ್ರೂವ್ ಮಾಡಿದ್ದಾರೆ” ಎಂಬಂತಹ ತಮಾಷೆಯ ಕಾಮೆಂಟ್‌ಗಳು ಹರಿದಾಡುತ್ತಿವೆ.

ಪ್ರಧಾನಿಯ ಇನ್​ಸ್ಟಾ ವಿಡಿಯೋ

ರಾಜಕೀಯ ಸಂಚಲನ

ಒಂದೆಡೆ ಈ ವಿಡಿಯೋ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದ್ದರೆ, ಇನ್ನೊಂದೆಡೆ ತೃಣಮೂಲ ಕಾಂಗ್ರೆಸ್ (TMC) ಈ ಭೇಟಿಯನ್ನು ಟೀಕಿಸಿದೆ. ಮೋದಿಯವರ ಈ ಭೇಟಿಯಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಹೇಮಂತ್ ಸೊರೇನ್ ಅವರಂತಹ ಇತರ ನಾಯಕರ ಪ್ರಚಾರಕ್ಕೆ ಅಡ್ಡಿಯಾಯಿತು ಎಂದು ಟಿಎಂಸಿ ಆರೋಪಿಸಿದೆ. ಪ್ರಧಾನಿಯವರ ‘ಝಲ್ಮುರಿ’ ಪ್ರಸಂಗವನ್ನು ಮಮತಾ ಬ್ಯಾನರ್ಜಿ ಕಟುವಾಗಿ ಟೀಕಿಸಿದ್ದು, ಇದೆಲ್ಲಾ ಬರೀ ಡ್ರಾಮಾ ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಚೀನಾಕ್ಕೆ ಟಕ್ಕರ್ ಕೊಡಲು ಭಾರತದ ಮಾಸ್ಟರ್ ಪ್ಲಾನ್: ಬರಲಿದೆ ಬೃಹತ್ ತೈಲ ಪೈಪ್‌ಲೈನ್

ಆದರೆ, ರಾಜಕೀಯ ಏನೇ ಇರಲಿ, ಪ್ರಧಾನಿಯವರ ಈ “ಸ್ಟ್ರೀಟ್ ಫುಡ್ ಡಿಪ್ಲೊಮಸಿ” ಮಾತ್ರ ಡಿಜಿಟಲ್ ಲೋಕದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ? – Kannada News | Rohit Sharma Injury Update: MI vs GT IPL Return Status?

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ ಆಡಲು ಸಾಧ್ಯವಾಗಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್, ರಿಕಲ್ಟನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಇದು ಡಿ ಕಾಕ್ ಅವರ ಈ ಆವೃತ್ತಿಯ ಮೊದಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ 112 ರನ್ ಬಾರಿಸಿದ್ದರು. ಆದಾಗ್ಯೂ, ಕ್ವಿಂಟನ್ ಡಿ ಕಾಕ್ ಅಜೇಯ ಶತಕ ಗಳಿಸಿದರೂ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 195 ರನ್‌ಗಳ ಗುರಿಯನ್ನು ತಲುಪಲು ವಿಫಲವಾಗಿ ಸೋತಿತು.

Source link

ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು – Kannada News | Davanagere By Election Row: Karnataka Muslim organisations letter To Congress Leaders, here Details

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ಉಪ ಚುನಾವಣೆಯ (Davanagere By Election Row) ಟಿಕೆಟ್ ಅಸಮಾಧಾನ ಕರ್ನಾಟಕ ಕಾಂಗ್ರೆಸ್ ನಲ್ಲಿ (Karnataka Congress) ಒಂದು ರೀತಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಟಿಕೆಟ್ ಕೈತಪ್ಪಿದ್ದರಿಂದ ಕೆಲ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದು, ಇದೀಗ ಅವರ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದೆ. ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಮೇಲೂ ಕ್ರಮಕ್ಕೆ ಚಿಂತನೆಗಳು ನಡೆದಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಸಿಡಿದೆದ್ದಿರುವ ಮುಸ್ಲಿಂ ಸಮುದಾಯದ ಸಂಘಟನೆ, ಸಂಘ-ಸಂಸ್ಥೆಗಳು ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆದಿವೆ. ಕಾಂಗ್ರೆಸ್ ಪಕ್ಷ ರಾಜ್ಯದ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ರಾಜ್ಯದ ವಿವಿಧ ಪ್ರದೇಶಗಳ ಪ್ರಮುಖ ಮುಸ್ಲಿಮ್ ಸಂಘಟನೆಗಳು , ಸಂಘ ಸಂಸ್ಥೆಗಳು ಹಾಗು ಒಕ್ಕೂಟಗಳ ಪ್ರತಿನಿಧಿಗಳ ಜಂಟಿ ಪತ್ರ ಈ ಕೆಳಗಿಂತಿದೆ.

ಯಾರೆಗೆಲ್ಲಾ ಪತ್ರ?

ರಾಜ್ಯಸಭಾ ವಿಪಕ್ಷ ನಾಯಕ ಹಾಗು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯಸಚೇತಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಢಿ ಇವರಿಗೆ ರಾಜ್ಯದ ವಿವಿಧ ಪ್ರದೇಶಗಳ ಪ್ರಮುಖ ಮುಸ್ಲಿಮ್ ಸಂಘಟನೆಗಳು , ಸಂಘ ಸಂಸ್ಥೆಗಳು ಹಾಗು ಒಕ್ಕೂಟಗಳ ಪ್ರತಿನಿಧಿಗಳ ಜಂಟಿ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು

ಪತ್ರದಲ್ಲೇನಿದೆ?

ಕರ್ನಾಟಕದ ಕಾಂಗ್ರೆಸ್ ಸರಕಾರ ಹಾಗೂ ಪಕ್ಷ ರಾಜ್ಯದ ಮುಸ್ಲಿಂ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿಯಿಂದ ತೀವ್ರವಾಗಿ ನೊಂದು ರಾಜ್ಯದ ಎಲ್ಲ ಪ್ರದೇಶಗಳ ಪ್ರಮುಖ ಮುಸ್ಲಿಂ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗು ಒಕ್ಕೂಟಗಳ ಪರವಾಗಿ ನಾವು ಈ ಪತ್ರ ಬರೆಯುತ್ತಿದ್ದೇವೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಮುಸ್ಲಿಮರು ಇಡೀ ದೇಶಕ್ಕೆ ಮಾದರಿಯಾಗುವಂತಹ ಒಂದು ಧನಾತ್ಮಕ ನಿರ್ಧಾರ ತೆಗೆದುಕೊಂಡು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು. ಕಾಂಗ್ರೆಸ್ ಅಲ್ಲದೆ ಬೇರೆ ಪಕ್ಷಗಳ ಆಯ್ಕೆ ಇದ್ದರೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಜಾತ್ಯತೀತ ಸರಕಾರ ಬರಬೇಕು ಎಂಬ ಕಾರಣಕ್ಕಾಗಿ ಮುಸ್ಲಿಮರು ಕಾಂಗ್ರೆಸ್ ಗೆ ಒಗ್ಗಟ್ಟಾಗಿ ಬೆಂಬಲಿಸಿದರು. ಅದರ ಪರಿಣಾಮವಾಗಿಯೇ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂತು. ಆದರೆ ಅಧಿಕಾರಕ್ಕೆ ಬಂದ ದಿನದಿಂದಲೇ ಕಾಂಗ್ರೆಸ್ ಪಕ್ಷ ತನ್ನನ್ನು ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸುತ್ತಲೇ ಬಂದಿದೆ. ಸರಕಾರದಲ್ಲಿ, ಆಡಳಿತಶಾಹಿಯಲ್ಲಿ, ಇತರ ಪ್ರಮುಖ ನೇಮಕಾತಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಈ ಸರಕಾರ ಸೂಕ್ತ ಪ್ರಾತಿನಿಧ್ಯ ಕೊಡಲೇ ಇಲ್ಲ. ಸಮುದಾಯಕ್ಕೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಿಲ್ಲ. ಈ ಬಗ್ಗೆ ಆಗಾಗ ಸರಕಾರದ, ಪಕ್ಷದ ಗಮನಕ್ಕೆ ತಂದರೂ ಯಾವುದೇ ಸೂಕ್ತ ಸ್ಪಂದನೆ ಸಿಗಲಿಲ್ಲ ಹಾಗೂ ಕೊರತೆ ತುಂಬುವ ಕ್ರಮ ಕೈಗೊಳ್ಳಲಿಲ್ಲ.

ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಮುಸ್ಲಿಮರ ಕುರಿತ ಕಾಂಗ್ರೆಸ್ ನ ಈ ನಿರಂತರ ನಿರ್ಲಕ್ಷ್ಯ ಧೋರಣೆ ಈಗ ಮುಂದಿನ ಹಂತಕ್ಕೆ ತಲುಪಿರುವುದು ಸ್ಪಷ್ಟವಾಗಿದೆ. ಮುಸ್ಲಿಂ ಸಮುದಾಯದ ಜೊತೆ ಕಾಂಗ್ರೆಸ್ ಪಕ್ಷ ತಾರತಮ್ಯದ ನೀತಿ ಅನುಸರಿಸುವುದು, ಅನ್ಯಾಯಯುತವಾಗಿ ನಡೆದುಕೊಳ್ಳುವುದು ಈಗ ಸರ್ವೇ ಸಾಮಾನ್ಯವಾಗಿದೆ ಎಂಬುದನ್ನು ಬಹಳ ಬೇಸರದಿಂದ ಹೇಳಬೇಕಾಗಿದೆ. ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಹಾಗೂ ಮತದಾನದ ಬಳಿಕ ಕಾಂಗ್ರೆಸ್ ನಡೆದುಕೊಂಡಿರುವ ರೀತಿಯಿಂದ ರಾಜ್ಯದ ಮುಸ್ಲಿಂ ಸಮುದಾಯಕ್ಕೆ ತೀವ್ರ ಆಘಾತವಾಗಿದೆ.

ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ?

ನಾವು ಇಷ್ಟು ಗಟ್ಟಿಯಾಗಿ ಬೆಂಬಲಿಸಿದ ಪಕ್ಷ ನಮ್ಮೊಂದಿಗೆ ಇಷ್ಟು ಕೆಟ್ಟದಾಗಿ ಹೇಗೆ ನಡೆದುಕೊಳ್ಳಲು ಸಾಧ್ಯ ಎಂಬ ಪ್ರಶ್ನೆ ರಾಜ್ಯದ ಮುಸಲ್ಮಾನರನ್ನು ಕಾಡುತ್ತಿದೆ. ನಾವು ಕಾಂಗ್ರೆಸ್ ಗೆ ಬೇಷರತ್ತಾಗಿ ಬೆಂಬಲ ನೀಡಿದ್ದೇ ನಮ್ಮ ಅಪರಾಧವೇ ಎಂಬ ಭಾವನೆ ಮುಸಲ್ಮಾನರಲ್ಲಿ ಈಗ ಮನೆ ಮಾಡುತ್ತಿದೆ. ಹೀಗೇ ಮುಂದುವರಿದರೆ ನಾವೂ ನಮ್ಮ ರಾಜಕೀಯ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂಬ ಆಲೋಚನೆ ಈಗ ಸಮುದಾಯದಲ್ಲಿ ತೀವ್ರವಾಗಿ ಬೆಳೆಯುತ್ತಿದೆ. ಮೊದಲು ನ್ಯಾಯವಾಗಿ ನೀಡಲೇಬೇಕಾಗಿದ್ದ ಟಿಕೆಟ್ ಅನ್ನು ನಿರಾಕರಿಸಲಾಯಿತು, ಹಾಗೆ ನಿರಾಕರಿಸುವಾಗ ಮುಸ್ಲಿಂ ಸಮುದಾಯದ ನ್ಯಾಯಯುತ ಬೇಡಿಕೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಯಿತು. ಅಷ್ಟೇ ಅಲ್ಲ, ಟಿಕೆಟ್ ಕೇಳಿದ್ದೇ ಅಪರಾಧ ಎಂಬಂತೆ ಕಾಂಗ್ರೆಸ್ ವರಿಷ್ಠರು ಮುಸ್ಲಿಂ ಸಮುದಾಯದ ಜೊತೆ ನಡೆದುಕೊಂಡರು.

ಮುಸ್ಲಿಂ ಸಮುದಾಯದ ಜೊತೆ ಹಗೆ

ಇಷ್ಟು ಸಾಲದ್ದಕ್ಕೆ, ಉಪಚುನಾವಣೆಗೆ ಮತದಾನ ಮುಗಿದ ಕೂಡಲೇ ಮುಸ್ಲಿಂ ಸಮುದಾಯದ ಜೊತೆ ಹಗೆ ಸಾಧಿಸುವ ಹಾಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡಿತು. ದಶಕಗಳಿಂದ ಪಕ್ಷಕ್ಕಾಗಿ ದುಡಿದ ಹಿರಿಯ ಮುಸ್ಲಿಂ ನಾಯಕರನ್ನು ಯಾವುದೇ ಸೂಕ್ತ ಕಾರಣ ನೀಡದೆ, ವಿವರಣೆಗೆ ಅವಕಾಶವನ್ನೂ ನೀಡದೆ ಏಕಾಏಕಿ ವಜಾ ಮಾಡಿ ಮನೆಗೆ ಕಳಿಸಲಾಯಿತು. ಕಾಂಗ್ರೆಸ್ ಪಕ್ಷದ ಈ ನಡೆ ರಾಜ್ಯದ ಮುಸ್ಲಿಂ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಟಿಕೆಟ್ ನೀಡಲಿಲ್ಲ ಎಂಬ ನೋವಿಗೆ ಸಮಾಧಾನ ಮಾಡಿ ಮದ್ದೆರೆಯಬೇಕಾಗಿದ್ದ ಕಾಂಗ್ರೆಸ್, ಸಮುದಾಯದ ಜೊತೆ ಅತ್ಯಂತ ಸಂವೇದನಾರಹಿತವಾಗಿ ನಡೆದುಕೊಂಡಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ವರಿಷ್ಠರಿಂದ ಎತ್ತಿ ಕಟ್ಟುವ ಪ್ರಯತ್ನ

ಈ ಹಿಂದೆ ನೇರವಾಗಿಯೇ ಪಕ್ಷ ವಿರೋಧಿ ಕೆಲಸ ಮಾಡಿದ್ದ ಪ್ರಬಲ ಸಮುದಾಯಗಳ ಮುಖಂಡರ ವಿರುದ್ಧ ಕಾಂಗ್ರೆಸ್ ಪಕ್ಷ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಈಗ ಪಕ್ಷ ನಿಷ್ಠ ಮುಸ್ಲಿಂ ನಾಯಕರ ವಿರುದ್ಧ ಇಷ್ಟು ತರಾತುರಿಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಂಡಿರುವುದನ್ನು ನೋಡಿದರೆ ಕಾಂಗ್ರೆಸ್ ನಲ್ಲಿ ಶಿಸ್ತುಕ್ರಮ ಎಂಬುದು ಕೇವಲ ಒಂದು ಸಮುದಾಯಕ್ಕೆ ಸೀಮಿತವೇ ಎಂಬ ಸಂಶಯ ಮೂಡುತ್ತಿದೆ. ಇನ್ನು ಕಾಂಗ್ರೆಸ್ ನ ಮುಸ್ಲಿಂ ಸಮುದಾಯದ ನಾಯಕರ ವಿರುದ್ಧ ಪಕ್ಷದಲ್ಲಿರುವ ಬೇರೆ ಮುಸ್ಲಿಂ ನಾಯಕರನ್ನೇ ಎತ್ತಿ ಕಟ್ಟುವ ತೀರಾ ಕೆಟ್ಟ ಪ್ರಯತ್ನವೂ ಕಾಂಗ್ರೆಸ್ ವರಿಷ್ಠರಿಂದ ನಡೆಯುತ್ತಿದೆಯೇ ಎಂಬ ಗಂಭೀರ ಅನುಮಾನವೂ ಸಮುದಾಯವನ್ನು ಕಾಡುತ್ತಿದೆ.

ಇದು ಕೇವಲ ಕೆಲವು ವ್ಯಕ್ತಿಗಳ ವಿಚಾರವಲ್ಲ. ಇಡೀ ಮುಸ್ಲಿಮ್ ಸಮುದಾಯದ ಘನತೆಯ ವಿಷಯವಾಗಿದೆ. ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ. ಇದನ್ನು ಕೇವಲ ರಾಜಕೀಯ ನಿರ್ಧಾರವೆಂದು ಸಮರ್ಥಿಸಲು ಸಾಧ್ಯವಿಲ್ಲ. ತನಗೆ ಸುಮಾರು 90% ಮತದಾನ ಮಾಡಿರುವ ಮುಸ್ಲಿಂ ಸಮುದಾಯದ ಜೊತೆ ಕಾಂಗ್ರೆಸ್ ಪಕ್ಷದ ಈ ತೀವ್ರ ತಾರತಮ್ಯ ನೀತಿಯನ್ನು ನಾವು ಖಂಡಿಸುತ್ತೇವೆ.

ಡಿಕೆಶಿ ಹೇಳಿಕೆ ಮುಸ್ಲಿಂ ಸಮುದಾಯ ತಿರುಗೇಟು

ಮುಸಲ್ಮಾನರಿಗೆ ಕಾಂಗ್ರೆಸ್ ಕೊಟ್ಟಷ್ಟು ರಕ್ಷಣೆ ಬೇರೆ ಯಾವುದೇ ಪಕ್ಷ ಕೊಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದೆ. ರಕ್ಷಣೆ ಈ ದೇಶದ ಸಂವಿಧಾನವು ಇಲ್ಲಿನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಹಕ್ಕಾಗಿದೆ. ಅದು ಯಾವುದೇ ಪಕ್ಷ ಯಾವುದೇ ಸಮುದಾಯಕ್ಕೆ ನೀಡಿರುವ ಕೊಡುಗೆಯಲ್ಲ. ಅದನ್ನು ಒಂದು ಸರಕಾರ ನೀಡುವುದು ಅದರ ಕರ್ತವ್ಯವೇ ಹೊರತು, ಅದು ಉಪಕಾರ ಅಥವಾ ಸಾಧನೆಯಲ್ಲ.

ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆ

ಮತ ಹಾಕಿ ಗೆಲ್ಲಿಸಿದ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕು, ಅಧಿಕಾರದಲ್ಲಿ ಸರಿಯಾದ ಪಾಲು ನೀಡಬೇಕು, ನೀತಿ ನಿರೂಪಣೆಯಲ್ಲಿ ಪಾತ್ರ ನೀಡಬೇಕು, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಬೇಕು. ಅದ್ಯಾವುದನ್ನೂ ಮಾಡದೆ, ಬೆಂಬಲಿಸಿ ಅಧಿಕಾರದ ಶಕ್ತಿ ನೀಡಿದ ಸಮುದಾಯವನ್ನು ಆಟಕ್ಕುಂಟು ಲೆಕ್ಕಕಿಲ್ಲ ಎಂಬಂತೆ ನಡೆಸಿಕೊಳ್ಳುವುದು ಪರಮ ಅನ್ಯಾಯವಾಗಿದೆ. ಜಾತ್ಯತೀತ ಸರಕಾರ ಬರಬೇಕು ಎಂದು ಬೆಂಬಲ ನೀಡಿದ್ದನ್ನೇ ಮುಸ್ಲಿಮರ ದೌರ್ಬಲ್ಯ, ಅವರಿಗೆ ಬೇರೆ ಆಯ್ಕೆಗಳೇ ಇಲ್ಲ ಎಂದು ಕಾಂಗ್ರೆಸ್ ತಿಳಿದುಕೊಂಡರೆ ಅದು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ರಾಜಕೀಯವಾಗಿ ಬಹಳ ದುಬಾರಿಯಾಗಲಿದೆ.

ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಿ ಮುಸ್ಲಿಂ ಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಂಡು ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತದೆ ಎಂದು ಆಶಿಸುತ್ತೇವೆ. 2023ರ ಚುನಾವಣಾ ಸಂದರ್ಭದಲ್ಲಿ ಸಮುದಾಯಕ್ಕೆ ನೀಡಲಾದ ಎಲ್ಲ ಭರವಸೆಗಳನ್ನು ಈಡೇರಿಸಬೇಕು. ಸರಕಾರದಲ್ಲಿ, ಪಕ್ಷದಲ್ಲಿ ನಿರ್ಧಾರ ತೆಗೆದುಕೊಳ್ಳುವ ಪ್ರಮುಖ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಸಮುದಾಯಕ್ಕೆ ಆಗಿರುವ ನೋವಿಗೆ ಕಾಂಗ್ರೆಸ್ ಪಕ್ಷ ಕೂಡಲೇ ಸ್ಪಂದಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾವು ಆಗ್ರಹಿಸುತ್ತೇವೆ.

ಹೀಗೆ ಮುಸ್ಲಿಂ ಸಂಘಟನೆಗಳು ವಿವರವಾಗಿ ಪತ್ರದಲ್ಲಿ ಉಲ್ಲೇಖಿಸಿದ್ದು, ಈ ಪತ್ರವನ್ನು ಕಾಂಗ್ರೆಸ್​​ನ ಎಲ್ಲಾ ಹಿರಿಯ ನಾಯಕರಿಗೆ ರವಾನಿಸಿ ಎಚ್ಚರಿಕೆ ಸಂದೇಶ ರವಾನಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ – Kannada News | Yadgir and Mysuru tragedy: JDS MLA Sharanagouda Kandakur sparks on CM over compensation discrimination

ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​, ಸಿಎಂ ಸಿದ್ದರಾಮಯ್ಯImage Credit source: google

ಬೆಂಗಳೂರು, ಏಪ್ರಿಲ್​ 20: ರಾಜ್ಯದಲ್ಲಿ ಸಂಭವಿಸಿದ ದುರಂತಗಳ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​ (Sharanagouda Kandakur)
ಇಂತಹದೊಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯಗೆ (Siddaramaiah) ನೇರವಾಗಿ ಪತ್ರ ಬರೆದಿರುವ ಶಾಸಕ, ಮೈಸೂರಿನಲ್ಲಿ ಸಂಭವಿಸಿದ ದುರಂತಕ್ಕೆ ತಕ್ಷಣ ಸ್ಪಂದಿಸುವ ಸರ್ಕಾರ, ಕಲ್ಯಾಣ ಕರ್ನಾಟಕದ ಜನರ ಸಾವಿಗೆ ಕನಿಷ್ಠ ಸಂತಾಪವನ್ನೂ ಸೂಚಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲೇನಿದೆ? 

ಮಾರ್ಚ್​ 29ರಂದು ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ನಗನೂರು ಗ್ರಾಮದ ರೈತನ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದರು. ಏಪ್ರಿಲ್​ 17ರಂದು ಅದೇ ಸುರಪೂರ ತಾಲೂಕಿನ ಗೋಪಾಲಸ್ವಾಮಿ ದೇವಸ್ಥಾನದ ದರ್ಶನಕ್ಕೆ ಸಿರವಾರ ಗ್ರಾಮದ ಒಂದೇ ಕುಟುಂಬದ 9 ಜನರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡಿದ್ದರು.

ಇದನ್ನೂ ಓದಿ: ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಈ ದುರಂತಗಳು ಸಂಭವಿಸಿ ಸುಮಾರು ದಿನಗಳು ಕಳೆದರು ಸಹ ಮೃತಕುಟುಂಬಗಳಿಗೆ ಪರಿಹಾರಧನ ಘೋಷಣೆ ಮಾಡುವುದಾಗಲಿ ಅಥವಾ ಕನಿಷ್ಠ ಸಾಂತ್ವಾನ ತಿಳಿಸುವುದಾಗಲಿ ಇಲ್ಲಿಯವರೆಗೆ ಮಾಡಿಲ್ಲ. ಆದರೆ ಏಪ್ರಿಲ್​ 19ರಂದು ನಿಮ್ಮ ಸ್ವಂತ ಮೈಸೂರು ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆರೆಯಲ್ಲಿ ಈಜಾಡಲು ಹೋಗಿ 6 ಜನ ಮೃತಪಟ್ಟ ಕುಟುಂಬಗಳಿಗೆ ತಕ್ಷಣವೇ ಸಾಮಾಜಿಕ ಜಾಲತಾಣದ ಮುಖಾಂತರ ಸಾಂತ್ವಾನ ತಿಳಿಸಿರುತ್ತೀರಿ, ಅಲ್ಲದೇ ಸದರಿ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿರುತ್ತೀರಿ.

ಇದನ್ನೂ ಓದಿ: ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ತಾವು ಈ ಮಲತಾಯಿ ದೊರಣೆಯನ್ನು ಅನುಸರಿಸುತ್ತಿರುವುದರಿಂದ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರ ಮುಖ್ಯಮಂತ್ರಿಗಳೋ ಎಂಬ ಸಂಶಯ ವ್ಯಕ್ತವಾಗಿದ್ದು, ಕಲ್ಯಾಣ ಕರ್ನಾಟಕದ ಭಾಗದ ಜನರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ನಗನೂರು ಗ್ರಾಮದ ಸಂತ್ರಸ್ಥ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿ ಸಾಂತ್ವಾನ ವ್ಯಕ್ತಪಡಿಸುವಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಪತ್ರದಲ್ಲಿ ಸಿಎಂಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

GT vs MI Playing XI: ಮುಂಬೈ ಪರ ಇಬ್ಬರು ಐಪಿಎಲ್​ಗೆ ಪಾದಾರ್ಪಣೆ; ರೋಹಿತ್ ಮತ್ತೆ ಅಲಭ್ಯ – Kannada News | GT vs MI Playing XI Gujarat Titans vs Mumbai Indians Today IPL 2026 match Confirmed playing 11 details with name in Kannada

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಆರನೇ ಪಂದ್ಯ ಇದಾಗಿದೆ. ಈ ಸೀಸನ್​ನಲ್ಲಿ ಸತತ 2 ಪಂದ್ಯಗಳನ್ನು ಸೋತಿದ್ದ ಗುಜರಾತ್ ಅದರ ನಂತರ ಬಲವಾದ ಪುನರಾಗಮನ ಮಾಡಿದೆ. ಮೊದಲ 2 ಸೋಲುಗಳ ನಂತರ ಗುಜರಾತ್ ಹ್ಯಾಟ್ರಿಕ್ ಜಯ ಸಾಧಿಸಿದೆ. ಮತ್ತೊಂದೆಡೆ, 2012 ರ ನಂತರ ಅಭಿಯಾನದ ಮೊದಲ ಪಂದ್ಯವನ್ನು ಗೆದ್ದ ಮುಂಬೈ, ಸತತ 4 ಪಂದ್ಯಗಳನ್ನು ಸೋತಿದೆ. ಆದ್ದರಿಂದ, ಈಗ ಗುಜರಾತ್‌ನ ಗೆಲುವಿನ ಸರಣಿಯನ್ನು ನಿಲ್ಲಿಸಲು ಮತ್ತು ಅದರ ಸೋಲಿನ ಸರಣಿಯನ್ನು ಮುರಿಯಲು ಮುಂಬೈಗೆ ಎರಡು ಸವಾಲುಗಳಿವೆ.

ಟಾಸ್ ಗೆದ್ದ ಗುಜರಾತ್

ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ. ಅದರಂತೆ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡದ ಪರ ಇಬ್ಬರು ಐಪಿಎಲ್​ಗೆ ಪಾದಾರ್ಪಣೆ ಮಾಡುತ್ತಿದ್ದು, ಡ್ಯಾನಿಶ್ ಮಾಲೆವಾರ್ ಮತ್ತು ಕ್ರಿಸ್ ಭಗತ್ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಹಾಗೆಯೇ ಗಾಯಕ್ಕೆ ತುತ್ತಾಗಿರುವ ರೋಹಿತ್ ಶರ್ಮಾ ಪ್ರಸ್ತುತ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ.

ಮುಖಾಮುಖಿ ದಾಖಲೆ

ಐಪಿಎಲ್ ಸ್ಪರ್ಧೆಯ ಅಂಕಿಅಂಶಗಳನ್ನು ನೋಡಿದರೆ, ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಗುಜರಾತ್ ಟೈಟಾನ್ಸ್ ತಂಡಕ್ಕೆ ಹೆಚ್ಚಿನ ಮುನ್ನಡೆ ಇರುವುದು ಸ್ಪಷ್ಟವಾಗುತ್ತದೆ . ಎರಡೂ ತಂಡಗಳ ನಡುವಿನ ಒಂಬತ್ತನೇ ಪಂದ್ಯ ಇಂದು ನಡೆಯುತ್ತಿದೆ. ಇಲ್ಲಿಯವರೆಗೆ ಆಡಿರುವ 8 ಪಂದ್ಯಗಳಲ್ಲಿ ಗುಜರಾತ್ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿದೆ. ಗುಜರಾತ್ ಮುಂಬೈಯನ್ನು 5 ಬಾರಿ ಸೋಲಿಸಿದೆ. ಆದರೆ ಮುಂಬೈ 3 ಪಂದ್ಯಗಳಲ್ಲಿ ಗುಜರಾತ್ ವಿರುದ್ಧ ಗೆದ್ದಿದೆ.

GT vs MI IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ಮುಂಬೈ ಇಂಡಿಯನ್ಸ್: ಡ್ಯಾನಿಶ್ ಮಾಲೆವಾರ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ಶೆರ್ಫಾನೆ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕ್ರಿಶ್ ಭಗತ್, ಜಸ್ಪ್ರೀತ್ ಬುಮ್ರಾ, ಅಲ್ಲಾ ಘಜನ್‌ಫರ್.

ಇಂಪ್ಯಾಕ್ಟ್ ಪ್ಲೇಯರ್: ರಾಜ್ ಬಾವಾ, ಅಶ್ವಿನಿ ಕುಮಾರ್, ಕಾರ್ಬಿನ್ ಬಾಷ್, ಮಯಾಂಕ್ ರಾವತ್, ರಘು ಶರ್ಮಾ.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಶೀದ್ ಖಾನ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ಅಶೋಕ್ ಶರ್ಮಾ.

ಇಂಪ್ಯಾಕ್ಟ್ ಪ್ಲೇಯರ್: ರಾಹುಲ್ ತೆವಾಟಿಯಾ, ಜೇಸನ್ ಹೋಲ್ಡರ್, ಅನುಜ್ ರಾವತ್, ಕುಲ್ವಂತ್ ಖೆಜ್ರೋಲಿಯಾ, ಮಾನವ್ ಸುತಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:14 pm, Mon, 20 April 26

Source link

ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ.

ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ ಮತಾಂತರ ಮತ್ತು ಮಹಿಳಾ ಸಹೋದ್ಯೋಗಿಗಳ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ನಿದಾ ಖಾನ್, ಶನಿವಾರ ನಾಸಿಕ್ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ

ನಾನು 2 ತಿಂಗಳ ಗರ್ಭಿಣಿ, ಹೀಗಾಗಿ ಜಾಮೀನು ನೀಡಿ ಎಂದು ಆಕೆ ಮನವಿ ಮಾಡಿದ್ದರು. ಆಕೆ ಪರಾರಿಯಾಗಿದ್ದು, ಆಕೆಯ ಪರ ವಕೀಲರು ಅರ್ಜಿ ವಿಚಾರಣೆಗೆ ಹಾಜರಾಗಿದ್ದರು. ನಾಸಿಕ್ ಟಿಸಿಎಸ್ ಕಂಪನಿಯ ಧಾರ್ಮಿಕ ಮತಾಂತರ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 8 ಉದ್ಯೋಗಿಗಳನ್ನು ಬಂಧಿಸಿದ್ದಾರೆ. ನಿದಾ ಖಾನ್ ಅವರನ್ನು ಪತ್ತೆಹಚ್ಚಲು 3 ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಒಂದು ತಂಡ ಮುಂಬ್ರಾ ತಲುಪಿದೆ.

ದೌರ್ಜನ್ಯ, ಬಲವಂತದ ಮತಾಂತರಕ್ಕೆ ಯತ್ನಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು, ಕಿರುಕುಳ ಮತ್ತು ನಾಸಿಕ್ ಘಟಕದಲ್ಲಿ ಮಹಿಳಾ ಉದ್ಯೋಗಿಗಳ ಮಾನಸಿಕ ಕಿರುಕುಳ ಸೇರಿದಂತೆ ಆರೋಪಗಳಿಗೆ ಸಂಬಂಧಿಸಿದ 9 ಪ್ರಕರಣಗಳನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಇದನ್ನೂ ಓದಿ:  ಮಲೇಷ್ಯಾ ಧರ್ಮಗುರುವಿನ ಲಿಂಕ್, ವಾಟ್ಸಾಪ್ ಚಾಟ್; ಕಗ್ಗಂಟಾಗುತ್ತಲೇ ಇದೆ ಟಿಸಿಎಸ್ ಮತಾಂತರ ಪ್ರಕರಣ

ಇನ್ನೂ ತಲೆಮರೆಸಿಕೊಂಡಿರುವ 26 ವರ್ಷದ ನಿದಾ ಖಾನ್ ತನ್ನ ಎರಡು ತಿಂಗಳ ಗರ್ಭಧಾರಣೆಯನ್ನು ಉಲ್ಲೇಖಿಸಿ ನಿರೀಕ್ಷಣಾ ಜಾಮೀನು ಕೋರಿದ್ದರು. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನಾಸಿಕ್ ಬಿಪಿಒ ಘಟಕದಲ್ಲಿ ನಡೆದ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಿದಾ ಖಾನ್ “ಮಾಸ್ಟರ್ ಮೈಂಡ್” ಎಂದು ಪೊಲೀಸರು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

GT vs MI IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Mumbai Indians IPL 2026 Live Cricket Score GT vs MI Match on 20th April latest news in Kannada

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಇದು ಗುಜರಾತ್‌ನ ಆರನೇ ಪಂದ್ಯವೂ ಆಗಿದೆ. ಉಭಯ ತಂಡಗಳ ನಡುವಿನ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಗುಜರಾತ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಸತತ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಮುಂಬೈ 5 ರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ಗುಜರಾತ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ ಮರಳುವ ಸವಾಲು ಮುಂಬೈ ಮುಂದಿದೆ.

Source link

Chanakya Niti: ಮಹಿಳೆಯರು ಈ ರೀತಿಯ ಜನರಿಂದ ಸಾಧ್ಯವಾದಷ್ಟು ದೂರವಿರಬೇಕು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Women should stay away from these 3 people, their company will ruin their lives

ಸಮಾಜ ಎಷ್ಟೇ ಮುಂದುವರೆದಿದ್ದರೂ, ಇಂದಿನ ಈ ಜಗತ್ತಿನಲ್ಲಿ ಮಹಿಳೆಯರೂ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯನ್ನು ಸಾಧಿಸುತ್ತಿದ್ದರೂ ಸಹ ಕೆಲವೊಂದು ವಿಚಾರಗಳ ಬಗ್ಗೆ ಅವರು ಕೇರ್‌ಫುಲ್‌ ಆಗಿದ್ದಷ್ಟು ತುಂಬಾನೇ ಒಳ್ಳೆಯದು ಎನ್ನುತ್ತಾರೆ ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯರು ಈ ಒಂದಷ್ಟು ಜನರ ಬಗ್ಗೆ ತುಂಬಾನೇ ಜಾಗರೂಕರಾಗಿರಬೇಕು, ಅಂತಹ ಜನರ ಸಹವಾಸದಿಂದ ಸಾಧ್ಯವಾದಷ್ಟು ದೂರವಿರಬೇಕು, ಇಲ್ಲದಿದ್ದರೆ ಸಂಪೂರ್ಣ ಜೀವನವೇ ಹಾಳಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಚಾಣಕ್ಯರು ಹೇಳಿರುವಂತೆ ಮಹಿಳೆಯರು ಎಂತಹ ಜನರ ಸಹವಾಸದಿಂದ ದೂರವಿದ್ದರೆ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ.

ಮಹಿಳೆಯರು ಈ ಜನರ ಸಹವಾಸದಿಂದ ದೂರವಿದ್ದಷ್ಟು ಒಳ್ಳೆಯದು:

ಮೋಸಗಾರರು ಮತ್ತು ಸುಳ್ಳುಗಾರರು: ಪ್ರತಿಯೊಂದು ಸಂಬಂಧದಲ್ಲಿಯೂ  ಸತ್ಯವು ಪ್ರಮುಖ ಪಾತ್ರ ವಹಿಸುತ್ತದೆ,  ಆದರೆ ಸಂಬಂಧದಲ್ಲಿ ಸುಳ್ಳು ಹೇಳುವವರು, ಮೋಸಗಾರರು ಸಹ ಇರುತ್ತಾರೆ. ಚಾಣಕ್ಯರ ಪ್ರಕಾರ, ಈ ರೀತಿ ನಿರಂತರವಾಗಿ ಸುಳ್ಳು ಹೇಳುವ ವ್ಯಕ್ತಿಯನ್ನು ಎಂದಿಗೂ ನಂಬಬಾರದು. ಅಂತಹ ಜನರು ತಮ್ಮ ಅನುಕೂಲಕ್ಕಾಗಿ ಯಾವುದೇ ಸಮಯದಲ್ಲಿ ಸುಳ್ಳನ್ನು ಸುಳ್ಳು ಹೇಳುತ್ತಾರೆ. ತಮ್ಮ ಸ್ವಾರ್ಥಕ್ಕಾಗಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಹಾಗಾಗಿ ಇಂತಹ ಜನರೊಂದಿಗೆ ಮಹಿಳೆಯರು ಸ್ನೇಹ, ಸಂಬಂಧಗಳನ್ನು ಬೆಳೆಸಿಕೊಳ್ಳುವಾಗ ವಿಶೇಷವಾಗಿ ಜಾಗರೂಕರಾಗಿರಬೇಕು, ಏಕೆಂದರೆ ಅಂತಹ ಜನರು ಸಿಹಿ ಮಾತುಗಳಿಂದ ನಿಮ್ಮ ವಿಶ್ವಾಸವನ್ನು ಗೆಲ್ಲುತ್ತಾರೆ ಮತ್ತು ಅವಕಾಶ ಸಿಕ್ಕ ತಕ್ಷಣ  ದ್ರೋಹ ಬಗೆಯುತ್ತಾರೆ.

ನಿಯಂತ್ರಿಸುವವರಿಂದ ದೂರವಿರಿ: ಕೆಲ ಪುರುಷರು ಮಹಿಳೆಯರನ್ನೂ ಪ್ರತಿಯೊಂದು ವಿಷಯಗಳಲ್ಲೂ ನಿಯಂತ್ರಿಸುತ್ತಾರೆ. ಹೌದು ನೀನು  ಆ ಕೆಲಸ ಮಾಡಬೇಡ ಹಾಗೆ, ಹೀಗೆ ಅಂತೆಲ್ಲಾ ಮಹಿಳೆಯರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಾರೆ. ಹೀಗೆ ಪ್ರತಿಯೊಂದು ವಿಷಯದಲ್ಲೂ ನಿಮ್ಮನ್ನು ನಿಯಂತ್ರಿಸುತ್ತಾ, ನಿಮ್ಮ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವವರಿಂದ ದೂರವಿದ್ದರೆಯೇ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಂತಹ ಜನರು ನಿಮ್ಮ ಸ್ವಾಭಿಮಾನಕ್ಕೆ ನೋವುಂಟು ಮಾಡುತ್ತಾರೆ ಚಾಣಕ್ಯರ ಪ್ರಕಾರ, ಮಹಿಳೆಯರು ಎಂದಿಗೂ ತಮ್ಮ ಸ್ವಾಭಿಮಾನವನ್ನು ರಾಜಿ ಮಾಡಿಕೊಳ್ಳಬಾರದು. ನಿಯಂತ್ರಿಸುವ, ಸ್ವಾಭಿಮಾನಕ್ಕೆ ಧಕ್ಕೆ ತರುವ ಜನರಿಂದ ಮಹಿಳೆಯರು ಆದಷ್ಟು ದೂರವಿರಬೇಕು.

ಇದನ್ನೂ ಓದಿ: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಸಲಹೆಗಳನ್ನು ಪಾಲಿಸಿ

ದುರಾಸೆಯ ಜನರಿಂದ ದೂರವಿರಿ: ದುರಾಸೆಯ ಜನರು ತಮ್ಮ ಲಾಭಕ್ಕಾಗಿ ಮಾತ್ರ ಸಂಬಂಧವನ್ನು ಬೆಳೆಸಿಕೊಳ್ಳುತ್ತಾರೆ. ತಮ್ಮ ಕೆಲಸ ಸಾಧಿಸಿದ ಮೇಲೆ ಮೋಸ ಮಾಡಿ ಹೋಗುತ್ತಾರೆ. ಭಾವನೆಗಳ ಜೊತೆ ಆಟವಾಡುವ ಇಂತಹ ಜನರರಿಂದ ಮಹಿಳೆಯರು ದೂರವಿರಬೇಕು.  ಚಾಣಕ್ಯರ ಪ್ರಕಾರ ಮಹಿಳೆಯರು ಇಂತಹ ದುರಾಸೆಯ ಜನರಿಂದ ಸಾಧ್ಯವಾದಷ್ಟು ದೂರವಿರಬೇಕು ಮತ್ತು ಹೆಣ್ಣಿಗೆ ಗೌರವ ನೀಡುವ, ಬೆಂಬಮಲವಾಗಿ ನಿಲ್ಲುವ ಜನರೊಂದಿಗಿರಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ    

Source link

Exit mobile version