Headlines

Video: ಮಾಲೀಕರಿಂದ ಕದ್ದು ಮಾಂಸದಂಗಡಿಗೆ ಸಾಗಿಸುತ್ತಿದ್ದ ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡ ನಾಯಿಗಳು

ಚೀನಾ, ಮಾರ್ಚ್​ 24: ಚೀನಾದಲ್ಲಿ ಏಳು ನಾಯಿಗಳು ತಮ್ಮ ಮಾಲೀಕರನ್ನು ಅರಸಿ 17 ಕಿ.ಮೀ ನಡೆದಿರುವ ವಿಡಿಯೋ ವೈರಲ್ ಆಗಿದೆ. ಕೆಲವು ದುಷ್ಟರು ಮಾಲೀಕರಿಂದ ನಾಯಿಗಳನ್ನು ಕದ್ದು, ಅಕ್ರಮವಾಗಿ ಟ್ರಕ್​​ನಲ್ಲಿ ಸಾಗಿಸುತ್ತಿದ್ದರು, ಆದರೆ ಅದೃಷ್ಟವಶಾತ್ ಆ ನಾಯಿಗಳು ಟ್ರಕ್​ನಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿವೆ. ಈ ನಾಯಿಗಳನ್ನು ಅವುಗಳ ಮನೆಗಳಿಂದ ಕದ್ದಿದ್ದು, ನಾಯಿ ಮಾಂಸದ ಅಂಗಡಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಹೇಳಲಾಗಿದೆ. ಜರ್ಮನ್ ಶೆಫರ್ಡ್, ಗೋಲ್ಡನ್ ರಿಟ್ರೈವರ್ ಮತ್ತು ಕಾರ್ಗಿ ಸೇರಿದಂತೆ ಈ ಗುಂಪಿನ ನಾಯಿಗಳು…

Read More

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ 19 ವಿಶೇಷ ರೈಲುಗಳು ಇನ್ನು ಮುಂದೆ ಖಾಯಂ

ಬೆಂಗಳೂರು, ಮಾರ್ಚ್​ 24: ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ (Railway Board) ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಿದೆ. ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿವೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ. ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ…

Read More

Gold Rates: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ; ಕರುನಾಡ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲ

ಬೆಂಗಳೂರು, ಮಾರ್ಚ್ 24: ಚಿನ್ನದ ಬೆಲೆಯ (Gold Rates) ಸತತ ಇಳಿಕೆ ಮುಂದುವರಿಯುತ್ತಿದೆ. ಆಭರಣ ಪ್ರಿಯ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲದಂತಾಗಿದೆ. ಚಿನ್ನದ ಬೆಲೆ ಗಗನಕ್ಕೇರಿದ್ದಾಗ ಆತಂಕದಲ್ಲಿ ಚಿನ್ನ ಖರೀದಿ ಬಿಟ್ಟಿರದ ಮಹಿಳೆಯರು ಈಗ ಬಂಗಾರದ ಬೆಲೆ ಸತತವಾಗಿ ಇಳಿಯುತ್ತಿರುವುದರಿಂದ ಚಿನ್ನದಂಗಡಿಗಳಿಗೆ ಲಗ್ಗೆ ಇಡುತ್ತಿದ್ದಾರೆ. ಮಂಗಳವಾರ ಚಿನ್ನದ ಬೆಲೆ ಒಂದೇ ದಿನ 270 ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 12,865 ರೂ ಮುಟ್ಟಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳವಾಗಿದೆ….

Read More

Video: ಧುರಂಧರ್-2 ಎಫೆಕ್ಟ್​, ಪಾಕಿಸ್ತಾನದ ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ

ಇಸ್ಲಾಮಾಬಾದ್, ಮಾರ್ಚ್​ 24: ಬಾಲಿವುಡ್ ಸಿನಿಮಾ ಧುರಂಧರ್ 2 ಯುಗಾದಿಯಂದು ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ಪಾತ್ರಧಾರಿ ಭಾರತದ ಸೀಕ್ರೆಟ್ ಏಜೆಂಟ್ ಆಗಿದ್ದು, ತನ್ನ ಹೆಸರನ್ನು ಹಮ್ಜಾ ಅಲಿ ಮಜಾರಿ ಎಂದು ಬದಲಿಸಿಕೊಂಡು ಪಾಕಿಸ್ತಾನದಲ್ಲಿ ನೆಲೆಸಿ, ಅಲ್ಲಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗುತ್ತಾನೆ. ಈ ಸಿನಿಮಾವನ್ನು ನೋಡಿದ ಪಾಕಿಸ್ತಾನಿ ಪೊಲೀಸರು ಹಾಗೂ ಸ್ಥಳೀಯರು ಕರಾಚಿಯ ಲಿಯಾರಿಯ ಪ್ರತಿ ಬೀದಿಯಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳ ಹುಡುಕಾಟದಲ್ಲಿರುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅದರಲ್ಲಿ ಪ್ರಮುಖವಾಗಿ…

Read More

ವಾಹನ ಸವಾರರೇ ಗಮನಿಸಿ: ಬೆಂಗಳೂರಿನಲ್ಲಿ ಮತ್ತೆ ಶುರುವಾಗುತ್ತಿದೆ ಟೋಯಿಂಗ್! ದಂಡದ ಮೊತ್ತ ಎಷ್ಟು ಗೊತ್ತೇ?

ಬೆಂಗಳೂರು, ಮಾರ್ಚ್ 24: ಬೆಂಗಳೂರು (Bangalore) ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ ಆರಂಭಿಸಲು ಬೆಂಗಳೂರು ಟ್ರಫಿಕ್ ಪೊಲೀಸರು ನಿರ್ಧರಿಸಿದ್ದಾರೆ. ಮಾರ್ಚ್ 25 ರಿಂದಲೇ ಬೆಂಗಳೂರಿನಲ್ಲಿ ಟೋಯಿಂಗ್ ಪ್ರಕ್ರಿಯೆ ಪುನರಾರಂಭವಾಗುವ ಸಾಧ್ಯತೆ ಇದೆ. ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಪ್ರತಿ ಪಾಲಿಕೆ ವ್ಯಾಪ್ತಿಗೆ…

Read More

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ…

Read More

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ನಡೆದ ಲಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ಪರ ವಕೀಲ ನಾರಾಯಣ ಸ್ವಾಮಿ ಜಿ. ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಉದ್ದೇಶಪೂರ್ವಕ ಡ್ರಿಫ್ಟಿಂಗ್ ಆಗಿರದೆ, ಕಾರಿನ ಬ್ರೇಕ್ ಸಮಸ್ಯೆಯಿಂದ ಅಥವಾ ರಸ್ತೆಯ ಮರಳಿನ ಕಾರಣದಿಂದ ಉಂಟಾದ ಆಕಸ್ಮಿಕ ಸ್ಕಿಡ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆ ನಡೆದ ರಾತ್ರಿ ರಿಕ್ಕಿ ರೈ ಕಾರಿನಲ್ಲಿದ್ದರು. ಆದರೆ, ಅವರು ರಷ್ಯಾದಿಂದ ಭಾರತಕ್ಕೆ ಬಂದ ಕೇವಲ ಎರಡು ದಿನಗಳ…

Read More

ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದಿದ್ದಕ್ಕೆ ಭಾರೀ ಗಲಾಟೆ; 24 ಮಂದಿಗೆ ಗಾಯ!

ಗದಗ, ಮಾರ್ಚ್​ 24: ಇಂದಿಗೂ ಸಮಾಜದಲ್ಲಿ ಜಾತಿಯಲ್ಲಿ ಮೇಲು ಕೀಳು ಎಂಬ ಭಾವನೆ ಜೀವಂತವಾಗಿದೆ ಎನ್ನುವುದಕ್ಕೆ ಹಲವು ಉದಾಹರಣೆಗಳು ಕಂಡು ಬಂದಿವೆ. ಈ ಹಿಂದೆಯೂ ಜಾತಿ ವಿಷಯಕ್ಕೆ, ಅಸ್ಪರ್ಷತೆ ವಿಚಾರಕ್ಕೆ ಸವರ್ಣೀಯರು ದಲಿತರನ್ನು ನಿಂದಿಸಿದ, ಅವರೊಂದಿಗೆ ಹೊಡೆದಾಟಕ್ಕಿಳಿದ (caste conflict) ನಿದರ್ಶನಗಳಿವೆ. ಆದರೆ ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದ ಎಂಬ ವಿಚಾರಕ್ಕೆ ಮಾರಾಮಾರಿ ನಡೆದಿದ್ದು, 24 ಜನರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಡ್ಲಿ, ಕಲ್ಲಿನಿಂದ…

Read More

‘ಬಂದರೋ ಬಂದರೋ ಭಾವ ಬಂದರೋ’ ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಬೆಂಗಳೂರು, ಮಾರ್ಚ್​ 24: ಲ್ಯಾಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಯಾಗಿದೆ. ಜಾಮೀನು ಪಡೆದು ವಿಚಾರಣೆಗೆ ಹಾಜರಾದ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ, ಚಾಲಕನ ಸೃಜನಶೀಲತೆಯಿಂದ ಕಾರು ಸ್ಕಿಡ್ ಆಗಿದೆ ಎಂದು ಸಮರ್ಥಿಸಿಕೊಂಡಿದ್ದರು. ರಸ್ತೆ ಇತ್ತೀಚೆಗೆ ದುರಸ್ತಿ ಮಾಡಿದ್ದರಿಂದ ಬ್ರೇಕ್ ಹೊಡೆದಾಗ ನಿಯಂತ್ರಣ ತಪ್ಪಿದೆ ಎಂದೂ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿ, ಸೃಜನಶೀಲತೆ ಪ್ರದರ್ಶನಕ್ಕೆ ಸಿಗ್ನಲ್‌ಗಳು ವೇದಿಕೆಯಲ್ಲ…

Read More