ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ದಿನವೂ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಈ ಸಿನಿಮಾ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಸಿನಿಮಾ ಅಬ್ಬರಿಸುತ್ತಿದೆ. ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಇನ್ನೂ ಎರಡು ತಿಂಗಳ ಕಾಲ ಸಿನಿಮಾ ಪ್ರಸಾರ ಕಾಣುವ ನಿರೀಕ್ಷೆ ಇದೆ. ವಿಕೇಂಡ್​​ ಶೋಗಳು ಹೌಸ್​​ಫುಲ್ ಆಗಿವೆ. ಮಾರ್ಚ್ 19ರಂದು ‘ಧುರಂಧರ್ 2’…

Read More

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ – Kannada News | IPL 2026: Predicted RCB Playing XI vs LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ… ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಯಶ್ ದಯಾಳ್: ಆರ್​ಸಿಬಿ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಜೋಶ್ ಹೇಝಲ್​ವುಡ್: ರಾಯಲ್ ಚಾಲೆಂಜರ್ಸ್…

Read More

ವಂದೇ ಭಾರತ್ ಸ್ಲೀಪರ್ ರೈಲಿಗೆ ಭಾರೀ ಡಿಮ್ಯಾಂಡ್; ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ – Kannada News | Vande Bharat sleeper train to get total 24 coaches passenger capacity to cross 1200

ನವದೆಹಲಿ, ಜನವರಿ 29: ಭಾರತ ದೇಶದ ಮೊದಲ ಸೆಮಿ ಹೈ ಸ್ಪೀಡ್ ಸ್ಲೀಪರ್ ರೈಲಾದ ವಂದೇ ಭಾರತ್ ಸ್ಲೀಪರ್ (Vande Bharat Sleeper Train) ಗುವಾಹಟಿ ಮತ್ತು ಹೌರಾ ನಡುವೆ ಈಗಾಗಲೇ ಸಂಚರಿಸುತ್ತಿದೆ. ಪ್ರಯಾಣಿಕರು ಇದನ್ನು ತುಂಬಾ ಇಷ್ಟಪಡುತ್ತಿದ್ದಾರೆ. ಇದರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣದಿಂದಾಗಿ ಭಾರತೀಯ ರೈಲ್ವೆ ಈ ರೈಲಿನಲ್ಲಿ ಹೊಸ ಪ್ರಯೋಗಗಳನ್ನು ನಡೆಸಲು ಮುಂದಾಗಿದೆ. ಹೆಚ್ಚಿನ ಜನರಿಗೆ ಈ ಸ್ಲೀಪರ್ ರೈಲಿನಲ್ಲಿ ಸಂಚರಿಸಲು ಸಹಾಯವಾಗಲಿ ಎಂಬ ಉದ್ದೇಶದಿಂದ ಈ ರೈಲಿನಲ್ಲಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ….

Read More

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ – Kannada News | Raghavendra Rajkumar and Family did pooja to Dr Rajkumar Samadhi

ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

CBSE Class 12 Results 2026: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ದಿನಾಂಕದ ಕುರಿತ ವದಂತಿಗಳಿಗೆ ಬ್ರೇಕ್ ಹಾಕಿದ ಮಂಡಳಿ! – Kannada News | CBSE Class 12 Results 2026: Official Date and Clarification on Rumors

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷಾ ನಿಯಂತ್ರಕರ ಸ್ಪಷ್ಟನೆ ಏನು? ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ…

Read More

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ…

Read More

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ…

Read More

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್ – Kannada News | Kichcha Sudeep jokes about Gilli Nata Kavya Shaiva and Rakshitha Shetty bonding

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಫೇವರಿಟ್ ಆಗಿದ್ದಾರೆ. ಗಿಲ್ಲಿ ಬಗ್ಗೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಕೆಲವು ಟೀಕೆಗಳು ಇದ್ದರೂ ಕೂಡ ಅವರ ಕಾಮಿಡಿಯನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ (Rakshitha Shetty) ಅವರು ಮೊದಲಿನಿಂದಲೂ ಆಸಕ್ತಿ ಹೊಂದಿದ್ದಾರೆ. ಆ ಬಗ್ಗೆ ಜನವರಿ 4ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಚರ್ಚೆ ಮಾಡಿದ್ದಾರೆ. ‘ಕಾವ್ಯಾ ಯಾವಾಗಲೂ ಗಿಲ್ಲಿ ಪಕ್ಕನೇ ಕುಳಿತುಕೊಳ್ಳುತ್ತಾರೆ’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ‘ಇದನ್ನೆಲ್ಲ ನೋಡಿ…

Read More