ಬೆಂಗಳೂರಿನ 50 ವಾರ್ಡ್​ಗಳಲ್ಲಿ ಕಸ ಸಂಗ್ರಹಣೆ ಸ್ಥಗಿತ! ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿರುವ ಕಾರ್ಮಿಕರು

ಬೆಂಗಳೂರಿನ 50 ವಾರ್ಡ್​ಗಳಲ್ಲಿ ಕಸ ಸಂಗ್ರಹಣೆ ಸ್ಥಗಿತ! ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿರುವ ಕಾರ್ಮಿಕರು

ಬೆಂಗಳೂರು, ಮಾರ್ಚ್​ 24: ನಗರದಲ್ಲಿ ತ್ಯಾಜ್ಯ ಸಂಗ್ರಹಣೆಯಲ್ಲಿ (Waste Management) ಅಡಚಣೆ ಉಂಟಾಗಿದ್ದು, ಕನಿಷ್ಠ 50 ವಾರ್ಡ್‌ಗಳಲ್ಲಿ ಕಸದ ಸಂಗ್ರಹಣೆ ಸೋಮವಾರ ಸ್ಥಗಿತಗೊಂಡಿತ್ತು. ವೇತನ ಬಾಕಿ ಹಾಗೂ ಕಸ ವಿಂಗಡಣೆ ಕುರಿತ ಹೊಸ ನಿಯಮದ ವಿರುದ್ಧ ಪ್ರತಿಭಟನೆಯಾಗಿ ಆಟೋ ಟಿಪ್ಪರ್ ಚಾಲಕರು ಮತ್ತು ಲೋಡರ್‌ಗಳು ಸಾಮೂಹಿಕ ರಜೆ ಹಾಕಿದ್ದರಿಂದ ಈ ಅವ್ಯವಸ್ಥೆ ಉಂಟಾಗಿದೆ.

ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಸಿಇಒ

ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮೂಲದಲ್ಲೇ ಕಸದ ವಿಂಗಡಣೆ ಕಡ್ಡಾಯವಾಗಬೇಕು ಎಂದು ಒತ್ತಾಯಿಸುತ್ತಿದ್ದು, ಗುತ್ತಿಗೆದಾರರು ಇದನ್ನು ವಿರೋಧಿಸಿದ್ದಾರೆ. ಕಸ ವಿಂಗಡಿಸುವ ಜವಾಬ್ದಾರಿ ಕಸ ಉತ್ಪಾದಕರದ್ದೇ ಹೊರತು ಕಸ ಸಂಗ್ರಹಿಸುವವರದ್ದಲ್ಲವೆಂಬುದು ಇವರ ವಾದ. BSWML ಸಿಇಒ ಕರೀಗೌಡ, ಸುಮಾರು 40–50 ವಾರ್ಡ್‌ಗಳಲ್ಲಿ ಮಾತ್ರ ಸಮಸ್ಯೆ ಉಂಟಾಗಿದ್ದು, ನಗರದ ಉಳಿದ ಭಾಗಗಳಲ್ಲಿ ಸಂಗ್ರಹಣೆ ಸಾಮಾನ್ಯವಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ತಿಂಗಳ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದೂ ಸಹ ಸ್ಪಷ್ಟಪಡಿಸಿದ್ದಾರೆ.

ಗುತ್ತಿಗೆದಾರರ ವಿರುದ್ಧ 35 ಎಫ್​ಐಆರ್​ಗಳು!

ಇನ್ನೊಂದೆಡೆ, ಕಸ ಸಂಗ್ರಹಿಸದ ಗುತ್ತಿಗೆದಾರರ ವಿರುದ್ಧ ಅಗತ್ಯ ಸೇವೆಗಳ ಕಾಯ್ದೆ (ESMA) ಅಡಿಯಲ್ಲಿ 35 ಎಫ್‌ಐಆರ್‌ಗಳು ದಾಖಲಾಗಿವೆ. ಗುತ್ತಿಗೆದಾರರ ಸಂಘವು ಹೊಸ ನಿಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬಿಬಿಎಂಪಿ ಕಸ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್‌ಎನ್ ಬಾಲಸುಬ್ರಮಣಿಯನ್, ತ್ಯಾಜ್ಯವನ್ನು ಬೇರ್ಪಡಿಸುವ ಜವಾಬ್ದಾರಿ ತ್ಯಾಜ್ಯ ಉತ್ಪಾದಕರ ಮೇಲಿದೆ ಎಂದು ಹೇಳಿದ್ದಾರೆ.

ತ್ಯಾಜ್ಯವನ್ನು ಬೇರ್ಪಡಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಬಿಎಸ್‌ಡಬ್ಲ್ಯೂಎಂಎಲ್ ನಮ್ಮ ಆಟೋ ಚಾಲಕರು ಮತ್ತು ಲೋಡರ್‌ಗಳಿಗೆ ಹೇಳಲಾಗಿದೆ. ನಾವು ತ್ಯಾಜ್ಯವನ್ನು ಹೇಗೆ ಬೇರ್ಪಡಿಸಬಹುದು? ಇದು ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಕಾಯ್ದೆಯ ಉಲ್ಲಂಘನೆಗೆ ಸಮನಾಗುವುದಿಲ್ಲವೇ? ಎಂದಿದ್ದಾರೆ. ಟೆಂಡರ್ ಷರತ್ತುಗಳ ಪ್ರಕಾರ ಗುತ್ತಿಗೆದಾರರು ಬೇರ್ಪಡಿಸಿದ ತ್ಯಾಜ್ಯವನ್ನು ಮಾತ್ರ ಸಂಗ್ರಹಿಸಬೇಕು ಎಂದು ಬಿಎಸ್‌ಡಬ್ಲ್ಯೂಎಂಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 24: ಅಮೆರಿಕ-ಇರಾನ್(Iran) ನಡುವಿನ ಸಂಘರ್ಷ ಬಗೆಹರಿಸಲು ಪಾಕಿಸ್ತಾನವು ಮಧ್ಯಸ್ಥಿಕೆವಹಿಸಲು ಸಿದ್ಧವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಮಾತುಕತೆಗಳ ಕುರಿತಾದ ವರದಿಗಳಿಂದ ಯಾವುದೇ ಅಂತಿಮ ನಿರ್ಧಾರಕ್ಕೆ ಬರಬಾರದು ಎಂದು ಶ್ವೇತಭವನ ಹೇಳಿದೆ. ರಾಜತಾಂತ್ರಿಕ ಪ್ರಯತ್ನಗಳು ಸೂಕ್ಷ್ಮವಾಗಿರುತ್ತವೆ ಎಂದು ಹೇಳಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ನಡುವಿನ ಮಾತುಕತೆಗಳನ್ನು ದೃಢಪಡಿಸಿದೆ.

ಅಮೆರಿಕದ ಹಿರಿಯ ಅಧಿಕಾರಿಗಳು ಇಸ್ಲಾಮಾಬಾದ್‌ನಲ್ಲಿ ಇರಾನಿನ ಪ್ರತಿನಿಧಿಗಳನ್ನು ಭೇಟಿ ಮಾಡಬಹುದು ಎಂಬ ವರದಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್, ಸಭೆ ಕುರಿತಾದ ಊಹಾಪೋಹಗಳನ್ನು ನಾವು ಔಪಚಾರಿಕವಾಗಿ ಘೋಷಿಸುವವರೆಗೆ ಅದು ಸತ್ಯವೆಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ರಾಯಿಟರ್ಸ್​ ಪ್ರಕಾರ, ಪಾಕಿಸ್ತಾನದ ಅಧಿಕಾರಿಯೊಬ್ಬರು ಮತ್ತು ಎರಡನೇ ಮೂಲವೊಂದು ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ನೇರ ಮಾತುಕತೆಗಳು ಈ ವಾರದ ಆರಂಭದಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಟ್ರಂಪ್ ಹಾಗೂ ಮುನೀರ್ ನಡುವಿನ ಮಾತುಕತೆ ಬಳಿಕ, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​, ಶಾಂತಿ ಕಾರ್ಯಾಚರಣೆಗಳ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಉದ್ಯಮಿ ಜೇರೆಡ್ ಕುಶ್ನರ್ ಅವರು ಪಾಕಿಸ್ತಾನದ ರಾಜಧಾನಿಯಲ್ಲಿ ಇರಾನಿನ ಅಧಿಕಾರಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.

ದಿ ಟೈಮ್ಸ್​ ಆಫ್ ಇಂಡಿಯಾ ಅವರದಿಯ ಪ್ರಕಾರ, ಮಧ್ಯಸ್ಥಿಕೆ ವಹಿಸುತ್ತಿರುವ ರಾಷ್ಟ್ರಗಳು ಇಸ್ಲಾಮಾಬಾದಿನಲ್ಲಿ ಅಮೆರಿಕ ಮತ್ತು ಇರಾನಿನ ನಡುವೆ ಸಭೆ ನಡೆಸಲು ಪ್ರಯತ್ನಿಸುತ್ತಿವೆ, ಈ ವಾರದ ಕೊನೆಯಲ್ಲಿ ಇದು ನಡೆಯಬಹುದು ಎಂದು ಹೇಳಿದೆ.

ಅಮೆರಿಕ ಹಾಗೂ ಇರಾನ್ ನಡುವೆ ಉತ್ತಮ ಮಾತುಕತೆಗಳು ನಡೆದಿವೆ. ಕೆಲವು ವಿಷಯಗಳಲ್ಲಿ ಒಪ್ಪಂದವಾಗುವ ಸಾಧ್ಯತೆ ಕೂಡ ಇದೆ ಎಂದು ಟ್ರಂಪ್ ಹೇಳಿದ್ದಾರೆ. ಈ ಕಾರಣದಿಂದಲೇ ದಾಳಿಗಳನ್ನು ಐದು ದಿನಗಳ ಕಾಲ ನಿಲ್ಲಿಸುವ ನಿರ್ಧಾರ ಮಾಡಿದ್ದೇವೆ. ಮಾತುಕತೆಗಳು ವಿಫಲವಾದರೆ ದಾಳಿಗಳು ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?

ಕ್ಷಯರೋಗ (TB) ಎನ್ನುವುದು ಶ್ವಾಸಕೋಶದ  ಮೇಲೆ ಪರಿಣಾಮ ಬೀರುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ʼಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್‌ʼ ಎಂಬ ಬ್ಯಾಕ್ಟೀರಿಯಾದ ಕಾರಣದಿಂದ ಉಂಟಾಗುತ್ತದೆ. ಕ್ಷಯರೋಗವು ಹೆಚ್ಚಾಗಿ ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ ಸಾಂಕ್ರಾಮಿಕವಾಗಿ ಹರಡುವ ಈ ರೋಗವು ಮೆದುಳು, ಬೆನ್ನು ಹುರಿ, ಕಿಬ್ಬೊಟ್ಟೆ, ಮೂತ್ರಪಿಂಡ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಕೂಡಾ ಇದು ಪರಿಣಾಮ ಬೀರುತ್ತದೆ.  ಪ್ರತಿ ವರ್ಷ ಲಕ್ಷಾಂತರ ಜನ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಕೊಲ್ಲುತ್ತದೆ. ಆದರೆ  ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳುವ ಮೂಲಕ ಈ ರೋಗವನ್ನು ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಮತ್ತು ತಡೆಗಟ್ಟಬಹುದು. ಹೀಗಾಗಿ ಕ್ಷಯರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದರ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್‌ 24 ರಂದು ವಿಶ್ವ ಕ್ಷಯರೋಗ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಕ್ಷಯರೋಗ ದಿನದ ಇತಿಹಾಸವೇನು?

ಡಾ. ರಾಬರ್ಟ್ ಕೋಚ್ ಕ್ಷಯರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾವಾದ ಮೈಕೋಬ್ಯಾಕ್ಟೀರಿಯಂ ಬ್ಯಾಕ್ಟೀರಿಯಾವನ್ನು ಕಂಡು ಹಿಡಿದರು. ಡಾ. ರಾಬರ್ಟ್ ಕೋಚ್ ಅವರ ಟಿಬಿ ಬ್ಯಾಕ್ಟೀರಿಯಾದ ಈ ಆವಿಷ್ಕಾರವು ವೈದ್ಯಕೀಯ ವಿಜ್ಞಾನದಲ್ಲಿ ಒಂದು ಪ್ರಮುಖ ಹೆಜ್ಜೆಯಾಯಿತು. ಈ ನಿಟ್ಟಿನಲ್ಲಿ ಇವರ ಈ ಆವಿಷ್ಕಾರವನ್ನು ನೆನಪಿಸುವ ಸಲುವಾಗಿ 1982 ರಲ್ಲಿ ಮಾರ್ಚ್ 24 ರಂದು ವಿಶ್ವ ಆರೋಗ್ಯ ಸಂಸ್ಥೆಯು ಮೊದಲ ಬಾರಿಗೆ ಕ್ಷಯ ರೋಗ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಕ್ಷಯರೋಗ ದಿನದ ಮಹತ್ವವೇನು?

  • ವಿಶ್ವ ಕ್ಷಯರೋಗ ದಿನದ ಆಚರಣೆಯ ಪ್ರಮುಖ ಉದ್ದೇಶವೆಂದರೆ ಕ್ಷಯರೋಗದ (ಟಿಬಿ) ಗಂಭೀರತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅದರ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯನ್ನು ಉತ್ತೇಜಿಸುವುದು.
  • ವಿಶ್ವದೆಲ್ಲೆಡೆ ಅನೇಕ ಜನರು ಟಿಬಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಕ್ಷಯರೋಗದ ಲಕ್ಷಣಗಳು, ಕಾರಣಗಳು ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಸಾಮಾನ್ಯ ಜನರಿಗೆ ಮಾಹಿತಿಯನ್ನು ನೀಡಲಾಗುತ್ತದೆ.
  • ಈ ದಿನದಂದು, ವಿವಿಧ ಆರೋಗ್ಯ ಸಂಸ್ಥೆಗಳು, ಸರ್ಕಾರಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕ್ಷಯರೋಗದ (ಟಿಬಿ) ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತವೆ.
  • ವಿಶ್ವ ಕ್ಷಯರೋಗ ದಿನ ಕೇವಲ ಜಾಗೃತಿ ದಿನವಲ್ಲ, ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಜಾಗತಿಕ ಬದ್ಧತೆಯಾಗಿದೆ.

ಟಿಬಿ ಎಂದರೇನು ಮತ್ತು ಅದು ಹೇಗೆ ಹರಡುತ್ತದೆ?

ಕ್ಷಯರೋಗವು ಕ್ಷಯರೋಗ ಬ್ಯಾಕ್ಟೀರಿಯಾದಿಂದ (ಮೈಕೋಬ್ಯಾಕ್ಟೀರಿಯಂ ಟ್ಯೂಬರ್ಕ್ಯುಲೋಸಿಸ್) ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ನಂತರ ಇದು ದೇಹದ ಇತರ ಭಾಗಗಳಿಗೂ ಹರಡಬಹುದು.

  • ಟಿಬಿ ಗಾಳಿಯ ಮೂಲಕ ಹರಡುತ್ತದೆ. ಟಿಬಿ ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ ಅಥವಾ ಜೋರಾಗಿ ಮಾತನಾಡಿದಾಗ, ಬ್ಯಾಕ್ಟೀರಿಯಾಗಳು ಗಾಳಿಯಲ್ಲಿ ಹರಡುತ್ತವೆ.
  • ಆರೋಗ್ಯವಂತ ವ್ಯಕ್ತಿ ಅದೇ ಗಾಳಿಯನ್ನು ಉಸಿರಾಡಿದರೆ, ಅವನಿಗೂ ಟಿಬಿ ಬರಬಹುದು.
  • ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರನ್ನು ಕ್ಷಯರೋಗ ಬೇಗನೆ ಬಾಧಿಸುತ್ತದೆ.

ಟಿಬಿಯ ಸಾಮಾನ್ಯ ಲಕ್ಷಣಗಳೇನು?

  • 2 ವಾರಗಳಿಗಿಂತ ಹೆಚ್ಚು ಕಾಲ ನಿರಂತರ ಕೆಮ್ಮು
  • ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು
  • ಚಳಿ ಜ್ವರ
  • ಎದೆ ನೋವು
  • ಉಸಿರಾಟದ ತೊಂದರೆ
  • ತೂಕ ಇಳಿಕೆ
  • ರಾತ್ರಿಯಲ್ಲಿ ಬೆವರುವುದು
  • ಹಸಿವಿನ ಕೊರತೆ

ಈ ಲಕ್ಷಣಗಳು ದೀರ್ಘಕಾಲದವರೆಗೆ ಮುಂದುವರಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಕ್ಷಯರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹಾಗೂ ಶ್ವಾಸಕೋಶಕ್ಕೆ ಹಾನಿಯನ್ನು ಉಂಟು ಮಾಡಬಹುದು.

ಇದನ್ನೂ ಓದಿ: ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಕ್ಷಯರೋಗ ತಡೆಗಟ್ಟಲು 5 ಮಾರ್ಗಗಳು:

  • ಬಿಸಿಜಿ ಲಸಿಕೆ ಪಡೆಯಿರಿ: ಮಕ್ಕಳನ್ನು ಟಿಬಿಯಿಂದ ರಕ್ಷಿಸಲು ಈ ಲಸಿಕೆ ಅತ್ಯಗತ್ಯ.
  • ಸೋಂಕಿತ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳಿ: ಯಾರಿಗಾದರೂ ಕ್ಷಯರೋಗವಿದ್ದರೆ, ಅವರಿಗೆ ಹೆಚ್ಚು ಹತ್ತಿರವಾಗಬೇಡಿ.
  • ಮಾಸ್ಕ್ ಧರಿಸಿ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಿ: ಕೆಮ್ಮುವಾಗ ಅಥವಾ ಸೀನುವಾಗ ಬಾಯಿಯನ್ನು ಮುಚ್ಚಿಕೊಳ್ಳಿ ಮತ್ತು ಮಾಸ್ಕ್ ಧರಿಸಿ.
  • ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ: ಪೌಷ್ಟಿಕ ಆಹಾರವನ್ನು ಸೇವಿಸಿ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ.
  • ಕ್ಷಯರೋಗದ ಲಕ್ಷಣಗಳನ್ನು ಗಮನಿಸಿದರೆ, ತಕ್ಷಣ ಪರೀಕ್ಷೆ ಮಾಡಿಸಿ: ಆರಂಭಿಕ ಪತ್ತೆ  ಕ್ಷಯ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಾಯಕವಾಗಿದೆ.

ಹೀಗೆ ಸಮಯೋಚಿತ ಜಾಗೃತಿ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದರಿಂದ ಕ್ಷಯರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ರಕ್ತಪಾತ: ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಸೀದಿ ವಿಚಾರದಲ್ಲಿ ತಕರಾರು

ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ ತೆರಳಿ ವಾಪಾಸಾಗುವ ವೇಳೆ, ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಮತ್ತು ನಿಝಾಲ್ ಸೇರಿ ಗುಂಪಾಗಿ ನಿಂತಿದ್ದವರು ತಕರಾರು ತೆಗೆದು ಅವಾಚ್ಯವಾಗಿ ನಿಂದಿಸಿದ್ದಾರೆ. ಬಳಿಕ ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪ ಕೇಳಿಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿ ಅಬ್ದುಲ್ ಗಫೂರ್ (48) ಎಂಬವರು ಪ್ರತಿದೂರು ದಾಖಲಿಸಿದ್ದು, ಯಾಕೂಬ್, ಶಫೀಕ್, ಇಸಾಕ್, ಸಫ್ವಾನ್ ಮತ್ತು ಅಶ್ರಫ್ ಸಾಹೇಬ್ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಶೌಕತ್ ಅಲಿ (40) ಎಂಬವರು ನೀಡಿದ ಮತ್ತೊಂದು ದೂರಿನ ಪ್ರಕಾರ, ದಾವೂದ್, ಜುಬೈರ್, ಸೈದುದ್ದೀನ್, ನವಾಜ್, ಗಫೂರ್, ಶರೀಪ್ ಮತ್ತು ಆಶಿಕ್ ಮಸೀದಿ ವಿಚಾರದಲ್ಲಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ತಡೆಹಿಡಿಯಲು ಬಂದ ಸಫಾನಾ, ನಿಜಾಲ್, ಇಸಾಕ್ ಮತ್ತು ಆಶ್ರಫ್ ಅವರ ಮೇಲೂ ದಾಳಿ ಯತ್ನ ನಡೆದಿದೆ ಎನ್ನಲಾಗಿದೆ.

ಸಜಿಪನಡು ಹೊಡೆದಾಟದ ವಿಡಿಯೋ ಇಲ್ಲಿ ನೋಡಿ


ಒಟ್ಟಾರೆಯಾಗಿ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ಸೇರಿ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಬಿಎನ್​ಎಸ್ ಹಾಗೂ ಶಸ್ತ್ರಾಸ್ತ್ರಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಒಟ್ಟಿನಲ್ಲಿ, ಮಸೀದಿ ವಿಚಾರದಲ್ಲಿ ಆರಂಭವಾದ ಈ ಗಲಾಟೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೈಸ್ ರಸ್ತೆಯಲ್ಲಿ ದೀಪಾಂಜಲಿ ನಗರ ವರೆಗೆ ಪ್ರಾಯೋಗಿಕ ಸಂಚಾರ ಶುರು! ಕೆಂಗೇರಿ ವರೆಗೆ ಟ್ರಾಫಿಕ್​ಗೆ ಬೀಳಲಿದೆ ಕಡಿವಾಣ

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ (Bangalore) ಮೈಸೂರು ರಸ್ತೆ ವಾಹನ ಸವಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೈಸ್ ರಸ್ತೆಯ (NICE Road) ಸಂಪರ್ಕವನ್ನು ಸುಧಾರಿಸುವ, ದೀಪಾಂಜಲಿ ನಗರ ವರೆಗಿನ ಹೊಸ ಲಿಂಕ್ ರಸ್ತೆ ಪ್ರಾಯೋಗಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೊಸವಾಗಿ ನಿರ್ಮಿಸಿರುವ ಸುಮಾರು 1.5 ಕಿಮೀ ಉದ್ದದ ಈ ನಾಲ್ಕು ಪಥದ ರಸ್ತೆ ದೀಪಾಂಜಲಿ ನಗರದಿಂದ ಹೊಸಕೆರೆಹಳ್ಳಿ ಭಾಗದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವು ಬನಶಂಕರಿ 6ನೇ ಹಂತ, ಕನಕಪುರ ರಸ್ತೆ ಹಾಗೂ ಚಲ್ಲಘಟ್ಟ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಿಗೆ ಸುಲಭ ಸಂಪರ್ಕ ಒದಗಿಸುತ್ತದೆ.

ಪ್ರಯಾಣ ಸಮಯದಲ್ಲಿ ಭಾರಿ ಉಳಿತಾಯ!

ಈ ಹೊಸ ಲಿಂಕ್ ರಸ್ತೆಯಿಂದ ವಾಹನ ಸವಾರರಿಗೆ ದೊಡ್ಡ ಮಟ್ಟದ ಸಮಯ ಉಳಿತಾಯವಾಗಲಿದೆ. ವಿಶೇಷವಾಗಿ ಮೈಸೂರು ರಸ್ತೆಯತ್ತ ಸಂಚರಿಸುವವರಿಗೆ ಸುಮಾರು 15ರಿಂದ 20 ನಿಮಿಷಗಳವರೆಗೆ ಸಮಯ ಉಳಿಯಲಿದೆ ಎಂದು ಅಂದಾಜಿಸಲಾಗಿದೆ.

ಮೈಸೂರು ರಸ್ತೆ, ಕೆಂಗೇರಿ ಟ್ರಾಫಿಕ್‌ಗೆ ಪರಿಹಾರ

ಇದಕ್ಕೂ ಮೊದಲು ಮೈಸೂರು ರಸ್ತೆ ಮತ್ತು ಕೆಂಗೇರಿ ಭಾಗದಲ್ಲಿ ಭಾರೀ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದ ವಾಹನ ಸವಾರರಿಗೆ ಈ ಲಿಂಕ್ ರಸ್ತೆ ದೊಡ್ಡ ಮಟ್ಟದ ಪರಿಹಾರ ನೀಡಲಿದೆ. ನೇರ ಹಾಗೂ ಸಿಗ್ನಲ್-ರಹಿತ ಸಂಚಾರಕ್ಕೆ ಅವಕಾಶ ಸಿಗುವುದರಿಂದ ಸಂಚಾರ ಸುಗಮವಾಗಲಿದೆ.

ದೀಪಾಂಕಲಿ ನಗರ ನೈಸ್ ರಸ್ತೆಯ ಪ್ರಮುಖ ಸಂಪರ್ಕ ಮಾರ್ಗಗಳು

  • ದೀಪಾಂಜಲಿ ನಗರ
  • ಹೊಸಕೆರೆಹಳ್ಳಿ
  • ಬನಶಂಕರಿ 6ನೇ ಹಂತ
  • ಕನಕಪುರ ರಸ್ತೆ
  • ಚಲ್ಲಘಟ್ಟ

ದೀಪಾಂಜಲಿ ನಗರ ನೈಸ್ ರಸ್ತೆಯಿಂದ ಈ ಪ್ರದೇಶಗಳಿಗೆ ಸಂಪರ್ಕ ಸುಲಭವಾಗಲಿದೆ. ಅಷ್ಟೇ ಅಲ್ಲದೆ, ಹೊಸೂರು, ಎಲೆಕ್ಟ್ರಾನಿಕ್ ಸಿಟಿ ಹಾಗೂ ತುಮಕೂರು ರಸ್ತೆಯಂತಹ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕೂಡ ಮತ್ತಷ್ಟು ಸುಲಭವಾಗಲಿದೆ.

ಶಿಘ್ರದಲ್ಲೇ ಲೋಕಾರ್ಪಣೆ

ಪ್ರಸ್ತುತ ಪ್ರಾಯೋಗಿಕ ಸಂಚಾರಕ್ಕೆ ಮಾತ್ರ ತೆರೆಯಲಾಗಿರುವ ಈ ರಸ್ತೆ, ಶೀಘ್ರದಲ್ಲೇ ಸಂಪೂರ್ಣವಾಗಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಹೊಸ ರಸ್ತೆ ಅಭಿವೃದ್ಧಿಯಿಂದ ನಗರದ ಪಶ್ಚಿಮ ಭಾಗದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಒಟ್ಟಿನಲ್ಲಿ, ನೈಸ್ ರಸ್ತೆಯ ಈ ವಿಸ್ತರಣೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಕಾಲಿಟ್ಟ ರಜಿನಿ, ಧನರಾಜ್

ಜೀ ಕನ್ನಡದಲ್ಲಿ (Zee Kannada) ಶೀಘ್ರವೇ ಎರಡೆರಡು ರಿಯಾಲಿಟಿ ಶೋಗಳು ಆರಂಭ ಆಗಲಿವೆ! ಹೌದು, ‘ಸರಿಗಮಪ ಲಿಟ್ಲ್​ ಚಾಂಪ್ಸ್’ಗೆ ಆಡಿಷನ್ ನಡೆದಿದ್ದು, ಶೀಘ್ರವೇ ಶೋ ಪ್ರಸಾರ ಆರಂಭಿಸಲಿದೆ. ಅದೇ ರೀತಿ, ‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಕೂಡ ಬರುತ್ತಿದೆ. ಈ ಶೋನಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಮೃತವರ್ಷಿಣಿ ರಜಿನಿ, ಬಿಗ್ ಬಾಸ್ ಧನರಾಜ್ ಮೊದಲಾದವರು ಶೋನ ಭಾಗ ಆಗಲಿದ್ದಾರೆ ಎಂಬುದು ವಿಶೇಷ.

ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಇದರಲ್ಲಿ ಬಹುತೇಕವು ಯಶಸ್ವಿ ಕಂಡಿದೆ. ಅದರಲ್ಲಿ ‘ಸರಿಗಮಪ’ ಕೂಡ ಒಂದು. ಈ ಶೋ ಶೀಘ್ರವೇ ಪ್ರಸಾರ ಕಾಣಲಿದೆ ಎಂಬ ಪ್ರೋಮೋ ಗಮನ ಸೆಳೆದಿದೆ. ಈ ಪ್ರೋಮೋ ರಿಲೀಸ್ ಆದ ಬೆನ್ನಲ್ಲೇ ಮತ್ತೊಂದು ಪ್ರೋಮೋ ಬಿಡುಗಡೆ ಆಗಿದ್ದು, ಇದರಲ್ಲಿ ಜೋಡಿ ನಂಬರ್ 1 ರಿಯಾಲಿಟಿ ಶೋ ಬಗ್ಗೆ ಮಾಹಿತಿ ನೀಡಲಾಗಿದೆ.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿ ದಂಪತಿವರೆಗೆ ಕಿತ್ತಾಟ ಇದ್ದೇ ಇರುತ್ತದೆ. ಜೊತೆ ಪ್ರೀತಿ ಕೂಡ ಇರುತ್ತದೆ. ಎಲ್ಲಿ ಜಗಳ ಇರುತ್ತದೆಯೋ ಅಲ್ಲಿ ಪ್ರೀತಿ ಇರುತ್ತದೆ ಎಂಬ ಮಾತಿದೆ. ಇದನ್ನು ತೋರಿಸುವ ರೀತಿಯಲ್ಲಿ ‘ಜೋಡಿ ನಂಬರ್ 1’ ಬರುತ್ತಿದೆ. ಇದಕ್ಕೆ ಟ್ರೆಂಡ್​ನಲ್ಲಿರೋ ಜೋಡಿಗಳನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬುದು ವಿಶೇಷ.

ಇದನ್ನೂ ಓದಿ: ‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ

ಹೌದು, ‘ಜೋಡಿ ನಂಬರ್ 1’ ರಿಯಾಲಿಟಿ ಶೋನಲ್ಲಿ ಧನರಾಜ್ ಹಾಗೂ ಅವರ ಪತ್ನಿ ಪ್ರಜ್ಞಾ ಆಗಮಿಸಲಿದ್ದಾರೆ. ಇವರು ರೀಲ್ಸ್ ಮಾಡಿ ಟ್ರೆಂಡ್ ಆದವರು. ಇನ್ನು, ರಂಜನಿ ಹಾಗೂ ಅರುಣ್ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಮೊದಲು ಫ್ರೆಂಡ್ಸ್ ಆಗಿದ್ದ ಇವರು ಈಗ ಪತಿ-ಪತ್ನಿ ಆಗಿದ್ದಾರೆ. ಇವರು ಕೂಡ ಜೋಡಿ ನಂಬರ್ ಸ್ಪರ್ಧಿಗಳಾಗಿದ್ದಾರೆ. ಕೋಟೆ ಪ್ರಭಾಕರ್-ಮಾಲತಿ, ಜಯರಾಮ್​-ಗೀತಾ ಭಾರತಿ, ನಿರೀಕ್ಷಾ-ರುದ್ರ ಶೋನ ಭಾಗ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಫಾರ್ಚೂನರ್

ಪಣಜಿ, ಮಾರ್ಚ್​ 23: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್​​ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿನ ರಭಸವೂ ಹೆಚ್ಚಾಗಿತ್ತು. ನೀಡು ಕಾರೊಳಗೆ ಹೋಗಿದ್ದಷ್ಟೇ ಅಲ್ಲದೆ ಸುಮಾರು ದೂರದವರೆಗೆ ಕಾರು ನೀರಿನಲ್ಲಿ ಹೋಗಿತ್ತು. ನಂತರ ಕ್ರೇನ್ ಸಹಾಯದಿಂದ ಕಾರನ್ನು ದಡಕ್ಕೆ ತರಲಾಯಿತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ, ಮಾರ್ಚ್​ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ.

ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 24: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ (Weather Forecast)ಇಂದು ಹಠಾತ್ತನೆ ಬದಲಾಗಿದೆ. ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ/ಸೆ ವೆಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ವರುಣಾರ್ಭಟವಿರಲಿದ್ದು, ಉಳಿದೆಡೆ ಒಣ ಹವೆಯಿರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು

ಕೊಲಂಬಿಯಾ, ಮಾರ್ಚ್​ 24: ಕೊಲಂಬಿಯಾದಲ್ಲಿ 124 ಜನರಿದ್ದ ವಾಯುಪಡೆಯ ವಿಮಾನ ಪತ್ನಗೊಂಡಿದ್ದು, 30ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ಸೋಮವಾರ ಟೇಕ್ ಆಫ್ ಆದ ನಂತರ ಪತನಗೊಂಡಿದ್ದು, 34 ಜನರು ಸಾವನ್ನಪ್ಪಿದ್ದಾರೆ, ಸುಮಾರು 20ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಅಪಘಾತ ಇದಾಗಿದೆ. ಈ ದುರಂತವು ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಸಂಭವಿಸಿದೆ ಎಂದು ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ವಿಮಾನವು ಮದ್ದುಗುಂಡುಗಳನ್ನು ಹೊತ್ತೊಯ್ಯುತ್ತಿತ್ತು, ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ನೆಲಕ್ಕೆ ಅಪ್ಪಳಿಸಿ ನಂತರ ಅದು ಸ್ಫೋಟಗೊಂಡಿತು ಮತ್ತು ಪರಿಣಾಮವಾಗಿ, ವಿಮಾನವು ಬೆಂಕಿಗೆ ಆಹುತಿಯಾಯಿತು.

ವಿಮಾನ ಪತನ

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳು ವಿಮಾನ ಅಪಘಾತದ ಅವಶೇಷಗಳು ಇನ್ನೂ ಉರಿಯುತ್ತಿರುವುದನ್ನು ತೋರಿಸುತ್ತವೆ, ಆದರೆ ರಕ್ಷಣಾ ಕಾರ್ಯಕರ್ತರು ಬದುಕುಳಿದವರನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ. ಒಂದು ದೃಶ್ಯವು ದಟ್ಟವಾದ ಹುಲ್ಲು ಮತ್ತು ಕಾಡಿನಿಂದ ಆವೃತವಾದ ಅವಶೇಷಗಳಿಂದ ದಟ್ಟವಾದ ಹೊಗೆ ಏರುತ್ತಿರುವುದನ್ನು ತೋರಿಸಿದೆ.

ಮತ್ತೊಂದು ವೀಡಿಯೊವು ವಿಮಾನವು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ನೆಲಕ್ಕೆ ಅಪ್ಪಳಿಸುವುದನ್ನು ಕಾಣಬಹುದು. ಪುಟುಮಾಯೊ ಇಲಾಖೆಯ ಗವರ್ನರ್ ಜಾನ್ ಗೇಬ್ರಿಯಲ್ ಮೋಲಿನಾ ಸ್ಥಳೀಯ ಸುದ್ದಿ ಸಂಸ್ಥೆಗೆ ತಿಳಿಸಿದ್ದು, 34 ಜನರು ಸಾವನ್ನಪ್ಪಿದ್ದಾರೆ, 70 ಜನರು ಗಾಯಗೊಂಡಿದ್ದಾರೆ ಮತ್ತು 21 ಜನರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ.

ಹಲವಾರು ಜನರು ಇನ್ನೂ ಕಾಣೆಯಾಗಿರುವುದರಿಂದ ಸಾವಿನ ಸಂಖ್ಯೆ ಬದಲಾಗಬಹುದು ಎಂದು ಅವರು ಹೇಳಿದ್ದಾರೆ. ಸೋಮವಾರ ಸಂಜೆ ವೇಳೆಗೆ ಸಾವಿನ ಸಂಖ್ಯೆ ದ್ವಿಗುಣಗೊಂಡು 66ಕ್ಕೆ ತಲುಪಿತ್ತು ಎಂದು ರಾಯಿಟರ್ಸ್​ ವರದಿ ಮಾಡಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version