ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ
ಬಾಗಲಕೋಟೆ, ಮಾರ್ಚ್ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್ಗಾಗಿ ಮೇಟಿ ಕುಟುಂಬದ…