ಮಗಳು ಆರಾಧ್ಯಾ ಜೊತೆ ಕಾನ್ ಸಿನಿಮೋತ್ಸವಕ್ಕೆ ತೆರಳಿದ ಐಶ್ವರ್ಯಾ ರೈ – Kannada News | Cannes 2026: Aishwarya Rai and Aaradhya, Disha Madan’s Eco Chic Style Steal Spotlight

ವಿಶ್ವದ ಅತ್ಯಂತ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ ‘ಕಾನ್ ಚಲನಚಿತ್ರೋತ್ಸವ 2026’ (Cannes) ಫ್ರಾನ್ಸ್‌ನ ಕರಾವಳಿ ನಗರವಾದ ಕಾನ್‌ನಲ್ಲಿ ಅದ್ಧೂರಿಯಾಗಿ ಜರುಗುತ್ತಿದೆ. ಮೇ 12 ರಂದು ಆರಂಭವಾಗಿರುವ ಈ 79ನೇ ಆವೃತ್ತಿಯ ಸಿನಿಮೋತ್ಸವವು ಮೇ 23ರವರೆಗೆ ನಡೆಯಲಿದ್ದು, ಜಗತ್ತಿನಾದ್ಯಂತದ ಸಿನಿಮಾ ತಾರೆಯರು ಮತ್ತು ಫ್ಯಾಷನ್ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ. ಭಾರತದ ಪರವಾಗಿ ಹಲವು ಪ್ರಮುಖ ಸೆಲೆಬ್ರಿಟಿಗಳು ಈ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ.

ಇದೀಗ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್ ತಮ್ಮ ಪುತ್ರಿ ಆರಾಧ್ಯಾ ಬಚ್ಚನ್ ಅವರೊಂದಿಗೆ ಕಾನ್ ಸಿನಿಮೋತ್ಸವದಲ್ಲಿ ಭಾಗವಹಿಸಲು ಮುಂಬೈ ವಿಮಾನ ನಿಲ್ದಾಣದಿಂದ ಫ್ರಾನ್ಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ತಾಯಿ-ಮಗಳ ಜೋಡಿ ಕ್ಯಾಮೆರಾ ಕಣ್ಣುಗಳಿಗೆ ಸಿಕ್ಕಿದ್ದು, ಇವರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಕಳೆದ 24 ವರ್ಷಗಳಿಂದ ಕಾನ್ ಉತ್ಸವದೊಂದಿಗೆ ನಿಕಟ ಬಾಂಧವ್ಯ ಹೊಂದಿರುವ ಐಶ್ವರ್ಯಾ ರೈ, ಈ ಬಾರಿಯೂ ಬ್ರ್ಯಾಂಡ್ ರಾಯಭಾರಿಯಾಗಿ ರೆಡ್ ಕಾರ್ಪೆಟ್ ಮೇಲೆ ಹೊಸ ಫ್ಯಾಷನ್ ಟ್ರೆಂಡ್ ಸೃಷ್ಟಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗಂಡನಿಂದ ದೂರಾದ ಬೆನ್ನಲ್ಲೇ ‘ಕಾನ್ ಫಿಲ್ಮ್ ಫೆಸ್ಟಿವಲ್’ನಲ್ಲಿ ಮೌನಿ ರಾಯ್ ಮಿಂಚಿಂಗ್

ಮತ್ತೊಂದೆಡೆ, ಈ ಬಾರಿಯ ಕಾನ್ ಸಿನಿಮೋತ್ಸವದಲ್ಲಿ ಕರ್ನಾಟಕದ ಹೆಮ್ಮೆಯ ನಟಿ ದಿಶಾ ಮದನ್ ಎರಡನೇ ಬಾರಿಗೆ ಭಾಗವಹಿಸಿ ಜಾಗತಿಕ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ದಕ್ಷಿಣ ಭಾರತದ ಸಂಸ್ಕೃತಿ ಮತ್ತು ಸುಸ್ಥಿರ ಫ್ಯಾಷನ್ ಅನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಿದ ದಿಶಾ, ಸುಮಾರು 80 ವರ್ಷ ಹಳೆಯದಾದ ಎರಡು ಸಾಂಪ್ರದಾಯಿಕ ರೇಷ್ಮೆ ಸೀರೆಗಳನ್ನು ಮರುಬಳಕೆ ಮಾಡಿ ಸಿದ್ಧಪಡಿಸಿದ ಗೌನ್ ಧರಿಸಿ ರೆಡ್ ಕಾರ್ಪೆಟ್ ಮೇಲೆ ಮಿಂಚಿದರು. ಬೆಂಗಳೂರಿನ ‘ನಿಹಾರಿಕಾ ವಿವೇಕ್’ ವಿನ್ಯಾಸಗೊಳಿಸಿದ ಈ ಉಡುಪಿನಲ್ಲಿ ಕರ್ನಾಟಕದ ಕಲೆ ಹಾಗೂ ಬಂಜಾರ ಕಸೂತಿ ಕೆಲಸವಿದ್ದು, ಐದು ಜನ ಮಹಿಳಾ ಕುಶಲಕರ್ಮಿಗಳು ಸುಮಾರು 2500 ಗಂಟೆಗಳ ಕಾಲ ಶ್ರಮಿಸಿ ಇದನ್ನು ಸಿದ್ಧಪಡಿಸಿದ್ದಾರೆ.

ಐಶ್ವರ್ಯಾ ರೈ, ಆಲಿಯಾ ಭಟ್, ಕರಣ್ ಜೋಹರ್, ಅದಿತಿ ರಾವ್ ಹೈದರಿ ಅವರಂತಹ ದಿಗ್ಗಜರ ಜೊತೆಗೆ ಕನ್ನಡಿಗಿ ದಿಶಾ ಮದನ್ ಕೂಡ ಕಾನ್ ಉತ್ಸವದಲ್ಲಿ ಭಾರತೀಯ ಕಲೆ ಮತ್ತು ಪ್ರಾದೇಶಿಕ ಸಿನಿಮಾದ ಹೆಮ್ಮೆಯನ್ನು ಎತ್ತಿ ಹಿಡಿಯುತ್ತಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Tv9 Kannada News Live: ಮಳೆಗೆ ಬೆಂಗಳೂರಲ್ಲಿ ಸಾಲು ಸಾಲು ಅವಾಂತರ, ಬಂಗಾಳ ಸಿನಿ ತಾರೆಯರಿಗೆ ಶಾಕ್​​; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Bengaluru Rain Crushes Cars; FIR Against Bengali Actors; Vijay’s Cabinet Expansion Today

ಕಾರುಗಳ ಮೇಲೆ ಬಿದ್ದ ಮರImage Credit source: Tv9 Kannada

ಬೆಂಗಳೂರು, ಮೇ 22: ಬೆಂಗಳೂರಲ್ಲಿ (Bengaluru) ನಿನ್ನೆ (22) ಸುರಿದ ಧಾರಾಕಾರ ಮಳೆಯ ಅಬ್ಬರಕ್ಕೆ ನಗರದಲ್ಲಿ ಸಾಲು ಸಾಲು ಅವಾಂತರಗಳು ನಡೆದಿವೆ. ಗಾಳಿ ಮಳೆಯ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್​​ನ ಪೈಪ್ ಲೈನ್ ರಸ್ತೆಯಲ್ಲಿ ಮರ ಧರೆಗುರುಳಿದ ಪರಿಣಾಮ ರಸ್ತೆಬದಿ ನಿಲ್ಲಿಸಿದ್ದ ಮೂರು ಕಾರುಗಳು ಸಂಪೂರ್ಣ ಜಖಂ ಆಗಿವೆ. ಬಳಿಕ ಬೃಹತ್​​ ಗಾತ್ರದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದ್ದಾರೆ. ಹಲವೆಡೆ ರಸ್ತೆಯ ಮೇಲೆಯೇ ನದಿಯಂತೆ ನೀರು ಹರಿದ ಪರಿಣಾಮ ವಾಹನಗಳ ಸಂಚಾರವೂ ಅಸ್ತವ್ಯಸ್ತಗೊಂಡ ಪ್ರಸಂಗ ನಡೆದಿದೆ.

ಇದನ್ನೂ ಓದಿ:  ಮರಗಳು ಧರೆಗೆ, ನೀರು ರಸ್ತೆಗೆ; ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ

ಸ್ಕೂಟಿಗೆ ಕಾರು ಡಿಕ್ಕಿ

ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ಚಾಲಕ ಸಿಗ್ನಲ್ ಜಂಪ್ ಮಾಡಿ ಬಂದಿದ್ದಾನೆ ಎನ್ನಲಾಗಿದ್ದು, ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕಾರು ಚಾಲಕ ಕುಡಿದು ವಾಹನ ಓಡಿಸಿರುವ ಮಾಹಿತಿ ಇದ್ದು, ಘಟನೆ ಸಂಬಂಧ ಸದ್ಯ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

ವಿಜಯ್​​ ಸಚಿವ ಸಂಪುಟಕ್ಕೆ ಇಂದು ಮತ್ತಿಬ್ಬರ ಸೇರ್ಪಡೆ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​​ ಸಚಿವ ಸಂಪುಟಕ್ಕೆ ಇಂದು ಮತ್ತಿಬ್ಬರ ಸೇರ್ಪಡೆಯಾಗಲಿದೆ. ವಿಸಿಕೆ ಮತ್ತು ಐಯುಎಮ್​​ಎಲ್​​ ಪಕ್ಷಗಳ ತಲಾ ಒಬ್ಬ ಸಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್​​ನ 2 ಶಾಸಕರು ಸೇರಿ ಒಟ್ಟು 23 ಮಂದು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬರೋಬ್ಬರಿ 59 ವರ್ಷಗಳ ನಂತರ ಕಾಂಗ್ರೆಸ್ ತಮಿಳುನಾಡಿನಲ್ಲಿ ಸರ್ಕಾರದ ಭಾಗವಾಗಿದ್ದು, ಕಾಂಗ್ರೆಸ್‌ನ ಒಟ್ಟು 5 ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿತ್ತು.

ಇದನ್ನೂ ಓದಿ: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ

ಬಂಗಾಳ ಸಿನಿ ತಾರೆಯರಿಗೆ ಶಾಕ್​​

2021ರ ಚುನಾವಣೆ ಬಳಿಕ ಹಿಂಸಾಚಾರದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಆರೋಪ ಸಂಬಂಧ ಬಂಗಾಳಿ ನಟರಾದ ಪರಂಬ್ರತ ಚಟ್ಟೋಪಾಧ್ಯಾಯ ಮತ್ತು ಸ್ವಸ್ತಿಕಾ ಮುಖರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2021ರ ವಿಧಾನಸಭೆ ಚುನಾವಣಾ ಫಲಿತಾಂಶಗಳ ಬಳಿಕ ಉಂಟಾದ ಉದ್ವಿಗ್ನ ರಾಜಕೀಯ ವಾತಾವರಣದಲ್ಲಿ ಹಿಂಸೆಗೆ ಪ್ರಚೋದನೆ ನೀಡುವಂತ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ನಟರು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ವಕೀಲ ಜೋಯ್‌ದೀಪ್ ಸೇನ್ ಗರಿಯಾಹಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves Across Karnataka Cities Due to Rain

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ!

ಬೆಂಗಳೂರು, ಮೇ 22: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರ ಪರಿಣಾಮವಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ಗಣನೀಯವಾಗಿ ಸುಧಾರಿಸಿದ್ದು, ಬಹುತೇಕ ಕಡೆಗಳಲ್ಲಿ ‘ಗ್ರೀನ್ ಜೋನ್’ ದಾಖಲಾಗಿದೆ.

ಮುಖ್ಯಾಂಶಗಳು

  • ಮಳೆಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ.
  • ರಾಜಧಾನಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಉತ್ತಮ ಮಟ್ಟದಲ್ಲಿದೆ.
  • ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರಂತರ ಮಳೆಯ ಕಾರಣದಿಂದಾಗಿ ಗಾಳಿ ಅತ್ಯಂತ ಶುದ್ಧವಾಗಿದೆ. ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 33 ರಿಂದ 45 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದನ್ನು ಹವಾಮಾನ ಇಲಾಖೆ ‘ಅತ್ಯಂತ ಉತ್ತಮ’ ವಲಯ ಎಂದು ವರ್ಗೀಕರಿಸಿದೆ.

ಸಾಮಾನ್ಯವಾಗಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಪೀಣ್ಯ ಮತ್ತು ಜಯನಗರದಂತಹ ಕೈಗಾರಿಕಾ ಪ್ರದೇಶಗಳಲ್ಲೂ ಸಹ ಗಾಳಿಯ ಗುಣಮಟ್ಟ ಸುಧಾರಿಸಿದೆ. ಪ್ರಸ್ತುತ ವಾತಾವರಣದಲ್ಲಿ ಹಾನಿಕಾರಕ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮತ್ತು PM10 ಮಟ್ಟ ತೀರಾ ಕಡಿಮೆಯಿರುವುದರಿಂದ ಸಾರ್ವಜನಿಕರು ಹಾಗೂ ಮಕ್ಕಳು ಯಾವುದೇ ಆರೋಗ್ಯದ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ.

ಕರ್ನಾಟಕದ ಇತರೆ ಪ್ರಮುಖ ನಗರಗಳ AQI

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ವಾಯು ಗುಣಮಟ್ಟ ಅತ್ಯಂತ ಶ್ರೇಷ್ಠ ಮಟ್ಟದಲ್ಲಿದೆ. ಕರಾವಳಿ ಭಾಗದಲ್ಲಿ ಸಮುದ್ರದ ತಂಗಾಳಿ ಮತ್ತು ಮಳೆಯ ಮುನ್ಸೂಚನೆಯಿಂದಾಗಿ ವಾಯು ಗುಣಮಟ್ಟ ಅತ್ಯುತ್ತಮವಾಗಿದ್ದು, ಇಲ್ಲಿ ಸರಾಸರಿ AQI 35ರಷ್ಟಿದೆ. ಚಿಕ್ಕಮಗಳೂರು ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯ ಶುದ್ಧತೆ ಹೆಚ್ಚಾಗಿದ್ದು, AQI ಕೇವಲ 18 ರಿಂದ 20ರಷ್ಟಿದೆ. ಇದು ಇಡೀ ರಾಜ್ಯದಲ್ಲೇ ಅತ್ಯಂತ ಶುದ್ಧ ಗಾಳಿ ಇರುವ ಪ್ರದೇಶಗಳಾಗಿವೆ.

ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ಬೆಳಗಾವಿಯಲ್ಲಿ ವಾಯು ಗುಣಮಟ್ಟವು 45 ರಿಂದ 55ರಷ್ಟಿದ್ದು, ಉತ್ತರ ಒಳನಾಡಿನ ಕೆಲವು ಕೈಗಾರಿಕಾ ಪ್ರದೇಶಗಳಲ್ಲಿ ಮಾತ್ರ ಗಾಳಿಯ ಮಟ್ಟ ಸಾಧಾರಣವಾಗಿದೆ. ಅಲ್ಲಿನ ಕೆಲವು ಕಡೆಗಳಲ್ಲಿ AQI 75 ರ ಆಸುಪಾಸಿನಲ್ಲಿದೆ. ಆದಾಗ್ಯೂ, ಮಳೆಯ ಪ್ರಭಾವದಿಂದಾಗಿ ಅಲ್ಲಿಯೂ ಮಾಲಿನ್ಯ ನಿಯಂತ್ರಣದಲ್ಲಿದೆ.

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆ ಮ್ಯಾಜಿಕ್ ನಡೆದರೆ ಮಾತ್ರ ಹೈದರಾಬಾದ್​​ಗೆ ಚಾನ್ಸ್; ಟಾಪ್ 2ನಲ್ಲಿರಲು ಆರ್​​ಸಿಬಿ ಏನು ಮಾಡಬೇಕು? – Kannada News | IPL Playoffs scenario: RCB vs SRH The Crucial Battle for Top 2 and NRR

ಐಪಿಎಲ್‌ನ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದ್ದು, ಟಾಪ್-2 ಸ್ಥಾನವನ್ನು ಅಲಂಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಲಿರುವ ಇವೆರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯವೇ ಈ ಸ್ಥಾನವನ್ನು ನಿರ್ಧರಿಸಲಿದೆ.

ಗುರುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 89 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಜಿಟಿ ತಂಡ +0.695 ನೆಟ್ ರನ್ ರೇಟ್ ಹೊಂದುವ ಮೂಲಕ ಪ್ಲೇಆಫ್‌ನಲ್ಲಿ ಅಗ್ರ ಎರಡು ಸ್ಥಾನಗಳಲ್ಲಿ ಒಂದನ್ನು ಖಚಿತಪಡಿಸಿಕೊಂಡಿದೆ. ಜಿಟಿಯ ಈ ಗೆಲುವಿನಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಟಾಪ್ 2 ಪ್ರವೇಶಿಸುವ ಅವಕಾಶ ಕೈತಪ್ಪಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು 3 ಅಥವಾ 4ನೇ ತಂಡವಾಗಿ ಪ್ಲೇಆಫ್ ಪ್ರವೇಶಿಸುವತ್ತ ಮಾತ್ರ ಗಮನ ನೀಡಬೇಕಿದೆ.

ಪ್ರಸ್ತುತ ಆರ್‌ಸಿಬಿ ತಂಡ 18 ಅಂಕಗಳು ಮತ್ತು +1.065 ನೆಟ್ ರನ್ ರೇಟ್‌ನೊಂದಿಗೆ ಟಾಪ್-2 ತಲುಪುವ ಬಲಿಷ್ಠ ರೇಸ್‌ನಲ್ಲಿದೆ. ಆದರೆ 16 ಅಂಕ ಹೊಂದಿರುವ ಸನ್‌ರೈಸರ್ಸ್‌ಗೆ (+0.350 NRR) ಆರ್‌ಸಿಬಿಯನ್ನು ಹಿಂದಿಕ್ಕಲು ಒಂದು ಸಣ್ಣ ಅವಕಾಶವಿದೆ. ಎಸ್‌ಆರ್‌ಹೆಚ್ ಟಾಪ್-2 ತಲುಪಬೇಕಾದರೆ ಆರ್‌ಸಿಬಿ ವಿರುದ್ಧ ಜಿಟಿ ಮಾದರಿಯಲ್ಲೇ ಬೃಹತ್ ಗೆಲುವು ಸಾಧಿಸಬೇಕಾಗುತ್ತದೆ.

ಲೆಕ್ಕಾಚಾರ ಹೀಗಿದೆ:

ಮೊದಲು ಬ್ಯಾಟಿಂಗ್ ಮಾಡಿದರೆ: ಎಸ್‌ಆರ್‌ಹೆಚ್ 180 ರಿಂದ 240 ರನ್ ಗಳಿಸಿದರೆ, ಆರ್‌ಸಿಬಿ ವಿರುದ್ಧ 87 ರಿಂದ 89 ರನ್‌ಗಳ ಅಂತರದ ದೊಡ್ಡ ಜಯ ಸಾಧಿಸಬೇಕು.

ಚೇಸಿಂಗ್ ಮಾಡಿದರೆ: ಆರ್‌ಸಿಬಿ ನೀಡುವ ಗುರಿಯನ್ನು ಕೇವಲ 11 ರಿಂದ 11.4 ಓವರ್‌ಗಳ ಒಳಗಾಗಿ ಬೆನ್ನಟ್ಟಬೇಕಾಗುತ್ತದೆ.

ಇದನ್ನೂ ಓದಿ: ಶಾಪದ ನಂಬರ್​ ಆಯ್ತಾ 49? ಆರ್​​ಸಿಬಿ ಟ್ರೋಲ್ ಮಾಡಿದವರಿಗೆ ಕಾಡುತ್ತಿದೆ ಶನಿ

ಆರ್​​ಸಿಬಿ ಬೌಲಿಂಗ್ ಪರಿಣಾಮಕಾರಿಯಾಗಿದೆ. ಇಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸಾಧಾರಣ ಗೆಲುವು ಕಂಡರೆ ಅಥವಾ ನೆಕ್ ಟು ನೆಕ್ ಫೈಟ್ ಕೊಟ್ಟು ಸೋತರೂ ಮೊದಲು ಅಥವಾ ಎರಡನೇ ಸ್ಥಾನವನ್ನು ಆರ್​​ಸಿಬಿ ಉಳಿಸಿಕೊಳ್ಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:40 am, Fri, 22 May 26

Source link

Video: ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ ವೇಯಲ್ಲಿ ಬಸ್​-ಟ್ಯಾಂಕರ್​ ನಡುವೆ ಡಿಕ್ಕಿ, ಇಬ್ಬರು ಸಜೀವದಹನ, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Bus Tanker Collision on Agra Lucknow Expressway Leaves Two Dead

ಲಕ್ನೋ, ಮೇ 22: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಫಿರೋಜಾಬಾದ್ ವೈದ್ಯಕೀಯ ಕಾಲೇಜು ಮತ್ತು ಸೈಫೈ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ.

ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ ಕನಿಷ್ಠ 19 ಕಾರ್ಮಿಕರನ್ನು ಅತ್ಯಂತ ಕ್ರೂರವಾಗಿ ಗುಂಡಿಕ್ಕಿ ಕೊಂದಿದ್ದಾರೆ. ಈ ಪ್ರದೇಶದಲ್ಲಿ ಪರಿಸರವಾದಿಗಳಿಗೆ ಹಾಗೂ ಕೃಷಿ ಕಾರ್ಮಿಕರಿಗೆ ನಿರಂತರವಾಗಿ ಜೀವಬೆದರಿಕೆ ಇತ್ತು. 2024 ರಲ್ಲೂ ಇಲ್ಲಿ ಪ್ರಮುಖ ಪರಿಸರ ನಾಯಕ ಜುವಾನ್ ಲೋಪೆಜ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಮೊದಲ ಘಟನೆಯ ಬೆನ್ನಲ್ಲೇ ಗ್ವಾಟೆಮಾಲಾ ಗಡಿಯ ಸಮೀಪವಿರುವ ಓಮೋವಾದಲ್ಲಿ ಎರಡನೇ ಭೀಕರ ದಾಳಿ ನಡೆದಿದೆ. ಗ್ಯಾಂಗ್ ವಿರೋಧಿ ವಿಶೇಷ ಕಾರ್ಯಾಚರಣೆಗೆ ನಿಯೋಜನೆಗೊಂಡು ರಾಜಧಾನಿಯಿಂದ ಪ್ರಯಾಣಿಸುತ್ತಿದ್ದ ಪೊಲೀಸ್ ವಾಹನದ ಮೇಲೆ ಅಪರಾಧಿಗಳು ಸಂಚು ರೂಪಿಸಿ ಗುಂಡಿನ ಮಳೆ ಕರೆದಿದ್ದಾರೆ. ಈ ಭೀಕರ ದಾಳಿಯಲ್ಲಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ಆರು ಜನ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್

ತನಿಖೆಗೆ ವಿಧಿವಿಜ್ಞಾನ ತಂಡಗಳ ರಚನೆ
ಟ್ರುಜಿಲ್ಲೊದಲ್ಲಿ ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆಯನ್ನು ನಿಖರವಾಗಿ ಪತ್ತೆಹಚ್ಚುವುದು ಪೊಲೀಸರಿಗೆ ಕಷ್ಟವಾಗಿದೆ. ಏಕೆಂದರೆ ಘಟನೆ ನಡೆದ ತಕ್ಷಣ ಗಾಬರಿಗೊಂಡ ಸಂಬಂಧಿಕರು ತಮ್ಮ ಪ್ರೀತಿಪಾತ್ರರ ಶವಗಳನ್ನು ಸ್ಥಳದಿಂದ ತಾವೇ ತಗೆದುಕೊಂಡು ಹೋಗಿದ್ದಾರೆ. ಪ್ರಸ್ತುತ ಹೊಂಡುರಾಸ್‌ನ ಭದ್ರತಾ ಸಚಿವಾಲಯವು ರಾಷ್ಟ್ರೀಯ ಪೊಲೀಸ್ ಮತ್ತು ಸಶಸ್ತ್ರ ಪಡೆಗಳನ್ನು ಸ್ಥಳಕ್ಕೆ ರವಾನಿಸಿದ್ದು, ತನಿಖೆಗಾಗಿ ವಿಶೇಷ ವಿಧಿವಿಜ್ಞಾನ (Forensic) ತಜ್ಞರ ತಂಡಗಳನ್ನು ರಚಿಸಿದೆ.

2011 ಕ್ಕೆ ಹೋಲಿಸಿದರೆ ಈಗ ಕೊಲೆಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದರೂ, ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ. ಅಪರಾಧವನ್ನು ಅಡಗಿಸಲು ಅಲ್ಲಿನ ಸರ್ಕಾರ ಮಿಲಿಟರಿ ಶಕ್ತಿಯನ್ನು ಬಳಸುತ್ತಿರುವುದಕ್ಕೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರ್ಕಾರದ ಈ ಮಿಲಿಟರಿ ಶೈಲಿಯಿಂದಾಗಿ ಚಿತ್ರಹಿಂಸೆ ಮತ್ತು ಕಾನೂನುಬಾಹಿರ ಹತ್ಯೆಗಳು ಹೆಚ್ಚಾಗುತ್ತಿವೆ ಎಂದು ಅವು ಕಳವಳ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
Image Credit source: MediaForge AI

ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಭಾರೀ ಮಳೆ ಮುನ್ಸೂಚನೆ
  • ರಾಜ್ಯದ ಒಳನಾಡಿನಲ್ಲಿ ಬಿರುಗಾಳಿ ಮತ್ತು ತೀವ್ರ ಗುಡುಗು ಎಚ್ಚರಿಕೆ
  • ಕಟಾವು ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲು ರೈತರಿಗೆ ಸೂಚನೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಿರಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಗುಡುಗು ಸಿಡಿಲಿನ ಅಬ್ಬರ ಜೋರಾಗಿರಲಿದೆ. ಮೇ 22ರಿಂದ ಮೇ 25, 2026ರ ಅವಧಿಯಲ್ಲಿ ಇಡೀ ಒಳನಾಡು ಭಾಗದಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ತೀವ್ರ ಸ್ವರೂಪದ ಗುಡುಗು ಸಹಿತ ಮಳೆ ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಸಿಡಿಲು ಹಾಗೂ ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರಲು ಕೋರಲಾಗಿದೆ.

ಸಾರ್ವಜನಿಕರಿಗೆ ಸೂಚನೆ

ಈ ತೀವ್ರ ಹವಾಮಾನದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಬಹುದು. ಬಲವಾದ ಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆಯಿರುವುದರಿಂದ ವಿದ್ಯುತ್ ಸರಬರಾಜಿಗೆ ತಾತ್ಕಾಲಿಕ ಅಡಚಣೆಯಾಗಬಹುದು. ಸಾರ್ವಜನಿಕರು ಮಳೆ-ಗಾಳಿಯ ಸಮಯದಲ್ಲಿ ಸುರಕ್ಷಿತವಾಗಿ ಮನೆಗಳ ಒಳಗೆ ಇರಲು, ಅನಗತ್ಯ ಪ್ರಯಾಣ ತಪ್ಪಿಸಲು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿರುವ ಕಟಾವು ಮಾಡಿದ ಬೆಳೆಗಳಿಗೆ ಹಾನಿಯಾಗುವ ಸಂಭವವಿರುವುದರಿಂದ, ರೈತರು ತಮ್ಮ ಉತ್ಪನ್ನಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ರವಾನಿಸಲು ಹವಾಮಾನ ಇಲಾಖೆ ಜಾಗೃತಿ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ – Kannada News | Karnataka Ranks 5th Among Most Corrupt States In India: Upalokayukta Justice B Veerappa Sounds Alarm

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ

ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದ ಪ್ರತಿ ಇಲಾಖೆಯಲ್ಲೂ ಮಿತಿ ಮೀರಿದ ಭ್ರಷ್ಟಾಚಾರ
  • ದೇಶದ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ
  • ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿಕೆ

ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿಸಿರುವ ಅವರು, ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದ್ದಾರೆ. 180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ 39 ಅಂಕಗಳನ್ನು ಪಡೆದಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ವೀರಪ್ಪ, ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗುಡುಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ನೆನಪಿಸಿದ್ದಾರೆ.

ಇದನ್ನೂ ಓದಿ: ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ; ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ

2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಲೋಕ ಅದಾಲತ್‌ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು. ಇದೇ ವೇಳೆ ಟ್ರಾಫಿಕ್ ದಂಡಗಳಿಗೆ ಶೇ.50 ರಿಯಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ರೂಪಿಸುವಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದರು ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್ – Kannada News | Prashanth Neel’s Emotional Revelation: Puneeth Rajkumar’s Unmade Film Dream

ಪ್ರಶಾಂತ್ ನೀಲ್ ಅವರು (Prashanth Neel) ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದವರು. ಅವರನ್ನು ಎಲ್ಲಾ ಭಾಷೆಯವರು ಗುರುತಿಸೋದು ಹಾಗೆಯೇ. ‘ಕೆಜಿಎಫ್’ಗೂ ಮೊದಲು ಫ್ಯಾಮಿಲಿ ಡ್ರಾಮಾ ಕಥೆಯನ್ನು ಪ್ರಶಾಂತ್ ನೀಲ್ ರೆಡಿ ಮಾಡಿಟ್ಟುಕೊಂಡಿದ್ದರು. ಪುನೀತ್ ರಾಜ್​​ಕುಮಾರ್ ಅವರೇ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ನೀಲ್ ಆಸೆ ಆಗಿತ್ತು. ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ಪುನೀತ್ ಜೊತೆ ಆ ಕಥೆಯೂ ಹೋಯಿತು ಎಂದು ಅವರು ಹೇಳಿದ್ದಾರೆ.

ಪ್ರಶಾಂತ್ ನೀಲ್ ಅವರು ಅಪ್ಪುಗಾಗಿ ಒಂದು ಭರ್ಜರಿ ಕಥೆ ಸಿದ್ಧಪಡಿಸಿದ್ದರು. ಹೊಂಬಾಳೆ ಫಿಲ್ಮ್ಸ್ ಎದುರು ಇದನ್ನು ನೀಲ್ ಹೇಳಿದ್ದರು. ನಂತರ ‘ಕೆಜಿಎಫ್’ ಕಥೆ ಹೇಳಿದಾಗ ಹೊಂಬಾಳೆ ಅದನ್ನೇ ಆಯ್ಕೆ ಮಾಡಿತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪುನೀತ್ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಅಪ್ಪು ಅವರ ಹಠಾತ್ ಅಗಲಿಕೆ ಈ ಮಹಾನ್ ಕನಸನ್ನು ಅರ್ಧಕ್ಕೆ ನಿಲ್ಲಿಸಿತು.

ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ನೀಲ್, ‘ಅದನ್ನು ನಾನು ಪುನೀತ್ ಅವರಿಗಾಗಿ ಮಾಡಿದ್ದೆ. ಅವರ ಜೊತೆಯೇ ಆ ಕಥೆಯೂ ಹೋಯಿತು’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅಂದರೆ ಆ ಕಥೆಗೆ ಬೇರೆ ಯಾರೂ ಸೂಕ್ತರಲ್ಲ ಎಂಬುದು ನೀಲ್ ಅಭಿಪ್ರಾಯ.

ಇದನ್ನೂ ಓದಿ: ‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ

‘ನನ್ನ ಸಿನಿಮೀಯ ಬದುಕಿನ ಅತಿ ದೊಡ್ಡ ನಿರಾಶೆ ಎಂದರೆ ಅದು ಅಪ್ಪು ಸರ್ ಜೊತೆ ಸಿನಿಮಾ ಮಾಡಲು ಸಾಧ್ಯವಾಗದೇ ಇರುವುದು’ ಎಂದು ಪ್ರಶಾಂತ್ ನೀಲ್ ಹಲವು ಸಂದರ್ಶನಗಳಲ್ಲಿ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿದೆ. ಇದರ ಅವಧಿ 4 ನಿಮಿಷ ಇತ್ತು. ಮುಂದಿನ ದಿನಗಳಲ್ಲಿ 9 ನಿಮಿಷಗಳ ಟ್ರೇಲರ್ ತರುವ ಆಲೋಚನೆಯಲ್ಲಿ ಪ್ರಶಾಂತ್ ನೀಲ್ ಅವರು ಇದ್ದಾರೆ. ಸಿನಿಮಾದಲ್ಲಿ ಏನಿರಲಿದೆ ಎಂಬುದನ್ನು ಅವರು ವಿವರವಾಗಿ ಹೇಳುವ ಆಲೋಚನೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 22, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಸಮೃದ್ಧಿಗಾಗಿ ಹಾಗೂ ವೃದ್ಧಿಗಾಗಿ ಪ್ರಯತ್ನಿಸಲು ಇದು ಸೂಕ್ತ ಸಮಯ ಎಂದು ಗುರೂಜಿ ಹೇಳಿದ್ದಾರೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವುದು ಈ ದಿನದ ಪ್ರಮುಖ ಗ್ರಹ ಸ್ಥಿತಿಯಾಗಿದೆ. ರಾಹುಕಾಲವು ಬೆಳಿಗ್ಗೆ 10:40 ರಿಂದ ಮಧ್ಯಾಹ್ನ 12:10 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಮತ್ತು ಸಂಕಲ್ಪ ಕಾಲವು ಮಧ್ಯಾಹ್ನ 12:16 ರಿಂದ 1:56 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

Exit mobile version