ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್‌ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್‌ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್​​ಗೆ ನೀಡಿದ್ದರೆ, ಇತ್ತ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮೇಟಿ ಕುಟುಂಬಕ್ಕೆ  ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.

Source link

IPL 2026: ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ? ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಾ?

2026 ರ ಐಪಿಎಲ್ (IPL 2026) ಆರಂಭಕ್ಕೆ ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿದೆ. ಆದರೆ ಇದುವರೆಗೂ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಬಿಸಿಸಿಐ (BCCI), ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕೇವಲ 20 ಪಂದ್ಯಗಳು ಮಾತ್ರ ಸೇರಿವೆ. ಇದೀಗ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ವಾಸ್ತವವಾಗಿ ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣದಿಂದ ಭದ್ರತಾ ದೃಷ್ಟಿಯಿಂದ ಬಿಸಿಸಿಐ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿರಲಿಲ್ಲ. ಇದೀಗ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗುವ ಕಾಲವು ಸನಿಹಿತವಾಗಿದೆ.

26 ರೊಳಗೆ ವೇಳಾಪಟ್ಟಿ ಪ್ರಕಟ

ವರದಿಗಳ ಪ್ರಕಾರ, ಮಾರ್ಚ್ 26 ರೊಳಗೆ ಬಿಸಿಸಿಐ, ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಅಂತಿಮ ಪಟ್ಟಿಯನ್ನು ಸಿದ್ಧಗೊಳಿಸಲು 3-4 ದಿನಗಳನ್ನು ತೆಗೆದುಕೊಳ್ಳಬಹುದು ಎಂದು ಮಂಡಳಿಯು ಎಲ್ಲಾ ಫ್ರಾಂಚೈಸಿಗಳಿಗೆ ತಿಳಿಸಿದೆ ಎಂದು ವರದಿಯಾಗಿದೆ.

ಮೇಲೆ ಹೇಳಿದಂತೆ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣದಿಂದ ಬಿಸಿಸಿಐ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಇದೀಗ ವಿಧಾನಸಭಾ ಚುನಾವಣೆ ನಡೆಯುವ ದಿನಾಂಕಗಳನ್ನು ಘೋಷಿಸಲಾಗಿದೆ. ಅದರಂತೆ ವಿಧಾನಸಭಾ ಚುನಾವಣೆಗಳು ನಡೆಯುವ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಐಪಿಎಲ್ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಆದ್ದರಿಂದ, ಚೆನ್ನೈ (ಏಪ್ರಿಲ್ 23), ಕೋಲ್ಕತ್ತಾ (ಏಪ್ರಿಲ್ 23 ಮತ್ತು 29) ಮತ್ತು ಗುವಾಹಟಿಯ (ಏಪ್ರಿಲ್ 9) ಮತದಾನದ ದಿನಗಳಲ್ಲಿ ಯಾವುದೇ ಪಂದ್ಯಗಳು ನಡೆಯುವುದಿಲ್ಲ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾರ್ಚ್ 29 ರೊಳಗೆ ಮತದಾನ ಪೂರ್ಣಗೊಳ್ಳುತ್ತದೆ ಮತ್ತು ಮೇ 4 ರಂದು ಮತ ಎಣಿಕೆ ನಡೆಯಲಿದೆ. ಆದ್ದರಿಂದ, ಈ ದಿನಾಂಕಗಳಲ್ಲಿ ಈ ರಾಜ್ಯಗಳಲ್ಲಿ ಯಾವುದೇ ಐಪಿಎಲ್ ಪಂದ್ಯಗಳನ್ನು ಆಡಲಾಗುವುದಿಲ್ಲ.

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಎಷ್ಟು ಪಂದ್ಯಗಳು ನಡೆಯಲಿವೆ?

ವಾಸ್ತವವಾಗಿ ಈ ಬಾರಿಯ ಐಪಿಎಲ್​ನಲ್ಲಿ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂಬ ಮಾತುಗಳು ಕೇಳಿಬಂದಿದ್ದವು. ಅಂದರೆ ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಪಂದ್ಯಗಳ ಸಂಖ್ಯೆ 84ಕ್ಕೆ ಏರಲಿದೆ ಎಂದು ವರದಿಯಾಗಿತ್ತು. ಆದರೆ ಈ ಬಾರಿಯೂ ಕಳೆದ ಬಾರಿ ನಡೆದಷ್ಟೇ ಪಂದ್ಯಗಳು ಅಂದರೆ ಫೈನಲ್ ಪಂದ್ಯವೂ ಸೇರಿದ್ದಂತೆ 74 ಪಂದ್ಯಗಳು ನಡೆಯಲಿವೆ ಎಂದು ವರದಿಯಾಗಿದೆ. ಇದೀಗ ಪ್ರಕಟವಾಗಿರುವ 20 ಪಂದ್ಯಗಳ ವೇಳಾಪಟ್ಟಿಯ ಜೊತೆಗೆ ಮುಂಬರುವ ದಿನಗಳಲ್ಲಿ ಉಳಿದ 54 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಮಹಿಳೆಯೊಬ್ಬರು ಆಫೀಸಿನಿಂದ ಮನೆಗೆ ನಡೆದುಕೊಂಡು ಹೋಗುವ ಮೂಲಕ ತನ್ನ ಪ್ರಯಾಣವನ್ನು ದೈನಂದಿನ ನಡಿಗೆಯೊಂದಿಗೆ ಹೇಗೆ ಬದಲಾಯಿಸಲು ನಿರ್ಧರಿಸಿದರು ಎಂದು ವಿವರಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ನಾನು ಪ್ರತಿದಿನ ಆಫೀಸಿನಿಂದ ಮನೆಗೆ ನಡೆದುಕೊಂಡು ಹೋಗಲು ನಿರ್ಧರಿಸಿದೆ. ಗೂಗಲ್ ಮ್ಯಾಪ್ 2.7 ಕಿಲೋಮೀಟರ್ ಗೆ 38 ನಿಮಿಷಗಳು ಬೇಕು ಎಂದು ತೋರಿಸಿದ್ದವು. ಅದಕ್ಕಿಂತ ಹೆಚ್ಚು ಸಮಯ ಬೇಕಿತ್ತು. ಎರಡು ವಾರಗಳ ನಂತರ ನನ್ನ ಫಲಿತಾಂಶಗಳು ಇವಾಗಿದ್ದವು. ಸಾಧಕಗಳಲ್ಲಿ ನಾನು ಮೊದಲಿಗಿಂತ ಶಕ್ತಿವಂತಳಾಗಿದ್ದೇನೆ. ಆದರೆ, ಅನಾನುಕೂಲವೆಂದರೆ, ನಾನು ಎಳನೀರಿಗಾಗಿ 840 ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ವೈಟ್‌ಫೀಲ್ಡ್‌ನಲ್ಲಿ ನಡೆಯುವುದು ಸವಾರಿಗಿಂತ ಉತ್ತಮವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ನನಗೆ ಇದು ಆಸಕ್ತಿದಾಯಕವೆನಿಸಿತು, ಖಂಡಿತವಾಗಿಯೂ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ತುಂಬಾ ವಿಶಿಷ್ಟವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಟೆಹ್ರಾನ್, ಮಾರ್ಚ್ 23: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಜೊತೆ ‘ಪ್ರೊಡಕ್ಟಿವ್ ಮಾತುಕತೆ’ ನಡೆಸಿದ್ದೇವೆ ಎಂಬ ಹೇಳಿಕೆಯನ್ನು ಇರಾನ್ ತಳ್ಳಿಹಾಕಿದೆ. ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಪ್ರಯತ್ನಗಳ ಭಾಗವಾಗಿ ಅಮೆರಿಕ ಈ ರೀತಿಯ ಹೇಳಿಕೆ ನೀಡಿದೆ ಎಂದು ಇರಾನ್ ಟೀಕಿಸಿದೆ. ಇರಾನ್ ಮೇಲೆ ನಡೆಸಲು ಯೋಚಿಸಲಾಗಿದ್ದ ಮಿಲಿಟರಿ ದಾಳಿಗಳಿಗೆ ವಿರಾಮ ನೀಡುವುದಾಗಿ ಟ್ರಂಪ್ ಘೋಷಿಸಿದ ಸ್ವಲ್ಪ ಸಮಯದ ನಂತರ ಇರಾನ್ ರಾಯಭಾರ ಕಚೇರಿ ಈ ಹೇಳಿಕೆ ಬಿಡುಗಡೆ ಮಾಡಿದೆ.

“ಇರಾನ್‌ನ ದೃಢ ಎಚ್ಚರಿಕೆಯ ನಂತರ ಟ್ರಂಪ್ ನಮ್ಮ ದೇಶದ ಮೇಲೆ ದಾಳಿ ನಡೆಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಯಾವುದೇ ಯುಎಸ್ ದಾಳಿ ನಡೆದರೂ ಅದು ಇಡೀ ಪ್ರದೇಶದ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸುವುದಾಗಿ ಇರಾನ್ ಬೆದರಿಕೆ ಹಾಕಿತ್ತು. ಇದಾದ ನಂತರವೇ ಟ್ರಂಪ್ ಹಿಂದೆ ಸರಿದು ಇರಾನ್ ಮೇಲಿನ ದಾಳಿಯನ್ನು ಮುಂದೂಡಲು ಆದೇಶ ಹೊರಡಿಸಿದ್ದಾರೆ” ಎಂದು ಇರಾನ್​ನ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಟ್ರಂಪ್ ಅವರ ಈ ಹೇಳಿಕೆಗಳು ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ಮುಂದಿನ ದಾಳಿಗೆ ಸಮಯವನ್ನು ಮಾಡಿಕೊಳ್ಳುವ ಗುರಿಯನ್ನು ಹೊಂದಿವೆ ಎಂದು ಇರಾನಿನ ಮಾಧ್ಯಮ ವರದಿ ಮಾಡಿದೆ. ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದ್ದು, ಇರಾನ್ ಮತ್ತು ಅಮೆರಿಕದ ನಡುವೆ ಪ್ರಸ್ತುತ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿದೆ.

ಇದರ ನಡುವೆ, ಇಸ್ರೇಲಿನ ಸೈನ್ಯವು ಇಂದು ಇರಾನ್​ನಲ್ಲಿ ಮತ್ತೊಂದು ದಾಳಿಯನ್ನು ಪ್ರಾರಂಭಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಎಐ ಮೂಲಕ ಬದಲಾಯ್ತು ‘ಧುರಂಧರ್ 2’ ಕ್ಲೈಮಾಕ್ಸ್; ಪ್ರೇಕ್ಷಕರ ಬಯಕೆಯಂತೆ ಕಥೆ ಅಂತ್ಯ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ರಣವೀರ್ (Ranveer Singh) ನಟನೆ ಮತ್ತು ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಫಿದಾ ಆಗಿದ್ದಾರೆ. ಆದರೆ, ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಅಭಿಮಾನಿಗಳಲ್ಲಿ ಸಣ್ಣದೊಂದು ಬೇಸರವಿತ್ತು. ಈಗ ಆ ಬೇಸರವನ್ನು ಕೃತಕ ಬುದ್ಧಿಮತ್ತೆ (AI) ದೂರ ಮಾಡಿದೆ. ಪ್ರೇಕ್ಷಕರ ಬಯಕೆಯಂತೆ ಒಂದು ಎಐ ವಿಡಿಯೋ ಮಾಡಲಾಗಿದ್ದು, ಅದನ್ನು ನೋಡಿದ ನೆಟ್ಟಿಗರು ಖುಷಿಯಾಗಿದ್ದಾರೆ.

ಸ್ಪಾಯ್ಲರ್ ಇದೆ ಎಚ್ಚರಿಕೆ: ‘ಧುರಂಧರ್ 2’ ಸಿನಿಮಾದ ಅಂತ್ಯದಲ್ಲಿ ಕಥಾನಾಯಕ ತನ್ನ ಊರಿಗೆ ಮರಳುತ್ತಾನೆ. ಅಲ್ಲಿ ತಾನಿಲ್ಲದೆಯೂ ತಾಯಿ ಮತ್ತು ತಂಗಿ ನೆಮ್ಮದಿಯ ಜೀವನ ನಡೆಸುತ್ತಿರುವುದನ್ನು ದೂರದಿಂದಲೇ ನೋಡಿ ಮರುಗುತ್ತಾನೆ. ತನ್ನ ಉಪಸ್ಥಿತಿಯು ಅವರ ಶಾಂತಿಯನ್ನು ಕೆಡಿಸಬಹುದು ಎಂದು ಭಾವಿಸುವ ಆತ, ಭಾರವಾದ ಹೃದಯದಿಂದ ಅಲ್ಲಿಂದ ಗುಟ್ಟಾಗಿ ನಿರ್ಗಮಿಸುತ್ತಾನೆ. ಈ ದೃಶ್ಯವು ಭಾವುಕವಾಗಿದ್ದರೂ, ಅಭಿಮಾನಿಗಳಿಗೆ ಇದು ಸಮಾಧಾನ ನೀಡಿರಲಿಲ್ಲ.

ಅಭಿಮಾನಿಗಳ ಆಸೆಯಂತೆ ಈಗ ಸೋಷಿಯಲ್ ಮೀಡಿಯಾದಲ್ಲಿ ಎಐ ಮೂಲಕ ಸೃಷ್ಟಿಸಲಾದ ಪರ್ಯಾಯ ಕ್ಲೈಮ್ಯಾಕ್ಸ್ ವೈರಲ್ ಆಗಿದೆ. ಈ ಹೊಸ ವಿಡಿಯೋದಲ್ಲಿ ಕಥಾನಾಯಕ ತನ್ನ ತಾಯಿಯನ್ನು ಭೇಟಿಯಾಗುತ್ತಾನೆ. ವರ್ಷಗಳ ನಂತರ ಮಗನನ್ನು ಕಂಡ ತಾಯಿ ಭಾವುಕಳಾಗಿ ತಬ್ಬಿಕೊಳ್ಳುತ್ತಾಳೆ. ನಂತರ ಇಡೀ ಕುಟುಂಬ ಒಂದಾಗಿ ಗ್ರೂಪ್ ಫೋಟೋ ತೆಗೆಸಿಕೊಳ್ಳುವ ಮೂಲಕ ಸುಖಾಂತ್ಯ ಕಾಣುತ್ತದೆ.

ಎಐ ವಿಡಿಯೋ:

ಅಭಿಮಾನಿಗಳು ಈ ವಿಡಿಯೋ ನೋಡಿ, ‘ನಮಗೆ ಬೇಕಾಗಿದ್ದ ಕ್ಲೈಮ್ಯಾಕ್ಸ್ ಇದೇ. AI ತಂತ್ರಜ್ಞಾನದ ಅತ್ಯುತ್ತಮ ಬಳಕೆ ಎಂದರೆ ಇದು’ ಎಂದು ಕಮೆಂಟ್ ಮಾಡಿದ್ದಾರೆ. ಸಿನಿಮಾದಲ್ಲಿ ತೋರಿಸಿರುವ ಮೂಲ ಕ್ಲೈಮ್ಯಾಕ್ಸ್ ಚೆನ್ನಾಗಿದೆ. ಆದರೆ ಪ್ರೇಕ್ಷಕರಿಗೆ ಈ ಕ್ಲೈಮ್ಯಾಕ್ಸ್​ನಿಂದ ಭಾವುಕವಾದ ಸಮಾಧಾನ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಸಂಜಯ್ ದತ್, ರಾಕೇಶ್ ಬೇಡಿ, ಅರ್ಜುನ್ ರಾಮ್​ಪಾಲ್, ಆರ್. ಮಾಧವನ್ ಮುಂತಾದವರು ನಟಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ. ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Oil Prices: ಟ್ರಂಪ್ ವರಸೆ ಬದಲು; ಕಚ್ಛಾ ತೈಲ ಬೆಲೆ ದಿಢೀರ್ ಇಳಿಕೆ

ನವದೆಹಲಿ, ಮಾರ್ಚ್ 23: ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ ಪರಿಣಾಮ ಗಗನಕ್ಕೇರಿದ್ದ ತೈಲ ಬೆಲೆಗಳು (crude oil prices) ಇದೀಗ ತಗ್ಗಿವೆ. ಸೋಮವಾರ ಬ್ರೆಂಟ್ ಕ್ರೂಡ್ ಶೇ 11ರಷ್ಟು ಕಡಿಮೆ ಆಗಿದೆ. ಒಂದು ಬ್ಯಾರಲ್ ತೈಲದ ಬೆಲೆ 100 ಡಾಲರ್​ಗಿಂತ ಕಡಿಮೆಗೆ ಇಳಿದಿದೆ. ತೈಲ ಬೆಲೆ ಏರಲು ಕಾರಣವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಹಾಕಿದ ಬಳಿಕ ತೈಲ ಬೆಲೆ ಕೆಳ ಜಾರಿದೆ.

ಬ್ರೆಂಟ್ ಮತ್ತು ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ ಬೆಲೆಗಳಲ್ಲಿ ಇಳಿಕೆ

ಇರಾನ್​ನ ವಿದ್ಯುತ್ ಘಟಕಗಳು ಮತ್ತು ಇಂಧನ ಘಟಕಗಳ (Energy infrastructure) ಮೇಲೆ ದಾಳಿಯನ್ನು ಐದು ದಿನ ಮುಂದೂಡಿದ್ದೇವೆ. ಎರಡು ದಿನಗಳಿಂದ ಇರಾನ್ ಜೊತೆ ಉತ್ತಮ ಮಾತುಕತೆ ನಡೆಸಿರುವುದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ತಿಳಿಯಾಗುವ ಆಶಾಭಾವನೆ ಮೂಡಿರುವುದರಿಂದ ತೈಲ ಬೆಲೆ ಕಡಿಮೆಗೊಂಡಿರಬಹುದು. ಬ್ರೆಂಟ್ ಪ್ಯೂಚರ್ಸ್ ಮತ್ತು ಡಬ್ಲ್ಯುಟಿಐ ಫ್ಯೂಚರ್ಸ್ ಎರಡೂ ಕೂಡ ಶೇ. 10ಕ್ಕಿಂತಲೂ ಹೆಚ್ಚಿನ ಪ್ರಮಾಣದಷ್ಟು ಕುಸಿತ ಕಂಡಿವೆ.

ಇದನ್ನೂ ಓದಿ: PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ಸೋಮವಾರ ಒಂದು ಹಂತದಲ್ಲಿ ಬ್ರೆಂಟ್ ಫ್ಯೂಚರ್ಸ್ ಬ್ಯಾರಲ್​ಗೆ 98 ಡಾಲರ್ ಬೆಲೆ ಹೊಂದಿತ್ತು. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್ 91 ಡಾಲರ್ ಬೆಲೆ ಹೊಂದಿತ್ತು. ಟ್ರಂಪ್ ಹೇಳಿಕೆಯ ಪರಿಣಾಮ ಇದು. ಮತ್ತೊಂದು ಸಕಾರಾತ್ಮಕ ವಿಚಾರ ಎಂದರೆ, ಇರಾನ್ ಜೊತೆ ಅಮೆರಿಕ ನಡೆಸಿದ ಮಾತುಕತೆ ಎರಡು ದಿನಕ್ಕೆ ಸೀಮಿತವಾಗಿಲ್ಲ. ಈ ವಾರಾದ್ಯಂತ ಮಾತುಕತೆಗಳು ಮುಂದುವರಿಯಲಿವೆ. ಅಲ್ಲಿಯವರೆಗೆ ಇರಾನ್​ನ ವಿದ್ಯುತ್ ಮತ್ತು ಇಂಧನ ಘಟಕಗಳ ಮೇಲೆ ಮಿಲಿಟರಿ ದಾಳಿಗಳನ್ನು ನಿಲ್ಲಿಸುವಂತೆ ಟ್ರಂಪ್ ಸೂಚಿಸಿದ್ದಾರೆ.

ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಕಚ್ಛಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಷ್ಟಸಾಧ್ಯ. ಗೋಲ್ಡ್​ಮ್ಯಾನ್ ಸ್ಯಾಕ್ಸ್ ಮಾಡಿರುವ ಅಂದಾಜು ಪ್ರಕಾರ 2026ರಲ್ಲಿ ಬ್ರೆಂಟ್ ಕ್ರೂಡ್​ನಲ್ಲಿ ತೈಲ ಬೆಲೆ ಸರಾಸರಿಯಾಗಿ 85 ಡಾಲರ್ ಇರಬಹುದು ಎನ್ನಲಾಗಿದೆ. ಇನ್ನು ಡಬ್ಲ್ಯುಟಿಐನಲ್ಲಿ ಸರಾಸರಿ ಬೆಲೆ 79 ಡಾಲರ್ ಇರಲಿದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ನ ವರದಿ ಹೇಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಖಂಡನೆ

ನವದೆಹಲಿ, ಮಾರ್ಚ್ 23: ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಸ್ತಾಪಿಸಿದರು. “ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮೈತ್ರಿಕೂಟದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಕ್ಕಟ್ಟು ಈ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುತ್ತಿದೆ. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ವಿಶ್ವದ ಜನರು ಮತ್ತು ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಸಂಸತ್ತಿನ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಂತಹ ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಅಡಚಣೆಗಳು ಸ್ವೀಕಾರಾರ್ಹವಲ್ಲ. ರಾಜತಾಂತ್ರಿಕತೆಯ ಮೂಲಕ ಈ ಯುದ್ಧದ ವಾತಾವರಣದಲ್ಲಿಯೂ ಸಹ ಭಾರತೀಯ ಹಡಗುಗಳ ಸುರಕ್ಷಿತ ಸಾಗಣೆಗೆ ಭಾರತ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

“ಹಾರ್ಮುಜ್ ಜಲಸಂಧಿ ಭಾರತದ ಆರ್ಥಿಕತೆಗೆ ಅಗತ್ಯವಾದ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರ ಪೂರೈಕೆಗೆ ಪ್ರಮುಖ ಪಾತ್ರ ವಹಿಸುತ್ತದೆ. ಭಾರತದ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರ ಪೂರೈಕೆಯ ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಈ ಜಲಸಂಧಿಯ ಮೂಲಕ ಹಡಗುಗಳ ಸಂಚಾರ ತುಂಬಾ ಸವಾಲಿನದ್ದಾಗಿದೆ” ಎಂದು ಮೋದಿ ಹೇಳಿದ್ದಾರೆ.

ಈ ಪ್ರದೇಶದಲ್ಲಿನ ಬೆಳವಣಿಗೆಗಳು ಪಶ್ಚಿಮ ಏಷ್ಯಾ ಸಂಘರ್ಷದಿಂದ ಎದುರಾಗಿರುವ ಸವಾಲುಗಳಿಗೆ ಅದರಲ್ಲೂ ವಿಶೇಷವಾಗಿ ವಾಣಿಜ್ಯ ಸರಕುಗಳ ಸಂಚಾರಕ್ಕೆ ಮತ್ತಷ್ಟು ಸವಾಲುಗಳನ್ನು ಹೆಚ್ಚಿಸಿವೆ ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಬೆಂಗಳೂರು, (ಮಾರ್ಚ್ 23): ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಫ್ಟಿಂಗ್‌ ಮಾಡಿರುವುದು ರಿಕ್ಕಿ ರೈ ಎನ್ನುವುದು ಪತ್ತೆಯಾಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

Source link

ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಾಗಿ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ

11ನೇ ಆವೃತ್ತಿಯ ಪಾಕಿಸ್ತಾನ ಸೂಪರ್ ಲೀಗ್ (PSL 2026) ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಸಮಸ್ಯೆಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ಪಿಸಿಬಿಗೆ, ವಿದೇಶಿ ಆಟಗಾರರ ಅಲಭ್ಯತೆ ದೊಡ್ಡ ತಲೆನೋವಾಗಿದ್ದರೆ, ಮತ್ತೊಂದೆಡೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಉಂಟಾಗಿರುವ ಅನಿಲ ಬಿಕ್ಕಟ್ಟು ಹಾಗೂ ಅಪ್ಘಾನಿಸ್ತಾನ ದಾಳಿ ಮಾಡುವ ಆತಂಕ ಮತ್ತೊಂದು ಸವಾಲಾಗಿದೆ. ಇದೀಗ ಇದೆಲ್ಲದರ ನಡುವೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯೊಂದು ವಿದೇಶಿ ಆಟಗಾರರು ಈ ಲೀಗ್​ನಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲದೆ ಲೀಗ್ ನಡೆಯುವ ವೇಳೆ ವಿದೇಶಿ ಆಟಗಾರರಿಗೆ ಪ್ರಾಣಾಪಾಯ ಎದುರಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂಬ ಬೆದರಿಕೆಯೊಡ್ಡಿದೆ.

ಜಮಾತ್-ಉಲ್-ಅಹ್ರಾರ್ ಬೆದರಿಕೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಉಂಟಾಗಿರುವ ಇಂಧನ ಕೊರತೆಯಿಂದಾಗಿ ಪಿಎಸ್​ಎಲ್ ಪಂದ್ಯಾವಳಿಯನ್ನು ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಸಲು ಪಿಸಿಬಿ ತೀರ್ಮಾನಿಸಿದೆ. ಇದೆಲ್ಲದರ ನಡುವೆ ಜಮಾತ್-ಉಲ್-ಅಹ್ರಾರ್ ಎಂಬ ಪಾಕಿಸ್ತಾನದ ಉಗ್ರ ಸಂಘಟನೆಯೊಂದು, ‘ವಿಶ್ವಾದ್ಯಂತದ ಎಲ್ಲಾ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ನಾವು ಸಲಹೆ ನೀಡುತ್ತೇವೆ.

ಈ ಸಲಹೆಯನ್ನು ಮೀರಿ ವಿದೇಶಿ ಆಟಗಾರರು ಪಾಕಿಸ್ತಾನಕ್ಕೆ ಬಂದು ಪಂದ್ಯಾವಳಿಯಲ್ಲಿ ಭಾಗವಹಿಸಿದರೆ, ಅವರಿಗೆ ಇಲ್ಲಿ ಏನಾದರೂ ಸಂಭವಿಸಿದರೆ, ನಾವು ಜವಾಬ್ದಾರರಾಗಿರುವುದಿಲ್ಲ. ನಾವು ಈಗಾಗಲೇ ಎಚ್ಚರಿಕೆ ನೀಡಿದ್ದೇವೆ. ಇದರ ಹೊರತಾಗಿಯೂ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿಯದಿದ್ದರೆ, ಪಂದ್ಯಗಳು ನಡೆಯದಂತೆ ತಡೆಯಲು ನಾವು ಏನು ಬೇಕಾದರೂ ಮಾಡುತ್ತೇವೆ. ಆಟಗಾರರು ಮೈದಾನಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ’ ಎಂಬ ಬೆದರಿಕೆಯನ್ನು ಹಾಕಿದೆ.

ಬೆದರಿಕೆಗೂ ಬಗ್ಗದ ಬಾಂಗ್ಲಾದೇಶ

ಭಯೋತ್ಪಾದಕ ಸಂಘಟನೆಗಳು ಆಟಗಾರರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೂ ಸಹ, ಬಾಂಗ್ಲಾದೇಶ ತನ್ನ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ. ಬಾಂಗ್ಲಾದೇಶದ ಆಟಗಾರರು ಪಿಎಸ್‌ಎಲ್‌ನಲ್ಲಿ ಭಾಗವಹಿಸುತ್ತಾರೆ ಎಂದು ಬಾಂಗ್ಲಾದೇಶದ ಆಟಗಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ನಹಿದ್ ರಾಣಾ ಕೂಡ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸುತ್ತಿರುವ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ ಮತ್ತು ಪರ್ವೇಜ್ ಹುಸೇನ್ ಎಮನ್ ಪಿಎಸ್‌ಎಲ್‌ನಲ್ಲಿ ಭಾಗವಹಿಸಲಿದ್ದಾರೆ. ಮುಸ್ತಾಫಿಜುರ್ ರೆಹಮಾನ್ ಮತ್ತು ಪರ್ವೇಜ್ ಹುಸೇನ್ ಲಾಹೋರ್ ಖಲಂದರ್‌ ತಂಡದ ಭಾಗವಾಗಿದ್ದಾರೆ. ಶೋರಿಫುಲ್ ಇಸ್ಲಾಂ, ನಹಿದ್ ರಾಣಾ ಮತ್ತು ತಂಜಿದ್ ಹಸನ್ ತಮೀಮ್ ಪೇಶಾವರ್ ಜಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ರಿಯಾದ್ ಹುಸೇನ್ ರಾವಲ್ಪಿಂಡಿ ತಂಡದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಏನಿದು ಪ್ರಕರಣ?

2018ರಲ್ಲಿ ವೇಣೂರು ಠಾಣೆಯಲ್ಲಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕನ ವಿರುದ್ಧ ತಂಗಿ ದೂರು ನೀಡಿದ್ದರು. ಆ ಮಹಿಳೆ ಮತ್ತು ಆತನ ಪತಿ ವಿರುದ್ಧ ದೂರು ದಾಖಲಾಗಿತ್ತು. ಅದೇ ವೇಳೆ ಸರ್ಕಲ್ ಇನ್ಸ್​ಪೆಕ್ಟರ್​​ಆಗಿದ್ದ ಸಂದೇಶ್, ಈ ಕೇಸ್ ವಿಚಾರವಾಗಿ ಬ್ಲ್ಯಾಕ್ ​ಮೇಲ್ ಮಾಡಿದ್ದರಂತೆ. ಆಕೆಗೆ ನಿರಂತರ ಅತ್ಯಾಚಾರ ಮಾಡಿದ್ದಾಗಿ, ಆ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್ ಕಾಮಕಾಂಡ ಪ್ರಕರಣ: ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿಸಿದ್ರಾ ಸಂದೇಶ್​​​​​?

ಮುಖ್ಯ ಶಿಕ್ಷಕಿಯಾಗಿರುವ ಸಂತ್ರಸ್ತೆ ತನ್ನ ದೂರಿನಲ್ಲಿ ಸಾಕಷ್ಟು ಆರೋಪ ಮಾಡಿದ್ದರು. ಕೇಸ್ ವಿಚಾರದಲ್ಲಿ ಬ್ಲ್ಯಾಕ್ ​ಮೇಲ್ ಮಾಡುತ್ತಾ 2020 ರಿಂದ 2023ರವರೆಗೂ ನಿರಂತರವಾಗಿ ಅತ್ಯಾಚಾರ ಮಾಡಿದ್ದಾಗಿ ಆರೋಪಿಸಿದ್ದರು. ಕೆಲ ಸಮಯದ ಬಳಿಕ ಪ್ರತಿರೋಧ ಒಡ್ಡಿದ್ದಕ್ಕೆ ಕೇಸ್ ರಿ ಓಪನ್ ಮಾಡುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದರು.

ಇನ್ನು ಸಂದೇಶ್ ಸೇರಿ ಒಟ್ಟು 4 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಸಂದೇಶ್ ಖಾಸಗಿ ಚಾಲಕ ಅಕ್ಬರ್, ಸ್ಮಿತಾ ಮತ್ತು ಸುನೀತಾ ಲೋಬೊ ಎಂಬುವವರ ಮೇಲೆ ದೂರು ದಾಖಲಾಗಿತ್ತು. ಸಂದೇಶ್ ಅತ್ಯಾಚಾರ ಮಾಡಿದ್ದಲ್ಲದೇ 13 ಲಕ್ಷ ರೂ ನಗದು, 3.62 ಲಕ್ಷ ರೂ ಹಣ ಲಪಟಾಯಿಸಿದ್ದಾನಂತೆ. ಅಲ್ಲದೇ ಚಿನ್ನವನ್ನು ಲಪಟಾಯಿಸಿ ಅಕ್ಬರ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್​ನಲ್ಲಿ ಅಡವಿಟ್ಟಿದ್ದ.

ಇದನ್ನೂ ಓದಿ: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಹೊಸ ಮನೆ ಕಟ್ಟುವಾಗ ಸಂತ್ರಸ್ತೆ ತೋಟದಿಂದ 2.5 ಲಕ್ಷ ರೂ ಮೌಲ್ಯದ ಸಾಗುವಾನಿ ಮರವನ್ನು ಲಪಟಾಯಿಸಿದ್ದ. ಇನ್ನು ಈತನ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸ್ಮಿತಾ ಮತ್ತು ಸುನಿತಾ ಲೋಬೊರನ್ನು ಸಂತ್ರಸ್ತೆ ಮನೆಗೆ ಕಳುಹಿಸಿ ನಡೆದ ವಿಚಾರ ಹೊರಗಡೆ ಬಾಯಿ ಬಿಟ್ಟರೆ ಕೇಸ್ ಹಾಕುತ್ತೇನೆ. ಜೀವಂತವಾಗಿ ಬಿಡೋದಿಲ್ಲ ಅಂತಾ ಬೆದರಿಕೆ ಕೂಡ ಹಾಕಿದ್ದ ಅಂತಾ ಆರೋಪಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version