Headlines

ಖಾಸಗಿ ಯಾಚ್​​​ನಲ್ಲಿ ನಯನತಾರಾ-ತ್ರಿಶಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

ನಯನತಾರಾ ಹಾಗೂ ತ್ರಿಶಾ ಮಧ್ಯೆ ವೈಮನಸ್ಸಿದೆ ಎಂಬ ಮಾತಿತ್ತು. ಅದನ್ನು ಇವರು ದೂರ ಮಾಡಿದ್ದಾರೆ. ಒಟ್ಟಿಗೆ ಸಮಯ ಕಳೆದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಸಾಮಾನ್ಯವಾಗಿ ಎರಡು ಸ್ಟಾರ್ ಹೀರೋಯಿನ್​ಗಳು ಒಟ್ಟಿಗೆ ಸೇರೋದು ಕಡಿಮೆ. ಈ ರೀತಿ ಸೇರಿದರೂ ಅದು ಸಿನಿಮಾ ವೇದಿಕೆ ಮೇಲೆ ಆಗಿರುತ್ತದೆ. ಆದರೆ, ನಯನತಾರಾ ಹಾಗೂ ತ್ರಿಶಾ ಅವರು ಈ ವಿಷಯದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಖಾಸಗಿ ಯಾಚ್​​​ನಲ್ಲಿ ಇವರು ಸುತ್ತಾಟ ನಡೆಸಿದ್ದಾರೆ. ಸಮುದ್ರಕ್ಕೆ ತೆರಳಿ…

Read More

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL) ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ…

Read More

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! – Kannada News | Belagavi Shocker: Man brutally murdered in Kittur; investigation begins

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! ಬೆಳಗಾವಿ, ಫೆಬ್ರವರಿ 22: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು,ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣವೇನು? ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್, ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ…

Read More

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ – Kannada News | KGF Murder: Husband Arrested for Wife’s Brutal Killing in Kolar

ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿImage Credit source: Tv9 kannada ಕೋಲಾರ, ಏ.23 : ರಾಜ್ಯದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳ ನಡುವೆ ಅನುಮಾನಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಗಂಡನನ್ನು ಬಿಟ್ಟು ಇನ್ನೊಂದು ಹುಡುಗನ ಜತೆ ಅಥವಾ ಹುಡುಗಿಯ ಜತೆಗೆ ಹೋಗುವುದು. ಹೀಗೆ ಅನೇಕ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಪತಿ-ಪತ್ನಿ ಮಧ್ಯೆ ಅನುಮಾನಕ್ಕೆ ಬಳಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.  ನೆನ್ನೆಯಿಂದ (ಏ.22) ಈ ಅಕ್ರಮ ಸಂಬಂಧಗಳ ವರದಿಯೂ ಸುಮಾರು ಬೆಳಕಿಗೆ ಬಂದಿದೆ. ಇದೀಗ ಪತ್ನಿಯ…

Read More

ವಿಜಯ್​ನ ಪೋರ್ಟ್​ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? – Kannada News | Actor turned politician Vijay’s Wealth Revealed: Rs 624 Crore Assets & Traditional Investments

ಚೆನ್ನೈ, ಮೇ 5: ನಟ ವಿಜಯ್ (Vijay) ತಮಿಳುನಾಡು ರಾಜಕೀಯವನ್ನೇ ಅಲುಗಾಡಿಸಿಬಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಇಡೀ ರಾಜ್ಯವೇ ಸಂಚಲನಗೊಳ್ಳುವಂತೆ ಅವರ ಟಿವಿಕೆ ಪಕ್ಷ (TVK- Tamilaga Vetri Kazhagam) ದಿಗ್ವಿಜಯ ಸಾಧಿಸಿದೆ. ಏಕವ್ಯಕ್ತಿ ಈ ಮಹಾನ್ ಕ್ರಾಂತಿ ಮಾಡಿರುವುದು ಸಾಮಾನ್ಯದ ಸಂಗತಿಯಲ್ಲ. ಅಂತೆಯೇ, ಬಹಳ ಜನರು ವಿಜಯ್ ಅವರ ಹಣಕಾಸು ಶಕ್ತಿ ಮತ್ತು ಹಿನ್ನೆಲೆ ಬಗ್ಗೆ ಮಾಹಿತಿ ತಿಳಿಯಲು ಆಸಕ್ತರಾಗಿದ್ದಾರೆ. ಅವರ ಆಸ್ತಿಪಾಸ್ತಿ, ಹೂಡಿಕೆಯ ವಿವರ ನಿಜಕ್ಕೂ ಕುತೂಹಲಕಾರಿ ಎನಿಸಿದೆ. ಹೊಸ ತಲೆಮಾರಿನ ಜನರನ್ನು ಮತಪೆಟ್ಟಿಗೆಗೆ ಆಕರ್ಷಿಸಿದ ವಿಜಯ್…

Read More

ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು – Kannada News | Kolar: Black Magic Priest Brutally Murdered After Amavasya Puja in Malur

ಕೋಲಾರ, ಜನವರಿ 19: ಅವರು ಊರಿನಲ್ಲಿ ಕಾಳಿ ದೇವಿಯ ದೇವಾಲಯ ನಿರ್ಮಾಣ ಮಾಡಿಕೊಂಡು ಆರಾಧನೆ ಮಾಡಿಕೊಂಡಿದ್ದರು. ದೇವಾಲಯಕ್ಕೆ ಬರುವ ಜನರಿಗೆ ದೆವ್ವ, ಗಾಳಿ ಬಿಡಿಸುವ ಕೆಲಸವೂ ಮಾಡುತ್ತಿದ್ದರು. ಹೀಗೆ ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ (priest) ನಿನ್ನೆ ಪುಷ್ಯ ಅಮಾವಾಸ್ಯೆ ಹಿನ್ನೆಲೆ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ (murder) ಮಾಡಿದ್ದಾರೆ. ಜಿಲ್ಲೆಯ ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದೆ. ಆಂಜಿ ಅಲಿಯಾಸ್​ ಆಂಜಿನಪ್ಪ(45) ಕೊಲೆಯಾದ ಪೂಜಾರಿ. ಘಟಣಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು…

Read More

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ – Kannada News | Food Safety Department Raids On Dairies For Complaint Milk Adulteration In kolar

ಕೋಲಾರ, (ಫೆಬ್ರವರಿ 26): ಕೋಲಾರ (Kolar) ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ (Milk Adulteration )ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ…

Read More

ಮುಂಬೈ ಇಂಡಿಯನ್ಸ್ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ..! – Kannada News | Why Mumbai Indians Wear black band vs SRH

IPL 2026: ಐಪಿಎಲ್ 2026ರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ (Black Armband) ಧರಿಸಿ ಮೈದಾನಕ್ಕಿಳಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಕಪ್ಪು ಪಟ್ಟಿ ಧರಿಸಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಕಪ್ಪು ಪಟ್ಟಿ ಧರಿಸಲು ಕಾರಣವೇನು? ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬೆಂಬಲ ಸಿಬ್ಬಂದಿಯೊಬ್ಬರ ಮಗಳು ಅಕಾಲಿಕವಾಗಿ ನಿಧನರಾಗಿದ್ದಾರೆ. ಈ ದುಃಖದ ಸಮಯದಲ್ಲಿ ತಮ್ಮ ಸಿಬ್ಬಂದಿಯ ಕುಟುಂಬದೊಂದಿಗೆ ನಾವಿದ್ದೇವೆ…

Read More

ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್ – Kannada News | Satish Kadambam on Gilli: Said Under Alcohol Influence, Not Prediction

ಡಾಗ್ ಬ್ರೀಡರ್ ಸತೀಶ್ (Satish) ಕ್ಯಾಡಬಾಮ್ ಅವರು ಹೋದಲ್ಲಿ ಬಂದಲ್ಲಿ ಮಾಧ್ಯಮಗಳ ಎದುರು ಮಾತನಾಡುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ ಇರಲಿ, ಟಿವಿ ಮಾಧ್ಯಮ ಇರಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಒಂದು ವಿಷಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಗಿಲ್ಲಿ ಗೆಲ್ಲಲ್ಲ ಎಂದು ಕುಡಿದ ನಶೆಯಲ್ಲಿ ಹೇಳಿದ್ದು ಅಷ್ಟೇ’ ಎಂದು ಸತೀಶ್ ಅವರು ಹೇಳಿಕೆ ನೀಡಿದ್ದಾರೆ. ಗಿಲ್ಲಿ ಗೆಲ್ಲಲ್ಲ ಎಂದು ಸತೀಶ್ ಅವರು ಮೊದಲಿನಿಂದಲೂ ಹೇಳುತ್ತಾ ಬರುತ್ತಿದ್ದರು. ‘ಗಿಲ್ಲಿ ಕೊಳಕ, ಬಿಗ್ ಬಾಸ್ ಮನೆಯಲ್ಲಿ ನನಗೆ ತುಂಬಾನೇ ಚಿತ್ರ ಹಿಂಸೆ…

Read More