ಫೆ. 16ರಿಂದ ಎಐ ಇಂಪ್ಯಾಕ್ಟ್ ಸಮಿಟ್; ದಕ್ಷಿಣ ದೇಶಗಳ ಪ್ರಬಲ ಉಪಸ್ಥಿತಿ; 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ – Kannada News | AI Impact Summit 2026 at Delhi’s Bharat Mandapam from Feb 16 20, key details of the event

ನವದೆಹಲಿ, ಫೆಬ್ರುವರಿ 15: ರಾಷ್ಟ್ರ ರಾಜಧಾನಿಯಲ್ಲಿ ನಾಳೆಯಿಂದ (ಫೆ. 16) ಐದು ದಿನಗಳ ಕಾಲ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit 2026) ನಡೆಯಲಿದೆ. ಎಐ ಕುರಿತು ಅರಿವು ಮೂಡಿಸಲು ಮತ್ತು ಎಐ ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನು ಜಗಜ್ಜಾಹೀರುಗೊಳಿಸಲು ಈ ಎಐ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಸುಮಾರು 50 ದಕ್ಷಿಣ ದೇಶಗಳ ಉಪಸ್ಥಿತಿ ಇದರಲ್ಲಿರಲಿದೆ.

ದೆಹಲಿಯ ಭಾರತ್ ಮಂಡಪಂನಲ್ಲಿ ಎಐ ಇಂಪ್ಯಾಕ್ಟ್ ಸಮಿಟ್ ನಡೆಯಲಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಈ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಎಐ ಎಕ್ಸಿಬಿಶನ್, ಉನ್ನತ ಮಟ್ಟದ ಸಿಇಒ ಫೋರಂ, ಚರ್ಚೆಗಳು, ಉಪನ್ಯಾಸಗಳು ಇತ್ಯಾದಿ ನಾನಾ ರೀತಿಯ ಕಾರ್ಯಕ್ರಮಗಳು ಈ ಐದು ದಿನಗಳಾದ್ಯಂತ ನಡೆಯಲಿವೆ.

ಇದನ್ನೂ ಓದಿ: ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ

ಎಐನಿಂದ ಮಾನವನ ಬದುಕಿಗೆ ಯಾವ್ಯಾವ ರೀತಿಯ ಪರಿಣಾಮ ಬೀರುತ್ತದೆ, ಎಷ್ಟು ಒಳಿತು, ಎಷ್ಟು ಮಾರಕ ಎಂಬುದನ್ನು ಅರಿಯುವ ಮತ್ತು ನಿವೇದಿಸುವ ಪ್ರಯತ್ನವಾಗಲಿದೆ. ಸಮಗ್ರ ಅಭಿವೃದ್ಧಿಗೆ ಎಐ ಅನ್ನು ಹೇಗೆ ಬಳಸಬಹುದು ಎಂಬುದನ್ನು ಚರ್ಚಿಸಲಾಗುತ್ತದೆ.

ವಿಶ್ವದ ಅತ್ಯಂತ ಪ್ರಬಲ ಎಐ ಚಿಪ್​ಗಳನ್ನು ತಯಾರಿಸುವ ಎನ್​ವಿಡಿಯಾ ಕಂಪನಿಯ ಸಿಇಒ ಹುವಾಂಗ್ ಜೆನ್ಸೆನ್ ಅವರು ಈ ಸಭೆಯಲ್ಲಿ ಕಾರಣಾಂತರಗಳಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಹೇಳಲಾಗಿದೆ. ಆದರೆ, ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ಜಯ್ ಪುರಿ ನೇತೃತ್ವದ ನಿಯೋಗವೊಂದು ಸಮಿಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು, ಇಸ್ರೇಲ್ ದೇಶವು ಈ ಸಮಿಟ್​ನಲ್ಲಿ ಉಪಸ್ಥಿತಿ ಹೊಂದಿರುತ್ತದೆ.

ಎಐ ಇಂಪ್ಯಾಕ್ಟ್ ಸಮಿಟ್​ಗೆ ನೊಂದಾಯಿಸುವುದು ಹೇಗೆ?

  • ಶೃಂಗಸಭೆ ನಡೆಯುವ ಸ್ಥಳ: ದೆಹಲಿಯ ಭಾರತ್ ಮಂಡಪಂ
  • ದಿನಾಂಕ: ಫೆಬ್ರುವರಿ 16ರಿಂದ 20ರವರೆಗೆ
  • ಅಧಿಕೃತ ವೆಬ್​ಸೈಟ್: impact.indiaai.gov.in/
  • ನೊಂದಣಿಗೆ ಲಿಂಕ್: impact.indiaai.gov.in/registration

ಇದನ್ನೂ ಓದಿ: ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ

ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ರಿಜಿಸ್ಟರ್ ಮಾಡಿಕೊಂಡರೆ ಅವರಿಗೆ ಪಾಸ್ ಕೊಡಲಾಗುತ್ತದೆ. ಅಂಥವರಿಗೆ ಮಾತ್ರವೇ ಪ್ರವೇಶಾವಕಾಶ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು? – Kannada News | When Akshay Kumar slapped a man during high profile party

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ.

ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್ ಕುಮಾರ್ ಅವರು ಸ್ನೇಹಿತರ ಜೊತೆ ಭಾಗಿ ಆಗಿದ್ದರು. ಆಗ ಅಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬನು ಕಿರಿಕ್ ಶುರು ಮಾಡಿದ್ದ. ಅಕ್ಷಯ್ ಕುಮಾರ್ ಸ್ನೇಹಿತರ ಮೇಲೆ ಆ ವ್ಯಕ್ತಿ ಕೈ ಮಾಡಲು ಆರಂಭಿಸಿದ್ದ. ಅದರಿಂದ ಅಕ್ಷಯ್ ಕುಮಾರ್ ಅವರಿಗೆ ಕೋಪ ಬಂದಿತ್ತು.

ಕುಡಿದು ಜಗಳ ಮಾಡುತ್ತಿದ್ದ ಆ ವ್ಯಕ್ತಿಗೆ ಅಕ್ಷಯ್ ಕುಮಾರ್ ಅವರು ಹಲವು ಬಾರಿ ಎಚ್ಚರಿಕೆ ನೀಡಿದರು. ಎಷ್ಟು ಸಲ ವಾರ್ನಿಂಗ್ ಕೊಟ್ಟರೂ ಕೂಡ ಆತ ತನ್ನ ವರ್ತನೆ ನಿಲ್ಲಿಸಲೇ ಇಲ್ಲ. ಆಗ ಅಕ್ಷಯ್ ಕುಮಾರ್ ಅವರಿಗೆ ಪಿತ್ತ ನೆತ್ತಿಗೇರಿತು. ಜೋರಾಗಿ ಆತನ ಕೆನ್ನೆಗೆ ಬಾರಿಸಿದರು. ಕೂಡಲೇ ಅವನು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ! ಆತ ಬದುಕುತ್ತಾನೋ ಇಲ್ಲವೋ ಎಂದು ಅಕ್ಷಯ್ ಕುಮಾರ್ ಅವರಿಗೆ ಚಿಂತೆ ಶುರು ಆಯಿತು.

ಆ ಕ್ಷಣದಲ್ಲಿ ಅಕ್ಷಯ್ ಕುಮಾರ್ ಅವರಿಗೆ ಹತ್ತಾರು ಆಲೋಚನೆ ಬಂದಿತ್ತು. ಆ ಘಟನೆಯಿಂದ ತನ್ನ ಕರಿಯರ್ ಮುಗಿದೇ ಹೋಯಿತು ಎಂದು ಅವರು ಭಾವಿಸಿದ್ದರು. ಅದೃಷ್ಟವಶಾತ್, ಸ್ವಲ್ಪ ಹೊತ್ತಿನ ಬಳಿಕ ಆ ವ್ಯಕ್ತಿಗೆ ಪ್ರಜ್ಞೆ ಬಂತು. ಹಾಗಾಗಿ ಅಕ್ಷಯ್ ಕುಮಾರ್ ಬಚಾವ್ ಆದರು. ಒಂದು ವೇಳೆ ಇಂದು ಅದೇ ರೀತಿ ಜಗಳ ನಡೆದರೆ ತಾವು ಆ ರೀತಿ ಪ್ರತಿಕ್ರಿಯಿಸಲ್ಲ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು; ನಟ ಜಸ್ಟ್ ಪಾರು

ಸಿನಿಮಾ ವಿಚಾರಕ್ಕೆ ಬರೋದಾದರೆ, ಬ್ಯಾಕ್ ಟು ಬ್ಯಾಕ್ ಪ್ರಾಜೆಕ್ಟ್​​ಗಳಲ್ಲಿ ಅಕ್ಷಯ್ ಕುಮಾರ್ ಅವರು ಬ್ಯುಸಿ ಆಗಿದ್ದಾರೆ. ಅವರು ನಟಿಸಿದ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದಲ್ಲದೇ, ‘ವೆಲ್​ಕಮ್ ಟು ದಿ ಜಂಗಲ್’ ಮತ್ತು ‘ಹೈವಾನ್’ ಸಿನಿಮಾಗಳಲ್ಲೂ ಅಕ್ಷಯ್ ಕುಮಾರ್ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಮ್ಯೂನಿಕ್ ಏರ್​​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಬಳಿ ಐಡಿ ಕೇಳಿದ ಭದ್ರತಾ ಸಿಬ್ಬಂದಿ – Kannada News | Asim Munir Briefly Halted at Munich Venue After Security Sought Identification

ಮ್ಯೂನಿಕ್, ಫೆಬ್ರವರಿ 15: ಜರ್ಮನಿಯ ಮ್ಯೂನಿಕಕ್ ಏರ್​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಜರ್ಮನ್ ನಗರಕ್ಕೆ ಬಂದಿತ್ತು. ಪಾಕಿಸ್ತಾನ ಸೇನಾ ಮುಖ್ಯಸ್ಥರು ತಮ್ಮ ಗುರುತಿನ ಚೀಟಿಯನ್ನು ಮುಂಭಾಗದಲ್ಲಿ ಕಾಣುವಂತೆ ಇಡುವಂತೆ ಭದ್ರತಾ ಅಧಿಕಾರಿ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ಮೂಲದ ಸಿಂಧಿ ರಾಜಕೀಯ ಸಂಘಟನೆಯಾದ ಜೀ ಸಿಂಧ್ ಮುತ್ತಹಿದಾ ಮಹಾಜ್ ಮುನೀರ್ ಸಮ್ಮೇಳನದಲ್ಲಿ ಪಾಲ್ಗೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದೆ. ಜೆಎಸ್‌ಎಂಎಂ ಸದಸ್ಯರು ಅಲ್ಲೇ ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊನೆಗೂ ಯುರೋಪಿಯನ್ ತಂಡದ ವಿರುದ್ಧ ಗೆದ್ದ ಇಂಗ್ಲೆಂಡ್ – Kannada News | England vs European teams at T20 World Cup 2026

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಯುರೋಪಿಯನ್ ತಂಡದ ವಿರುದ್ಧ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 19.4 ಓವರ್​​ಗಳಲ್ಲಿ 152 ರನ್​​​ಗಳಿಸಿ ಆಲೌಟ್ ಆಗಿತ್ತು.

153 ರನ್​​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 18.2 ಓವರ್​​​ಗಳಲ್ಲಿ 155 ರನ್ ಬಾರಿಸಿ 5 ವಿಕೆಟ್​​​ಗಳ ಜಯ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಯುರೋಪಿಯನ್ ತಂಡಗಳ ವಿರುದ್ಧದ ತನ್ನ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.

ಟಿ20 ವಿಶ್ವಕಪ್​​​ನಲ್ಲಿ ಇಂಗ್ಲೆಂಡ್ ತಂಡವು ಒಮ್ಮೆಯೂ ಯುರೋಪಿಯನ್ ತಂಡಗಳ ವಿರುದ್ಧ ಗೆಲುವು ದಾಖಲಿಸಿರಲಿಲ್ಲ. ಈ ಹಿಂದಿನ ಪಂದ್ಯಗಳ ಫಲಿತಾಂಶ ಹೀಗಿತ್ತು…

  • 2009ರ ಟಿ20 ವಿಶ್ವಕಪ್​: ನೆದರ್​​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಂಡವು 4 ವಿಕೆಟ್​​ಗಳ ಸೋಲನುಭವಿಸಿತ್ತು.
  • 2010ರ ಟಿ20 ವಿಶ್ವಕಪ್​​​: ಐರ್ಲೆಂಡ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.
  • 2014ರ ಟಿ20 ವಿಶ್ವಕಪ್: ನೆದರ್​​ಲೆಂಡ್ಸ್ ವಿರುದ್ಧ ಇಂಗ್ಲೆಂಡ್ 45 ರನ್​​ಗಳಿಂದ ಪರಾಜಯಗೊಂಡಿತ್ತು.
  • 2022ರ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಇಂಗ್ಲೆಂಡ್ 5 ರನ್​​ಗಳಿಂದ ಸೋಲನುಭವಿಸಿತ್ತು.
  • 2024ರ ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

ಇದೀಗ ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಯುರೋಪಿಯನ್ ತಂಡದ ವಿರುದ್ಧ ಟಿ20 ವಿಶ್ವಕಪ್​​​ನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಯುರೋಪಿಯನ್ ತಂಡಗಳ ವಿರುದ್ಧದ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.

 

 

Source link

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ.

ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ ಕುಟುಂಬ ಸದಸ್ಯರ ಸಹಾಯದಿಂದ ಕತ್ತು ಹಿಸುಕಿ ಕೊಂದಿದ್ದಾನೆ. ಆಕೆಯ ಶವವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ತುಂಬಿಸಿ, ಅಪರಾಧದ ಎಲ್ಲಾ ಕುರುಹುಗಳನ್ನು ಅಳಿಸಲು ಕಮಲಾ ನಗರದ ಅವರ ಮನೆಯ ಬಳಿಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ.

ಸುಮಾರು ಒಂದು ವರ್ಷದ ಹಿಂದೆ, ಸಿಯಾ ಮತ್ತು ಸಮೀರ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಚಾಟ್​ನಿಂದ ಪ್ರಾರಂಭವಾಗಿದದ ಸ್ನೇಹ ಪ್ರೀತಿಗೆ ಪ್ರೀತಿಗೆ ತಿರುಗಿತ್ತು. ಬಳಿಕ ಅವರಿಬ್ಬರ ನಡುವೆ ಸಂಬಂಧವೂ ಕೂಡ ಇತ್ತು.
ಸಿಯಾ ಮಹಾರಾಷ್ಟ್ರದಲ್ಲಿರುವ ತನ್ನ ಮನೆಯನ್ನು ತೊರೆದು ಸಮೀರ್ ಜೊತೆ ವಾಸಿಸಲು ಸುಮಾರು ಮೂರು ತಿಂಗಳ ಹಿಂದೆ ಭೋಪಾಲ್‌ಗೆ ತೆರಳಿದರು. ತಾನು ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಅವಳು ನಂಬಿದ್ದಳು.ಆದರೆ ಸಮೀರ್ ಈಗಾಗಲೇ ವಿವಾಹಿತನಾಗಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದ. ಸಿಯಾ ಕಮಲಾ ನಗರದ ತನ್ನ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತಿದ್ದಂತೆ ನಿತ್ಯ ಜಗಳಗಳು ಶುರುವಾಗಿದ್ದವು.

ಮತ್ತಷ್ಟು ಓದಿ: ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್​ನಲ್ಲಿ ಮಹಿಳೆಯ ಶವ ಪತ್ತೆ

ಸಿಯಾ ಮತ್ತು ಸಮೀರ್ ಅವರ ಪತ್ನಿಯ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು.ಅದು ಅಕ್ಕಪಕ್ಕದ ಮನೆಯವರೆಗೂ ಹೋಗಿತ್ತು. ಸಮೀರ್ ಸಿಯಾ ಅವರಿಂದ ಹಲವಾರು ಸಂಗತಿಗಳನ್ನು ಮರೆಮಾಡಿದ್ದ ಮತ್ತು ಕೌಟುಂಬಿಕ ಅಶಾಂತಿ ಹೆಚ್ಚಾಗತೊಡಗಿತ್ತು.

ತನಿಖಾಧಿಕಾರಿಗಳು ಹೇಳುವಂತೆ ಸಿಯಾ ಸಮೀರ್ ಮೇಲೆ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಅವನು ನಿರಾಕರಿಸಿದರೆ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಳು .ಕಾನೂನು ಕ್ರಮ ಜರುಗಿಸುವಂತೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ, ಸಿಯಾ ಮತ್ತು ಸಮೀರ್ ನಡುವೆ ಮತ್ತೊಂದು ಬಿಸಿ ವಾಗ್ವಾದ ನಡೆಯಿತು. ಪೊಲೀಸರ ಪ್ರಕಾರ, ಕೋಪದ ಭರದಲ್ಲಿ ಸಮೀರ್ ಸಿಯಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಸಾಕ್ಷ್ಯಗಳನ್ನು ನಾಶಮಾಡಲು ಸಮೀರ್ ತನ್ನ ಸಹೋದರ, ತಾಯಿ ಮತ್ತು ಸಹೋದರಿಯಿಂದ ಸಹಾಯ ಪಡೆದಿದ್ದ ಎನ್ನಲಾಗಿದೆ. ಮೃತದೇಹವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ಮುಚ್ಚಿ ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿಯ ನೆಪದಲ್ಲಿ ಅವರ ಮನೆಯ ಸಮೀಪವಿರುವ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದ.

ಗುರುವಾರ ಸಂಜೆ, ಹತ್ತಿರದಲ್ಲಿ ಆಟವಾಡುತ್ತಿದ್ದ ಮಕ್ಕಳು ಟ್ಯಾಂಕ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ್ದರು. ಒಳಗೆ ಕಬ್ಬಿಣದ ಪೆಟ್ಟಿಗೆ ತೇಲುತ್ತಿರುವುದನ್ನು ನಿವಾಸಿಗಳು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪಿ ಟ್ಯಾಂಕ್ ಅನ್ನು ಹುಡುಕಿದಾಗ, ಪೆಟ್ಟಿಗೆಯೊಳಗೆ ಸಿಯಾಳ ಕೊಳೆತ ದೇಹವು ಪತ್ತೆಯಾಗಿತ್ತು.

ಸಮೀರ್ ತಲೆಮರೆಸಿಕೊಂಡಿದ್ದರೂ, ಶವವನ್ನು ವಿಲೇವಾರಿ ಮಾಡಲು ಸಹಾಯ ಮಾಡಿದ ಆರೋಪದ ಮೇಲೆ ಪೊಲೀಸರು ಆತನ ಸಹೋದರ, ತಾಯಿ ಮತ್ತು ಸಹೋದರಿಯನ್ನು ಬಂಧಿಸಿದ್ದಾರೆ. ಸಮೀರ್ ಅವರ ಪತ್ನಿ ಕೂಡ ನಿಗಾದಲ್ಲಿದ್ದಾರೆ. ಅಪರಾಧದ ಬಗ್ಗೆ ಹೆಚ್ಚಿನ ಕುಟುಂಬ ಸದಸ್ಯರಿಗೆ ಮಾಹಿತಿ ಇದ್ದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಸಿಯಾ ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಮೂರು ಬಾರಿ ಮದುವೆಯಾಗಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ.

ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್ ಕಥೆ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾದಲ್ಲಿ ಇದೆ. ಮೂವರು ಸ್ನೇಹಿತರು ರೆಸಾರ್ಟ್​​ಗೆ ಹೋದಾಗ ಅವರಿಗೆ ದೆವ್ವದ ಕಾಟ ಶುರು ಆಗುತ್ತದೆ. ಅಲ್ಲಿಂದ ಅವರೆಲ್ಲ ಹೇಗೆ ಹೊರಬಂದರು ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಹಾರರ್ ಜೊತೆಗೆ ಒಂದು ಲವ್ ಸ್ಟೋರಿ ಕೂಡ ಸಾಗುತ್ತದೆ. ಕೇರಳ, ಚೆನ್ನೈ ಮತ್ತು ಬೆಂಗಳೂರಲ್ಲಿ ಚಿತ್ರೀಕರಣ‌ ನಡೆಸಲಾಗಿದೆ. ರಾತ್ರಿ ವೇಳೆ ಚಿತ್ರೀಕರಣ ಮಾಡುವಾಗ ರೆಸಾರ್ಟ್​​ನಲ್ಲಿ ನಿಜವಾದ ಹಾರರ್ ಫೀಲ್ ಆಯ್ತು ಎಂದು ನಾಯಕಿ ಸಂಹಿತಾ ಹೇಳಿದ್ದಾರೆ.

ಸಂಹಿತಾ ವಿನ್ಯಾ ಅವರು 75ಕ್ಕೂ ಅಧಿಕ ಫ್ಯಾಷನ್ ಶೋಗಳಲ್ಲಿ ಶೋಸ್ಟಾಪರ್ ಆಗಿ ಭಾಗವಹಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದಾರೆ. ಇದೇ ಮೊದಲ ಬಾರಿಗೆ ಸಂಹಿತಾ ವಿನ್ಯಾ ಅವರು ಹಾರರ್, ಥ್ರಿಲ್ಲರ್ ಸಿನಿಮಾಗೆ ನಾಯಕಿ ಆಗಿದ್ದಾರೆ.

‘ಮೆಜೆಸ್ಟಿಕ್ 2′, ‘ಆಯುಧ’, ‘ಸ್ವಾಭಿಮಾನಿ’, ‘ಯಾಕೋ ಬೇಜಾರು’, ‘ವಿದೂಷಕ’, ‘ಅಮೃತಘಳಿಗೆ’, ‘ಜಿಎಸ್​ಟಿ’, ‘ಲಂಗೋಟಿ ಮ್ಯಾನ್’, ‘ಯೂ ಆರ್ ಮೈ ಹೀರೋ’ ಮುಂತಾದ ಸಿನಿಮಾಗಳಲ್ಲಿ ಕೂಡ ಸಂಹಿತಾ ವಿನ್ಯಾ ಅವರು ಅಭಿನಯಿಸಿದ್ದಾರೆ. ಈವರೆಗೂ 18ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಹಾರರ್ ಪ್ರಿಯರಿಗೆ ಸವಾಲು; ನೈಜ ಘಟನೆ ಆಧರಿಸಿದ ಈ ಸರಣಿ ನೋಡಲು ಎರಡು ಗುಂಡಿಗೆ ಬೇಕು

ಈಗ ಬಿಡುಗಡೆಗೆ ಸಿದ್ಧವಾಗಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾದಲ್ಲಿ ಸಿಂಟೊ ಜೇಕಬ್ ಅವರು ಹೀರೋ ಆಗಿ ನಟಿಸಿದ್ದಾರೆ. ಪ್ರಿಯಾ ಪವನ್, ದಿವ್ಯ ಜಸ್ಮಿತಾ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ರಾಜೇಶ್ ಮೋಹನ್ ಮತ್ತು ಗಣೇಶ್ವರನ್ ಅವರು ಸಂಗೀತ ನೀಡಿದ್ದಾರೆ. ಸಾಧಿಕ್ ಕಬೀರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ತಮಿಳಿನಲ್ಲಿ ‘ಮಿಕ್ಸಿಂಗ್ ಕಾದಲ್’ ಎಂಬ ಶೀರ್ಷಿಕೆಯಲ್ಲಿ ಈ ಸಿನಿಮಾ ತಯಾರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada

ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ.

ಸಂತ್ರಸ್ತೆ ಪ್ರೀತಿಗೆ ಫೇಸ್​​ಬುಕ್​​ನಲ್ಲಿ ಪರಿಚಯವಾಗಿದ್ದ ಮನೀಶ್​​, ಬ್ಲ್ಯಾಕ್​​ಮೇಲ್​​ ಮಾಡಿ ಆಕೆಯನ್ನು ಮದುವೆ ಆಗಿದ್ದ ಎಂದು ದೂರಲಾಗಿದೆ. ಮದುವೆಗೆ ಮೂರು ದಿನ ಇರುವಾಗ ಹಣ ಇಲ್ಲ ಎಂದು ಈತ ಆತ್ಮಹತ್ಯೆ ನಾಟಕವಾಡಿದ್ದ. ಹೀಗಾಗಿ ಮದುವೆಯ ಎಲ್ಲ ಖರ್ಚನ್ನು ತಾವೇ ನೋಡಿಕೊಂಡು ಪ್ರೀತಿ ಪೋಷಕರು ವಿವಾಹ ಕಾರ್ಯ ನಡೆಸಿದ್ದರು. ಮದುವೆಯಾದ ಬಳಿಕ ಎರಡು ಲಕ್ಷ ಹಣ ಕೊಟ್ಟು ವಿದೇಶದಲ್ಲಿ ಮನೀಶ್​​ಗೆ ಕೆಲಸ ಕೊಡಿಸಲು ಕೂಡ ಪ್ರೀತಿ ಸಹಾಯ ಮಾಡಿದ್ದರು. ಆದ್ರೆ ದುಬೈಗೆ ಹೋದ ಈತ ಬಹರೇನ್​​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿ ಶುರುಮಾಡಿದ್ದಾನೆ. ವಿಚಾರ ತಿಳಿದು ಈತನ ಇತಿಹಾಸವನ್ನು ಪ್ರೀತಿ ಕೆದಕಿದ್ದು, ಈ ವೇಳೆ ಮನೀಶ್​​ನ ನಿಜರೂಪ ಬಯಲಾಗಿದೆ.

ಇದನ್ನೂ ಓದಿ: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಮದುವೆಗೂ ಮುನ್ನ ಹಲವರ ಜೊತೆ ಲವ್ ಅಫೇರ್​​

ಪ್ರೀತಿ ಜೊತೆ ಮದುವೆಗೂ ಮುನ್ನ ಹಲವು ಯುವತಿಯರ ಜೊತೆ ಲವ್ ಅಫೇರ್​​ ಹೊಂದಿದ್ದ ಮನೀಶ್​​, ಅವರ ಬಳಿ ಕೂಡ ಹಣ ಪಡೆದು ಮೋಸ ಮಾಡಿದ್ದ. ಈ ವಿಚಾರವನ್ನು ಆ ಯುವತಿಯರೇ ಪ್ರೀತಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಹಣ ವಾಪಾಸ್ ಕೇಳಿದ್ರೆ ಎಲ್ಲ ಯುವತಿಯರ ಬಳಿ ಒಂದೇ ನಾಟಕ ಆಡಿದ್ದ ಆರೋಪಿ, ತನಗೆ ಬ್ರೈನ್​ ಟ್ಯೂಮರ್ ಇದೆ ಎಂದು ಹೇಳಿ ಹಣ ಕೊಡದೇ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದ. ಟಿಕ್ ಟಾಕ್ ಮಾಡಿ ಯುವತಿಯರಿಗೆ ಗಾಳ ಹಾಕುವ ಮನೀಶ್ ನಡೆತೆಯಿಂದ ಬೇಸತ್ತ ಪತ್ನಿ ಪ್ರೀತಿ, ಇಂತಹ ಗಂಡ ಬೇಡ. ಈತನ ನಂಬಿ ಮತ್ತೆ ಯಾರು ಮೋಸ ಹೋಗಬಾರದು ಎಂದು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ತಮನ್ನಾ – Kannada News | Uttar Pradesh: My Vow Was Fulfilled, Tamanna Malik Explains Kanwar Yatra Participation

ಸಂಭಾಲ್, ಫೆಬ್ರವರಿ 15: ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್​​ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,460 ರೂ
  • ಚೆನ್ನೈ: 14,560 ರೂ
  • ಮುಂಬೈ: 14,460 ರೂ
  • ದೆಹಲಿ: 14,475 ರೂ
  • ಕೋಲ್ಕತಾ: 14,460 ರೂ
  • ಕೇರಳ: 14,460 ರೂ
  • ಅಹ್ಮದಾಬಾದ್: 14,465 ರೂ
  • ಜೈಪುರ್: 14,475 ರೂ
  • ಲಕ್ನೋ: 14,475 ರೂ
  • ಭುವನೇಶ್ವರ್: 14,460 ರೂ

ಇದನ್ನೂ ಓದಿ: ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 595 ರಿಂಗಿಟ್ (13,856 ರುಪಾಯಿ)
  • ದುಬೈ: 560 ಡಿರಾಮ್ (13,806 ರುಪಾಯಿ)
  • ಅಮೆರಿಕ: 155.50 ಡಾಲರ್ (14,081 ರುಪಾಯಿ)
  • ಸಿಂಗಾಪುರ: 195.90 ಸಿಂಗಾಪುರ್ ಡಾಲರ್ (14,054 ರುಪಾಯಿ)
  • ಕತಾರ್: 553.50 ಕತಾರಿ ರಿಯಾಲ್ (13,752 ರೂ)
  • ಸೌದಿ ಅರೇಬಿಯಾ: 568 ಸೌದಿ ರಿಯಾಲ್ (13,715 ರುಪಾಯಿ)
  • ಓಮನ್: 59.20 ಒಮಾನಿ ರಿಯಾಲ್ (13,925 ರುಪಾಯಿ)
  • ಕುವೇತ್: 45.85 ಕುವೇತಿ ದಿನಾರ್ (13,606 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ.

​ಮೇಷ:

ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ.

ವೃಷಭ:

ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ ಕೆಂಗಣ್ಣು ಈಗ ಪ್ರೀತಿಯಾಗಿ ಬದಲಾಗಲಿದೆ. ಹೊಸ ಉದ್ಯಮ ಆರಂಭಿಸಲು ಈ ವಾರಕ್ಕಿಂತ ಶ್ರೇಷ್ಠ ಸಮಯ ಮತ್ತೊಂದಿಲ್ಲ.

​ಮಿಥುನ:

​ಭಾಗ್ಯಸ್ಥಾನದಲ್ಲಿ ಗ್ರಹಗಳ ನರ್ತನ. ಅತೀಂದ್ರಿಯ ಶಕ್ತಿ ಅಥವಾ ದೈವಬಲ ನಿಮ್ಮನ್ನು ಕಾಪಾಡಲಿದೆ. ಸ್ಥಗಿತಗೊಂಡಿದ್ದ ವಿದೇಶಿ ಪ್ರಯಾಣ ಅಥವಾ ಉನ್ನತ ಶಿಕ್ಷಣದ ಹಾದಿ ಈಗ ಸುಗಮವಾಗಲಿದೆ. ಅದೃಷ್ಟದ ಬಾಗಿಲು ತೆರೆಯುವ ವಾರವಿದು.

ಕರ್ಕಾಟಕ:

​ಅಷ್ಟಮದಲ್ಲಿ ಸೂರ್ಯ-ಶನಿ, ಮೃತ್ಯುಂಜಯ ಜಪದ ಅಗತ್ಯ. ಸಂಕಷ್ಟಗಳ ಸುಳಿಯಿದ್ದರೂ ಅನಿರೀಕ್ಷಿತ ವಿಮೆ ಅಥವಾ ಪಿತ್ರಾರ್ಜಿತ ಆಸ್ತಿಯಿಂದ ದೊಡ್ಡ ಮೊತ್ತದ ಹಣ ಕೈ ಸೇರಲಿದೆ. ಗುಪ್ತ ಶತ್ರುಗಳು ತಾವಾಗಿಯೇ ಬಲೆಗೆ ಬೀಳುವರು.

ಸಿಂಹ:

​ಸಪ್ತಮ ಭಾವದಲ್ಲಿ ರಾಶ್ಯಾಧಿಪತಿ, ಸೌಭಾಗ್ಯ ಯೋಗ. ದಾಂಪತ್ಯದ ಬಿರುಕು ಮಾಯವಾಗಿ ಪ್ರೇಮ ಚಿಗುರಲಿದೆ. ಸಾರ್ವಜನಿಕ ಜೀವನದಲ್ಲಿ ನಿಮ್ಮ ವರ್ಚಸ್ಸು ಸೂರ್ಯನಂತೆ ಬೆಳಗಲಿದೆ. ಹೊಸ ಒಪ್ಪಂದಗಳು ನಿಮ್ಮ ಬದುಕಿನ ದಿಕ್ಕನ್ನೇ ಬದಲಿಸಲಿವೆ.

ಕನ್ಯಾ:

ಷಷ್ಠ ಭಾವದಲ್ಲಿ ಶತ್ರುನಾಶಕ ಯೋಗ. ಎದುರಾಳಿಗಳು ನಿಮ್ಮ ಮುಂದೆ ಮಂಡಿಯೂರುವರು. ಸಾಲದ ಸುಳಿಯಿಂದ ಮುಕ್ತಿ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ಸಂಜೀವಿನಿಯಂತೆ ಕೆಲಸ ಮಾಡಲಿದೆ.

ತುಲಾ:

​ಪಂಚಮದಲ್ಲಿ ಸೃಜನಶೀಲತೆಯ ಉತ್ತುಂಗ. ನಿಮ್ಮ ಬುದ್ಧಿವಂತಿಕೆಗೆ ದೊಡ್ಡ ವೇದಿಕೆ ಸಿಗಲಿದೆ. ಪ್ರೇಮ ವ್ಯವಹಾರಗಳು ಹಸೆಮಣೆಯವರೆಗೆ ಸಾಗುವ ಸಂಕೇತಗಳಿವೆ. ಮಕ್ಕಳಿಂದ ಕುಲಕ್ಕೆ ಕೀರ್ತಿ ಬರಲಿದೆ.

​ವೃಶ್ಚಿಕ:

ಚತುರ್ಥದಲ್ಲಿ ಸುಖ ಸೌಕರ್ಯಗಳ ವೃದ್ಧಿ. ನವ ಗೃಹ ನಿರ್ಮಾಣ ಅಥವಾ ವಾಹನ ಯೋಗ ಬಲವಾಗಿದೆ. ತಾಯಿಯ ಕಡೆಯಿಂದ ಆಶೀರ್ವಾದದ ರೂಪದಲ್ಲಿ ಆಸ್ತಿ ಲಭಿಸಲಿದೆ. ಎದೆಯಲ್ಲಿದ್ದ ಆತಂಕ ದೂರವಾಗಿ ನೆಮ್ಮದಿ ನೆಲೆಸಲಿದೆ.

ಧನುಸ್ಸು:

ಈ ವಾರ ​ತೃತೀಯ ಭಾವದಲ್ಲಿ ಪರಾಕ್ರಮದ ಅಲೆ. ನಿಮ್ಮ ಮಾತು ಈಗ ಮಂತ್ರವಾಗಲಿದೆ. ಸೋದರರಿಂದ ಬೆಂಬಲ ಸಿಕ್ಕಿ ಕಠಿಣ ಕೆಲಸಗಳು ಸುಲಭವಾಗಲಿವೆ. ಕಿರು ಪ್ರವಾಸಗಳು ದೊಡ್ಡ ಮಟ್ಟದ ವ್ಯವಹಾರಕ್ಕೆ ನಾಂದಿ ಹಾಡಲಿವೆ.

ಮಕರ:

ದ್ವಿತೀಯದಲ್ಲಿ ಧನ ಭಂಡಾರ ತುಂಬುವ ಕಾಲ. ಕುಬೇರನ ಕೃಪೆ ನಿಮ್ಮ ಮೇಲಿರಲಿದೆ. ಕಠಿಣ ಶ್ರಮಕ್ಕೆ ತಕ್ಕಂತೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಕೌಟುಂಬಿಕ ಕಲಹಗಳು ಮಾತುಕತೆಯ ಮೂಲಕ ಶಾಂತವಾಗಲಿವೆ.

​ಕುಂಭ:

ಈ ವಾರ ಜನ್ಮ ರಾಶಿಯಲ್ಲಿ ಶನಿ-ಸೂರ್ಯ ಯುತಿ, ಪರೀಕ್ಷೆಯ ಕಾಲ. ಬೆಂಕಿಯಲ್ಲಿ ಬೆಂದ ಚಿನ್ನದಂತೆ ನೀವು ಪುಟಕ್ಕೇಳುವಿರಿ. ದೊಡ್ಡ ಜವಾಬ್ದಾರಿಗಳು ಹೆಗಲೇರಲಿವೆ. ಸಮಾಜದಲ್ಲಿ ಹೊಸ ಗುರುತು ಮತ್ತು ಗೌರವ ಪ್ರಾಪ್ತಿಯಾಗಲಿದೆ.

​ಮೀನ:

ದ್ವಾದಶದಲ್ಲಿ ಅಧ್ಯಾತ್ಮ ಮತ್ತು ಮುಕ್ತಿ. ಭೌತಿಕ ಸುಖಕ್ಕಿಂತ ಮಾನಸಿಕ ಶಾಂತಿಗೆ ಆದ್ಯತೆ ನೀಡುವಿರಿ. ದೂರದ ದೇಶಗಳಿಂದ ಶುಭ ವಾರ್ತೆ ಬರಲಿದೆ. ದಾನದ ಮೂಲಕ ನಿಮ್ಮ ಪಾಪಕರ್ಮಗಳು ಕರಗಿ ಪುಣ್ಯ ಲಭಿಸಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

Exit mobile version