ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಕಾಯಿಲೆಗಳು ಲಕ್ಷಣಗಳಿಲ್ಲದೆ ಕಾಣಿಸಿಕೊಳ್ಳುತ್ತದೆ?

ತಜ್ಞರ ಪ್ರಕಾರ, ಮಧುಮೇಹ, ಹೈ ಬ್ಲಡ್ ಪ್ರೆಶರ್, ಹೃದಯ ಸಂಬಂಧಿತ ಸಮಸ್ಯೆಗಳು, ಥೈರಾಯ್ಡ್ ಅಸಮತೋಲನ ಮತ್ತು ಕೆಲವು ಕ್ಯಾನ್ಸರ್‌ಗಳು ಆರಂಭಿಕ ಹಂತದಲ್ಲಿ ಲಕ್ಷಣಗಳಿಲ್ಲದೆ ಕಾಣಿಸಬಹುದು. ಇವು ನಿಧಾನವಾಗಿ ದೇಹದ ಅಂಗಾಂಗಗಳನ್ನು ಹಾನಿಗೊಳಿಸುತ್ತವೆ. ಹಲವರು ಸಾಮಾನ್ಯ ದಣಿವು ಅಥವಾ ದುರ್ಬಲತೆಯನ್ನು ನಿರ್ಲಕ್ಷಿಸುವುದರಿಂದ ಸಮಸ್ಯೆ ಗಂಭೀರವಾಗುವ ಸಾಧ್ಯತೆ ಇರುತ್ತದೆ.

ಲಕ್ಷಣಗಳು ಏಕೆ ತಕ್ಷಣ ಕಾಣಿಸಿಕೊಳ್ಳುವುದಿಲ್ಲ?

ಕೆಲವು ಕಾಯಿಲೆಗಳು ನಿಧಾನವಾಗಿ ಬೆಳೆಯುವ ಕಾರಣದಿಂದ ತಕ್ಷಣ ಲಕ್ಷಣಗಳು ಗೋಚರಿಸುವುದಿಲ್ಲ. ದೇಹವು ಒಳಗಿನ ಬದಲಾವಣೆಗಳನ್ನು ಕೆಲ ಕಾಲ ಸಮತೋಲನದಲ್ಲಿಡಲು ಪ್ರಯತ್ನಿಸುತ್ತದೆ. ಇದರ ಪರಿಣಾಮವಾಗಿ ವ್ಯಕ್ತಿಗೆ ಯಾವುದೇ ತೊಂದರೆ ಅನುಭವವಾಗುವುದಿಲ್ಲ. ಜೊತೆಗೆ, ಆರಂಭಿಕ ಲಕ್ಷಣಗಳು ಬಹಳ ಸಣ್ಣದಾಗಿರುವುದರಿಂದ ಅವನ್ನು ಸಾಮಾನ್ಯವೆಂದು ನಿರ್ಲಕ್ಷಿಸಲಾಗುತ್ತದೆ.

ಇದನ್ನೂ ಓದಿ: ಇದು ಸೈಲೆಂಟ್ ಕಿಲ್ಲರ್, ಸ್ವಲ್ಪ ಎಚ್ಚರ ತಪ್ಪಿದರು ಪ್ರಾಣ ಹೋಗುವುದು ಗ್ಯಾರಂಟಿ

ಮುನ್ನೆಚ್ಚರಿಕೆ ಹೇಗೆ ವಹಿಸಬೇಕು?

ಇಂತಹ ಕಾಯಿಲೆಗಳನ್ನು ತಡೆಗಟ್ಟಲು ನಿಯಮಿತ ಆರೋಗ್ಯ ತಪಾಸಣೆ ಬಹಳ ಮುಖ್ಯ. ವರ್ಷಕ್ಕೊಮ್ಮೆ ಅಥವಾ ವೈದ್ಯರ ಸಲಹೆಯಂತೆ ಚೆಕ್‌ಅಪ್ ಮಾಡಿಸಿಕೊಳ್ಳುವುದು ಉತ್ತಮ. ಸಮತೋಲನಯುತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿಯಂತ್ರಣ ಆರೋಗ್ಯ ಕಾಪಾಡಲು ಸಹಕಾರಿ. ಹಾಗಾಗಿ ದೇಹದಲ್ಲಿ ಸಣ್ಣ ಬದಲಾವಣೆಗಳನ್ನೂ ನಿರ್ಲಕ್ಷಿಸಬಾರದು. ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಸಮಯಕ್ಕೆ ಸರಿಯಾಗಿ ಕಾಯಿಲೆ ಪತ್ತೆ ಮಾಡಿದರೆ ಚಿಕಿತ್ಸೆ ಸುಲಭವಾಗುತ್ತದೆ ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ? – Kannada News | Thiklu Rama Kannada movie controversy Team likely to change title

ಸಿನಿಮಾದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳು ಇದ್ದರೂ ತಕ್ಷಣ ವಿವಾದ (Controversy) ಸೃಷ್ಟಿಯಾಗುವ ಕಾಲವಿದು. ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈಗ ‘ತಿಕ್ಲು ರಾಮ’ (Thiklu Rama) ಸಿನಿಮಾದ ಟೈಟಲ್ ಕೂಡ ವಿವಾದಕ್ಕೆ ಒಳಗಾಗಿದೆ. ಸಾಹಿತಿ, ಗಾಯಕ, ಸಂಗೀತ ಸಂಯೋಜಕ ಮಂಜುಕವಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಶೇಕಡ 40ರಷ್ಟು ಮುಗಿದಿದೆ. ಆದರೆ ಈಗ ಟೈಟಲ್ ಬದಲಾವಣೆ ಮಾಡಬೇಕು ಎಂದು ದೂರು ನೀಡಲಾಗಿದೆ.

‘ತಿಕ್ಲು ರಾಮ’ ಸಿನಿಮಾಗೆ ಡಾ. ರಾಜ್‌ವೀರ್ ಅವರು ಕಥೆ ಬರೆದಿದ್ದಾರೆ. ಆ ಪಾತ್ರದಲ್ಲಿ ಅವರೇ ನಟಿಸುತ್ತಿದ್ದಾರೆ. ರಾಮನವಮಿ ಪ್ರಯುಕ್ತ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗಿತ್ತು. ಆದರೆ ಸಿನಿಮಾದ ಶೀರ್ಷಿಕೆ ಸರಿಯಿಲ್ಲವೆಂದು ಹಿಂದೂಪರ ಸಂಘಟನೆಯ ಕಾರ್ಯಕರ್ತ ಗಿರೀಶ್ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿ, ಚಿತ್ರದ ಶೀರ್ಷಿಕೆ ಬದಲಾವಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈ ವಿಷಯದ ಬಗ್ಗೆ ಚಿತ್ರತಂಡದವರು ಮಾತನಾಡಿದ್ದಾರೆ. ‘ರಾಮ ಮತ್ತು ಹನುಮನ ಹೆಸರಿಗೆ ಧಕ್ಕೆ ಬರುವಂತೆ ಇಲ್ಲಿಯವರೆಗೂ ಯಾವುದೇ ಕೆಲಸವನ್ನು ಮಾಡಿಲ್ಲ, ಮಾಡುವುದೂ ಇಲ್ಲ. ಟೈಟಲ್ ಬಗ್ಗೆ ಆಕ್ಷೇಪ ಕಂಡುಬಂದಲ್ಲಿ, ಅದನ್ನು ಸರಿಪಡಿಸಿಕೊಳ್ಳುವುದಾಗಿ ನಿರ್ಮಾಪಕಿ ಶ್ರುತಿ ಜಿ.ಬಿ. ಮತ್ತು ನಿರ್ದೇಶಕ ಮಂಜುಕವಿ ಸ್ಪಷ್ಟನೆ ನೀಡಿದ್ದಾರೆ. ಒಂದು ವೇಳೆ ರಾಮ, ಹನುಮನ ಅವಹೇಳನ ದೃಶ್ಯಗಳು ಇದ್ದಲ್ಲಿ ಅದನ್ನು ತೆಗೆದು ಹಾಕಲಾಗುವುದು’ ಎಂದು ಡಾ. ರಾಜ್‌ವೀರ್ ಹೇಳಿದ್ದಾರೆ.

‘ತಿಕ್ಲು ರಾಮ’ ಒಂದು ಪರಿಸರ ಪ್ರೇಮಿ, ಹೃದಯ ಸ್ಪರ್ಶಿ ಕಾದಂಬರಿ ಆಗಿದೆ. ಇದನ್ನು ಓದಿದ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂಚು ಚಿತ್ರತಂಡ ತಿಳಿಸಿದೆ. ಸಿನಿಮಾದಲ್ಲಿ ಉತ್ತಮವಾದ ಸಂದೇಶಗಳು ಇರಲಿದೆ. ತಿಕ್ಲುರಾಮ ಸಾಮಾಜಿಕ ಕಳಕಳಿಯ ಕೆಲಸದಲ್ಲಿ ತೊಡಗಿಕೊಂಡು, ಪರಿಸರ ಕಾಪಾಡುತ್ತಾ, ಜೀವನ ನಡೆಸುತ್ತಿರುವಾಗ ಆತನ ಬದುಕಲ್ಲಿ ಏನೆಲ್ಲಾ ಆಗುಹೋಗುಗಳು ಆಗುತ್ತದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ

ಶ್ರೀರಾಮನಿಗೆ ಅವಮಾನ ಆಗಬಾರದು ಹಾಗೂ ಹಿಂದೂಗಳ ಭಾವನೆಗೆ ಧಕ್ಕೆ ತರಬಾರದೆಂಬ ಉದ್ದೇಶದಿಂದ ‘ತಿಕ್ಲು ರಾಮ’ ಶೀರ್ಷಿಕೆಯನ್ನು ಬದಲಾಯಿಸಲು ಸೂಚಿಸಲಾಗಿದೆ. ಅದರ ಬದಲು ಬೇರೆ ಯಾವ ಹೆಸರು ಇಡಲಾಗುವುದು ಎಂಬ ವಿಷಯವನ್ನು ಮುಂದಿನ ದಿನಗಳಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಲಾಗುವುದು ಎಂದು ಡಾ. ರಾಜ್‌ವೀರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿನು ಮನಸು ಅವರ ಹಿನ್ನಲೆ ಸಂಗೀತ, ರಾಜ್ ಕಡೂರು-ಭರತ್ ಅವರ ಛಾಯಾಗ್ರಹಣ, ಅಲ್ಟಿಮೇಟ್ ಶಿವು-ಮಾಸ್ ಮಾದ ಅವರ ಸಾಹಸ ನಿರ್ದೇಶನ, ಜಗ್ಗು ಅವರ ಕೊರಿಯೋಗ್ರಫಿ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹತ್ತು ಕೋಟಿ ರೂ ಹಣ ಸೇರಿಸಲು ಎಷ್ಟು ಸಮಯ ಮತ್ತು ಹೂಡಿಕೆ ಬೇಕು? ಇಲ್ಲಿದೆ ಡೀಟೇಲ್ಸ್ – Kannada News | To build Rs 10 crore corpus before retirement, know how much to invest and required timeframe

ನಿವೃತ್ತಿ ಎಂದರೆ ದುಡಿಮೆ ನಿಲ್ಲಿಸುವ ಸಮಯ. ಮನುಷ್ಯನ ದೈಹಿಕ ಬಲ ಮತ್ತು ಮನೋಬಲ ಇರುವವರೆಗೂ ದುಡಿಯುತ್ತಿರಬಹುದು. ನಿವೃತ್ತಿಯಷ್ಟರಲ್ಲಿ (retirement) ಮನುಷ್ಯನ ಆರ್ಥಿಕ ಭದ್ರತೆ (financial stability) ಉತ್ತಮವಾಗಿರುವುದು ಅಗತ್ಯ. ದುಡಿಮೆ ಇಲ್ಲದೆಯೇ ಬದುಕುವ ಹಣಕಾಸು ಬಲ ಇರಬೇಕು. ಆದರೆ, ಎಷ್ಟು ಹಣ ಬೇಕು ಎನ್ನುವುದು ಎಲ್ಲರಲ್ಲೂ ಇರುವ ಗೊಂದಲ.

ಇವತ್ತಿನ ಬೆಲೆ ಮಟ್ಟಕ್ಕೆ ಈಗ ನಿವೃತ್ತರಾಗುವವರಿಗೆ ಕನಿಷ್ಠ ಒಂದು ಕೋಟಿಯಾದರೂ ಬೇಕು. ಈ ಒಂದು ಕೋಟಿ ರೂ ಮುಂದಿನ 30 ವರ್ಷದಲ್ಲಿ ಹೊಂದುವ ಮೌಲ್ಯ ಸುಮಾರು 8 ಕೋಟಿ ರೂ ಇರಬಹುದು. ಅಂದರೆ, 30 ವರ್ಷದ ನಂತರ ನಿವೃತ್ತರಾಗುವವರು 8 ಕೋಟಿ ರೂ ಹೊಂದಿದರೆ ಅದು ಇವತ್ತಿನ 1 ಕೋಟಿ ರೂಗೆ ಸಮ. ಬೆಲೆ ಏರಿಕೆ, ತಕ್ಕಮಟ್ಟಿಗಿನ ಜೀವನ ಮಟ್ಟ ಬೇಕೆಂದರೆ ನಿವೃತ್ತಿಯ ವೇಳೆ 10 ಕೋಟಿ ರೂ ಇರುವುದು ಅಗತ್ಯ. ಈ 10 ಕೋಟಿ ರೂ ಸಂಪಾದಿಸಲು ಎಷ್ಟು ವರ್ಷ ಬೇಕು, ಎಷ್ಟು ಹೂಡಿಕೆ ಬೇಕು ಎನ್ನುವ ಲೆಕ್ಕಾಚಾರ ಇಲ್ಲಿದೆ…

ಇದನ್ನೂ ಓದಿ: ಹೂಡಿಕೆದಾರರನ್ನು ಸೆಳೆಯುತ್ತಿವೆ ವ್ಯಾಲ್ಯೂ ಮ್ಯೂಚುವಲ್ ಫಂಡ್​ಗಳು; ಏನಿವುಗಳ ವಿಶೇಷತೆ?

10 ಕೋಟಿ ರೂ ಕಾರ್ಪಸ್ ನಿರ್ಮಿಸುವ ಲೆಕ್ಕಾಚಾರ

ಶೇ. 12ರಷ್ಟು ವಾರ್ಷಿಕ ರಿಟರ್ನ್ ಕೊಡಬಹುದೆಂದು ನಿರೀಕ್ಷಿಸಬಹುದಾದ ಮ್ಯೂಚುವಲ್ ಫಂಡ್​ಗಳಲ್ಲಿ ಎಸ್​ಐಪಿ ಮಾಡುವುದು ಹೂಡಿಕೆಗೆ ಬೆಸ್ಟ್ ವಿಧಾನ. ನೀವು ತಿಂಗಳಿಗೆ 10,000 ರೂ ಎಸ್​ಐಪಿಯಲ್ಲಿ ಹಣ ತೊಡಗಿಸಿದರೆ ಅದು 10 ಕೋಟಿ ರೂ ಆಗಿ ಬೆಳೆಯಲು ಸುಮಾರು 39 ವರ್ಷ ಆಗುತ್ತದೆ.

ಅದೇ ನೀವು ತಿಂಗಳಿಗೆ 50,000 ರೂನಂತೆ ಹೂಡಿಕೆ ಮಾಡಿದರೆ ಅದು 10 ಕೋಟಿ ರೂ ಕಾರ್ಪಸ್ ಆಗಿ ಬೆಳೆಯಲು 25 ವರ್ಷ ಬೇಕಾಗುತ್ತದೆ. ಒಂದು ಲಕ್ಷ ರೂ ಎಸ್​ಐಪಿಯಿಂದ 20 ವರ್ಷದಲ್ಲಿ 10 ಕೋಟಿ ರೂ ನಿರ್ಮಿಸಬಹುದು. ನಿಮ್ಮ ದುಡಿಮೆಯ ಅವಧಿ ಎಷ್ಟಿದೆ ನೋಡಿಕೊಂಡು ಅದರ ಪ್ರಕಾರ ಹೂಡಿಕೆ ಮಾಡುತ್ತಾ ಹೋಗಬಹುದು.

ಇದನ್ನೂ ಓದಿ: ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

ನೀವು ಇನ್ನೂ 20 ವರ್ಷ ಮಾತ್ರ ದುಡಿಯುತ್ತೀರಿ ಎಂದರೆ ತಿಂಗಳಿಗೆ ಒಂದು ಲಕ್ಷ ರೂ ಅನ್ನು ಎಸ್​ಐಪಿಯಲ್ಲಿ ಹಾಕುತ್ತಾ ಹೋಗಬಹುದು. ಆಗ 10 ಕೋಟಿ ರೂ ಮೊತ್ತ ನಿಮ್ಮದಾಗಲು ಸಾಧ್ಯ. ಹೂಡಿಕೆ ಅವಧಿ ಹೆಚ್ಚಿಸಿದಷ್ಟೂ ಹಣದ ಮ್ಯಾಜಿಕ್ ಕೆಲಸ ಮಾಡುತ್ತಾ ಹೋಗುತ್ತದೆ. ಉದಾಹರಣೆಗೆ, ನೀವು ತಿಂಗಳಿಗೆ ಒಂದು ಲಕ್ಷ ರೂ ಎಸ್​ಐಪಿ ಮಾಡಿದರೆ 20 ವರ್ಷದಲ್ಲಿ 10 ಕೋಟಿ ರೂ ಆಗುತ್ತದೆ. ಇನ್ನೂ 5 ವರ್ಷ ಹೂಡಿಕೆ ಮುಂದುವರಿಸಿದರೆ ಅದು 17 ಕೋಟಿ ರೂ ಆಗುತ್ತದೆ. ಮತ್ತೂ ಐದು ವರ್ಷ ಹೂಡಿಕೆ ಮುಂದುವರಿಸಿದರೆ 30 ಕೋಟಿ ರೂ ಕಾರ್ಪಸ್ ನಿರ್ಮಾಣ ಆಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ – Kannada News | Karnataka Weather: Night Temperatures to Rise Further; Meteorologist CS Patil Warns of Heatwave Intensifies

ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ರಣಬಿಸಿಲಿನಿಂದ ಜನ ತತ್ತರಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು ಮತ್ತು ರಾತ್ರಿ ಎರಡೂ ವೇಳೆಯಲ್ಲೂ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಇದು ಮಣ್ಣಿನ ತೇವಾಂಶವನ್ನು ವೇಗವಾಗಿ ಕಡಿಮೆ ಮಾಡುತ್ತದೆ ಮತ್ತು ಜಲಮೂಲಗಳ ಆವಿಯಾಗುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ಕೆರೆ ಮತ್ತು ಜಲಾಶಯಗಳು ಬೇಗ ಬತ್ತುವ ಸಂಭವವಿದೆ. ಇದು ಪಕ್ಷಿ, ಪ್ರಾಣಿ ಮತ್ತು ಜನರಿಗೆ ತೊಂದರೆ ಉಂಟುಮಾಡಬಹುದು ಎಂದು ಅವರು ಹೇಳಿದ್ದಾರೆ.

ಒಂದು ವಾರದವರೆಗೆ ರಾಜ್ಯದ ಒಳನಾಡಿನಲ್ಲಿ ಟ್ರಫ್ ಇರುವುದರಿಂದ ಕೆಲವೆಡೆ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಮಳೆಯು ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ತಂಪು ನೀಡಬಹುದಾದರೂ, ಉಷ್ಣ ಅಲೆ ಹೋಗಲಾಡಿಸುವಲ್ಲಿ ದೊಡ್ಡ ಮಟ್ಟಿನ ಪ್ರಯೋಜನ ನೀಡಲಾರದು ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – Kannada News | Kalaburagi: Bhai Bhai Group Leader Irfan Shot and Hacked in Wadi

ಕಲಬುರಗಿ, ಏಪ್ರಿಲ್​ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಇಂದು ರಕ್ತಸಿಕ್ತವಾಗಿದೆ. ಪಟ್ಟಣದ ಬಲರಾಮ್ ಚೌಕ್ ಬಳಿಯ ಸೇವಾಲಾಲ್ ಮಂದಿರದ ಹತ್ತಿರ 42 ವರ್ಷದ ಇರ್ಫಾನ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಇರ್ಫಾನ್ ಪಟ್ಟಣದ ‘ಭಾಯ್ ಭಾಯ್’ ಗ್ರೂಪ್‌ನ ಮುಖಂಡ.

ಇದನ್ನೂ ಓದಿ: ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ?

ಮಧ್ಯಾಹ್ನದ ವೇಳೆ ಇರ್ಫಾನ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಮೊದಲು ಗುಂಡು ಹಾರಿಸಿದ್ದಾರೆ. ನಂತರ ಮಚ್ಚು ಸೇರಿದಂತೆ ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಳೆ ವೈಷಮ್ಯಕ್ಕೆ ಕೊಲೆ ಶಂಕೆ

ಸದ್ಯ ಭೀಕರ ಕೃತ್ಯಕ್ಕೆ ವಾಡಿ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ ಸ್ಕೆಚ್ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಹತ್ಯೆಯಿಂದಾಗಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪೊಲೀಸ್​​ ದೂರು ನೀಡುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯ ಕೊಲೆ

ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್​​​ನಿಂದ ಹೊಡೆದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ರಾಡ್​​ನಿಂದ ಹೊಡೆದು ಕುಣಗಳ್ಳಿ ನಿವಾಸಿ ರಾಮಕೃಷ್ಣ ಬರ್ಬರ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: 2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!

ಸುರಪುರ ಗ್ರಾಮದ ಮಲ್ಲಿಕಾರ್ಜುನ ಕೊಲೆ ಮಾಡಿ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ರಾಮಕೃಷ್ಣ ನನ್ನ ವಿರುದ್ಧ ಪೊಲೀಸರಿಗೆ ಪದೇ ಪದೆ ದೂರು ನೀಡುತ್ತಿದ್ದ. ಅದಕ್ಕೆ ಆತನನ್ನು ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ. ಸ್ಥಳಕ್ಕೆ ಎಸ್​​ಪಿ ಮುತ್ತುರಾಜ್, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ – Kannada News | Rain hailstorms expected to lash karnataka one week during heatwave says meteorologist cs patil

ಬೆಂಗಳೂರು, (ಏಪ್ರಿಲ್ 20): ಕರ್ನಾಟಕದಲ್ಲಿ (Karnataka) ಬಿಸಿಲನ ಆರ್ಭಟ ವಿಪರೀತವಾಗಿದೆ. ಕಲ್ಯಾಣ ಕರ್ನಾಟಕದ (Kalyana Karnataka) ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ದಾಟಿದ್ದು, ಬಿಸಿಲನ ಝಳಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸುತ್ತಿದ್ದಾರೆ. ಈ ಬಿಸಿಲಿನ ಬೇಗೆಯ ನಡುವೆಯೇ ವರುಣನ (Rain) ಆಗಮನದ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ

ಬೆಂಗಳೂರಿನಲ್ಲಿಂದು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ನೋಡಿ: ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ

ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಹೆಚ್ಚು

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದ್ದು, ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿದರೆ ಉತ್ತಮ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದೆ. ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪನೆ

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದೆ. ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಪ್ರತಿದಿನ 40 ಡಿಗ್ರಿ ದಾಟುತ್ತಿದೆ. ಈ ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದ್ದು, ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಬಿಸಿಲಿನ ತಾಪಕ್ಕೆ ಜನರಲ್ಲಿ ನಿರ್ಜಲೀಕರಣ, ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ದಟ್ಟವಾಗಿರುತ್ತೆ. ಹೀಗಾಗಿ ಕೆಲ ಜಿಲ್ಲಾ ಆರೋಗ್ಯ ಇಲಾಖೆ ಆಸ್ಪತ್ರೆಯಲ್ಲಿ ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪಿಸಿದೆ. ಬಿಸಿಲಿನಿಂದ ವಾಂತಿ- ಭೇದಿ ಹಾಗೂ ಜ್ವರ ಬರಬಹುದು. ಈ ಲಕ್ಷಣ ಕಾಣಿಸಿಕೊಂಡವರಿಗೆ ಈ ವಾರ್ಡ್ ತೆರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ? – Kannada News | Bitcoin Scam: ED Raids Congress MLA NA Haris and Mohammed Nalapad’s House in Bengaluru Over Money Laundering Links

ಮೊಹಮ್ಮದ್ ನಲಪಾಡ್, ಶಾಸಕ ಎನ್ಎ ಹ್ಯಾರಿಸ್ ಹಾಗೂ ಇಡಿ ದಾಳಿಯ ಚಿತ್ರImage Credit source: tv9

ಬೆಂಗಳೂರು, ಏಪ್ರಿಲ್ 20: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣ (Bitcoin scam) ಮತ್ತೆ ಮುನ್ನೆಲೆಗೆ ಬಂದಿದೆ. ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಸೋಮವಾರ ಬೆಳ್ಳಂಬೆಳಗ್ಗೆ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ (Mohammed Nalapad) ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

12 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಸೇರಿದಂತೆ ನಗರದ ಒಟ್ಟು 12 ಕಡೆಗಳಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯ ಕೈಗೊಂಡಿದೆ. ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜಯನಗರದ ಮನೆ ಹಾಗೂ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಮೊಮ್ಮಗ ಹಾಕೀಬ್ ಖಾನ್ ನಿವಾಸದ ಮೇಲೂ ದಾಳಿ ನಡೆದಿದೆ. ಹಗರಣದ ಕಿಂಗ್‌ಪಿನ್ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ಆಪ್ತ ಒಡನಾಟ ಹೊಂದಿದ್ದರು ಎಂಬ ಶಂಕೆಯ ಹಿನ್ನೆಲೆಯಲ್ಲಿ ಈ ತನಿಖೆ ಚುರುಕುಗೊಂಡಿದೆ.

ಹಣಕಾಸು ನಂಟಿನ ಶಂಕೆ

ಈ ಹಿಂದೆ ಸಿಸಿಬಿ ಮತ್ತು ಸಿಐಡಿ ನಡೆಸಿದ್ದ ತನಿಖೆಯ ವೇಳೆ ಶ್ರೀಕಿ ಮತ್ತು ನಲಪಾಡ್ ನಡುವೆ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಿಟ್‌ಕಾಯಿನ್ ವರ್ಗಾವಣೆ ಮತ್ತು ಅದರಿಂದ ಬಂದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿರುವ ಬಗ್ಗೆ ಇಡಿ ಅಧಿಕಾರಿಗಳು ಈಗ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ವೇಳೆ ಹ್ಯಾರಿಸ್ ಮತ್ತು ಅವರ ಪುತ್ರರು ಮನೆಯಲ್ಲೇ ಇದ್ದು, ಅಧಿಕಾರಿಗಳು ಬ್ಯಾಂಕ್ ವಹಿವಾಟು ಹಾಗೂ ಇತರ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಆರೋಪಗಳು

ಜಾರಿ ನಿರ್ದೇಶನಾಲಯವು ಈ ಹಗರಣದಲ್ಲಿ ಈ ಕೆಳಗಿನ ಗಂಭೀರ ಆರೋಪಗಳನ್ನು ಪಟ್ಟಿ ಮಾಡಿದೆ;

  • ವೆಬ್‌ಸೈಟ್ ಹ್ಯಾಕಿಂಗ್: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ವರ್ಚುವಲ್ ಡಿಜಿಟಲ್ ಆಸ್ತಿಗಳನ್ನು (VDAs) ಕಳವು ಮಾಡುವುದು.
  • ಡೇಟಾ ಕಳವು: ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ಮಹತ್ವದ ಡೇಟಾ ಮತ್ತು ಹಣವನ್ನು ದೋಚುವುದು.
    ಅಕ್ರಮ ಮಾರಾಟ (Routing): ಕಳುವಾದ ಡಿಜಿಟಲ್ ಆಸ್ತಿಗಳನ್ನು ಕ್ರಿಪ್ಟೋ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಮಾರಾಟ ಮಾಡಿ ಹಣವಾಗಿ ಪರಿವರ್ತಿಸುವುದು.
  • ಹಣ ವರ್ಗಾವಣೆ (Layering): ಮಾರಾಟದಿಂದ ಬಂದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡಿ ಮೂಲವನ್ನು ಮುಚ್ಚಿಡುವುದು.
  • ಅಕ್ರಮ ಬಳಕೆ: ಕಳುವಾದ ಹಣವನ್ನು ವೈಯಕ್ತಿಕ ಲಾಭಕ್ಕಾಗಿ ಹಾಗೂ ಡ್ರಗ್ಸ್ ಖರೀದಿಯಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಿರುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ – Kannada News | Pawan Kalyan health update Chiranjeevi confirms successful surgery recovery

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

ವೈದ್ಯರ ಸಲಹೆಯಂತೆ ಪವನ್ ಕಲ್ಯಾಣ್ ಅವರು ಇನ್ನು ಒಂದು ವಾರದಲ್ಲಿ ತಮ್ಮ ಎಂದಿನ ದಿನಚರಿಗೆ ಮರಳಲಿದ್ದಾರೆ ಎಂದು ಚಿರಂಜೀವಿ ಭರವಸೆ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಪ್ರೀತಿ, ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವೆಲ್ಲರೂ ಹಾರೈಸೋಣ’ ಎಂದು ಅವರು ತಿಳಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಆಂಧ್ರ ಉಪಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಶುಕ್ರವಾರ (ಏಪ್ರಿಲ್ 17) ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಇದ್ದಕ್ಕಿದ್ದಂತೆಯೇ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು.

ಶುಕ್ರವಾರ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಎಂಆರ್‌ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಯಿತು. ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ನಿರ್ಧರಿಸಿದರು. ಅದರಂತೆ ಶನಿವಾರ ಸಂಜೆ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಪವನ್ ಕಲ್ಯಾಣ್ ಅವರಿಗೆ ಕನಿಷ್ಠ 10 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಇದನ್ನೂ ಓದಿ: ಹನುಮ ಜಂತಿಯಂದು ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ನಡೆಯಿತು ಅದ್ಭುತ

ಸದ್ಯಕ್ಕೆ ಅವರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಒಂದು ವಾರ ಅಥವಾ ಹತ್ತು ದಿನಗಳ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಹುದು ಎಂದು ಹೇಳಲಾಗಿದ್ದರೂ, ಸಂಪೂರ್ಣ ಗುಣಮುಖರಾಗಲು ದೀರ್ಘಕಾಲದ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅವಶ್ಯಕ ಎಂದು ವೈದ್ಯಕೀಯ ತಂಡ ತಿಳಿಸಿದೆ. ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ರಾಜಕೀಯ ಗಣ್ಯರು ಮತ್ತು ಚಿತ್ರರಂಗದ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು – Kannada News | Private jet crashes into hillside in Chhattisgarh pilot and co pilot died

ಜಶ್​ಪುರ, ಏಪ್ರಿಲ್ 20: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಇಂದು ಖಾಸಗಿ ವಿಮಾನವೊಂದು ಪತನಗೊಂಡಿದ್ದು (Plane Crash), ಇಬ್ಬರು ಪೈಲಟ್ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಶ್‌ಪುರ-ನಾರಾಯಣಪುರ ಪ್ರದೇಶದ ಅರಾ ಬೆಟ್ಟದ ಇಳಿಜಾರಿನಲ್ಲಿ ಪತನಗೊಂಡ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಕಾಣಿಸಿಕೊಂಡಿವೆ. ಈ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ಖಚಿತವಾಗಿಲ್ಲ.

ಜಶ್ಪುರ್-ನಾರಾಯಣಪುರ್ ಪ್ರದೇಶದ ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಜೆಟ್‌ನಿಂದ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಕಾಣಿಸಿಕೊಂಡ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆಯ ನಂತರ ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ: ‘ಅದು ಕೊನೆಯ ಸಂದೇಶ’: ವಿಮಾನದೊಳಗೆ ನಡೆದಿದ್ದೇನು? ಸ್ಫೋಟಕ ಹೇಳಿಕೆ ನೀಡಿದ ಪ್ರಯಾಣಿಕ

ಈ ವಿಮಾನವು ಅರಾ ಬೆಟ್ಟಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಆರಂಭಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರು ಇದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಎನ್‌ಡಿಟಿವಿ ವರದಿಯ ಪ್ರಕಾರ, ಖುರಾಸಗರ್ಹ ಗ್ರಾಮದ ಬಳಿಯ ರತನ್‌ಪಹ್ಲಿ ಕಾಡಿನಲ್ಲಿ ಈ ಘಟನೆ ಸಂಭವಿಸಿದೆ. ಈ ವಿಮಾನ ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತಿತ್ತು. ಮೃತಪಟ್ಟ ಪೈಲಟ್​ಗಳ ಗುರುತುಗಳು ಇನ್ನೂ ಬಹಿರಂಗಗೊಂಡಿಲ್ಲ. ಸ್ಥಳೀಯ ಪೊಲೀಸರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರೀಲಂಕಾದಲ್ಲಿ ಚೀನಾಕ್ಕೆ ಟಕ್ಕರ್ ಕೊಡಲು ಭಾರತದ ಮಾಸ್ಟರ್ ಪ್ಲಾನ್: ಬರಲಿದೆ ಬೃಹತ್ ತೈಲ ಪೈಪ್‌ಲೈನ್ – Kannada News | India to accelerate trilateral energy architecture with Sri Lanka and UAE

ಕೊಲಂಬೊ/ನವದೆಹಲಿ, ಏಪ್ರಿಲ್ 20: ಹಿಂದೂ ಮಹಾಸಾಗರದಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳುತ್ತಿರುವ ಚೀನಾವನ್ನು ಕಟ್ಟಿಹಾಕಲು ಭಾರತವು ಶ್ರೀಲಂಕಾದಲ್ಲಿ ಚಾಣಾಕ್ಷ್ಯತನದ ಹೆಜ್ಜೆಯನ್ನಿಟ್ಟಿದೆ. ಶ್ರೀಲಂಕಾದ ಇಂಧನ ಭದ್ರತೆಯನ್ನು ಬಲಪಡಿಸಲು ಮತ್ತು ದ್ವೀಪ ರಾಷ್ಟ್ರವು ಭಾರತದ ಮೇಲೆ ಹೆಚ್ಚು ಅವಲಂಬಿತವಾಗುವಂತೆ ಮಾಡಲು ಭಾರತ-ಶ್ರೀಲಂಕಾ ಆಯಿಲ್ ಪೈಪ್‌ಲೈನ್ ಯೋಜನೆಯನ್ನು (India Sri Lanka Oil Pipeline) ಚುರುಕುಗೊಳಿಸಲಾಗಿದೆ.

ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಮಹತ್ವದ ವಿಷಯ ಚರ್ಚೆಯಾಗಿದೆ. ಶ್ರೀಲಂಕಾದ ತ್ರಿಕೋನಮಲಿಯಲ್ಲಿ (Trincomalee) ಬೃಹತ್ ಇಂಧನ ಕೇಂದ್ರವನ್ನು ಅಭಿವೃದ್ಧಿಪಡಿಸಲು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಕೈಜೋಡಿಸಿವೆ. ಇಲ್ಲಿಂದ ಭಾರತದವರೆಗೆ ತೈಲ ಪೈಪ್‌ಲೈನ್ ನಿರ್ಮಾಣವಾಗಲಿದೆ.

ಇದನ್ನೂ ಓದಿ: ಅಮೆರಿಕ ಇತಿಹಾಸದ ಅತಿದೊಡ್ಡ ರೀಫಂಡ್: ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್

ಚೀನಾಕ್ಕೆ ಹಿನ್ನಡೆ

ಹಂಬಂತೋಟ ಬಂದರಿನಲ್ಲಿ ಚೀನಾದ ‘ಸಿನೋಪೆಕ್’ (Sinopec) ಕಂಪನಿಯು ತೈಲ ಸಂಸ್ಕರಣಾಗಾರ ಸ್ಥಾಪಿಸಲು ಯೋಜಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತವು ತನ್ನದೇ ಆದ ಪೈಪ್‌ಲೈನ್ ಮತ್ತು ಇಂಧನ ಜಾಲವನ್ನು ವಿಸ್ತರಿಸುವ ಮೂಲಕ ಚೀನಾದ ಪ್ರಭಾವವನ್ನು ತಗ್ಗಿಸಲು ಮುಂದಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧದಂತಹ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದೆ. ಇಂತಹ ಸಮಯದಲ್ಲಿ ಈ ಪೈಪ್‌ಲೈನ್ ಶ್ರೀಲಂಕಾಕ್ಕೆ ಕಡಿಮೆ ದರದಲ್ಲಿ ಮತ್ತು ನಿರಂತರವಾಗಿ ಇಂಧನ ಪೂರೈಕೆ ಮಾಡಲು ಸಹಕಾರಿಯಾಗಲಿದೆ.

ನೆರೆಹೊರೆಗೆ ಆದ್ಯತೆ (Neighbourhood First) ಕೊಡುವ ಭಾರತದ ನೀತಿಯಡಿಯಲ್ಲಿ ಈಗಾಗಲೇ ಶ್ರೀಲಂಕಾಕ್ಕೆ ಆರ್ಥಿಕ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಲಾಗಿದೆ. ಈಗ ಈ ತೈಲ ಯೋಜನೆಯು ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ

ಯೋಜನೆಯ ಮಹತ್ವವೇನು?

ಈ ಪೈಪ್‌ಲೈನ್ ಕೇವಲ ಇಂಧನ ಸಾಗಣೆಗೆ ಸೀಮಿತವಾಗಿಲ್ಲ. ಇದು ದಕ್ಷಿಣ ಏಷ್ಯಾದಲ್ಲಿ ಭಾರತದ ಭೌಗೋಳಿಕ ಮತ್ತು ರಾಜಕೀಯ ಪ್ರಾಬಲ್ಯವನ್ನು ಮರುಸ್ಥಾಪಿಸುವ ಒಂದು ದಾರಿಯಾಗಿದೆ. ಚೀನಾವು ಶ್ರೀಲಂಕಾವನ್ನು ತನ್ನ ‘ಸಾಲದ ಸುಳಿ’ಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವಾಗ, ಭಾರತವು ಮೂಲಸೌಕರ್ಯ ಮತ್ತು ಇಂಧನ ಸಂಪರ್ಕದ ಮೂಲಕ ಶ್ರೀಲಂಕಾದ ವಿಶ್ವಾಸ ಗಳಿಸುತ್ತಿದೆ.

ಈ ಯೋಜನೆಯು ಪೂರ್ಣಗೊಂಡರೆ, ಶ್ರೀಲಂಕಾ ತನ್ನ ಹೆಚ್ಚಿನ ಇಂಧನ ಅಗತ್ಯಗಳಿಗಾಗಿ ಭಾರತದ ಮೇಲೆ ಅವಲಂಬಿತವಾಗಲಿದೆ. ಇದು ಭದ್ರತೆಯ ದೃಷ್ಟಿಯಿಂದ ಭಾರತಕ್ಕೆ ಅತ್ಯಂತ ಪ್ರಯೋಜನಕಾರಿ ಎಂದು ವಿಶ್ಲೇಷಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version