Headlines

ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ – Kannada News | Karnataka Weather Update: Weak Monsoon Sparks Summer Like Heat; Bangalore Records Highest July Temperature in 5 Years

ಬೆಂಗಳೂರು, ಜುಲೈ 14: ಸಾಮಾನ್ಯವಾಗಿ ಮಳೆ ಹಾಗೂ ತಂಪಾದ ವಾತಾವರಣವಿಣವಿರಬೇಕಿದ್ದ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯ ಅನುಭವ ಉಂಟಾಗತೊಡಗಿದೆ. ಈ ವರ್ಷ ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಕಾರಣ ತಾಪಮಾನ ಹೆಚ್ಚಳ ಕಂಡಿದೆ. ಕೆಲ ಜಿಲ್ಲೆಗಳ ತಾಪಮಾನ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಯೂ ಉಷ್ಣಾಂಶ ಹೆಚ್ಚಳವಾಗಿದ್ದು, 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಹಿಂದೆಲ್ಲ ಜುಲೈ ಸಂದರ್ಭ ನಗರದ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ನ ಆಸುಪಾಸು…

Read More

ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್ – Kannada News | BMRCL Opts for Steel Barricades Instead of PSD Doors at Namma Metro Stations to Prevent Suicides

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದಲ್ಲಿ ಇತ್ತೀಚೆಗೆ ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೆಟ್ರೋ ಸ್ಟೇಷನ್​ಗಳಿಗೆ ಪಿಎಸ್​ಡಿ ಅಳವಡಿಸುವಂತೆ ಪ್ರಯಾಣಿಕರಿಂದ ಒತ್ತಾಯ ಕೇಳಿಬಂದಿತ್ತು. ‘ಟಿವಿ9’ ಸಹ ಈ ಬಗ್ಗೆ ಸಾಕಷ್ಟು ಬಾರಿ ವರದಿ ಪ್ರಸಾರ ಮಾಡಿತ್ತು. ಇದೀಗ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಎಂಆರ್​​ಸಿಎಲ್ (BMRCL), ಮೆಜಸ್ಟಿಕ್ ಮೆಟ್ರೋ ಸ್ಟೇಷನ್, ಆರ್.ವಿ ರೋಡ್, ಕೆ.ಆರ್.ಪುರ, ಇಂದಿರಾ…

Read More

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ಕ್ರೇಜ್ ದಿನದಿಂದ ದಿನಕ್ಕೆ ಹೊಸ ಹೊಸ ಕಲೆಗೆ ಕಾರಣವಾಗಿದೆ. ಕೇವಲ ಮೈದಾನ ಅಥವಾ ಜರ್ಸಿಗಳಿಗಷ್ಟೇ ಸೀಮಿತವಾಗಿದ್ದ ಆರ್‌ಸಿಬಿ ಕ್ರೇಜ್, ಇದೀಗ ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಫ್ಯಾಷನ್ ಜಗತ್ತಿಗೂ ಲಗ್ಗೆ ಇಟ್ಟಿದೆ. ಹೌದು, ನಗರದ ಪ್ರಸಿದ್ಧ ಸೀರೆ ಮತ್ತು ಬಟ್ಟೆಗಳ ಮಾರುಕಟ್ಟೆ ಕೇಂದ್ರವಾದ ಚಿಕ್ಕಪೇಟೆಯ ಖ್ಯಾತ ಮಹಿಳಾ ಮಾಡಲ್ ಡಿಸೈನರ್ ಅಂಜಲಿ ಅವರು ಆರ್‌ಸಿಬಿ ಥೀಮ್ ಆಧಾರಿತ ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಬ್ಲೌಸ್…

Read More

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ…

Read More

ಗೆಲುವಿನ ಬೆನ್ನಲ್ಲೇ ವಿಶ್ವಕಪ್‌ ರಣತಂತ್ರ ಬಿಚ್ಚಿಟ್ಟ ಶುಭ್​ಮನ್ ಗಿಲ್ – Kannada News | Shubman gill post match presentation After IND vs ENG 1st ODI Match

ಇಂಗ್ಲೆಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೇ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 47.5 ಓವರ್​ಗಳಲ್ಲಿ 258 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 45.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಭಾರತ ತಂಡದ ಯುವ ನಾಯಕ ಶುಭ್‌ಮನ್ ಗಿಲ್, ತಂಡದ ಮಧ್ಯಮ ಕ್ರಮಾಂಕದ ಪ್ರದರ್ಶನ, ಬೌಲಿಂಗ್…

Read More

Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್​ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್​ಗೆ…

Read More

ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ

ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಓಡಾಡಿಕೊಂಡಿದ್ದಕ್ಕಾಗಿ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿಗೆ ಗದರಿದ್ದರು. ಇದೇ ಕಾರಣದಿಂದ ಆತ ಆ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ಆ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆಯ ಅರಕ್ಕೋಣಂನ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್…

Read More

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’:ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ – Kannada News

ಬೆಂಗಳೂರು, (ಜೂನ್ 11): ರಾಜಕೀಯದಲ್ಲಿ ಯಾರು ಯಾರಿಗೂ ಶತ್ರುಗಳಲ್ಲ, ಮಿತ್ರರಲ್ಲ ಎಂಬ ಮಾತಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದಲೇ ಜಮಿರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ. ಹೌದು..ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್)…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar: Manjra River in Bidar Faces Crisis; Illegal Sand Mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

‘ಮೋದಿ ನಿರ್ಧರಿಸಿದರೆ ಪಾಕ್ ಕ್ರಿಕೆಟ್ ದಿವಾಳಿ ಆಗುತ್ತೆ’; ಮಾಜಿ ನಾಯಕ ರಮೀಜ್ ರಾಜಾ – Kannada News | PCB Financial Crisis: Ramiz Raja Warns India’s Power Amid T20 WC Stance

ಟೀಂ ಇಂಡಿಯಾ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನಾಡುವುದಿಲ್ಲ ಎಂದಿರುವ ಪಾಕಿಸ್ತಾನಕ್ಕೆ ಮುಂದೆ ಎದುರಾಗಲಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದೆನಿಸುತ್ತದೆ. ಏಕೆಂದರೆ ಈಗಾಗಲೇ ನೂರಾರು ಸಮಸ್ಯೆಗಳಿಂದ ಬಳಲುತ್ತಿರುವ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಐಸಿಸಿ ಈವೆಂಟ್​ನಿಂದ ಬರುತ್ತಿದ್ದ ನೂರಾರು ಕೋಟಿ ರೂಗಳ ಆದಾಯವನ್ನು ಕಳೆದುಕೊಂಡಿದೆ. ಇದರ ಜೊತೆಗೆ ಐಸಿಸಿಯ ಕೋಪಕ್ಕೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೊಳಗಾಗುವುದಂತೂ ಖಚಿತ. ಇದೆಲ್ಲದರ ನಡುವೆ ಪಾಕಿಸ್ತಾನದ ಮಾಜಿ ನಾಯಕ ಮತ್ತು ಮಾಜಿ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ…

Read More