Headlines

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು…

Read More

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್ – Kannada News | Zaid Khan talks gave clarification on his opinion on Tulu Language

ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಝೈದ್ ಖಾನ್ (Zaid Khan) ಅವರು ಸಿನಿಮಾಕ್ಕಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶಿಡ್ಲಘಟ್ಟದಲ್ಲಿ ನಡೆದಿರುವ ಘಟನೆ ಝೈದ್ ಖಾನ್​​ಗೆ ನೆಗೆಟಿವ್ ಆಗಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ, ಮಹಿಳಾ ಅಧಿಕಾರಿಗೆ ಹಾಕಿರುವ ಬೆದರಿಕೆಗೆ ಇದೀಗ ಝೈದ್ ಖಾನ್ ಸಹ ಕ್ಷಮೆ ಕೋರಿದ್ದಾರೆ. ಝೈದ್ ಖಾನ್ ಅವರು ಪ್ರಚಾರದ ಸಮಯದಲ್ಲಿಯೂ ಸಹ ಸತತವಾಗಿ ಇಂಥಹಾ ಪ್ರಶ್ನೆಗಳನ್ನೇ ಎದುರಿಸುತ್ತಿದ್ದು, ಇದೀಗ ಝೈದ್ ಖಾನ್​​ಗೆ ತುಳು ಭಾಷೆಯ…

Read More

ಶಿವಮೊಗ್ಗದಲ್ಲಿ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ಮಾಜಿ ಪೊಲೀಸರ ಮನೆಯೇ ಈ ಕಳ್ಳರಿಗೆ ಟಾರ್ಗೆಟ್ – Kannada News | Shivamogga Theft Spree: Gold and Cash Robbed, CCTV Captures Masked Thieves

ಶಿವಮೊಗ್ಗ, ಜ.17: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಶಿವಮೊಗ್ಗ ಜನರನ್ನು ಬೆಚ್ಚಿ ಬೀಳಿಸುವ ಘಟನೆಗಳು ನಡೆಯುತ್ತಿದೆ. ಒಂದು ಕಡೆ ಬಂಗಾರ ಬೆಲೆ ಏರುತ್ತಲೇ ಇದೆ. ಇನ್ನೊಂದು ಕಡೆ ಈ ಕಳ್ಳರು ಚಿನ್ನ ಕದ್ದಿಯುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಶಿವಮೊಗ್ಗದ (Shivamogga theft) ಹಲವು ಕಡೆ ಕಳ್ಳತನ ಆಗಿರುವ ಘಟನೆಗಳು ಪತ್ತೆಯಾಗಿದೆ. ಜಿಲ್ಲೆಯ ಸ್ವಾಮಿ ವಿವೇಕಾನಂದ ಬಡಾವಣೆಯ ವಿಜಯಲಕ್ಷ್ಮಿ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 15 ಲಕ್ಷದ ಚಿನ್ನಾಭಾರಣ…

Read More

WPL 2026: ಆರ್​ಸಿಬಿ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ; 7 ಎಸೆತಗಳಲ್ಲಿ 4 ವಿಕೆಟ್ ಪತನ – Kannada News | RCB vs DC WPL 2026: Delhi Capitals Suffer Early Collapse, Lose 4 Wickets

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಡೆಲ್ಲಿ ತಂಡ ಮೊದಲ ಎರಡು ಓವರ್​ಗಳಲ್ಲೇ ಆಘಾತ ಎದುರಿಸಿದೆ. ಕೇವಲ 12 ಎಸೆತಗಳಲ್ಲಿ ಡೆಲ್ಲಿ ತಂಡದ ನಾಲ್ಕು ಪ್ರಮುಖ ವಿಕೆಟ್​ಗಳು ಪತನಗೊಂಡಿವೆ. ಅದರಲ್ಲೂ 7 ಎಸೆತಗಳಲ್ಲಿ ಡೆಲ್ಲಿ ತಂಡದ 4 ವಿಕೆಟ್​ಗಳು ಉದುರಿದ್ದು, ಆರ್​ಸಿಬಿಯ ಮಾರಕ ದಾಳಿಗೆ ಹಿಡಿದ ಕೈಗನ್ನಡಿಯಾಗಿತ್ತು. ಮೊದಲ ಓವರ್​ನಲ್ಲಿ 2 ವಿಕೆಟ್ ಡೆಲ್ಲಿ ಪರ…

Read More

ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi

ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ…

Read More

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

ಒಟಿಟಿಗೆ ಬರುತ್ತಿದೆ ಸುದೀಪ್​ ನಟನೆಯ ‘ಮಾರ್ಕ್’: ಎಲ್ಲಿ? ಯಾವಾಗ ನೋಡಬಹುದು? – Kannada News | Sudeep starrer Mark Kannada movie to stream on Jio Hotstar on January 23

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಬರುತ್ತಿದೆ ‘ಮಾರ್ಕ್’ ಸಿನಿಮಾ. ಈಗಾಗಲೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಘೋಷಣೆ ಮಾಡಲಾಗಿದೆ? ಮಾರ್ಕ್ ಸಿನಿಮಾ ಯಾವ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಮತ್ತು ಎಂದಿನಿಂದ ಪ್ರದರ್ಶನ ಆರಂಭಿಸಲಿದೆ? ಇಲ್ಲಿದೆ ಮಾಹಿತಿ… ಸುದೀಪ್ ನಟನೆಯ ‘ಮಾರ್ಕ್’…

Read More

ಬಿಗ್​​ಬಾಸ್ ಕನ್ನಡ: ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ಮತಗಳು – Kannada News | Bigg Boss Kannada 12: Sudeep gave Voting count

ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಾಳೆ (ಜನವರಿ 18) ನಡೆಯಲಿದೆ. ಇಂದು (ಶನಿವಾರ) ಪ್ರೀ ಫಿನಾಲೆ ಇಂದು ನಡೆಯಲಿದೆ. ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್ ಅವರು ಬಹಿರಂಗಪಡಿಸಿದ್ದಾರೆ. ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ. ನಾಳೆಯ ವರೆಗೆ ವೋಟಿಂಗ್ ಲೈನ್ ತೆರೆದಿರಲಿದೆ. ವಿಡಿಯೋ ನೋಡಿ… ಸಿನಿಮಾ…

Read More

ದೇವನಹಳ್ಳಿ: ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾಂಗ್ ಡ್ರೈವ್​​ ಹೊರಟ್ಟಿದ್ದ ಮೂವರು ಸ್ನೇಹಿತರು ಬಲಿ​​ – Kannada News | Devanahalli: Horrific Highway Accident Claims Lives of Three Friends on Long Drive

ದೇವನಹಳ್ಳಿ, ಜನವರಿ 17: ಅವರೆಲ್ಲಾ ಪಿಯು ವಿದ್ಯಾರ್ಥಿಗಳು. ಇಂದು ವೀಕೆಂಡ್ ಹಿನ್ನೆಲೆ ಬೈಕ್ ಏರಿ ಲಾಂಗ್ ಡ್ರೈವ್​ಗೆ ಹೊರಟ್ಟಿದ್ದರು. ಹೀಗೆ ಲಾಂಗ್ ಡ್ರೈವ್​​​ ಹೋದ ಮೂವರು ಸ್ನೇಹಿತರ ಪಾಲಿಗೆ ಅದು ಲಾಸ್ಟ್ ಡ್ರೈವ್​ ಆಗಿದ್ದು, ಭೀಕರ ಅಪಘಾತಕ್ಕೆ (Accident) ಸ್ಥಳದಲ್ಲೇ ಮೂವರು ದುರಂತ ಅಂತ್ಯವಾಗಿದ್ದಾರೆ (death). ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದ ಅಗಲಕೋಟೆ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ನಡೆದದ್ದೇನು? ಇಂದು ಬೆಳಗ್ಗೆ 11: 20ರ…

Read More