ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ – Kannada News | Puneeth Kerehalli Gets Conditional Bail in Anekal; Vows to Continue Anti Immigrant Fight

ಆನೇಕಲ್, ಜನವರಿ 17: ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಪೌರತ್ವ ದಾಖಲೆಗಳನ್ನು ಪಡೆದು ಪರಿಶೀಲಿಸಿ ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಆರೋಪದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ (Puneeth Kerehalli) ಪೊಲೀಸರು ಬಂಧಿಸಿದ್ದರು. ಕೆರೆಹಳ್ಳಿ ಬಂಧನದ ಬಳಿಕ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಇದೀಗ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮತ್ತವರ ತಂಡ ಕಳೆದ ಕೆಲ ದಿನಗಳಿಂದ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಪುನೀತ್ ಕೆರೆಹಳ್ಳಿ ತಂಡ ತೆರಳಿದ್ದರು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳನ್ನ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ

ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ ಇತರರ ವಿರುದ್ಧ ವಲಸೆ ಕಾರ್ಮಿಕರ ಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಠಾಣೆ ಬಳಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಬಾಂಗ್ಲಾ ವಲಸಿಗರಿಗೆ ಇರಲು ಸ್ಥಳ ನೀಡಿದ ಜಾಗದ ಮಾಲೀಕನ ಮೇಲೆ ಕ್ರಮವಾಗಬೇಕೆಂದು ಒತ್ತಾಯಿಸಿದರು.

ಇನ್ನು ಪುನೀತ್ ಕೆರೆಹಳ್ಳಿಯನ್ನ ವಿಚಾರಣೆ ನಡೆಸಿದ ಬನ್ನೇರುಘಟ್ಟ ಪೊಲೀಸರು ತದನಂತರ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು ತಲಾ 10 ಸಾವಿರ ರೂ ನಗದು ಶ್ಯೂರಿಟಿ ಹಾಗೂ ಪರ್ಸನಲ್ ಬಾಂಡ್ ಷರತ್ತು ವಿಧಿಸಲಾಗಿದೆ.

ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಹೋರಾಟ: ಪುನೀತ್ ಕೆರೆಹಳ್ಳಿ

ಜಾಮೀನು ಪಡೆದು ಕೋರ್ಟ್​​ನಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಇನ್ನೂ ಜಾಮೀನು ಸಿಕ್ಕ ಬಳಿಕ ಮಾತನಾಡಿದ ಪುನೀತ್ ಕೆರೆಹಳ್ಳಿ, ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಅಂತ್ಯ ಅಲ್ಲ, ಇಂದಿನಿಂದಲೇ ಹೋರಾಟ ಆರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ಪರವಾಗಿದೆ, ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಹಚ್ಚುವ ಕೆಲಸ ಮಾಡಿದ್ದೇವೆ. ಎಡಪಂಥೀಯರ ಒತ್ತಡಕ್ಕೆ ಮಣಿದು ಸರ್ಕಾರ ರಾತ್ರಿ ವೇಳೆ ಬಂಧಿಸಿದೆ. ಠಾಣೆಯಲ್ಲೇ ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಿವೆ, ಅದ್ರೂ ಕೂಡ ಬಂಧನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ

ಸದ್ಯ ಪುನೀತ್ ಕೆರೆಹಳ್ಳಿ ಮತ್ತವರ ತಂಡಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಬಾಂಗ್ಲಾ ವಲಸಿಗರ ವಿರುದ್ಧ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ. ಇನ್ನೊಂದೆಡೆ ವಲಸೆ ಕಾರ್ಮಿಕರಿಗೆ ಪುನೀತ್ ಕೆರೆಹಳ್ಳಿ ತಂಡ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸರ್ಕಾರ ಮತ್ತು ಪೊಲೀಸರು ಯಾವ ರೀತಿ ಕ್ರಮಕೈಗೊಳ್ಳುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್​​ನಲ್ಲಿ ಮಾತನಾಡಿದ್ದಾರೆ.

ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು ಚರ್ಚೆ ಆದವು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಈ ವಿಷಯದಲ್ಲಿ ಸುದೀಪ್ ಅಭಿಪ್ರಾಯ ಬೇರೆಯದೇ ಇದೆ ಎನ್ನಬಹುದು. ಅವರು ಜನವರಿ 17ರ ಪ್ರೀ-ಫಿನಾಲೆಯಲ್ಲಿ ಈ ಬಗ್ಗೆ ಅವರು ಮಾತನಾಡಿದರು.

‘ಕಿಚ್ಚನ ಚಪ್ಪಾಳೆ ನನ್ನ ಅನಿಸಿಕೆ. ಯಾರು ಅರ್ಹರೋ ಅವರನ್ನು ಹುರಿದುಂಬಿಸಬೇಕು ಎಂದು ಶಾಲೆಯಲ್ಲಿ ಟೀಚರ್ ಹೇಳಿಕೊಟ್ಟಿದ್ದರು. ಬಿಗ್ ಬಾಸ್ ಒಬ್ಬ ವ್ಯಕ್ತಿ ಇಂದ ಅಲ್ಲ, ಒಬ್ಬ ಸುದೀಪ್ ಇಂದ ಅಲ್ಲ. ಬಿಗ್ ಬಾಸ್ ಎಲ್ಲರ ಕೊಡುಗೆ. ಪ್ರತಿಯೊಬ್ಬರೂ ಇದ್ದರೇನೆ ಬಿಗ್ ಬಾಸ್. ಅವರು ಗೆಲ್ಲದೆ ಇರಬಹುದು. ಆದರೆ, ಬಿಗ್ ಬಾಸ್ ಮನೆಗೆ ಅವರ ಕೊಡುಗೆ ಇದೆ ಎಂಬುದನ್ನು ಒಪ್ಪಲೇಬೇಕು’ ಎಂದರು ಕಿಚ್ಚ ಸುದೀಪ್.

ಇದನ್ನೂ ಓದಿ: ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ನಾಟಕಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್

ಶೋ ನಡೆಸಿಕೊಡೋ ನಮಗೆ ಯಾರು ಹೊರ ಹೋಗ್ತಾರೆ ಎಂಬ ವಿಷಯ ಗೊತ್ತಿರೋದಿಲ್ಲವಾ? ಹಾಗಿದ್ರೂ ಕೊಟ್ಟಿದ್ದೇವೆ ಎಂದರೆ ಅದಕ್ಕೆ ಅರ್ಥ ಇದೆ. ಗೆಲ್ಲುವವರು ಯಾರೇ ಇರಬಹುದು. ಎಲ್ಲರ ಕಾಂಟ್ರಿಬ್ಯೂಷನ್ ಇದೆ ಎಂದಾಗ ನ್ಯಾಯವಾಗಿ ಮನಸ್ಫೂರ್ವಕವಾಗಿ ಧ್ರುವಂತ್​​ಗೆ ಕೊಟ್ಟೆ. ಚಪ್ಪಾಳೆ ವಿಷಯದಲ್ಲಿ ಜೀವನ್ನೇ ಜಾಲಾಡಿಬಿಟ್ರಲ್ಲ. ಕಿಚ್ಚನ ಚಪ್ಪಾಳೆಯಲ್ಲಿ ತಲೆಕೆಡಿಸಿಕೊಳ್ಳೋಬೇಡಿ. ನಮ್ಮದು ಉದ್ಧಾರ ಮಾಡೋ ಚಪ್ಪಾಳೆ, ಹೊರಗೆ ತಟ್ಟುತ್ತಾ ಇರೋದು ಹಾಳು ಮಾಡೋ ಚಪ್ಪಾಳೆ. ನಿಮ್ಮ ಜೀವನ ಮೇಲೆ ಗಮನ ಹರಿಸಿ. ಕಿಚ್ಚ ಚಪ್ಪಾಳೆ ಮೇಲೆ ಅಲ್ಲ’ ಎಂದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು ಬಣ್ಣಿಸಿದ್ದಾರೆ. ಹಗಲಿನಲ್ಲಿಯೂ, ಮಧ್ಯಾಹ್ನ 12 ಗಂಟೆಗೆ, ಗೆಜ್ಜೆ ಮತ್ತು ಗಂಟೆ ಸದ್ದು ಕೇಳಿಸಿದ್ದು, ಕೆಲವೊಮ್ಮೆ ನಿರಂತರವಾಗಿ ಈ ಶಬ್ದ ಕೇಳಿ ಬರುತ್ತದೆ. ಇದರಿಂದ ಗ್ರಾಮಸ್ಥರು ರಾತ್ರಿಯಿಡೀ ದೇವಸ್ಥಾನದ ಬಳಿ ಜಾಗರಣೆ ಮಾಡಿದ್ದಾರೆ. ದುರ್ಗಾದೇವಿ ಮೂರ್ತಿಗಳಿಗೆ ಜಾತ್ರೆ ಮಾಡಬೇಕಿತ್ತೇ ಅಥವಾ ಬಣ್ಣ ಲೇಪಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏನಾದರೂ ವಿಧಿವಿಧಾನ ಲೋಪವಾಗಿದೆಯೇ ಎಂಬ ಗೊಂದಲ ಗ್ರಾಮಸ್ಥರಲ್ಲಿದೆ. ಈ ದೈವಿಕ ಶಕ್ತಿಯು ಸರಿಪಡಿಸಲು ಏನು ಮಾಡಬೇಕು ಎಂದು ಅವರು ಚಿಂತಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು ಗಣಿನಾಡಿನಲ್ಲಿ ಕೇಸರಿ ಕಲಿಗಳು ಬೃಹತ್ ಸಮಾವೇಶ ನಡೆಸಿದ್ದಾರೆ. APMC ಯಾರ್ಡ್ ಮೈದಾನದಲ್ಲಿ ನಡೆದ ಈ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್​.ಅಶೋಕ್, ಛಲವಾದಿ ನಾರಾಯಸ್ವಾಮಿ, ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾದ್ರು. ಸರ್ಕಾರದ ನಡೆಯನ್ನೇ ಖಂಡಿಸಿದ್ದಾರೆ.

ಭರತ್ ರೆಡ್ಡಿಯನ್ನ ಅರೆಸ್ಟ್ ಮಾಡಲು ಪೊಲೀಸರಿಗೆ ಆಗುವುದಿಲ್ಲವೆ? ಶ್ರೀರಾಮುಲು ಪ್ರಶ್ನೆ

ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಭರತ್ ರೆಡ್ಡಿ ಸಣ್ಣ ವಯಸ್ಸಿನಲ್ಲಿ ಶಾಸಕನಾಗಿ ದರ್ಪ‌‌ ತೋರಿಸುತ್ತಿದ್ದಾರೆ. ನಮ್ಮ ರಕ್ಷಣೆಗಾಗಿ ನಾವು ಈ ಸಮಾವೇಶ ಮಾಡುತ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗರ ಜನರ ರಕ್ಷಣೆಗಾಗಿ ಸಮಾವೇಶ ಮಾಡಿದ್ದೇವೆ. ‌ನಾನಾಗಲೀ, ಜನಾರ್ದನ ರೆಡ್ಡಿ ಶಾಸಕರಾಗಿದ್ದಾಗ ಈ ರೀತಿ ನಡೆದುಕೊಂಡಿದ್ದೇವಾ? ನಿಮ್ಮಲ್ಲರ ಆಶೀರ್ವಾದದಿಂದ ಇಂದು ಜನಾರ್ದನ ರೆಡ್ಡಿಗೆ ಅನಾಹುತ ತಪ್ಪಿದೆ ಎಂದರು.

ಇದನ್ನೂ ಓದಿ: ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್

ಭರತ್ ರೆಡ್ಡಿ ನೀನು ಪಾತಾಳದಲ್ಲಿ ಅಡಗಿಕೊಂಡಿದ್ದರು ಬಿಡುವುದಿಲ್ಲ. ಅಂದು ಎಲ್ಲಿ ತಪ್ಪಿಸಿಕೊಳ್ಳುತ್ತೀಯಾ, ನಿನ್ನ ಯಾರು ರಕ್ಷಣೆ ಮಾಡುತ್ತಾರೆ ಅಂತಾ ನಾನೂ ನೋಡುತ್ತೇನೆ. ಭರತ್ ರೆಡ್ಡಿಯನ್ನು ಅರೆಸ್ಟ್ ಮಾಡಲು ಪೊಲೀಸರಿಗೆ ಆಗುವುದಿಲ್ಲವೆ? ಪೊಲೀಸರೇ ನೀವೇನು ಮಾಡುತ್ತಿದ್ದೀರಿ? ನಿಮಗೂ ಪಾಲು ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಶ್ರೀರಾಮುಲು, ಶಾಸಕ ಭರತ್ ರೆಡ್ಡಿ ಅವರನ್ನ ಬಂಧಿಸದ ಪೊಲೀಸರ ಸಾಮರ್ಥ್ಯ ಪ್ರಶ್ನಿಸಿದರೆ, ಮತ್ತೊಂದ್ಕಡೆ ಗಣಿದಣಿ ಜನಾರ್ದನ ರೆಡ್ಡಿ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್​ನ ಕಿತ್ತೊಗೆಯುವ ಶಪಥ ಮಾಡಿದ್ದಾರೆ. ಇಷ್ಟು ಮಾತ್ರವಲ್ಲ. ಉಳಿದ ಬಿಜೆಪಿ ನಾಯಕರು ಕೂಡ, ಕಾಂಗ್ರೆಸ್​ನ ಗುಂಡೇಟಿಗಿಂತ ನಮ್ಮ ಎದೆ ಗಟ್ಟಿ ಅಂತಾ ಭಾಷಣ ಮಾಡಿದ್ದಾರೆ.

ಮೃತ ರಾಜಶೇಖರ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ

ಬೃಹತ್ ಸಮಾವೇಶಕ್ಕೆ ಮುನ್ನ ಬಿಜೆಪಿ ನಾಯಕರು ಮೃತ ರಾಜಶೇಖರ್​ನ ಮನೆಗೆ ಭೇಟಿ ಕೊಟ್ರು. ಮೃತನ ತಾಯಿಗೆ ಸಾಂತ್ವಾನ ಹೇಳಿದ್ರು. ಬಳಿಕ ಜನಾರ್ಧನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ, 10 ಲಕ್ಷ ರೂ ಪರಿಹಾರ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಗಲಭೆಯ ಹೊಣೆಗಾರಿಕೆಯನ್ನ ಬಿಜೆಪಿ ಕಡೆಗೆ ತಿರುಗಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಬೃಹತ್ ಹೋರಾಟ ರೂಪಿಸಿದೆ. ಗಣಿನಾಡಿನಲ್ಲಿ ನಿಂತು ಸರ್ಕಾರ ಹಾಗೂ ಸ್ಥಳೀಯ ಶಾಸಕರಿಗೆ ಎಚ್ಚರಿಕೆ ರವಾನಿಸಿರೋದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್ – Kannada News | Zaid Khan talks gave clarification on his opinion on Tulu Language

ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಝೈದ್ ಖಾನ್ (Zaid Khan) ಅವರು ಸಿನಿಮಾಕ್ಕಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶಿಡ್ಲಘಟ್ಟದಲ್ಲಿ ನಡೆದಿರುವ ಘಟನೆ ಝೈದ್ ಖಾನ್​​ಗೆ ನೆಗೆಟಿವ್ ಆಗಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ, ಮಹಿಳಾ ಅಧಿಕಾರಿಗೆ ಹಾಕಿರುವ ಬೆದರಿಕೆಗೆ ಇದೀಗ ಝೈದ್ ಖಾನ್ ಸಹ ಕ್ಷಮೆ ಕೋರಿದ್ದಾರೆ. ಝೈದ್ ಖಾನ್ ಅವರು ಪ್ರಚಾರದ ಸಮಯದಲ್ಲಿಯೂ ಸಹ ಸತತವಾಗಿ ಇಂಥಹಾ ಪ್ರಶ್ನೆಗಳನ್ನೇ ಎದುರಿಸುತ್ತಿದ್ದು, ಇದೀಗ ಝೈದ್ ಖಾನ್​​ಗೆ ತುಳು ಭಾಷೆಯ ಬಗ್ಗೆ ವಿರೋಧ ಇದೆ ಎಂಬ ಆರೋಪವೂ ಎದುರಾಗಿದ್ದು, ಆ ಬಗ್ಗೆ ಝೈದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಶಿವಮೊಗ್ಗದಲ್ಲಿ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ಮಾಜಿ ಪೊಲೀಸರ ಮನೆಯೇ ಈ ಕಳ್ಳರಿಗೆ ಟಾರ್ಗೆಟ್ – Kannada News | Shivamogga Theft Spree: Gold and Cash Robbed, CCTV Captures Masked Thieves

ಶಿವಮೊಗ್ಗ, ಜ.17: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಶಿವಮೊಗ್ಗ ಜನರನ್ನು ಬೆಚ್ಚಿ ಬೀಳಿಸುವ ಘಟನೆಗಳು ನಡೆಯುತ್ತಿದೆ. ಒಂದು ಕಡೆ ಬಂಗಾರ ಬೆಲೆ ಏರುತ್ತಲೇ ಇದೆ. ಇನ್ನೊಂದು ಕಡೆ ಈ ಕಳ್ಳರು ಚಿನ್ನ ಕದ್ದಿಯುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಶಿವಮೊಗ್ಗದ (Shivamogga theft) ಹಲವು ಕಡೆ ಕಳ್ಳತನ ಆಗಿರುವ ಘಟನೆಗಳು ಪತ್ತೆಯಾಗಿದೆ. ಜಿಲ್ಲೆಯ ಸ್ವಾಮಿ ವಿವೇಕಾನಂದ ಬಡಾವಣೆಯ ವಿಜಯಲಕ್ಷ್ಮಿ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 15 ಲಕ್ಷದ ಚಿನ್ನಾಭಾರಣ ಹಾಗೂ 70 ಸಾವಿರ ರೂಪಾಯಿ ನಗದು ದೋಚಿ ಎಸ್ಕೇಪ್ ಆಗಿದ್ದಾರೆ. ಇಂದು (ಜ.17) ಬೆಳಗಿನ ಜಾವ ಸುಮಾರು 1 ರಿಂದ 3 ಗಂಟೆ ವೇಳೆ ಮೂವರು ಕಳ್ಳರು ಮನೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಮನೆ ಬಾಗಿಲಿನ ಲಾಕ್ ಮುರಿದು ಒಳಗೆ ನುಗ್ಗಿ ಬಿರು ಲಾಕರ್ ಮುರಿದು  ಎಲ್ಲ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಇನ್ನು ಈ ಕಳ್ಳರು ಬಂದಿರುವ ಮತ್ತು ಬೈಕ್​​ನಲ್ಲಿ ಓಡಾಡುವ ದೃಶ್ಯ ಸಿಸಿ ಕ್ಯಾಮರ್​​ದಲ್ಲಿ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ವಿಡಿಯೋದ ಪ್ರಕಾರ, ಕಳ್ಳರು ಮುಖಕ್ಕೆ ಮಾಸ್ಕ್, ಕೈಯಲ್ಲಿ ಮಚ್ಚು ಲಾಂಗ್ ಹಾಗೂ ಕಲ್ಲು ಹಿಡಿದುಕೊಂಡಿರುವುದನ್ನು ತೋರಿಸಲಾಗಿದೆ. ಒಂದೇ ಬೈಕ್​​ನಲ್ಲಿ ಈ ಮೂವರು ಕಳ್ಳರು ಬಂದಿದ್ದಾರೆ. ಮನೆ ಯಜಮಾನಿ ವಿಜಯಲಕ್ಷ್ಮೀ ಅವರು ಮನೆಗೆ ಬೀಗ ಹಾಕಿ ಬಾಂಬೆಯಲ್ಲಿರುವ ತಮ್ಮ ಸಂಬಂಧಿಕರ ಮನೆ ಹೋಗಿದ್ದಾರೆ. ಎರಡು ಮೂರು ದಿನಗಳಿಂದ ಈ ಮನೆಗೆ ಹೊಂಚು ಹಾಕಲು ಈ ಕಳ್ಳರು ಕಾಯುತ್ತಿದ್ದರು. ವಿಜಯಲಕ್ಷ್ಮಿ ಅವರು ಬಾಂಬೆಗೆ ಹೋಗುತ್ತಿದ್ದಂತೆ ಕಳ್ಳರು ಅವರ ಮನೆಗೆ ದಾಳಿ ಮಾಡಿದ್ದಾರೆ. ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ಆಗಿರುವುದನ್ನು ಸೂಕ್ಷ್ಮವಾಗಿ ಗಮನಿಸಿದ ಪಕ್ಕದ ಮನೆಯವರು ಬಾಂಬೆಯಲ್ಲಿದ್ದ ವಿಜಯಲಕ್ಷ್ಮಿ ಅವರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ವಿಜಯಲಕ್ಷ್ಮಿ ಅವರು ಭದ್ರಾವತಿಯಲ್ಲಿರುವ ಅವರ ಸಹೋದರ ಚಂದ್ರಶೇಖರ್ ಅವರಿಗೆ ಕರೆ ಮಾಡಿ ಮನೆಯ ಬಳಿ ಹೋಗಿ ಪರಿಶೀಲಿಸುವಂತೆ ಹೇಳಿದ್ದಾರೆ. ಚಂದ್ರಶೇಖರ್ ಅವರು ಬಂದು ನೋಡಿದಾಗ ಕಳ್ಳತನ ಆಗಿರುವುದು ಬಹಿರಂಗವಾಗಿದೆ. ಇನ್ನು ವಿಜಯಲಕ್ಷ್ಮಿ ಅವರ ಮನೆಯಲ್ಲಿ ಮಾತ್ರವಲ್ಲದೆ, ಅವರ ಬಡವಾಣೆಯ ಸಾಲಿನಲ್ಲೇ ಬರುವ ಇನ್ನೊಂದು ಮನೆಯ ಬೈಕ್​​ ಕೂಡ ಕಳ್ಳತನ ಆಗಿದೆ. ನಂತರ ಈ ಬಡವಾಣೆಯ ಮುಂದೆ ಪೊಲೀಸ್​​​​ ಬಡವಾಣೆ ಇದೆ. ಅಲ್ಲಿಯೂ ಕೂಡ ಎರಡು ಮನೆಯ ಕಿಟಕಿ ಮುರಿದು ಕಳ್ಳತನ ಮಾಡಲು ಮುಂದಾಗಿದ್ದಾರೆ. ಆದರೆ ಅಲ್ಲಿ ಕಳ್ಳತನ ಮಾಡಲು ಸಾಧ್ಯವಾಗಿಲ್ಲ. ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ಮಾಡುವ ಮೊದಲು ಈ ಎರಡು ಕಡೆ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆ್ಯಂಬುಲೆನ್ಸ್​​​ನಲ್ಲಿ ಕಳಿಸಿದ ಮಗಳು

ಹೆಚ್ಚುವರಿ ಎಸ್ಪಿ ಕಾರಿಯಪ್ಪ ಅವರು ಕಳ್ಳತವಾಗಿರುವ ವಿಜಯಲಕ್ಷ್ಮಿ ಮನೆಗೆ ಭೇಟಿ ನೀಡಿದ್ದರು. ಕಳ್ಳತನ ಮತ್ತು ಕಳ್ಳರ ಬಗ್ಗೆ ಒಂದಿಷ್ಟು ಮಾಹಿತಿ ಕಲೆಹಾಕಿದ್ದಾರೆ. ಕಳ್ಳರ ಬಲೆಗೆ ಈಗಾಗಲೇ ಒಂದು ವಿಶೇಷ ತಂಡ ರಚನೆ ಮಾಡಿದ್ದಾರೆ. ಪೊಲೀಸ್ ಬಡಾವಣೆಗೆ ಕಳ್ಳರ ಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿದರುವುದು ಬಡಾವಣೆಯ ಜನರಿಗೆ ದೊಡ್ಡ ಆತಂಕ ಸೃಷ್ಟಿ ಮಾಡಿದೆ. ಇಲ್ಲಿ ಎಲ್ಲ ನಿವೃತ್ತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಮನೆಗಳಿವೆ. ಇಂತಹ ಮನೆಗಳಿಗೆ ಕಳ್ಳರು ಕಳ್ಳತನಕ್ಕೆ ಬಂದಿರುವುದು ಸ್ಥಳೀಯರಿಗೆ ಅಚ್ಚರಿ ಮೂಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಆರ್​ಸಿಬಿ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ; 7 ಎಸೆತಗಳಲ್ಲಿ 4 ವಿಕೆಟ್ ಪತನ – Kannada News | RCB vs DC WPL 2026: Delhi Capitals Suffer Early Collapse, Lose 4 Wickets

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಡೆಲ್ಲಿ ತಂಡ ಮೊದಲ ಎರಡು ಓವರ್​ಗಳಲ್ಲೇ ಆಘಾತ ಎದುರಿಸಿದೆ. ಕೇವಲ 12 ಎಸೆತಗಳಲ್ಲಿ ಡೆಲ್ಲಿ ತಂಡದ ನಾಲ್ಕು ಪ್ರಮುಖ ವಿಕೆಟ್​ಗಳು ಪತನಗೊಂಡಿವೆ. ಅದರಲ್ಲೂ 7 ಎಸೆತಗಳಲ್ಲಿ ಡೆಲ್ಲಿ ತಂಡದ 4 ವಿಕೆಟ್​ಗಳು ಉದುರಿದ್ದು, ಆರ್​ಸಿಬಿಯ ಮಾರಕ ದಾಳಿಗೆ ಹಿಡಿದ ಕೈಗನ್ನಡಿಯಾಗಿತ್ತು.

ಮೊದಲ ಓವರ್​ನಲ್ಲಿ 2 ವಿಕೆಟ್

ಡೆಲ್ಲಿ ಪರ ಶಫಾಲಿ ವರ್ಮಾ ಮತ್ತು ಲಿಜೆಲ್ಲೆ ಲೀ ಆರಂಭಿಕರಾಗಿ ಕಣಕ್ಕಿಳಿದರು. ಲಿಜೆಲ್ಲೆ ಲೀ ತಾವು ಎದುರಿಸಿದ ಮೊದಲ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದರೆ, ನಂತರದ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಲಾರೆನ್ ಬೆಲ್ ಅವರ ಇನ್​ಸ್ವಿಂಗರ್ ಎಸೆತ ಲೀ ಅವರನ್ನು ಪೆವಿಲಿಯನ್‌ಗಟ್ಟಿತು. ನಂತರ ಬಂದ ಲಾರಾ ವೊಲ್ವಾರ್ಡ್ಟ್ ಕೂಡ ಅದೇ ಓವರ್​ನಲ್ಲಿ ಎರಡು ಎಸೆತಗಳನ್ನು ಎದುರಿಸಿ ಖಾತೆ ಕೂಡ ತೆರೆಯದೆ ವಿಕೆಟ್ ಒಪ್ಪಿಸಿದರು.

2ನೇ ಓವರ್​ನಲ್ಲಿ 2 ವಿಕೆಟ್

ಇನ್ನು ಎರಡನೇ ಓವರ್​ನಲ್ಲಿ ಆರ್​ಸಿಬಿ ಪರ ಸಯಾಲಿ ಸತ್ಘರೆ ಬೌಲಿಂಗ್ ಆರಂಭಿಸಿದರೆ, ಡೆಲ್ಲಿ ನಾಯಕಿ ಜೆಮಿಮಾ ರೋಡ್ರಿಗಸ್ ಸ್ಟ್ರೈಕ್​ನಲ್ಲಿದ್ದರು. ಜೆಮಿಮಾ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದರೆ, ನಂತರದ ಎಸೆತದಲ್ಲಿ ಬೌಲ್ಡ್ ಆದರು. ಹೀಗಾಗಿ ಡೆಲ್ಲಿ ತಂಡ 10 ರನ್​ಗಳಿಗೆ ತನ್ನ 3 ವಿಕೆಟ್ ಕಳೆದುಕೊಂಡಿತು. ಈ ವೇಳೆ ಕ್ರೀಸ್​ಗೆ ಬಂದ ಅನುಭವಿ ಮರಿಝನ್ನೆ ಕಪ್ ಅವರ ಮೇಲೆ ಜವಾಬ್ದಾರಿ ಹೆಚ್ಚಿತ್ತು. ಆದರೆ ಮರಿಝನ್ನೆ ಕಪ್ ಕೂಡ ತಾವು ಎದುರಿಸಿದ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆಗುವ ಮೂಲಕ ಡೆಲ್ಲಿಗೆ 4ನೇ ಆಘಾತ ನೀಡಿದರು. ಹೀಗಾಗಿ ಡೆಲ್ಲಿ ತಂಡ 2 ಓವರ್​ಗಳ ಅಂತ್ಯಕ್ಕೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್ (ದಯಾಲನ್ ಹೇಮಲತಾ ಬದಲಿಗೆ), ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್,ಪ್ರೇಮಾ ರಾವತ್ (ಅರುಂಧತಿ ರೆಡ್ಡಿ ಬದಲಿಗೆ), ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ (ಲಿನ್ಸೆ ಸ್ಮಿತ್ ಬದಲಿಗೆ), ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್ (ಚಿನೆಲ್ ಹೆನ್ರಿ ಬದಲಿಗೆ).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:14 pm, Sat, 17 January 26

Source link

ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi

ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ ಮೇಲೆ ಭಾರತ ವಿಧಿಸುತ್ತಿರುವ ಸುಂಕಗಳನ್ನು ಕಡಿಮೆ ಮಾಡಲು ಮಾತುಕತೆ ನಡೆಸುವಂತೆ ಟ್ರಂಪ್ ಅವರಿಗೆ ಒತ್ತಾಯಿಸಿದ್ದಾರೆ.

ಯುಎಸ್ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ಮೊಂಟಾನಾ ಮತ್ತು ಉತ್ತರ ಡಕೋಟಾ ದ್ವಿದಳ ಧಾನ್ಯಗಳ ಬೆಳೆಗಳ 2 ಪ್ರಮುಖ ಉತ್ಪಾದಕರು ಮತ್ತು ಭಾರತವು ವಿಶ್ವದ ಸೇವನೆಯ ಸುಮಾರು ಶೇ. 27ರಷ್ಟು ಅತಿದೊಡ್ಡ ಗ್ರಾಹಕ ಎಂದು ಸೆನೆಟರ್‌ಗಳು ತಿಳಿಸಿದ್ದಾರೆ. ಅಮೆರಿಕದಿಂದ ರಫ್ತು ಮಾಡುವ ಹಳದಿ ಬಟಾಣಿಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ಘೋಷಿಸಿದೆ. ಈ ಸುಂಕಗಳು ನವೆಂಬರ್ 2025ರಲ್ಲಿ ಜಾರಿಗೆ ಬಂದಿವೆ. ಇದಕ್ಕೂ ಮೊದಲು ಹಳದಿ ಬಟಾಣಿಗಳನ್ನು ಸುಂಕ ರಹಿತವಾಗಿ ಭಾರತಕ್ಕೆ ರಫ್ತು ಮಾಡಲು ಅವಕಾಶವಿತ್ತು.

ಇದನ್ನೂ ಓದಿ: ಭಾರತ-ಅಮೆರಿಕದ ಮಧ್ಯೆ ಮುಖ್ಯ ಖನಿಜಗಳ ವಿಚಾರಕ್ಕೆ ಸಭೆ; ಭಾರತಕ್ಕೇನು ಲಾಭ?

ಈ ನಿಯಮ ಮಾರ್ಚ್ 2026ರವರೆಗೆ ಇರುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅಗ್ಗದ ಆಮದುಗಳ ಒಳಹರಿವು ಸ್ಥಳೀಯ ಬೆಳೆಗಳ ಬೆಲೆಗಳನ್ನು ನಿಗ್ರಹಿಸುವುದರಿಂದ ದೇಶೀಯ ಭಾರತೀಯ ರೈತರು ಮಧ್ಯಪ್ರವೇಶಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ ನಂತರ ಮೋದಿ ಸರ್ಕಾರ ತನ್ನ ನೀತಿಗಳನ್ನು ಬದಲಾಯಿಸಿಕೊಂಡು ಅಮೆರಿಕದ ಆಮದು ಧಾನ್ಯಗಳ ಮೇಲೆ ಸುಂಕ ಹೇರಿತ್ತು.

ದ್ವಿದಳ ಧಾನ್ಯಗಳ ಸುಂಕಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವಂತೆ ಸೆನೆಟರ್‌ಗಳು ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ. ಇದರಿಂದ ಭಾರತದಲ್ಲಿನ ಅಮೇರಿಕನ್ ಉತ್ಪಾದಕರು ಮತ್ತು ಗ್ರಾಹಕರಿಗೆ ಪ್ರಯೋಜನಕಾರಿಯಾಗಬಹುದು ಎಂದು ಅವರು ಹೇಳಿದ್ದಾರೆ. ಭಾರತೀಯ ಸುಂಕಗಳನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸುವ ಈ ವಿನಂತಿಯು ಯುಎಸ್‌ ಭಾರತೀಯ ಆಮದುಗಳ ಮೇಲೆ ಶೇ. 50ರಷ್ಟು ಸುಂಕವುನ್ನು ಜಾರಿ ಮಾಡಿರುವ ಸಮಯದಲ್ಲಿ ಬಂದಿದೆ.

ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು

ಡೊನಾಲ್ಡ್ ಟ್ರಂಪ್‌ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25ರಷ್ಟು ದಂಡದ ರೂಪದಲ್ಲಿ ಸುಂಕ ಹೇರಿದ್ದರು. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ ಶೇ. 50ರಷ್ಟು ಸುಂಕ ಹೇರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್ ಅವರ ಮತ್ತೊಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಡಾಲಿ ಧನಂಜಯ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 6ಕ್ಕೆ ಅದ್ದೂರಿಯಾಗಿ ತೆರೆಗೆ ಬರಲಿದೆ. ಸೂರ್ಯ ಪ್ರಖ್ಯಾತ್ ಮತ್ತು ಭಾವನಾ ರೆಡ್ಡಿ ಅವರುಗಳು ‘ಜೆಸಿ’ ಸಿನಿಮಾನಲ್ಲಿ ನಟಿಸಿದ್ದು, ನಟ ಶಿವರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಅವರುಗಳು ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ, ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.

‘ಜೆಸಿ’ ಹೆಸರೇ ಹೇಳುತ್ತಿರುವಂತೆ ಇದು ಜೈಲಿನ ಕತೆ. ಸಹಜವಾಗಿಯೇ ಮಾಸ್ ಸಿನಿಮಾ. ಜೈಲಿನ ಸುತ್ತ ನಡೆಯುವ ಕಥೆ ಆದ್ದರಿಂದ ‘ಜೋಗಿ’ಯ ಸೂಪರ್ ಹಿಟ್ ಜೋಡಿ ಶಿವಣ್ಣ ಮತ್ತು ಪ್ರೇಮ್ ಇಬ್ಬರೂ ಸೇರಿ ಟ್ರೈಲರ್ ರಿಲೀಸ್ ಮಾಡಲು ಡಾಲಿ ಆಹ್ವಾನಿಸಿದ್ದರು. ಚೇತನ್ ಜೈರಾಮ್ ಅವರು ‘ಜೆಸಿ’ ಸಿನಿಮಾ ನಿರ್ದೇಶಿಸಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ ಆಗಿದೆ. ಜೈಲು ಒಳಗಿನ ಅವ್ಯವಹಾರ, ಕೈದಿಗಳ ದರ್ಬಾರ್, ಕೈದಿಗಳ ಮಾನವೀಯತೆ, ಅಮಾನವೀಯತೆ ಇನ್ನಿತರೆ ಅಂಶಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಫೈಟ್, ಕೊಲೆ, ರಕ್ತ, ಹಿಂಸೆಗಳ ನಡುವೆ ಅಪ್ಪ ಮಗನ ಭಾವನಾತ್ಮಕ ಕಥೆಯನ್ನು ಸಹ ಸಿನಿಮಾನಲ್ಲಿ ಹೇಳಲಾಗಿದೆ.

ಶಿವಣ್ಣ ಕೂಡ ಟ್ರೈಲರ್ ನೋಡಿ ತುಂಬಾ ಖುಷಿ ಪಟ್ಟರು. ಜೈಲ್ ಒಂದು ಪರಿವರ್ತನೆಯ ಜಾಗ, ಜೈಲಿಗೆ ಹೋಗಿ ಬಂದವರು ಅನೇಕರು ಬದಲಾಗುತ್ತಾರೆ ಎಂದರು. ಭವಿಷ್ಯದ ಸ್ಟಾರ್ ಆಗುವ ಎಲ್ಲಾ ಕ್ವಾಲಿಟಿಗಳು ಪ್ರಖ್ಯಾತ್ ಅವರಲ್ಲಿ ಇದೆ. ತುಂಬಾ ಚೆನ್ನಾಗಿ ಆಕ್ಟ್ ಮಾಡಿದ್ದಾರೆ, ಜೊತೆಗೆ ನೋಡಲು ಸಖತ್ ಸ್ಮಾರ್ಟ್ ಆಗಿದ್ದಾರೆ, ಲಕ್ ಕೂಡ ಇದೆ ಎಂದು ಪ್ರಖ್ಯಾತ್ ಅವರಿಗೆ ಹಾರೈಸಿದರು.

ಇದನ್ನೂ ಓದಿ:‘ಡಾಲಿ ಪಿಕ್ಚರ್ಸ್’ ಮೂಲಕ ಹೊಸ ಸುದ್ದಿ ನೀಡಿದ ಡಾಲಿ ಧನಂಜಯ್​

ಜೆಸಿ ದಿ ಯೂನರ್ಸಿಟಿ ಟ್ರೈಲರ್ ಅನ್ನು ನಿರ್ದೇಶಕ ಪ್ರೇಮ್ ಮತ್ತು ಶಿವಣ್ಣ ಇಬ್ಬರು ಮೆಚ್ಚಿಕೊಂಡಿದ್ದಾಗಿ ಹೇಳಿದ್ದಾರೆ. ಶಿವಣ್ಣನ ಜೋತೆಗೆ ‘ಜೋಗಿ’ ಸಿನಿಮಾದ ಶೂಟಿಂಗ್ ಅನುಭವನ್ನು ಬಿಚ್ಚಿಟ್ಟ ಪ್ರೇಮ್, ‘ಯಾರಿಗೂ ಜೈಲಿನ ಅನುಭವ ಬೇಡ, ಅಲ್ಲಿ ದುಡ್ಡು ಇರೋನಿಗೆ ಮಾತ್ರ ಬೆಲೆ, ಎಷ್ಟೋ ಜನರಿಗೆ ಬೇಲ್ ಸಿಕ್ಕಿದ್ರು ಬಿಡಿಸಿಕೊಳ್ಳಲು ಆಗಲ್ಲ ಅಂತ ಸ್ಥಿತಿಯಲ್ಲಿದ್ದಾರೆ’ ಎಂದು ಪ್ರೇಮ್ ಜೈಲಿನ ಬಗ್ಗೆ ಹೇಳಿದರು. ಜೊತೆಗೆ ಯುವ ನಟರುಗಳಿಗೆ ಕೆಲವು ಸಲಹೆಗಳನ್ನು ಸಹ ನೀಡಿದರು.

ಟ್ರೈಲರ್ ರಿಲೀಸ್ ಮಾಡಿಕೊಟ್ಟ ಶಿವಣ್ಣ ಮತ್ತು ಜೋಗಿ ಪ್ರೇಮ್ ಅವರಿಗೆ ಡಾಲಿ ಧನ್ಯವಾದ ತಿಳಿಸಿದರು. ಚಿತ್ರರಂಗದಲ್ಲಿ ಒಬ್ಬ ಅಣ್ಣನ ಹಾಗೆ ಸಹಾಯಕ್ಕೆ ನಿಂತ ವ್ಯಕ್ತಿ ಶಿವಣ್ಣ. ನನ್ನ ಮೊದಲ ನಿರ್ಮಾಣದ ಸಿನಿಮಾದಿಂದ ಇಲ್ಲಿಯ ವರೆಗೂ ತುಂಬಾ ಸಹಾಯ ಮಾಡಿದ್ದಾರೆ ಎಂದು ಶಿವಣ್ಣನ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಹೀರೋ ಪ್ರಖ್ಯಾತ್ ಮಾತನಾಡಿ, ದುಡ್ಡು ಇರೋರೆಲ್ಲ ಹೀರೋ ಆಗಲು ಸಾಧ್ಯಿಲ್ಲ. ಜನ ಒಪ್ಕೊಬೇಕು, ಸರಸ್ವತಿ ಆಶೀರ್ವಾದ ಇರಬೇಕು. ಸೂಪರ್ ಸ್ಟಾರ್ ಮಕ್ಕಳುಗು ಫೇಲ್ ಆಗಿರೋದು ಇದೆ. ಬಡವರ ಮಕ್ಕಳು ಸೂಪರ್ ಸ್ಟಾರ್ ಆಗಿರುವ ಉದಾಹರಣೆಯೂ ಇದೆ. ದುಡ್ಡು ಇದ್ರೆ ಎಲಕ್ಷನ್ ಗೆಲ್ಲಬಹುದು ಆದರೆ ಸಿನಿಮಾ ಗೆಲ್ಲಿಸೋದು ಕಷ್ಟ’ ಎಂದರು. ಇನ್ನೂ ನಾಯಕಿ ಭಾವನಾ ರೆಡ್ಡಿ ಮಾತನಾಡಿ, ಹೊಸಬರಿಗೆ ಅವಕಾಶ ನೀಡುತ್ತಿರುವ ಡಾಲಿ ಧನಂಜಯ ಅವರಿಗೆ ಧನ್ಯವಾದ ತಿಳಿಸಿದರು. ಎಲ್ಲರೂ ಸಿನಿಮಾ ನೋಡಿ ಎಂದು ಕೇಳಕೊಂಡರು. ಸಿನಿಮಾ ಫೆಬ್ರವರಿ 6ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:46 pm, Sat, 17 January 26

Source link

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ ಆಡಿದ ಮೂರು ಪಂದ್ಯಗಳಲ್ಲಿ 2 ರಲ್ಲಿ ಸೋತು, 1 ರಲ್ಲಿ ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಟಾಸ್ ಗೆದ್ದ ಆರ್​ಸಿಬಿ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್‌ ಮಾಡಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವ ಕಾರಣ, ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚು ನೆರವು ಸಿಗಲಿದೆ. ಹೀಗಾಗಿ ಸ್ಮತಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ ಆರ್​ಸಿಬಿ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್ (ದಯಾಲನ್ ಹೇಮಲತಾ ಬದಲಿಗೆ), ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್,ಪ್ರೇಮಾ ರಾವತ್ (ಅರುಂಧತಿ ರೆಡ್ಡಿ ಬದಲಿಗೆ), ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ (ಲಿನ್ಸೆ ಸ್ಮಿತ್ ಬದಲಿಗೆ), ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್ (ಚಿನೆಲ್ ಹೆನ್ರಿ ಬದಲಿಗೆ).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:04 pm, Sat, 17 January 26

Source link

Exit mobile version