Headlines

ಬೆಂಗಳೂರಿನಲ್ಲಿ ಬುಡಸಮೇತ ರಸ್ತೆ ಮೇಲೆ ಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್! – Kannada News | Bengaluru Rains: Huge Tree Falls on Road, Sankaramatha Road Closed

ಬೆಂಗಳೂರು, ಮೇ 21: ಭಾರೀ ಗಾಳಿ ಮಳೆಯಿಂದಾಗಿ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಶಂಕರಮಠ ರಸ್ತೆಯಲ್ಲಿ ಬುಡಸಮೇತ ಮರವೊಂದು ಉರುಳಿಬಿದ್ದಿದೆ. ಅದೃಷ್ಟವಶಾತ್ ಮರ ಬಿಳ್ಳುವ ವೇಳೆ ರಸ್ತೆ ಬಹುತೇಕ ಖಾಲಿ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಆದರೆ ಒಂದು ಕಾರು ಮರದ ಕೆಳಗೆ ಸಿಲುಕಿ ಜಖಂಗೊಂಡಿದೆ. ಎರಡು ಭಾಗದ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸದ್ಯ ಜಿಬಿಎ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನೂ ಒಂದು ಗಂಟೆಗೂ ಹೆಚ್ಚು ಕಾಲ ಬೇಕಾಗಲಿದೆ….

Read More

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ – Kannada News | Metal sheets from nearby structures fall on Namma Metro tracks, disrupt train services amid gusty winds And rains

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು  ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ.  ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್​​​​ಸಿಎಲ್  (BMRCL) ವಿಶೇಷ ಮನವಿ ಮಾಡಿಕೊಂಡಿದೆ….

Read More

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಹೈದರಾಬಾದ್, ಮೇ 21: ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದಲ್ಲಿ ವಿದ್ಯುತ್ ಚಾಲಿತ (EV Car) ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ವಿವೇಕಾನಂದ ನಗರದಲ್ಲಿ ನಡೆದ ಅಪಘಾತ ಭಾರೀ ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ನಂತರ ನೇರವಾಗಿ ಟಿಫಿನ್ ಸೆಂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು – Kannada News | Shubman Gill’s IPL 2026 Blaze: Smashes 23 Ball Fifty vs CSK, Sets Multiple Records

2026 ರ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಹಲವಾರು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಗಿಲ್ ಈ ಐಪಿಎಲ್‌ನಲ್ಲಿ 600 ರನ್​ಗಳ ಗಡಿ ದಾಟಿದ್ದಾರೆ. ಈ ಮೂಲಕ ಈ ಆವೃತ್ತಿಯಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಇದು ಆರನೇ ಅರ್ಧಶತಕವಾಗಿದೆ. ಗಿಲ್, ಲಕ್ನೋ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ದೆಹಲಿ ಮತ್ತು ಚೆನ್ನೈ…

Read More

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ! – Kannada News | Two Factories Finally Shut Down After Decades of Public Struggle

ಕೊಪ್ಪಳ, ಮೇ 21: ಕಾರ್ಖಾನೆಗಳ (factory) ವಿಷಕಾರಿ ಹೊಗೆ ಹಾಗೂ ಮಾಲಿನ್ಯದಿಂದ ನಲುಗಿಹೋಗಿದ್ದ ಕೊಪ್ಪಳ (koppal) ತಾಲೂಕಿನ ಜನತೆಗೆ ಇದೀಗ ದೊಡ್ಡ ನೆಮ್ಮದಿ ಸಿಕ್ಕಿದೆ. ನಿಯಮ ಉಲ್ಲಂಘಿಸಿ ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದ ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಜಿಲ್ಲಾಡಳಿತ ಅಧಿಕೃತವಾಗಿ ಸೀಜ್ ಮಾಡಿದೆ. ಮುಖ್ಯಾಂಶಗಳು ಕೊಪ್ಪಳ ತಾಲೂಕಿನಲ್ಲಿರುವ ಎರಡು ಕಾರ್ಖಾನೆ ಸೀಜ್​​ ಕಾರ್ಖಾನೆಗಳು ಸೀಜ್ ಬೆನ್ನಲ್ಲೇ ರೈತರು ಖುಷ್​​ ಟಿವಿ9 ನಿರಂತರ ವರದಿ ಇಂಪ್ಯಾಕ್ಟ್ ಬೀಗ ಬಿದ್ದ ಕಾರ್ಖಾನೆಗಳು ಯಾವುವು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಖಡಕ್…

Read More

ನಿರ್ಮಾಪಕಿಯಾದ ನಟಿ ಮೈತ್ರಿಯಾ ಗೌಡ; ಹೊಸಬರಿಗೆ ಅವಕಾಶ ನೀಡಲು ಟ್ರಸ್ಟ್ ಸ್ಥಾಪನೆ – Kannada News | Actress Maithriya Gowda turns producer launches Maithriya Global Trust for new talents

ನಟಿ ಮೈತ್ರಿಯಾ ಗೌಡ ಅವರು ಹಲವು ವರ್ಷಗಳ ಹಿಂದೆಯೇ ಕನ್ನಡ ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಈಗ ಮತ್ತೆ ಅವರು ಸಕ್ರಿಯವಾಗಿದ್ದಾರೆ. ಬಣ್ಣದ ಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ ಎಂಬ ಮಾತಿಗೆ ಮೈತ್ರಿಯಾ ಗೌಡ ಅವರೇ ಸಾಕ್ಷಿ. ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರೂ ಕೂಡ ಚಿತ್ರರಂಗದ ನಂಟು ಬಿಟ್ಟಿಲ್ಲ. ಈಗ ಮೈತ್ರಿಯಾ ಗೌಡ (Maithriya Gowda) ಅವರು ನಿರ್ಮಾಪಕಿ ಆಗಿದ್ದಾರೆ. ಇದೇ…

Read More

30ರ ಹರಯದಲ್ಲಿ ಮೊಣಕಾಲು ನೋವು ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣವೇನು? ತಜ್ಞರು ನೀಡಿರುವ ಕಾರಣ ಇಲ್ಲಿದೆ – Kannada News | Why Do Young Adults Get Knee Pain? Sports Injuries, Bad Posture & Solutions

ಒಂದು ಕಾಲದಲ್ಲಿ ಮೊಣಕಾಲು ನೋವು (Knee Pain), ಸಂಧಿ ಗಟ್ಟಿತನ ಮತ್ತು ನಡೆಯಲು ತೊಂದರೆ ಎನ್ನುವುದು ಹೆಚ್ಚಾದ ವಯಸ್ಸಿನ ಸಮಸ್ಯೆ ಎಂದು ಭಾವಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದ ಯುವಕರಲ್ಲಿಯೇ ಮೊಣಕಾಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವೈದ್ಯರ ಪ್ರಕಾರ, ಒಂದೇ ಕಡೆ ಕುಳಿತು ಕೆಲಸ ಮಾಡುವ ಜೀವನಶೈಲಿ, ದೈಹಿಕ ಚಟುವಟಿಕೆ ಕೊರತೆ, ಹೆಚ್ಚುತ್ತಿರುವ ತೂಕ ಮತ್ತು ಅಸಮತೋಲಿತ ಫಿಟ್ನೆಸ್ ರುಟೀನ್ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಆರ್ಥೋಪೆಡಿಕ್ ತಜ್ಞ ಡಾ….

Read More

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಸಚಿವ ಸಂಪುಟದ ತೀರ್ಮಾನಗಳು – Kannada News | Karnataka Governmnet Green Signal To multi super hospital in Karwar And NEET Coach for OBC Students, Here Is Cabinet Meeting decisions

ಬೆಂಗಳೂರು, (ಮೇ 21): ಬೆಂಗಳೂರು, ಮೇ 21): ಸಿಎಂ ಸಿದ್ದರಾಮಯ್ಯ  (Sidaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ  ಸಭೆ (karnataka Cabinet Meeting) ಮುಕ್ತಾಯವಾಗಿದ್ದು, ಆರೋಗ್ಯ, ಶಿಕ್ಷಣ ಇಲಾಖೆ ಸಂಬಂಧಿಸಿದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ…

Read More

ಕೊಲ್ಕತ್ತಾದ ಆರ್​ಜಿ ಕರ್ ಅತ್ಯಾಚಾರ, ಕೊಲೆ ಪ್ರಕರಣದ ಸಿಬಿಐ ಮರುತನಿಖೆಗೆ ಹೈಕೋರ್ಟ್ ಆದೇಶ – Kannada News | Calcutta High Court orders fresh CBI SIT probe into RG Kar rape case

ಕೊಲ್ಕತ್ತಾ, ಮೇ 21: ಕೊಲ್ಕತ್ತಾ ಹೈಕೋರ್ಟ್ ಆರ್‌ಜಿ ಕರ್ (RG Kar Hospital) ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪುರಾವೆಗಳನ್ನು ನಾಶಪಡಿಸಲು ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ನಡೆದಿದೆ ಎನ್ನಲಾದ ಸಂಚಿನ ಕುರಿತು ಕೇಂದ್ರ ತನಿಖಾ ಸಂಸ್ಥೆಯ (CBI) ಹೊಸ ವಿಶೇಷ ತನಿಖಾ ತಂಡದಿಂದ (SIT) ತನಿಖೆ ನಡೆಸುವಂತೆ ಇಂದು ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಮುಖ ಮುಖ್ಯಾಂಶಗಳು: ತ್ರಿಸದಸ್ಯ ಸಿಬಿಐ ಎಸ್‌ಐಟಿ ರಚನೆ: ಜಂಟಿ ನಿರ್ದೇಶಕರ (ಪೂರ್ವ ವಲಯ) ನೇತೃತ್ವದಲ್ಲಿ ಮೂರು ಸದಸ್ಯರ ಹೊಸ…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಬೆಂಗಳೂರು, ಮೇ 21: ಸಂಜೆ ಆಗ್ತಿದ್ದಂತೆ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದ. ಇದೇ ಮಳೆ ಹತ್ತಾರು ಅವಾಂತರ ಸೃಷ್ಟಿಸಿದೆ. ಮರಗಳನ್ನ ಧರೆಗುರುಳಿಸಿ ವಾಹನಗಳನ್ನ ಜಖಂಗೊಳಿಸಿದೆ. ಭಾರೀ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿತ್ತು. ದ್ವಿಚಕ್ರ ವಾಹನ ಸವಾರರು ರಸ್ತೆಗಳಲ್ಲಿ ಪರದಾಡುವಂತಾಯಿತು. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ….

Read More