Headlines

U19 World Cup 2026: ಪಾಕ್ ಬಳಿಕ ಬಾಂಗ್ಲಾ ಜೊತೆಗೆ ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾ – Kannada News | India U19 vs Bangladesh: Ayush Mhatre Handshake Row Ignites New Cricket Controversy

ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ 2026 ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆದಾಗ್ಯೂ ಟಾಸ್ ಸಮಯದಲ್ಲಿ ನಡೆದ ಅಚ್ಚರಿಯ ಘಟನೆ ಇದೀಗ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಡೆದಿದ್ದೇನೆಂದರೆ ಟಾಸ್ ಮುಗಿದ ಎರಡೂ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡಲಿಲ್ಲ. ಬಾಂಗ್ಲಾದೇಶ ನಾಯಕ ಕೈಕುಲುಕಲು ತಮ್ಮ ಕೈಯನ್ನು ಜೇಬಿನಿಂದ ಹೊರತೆಗೆದರಾದರೂ, ಟೀಂ ಇಂಡಿಯಾ ನಾಯಕ…

Read More

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ – Kannada News | No Darshan photo in Mahesh Babu’s AMB Cinemas Bengaluru

ಮಹೇಶ್ ಬಾಬು (Mahesh Babu) ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಮಹೇಶ್ ಬಾಬು. ಅವುಗಳಲ್ಲಿ ಚಿತ್ರಮಂದಿರ ಪ್ರದರ್ಶನವೂ ಹೌದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಚಿತ್ರಮಂದಿರಗಳನ್ನು ನಡೆಸುತ್ತಾರೆ. ಈಗಾಗಲೇ ಹೈದರಾಬಾದ್​​ನಲ್ಲಿ ಹಾಗೂ ಇನ್ನೂ ಕೆಲವೆಡೆ ಐಶಾರಾಮಿ ಮಲ್ಟಿಪ್ಲೆಕ್ಸ್​ಗಳನ್ನು ಮಹೇಶ್ ಬಾಬು ಹೊಂದಿದ್ದು, ಇದೀಗ ಬೆಂಗಳೂರಿನಲ್ಲೂ ಎಎಂಬಿಯನ್ನು ಪ್ರಾರಂಭಿಸಿದ್ದಾರೆ. ಬೆಂಗಳೂರಿನ ಐಕಾನಿಕ್ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಕಪಾಲಿ…

Read More

U19 World Cup 2026: ಅಚ್ಚರಿಯ ಫಲಿತಾಂಶ; ಅಫ್ಘಾನಿಸ್ತಾನ ವಿರುದ್ಧ ಸೋತ ದಕ್ಷಿಣ ಆಫ್ರಿಕಾ – Kannada News | U19 World Cup: Afghanistan Stuns South Africa by 28 Runs in Group D Upset

ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 2026 ರ ಅಂಡರ್-19 ವಿಶ್ವಕಪ್ (U19 World Cup) ಪ್ರಾರಂಭವಾಗಿದೆ. ಅದರಂತೆ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ದಕ್ಷಿಣ ಆಫ್ರಿಕಾ ಹೀನಾಯ ಸೋಲನ್ನು ಅನುಭವಿಸಿದೆ. ಗ್ರೂಪ್ ಡಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 28 ರನ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ (Afghanistan vs South Africa) ಎಲ್ಲರನ್ನೂ ಅಚ್ಚರಿಗೊಳಿಸಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 266 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ…

Read More

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ? ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ – Kannada News | No New Power Tariff Hike Proposal to KERC: BESCOM MD Clarifie

ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC…

Read More

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ…

Read More

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! – Kannada News | Mysuru: Female Officer Threatened During NIMHANS Land Survey in CM’s Home land

‘ಇಲ್ಲೇ ನಿನ್ನ ಹೆಣ ಬೀಳತ್ತೆ’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್…

Read More

ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ಕಾರವಾರ, ಜ.17: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ. ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೀಗ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು…

Read More

ಮಗನ ದಾಖಲೆ ಮುರಿದ ಅಪ್ಪ: ‘RRR’ ಹಿಂದಿಕ್ಕಿದ ‘MSVPG’ – Kannada News | Megastar Chiranjeevi movie breaks RRR record in fifth day collection

ಸಂಕ್ರಾಂತಿಗೆ ತೆಲುಗಿನ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಪ್ರಭಾಸ್ (Prabhas) ಸಿನಿಮಾ ಸೇರಿದಂತೆ, ಒಟ್ಟು ಐದು ದೊಡ್ಡ ಸಿನಿಮಾಗಳೇ ಬಿಡುಗಡೆ ಆಗಿವೆ. ಆದರೆ ಗೆದ್ದಿರುವುದು ಮೆಗಾಸ್ಟಾರ್ ಚಿರಂಜೀವಿ ಮಾತ್ರ. ಚಿರಂಜೀವಿ ನಟಿಸಿರುವ ‘ಮನ ಶಂಕರ ವರ ಪ್ರಸಾದ್ ಗಾರು’ (MSVPG) ಸಿನಿಮಾ ಇತರೆ ಸಿನಿಮಾಗಳನ್ನು ಬಾಕ್ಸ್ ಆಫೀಸ್​​ನಲ್ಲಿ ಹಿಂದಿಕ್ಕಿದೆ. ಅದು ಮಾತ್ರವೇ ಅಲ್ಲದೆ ಈ ಸಿನಿಮಾ ತೆಲುಗು ಚಿತ್ರರಂಗದ ಇತ್ತೀಚೆಗಿನ ಟಾಪ್ ಸಿನಿಮಾಗಳಲ್ಲಿ ಒಂದಾಗಿರುವ ‘ಆರ್​​ಆರ್​​ಆರ್’ ಸಿನಿಮಾದ ಒಂದು ದಾಖಲೆಯನ್ನೇ ಮುರಿದು ಹಾಕಿದೆ. ‘ಮನ ಶಂಕರ ವರ…

Read More

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

2026 ರ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ವೈಭವ್ ಸೂರ್ಯವಂಶಿ ಇದೀಗ ಎರಡನೇ ಪಂದ್ಯದಲ್ಲೇ ಎಲ್ಲರಿಗೂ ಉತ್ತರ ನೀಡಿದ್ದಾರೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಯುವ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ವೈಭವ್ ಬಿರುಗಾಳಿಯ ಅರ್ಧಶತಕ ಗಳಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಒಂದೆಡೆ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಾ ಗಮನಾರ್ಹ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ…

Read More

ಬೆಂಗಳೂರು: 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ; ಸಿಎಂ ಸಿದ್ದರಾಮಯ್ಯ – Kannada News | Bengaluru: It Is Shameful That Police Are Involved in 88 Criminal Cases, Says CM Siddaramaiah

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ಬೆಂಗಳೂರು, ಜನವರಿ 17: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ (police) ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಿಡಿಸಿದ್ದಾರೆ. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ…

Read More